Updated News From Kaup
ಉಡುಪಿ : ಮಹತ್ಮಾ ಗಾಂಧಿ ಅಂತರಾಷ್ಟ್ರೀಯ ಪುರಸ್ಕಾರಕ್ಕೆ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆ
Posted On: 19-07-2023 05:59PM
ಉಡುಪಿ :- ಡಬ್ಲ್ಯು.ಎ.ಸಿ ಬುಕ್ ಆಫ್ ರೆಕಾಡ್೯ ಸಂಸ್ಥೆಯ ಮೂಲಕ ನೀಡಲಾಗುವ ಮಹತ್ಮಾ ಗಾಂಧಿ ಅಂತರಾಷ್ಟ್ರೀಯ ಪುರಸ್ಕಾರ ಕ್ಕೆ ರಾಘವೇಂದ್ರ ಪ್ರಭು, ಕವಾ೯ಲುರವರು ಆಯ್ಕೆಯಾಗಿದ್ದಾರೆ.
ಕಾಪು : ಎಲ್ಲೂರಿನ ಶ್ರೀ ಪಾಂಡುರಂಗ ಭಜನಾ ಮಂಡಳಿಯಲ್ಲಿ ವಾರ್ಷಿಕ ಭಜನಾ ಮಂಗಳೋತ್ಸವ
Posted On: 19-07-2023 05:52PM
ಕಾಪು : ಎಲ್ಲೂರು ಗ್ರಾಮದ ಶ್ರೀ ಪಾಂಡುರಂಗ ಭಜನಾ ಮಂಡಳಿಯಲ್ಲಿ ವಾರ್ಷಿಕ ಭಜನಾ ಮಂಗಳೋತ್ಸವ ವಿಜೃಂಭಣೆಯಿಂದ ನೆರವೇರಿತು.
ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತಾಂತ್ರಿಕ ಶಿಕ್ಷಣದ ಜೊತೆಗೆ ಇನ್ನೆರಡು ಶೈಕ್ಷಣಿಕ ಸಂಸ್ಥೆಗಳ ಕಾರ್ಯಾರಂಭ
Posted On: 19-07-2023 05:32PM
ಬಂಟಕಲ್ಲು : ಉಡುಪಿಯ ಶ್ರೀ ಸೋದೆ ವಾದಿರಾಜ ಮಠದ ಆಶ್ರಯದಲ್ಲಿ ಬಂಟಕಲ್ನಲ್ಲಿ ಸ್ಥಾಪಿತವಾದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಅತೀ ಅಗತ್ಯವಾದ NAAC ನಿಂದ “ಎ” ಶ್ರೇಣಿಯ ಮಾನ್ಯತೆ ಹಾಗು ರಾಷ್ಟ್ರೀಯ ಮೌಲ್ಯಾಂಕನ ಮಂಡಳಿ (NBA)ಯಿಂದ ಮಾನ್ಯತೆ ಕೂಡಾ ದೊರೆತಿದೆ. ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಖಾತ್ರಿಪಡಿಸುವ ಈ ಎರಡು ಮಾನ್ಯತೆ ಗಳನ್ನು ವಿದ್ಯಾಸಂಸ್ಥೆಯು ಪ್ರಾರಂಭವಾದ 9 ಮತ್ತು 11ನೇ ವರ್ಷಗಳಲ್ಲಿ ಪಡೆದಿರುವ ಕರಾವಳಿ ಕರ್ನಾಟಕದ ಪ್ರಪ್ರಥಮ ತಾಂತ್ರಿಕ ಶಿಕ್ಷಣ ಸಂಸ್ಥೆ ಎನ್ನುವ ಹೆಗ್ಗಳಿಕೆ ಈ ವಿದ್ಯಾ ಸಂಸ್ಥೆಗೆ ಸಿಕ್ಕಿರುವುದು ಹೆಮ್ಮೆಯ ವಿಷಯ.
ಕಾಪು : ಕುತ್ಯಾರಿನ ಗ್ರಾಮ one ಸೇವಾ ಕೇಂದ್ರದಲ್ಲಿ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಅವಕಾಶ
Posted On: 19-07-2023 02:18PM
ಕಾಪು : ಕುತ್ಯಾರು, ಕಳತ್ತೂರು ಗ್ರಾಮದ ಜನತೆಗೆ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಶ್ರೀ ಸಾಯಿ ಕಂಪ್ಯೂಟರ್ ಗ್ರಾಮ one ಸೇವಾ ಕೇಂದ್ರದ ಕುತ್ಯಾರಿನ ಕಚೇರಿಯಲ್ಲಿ ಲಭ್ಯವಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿರುವುದಿಲ್ಲ.
ಜುಲೈ 22 : ದೊಂದಿ ಬೆಳಕಿನ ಕೊರಗಜ್ಜ ದೈವದ ನೇಮೋತ್ಸವ
Posted On: 17-07-2023 07:34PM
ಉಡುಪಿ : ಇಲ್ಲಿನ ವುಡ್ಲ್ಯಾಂಡ್ಸ್ ಹೋಟೆಲ್ ಹತ್ತಿರದ ಬೊಬ್ಬರ್ಯಕಟ್ಟೆ ಶ್ರೀ ಬೊಬ್ಬರ್ಯ, ಕಾಂತೇರಿ ಜುಮಾದಿ ಹಾಗೂ ಕಲ್ಕುಡ, ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ಬೊಬ್ಬರ್ಯ ಯುವ ಸೇವಾ ಸಮಿತಿ ಉಡುಪಿ ಸುಪ್ರಸಾದ್ ಶೆಟ್ಟಿ ಅಭಿಮಾನಿ ಬಳಗ ಉಡುಪಿ ಹಾಗೂ ಮಮತಾ ಪಿ. ಶೆಟ್ಟಿ ಅಭಿಮಾನಿ ಬಳಗ ಉಡುಪಿ ಇವರ ವತಿಯಿಂದ ದೊಂದಿ ಬೆಳಕಿನ ಕೊರಗಜ್ಜ ದೈವದ ನೇಮೋತ್ಸವ ಜುಲೈ 22, ಶನಿವಾರ ಸಂಜೆ 7 ಗಂಟೆಗೆ ಜರಗಲಿದೆ.
ಪಡುಬಿದ್ರಿ : ಟಿಪ್ಪರ್ನ ಹಿಂಬದಿಗೆ ಸಿಲುಕಿದ ಕಾರು ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ; ಪ್ರಕರಣ ದಾಖಲು
Posted On: 17-07-2023 07:05PM
ಪಡುಬಿದ್ರಿ : ಟಿಪ್ಪರ್ನ ಹಿಂಬದಿಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಕಿಲೋಮೀಟರ್ ದೂರ ಟಿಪ್ಪರ್ ಎಳೆದೊಯ್ಯುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಯುವ ಜನತೆ ಉನ್ನತ ಸಾಧನೆಯ ಗುರಿ ಇಟ್ಟುಕೊಳ್ಳಬೇಕು : ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ.
Posted On: 17-07-2023 06:33PM
ಉಡುಪಿ : ಯುವ ಜನತೆ ತಮ್ಮ ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡಲು ಸ್ಪಷ್ಟ ಗುರಿ ಇಟ್ಟುಕೊಂಡು, ಆ ಗುರಿ ತಲುಪಲು ನಿರಂತರವಾಗಿ ಪರಿಶ್ರಮ ಪಡಬೇಕು ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನಡೆದ ಆಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.
ಮೀನುಗಾರರಿಗೆ ಸಾಮೂಹಿಕ ಅಪಘಾತ ವಿಮಾ ಯೋಜನೆ
Posted On: 17-07-2023 06:25PM
ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಸದಸ್ಯತ್ವ ಹೊಂದಿರುವ 18 ರಿಂದ 60 ವರ್ಷದೊಳಗಿನ ಮೀನುಗಾರರು, ಮೀನುಗಾರಿಕೆಯಲ್ಲಿ ಹಾಗೂ ಮೀನುಗಾರಿಕೆಗೆ ಪೂರಕವಾದ ಇತರೇ ಚಟುವಟಿಕೆಗಳಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಅಥವಾ ಆಕಸ್ಮಿಕವಾಗಿ ಸಂಭವಿಸುವ ಅವಘಡಗಳಿಂದ ಜೀವ ಹಾನಿಯಾದಲ್ಲಿ ಅಂತಹ ಕುಟುಂಬದವರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರದ ಸಾಮೂಹಿಕ ಅಪಘಾತ ವಿಮಾ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.
ಪಡುಬಿದ್ರಿ : ಆಟಿ ಅಮಾವಾಸ್ಯೆಯ ಕಷಾಯ ವಿತರಣೆ
Posted On: 17-07-2023 05:44PM
ಪಡುಬಿದ್ರಿ : ಇಲ್ಲಿನ ಸಾಯಿ ಆರ್ಕೇಡ್ ನಲ್ಲಿ ಸಾರ್ವಜನಿಕರಿಗೆ ಆಟಿ ಅಮಾವಾಸ್ಯೆಯ ಕಷಾಯ ವಿತರಿಸಲಾಯಿತು.
ಪಲಿಮಾರು : ಹೊೖಗೆ ಫ್ರೆಂಡ್ಸ್ ವತಿಯಿಂದ ನಾಲ್ಕನೇ ವರುಷದ ಆಟಿ ಅಮಾವಾಸ್ಯೆಯ ಔಷಧೀಯ ಕಷಾಯ ವಿತರಣೆ
Posted On: 17-07-2023 05:30PM
ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಸಂಸ್ಥೆಯ ವತಿಯಿಂದ ಸತತ ನಾಲ್ಕನೇ ವರುಷದ ಆಟಿ ಅಮಾವಾಸ್ಯೆಯ ಔಷಧೀಯ ಕಷಾಯ ವಿತರಿಸಲಾಯಿತು.
