Updated News From Kaup

ಕಾಪು : ಫ್ರೆಂಡ್ಸ್ ಗ್ರೂಪ್ ಕಳತ್ತೂರು - 2 ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ

Thumbnail
Posted On: 09 Sep 2023, 11:20 AM

ಕಾಪು : ಫ್ರೆಂಡ್ಸ್ ಗ್ರೂಪ್ ಕಳತ್ತೂರು ಇವರ ವತಿಯಿಂದ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ 2 ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ ಕಳತ್ತೂರಿನ ಕುಲಶೇಖರ ಶೆಟ್ಟಿ ಅಡಿಟೋರಿಯಂನಲ್ಲಿ ಜರಗಿತು. ಅರುಣ್ ಶೆಟ್ಟಿ ಪಾದೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತೀರ್ಪುಗಾರರಾಗಿ ಅನಿತಾ ಉಪಾಧ್ಯಾಯ, ಪ್ರತಿಭಾ ಶೆಟ್ಟಿ, ದೇವಿಕಾ ಚೌಟ, ಗೌರವಾಧ್ಯಕ್ಷರಾದ ರಂಗನಾಥ ಶೆಟ್ಟಿ, ಫ್ರೆಂಡ್ಸ್ ಗ್ರೂಪಿನ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಚನಾ ನಿರೂಪಿಸಿದರು.

ಕಾಪು : ಇನ್ನಂಜೆ‌ಯಲ್ಲಿ ಮೊಸರು ಕುಡಿಕೆ ಕ್ರೀಡಾಕೂಟ -2023 ; ಮುದ್ದುಕೃಷ್ಣ ವೇಷ ಸ್ಪರ್ಧೆ

Thumbnail
Posted On: 07 Sep 2023, 11:22 AM

ಕಾಪು : ತಾಲೂಕಿನ ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ಇವರ ಆಶ್ರಯದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಇನ್ನಂಚೆ ಒಕ್ಕೂಟ, ಬಿಲ್ಲವ ಸೇವಾ ಸಂಘ ಇನ್ನಂಜೆ, ಜೇ.ಸಿ.ಐ ಶಂಕರಪುರ ಜಾಸ್ಮಿನ್, ರೋಟರಿ ಸಮುದಾಯ ದಳ ಇನ್ನಂಜೆ, ಇನ್ನಂಜೆ ಯುವತಿ ಮಂಡಲ (ರಿ.) ಇನ್ನಂಜೆ ಇವರ ಸಹಕಾರದೊಂದಿಗೆ ಶ್ರೀ ಕೃಷ್ಣ ಲೀಲೋತ್ಸವದ ಪ್ರಯುಕ್ತ ಇಂದು ಮೊಸರು ಕುಡಿಕೆ ಕ್ರೀಡಾಕೂಟ-2023, ಮುದ್ದುಕೃಷ್ಣ ವೇಷ ಸ್ಪರ್ಧೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಮುದ್ದು ಮುದ್ದಾದ ಕೃಷ್ಣ ಆಲ್ಬಮ್ ಸಾಂಗ್ ಅನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಇನ್ನಂಜೆ ಯುವಕ ಮಂಡಲ ಅಧ್ಯಕ್ಷರಾದ ದಿವೇಶ್, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ, ಇನ್ನಂಜೆ ಎಸ್.ವಿ.ಎಚ್ ಕಾಲೇಜು ಪ್ರಾಂಶುಪಾಲರಾದ ಪುಂಡರಿಕಾಕ್ಷ ಕೊಡಂಚ, ಇನ್ನಂಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಚಂದ್ರಕಲಾ, ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆಯ ನಿರ್ದೇಶಕರಾದ ಶಿವರಾಮ ಪ್ರಭು, ಇನ್ನಂಜೆ ಎಸ್.ವಿ.ಎಚ್ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಯು. ನಂದನ್ ಕುಮಾರ್, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನವೀನ್ ಅಮೀನ್ ಹಾಗೂ ಇನ್ನಂಜೆ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪಡುಬಿದ್ರಿ : ಗಾಂಜಾ ಸೇವನೆ - ವ್ಯಕ್ತಿಯೋರ್ವ ವಶಕ್ಕೆ

Thumbnail
Posted On: 07 Sep 2023, 11:12 AM

ಪಡುಬಿದ್ರಿ : ಇಲ್ಲಿನ ಠಾಣಾ ವ್ಯಾಪ್ತಿಯ ನಂದಿಕೂರು ಗ್ರಾಮದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಶೆಯಲ್ಲಿ ತೂರಾಡುತ್ತಿದ್ದ ವ್ಯಕ್ತಿಯೋರ್ವನನ್ನು‌ ಪಡುಬಿದ್ರಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ಠಾಣೆಯ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್ ರೌಂಡ್ಸ್ ನಲ್ಲಿರುವಾಗ ರಕ್ಷಿತ್ ಶೆಟ್ಟಿ(29) ಎಂಬಾತನು ಯಾವುದೋ ಅಮಲಿನಲ್ಲಿದ್ದವನಂತೆ ತೂರಾಡುತ್ತಿದ್ದು, ಅವನು ಯಾವುದೋ ಮಾದಕ ಪದಾರ್ಥ ಸೇವಿಸಿರುವ ಬಗ್ಗೆ ಅನುಮಾನಗೊಂಡು ಆತನನ್ನು ವಶಕ್ಕೆ ಪಡೆದುಕೊಂಡು ಮಣಿಪಾಲದ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರ ಎದುರು ಹಾಜರುಪಡಿಸಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು, ಮಾದಕ ವಸ್ತುವಾದ ಗಾಂಜಾ ಸೇವಿಸಿರುವ ಬಗ್ಗೆ ವೈದ್ಯರು ದೃಢಪತ್ರವನ್ನು ನೀಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪಡುಬಿದ್ರಿ : ಬಂಟರ ಸಂಘ - ನಿವೃತ್ತ ಶಿಕ್ಷಕರಿಗೆ ಸನ್ಮಾನ

Thumbnail
Posted On: 07 Sep 2023, 10:46 AM

ಪಡುಬಿದ್ರಿ : ಬಂಟರ ಸಂಘ (ರಿ.) ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ.) ಪಡುಬಿದ್ರಿ, ಬಂಟರ ಮಹಿಳಾ ವಿಭಾಗ ಪಡುಬಿದ್ರಿ ಇವರ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸಂಘದ ಮಾಜಿ ಕಾರ್ಯದರ್ಶಿ ಹಾಗೂ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ದಂಪತಿಗಳನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ, ನಿವೃತ್ತ ಶಿಕ್ಷಕ ನಾರಾಯಣಶೆಟ್ಟಿ ದಂಪತಿಗಳನ್ನು ಅವರ ಮನೆಗೆ ತೆರಳಿ ಗೌರವಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷರಾದ ಡಾ| ದೇವಿ ಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿಶೆಟ್ಟಿ ಗುಂಡ್ಲಾಡಿ, ಟ್ರಸ್ಟ್ ಅಧ್ಯಕ್ಷರಾದ ಶಶಿಧರ ಶೆಟ್ಟಿ ಎರ್ಮಾಳು, ಸಂಘದ ಉಪಾಧ್ಯಕ್ಷೆ ಅನಿತಾ ವಿಶು ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಎರ್ಮಾಳು, ಕಾರ್ಯದರ್ಶಿ ವಾಣಿ ರವಿ ಶೆಟ್ಟಿ, ಕೋಶಾಧಿಕಾರಿ ರಶ್ಮಿ ಸುಧಾಕರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಮಾಜಿ ಅಧ್ಯಕ್ಷೆ ಶೋಭಾ ಜೆ ಶೆಟ್ಟಿ, ಉಪಾಧ್ಯಕ್ಷೆ ಭಾರತಿ ಬಿ ಶೆಟ್ಟಿ, ಶಾಲಿನಿ ಶಶಿಧರ್ ಶೆಟ್ಟಿ, ಜಯ ಶೆಟ್ಟಿ ಪದ್ರ ಉಪಸ್ಥಿತರಿದ್ದರು.

ವಿಶ್ವಹಿಂದೂಪರಿಷತ್ ಭಜರಂಗದಳ ಮೂಡುಬೆಳ್ಳೆ ಘಟಕ : ಸ್ಥಾಪನಾ ದಿನಾಚರಣೆ ; ನಾಟಿ ವೈದ್ಯೆಗೆ ಸನ್ಮಾನ

Thumbnail
Posted On: 07 Sep 2023, 09:56 AM

ಕಾಪು : ವಿಶ್ವಹಿಂದೂಪರಿಷತ್ ಭಜರಂಗದಳ ಮೂಡುಬೆಳ್ಳೆ ಘಟಕದ ವತಿಯಿಂದ ವಿಶ್ವಹಿಂದೂಪರಿಷತ್ ಸ್ಥಾಪನಾ ದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ನಾಟಿ ವೈದ್ಯೆಯಾದ ಶ್ರೀಮತಿ ವಾರಿಜಾ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವಹಿಂದೂಪರಿಷತ್ ಜಿಲ್ಲಾಸೇವಾಪ್ರಮುಖ್ ವಿಖ್ಯಾತ ಭಟ್, ತಾಲೂಕು ಮಾತೃಶಕ್ತಿ ಪ್ರಮುಖ್ ವಾಣಿ ಆಚಾರ್ಯ, ಮೂಡುಬೆಳ್ಳೆ ಘಟಕ ಅಧ್ಯಕ್ಷರಾದ ಪ್ರಭಾಕರ ಆಚಾರ್ಯ, ಕಾರ್ಯದರ್ಶಿ ಅಭಿಷೇಕ್ ಆಚಾರ್ಯ, ಸಂಚಾಲಕ್ ಮಿಥುನ್ ಪೂಜಾರಿ, ಮಾತೃಶಕ್ತಿ ಪ್ರಮುಖ್ ಆಶಾ ಶೆಟ್ಟಿ, ದುರ್ಗಾವಾಹಿನಿ ಪ್ರಮುಖ್ ದೀಪಾ ಶೆಟ್ಟಿ , ಭಾಜಪದ ಪ್ರಮುಖರಾದ ರಾಜೇಂದ್ರಶೆಟ್ಟಿ, ಗುರುರಾಜಭಟ್, ರಾಮಚಂದ್ರಭಟ್, ಕೃಷ್ಣಆಚಾರ್ಯ, ಸಂತೋಷ್ ಕುಮಾರ್ ಮೂಡುಬೆಳ್ಳೆ, ಶ್ರೀಮತಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇಂದು : ಬೆಳ್ಳಿಬೆಟ್ಟು - 34ನೇ ವರ್ಷದ ಮೊಸರು ಕುಡಿಕೆ ಉತ್ಸವ

Thumbnail
Posted On: 07 Sep 2023, 09:50 AM

ಕಾಪು : ಇಲ್ಲಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಸಿರಿ ಕುಮಾರ ಭಜನಾ ಮಂಡಳಿ ಬೆಳ್ಳಿಬೆಟ್ಟು ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಅಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಇಂದು ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾಪು ಕ್ಷೇತ್ರ ಸಮಿತಿ ಟೈಲರ್ ಅಸೋಸಿಯೇಷನ್ ಅಧ್ಯಕ್ಷರಾಗಿ ರಮಾನಂದ ಮೂಲ್ಯ ಆಯ್ಕೆ

Thumbnail
Posted On: 07 Sep 2023, 09:46 AM

ಕಾಪು : ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ರಮಾನಂದ ಮೂಲ್ಯ ಆಯ್ಕೆಯಾಗಿರುತ್ತಾರೆ.

ಪಡುಬಿದ್ರಿ : ಕಂಚಿನಡ್ಕ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ - ಶ್ರೀ ಗುರು ರಾಘವೇಂದ್ರ ಫ್ರೆಂಡ್ಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ

Thumbnail
Posted On: 06 Sep 2023, 08:43 PM

ಪಡುಬಿದ್ರಿ : ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಹಾಗೂ ಶ್ರೀ ಗುರು ರಾಘವೇಂದ್ರ ಫ್ರೆಂಡ್ಸ್ ಕಂಚಿನಡ್ಕ ಇವರ ವತಿಯಿಂದ "ಶ್ರೀಕೃಷ್ಣ ಜನ್ಮಾಷ್ಟಮಿ" ಆಚರಣೆ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಪಡುಬಿದ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹೇಮಚಂದ್ರ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಎಸ್ ಶಾಫಿ, ಉದ್ಯಮಿಗಳಾದ ಮಿಥುನ್ ಹೆಗ್ಡೆ, ಗುರಿಕಾರರಾದ ಹರೀಶ್ ಕಂಚಿನಡ್ಕ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾಡಳಿತ ವತಿಯಿಂದ ಶ್ರೀಕೃಷ್ಣ ಜಯಂತಿ ಆಚರಣೆ

Thumbnail
Posted On: 06 Sep 2023, 07:02 PM

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ವಳಕಾಡು ಸರಕಾರಿ ಪೌಢಶಾಲೆ ಶಾಲೆಯಲ್ಲಿ ಬುಧವಾರ "ಶ್ರೀಕೃಷ್ಣ ಜಯಂತಿ - 2023" ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಂದ್ರ ಅಡಿಗ, ಉಡುಪಿ ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘ (ರಿ.) ವಾರಂಬಳ್ಳಿ ಅಧ್ಯಕ್ಷರಾದ ದಯಾನಂದ್ ಬಿ.ಆರ್, ಸ್ಥಳೀಯ ನಗರಸಭಾ ಸದಸ್ಯರಾದ ರಜನಿ ಹೆಬ್ಬಾರ್, ವಳಕಾಡು ಸರಕಾರಿ ಪೌಢಶಾಲಾ ಮುಖ್ಯೋಪಾಧ್ಯಾಯರಾದ ನಿರ್ಮಲಾ, ಸಾಹಿತಿಗಳಾದ ಕಾತ್ಯಾಯಿನಿ ಕುಂಜಿಬೆಟ್ಟು ಹಾಗೂ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಉಪಸ್ಥಿತರಿದ್ದರು.

ಕಾರ್ಕಳ : ಶಿಕ್ಷಕ ವೃತ್ತಿ ಪರಮ ಪವಿತ್ರವಾದದ್ದು, ಗುರುತ್ವದೆಡೆಗೆ ಕರೆದೊಯ್ಯುವುದೇ ವಿದ್ಯೆ - ಪ್ರೊ.ಬಿ.ಪದ್ಮನಾಭಗೌಡ

Thumbnail
Posted On: 06 Sep 2023, 06:16 PM

ಕಾರ್ಕಳ : ಶಿಕ್ಷಕ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ ಪ್ರಯುಕ್ತ ಆಚರಿಸಲಾದ 'ಗುರುದೇವೋ ಭವ' ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಇನ್ನೋರ್ವ ಅತಿಥಿ ಚೇತನಾ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಶೆಟ್ಟಿ ಮಾತನಾಡಿ ಗುರುಗಳೆಂದರೆ ಅಪಾರ ಗೌರವದಿಂದ ಕಾಣಬೇಕಾದ ವ್ಯಕ್ತಿ, ಅಂತಹ ವ್ಯಕ್ತಿತ್ವಕ್ಕೆ ಜಗತ್ತಿನಲ್ಲಿ ಅಪೂರ್ವ ಮನ್ನಣೆಯಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿಂದಿ ಉಪನ್ಯಾಸಕ ವಿನಾಯಕ ಜೋಗ್ ಹಾಗೂ ಜೀವಶಾಸ್ತ್ರ ಉಪನ್ಯಾಸಕ ಆದಂ ಶೇಕ್ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಸಂಸ್ಥೆಯ ಉಪನ್ಯಾಸಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸಂಸ್ಥೆಯ ಆದರ್ಶ ಮತ್ತು ಕನಸನ್ನು ಹಂಚಿಕೊಂಡರು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ.ಗಣನಾಥ ಶೆಟ್ಟಿ, ಅಮೃತ್ ರೈ, ಆದರ್ಶ ಎಂ.ಕೆ, ವಿಮಲ್ ರಾಜ್ ಜಿ, ಗಣಪತಿ ಭಟ್ ಕೆ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್.ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.