Updated News From Kaup
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರಕ್ಕೆ 15 ಲಕ್ಷ ರೂ ದೇಣಿಗೆ
Posted On: 08 Aug 2023, 10:23 PM
ಕಾಪು : ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಗಲಕೋಟೆಯ ಇಳ್ಕಲ್ ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 15 ಲಕ್ಷ ರೂಪಾಯಿ ದೇಣಿಗೆಯನ್ನು ಹಸ್ತಾಂತರಿಸಲಾಯಿತು. ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ ವಾಸುದೇವ ಶೆಟ್ಟಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕರಾದ ಡಿ ಶಿವಾನಂದ ಪ್ರಭುರವರಿಗೆ ನಡೆಯುತ್ತಿರುವ ಕಾಮಗಾರಿಯ ಬಗ್ಗೆ ಮತ್ತು ಸಮಗ್ರ ಜೀರ್ಣೋದ್ಧಾರದ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳಾದ ಗಂಗಾಧರ ಸುವರ್ಣ, ದೇವಿಪ್ರಸಾದ್ ಶೆಟ್ಟಿ ಬೆಳಪು, ಮಾಧವ ಆರ್. ಪಾಲನ್, ಮನೋಹರ ಶೆಟ್ಟಿ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಗ್ರಾಮ ಸಮಿತಿಯ ಪ್ರಧಾನ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಚಂದ್ರಶೇಖರ್ ಅಮೀನ್, ರವೀಂದ್ರ ಎಂ, ಬಾಬು ಮಲ್ಲಾರ್, ಕಾಪು ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕಿನ ಯೋಜನಾಧಿಕಾರಿ ಜಯಂತಿ, ಕಾಪು ವಲಯದ ಮೇಲ್ವಿಚಾರಕರಾದ ಸರಿತಾ, ಸಿದ್ದಿದಾತ್ರಿ ತಂಡದ ಸಂಚಾಲಕರಾದ ಜಗದೀಶ್ ಮೆಂಡನ್ ಮತ್ತು ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಉಪಸ್ಥಿತರಿದ್ದರು.
ಕಾರ್ಕಳ : ಸಿ ಎ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
Posted On: 08 Aug 2023, 05:05 PM
ಕಾರ್ಕಳ : ಇನ್ಸ್ಟಿಟ್ಯೂಟ್ ಆಫ್ ಚಾರ್ಟೆರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದೀಪ್ ಕೆ, ಸುಮಾ, ಸುಚಿತಾ ಬಿ ಸಿ, ಅನಘಾ, ಬಿ ಸಿದ್ದಾರ್ಥ್ ಪೈ, ಹೆಗ್ಡೆ ಅನಿರುದ್ಧ್ ರಮೇಶ್, ಅಭಿಷೇಕ್ ಪಿ ಎಸ್, ವಿಂದ್ಯಾ ವಿನಯ್ ಹೆಗಡೆ, ಎಸ್ ಅನುರಾಜ್ ಇವರು ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಿ ಎ ಇಂಟರ್ ಮೀಡಿಯೆಟ್ ಗೆ ಅರ್ಹತೆ ಗಳಿಸಿದ್ದಾರೆ. ಸುದೀಪ್ ಕೆ 261 ಅಂಕ, ಸುಮಾ 250 ಅಂಕ, ಸುಚಿತಾ ಬಿ ಸಿ 223 ಅಂಕ, ಅನಘಾ 219 ಅಂಕ, ಬಿ ಸಿದ್ದಾರ್ಥ್ ಪೈ 214 ಅಂಕ, ಹೆಗ್ಡೆ ಅನಿರುದ್ಧ್ ರಮೇಶ್ 210 ಅಂಕ, ಅಭಿಷೇಕ್ ಪಿ ಎಸ್ 209 ಅಂಕ, ವಿಂದ್ಯಾ ವಿನಯ್ ಹೆಗಡೆ 203 ಅಂಕ, , ಎಸ್ ಅನುರಾಜ್ 200 ಅಂಕವನ್ನು ಗಳಿಸುವ ಮೂಲಕ ಅಮೋಘ ಸಾಧನೆಗೈದಿದ್ದಾರೆ. ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಥಮ ಪಿಯುಸಿಯಿಂದಲೇ ವಿಶೇಷ ತರಬೇತಿಯನ್ನೂ ಅತ್ಯಂತ ಕಡಿಮೆ ಶುಲ್ಕದೊಂದಿಗೆ ನುರಿತ ಉಪನ್ಯಾಸಕರಿಂದ ನೀಡಲಾಗುತ್ತಿದೆ. ಸಂಸ್ಥೆಯ ಹೆಮ್ಮೆಯ ಸಾಧಕ ವಿದ್ಯಾರ್ಥಿಗಳನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ವಾಣಿಜ್ಯ ವಿಭಾಗದ ಎಲ್ಲ ಉಪನ್ಯಾಸಕರು, ಸಂಯೋಜಕರು ಅಭಿನಂದಿಸಿದ್ದಾರೆ.
ಉಚ್ಚಿಲ : ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಕೂಟ
Posted On: 08 Aug 2023, 04:56 PM
ಉಚ್ಚಿಲ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಉಡುಪಿ ಮತ್ತು ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಮಂಗಳವಾರ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಕೂಟ ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಜರಗಿತು. ಕ್ರೀಡಾಕೂಟವನ್ನು ಕಾಪು ಪುರಸಭಾ ಸದಸ್ಯ ಕಿರಣ್ ಆಳ್ವ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋತರೂ, ಗೆದ್ದರೂ ಅದನ್ನು ಸವಾಲಾಗಿ ಸ್ವೀಕರಿಸಿಬೇಕು. ಗೆದ್ದವರು ಹಿಗ್ಗದೆ, ಸೋತವರು ಕುಗ್ಗದೆ, ಎಲ್ಲರೂ ಕ್ರೀಡಾ ಮನೋಭಾವರಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕೆಂದರು. ವೇದಿಕೆಯಲ್ಲಿ ಮಹಾಲಕ್ಷ್ಮಿ ಶಾಲಾ ಸಂಚಾಲಕ ಗಂಗಾಧರ್ ಕರ್ಕೆರ ಹೊಸ ಬೆಟ್ಟು, ದಕ್ಷಿಣ ಕನ್ನಡ ಮೊಗವೀರ ಹಿತ ಸಾಧನಾ ವೇದಿಕೆಯ ಅಧ್ಯಕ್ಷ ಸರ್ವೋತ್ತಮ್ ಕುಂದರ್, ಯುವ ಜನ ಕ್ರೀಡಾಧಿಕಾರಿ ರೀತೇಶ್ ಶೆಟ್ಟಿ ಸೂಡ, ಬಡಾ ಗ್ರಾಮ ಪಂಚಾಯತ್ ಸದಸ್ಯೆ ವೆರೋನಿಕ ಬರ್ಬೋಜಾ, ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷೆ ಪೂರ್ಣಿಮಾ ಕರ್ಕೇರಾ, ಮೊಗವೀರ ಹಿತ ಸಾಧನ ವೇದಿಕೆಯ ಕಾರ್ಯದರ್ಶಿ ಸುಧಾಕರ್ ಕರ್ಕೇರ, ಕೋಶಾಧಿಕಾರಿ ವೇದವ್ಯಾಸ ಬಂಗೇರ, ಮಾಜಿ ಸಂಚಾಲಕ ಎನ್ ಡಿ ಬಂಗೇರ, ಸುಜಿತ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯನಿ ಶಾಂತ ಶೆಟ್ಟಿಗಾರ್, ಶಾಲಾ ಮುಖ್ಯೋಪಾಧ್ಯಾಯ ಜೋಸೆಫ್ ಪೀಟರ್ ನಜ್ರೆತ್ ಮತ್ತಿತರರು ಉಪಸ್ಥಿತರಿದ್ದರು.
ಕಾಪು : ಆಗಸ್ಟ್ 27 ರಂದು ಪೊಲಿಪುವಿನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
Posted On: 07 Aug 2023, 10:53 PM
ಕಾಪು : ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಪೊಲಿಪು, ಮುಂಬೈ, ಗುರ್ಮೆ ಫೌಂಡೇಶನ್, ಗುರ್ಮೆ ಕಳತ್ತೂರು ಇವರ ಆಶ್ರಯದಲ್ಲಿ, ಪೊಲಿಪು ಮೊಗವೀರ ಮಹಾಸಭೆ, ಪೊಲಿಪು, ಮುಂಬೈ, ಪೊಲಿಪು ಹಳೆ ವಿದ್ಯಾರ್ಥಿ ಸಂಘ, ಪೊಲಿಪು, ಮುಂಬೈ, ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಪೊಲಿಪು ಇವರ ಸಹಭಾಗಿತ್ವದೊಂದಿಗೆ ಶ್ರೀನಿವಾಸ ವೈದ್ಯಕೀಯ ಕಾಲೇಜು, ಮುಕ್ಕ, ಸುರತ್ಕಲ್, ಮಂಗಳೂರು ಇವರ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಗಸ್ಟ್ 27, ಆದಿತ್ಯವಾರ ಬೆಳಗ್ಗೆ ಗಂಟೆ 9ರಿಂದ ಸ.ಹಿ.ಪ್ರಾ.ಶಾಲೆ, ಪೊಲಿಪು ಇಲ್ಲಿ ಜರಗಲಿದೆ. ಆಸುಪಾಸಿನ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 78293 58105, 95353 68155
ಎರ್ಮಾಳು : ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ
Posted On: 07 Aug 2023, 06:44 PM
ಎರ್ಮಾಳು : ಶ್ರೀ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯ ಕೋಟಿ ಚೆನ್ನಯ ಯುವ ಬಳಗ ಹಾಗೂ ಬೈದಶ್ರೀ ಮಹಿಳಾ ಮಂಡಳಿಯ ಆಯೋಜನೆಯಲ್ಲಿ ಎರ್ಮಾಳು ಬಾಕ್ಯಾರು ಗದ್ದೆಯಲ್ಲಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗರು ಹಾಗೂ ಗರಡಿಯ ಅಧ್ಯಕ್ಷ ಪ್ರಭಾಕರ್ ಪೂಜಾರಿ ಉದ್ಘಾಟಿಸಿದರು. ಗರಡಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಅಂಚನ್ ಮಾತನಾಡಿ, ಪ್ರಥಮ ಬಾರಿಗೆ ನಾವು ಈ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ಗ್ರಾಮದ ಎಲ್ಲಾ ಯುವ ಪೀಳಿಗೆಗೆ ಕೆಸರಿನ ಗದ್ದೆ ಹಾಗೂ ಕೃಷಿಯ ಬಗ್ಗೆ ತಿಳಿಸಿ ಕೊಡುವ ಉದ್ದೇಶವಾಗಿದೆ ಎಂದರು. ಕೋಟಿ ಚೆನ್ನಯ ಯುವ ಬಳಗದ ಅಧ್ಯಕ್ಷ ಕೃಷ್ಣ ಕುಮಾರ್ ಪೊಲ್ಯ, ಬೈದಶ್ರೀ ಮಹಿಳಾ ಮಂಡಳಿಯ ಅಧ್ಯಕ್ಷೆ ಮಮತಾ ಪೂಜಾರಿ, ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭ ವಾಲಿಬಾಲ್, ಹಗ್ಗ ಜಗ್ಗಾಟ, ಒಂದು ಕಾಲು ಓಟ, ಹುಲಿ ಕುಣಿತ ಸಹಿತ ಹತ್ತು ಹಲವು ಕ್ರೀಡೆಗಳನ್ನು ಆಯೋಜಿಸಲಾಗಿತ್ತು. 500 ಕ್ಕೂ ಅಧಿಕ ಪುರುಷ, ಮಹಿಳೆ ಹಾಗೂ ಮಕ್ಕಳು ಭಾಗವಹಿಸಿದ್ದರು.
ಕಾಪು : ಮುಂಬೈ ಮಹಾನಗರಪಾಲಿಕೆ ಸಹ ಆಯುಕ್ತರಿಂದ ಹೊಸ ಮಾರಿಗುಡಿಗೆ ಶಿಲಾ ಸೇವೆ ಸಮರ್ಪಣೆ
Posted On: 07 Aug 2023, 06:34 PM
ಕಾಪು : ಇಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮುಂಬೈ ಮಹಾನಗರಪಾಲಿಕೆ ಸಹ-ಆಯುಕ್ತರಾದ ಪಾರ್ಥ್ ಭಾಗ್ಯಶ್ರೀ ಕಪ್ಸೆ "ಕೌಸ್ತುಬ್ ಪ್ಲಾಟಿನಂ" ಬೋರಿವಿಲಿ, ಮುಂಬೈ ಆಗಮಿಸಿ 9 ಶಿಲಾಸೇವೆ ನೀಡಿ, ಶಿಲಾ ಪುಷ್ಪ ಸಮರ್ಪಿಸಿ ದೇವಳದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಅವರು ನಾವು ಕ್ಷೇತ್ರಕ್ಕೆ ಬಂದಿರುವುದು ನಮ್ಮ ಪುಣ್ಯ. ಸೇವೆ ನೀಡುತ್ತಿರುವುದು ನಮ್ಮ ಭಾಗ್ಯ ಹಾಗಾಗಿ ಇನ್ನು ಹೆಚ್ಚಿನ ಶಿಲಾಸೇವೆಯನ್ನು ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ್ ಶೆಟ್ಟಿ ಉಪಸ್ಥಿತರಿದ್ದರು.
ಕಳತ್ತೂರು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಜೀರ್ಣೋದ್ಧಾರ ಪೂರ್ವಭಾವಿ ಸಭೆ
Posted On: 06 Aug 2023, 04:06 PM
ಕಾಪು : ಕಳತ್ತೂರು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಜೀರ್ಣೋದ್ಧಾರದ ಕುರಿತು ರವಿವಾರ ಪೂರ್ವಭಾವಿ ಸಭೆ ಜರಗಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಕಳತ್ತೂರು ಶ್ರೀ ಬ್ರಹ್ಮಬೈದರ್ಕಳ ಗರೋಡಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಹಿರಿಯರು ಹಾಗೂ ಊರ ಸಮಸ್ತರು ಉಪಸ್ಥಿತರಿದ್ದರು.
ಕಾಪು : ಬಡವರ ಹಿತದೃಷ್ಟಿಯ ಕಾನೂನು ನಾವು ಆರಿಸಿ ಕಳಿಸಿದ ಪ್ರಜಾ ಪ್ರತಿನಿಧಿಗಳ ಪ್ರಯತ್ನದಿಂದ ಆಗಬೇಕಿದೆ - ಕೆ. ಮಹಾಂತೇಶ
Posted On: 06 Aug 2023, 03:01 PM
ಕಾಪು : ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದಿಂದ 19ನೇ ವಾರ್ಷಿಕ ಮಹಾಸಭೆ ಕಾಪುವಿನ K1 ಹೋಟೆಲ್ ಸಭಾಂಗಣದಲ್ಲಿ ಭಾನುವಾರ ಜರಗಿತು. ಕಾರ್ಯಕ್ರಮನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಮೂಲಕ 45 ಲಕ್ಷ ಮಂದಿ ನೋಂದಾಯಿತರಾಗಿದ್ದಾರೆ. ಆದರೆ ನಿಜವಾದ ನಿರ್ಮಾಣ ವಲಯದ ಕಾರ್ಮಿಕರ ನೋಂದಾಯಿತವಾಗಿಲ್ಲ. ಸ್ವಾತಂತ್ರ್ಯಬಂದ ಮೇಲೆ ಅಂದರೆ 1996 ರಲ್ಲಿ ಕಾರ್ಮಿಕರಿಗಾಗಿ ಕಾನೂನು ಬಂತು. 2007 ಕರ್ನಾಟಕದಲ್ಲಿ ಜಾರಿಯಾಯಿತು. ಬಡವರ ಹಿತದೃಷ್ಟಿಯ ಕಾನೂನು ಜಾರಿಯಾಗುವುದು ಬೀದಿಯಲ್ಲಿ ಮಾತನಾಡಿ ಅಲ್ಲ ನಾವು ಆರಿಸಿ ಕಳಿಸಿದ ಪ್ರಜಾ ಪ್ರತಿನಿಧಿಗಳ ಪ್ರಯತ್ನದಿಂದಾಗಬೇಕಾಗಿದೆ. ಅವರು ಕಾರ್ಮಿಕರ ಪರ ಮಾತನಾಡಬೇಕಾಗಿದೆ. ಕೇಂದ್ರ ಸರಕಾರ ಕಾರ್ಮಿಕರ ಬಗೆಗಿನ ಕೆಲವು ಯೋಜನೆಗಳನ್ನು ರದ್ದು ಮಾಡಲೆತ್ನಿಸಿದೆ. ಸರಕಾರಗಳು ಶ್ರೀಮಂತರ ಪರವಾಗಿದೆ. ಬಡವರಿಗೆ ತೊಂದರೆಯಾಗಿದೆ. ಎಲ್ಲಾ ಕಾರ್ಮಿಕರ ಸಂಘಗಳ ಸಂಘಟಿತ ಪ್ರಯತ್ನದಿಂದ ಕಾನೂನನ್ನು ರದ್ದು ಮಾಡಲು ಬಿಡಲಿಲ್ಲ. ಕಟ್ಟಡ ಕಾರ್ಮಿಕರ ಬಗೆಗೆ ಚರ್ಚೆ ಉಡುಪಿ ದಕ್ಷಿಣಕನ್ನಡದಲ್ಲಿ ಆಗುತ್ತಿಲ್ಲ. ಬದಲಾಗಿಲ್ಲ ವಿಡಿಯೋ, ಹಿಜಾಬ್ ಇತ್ಯಾದಿಗಳ ಬಗ್ಗೆ ಆಗುತ್ತಿದೆ. ದುಡಿಯೋ ಜನರು ಜಾತಿ ಧರ್ಮದ ಹೆಸರಿನಲ್ಲಿ ಇರಬಾರದು. ಇಲ್ಲಿ ಎಲ್ಲರೂ ಒಂದೇ. ಕಟ್ಟಡ ಕಾರ್ಮಿಕರ ಮಕ್ಕಳು ಉನ್ನತ ಹುದ್ದೆ ಅಲಂಕರಿಸಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ಶೇಖರ ಬಂಗೇರ ವಹಿಸಿದ್ದರು. ಈ ಸಂದರ್ಭ ಸಿ.ಐ.ಟಿ.ಯು. ಉಡುಪಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಕಾ| ಸುರೇಶ ಕಲ್ಲಾಗರ, ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಖಜಾಂಜಿ ಕಾ| ರೊನಾಲ್ಡ್ ರಾಜೇಶ್, ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಗೌರವಾಧ್ಯಕ್ಷರಾದ ದಯಾನಂದ ಕೋಟ್ಯಾನ್, ಉಪಾಧ್ಯಕ್ಷರಾದ ಉದಯ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಖಜಾಂಚಿ ಗಣೇಶ ನಾಯಕ್, ಕಾಪು ಘಟಕದ ಅಧ್ಯಕ್ಷ ರಾಮ ಸಾಲ್ಯಾನ್, ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್, ಸಾಲಿಗ್ರಾಮ ಶಶಿಕಲ, ಶಶಿಧರ್, ಮತ್ತಿತರರು ಉಪಸ್ಥಿತರಿದ್ದರು. ಸಭೆಗೂ ಮುನ್ನ ಜನತೆಯ ಸೌಹಾರ್ದತೆ - ಕಟ್ಟಡ ಕಾರ್ಮಿಕರ ಒಗ್ಗಟ್ಟಿಗಾಗಿ, ಕಲ್ಯಾಣ ಮಂಡಳಿ ಬಲ ಪಡಿಸಲು ಒತ್ತಾಯಿಸಿ ಸಿ ಐ ಟಿ ಯು ಬೆಂಬಲದೊಂದಿಗೆ ಕಾಪು ಸರಕಾರಿ ಆಸ್ಪತ್ರೆಯ ಬಳಿಯಿಂದ K1 ಹೋಟೆಲ್ ವರೆಗೆ ಮೆರವಣಿಗೆ ನಡೆಯಿತು.
ಪಡುಬಿದ್ರಿ : ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸಂಪನ್ನ
Posted On: 06 Aug 2023, 02:42 PM
ಪಡುಬಿದ್ರಿ : ಜೆಸಿಐ ಪಡುಬಿದ್ರಿ, ಹಠಯೋಗ ಶಿಕ್ಷಣ ಸಮಿತಿ ಪಡುಬಿದ್ರಿ, ಶ್ರೀ ಸುಬ್ರಹ್ಮಣ್ಯ ಯುವಕ ಯುವತಿ ವೃಂದ, ಪಾದೆಬೆಟ್ಟು, ರೋಟರಿ ಕ್ಲಬ್ ಪಡುಬಿದ್ರಿ, ಪಡುಬಿದ್ರಿ ವಲಯದ ಎಲ್ಲಾ ಕ್ರಿಕೆಟ್ ತಂಡಗಳು, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ, ಪಡುಬಿದ್ರಿ ಘಟಸಮಿತಿ, ಉಡುಪಿ ಬೆಳ್ಮಣ್ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ಇವರ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ರವಿವಾರ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಪಡುಬಿದ್ರಿ ದುರ್ಗಾ ಕ್ಲಿನಿಕ್ ವೈದ್ಯೆ ಡಾ| ಪಯಸ್ವಿನಿ ಶೆಟ್ಟಿಗಾರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಜೆಸಿಐ ಅಧ್ಯಕ್ಷರಾದ ಯಶೋದ ವಹಿಸಿದ್ದರು. ಕಾರ್ಯಕ್ರಮಲ್ಲಿ ವಿಶ್ವಹಿಂದು ಪರಿಷತ್ ಜಿಲ್ಲಾಧ್ಯಕ್ಷರಾದ ವಿಷ್ಣುಮೂರ್ತಿ ಆಚಾರ್ಯ, ಪಾದಬೆಟ್ಟು, ಕೆ.ಪಿ.ಎಸ್ ಪಡುಬಿದ್ರಿ ಮುಖ್ಯ ಶಿಕ್ಷಕ ಕೃಷ್ಣಯ್ಯ, ಶ್ರೀ ಸುಬ್ರಹ್ಮಣ್ಯ ಯುವಕ ಯುವತಿ ವೃಂದ ಪಾದೆಬೆಟ್ಟು ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀ ಸುಬ್ರಹ್ಮಣ್ಯ ಯುವತಿ ವೃಂದ ಪಾದೆಬೆಟ್ಟು ಅಧ್ಯಕ್ಷೆ ಗೀತಾ ಪ್ರಭಾಕರ್, ಹಠಯೋಗ ಶಿಕ್ಷಣ ಸಮಿತಿ ಪಡುಬಿದ್ರಿ ಅಧ್ಯಕ್ಷ ಡಾ| ಮನೋಜ್ ಶೆಟ್ಟಿ, ರೋಟರಿ ಕ್ಲಬ್, ಪಡುಬಿದ್ರಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಗೌರವಾಧ್ಯಕ್ಷ ಶರತ್ ಶೆಟ್ಟಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಪಡುಬಿದ್ರಿ ಅಧ್ಯಕ್ಷೆ ಪುಷ್ಪಲತಾ ಗಂಗಾಧರ್, ಜೆಸಿಐ ರಾಷ್ಟ್ರೀಯ ಆಡಳಿತ ಸದಸ್ಯ ವೈ ಸುಕುಮಾರ್, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಮತ್ತಿತರರು ಉಪಸ್ಥಿತರಿದ್ದರು. ಪಡುಬಿದ್ರಿ ಜೆಸಿಐ ಅಧ್ಯಕ್ಷರಾದ ಯಶೋದ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ದೇವಿಪ್ರಸಾದ್ ಬೆಳ್ಳಿಬೆಟ್ಟು ವಂದಿಸಿದರು. ರಕ್ತದಾನ ಶಿಬಿರದಲ್ಲಿ 56 ಮಂದಿ ರಕ್ತದಾನ ಮಾಡಿದರು.
ಶಿರ್ವ : ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ
Posted On: 06 Aug 2023, 09:17 AM
ಶಿರ್ವ : ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘ .ನಿ, ಶಿರ್ವ ಹಾಗೂ ಸಹಕಾರ ಭಾರತಿ ಕಾಪು ತಾಲೂಕು ಸಹಯೋಗದಲ್ಲಿ ಕುತ್ಯಾರು ವಿದ್ಯಾದಾಯಿನಿ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಜರಗಿತು. ಕಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಕೇ೦ಜ ಶ್ರೀಧರ ತಂತ್ರಿ ಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಸಹಕಾರ ಭಾರತಿ ಕಾಪು ತಾಲೂಕು ಪ್ರಮುಖರಾದ ಶಶಿಧರ ವಾಗ್ಲೆ ಬೆಳ್ಳೆಯವರು ಸಸಿ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಸಹಕಾರಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ವಾರಿಜಾ ಆರ್.ಕಲ್ಮಾಡಿ ಹಾಗೂ ಮುಖ್ಯ ಶಿಕ್ಷಕಿ ಶರ್ಮಿಳಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಅವರು ನಿರ್ವಹಿಸಿದ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಅಶೋಕ್ ರಾವ್, ನಾರಾಯಣ ನಾಯಕ್, ವಿಲಿಯಂ ಬ್ಯಾಪ್ಟಿಸ್ಟ್ ಮಚಾದೋ, ವಿಜಯ ಪೂಜಾರಿ ಮತ್ತು ಹರಿಣಾಕ್ಷ ಶೆಟ್ಟಿ ಹಾಗೂ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕಿಯರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಮಾವಿನ ಸಸಿಗಳನ್ನು ವಿತರಿಸಲಾಯಿತು.
