Updated News From Kaup
ಭಾರತೀಯ ಹಿನ್ನೆಲೆ ಗಾಯಕ ಕುನಲ್ ಗಾಂಜಾವಾಲಾ : ಕಾಪು ಹೊಸ ಮಾರಿಗುಡಿ ಭೇಟಿ
Posted On: 29 Dec 2025, 06:06 PM
ಕಾಪು : ಸುಪ್ರಸಿದ್ದ ಭಾರತೀಯ ಹಿನ್ನೆಲೆ ಗಾಯಕ ಕುನಲ್ ಗಾಂಜಾವಾಲಾ ಸೋಮವಾರ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರುಶನ ಪಡೆದರು.
ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬೆಳಪು ಗ್ರಾ.ಪಂ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿದ ಚಂದ್ರಾವತಿ ವಿ. ಆಚಾರ್ಯ
Posted On: 29 Dec 2025, 05:05 PM
ಪಡುಬಿದ್ರಿ : ಉಚ್ಚಿಲ ಬಡಾ ಗ್ರಾಮ ಪಂಚಾಯತ್ನಲ್ಲಿ 31 ವರ್ಷಗಳ ಕಾಲ ಎಟೆಂಡರ್, ಕ್ಲರ್ಕ್ ಆಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ಇದೀಗ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿ ಬೆಳಪು ಗ್ರಾ.ಪಂ.ಗೆ ನಿಯುಕ್ತಿಗೊಂಡಿರುವ ಚಂದ್ರಾವತಿ ವಿ. ಆಚಾರ್ಯ ಅವರನ್ನು ಅಭಿನಂದಿಸಿ, ಸಮ್ಮಾನಿಸಿ ಬೀಳ್ಕೊಡಲಾಯಿತು.
ಉಚ್ಚಿಲ ಬಡಾ ಗ್ರಾ.ಪಂ. ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಶಿವ ಕುಮಾರ್ ಮೆಂಡನ್, ಉಪಾಧ್ಯಕ್ಷರಾದ ದೀಪಕ್ ಕುಮಾರ್ ಎರ್ಮಾಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ಆರ್.ಜಿ., ಅಕೌಂಟೆಂಟ್ ನಿರ್ಮಲಾ ಶೆಟ್ಟಿ, ಗ್ರಾ.ಪಂ. ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.
ಬಿರುವೆರ್ ಕಾಪು ಸೇವಾ ಸಮಿತಿಯಿಂದ ಜ್ಞಾನ ದೀವಿಗೆ ವಿದ್ಯಾರ್ಥಿವೇತನ ವಿತರಣೆ, ಸನ್ಮಾನ
Posted On: 28 Dec 2025, 04:35 PM
ಕಾಪು : ಬಿರುವೆರ್ ಕಾಪು ಸೇವಾ ಸಮಿತಿ (ರಿ.) ವತಿಯಿಂದ ಕಾಪು ಬಿಲ್ಲವರ ಸಹಾಯಕ ಸಂಘದ ವೇದಿಕೆಯಲ್ಲಿ 5 ನೇ ವರ್ಷದ "ಜ್ಞಾನ ದೀವಿಗೆ" ವಿದ್ಯಾರ್ಥಿವೇತನ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿ, ಶುಭ ಹಾರೈಸಿದರು.
ಸುಮಾರು 50 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿನಯ ಕುಮಾರ್ ಸೊರಕೆ, ಸೂರ್ಯಕಾಂತ್ ಸುವರ್ಣ, ಸಂಕಪ್ಪ ಅಮಿನ್ ವಕೀಲರು, ಗೀತಾಂಜಲಿ ಸುವರ್ಣ, ಸಂಜೀವ ಆರ್ ಅಮಿನ್ , ದೀಪಕ್ ಕುಮಾರ್ ಎರ್ಮಾಳ್ ವಿತರಿಸಿದರು.
ಸಂಪನ್ಮೂಲ ವ್ಯಕ್ತಿ ದೀಪಕ್ ರಾಜ್ ರವರು ಮಕ್ಕಳ ಭವಿಷ್ಯ ಮತ್ತು ವ್ಯಕ್ತಿತ್ವ ವಿಕಸನದ ಕುರಿತು ಮಾತನಾಡಿದರು.
ಪ್ರಭಾಕರ ಎಸ್ ಪೂಜಾರಿ, ವಿಕ್ರಂ ಕಾಪು, ನವೀನ್ ಅಮಿನ್ ಶಂಕರಪುರ, ಸೂರ್ಯ ಕಾಂತ್ ಸುವರ್ಣ, ಶಿವಾನಂದ ಕೋಟ್ಯಾನ್, ಸಂಜೀವ ಆರ್ ಅಮಿನ್ ಮೂಳೂರು, ವಿಕ್ಕಿ ಮಡುಂಬು, ಸುಧಾಕರ ಸಾಲ್ಯಾನ್ ರವನ್ನು ಸನ್ಮಾನಿಸಲಾಯಿತು.
ಬಿರುವೆರ್ ಕಾಪು ಸೇವಾ ಸಮಿತಿಯ ಉಪಾಧ್ಯಕ್ಷರಾದ ಮನೋಜ್ ಅಂಚನ್ ರವರು ಸಭಾಧ್ಯಕ್ಷತೆ ವಹಿಸಿದ್ದರು.
ಸಮಿತಿಯ ಉಪಾಧ್ಯಕ್ಷರುಗಳಾದ ಸುಧಾಕರ ಸಾಲ್ಯಾನ್, ಮನೋಜ್ ಅಂಚನ್ , ಕೋಶಧಿಕಾರಿಯಾದ ಕಾರ್ತಿಕ್ ಅಮಿನ್ , ಕಾರ್ಯದರ್ಶಿಗಳಾದ ವಿಕ್ಕಿ ಮಡುಂಬು, ರಾಕೇಶ್ ಕುಂಜೂರು , ರವಿರಾಜ್ ಶಂಕರಪುರ, ದೀಪಕ್ ಕುಮಾರ್ ಎರ್ಮಾಳ್, ಸುಜನ್ ಎಲ್ ಸುವರ್ಣ, ಮನೋಹರ್ ಕಲ್ಲುಗುಡ್ಡೆ , ವರುಣ್ ಬಿ ಕೋಟ್ಯಾನ್,ಸಂಧ್ಯಾ ಬಿ ಕೋಟ್ಯಾನ್ , ಅಶ್ವಿನಿ ಎನ್ ಬಂಗೇರ , ಹರಿ ಪ್ರಸಾದ್ ಕುಬೇರ , ಶ್ರೀಮತಿ ಸ್ವಪ್ನ ಎಮ್ ಅಂಚನ್ , ಅನಿಷ ಎಸ್ ಅಂಚನ್ , ಸಾಕ್ಷಿ ಪೂಜಾರಿ, ಅಶ್ವಿನಿ ಗಣೇಶ್ ಕೋಟ್ಯಾನ್ , ಸುರಕ್ಷ ಸುಜನ್ ಸುವರ್ಣ ಉಪಸ್ಥಿತರಿದ್ದರು.
ಪತ್ರಕರ್ತ ರಾಕೇಶ್ ಕುಂಜೂರು ಪ್ರಸ್ತಾವಿಸಿ, ಸ್ವಾಗತಿಸಿದರು. ಸತೀಶ್ ಪೂಜಾರಿ ಹೊಸ್ಮರ್ ಕಾರ್ಯಕ್ರಮ ನಿರೂಪಿಸಿ, ವಿಕ್ಕಿ ಮಡುಂಬುರವರು ವಂದಿಸಿದರು.
ಉದ್ಯಾವರ : ಸಾಮಾಜಿಕ ಕಾರ್ಯಕರ್ತೆ ಹೆಲೆನ್ ಫೆರ್ನಾಂಡಿಸ್ ನಿಧನ
Posted On: 28 Dec 2025, 12:46 PM
ಕಾಪು : ಉದ್ಯಾವರ ಗ್ರಾಮದ ಸಾಮಾಜಿಕ ಕಾರ್ಯಕರ್ತೆ, ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಹೆಲೆನ್ ಫೆರ್ನಾಂಡಿಸ್ ಉದ್ಯಾವರ ಇಂದು ಕುಸಿದು ಬಿದ್ದು ಹೃದಯಾಘಾತದಿಂದ ಬೆಳಗ್ಗೆ ನಿಧನರಾದರು.
ಉದ್ಯಾವರ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಲವಾರು ವರ್ಷ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಇವರು, ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಇದರ ಸದಸ್ಯೆಯಾಗಿದ್ದು, ಹಲವಾರು ಹುದ್ದೆಗಳನ್ನು ಸಕ್ರಿಯವಾಗಿ ನಿಭಾಯಿಸಿದ್ದಾರೆ. ಪ್ರಸ್ತುತ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಉದ್ಯಾವರ ಚರ್ಚಿನ ವಿವಿಧ ಸಂಘ-ಸಂಸ್ಥೆಗಳಲ್ಲಿ ಮತ್ತು ವಿಶೇಷವಾಗಿ ಪಾಲನ ಮಂಡಳಿಯಲ್ಲಿಯೂ ಸೇವೆ ಸಲ್ಲಿಸಿದ್ದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು ಮತ್ತು ಅಪಾರ ಬಂಧು ಬಳಗದವರನ್ನು ಆಗಲಿದ್ದಾರೆ.
ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮ ಅವಿಸ್ಮರಣೀಯ : ಬಿ.ವೈ.ವಿಜಯೇಂದ್ರ
Posted On: 28 Dec 2025, 10:54 AM
ಕಾಪು : ಅಪ್ರತಿಮ ದೇಶ ಭಕ್ತ ಅಟಲ್ ಬಿಹಾರಿ ವಾಜಪೇಯಿಯವರ ದೂರದರ್ಶಿತ್ವ ನಾಯಕತ್ವ ಸರ್ವರಿಗೂ ಮಾರ್ಗದರ್ಶಿಯಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಕಾಯಕಲ್ಪ ನೀಡಿದ ದೇಶದ ಜನ ಸೇವಕ. ಕಾಪು ಕಡಲ ತೀರದಲ್ಲಿ ಅಟಲ್ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮ ಅವಿಸ್ಮರಣೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಅವರು ಅವರು ಶನಿವಾರ ಕಾಪು ದೀಪಸ್ತಂಭದ ಬಳಿ ಕಡಲ ಕಿನಾರೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ಎರಡನೇ ದಿನದ ಕಾಪು ಕಡಲ ಪರ್ಬದ ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯ ಸ್ಮರಣೆಯ ದಿ. ಲೀಲಾಧರ ಶೆಟ್ಟಿ. ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭ ಪಕ್ಷ ಸಂಘಟನೆಗಾಗಿ
ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯ, ಸೋಮಶೇಖರ್ ಭಟ್ ರ ಶ್ರಮವನ್ನು ಸ್ಮರಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ, ಅದಾನಿ ಗ್ರೂಪ್ ಕಾರ್ಯವಾಹಕ ನಿರ್ದೇಶಕ, ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿದರು.
ಅಟಲ್ ಸಾಧನಾ ಪ್ರಶಸ್ತಿ : ಕಾಪು ಕಡಲ ಪರ್ಬದ ಗೌರಾವಾಧ್ಯಕ್ಷ, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಡಾ. ವಿದ್ಯಾಧರ್ ಎಸ್ ನಾಯಕ್, ಸೂರ್ಯಕಾಂತ್ ಜಯ ಸುವರ್ಣ ಅವರನ್ನು ಅಟಲ್ ಸಾಧನಾ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ಬಿಜೆಪಿ ಹಿರಿಯರನ್ನು ಗುರುತಿಸಿ ಗೌರವಿಸಲಾಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬೆಂಗಳೂರು ಎಂ.ಆರ್.ಜಿ ಗ್ರೂಪ್ ಚೈಯರ್ಮ್ಯಾನ್ ಕೆ.ಪ್ರಕಾಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಾಗಿರಥಿ ಮುರಳೂ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಕಲೇಶಪುರ ಶಾಸಕ ಮಂಜು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಆಟಲ್ ಜೀ ಶತಮಾನೋತ್ಸವ ಸಮಿತಿಯ - ರಾಜ್ಯ ಸಂಚಾಲಕರಾದ ಜಗದೀಶ್ ಹಿರೇಮನಿ, ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ರಾಷ್ಟ್ರೀಯ ಬಿಲ್ಲವ ಮಹಾ ಮಂಡಲ ಮಹಿಳಾ ವಿಭಾಗ ಉಡುಪಿ ಅಧ್ಯಕ್ಷರಾದ ಗೀತಾಂಜಲಿ ಎಮ್. ಸುವರ್ಣ, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣರಾವ್, ಶರಣ್ ಕುಮಾರ್ ಮಟ್ಟು, ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಹೋಟೆಲ್ ಉದ್ಯಮಿಗಳಾದ ಸಂತೋಷ್ ಶೆಟ್ಟಿ ಪುಣೆ, ಬರೋಡ ಶಶಿಧರ್ ಶೆಟ್ಟಿ, ಉಪೇಂದ್ರ, ಕುಶ ಸಾಲ್ಯಾನ್, ಸಂದೀಪ್ ಶೆಟ್ಟಿ, ರಾಜರ್ಷಿ ಕೆ. ವಾಸುದೇವ ಶೆಟ್ಟಿ, ನೀತಾಗುರುರಾಜ್, ಸೋನು ಪಾಂಗಾಳ, ಸಂತೋಷ್ ಮೂಡುಬೆಳ್ಳೆ ಮತ್ತಿತರರು ವೇದಿಕೆಯಲ್ಲಿದ್ದರು.
ಪ್ರಾಣೇಶ್ ಹೆಜಮಾಡಿ ವಂದೇ ಮಾತರಂ ಹಾಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ವಂದಿಸಿದರು. ಎಲ್ಲೂರು ಗ್ರಾ.ಪಂ. ಮಾಜಿ ಸದಸ್ಯ ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು.
ನಂತರ ಗಾಯಕ ರಘು ದೀಕ್ಷಿತ್ ರವರಿಂದ ಸಂಗೀತ ರಸ ಮಂಜರಿ ಕಾರ್ಯಕ್ರಮವು ನಡೆಯಿತು.
ಕಾಪು : K1 ಹೋಟೆಲ್ ಬಳಿ ಜಿಗ್ ಜಾಗ್ ಬ್ಯಾರಿಕೆಡ್ ಅಳವಡಿಸುವ ಬಗ್ಗೆ ಎನ್ ಎಚ್ ಎ ಐ ಗೆ ಮನವಿ
Posted On: 27 Dec 2025, 07:01 PM
ಕಾಪು : ರಾ.ಹೆ.66 ರ ಕಾಪು ಹೋಟೆಲ್ K1 ಹತ್ತಿರದಲ್ಲಿರುವ ಎನ್ ಎಚ್ ವೃತ್ತದ ಛೇದಕದಲ್ಲಿ ತೀವ್ರ ಸಂಚಾರ ದಟ್ಟಣೆ ಮತ್ತು ಹೆಚ್ಚುತ್ತಿರುವ ಅಪಘಾತಗಳ ಬಗ್ಗೆ ವ್ಯವಸ್ಥಿತವಾಗಿ ಸರಿಪಡಿಸಲು ಸಾಮಾಜಿಕ ಕಾರ್ಯಕರ್ತ ಕಾಪು ಜಯರಾಮ ಆಚಾರ್ಯ
ಯೋಜನಾ ನಿರ್ದೇಶಕರು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಹಲವಾರು ಅಪಘಾತಗಳು ಸಂಭವಿಸಿರುತ್ತದೆ ಮತ್ತು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸಿರುತ್ತದೆ. ಇದಕ್ಕೆ ಮುಖ್ಯ ಕಾರಣ ಅತಿಯಾದ ವೇಗ, ಕಳಪೆ ಗೋಚರಕೆ ಮತ್ತು ಸರಿಯಾದ ನಿಯಂತ್ರಣಗಳ ಕೊರತೆಯಿಂದಾಗಿ ಅಪಘಾತಗಳು ಸಂಭವಿಸಿವೆ ಮತ್ತು ವರದಿಯು ಆಗಿರುತ್ತದೆ. ಇದಲ್ಲದೆ, ಈ ವೃತ್ತದ ಮೂಲಕ ವಾಹನಗಳು ಕಾಪು ನಗರ, ಶಿರ್ವ, ಬೆಳ್ಮಣ್ಗೆ ಸಾಗುತ್ತದೆ. ಕಾಪು ಮುಖೇನ ಮಂಗಳೂರಿಗೆ ಮತ್ತು ಉಡುಪಿಗೆ ಸಾಗುತ್ತದೆ.
ಈ ಸರ್ಕಲ್ ಮೂಲಕ ಪಾದೂರು ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವಸ್ ಲಿಮಿಟೆಡ್ (ISPRL)ನ ಭಾರೀ ತೈಲ ಟ್ಯಾಂಕರ್ಗಳು, ಟ್ರಕ್ಗಳು ಮತ್ತು ಇತರ ಸ್ಥಳಗಳಿಗೆ ಈ ಮೂಲಕ ಆಗಾಗ್ಗೆ ಚಲಿಸುವ ಭಾರೀ ವಾಹನಗಳು. ರಾಷ್ಟ್ರೀಯ ಹೆದ್ದಾರಿ ಮುಖ್ಯ ರಸ್ತೆಯಿಂದ ಬರುವ ವಾಹನ ದಟ್ಟಣೆಯಿಂದಾಗಿ ಯಾವಾಗಲೂ ತಿರುವು ಸಮಯದಲ್ಲಿ ಅಪಘಾತಗಳು ಸಂಭವಿಸುತ್ತವೆ ಮತ್ತು ನಿರಂತರ ಸಂಚಾರ ದಟ್ಟಣೆ ಉಂಟಾಗುತ್ತದೆ.ಹಾಗೂ ಇಕ್ಕಡೆಗಳ್ಳಲ್ಲಿ ಸರಿಯಾದ ಸರ್ವಿಸ್ ರಸ್ತೆ ಮತ್ತು ಡ್ರೈನೇಜ್ ವ್ಯವಸ್ಥೆಯು ಸರಿಯಾಗಿ ಇರದೆ ಮಳೆ ನೀರು ರಸ್ತೆಯಲ್ಲಿ ಹರಿದು ಸುಗಮ ಸಂಚಾರಕ್ಕೆ ಅನಾನುಕೂಲವಾಗುತ್ತದೆ.
ಪ್ರಮುಖ ಸಮಸ್ಯೆಗಳೆಂದರೆ ಅಸಮರ್ಪಕ ಸೂಚನಾ ಫಲಕಗಳು, ಸಂಚಾರ ಸಂಕೇತಗಳು ಅಥವಾ ವೃತ್ತಗಳ, ಕಿರಿದಾದ ಲೇನ್ಗಳು ಮತ್ತು ಅಪಾಯಗಳನ್ನು ಹೆಚ್ಚಿಸುವ ವೇಗದ ಜಿಗ್ ಜಾಗ್ ಬ್ಯಾರಿಕೇಡ್ಗಳಿಲ್ಲದೆ ಅಪಘಾತಗಳು ಸಂಭವಿಸುತ್ತದೆ
ವೃತ್ತದ ಪಕ್ಕದಲ್ಲಿ ಎರಡು ಬದಿಗಳಲ್ಲಿಯೂ ಬ್ಯಾರಿಕೇಡ್ಗಳನ್ನು ಅಳವಡಿಸುವುದು ಮತ್ತು ಇತರ ಸುರಕ್ಷತಾ ಕ್ರಮಗಳಿಂದಾಗಿ ಅಪಘಾತಗಳನ್ನು ತಡೆಯಬಹುದು/ತಪ್ಪಿಸಬಹುದು. ಆಧುನಿಕ ವೃತ್ತಗಳು, ಉತ್ತಮ ಬೆಳಕು, ರಂಬಲ್ ಪಟ್ಟಿಗಳು ಮತ್ತು ಸ್ಪಷ್ಟ ಗುರುತುಗಳನ್ನು ಸ್ಥಾಪಿಸುವಂತಹ ಪ್ರಸ್ತಾವಿತ ಪರಿಹಾರಗಳನ್ನು ಸಹ ಬ್ಯಾರಿಕೇಡ್ ಸುರಕ್ಷತೆ ಮತ್ತು ಹರಿವನ್ನು ಹೆಚ್ಚಿಸುತ್ತದೆ. ಈ ಮೂಲಕ ಸಾರ್ವಜನಿಕರ ಅಭಿಪ್ರಾಯದಂತೆ ಮತ್ತು ಪ್ರಯಾಣಿಕರ ಪರವಾಗಿ ಆಗ್ರಹಿಸಿದ್ದಾರೆ.
ಡಿ.28 (ನಾಳೆ) : 47ನೇ ವರ್ಷದ ಪುಣೆ ಕುಲಾಲ ಸುಧಾರಕ ಸಂಘದ ವಾರ್ಷಿಕ ಮಹಾಸಭೆ
Posted On: 27 Dec 2025, 06:49 PM
ಪುಣೆ : ಮಹಾನಗರಿ ಮುಂಬೈಯ ಪುಣೆ ಕುಲಾಲ ಸುಧಾರಕ ಸಂಘ (ರಿ.) ಇದರ ಮಹಾಸಭೆ ಡಿ. 28 ರಂದು ಭಾನುವಾರ ಬೆಳಿಗ್ಗೆ10 ರಿಂದ ಶ್ರೀ ಗುಂಡೂರಾವ್ ಎಂ ಶೆಟ್ಟಿ ಮೆಮೋರಿಯಲ್ ಹಾಲ್, ಡಾ| ಸ್ಯಾಮ್ ರಾವ್ ಕಲ್ಮಾಡಿ ಕನ್ನಡ ಮಾಧ್ಯಮ ಶಾಲೆ, ಡಾ| ಕೆದ್ಕರ್ ರೋಡ್ ಪುಣೆಯಲ್ಲಿ ನಡೆಯಲಿದೆ.
ಕುಲಾಲ ಸುಧಾರಕ ಸಂಘ ಪುಣೆ ಇದರ ಅಧ್ಯಕ್ಷರಾದ ದೊಡ್ಡಣ್ಣ ಸಿ ಮೂಲ್ಯ ಅಧ್ಯಕ್ಷತೆಯಲ್ಲಿ ಹಾಗೂ ವಿವಿಧ ಕುಲಾಲ ಮುಖಂಡರು ಉಪಸ್ಥಿತಿಯಲ್ಲಿ ನಡೆಯಲಿದೆ.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ : ಕಾಪು ಮಾರಿಯಮ್ಮ ದರುಶನ
Posted On: 27 Dec 2025, 06:43 PM
ಕಾಪು : ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು.
ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ನನಗೆ ಇದು ಜೀವನದಲ್ಲಿ ಅತ್ಯಂತ ಶ್ರೇಷ್ಠವಾದ ದಿನ, ಇಂತಹ ಚರಿತ್ರೆಯುಳ್ಳ ದೇವಸ್ಥಾನಕ್ಕೆ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ, ಕೋಟಿ ದುಡ್ಡು ಕೊಟ್ಟರು ಸಿಗದ ಮಾನಸಿಕ ನೆಮ್ಮದಿಯ ಅನುಭವವಾಗಿದೆ, ದೇಶದಲ್ಲಿ ರಾಜ್ಯದಲ್ಲಿ ಎಲ್ಲಿಯೂ ನಡೆಯದ ರೀತಿಯಲ್ಲಿ ಈ ದೇಗುಲದ ಜೀರ್ಣೋದ್ಧಾರ ನಡೆದಿದೆ, ಅ ತಾಯಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು.
ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕ ಮತ್ತು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್. ಪಾಲನ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಹುಬ್ಬಳ್ಳಿ ಧಾರವಾಡ ಸಮಿತಿಯ ಸಂಚಾಲಕರಾದ ಸುಗ್ಗಿ ಸುಧಾಕರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಶೇಖರ ಸಾಲ್ಯಾನ್,ರವೀಂದ್ರ ಮಲ್ಲಾರ್, ಮನೋಹರ ರಾವ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಯೇಸು ಕ್ರಿಸ್ತರ ಜನನ ಮಾನವ ಕುಲಕ್ಕೆ ಶಾಂತಿ,ಪ್ರೀತಿ ಸಹೋದರತ್ವ ನೀಡಿದೆ : ವಿನಯ್ ಕುಮಾರ್ ಸೊರಕೆ
Posted On: 27 Dec 2025, 05:43 PM
ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಮಾಜಿ ಸಚಿವ ಹಾಗೂ ಮಾಜಿ ಸಂಸದ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಕಾಪು ರಾಜೀವಭವನದಲ್ಲಿ ಸೌಹಾರ್ದ ಕ್ರಿಸ್ಮಸ್ ಆಚರಣೆ ನಡೆಯಿತು.
ಈ ಸಂದರ್ಭದಲ್ಲಿ ಡಾ. ಸಹನಾ ಪ್ರವೀಣ್ ಮತ್ತು ತಂಡದಿಂದ ಕ್ರಿಸ್ಮಸ್ ಕ್ಯಾರಲ್ಸ್ ಹಾಡಲಾಯಿತು.
ಸಾಂತಾಕ್ಲಾಸ್ ಆಗಮನದೊಂದಿಗೆ ಎಲ್ಲರಲ್ಲಿ ವಿಶೇಷ ಸಂಭ್ರಮ ಮೂಡಿದ್ದು, ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಕ್ರಿಸ್ಮಸ್ ಹಬ್ಬವನ್ನು ಸೌಹಾರ್ದದಿಂದ ಆಚರಿಸಲಾಯಿತು ಅನಂತರ ಅನಂತರ ವಿನಯ್ ಕುಮಾರ್ ಸೊರಕೆಯವರು ಮಾತನಾಡಿ, ಯೇಸು ಕ್ರಿಸ್ತರ ಜನನವು ಮಾನವಕುಲಕ್ಕೆ ಶಾಂತಿ, ಪ್ರೀತಿ, ಸಹೋದರತ್ವ ಮತ್ತು ತ್ಯಾಗದ ಮಹತ್ವದ ಸಂದೇಶವನ್ನು ನೀಡಿದೆ ಎಂದು ಹೇಳಿದರು. ಸಮಾಜದಲ್ಲಿ ದ್ವೇಷ, ಅಸಹಿಷ್ಣುತೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಕ್ರಿಸ್ತನ ಬೋಧನೆಗಳು ಎಲ್ಲರಿಗೂ ಮಾರ್ಗದರ್ಶಕವಾಗಿವೆ. ಎಲ್ಲ ಧರ್ಮಗಳ ಸಾರ ಮಾನವೀಯತೆಯೇ ಆಗಿದ್ದು, ಪರಸ್ಪರ ಗೌರವ ಮತ್ತು ಸೌಹಾರ್ದದಿಂದ ಬದುಕುವುದೇ ನಿಜವಾದ ಹಬ್ಬದ ಆಚರಣೆ ಎಂದು ಅವರು ತಿಳಿಸಿದರು. ಈ ರೀತಿಯ ಕಾರ್ಯಕ್ರಮಗಳು ಸಮಾಜದಲ್ಲಿ ಏಕತೆ ಹಾಗೂ ಸಹಬಾಳ್ವೆಯನ್ನು ಬಲಪಡಿಸುತ್ತವೆ ಎಂದು ಹೇಳಿ, ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಮುಖ್ಯ ಸಂದೇಶಕರಾಗಿ ಆಗಮಿಸಿ್ ಆಲ್ವಿನ್ ದಾಂತಿ ರವರು ಮಾತನಾಡಿ ಯೇಸು ಕ್ರಿಸ್ತರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುರು ಸಾರಿದ ಪ್ರೀತಿ, ಸಮಾನತೆ, ಶಾಂತಿ, ತ್ಯಾಗ ಮತ್ತು ಮಾನವೀಯತೆಯ ಸಂದೇಶಗಳು ಇಡೀ ಮಾನವಕುಲಕ್ಕೆ ಮಾರ್ಗದರ್ಶಕವಾಗಿವೆ. ಸಮಾಜದಲ್ಲಿ ಜಾತಿ, ಧರ್ಮ, ವರ್ಗಭೇದಗಳ ಕಾರಣದಿಂದ ಅಸಮಾನತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, “ಎಲ್ಲರೂ ಒಂದೇ ಮಾನವಕುಲ” ಎಂಬ ನಾರಾಯಣ ಗುರುರವರ ಸಂದೇಶ ಹಾಗೂ ಯೇಸು ಕ್ರಿಸ್ತರ ಸಹೋದರತ್ವ, ಕ್ಷಮೆ ಮತ್ತು ಸೇವೆಯ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ. ದುರ್ಬಲರು, ದೀನರು ಮತ್ತು ಹಿಂದುಳಿದವರನ್ನು ಗೌರವದಿಂದ ಕಾಣುವುದು, ಪರಸ್ಪರ ಪ್ರೀತಿ ಮತ್ತು ಸಹಬಾಳ್ವೆಯಿಂದ ಬದುಕುವುದು ನಿಜವಾದ ಧರ್ಮದ ಅರ್ಥವಾಗಿದೆ. ಈ ಮಹಾನ್ ಚಿಂತಕರ ಆದರ್ಶಗಳನ್ನು ಅನುಸರಿಸಿದಾಗ ಮಾತ್ರ ಶಾಂತಿಯುತ, ಸಮಾನತೆಯ ಮತ್ತು ಸೌಹಾರ್ದತೆಯ ಸಮಾಜವನ್ನು ನಿರ್ಮಿಸಲು ಸಾಧ್ಯವೆಂದು ಅವರು ಹೇಳಿದರು.ಇಂತಹ ಹಬ್ಬಗಳ ಆಚರಣೆ ಸಮಾಜದಲ್ಲಿ ಏಕತೆ ಮತ್ತು ಸಹೋದರತ್ವವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಕರ್ನಾಟಕ ಕ್ರೈಸ್ತ ನಿಗಮ ಮಂಡಳಿಯ ನಿರ್ದೇಶಕರಾದ ಪ್ರಶಾಂತ್ ಜತ್ತನ್ನರವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಕರಾವಳಿ ಪ್ರಾಧಿಕಾರ ಮಂಡಳಿಯ ಅಧ್ಯಕ್ಷರಾದ ಎಂ.ಎ ಗಫೂರ್ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವೈ ಸುಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಂತಲತಾ ಶೆಟ್ಟಿ,, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ಕಾಪು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ ಅಡ್ವೆ ಕಾಪು ದಿವಾಕರ್ ಶೆಟ್ಟಿ, ನವೀನ್ ಎನ್ ಶೆಟ್ಟಿ, ಉಡುಪಿ ಜಿಲ್ಲಾ ಯುವಕಾಂಗ್ರೆಸ್ ನ ಮುಖಂಡರಾದ ಅರ್ಜುನ್ ನಾಯರಿ, ಮೊಹಮ್ಮದ್ ನಿಯಾಜ, ಗೌರೀಶ್ ಕೋಟ್ಯಾನ್ ಹಿರಿಯ ಕಾಂಗ್ರೆಸ್ ಮುಖಂಡರು ಗೋಪಾಲ ಪೂಜಾರಿ ಪಲಿಮಾರು ಹಸನಬ್ಬ ಶೇಖ್, ರಿಯಾಜ್ ಮುದರಂಗಡಿಕಾಂಗ್ರೆಸ್ ಪಕ್ಷದ ಮುಖಂಡರು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು, ಪಕ್ಷದ ಪದಾಧಿಕಾರಿಗಳು ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದು, ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಸೌಹಾರ್ದತೆ, ಶಾಂತಿ ಮತ್ತು ಸಹೋದರತ್ವದ ಸಂದೇಶವನ್ನು ಈ ಕ್ರಿಸ್ಮಸ್ ಆಚರಣೆ ಸಾರಿತು. ಅಶ್ವಿನಿ ನವೀನ್ ಬಂಗೇರರವರು ಸ್ವಾಗತಿಸಿ, ತಸ್ನೀನ್ ಅರಾರವರು ಕಾರ್ಯಕ್ರಮ ನಿರೂಪಿಸಿದರು.
ಡಿ. 26-27-28 : ಕಾಪುವಿನಲ್ಲಿ “ಕಾಪು ಕಡಲ ಪರ್ಬ” ; ಕಾಪು ಕಡಲ ಪರ್ಬ ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 27 Dec 2025, 05:38 PM
ಕಾಪು : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಬಿ ಪ್ರಯುಕ್ತ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಡಿ. 26, 27 ಮತ್ತು 28ರಂದು ಕಾಪು ಲೈಟ್ ಹೌಸ್ ಬೀಚ್ ಕಡಲ ಕಿನಾರೆಯಲ್ಲಿ ಡಾ. ವಿ. ಎಸ್. ಆಚಾರ್ಯ ಸ್ಮರಣೆಯ ಕಡಲೋತ್ಸವ- ಖಾದ್ಯ- ಕ್ರೀಡೆ-ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳೊಂದಿಗೆ ಕಾಪು ಕಡಲ ಪರ್ಬ ಜರುಗಲಿದೆ ಎಂದು ಕಾರ್ಯಕ್ರಮದ ರುವಾರಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.
ಅವರು ಕಾಪು ಮಂಥನ್ ಬೀಚ್ ರೆಸಾರ್ಟ್ ನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಕಡಲ ಪರ್ಬದ ಜತೆಗೆ ಜನರಿಗೆ ಉಪಯುಕ್ತ ವಾಗುವ ರೀತಿಯಲ್ಲಿ ಉಚಿತ ನೇತ್ರ ಚಿಕಿತ್ಸೆ, ಕನ್ನಡಕ ವಿತರಣೆ, ದಂತ ಚಿಕಿತ್ಸೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಪ್ರಬಂಧ, ಚಿತ್ರ ಬಿಡಿಸುವ ಸ್ಪರ್ಧೆ, ಮರಳು ಶಿಲ್ಪ ರಚನೆ, ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಮತ್ತು ಪುರುಷರ ವಾಲಿಬಾಲ್ ಪಂದ್ಯಾಟ ಸಹಿತ ಬೀಚ್ ಕ್ರೀಡಾಕೂಟಗಳು, ಸಾಧಕರಿಗೆ ಸನ್ಮಾನ, ಸಂಗೀತ ರಸಮಂಜರಿ, ನಾಟಕ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವೈ. ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದು ಶಾಸಕರು ಮಾಹಿತಿ ನೀಡಿದರು.
ಪ್ರಮುಖ ಕಾರ್ಯಕ್ರಮಗಳು
ಡಿ. 26ರಂದು ಮಧ್ಯಾಹ್ನ 3 ಗಂಟೆಗೆ 'ನಾ ಕಂಡಂತೆ ಅಟಲ್' ಪ್ರಬಂಧ ಸ್ಪರ್ಧೆ, ಸಂಜೆ 4 ಗಂಟೆಗೆ 'ಆತ್ಮ ನಿರ್ಭರ ಭಾರತ' - ಚಿತ್ರ ಬಿಡಿಸುವ ಸ್ಪರ್ಧೆ, ಆಹಾರ ಮೇಳ ಉದ್ಘಾಟನೆ, ಸಂಜೆ 6ಕ್ಕೆ ಜಗದೀಶ್ ಆಚಾರ್ಯ ಪುತ್ತೂರು ಅವರಿಂದ ಸಂಗೀತ ರಾತ್ರಿ 7ಕ್ಕೆ ಸಭಾ ಕಾರ್ಯಕ್ರಮ ಉದ್ಘಾಟನೆಯ ಬಳಿಕ ಕಾಪು ರಂಗ ತರಂಗ ಕಲಾವಿದರಿಂದ “ಶೋಬಾಜಿ” ಸಾಮಾಜಿಕ, ಹಾಸ್ಯಮಯ ನಾಟಕ ಪ್ರದರ್ಶನ ಗೊಳ್ಳಲಿದೆ.
ಡಿ. 27ರಂದು ಬೆಳಗ್ಗೆ 9.30ಕ್ಕೆ ಪ್ರಸಾದ್ ನೇತ್ರಾಲಯದ ಸಹಯೋಗದಲ್ಲಿ ನೇತ್ರ ಉಚಿತ ತಪಾಸಣೆ ಹಾಗೂ ಗುರ್ಮೆ ಫೌಂಡೇಶನ್ ವತಿಯಿಂದ ಕನ್ನಡಕ ವಿತರಣೆ, ಡಾ. ವಿಜಯೇಂದ್ರ ಅವರ ನೇತೃತ್ವದಲ್ಲಿ ದಂತ ಚಿಕಿತ್ಸಾ ಶಿಬಿರ, ಮಧ್ಯಾಹ್ನ 2.30ಕ್ಕೆ ಪುರುಷರು ಮತ್ತು ಮಹಿಳೆಯರಿಗೆ ಬೀಚ್ ಹಗ್ಗ ಜಗ್ಗಾಟ, ಮರಳು ಶಿಲ್ಪ ರಚನೆ ಸ್ಪರ್ಧೆ, ರಾತ್ರಿ 7ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ 8ಕ್ಕೆ “ರಘು ದೀಕ್ಷಿತ್ ಸಂಗೀತ ರಸಮಂಜರಿ” ಕಾರ್ಯ ಕ್ರಮ ನಡೆಯಲಿದೆ.
ಡಿ.28ರಂದು ಬೆಳಗ್ಗೆ 9.30ಕ್ಕೆ ಆದರ್ಶ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ಶಿಬಿರ, 11.30ಕ್ಕೆ ಪುರುಷರ ವಾಲಿಬಾಲ್ ಪಂದ್ಯಾವಳಿ, ಮಹಿಳೆಯರಿಗೆ ಥೋಬಾಲ್ ಪಂದ್ಯಾವಳಿ, ರಾತ್ರಿ 7ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ 8ಕ್ಕೆ “ಕುನಾಲ್ ಗಾಂಜಾವಾಲಾ” ಅವರಿಂದ ಸಂಗೀತ ರಸ ಮಂಜರಿ ಕಾರ್ಯಕ್ರಮ ಜರುಗಲಿದೆ.
ಪ್ರತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಕಾಪು ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಪ್ರಮುಖರಾದ ಗೀತಾಂಜಲಿ ಎಂ. ಸುವರ್ಣ, ಶಿಲ್ಪಾ ಜಿ. ಸುವರ್ಣ, ಶ್ರೀಕಾಂತ್ ನಾಯಕ್, ಪ್ರವೀಣ್ ಗುರ್ಮೆ, ವೀಣಾ ಶೆಟ್ಟಿ, ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಉಪಸ್ಥಿತರಿದ್ದರು.
