Updated News From Kaup
ರಸಾಯನಶಾಸ್ತ್ರವು ಶಿಕ್ಷಕರಿಗೆ ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ : ಶ್ರೀ ಮಾರುತಿ
Posted On: 29-07-2023 01:31PM
ಕಾರ್ಕಳ : ರಸಾಯನ ಶಾಸ್ತ್ರವು ನಿರಂತರ ಅಧ್ಯಯನ ಮತ್ತು ಅಧ್ಯಾಪನಕ್ಕೆ ಪೂರಕವಾಗಿದ್ದು, ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶ್ರೀ ಮಾರುತಿ ತಿಳಿಸಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ. ಇದರ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯಲ್ಲಿ ರಸಾಯನಶಾಸ್ತ್ರದ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ
Posted On: 29-07-2023 01:21PM
ಕಾಪು : ಮಣಿಪುರ ರಾಜ್ಯದಲ್ಲಿ ಕಳೆದ ಸುಮಾರು 3 ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರ, ಮಹಿಳೆಯರ ಮೇಲಿನ ಅತ್ಯಾಚಾರವನ್ನು ಖಂಡಿಸಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನಾ ಸಭೆಯು ಜುಲೈ 29ರಂದು ಕಾಪು ಪೇಟೆಯಲ್ಲಿ ನಡೆಯಿತು.
ಬೆಳ್ಮಣ್ : ಹಡಿಲು ಭೂಮಿಯಲ್ಲಿ ಕೃಷಿ ಕಾರ್ಯ ನಡೆಸಿದ ಕ್ರಿಯಾಶೀಲಾ ಯುವಕನಿಗೆ ಗೌರವಾರ್ಪಣೆ.
Posted On: 29-07-2023 10:16AM
ಬೆಳ್ಮಣ್ : ಸುಮಾರು ವರ್ಷಗಳಿಂದ ತನ್ನ ಪರಿಸರದ ಹಡಿಲು ಬಿದ್ದ ಕೃಷಿ ಭೂಮಿಯನ್ನು ಪುನಶ್ಚೇತನ ಗೊಳಿಸಿ ಬೇಸಾಯ ಮಾಡಿ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುವ ಅಂತರಾಷ್ಟ್ರೀಯ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸಿರುವ ಕ್ರಿಯಾಶೀಲ ಯುವಕ ಸುಬಾಸ್ ಕುಮಾರ್ ನಂದಳಿಕೆ ಇವರನ್ನು ಲಯನ್ಸ್ ಕ್ಲಬ್ಬಿನ ವತಿಯಿಂದ ಗೌರವಿಸಲಾಯಿತು.
ಅಳಿವಿನಂಚಿನಲ್ಲಿರುವ ಶ್ರೀ ತಾಳೆ ಗಿಡಗಳನ್ನು ಹೆಬ್ರಿ ಪರಿಸರದಲ್ಲಿ ನೆಡುವ ಅಭಿಯಾನಕ್ಕೆ ಚಾಲನೆ
Posted On: 29-07-2023 10:06AM
ಉಡುಪಿ : ವನದೇವತೆ ಸಾಲುಮರದ ತಿಮ್ಮಕ್ಕ ಇತ್ತೀಚೆಗೆ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಪ್ರೊ. ಕೃಷ್ಣಯ್ಯನವರು ಅವರಿಗೆ ನೀಡಿದ್ದ ವಿನಾಶದ ಅಂಚಿನಲ್ಲಿರುವ 112 'ಶ್ರೀತಾಳೆ' ಗಿಡಗಳನ್ನು - ಸಾಮಾಜಿಕ ಕಾರ್ಯಕರ್ತೆ ಡಾ. ಭಾರ್ಗವಿ ಐತಾಳರಿಗೆ ಉಡುಪಿ ಜಿಲ್ಲೆಯ ಹೆಬ್ರಿ ಸುತ್ತಮುತ್ತಲಿನ ಪರಿಸರದಲ್ಲಿ ನೆಡಲು ನಮ್ಮ ಮನೆ ನಮ್ಮ ಮರ ತಂಡದ ರವಿರಾಜ್ ಎಚ್ ಪಿ ಅವರು ಹಸ್ತಾಂತರಿಸಿದರು.
ಕಾಪು ಸರ್ಕಾರಿ ಪಾಲಿಟೆಕ್ನಿಕ್ : ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿ ಅವಧಿ ವಿಸ್ತರಣೆ
Posted On: 27-07-2023 08:02PM
ಕಾಪು : ಪ್ರಸಕ್ತ ಸಾಲಿನಲ್ಲಿ ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಾದ ಆಟೋಮೇಷನ್ ಅಂಡ್ ರೋಬೋಟಿಕ್ಸ್ ಹಾಗೂ ಕ್ಲೌಡ್ ಕಂಪ್ಯೂಟಿಂಗ್ ಅಂಡ್ ಬಿಗ್ ಡೇಟಾ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ವಿದ್ಯಾಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 5 ರವರೆಗೆ ವಿಸ್ತರಿಸಲಾಗಿದೆ.
ಕರಾವಳಿಯಲ್ಲಿ ವಿಧ್ವಂಸಕ ಕೃತ್ಯದ ಶಂಕೆ ; ಕಾಪು ತಾಲೂಕಿನಲ್ಲಿ ಪೊಲೀಸರ ಕಟ್ಟೆಚ್ಚರ
Posted On: 27-07-2023 07:01PM
ಕಾಪು : ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ ಬಳಿಕ ಕರಾವಳಿಯಲ್ಲಿ ವಿಧ್ವಂಸಕ ಚಟುವಟಿಕೆ ನಡೆಯುವ ಸಾಧ್ಯೆತೆಯಿಂದಾಗಿ, ಪೊಲೀಸರು ಜನ ನಿಬಿಡ ಪ್ರದೇಶಗಳ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ.
ಪಡುಬಿದ್ರಿ : ಬಾಲಕಿಗೆ ಲೈಂಗಿಕ ದೌರ್ಜನ್ಯ ; ಆರೋಪಿಯ ಬಂಧನ
Posted On: 27-07-2023 06:16PM
ಪಡುಬಿದ್ರಿ : ಐದರ ಹರೆಯದ ಬಾಲಕಿಗೆ ಬಿಸ್ಕೆಟ್ ಆಸೆ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಕೃತ್ಯ ಪಡುಬಿದ್ರಿಯಲ್ಲಿ ನಡೆದಿದೆ.
ಪಡುಬಿದ್ರಿ ರೋಟರಿ ಪದಗ್ರಹಣ ಕಾರ್ಯಕ್ರಮ ; ನೂತನ ಅಧ್ಯಕ್ಷರಾಗಿ ಸಂತೋಷ್ ಪಡುಬಿದ್ರಿ
Posted On: 27-07-2023 06:05PM
ಪಡುಬಿದ್ರಿ : ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯು ಸಮಾಜಮುಖಿ ಚಿಂತನೆಯ ಜೊತೆಗೆ ಸರ್ವರ ಹಿತ ಬಯಸುವ ಕಾಯಕದೊಂದಿಗೆ, ಲಿಂಗ ತಾರತಮ್ಯವಿಲ್ಲದೆ ಮಹಿಳೆಯರಿಗೂ ಸಮಾನ ಹಕ್ಕನ್ನು ನೀಡಿದೆ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಡಾ. ಭರತೇಶ್ ಅದಿರಾಜ್ ಹೇಳಿದರು. ಅವರು ಪಡುಬಿದ್ರಿಯ ಸುಜಾತಾ ಅಡಿಟೋರಿಯಂನಲ್ಲಿ ಪಡುಬಿದ್ರಿ ರೋಟರಿಯ 2023-24ನೇ ಸಾಲಿನ ಪದಗ್ರಹಣ ಸಮಾರಂಭ ದಲ್ಲಿ ಪದಪ್ರದಾನ ಅಧಿಕಾರಿಯಾಗಿ ಭಾಗವಹಿಸಿ ಮಾತನಾಡಿದರು.
ಕಾಪು : 80 ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಶಾಸಕರ ಭೇಟಿ ; ವಿವಿಧ ಸವಲತ್ತು ವಿತರಣೆ ; ಅಹವಾಲು ಸ್ವೀಕಾರ
Posted On: 27-07-2023 05:23PM
ಕಾಪು : ಕ್ಷೇತ್ರದ ಶಾಸಕಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಜುಲೈ27ರಂದು 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದರು.
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ 2022-23 ನೇ ವಾರ್ಷಿಕ ಮಹಾಸಭೆ ; ಶೇ. 25 ಡಿವಿಡೆಂಡ್ ಘೋಷಣೆ
Posted On: 27-07-2023 05:12PM
ಪಡುಬಿದ್ರಿ : ಇಲ್ಲಿನ ಸಹಕಾರಿ ವ್ಯವಸಾಯಿಕ ಸೊಸೈಟಿಯ 2022-23 ನೇ ವಾರ್ಷಿಕ ಮಹಾಸಭೆಯು ಜುಲೈ 26 ರಂದು ವೈ ಲಕ್ಷ್ಮಣ್ ಸಭಾಂಗಣ ಸಹಕಾರ ಸಂಗಮ, ಪ್ರಧಾನ ಕಚೇರಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇಲ್ಲಿ ಜರಗಿತು.
