Updated News From Kaup
ಜುಲೈ 28 : ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ। ಜಯಂತ್ ಪಡುಬಿದ್ರಿ ಸಂಸ್ಮರಣೆ – ದತ್ತಿನಿಧಿ ವಿತರಣೆ ಕಾರ್ಯಕ್ರಮ
Posted On: 27-07-2023 01:04PM
ಕಾಪು : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ। ಜಯಂತ್ ಪಡುಬಿದ್ರಿ ಸಂಸ್ಮರಣೆ – ದತ್ತಿನಿಧಿ ವಿತರಣೆ ಕಾರ್ಯಕ್ರಮ ಜುಲೈ 28, ಶುಕ್ರವಾರ ಬೆಳಿಗ್ಗೆ ಗಂಟೆ 11.30 ಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜು, ಪಲಿಮಾರು ಇಲ್ಲಿ ಜರಗಲಿದೆ.
ಕಾಪು : ಕುತ್ಯಾರು ಕೇಂಜ ಶ್ರೀ ಬ್ರಹ್ಮ ಬೈದೆರುಗಳ ಗರಡಿ - ಆಟಿ ತಿಂಗಳ ಅಗೆಲು ಸೇವೆ ಸಂಪನ್ನ
Posted On: 26-07-2023 11:38PM
ಕಾಪು : ತಾಲೂಕಿನ ಎಲ್ಲೂರು ಸೀಮೆಯ ಇತಿಹಾಸ ಪ್ರಸಿದ್ಧ ಕುತ್ಯಾರು ಕೇಂಜ ಗರಡಿಯ ದಿವ್ಯ ಸಾನಿಧ್ಯದಲ್ಲಿ ವರ್ಷಂಪ್ರತಿ ಜರಗುವ ಆಟಿ ತಿಂಗಳ ಅನ್ನ ನೈವೇದ್ಯದ ಅಗೆಲು ಸೇವೆ ಬುಧವಾರ ಸಂಪನ್ನಗೊಂಡಿತು.
ಕಾರ್ಕಳ : ಕುಲಾಲ ಸಂಘ ನಾನಿಲ್ತಾರ್ ವತಿಯಿಂದ ಆಗಸ್ಟ್ ತಿಂಗಳಲ್ಲಿ ಸರಣಿ ಕಾರ್ಯಕ್ರಮಗಳು
Posted On: 26-07-2023 10:26PM
ಕಾರ್ಕಳ : ತಾಲೂಕಿನ ನಾನಿಲ್ತಾರ್ ಕುಲಾಲ ಸಂಘದ ಆಶ್ರಯದಲ್ಲಿ ಆಗಸ್ಟ್ 6, ಭಾನುವಾರ ಆಟಿಡೊಂಜಿ ಕೂಟ, ಆಗಸ್ಟ್ 15 ರಂದು ಸ್ವಾತಂತ್ರ ದಿನಾಚರಣೆ, ಆಗಸ್ಟ್ 25 ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ಸಂಘದ ಸಭಾಭವನದಲ್ಲಿ ನಡೆಯಲ್ಲಿದೆ ಎಂದು ನಾನಿಲ್ತಾರು ಕುಲಾಲ ಸಂಘದ ಅಧ್ಯಕ್ಷರಾದ ಕುಶ ಆರ್ ಮೂಲ್ಯ ಪ್ರಕಟಣೆಯಲ್ಲಿ ತಿಳಿಸಿರುವರು.
ನಿರಂತರ ಮಳೆ : ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಜು.27) ರಜೆ ಘೋಷಣೆ
Posted On: 26-07-2023 08:50PM
ಉಡುಪಿ : ಜಿಲ್ಲೆಯಲ್ಲಿ ನಾಳೆ (ಜುಲೈ 27) ಕೂಡಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಜುಲೈ 29 : ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ
Posted On: 26-07-2023 07:10PM
ಕಾಪು : ಭಾರತದ ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಮಣಿಪುರ ರಾಜ್ಯದಲ್ಲಿ ಎರಡು ಪಂಗಡಗಳ ನಡುವೆ ನಡೆಯುತ್ತಿರುವ ಜನಾಂಗೀಯ ಘರ್ಷಣೆಯು ತಾರಕಕ್ಕೇರಿ, ತೀವ್ರ ಹಿಂಸಾಚಾರಕ್ಕೆ ತಿರುಗಿ, ಅಲ್ಲಿ ನಡೆಯುತ್ತಿರುವ ಅಮಾನವೀಯ ಘಟನೆಗಳು, ಅದರಲ್ಲಿಯೂ ವಿಶೇಷವಾಗಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಹಿಂಸಾಕೃತ್ಯಗಳಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಗೆ ಮಸಿ ಬಳಿದಂತಾಗಿ, ಭಾರತೀಯರೆಲ್ಲರೂ ನಾಚಿಕೆಯಿಂದ ತಲೆತಗ್ಗಿಸುವಂತಾಗಿರುವುದು ವಿಪರ್ಯಾಸ. ಇಬ್ಬರು ಮಹಿಳೆಯರನ್ನು ಬಲಾತ್ಕಾರವಾಗಿ ಕೊಂಡೊಯ್ದು, ಸಾಮೂಹಿಕ ಅತ್ಯಾಚಾರ ನಡೆಸಿ, ವಿವಸ್ತ್ರಗೊಳಿಸಿ ಬಹಿರಂಗವಾಗಿ ಬೀದಿಯಲ್ಲಿ ಮೆರವಣಿಗೆ ನಡೆಸಿರುವ ವಿಡಿಯೋ ತುಣುಕು ಘಟನೆ ನಡೆದ ಬಹಳ ದಿನಗಳ ನಂತರ ಬೆಳಕಿಗೆ ಬಂದಿದೆ. ಆದರೆ ಆ ರಾಜ್ಯದಲ್ಲಿ ಆಡಳಿತದಲ್ಲಿರುವ ಬಿ.ಜೆ.ಪಿ ಸರ್ಕಾರ ಹಾಗೂ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ, "ಬೇಟಿ ಪಢಾವೋ- ಬೇಟಿ ಬಚಾವೋ" ಎಂಬ ಡೋಂಗಿ ಘೋಷಣೆಯ ಬಿ.ಜೆ.ಪಿ ನೇತೃತ್ವದ ಸರ್ಕಾರದ ಬೇಜವಾಬ್ದಾರಿ ಧೋರಣೆ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆ ತೀರಾ ಖಂಡನೀಯ.
ಕಾಪು : ನೆರೆ ಸಂತ್ರಸ್ತರಿಗೆ ಗರಿಷ್ಟ ಪರಿಹಾರ ನೀಡುವಂತೆ ಮುಖ್ಯಮಂತ್ರಿ, ಕಂದಾಯ ಸಚಿವರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ
Posted On: 26-07-2023 06:53PM
ಕಾಪು : ವಿಧಾನಸಭಾ ಕ್ಷೇತ್ರದ ಬಹುಭಾಗವು ಕಡಲ ಪ್ರದೇಶಗಳಿಗೆ ಹೊಂದಿಕೊಂಡಿರುವ ಭಾಗದಲ್ಲಿ ಜನರು ವಾಸ್ತವ್ಯ ಮಾಡಿಕೊಂಡಿರುತ್ತಾರೆ. ಜೂನ್ ತಿಂಗಳಿನಿಂದ ಚಂಡಮಾರುತ ಹಾಗೂ ತೀವ್ರ ಸುರಿದ ಮಳೆಯಿಂದಾಗಿ ಅತಿವೃಷ್ಟಿ ಉಂಟಾಗಿದ್ದು, ಜನರ ಆಸ್ತಿ-ಪಾಸ್ತಿಗಳು ನಷ್ಟ ಉಂಟಾಗಿರುತ್ತದೆ. ಪ್ರವಾಹದಿಂದ ನೀರು ನುಗ್ಗಿರುವ ಮನೆಗಳ ಗೃಹಪಯೋಗಿ ವಸ್ತುಗಳು, ಬಟ್ಟೆ ಬರೆಗಳಿಗೆ ಹಾನಿ ಉಂಟಾಗಿರುತ್ತದೆ. ಅಲ್ಲದೇ ತೀವ್ರ ತರಹದ ಮಳೆಯಿಂದ ವಾಸ್ತವ್ಯದ ಮನೆ ಭಾಗಶಃ ಹಾಗು ಪೂರ್ಣ ಹಾನಿಯಾಗಿದ್ದು, ಪರಿಹಾರ ನೀಡುವುದು ತೀರಾ ಅತ್ಯವಶ್ಯಕತೆ ಇರುತ್ತದೆ.
ಕಾಪು : ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಬೆಟರ್ಮೆಂಟ್ ಕಮಿಟಿ ಸಭೆ
Posted On: 26-07-2023 06:18PM
ಕಾಪು : ಸರಕಾರಿ ಪದವಿ ಪೂರ್ವ ಕಾಲೇಜು, ಪಲಿಮಾರು ಇದರ ಕಾಲೇಜು ಬೆಟರ್ಮೆಂಟ್ ಕಮಿಟಿ ಸಭೆ ಜುಲೈ 26ರಂದು ಜರಗಿತು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರು, ಕಾಲೇಜು ಬೆಟರ್ಮೆಂಟ್ ಕಮಿಟಿ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ : ಕಾಲೇಜ್ ಟಾಯ್ಲೆಟ್ ನಲ್ಲಿ ವಿಡಿಯೋ ಪ್ರಕರಣ - ಆಡಳಿತ ಮಂಡಳಿ, ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲು
Posted On: 26-07-2023 03:26PM
ಉಡುಪಿ : ಇಲ್ಲಿನ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ತೆಗೆದು ವಾಟ್ಸಪ್ ಗುಂಪುಗಳಿಗೆ ಶೇರ್ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು : ಡಾ. ಎಂ.ಟಿ ರೇಜು
Posted On: 26-07-2023 03:08PM
ಉಡುಪಿ : ಜನ ಸಾಮಾನ್ಯರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಸೇರಿದಂತೆ ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಅನುಷ್ಠಾನಗೊಳಿಸಿ ಜನೋಪಯೋಗಿಯನ್ನಾಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು ಹೇಳಿದರು. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜುಲೈ 29 -30 : ಕಟಪಾಡಿಯಲ್ಲಿ ಹಲಸು ಮೇಳ
Posted On: 26-07-2023 02:22PM
ಕಟಪಾಡಿ : ಯುವ ಜನ ಸೇವಾ ಸಂಘ ಏಣಗುಡ್ಡೆ ಕಟಪಾಡಿ ಹಾಗೂ ತೋಟಗಾರಿಕೆ ಮತ್ತು ಕೃಷಿ ಇಲಾಖೆ ಉಡುಪಿ ಇದರ ಸಹಯೋಗ ದೊಂದಿಗೆ ಜುಲೈ 29 ಮತ್ತು 30 ರಂದು ಕಟಪಾಡಿಯ ಎಸ್.ವಿ.ಎಸ್ ಹೈಸ್ಕೂಲ್ ನಲ್ಲಿ ಪ್ರಥಮ ಬಾರಿಗೆ 2 ದಿನದ ಹಲಸು ಮೇಳವನ್ನು ಆಯೋಜಿಸಲಾಗಿದೆ.
