Updated News From Kaup
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆ - ಸ್ವಾತಂತ್ರ್ಯ ದಿನಾಚರಣೆ ; ಶಾಲಾ ಶೈಕ್ಷಣಿಕ ಪರಿಕರ ವಿತರಣೆ
Posted On: 15 Aug 2023, 01:43 PM
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶಾಲಾ ಶೈಕ್ಷಣಿಕ ಪರಿಕರ ವಿತರಣೆ ಕಾರ್ಯಕ್ರಮ ಜರಗಿತು. ಶಾಲಾ ಅಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಅದಾನಿ ಫೌಂಡೇಶನ್ ವತಿಯಿಂದ ಸಂಸ್ಥೆಯ ಮಕ್ಕಳಿಗಾಗಿ ಶಾಲಾ ಶೈಕ್ಷಣಿಕ ಪರಿಕರ ವಿತರಣೆ ನಡೆಯಿತು. ಈ ಸಂಧರ್ಭ ಸಂಸ್ಥೆಯ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ, ಕಾರ್ಯದರ್ಶಿಯಾದ ಗುರುರಾಜ್ ಆಚಾರ್ಯ, ಶೈಕ್ಷಣಿಕ ಸಲಹೆಗಾರರಾದ ದಿವಾಕರ್ ಆಚಾರ್ಯ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಸ್ವಾತಂತ್ರ್ಯೋತ್ಸವದ ನಿಮಿತ್ತ ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆ ಗಾಯನ, ಭಾಷಣ ಜರಗಿತು. ಪ್ರಾಂಶುಪಾಲೆ ಸಂಗೀತಾ ಸ್ವಾಗತಿಸಿದರು. ಶಿಕ್ಷಕಿ ಅನಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಶಾರೋನ್ ವಂದಿಸಿದರು.
ಶಿರ್ವ ರೋಟರಿ ಕ್ಲಬ್ : ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2023, 01:27 PM
ಶಿರ್ವ : ಇಲ್ಲಿನ ರೋಟರಿ ಕ್ಲಬ್ ವತಿಯಿಂದ ರೋಟರಿ ಸಭಾಭವನದಲ್ಲಿ 77 ನೆಯ ಸ್ವಾತಂತ್ರ್ಯ ದಿನಾಚರಣೆಯು ಜರಗಿತು. ಕ್ಲಬ್ಬಿನ ಅಧ್ಯಕ್ಷರಾದ ಫಾರೂಕ್ ಚಂದ್ರನಗರ ಧ್ವಜಾರೋಹಣಗೈದರು. ಈ ಸಂದರ್ಭ ಶಿರ್ವ ರೋಟರಿಯ ಮಾಜಿ ಅಧ್ಯಕ್ಷ, ಮಾಜಿ ಸಹಾಯಕ ಗವರ್ನರ್, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೆ.ಆರ್.ಪಾಟ್ಕರ್, ನಿವೃತ್ತ ಸೇನಾನಿ ಹೆರಾಲ್ಡ್ ಕುಟಿನ್ಹ, ಶಿರ್ವ ರೋಟರಾಕ್ಟ್ ಅಧ್ಯಕ್ಷ ಗೊಡ್ವಿನ್ ಮೋನಿಸ್, ಮಾಜಿ ಸಹಾಯಕ ಗವರ್ನರ್ ಪುಂಡಲೀಕ ಮರಾಠೆ, ಮಾಜಿ ಅಧ್ಯಕ್ಷ, ಮಾಜಿ ಸಹಾಯಕ ಗವರ್ನರ್ ಡಾ.ಅರುಣ್ ಹೆಗ್ಡೆ, ನಿಕಟಪೂರ್ವ ಅಧ್ಯಕ್ಷ ಡಾ.ವಿಠಲ್ ನಾಯಕ್, ಮಾಜಿ ಅಧ್ಯಕ್ಷ, ರಘುಪತಿ ಐತಾಳ್, ಮಾಜಿ ಅಧ್ಯಕ್ಷ ಲೂಕಸ್ ಡಿಸೋಜ, ನಿಕಟಪೂರ್ವ ಕಾರ್ಯದರ್ಶಿ ದಿನೇಶ್ ಕುಲಾಲ್, ಜೊತೆ ಕಾರ್ಯದರ್ಶಿ ವಿಲಿಯಂ ಮಚಾದೊ, ನಿಯೋಜಿತ ಅಧ್ಯಕ್ಷ ಆಲ್ವಿನ್ ಅಮಿತ್ ಅರನ್ನ, ಶಶಿಕಲಾ ಕುಲಾಲ್, ಜಾಕ್ಸನ್ ಕಬ್ರಾಲ್, ಉಷಾ ಮರಾಠೆ ಉಪಸ್ಥಿತರಿದ್ದರು.
ಬಂಟಕಲ್ಲು : ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಿ ಸಿ ರೋಡ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ.
Posted On: 15 Aug 2023, 01:13 PM
ಬಂಟಕಲ್ಲು : ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಿ ಸಿ ರೋಡ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಜರಗಿತು. ಧ್ವಜಾರೋಹಣವನ್ನು ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಿಸಿ ರೋಡ್ ಇದರ ಗೌರವಾಧ್ಯಕ್ಷರಾದ ಕೆ ಆರ್ ಪಾಟ್ಕರ್ ನೆರವೇರಿಸಿದರು. ಧ್ವಜಸ್ತಂಭದ ದಾನಿಗಳಾದ ಶೈಲಾ ಮತಯಸ್, ಸಂಘದ ಅಧ್ಯಕ್ಷ ರಾದ ಫಿಲಿಪ್ ಸಲ್ದನ ಉಪಸ್ಥಿತರಿದ್ದರು. ಡೆನಿಸ್ ಡಿಸೋಜಾ ಸ್ವಾಗತಿಸಿದರು. ಸುಂದರ. ಬಂಗೇರ ವಂದಿಸಿದರು.
ಬಂಟಕಲ್ಲು : ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಿ ಸಿ ರೋಡ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ.
Posted On: 15 Aug 2023, 01:13 PM
ಬಂಟಕಲ್ಲು : ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಿ ಸಿ ರೋಡ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಜರಗಿತು. ಧ್ವಜಾರೋಹಣವನ್ನು ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಿಸಿ ರೋಡ್ ಇದರ ಗೌರವಾಧ್ಯಕ್ಷರಾದ ಕೆ ಆರ್ ಪಾಟ್ಕರ್ ನೆರವೇರಿಸಿದರು. ಧ್ವಜಸ್ತಂಭದ ದಾನಿಗಳಾದ ಶೈಲಾ ಮತಯಸ್, ಸಂಘದ ಅಧ್ಯಕ್ಷ ರಾದ ಫಿಲಿಪ್ ಸಲ್ದನ ಉಪಸ್ಥಿತರಿದ್ದರು. ಡೆನಿಸ್ ಡಿಸೋಜಾ ಸ್ವಾಗತಿಸಿದರು. ಸುಂದರ. ಬಂಗೇರ ವಂದಿಸಿದರು.
ಬಂಟಕಲ್ಲು : ಫೆಲಿಕ್ಸ್ ಮಾರ್ಟಿಸ್ ಸ್ಮರಣಾರ್ಥ ರಿಕ್ಷಾ ನಿಲ್ದಾಣಕ್ಕೆ ಸೋಲಾರ್ ದೀಪದ ಕೊಡುಗೆ
Posted On: 15 Aug 2023, 12:15 PM
ಬಂಟಕಲ್ಲು : ಇಲ್ಲಿನ ಆಟೋ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಇದರ ರಿಕ್ಷಾ ನಿಲ್ದಾಣಕ್ಕೆ ಸುಮಾರು ರೂ. 25 ಸಾವಿರ ವೆಚ್ಚದಲ್ಲಿ ಫೆಲಿಕ್ಸ್ ಮಾರ್ಟಿಸ್ ಸ್ಮರಣಾರ್ಥ ತೆರೆಜಾ ಮಾರ್ಟಿಸ್ ಹಾಗೂ ಮಕ್ಕಳಿಂದ ಕೊಡುಗೆಯಾಗಿ ನೀಡಿದ ಸೋಲಾರ್ ದೀಪವನ್ನು ಜಯಪ್ರಕಾಶ್ ಮಾರ್ಟಿಸ್ ಉದ್ಘಾಟಿಸಿದರು. ಆಟೋರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಂಟಕಲ್ಲು ಅಧ್ಯಕ್ಷ ಮಂಜುನಾಥ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಆಟೋ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಂಟಕಲ್ಲು ಗೌರವಾಧ್ಯಕ್ಷ ಮಾಧವ ಕಾಮತ, ಉಪಾಧಕಾಮತ್, ಉಪಾಧ್ಯಕ್ಷರಾದ ಸತೀಶ್, ಕೋಶಾಧಿಕಾರಿ ಸುಧಾಕರ್, ಸದಸ್ಯರು ಹಾಜರಿದ್ದರು. ಡೆನಿಸ್ ಡಿಸೋಜಾ ಸ್ವಾಗತಿಸಿದರು. ಗೋಪಾಲ್ ದೇವಾಡಿಗ ವಂದಿಸಿದರು.
ಶಿರ್ವ : ಸಂತ ಮೇರಿ ಮಹಾವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2023, 11:59 AM
ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಇಂದು 77ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಧ್ವಜಾರೋಹಣವನ್ನು ನೆರವೇರಿಸಿ, ಇತಿಹಾಸದಲ್ಲಿ ಕೋಟ್ಯಾಂತರ ಭಾರತೀಯರ ತ್ಯಾಗ-ಬಲಿದಾನ- ಹೋರಾಟದ ಫಲವೇ ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ. ನಮ್ಮ ಯೋಧರ ತ್ಯಾಗಗಳನ್ನು ಸ್ಮರಿಸೋಣ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ನೆನೆಯೋಣ. ನವ ಸಮಾಜ ನಿರ್ಮಾಣ ಜೊತೆಗೆ ದೇಶಾಭಿವೃದ್ಧಿಗಾಗಿ ಇಂದು ಯುವಕರು ಸರಿಯಾದ ಮಾರ್ಗದರ್ಶನವನ್ನು ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಕಠಿಣ ಪರಿಶ್ರಮ ನೀಡಿ ದೇಶ ಪ್ರಗತಿಗೆ ಕೈಜೋಡಿಸಬೇಕು ಎಂದು ಮಾತನಾಡಿದರು. ಕ್ಯಾಡೆಟ್ ಸೀನಿಯರ್ ಅಂಡರ್ ಆಫೀಸರ್ ಶೆಟ್ಟಿಗಾರ್ ಹೇಮಾಶ್ರೀ ಸುದರ್ಶನ್, ಜೂನಿಯರ್ ಅಂಡರ್ ಆಫೀಸರ್ ಅನೀಶ್ ಭಟ್ , ಪೂಜಾ, ಕ್ವಾರ್ಟರ್ ಮಾಸ್ಟರ್ ಅನುಪ್ ನಾಯಕ ಪರೇಡ್ ನ ನೆರವೇರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ರೇಂಜರ್ಸ್ ಸ್ಕೌಟ್ ಲೀಡರ್ ಸಂಗೀತ ಪೂಜಾರಿ, ಎನ್.ಸಿ.ಸಿ, ಎನ್ ಎಸ್ ಎಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ಭೋಧಕ ಹಾಗು ಭೋಧಕೇತರ ವೃಂದದವರು ಉಪಸ್ಥಿತರಿದ್ದರು. ಕ್ಯಾಡೆಟ್ಗಳಾದ ವಿಶಾಲ್ ಟೆರೆನ್ಸ್ ವಾಜ್ ಹಾಗೂ ಆಲಿಸ್ಟರ್ ಸುಜಾಯ್ ಡಿಸೋಜ ಸಹಕರಿಸಿದರು. ರೋವರ್ಸ್ ಸ್ಕೌಟ್ ಲೀಡರ್ ಪ್ರಕಾಶ್ ಸ್ವಾಗತಿಸಿ, ಎನ್ಎಸ್ಎಸ್ ಯೋಜನಾಧಿಕಾರಿ ಪ್ರೇಮನಾಥ್ ವಂದಿಸಿದರು. ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ಕುಮಾರ್ ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿ-ಸಂಯೋಜಿಸಿದರು.
ಕಾಪು ತಾಲೂಕು ಮಟ್ಟದ 77 ನೇ ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2023, 11:53 AM
ಕಾಪು : ತಾಲೂಕು ಮಟ್ಟದ 77 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರಗಿತು. ಕಾಪು ತಹಶೀಲ್ದಾರರಾದ ನಾಗರಾಜ್ ವಿ ನಾಯ್ಕಡ ಅವರು ಧ್ವಜಾರೋಹಣ ನೆರವೇರಿಸಿದರು. ಸನ್ಮಾನ : ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಕುಮಾರ್ ಹೆಚ್.ಡಿ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ಸಂತೋಷ್, ಕಾಪು ವೃತ್ತ ನಿರೀಕ್ಷಕರಾದ ಪೂವಯ್ಯ ಹಾಗೂ ಕಾಪು ಪುರಸಭೆಯ ಸದಸ್ಯರು ಮತ್ತು ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬಂಟಕಲ್ಲು : ಆಟೋ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ - ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2023, 09:55 AM
ಬಂಟಕಲ್ಲು : ಆಟೋ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ (ರಿ.) ಬಂಟಕಲ್ಲು ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಜರಗಿತು. ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತನ್ ಕುಮಾರ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಆಟೋ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ (ರಿ.) ಬಂಟಕಲ್ಲು ಗೌರವಾಧ್ಯಕ್ಷ ಮಾಧವ ಕಾಮತ್, ನಾಗರಿಕ ಸೇವಾ ಸಮಿತಿ (ರಿ.) ಬಂಟಕಲ್ಲು ಅಧ್ಯಕ್ಷ ಕೆ ಆರ್ ಪಾಟ್ಕರ್, ಕಾರು ಚಾಲಕರ ಹಾಗೂ ಮಾಲಕರ ಸಂಘ ಬಂಟಕಲ್ಲು ಅಧ್ಯಕ್ಷ ಉಮೇಶ್ ರಾವ್, ನಿವೃತ್ತ ಶಿಕ್ಷಕರಾದ ಪುಂಡಲೀಕ ಮರಾಠೆ, ಆಟೋರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ (ರಿ.) ಬಂಟಕಲ್ಲು ಅಧ್ಯಕ್ಷ ಮಂಜುನಾಥ್ ಪೂಜಾರಿ ಉಪಸ್ಥಿತರಿದ್ದರು. ಗೋಪಾಲ್ ದೇವಾಡಿಗ ಸ್ವಾಗತಿಸಿದರು. ಡೆನಿಸ್ ಡಿಸೋಜ ವಂದಿಸಿದರು.
ಮಣಿಪಾಲದ ಕೆಲವೆಡೆ ತಡರಾತ್ರಿವರೆಗೆ ತೆರೆದಿರುವ ಹೋಟೆಲ್ ಗಳಲ್ಲಿ ಅನೈತಿಕ ಚಟುವಟಿಕೆ ; ಸೂಕ್ತ ಕ್ರಮಕ್ಕೆ ದಿನೇಶ್ ಮೆಂಡನ್ ಆಗ್ರಹ
Posted On: 14 Aug 2023, 10:59 PM
ಉಡುಪಿ : ಶೈಕ್ಷಣಿಕ ಕ್ಷೇತ್ರ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ರಾತ್ರಿ ಇಡೀ ಕಾರ್ಯಾಚರಿಸುತ್ತಿದ್ದ ಬಾರ್ ಮತ್ತು ಪಬ್ ಗಳ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಂಡಿರುವುದು ಶ್ಲಾಘನೀಯ. ಅದೇ ರೀತಿ ಮಣಿಪಾಲದ ಕೆಲವು ಕಡೆ ಹೋಟೆಲ್ ವ್ಯಾಪಾರದ ನೆಪದಲ್ಲಿ ತಡರಾತ್ರಿವರೆಗೂ ವ್ಯಾಪಾರ ಮಾಡಿಕೊಂಡು ಅಲ್ಲಿ ಅನೈತಿಕ ಚಟುವಟಿಕೆಗಳ ಕೇಂದ್ರವಾಗಿದ್ದು ಇದರ ವಿರುದ್ಧವೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆಗ್ರಹಿಸಿದ್ದಾರೆ.
ಪಡುಬಿದ್ರಿ : ಶ್ರೀ ಮಹಾಗಣಪತಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ನೂತನ ಕಚೇರಿ ಉದ್ಘಾಟನೆ
Posted On: 14 Aug 2023, 09:31 PM
ಪಡುಬಿದ್ರಿ : ಶ್ರೀ ಮಹಾಗಣಪತಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಪಡುಬಿದ್ರಿ ಇದರ ನೂತನ ಕಟ್ಟಡದ ಉದ್ಘಾಟನೆಯನ್ನು ಸೋಮವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷರಾದ ಯಶೋದಾ, ಕಾಪು ತಾಲೂಕು ಸಂಜೀವಿನಿ ವಲಯ ಮೇಲ್ವಿಚಾರಕರಾದ ಸುಜಾತ, ಪಡುಬಿದ್ರಿ ಶ್ರೀ ಮಹಾಗಣಪತಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟದ ಅಧ್ಯಕ್ಷರಾದ ಸುಮತಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪಂಚಾಕ್ಷರಿ ಹಿರೇಮಟ್, ಕಾರ್ಯದರ್ಶಿಗಳಾದ ರೂಪಲತಾ ಉಪಸ್ಥಿತರಿದ್ದರು.
