Updated News From Kaup
ಮೂಳೂರು : ಸತತ 8ನೇ ವರ್ಷದ ಆಟಿ ಕಷಾಯ ವಿತರಣೆ
Posted On: 17-07-2023 05:24PM
ಮೂಳೂರು : ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮೂಳೂರು, ಟ್ರಸ್ಟ್ ಸದಸ್ಯರು ಹಾಗೂ ಸಂಜೀವ ಪೂಜಾರಿ ಸಹಕಾರದೊಂದಿಗೆ ಆಟಿ ಅಮಾವಾಸ್ಯೆಯ ಪ್ರಯುಕ್ತ ಸತತ 8ನೇ ವರ್ಷ ಹಾಳೆ ಮರದ ತೊಗಟೆಯಿಂದ ಮಾಡಿದ ಕಷಾಯವನ್ನು ಸರಕಾರಿ ಸಂಯುಕ್ತ ಶಾಲೆ ಮೂಳೂರಿನಲ್ಲಿ ಉಚಿತವಾಗಿ ವಿತರಿಸುವ ಮೂಲಕ ಈ ಪುರಾತನ ಸಂಪ್ರದಾಯದ ಪ್ರಯೋಜನವನ್ನು ಸುಮಾರು ೧೨೦೦ ಜನರು ಪಡೆದರು.
ಶಕ್ತಿ ಯೋಜನೆಯ ಮೂಲಕ ಉಡುಪಿ ಜಿಲ್ಲೆಯಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರ ಪ್ರಯಾಣ
Posted On: 17-07-2023 04:55PM
ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಉಡುಪಿ ಜಿಲ್ಲೆಯ ಸರಕಾರಿ ಬಸ್ ಗಳಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಸಾರಿಗೆ ಸಂಸ್ಥೆಗೆ ಜುಲೈ 14 ರ ವರೆಗೆ ಇದುವರೆಗೆ 3.62 ಕೋಟಿ ರೂ ಆದಾಯ ಬಂದಿದೆ.
ಬಂಟಕಲ್ಲು : ಆಟಿಡೊಂಜಿದಿನ ಸಂಭ್ರಮ
Posted On: 16-07-2023 10:45PM
ಬಂಟಕಲ್ಲು : ಶ್ರೀ ವಿಶ್ವಕರ್ಮ ಸಂಘ ಬಂಟಕಲ್ಲು ಇದರ ಗಾಯತ್ರಿ ಮಹಿಳಾ ಬಳಗದ ವತಿಯಿಂದ ಅಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಂಜರಪಲ್ಕೆ ಗಾಯತ್ರಿ ಮಹಿಳಾ ಮಂಡಳಿಯ ಅಧ್ಯಕ್ಷೆ ಗಾಯತ್ರಿ ಅಶೋಕ ಆಚಾರ್ಯ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಮುಂದಿನ ಜನಾಂಗದ ಏಳಿಗೆಗಾಗಿ ನಮ್ಮ ಬದುಕಿನ ಚಿತ್ರಣ, ಕಷ್ಟದ ಜೀವನದ ಬದುಕು ತಿಳಿಯಬೇಕಿದ್ದರೆ ನಮ್ಮ ಆಚರಣೆಗಳು ತಿಳಿಸುವುದು ಅತ್ಯವಶ್ಯಕ ಅಂತ ಕಾರ್ಯಕ್ರಮ ರೂಪಿಸುವ ಸಂಸ್ಥೆಗೆ ನಾವು ತಲೆಬಾಗಲೇಬೇಕು ಶಾಲೆಗೆ ಕಳಿಸುವುದು ಪಾಠವಲ್ಲ ಅದನ್ನು ನಮ್ಮ ಜೀವನದ ಬದುಕು ಮಕ್ಕಳಿಗೆ ತಿಳಿಸುವುದು ಮತ್ತು ಅದನ್ನು ಅಳವಡಿಸಿಕೊಳ್ಳುವಲ್ಲಿ ಮಹಿಳೆಯರು ಜವಾಬ್ದಾರಿಯುತರಾಗಿರಬೇಕು ಎಂದರು.
ಉಚ್ಚಿಲ : ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಆಚರಣೆ
Posted On: 16-07-2023 07:56PM
ಉಚ್ಚಿಲ : ನಮ್ಮೊಳಗಿನ ನಮ್ಮನ್ನು ಅರಿತುಕೊಳ್ಳಲು, ಲೌಕಿಕ ಸಮಸ್ಯೆಗಳನ್ನು ನಿವಾರಿಸಲು ಆಧ್ಯಾತ್ಮವು ಸಕಾರಾತ್ಮಕ ದಾರಿಯಾಗಿದ್ದು, ನಾವೆಲ್ಲರೂ ಆಧ್ಯಾತ್ಮದ ಕಡೆಗೆ ಮನಸ್ಸನ್ನು ಕೇಂದ್ರೀಕರಿಸಬೇಕು ಎಂದು ಮಂಗಳೂರಿನ ಮಾತಾ ಅಮೃತಾನಂದಮಯಿ ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಹೇಳಿದರು. ದ.ಕ, ಉಡುಪಿ ಮತ್ತು ಉ.ಕ ವ್ಯಾಪ್ತಿಯ ಮಾತಾ ಅಮೃತಾನಂದಮಯಿ ಸೇವಾ ಸಮಿತಿ ವತಿಯಿಂದ ಉಚ್ಚಿಲ ಮಹಾಲಕ್ಷ್ಮೀ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗುರು ಪೂರ್ಣಿಮಾ ಆಚರಣೆಯ ನೇತೃತ್ವ ವಹಿಸಿ ಅವರು ಆಶೀರ್ವಚನ ನೀಡಿದರು.
ಬ್ರಹ್ಮಾವರ : ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ
Posted On: 16-07-2023 05:46PM
ಬ್ರಹ್ಮಾವರ : ವಿದ್ಯಾಮಂದಿರ ಶಾಲಾ ಹಳೆ ವಿದ್ಯಾಥಿ೯ ಸಂಘ, ಸಾವ೯ಜನಿಕ ಗಣೇಶೋತ್ಸವ ಸಮಿತಿ ಹಾರಾಡಿ- ಸಾಲಿಕೇರಿ, ಕಾಮಧೇನು ಕಲ್ಪತರು ಸೇವಾ ಸಮಿತಿ ಹಾರಾಡಿ, ಜಿ.ಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ಶ್ರೀ.ಕ್ಷೇ.ಧ.ಗ್ರಾ ಯೋಜನೆ ಬಿ.ಸಿ ಟ್ರಸ್ಟ್, ರೋಟರಿ ರೋಯಲ್ ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ವೈದ್ಯಕೀಯ ಪ್ರತಿನಿಧಿಗಳ ಸಂಘ, ಕುಂದಾಪುರ ರೂರಲ್ ಆಯುವೇ೯ದ ಮೆಡಿಕಲ್ ಕಾಲೇಜು, ರಕ್ತನಿಧಿ ಕೇಂದ್ರ, ಮಿಷನ್ ಆಸ್ಪತ್ರೆ, ಎಸ್.ಎಸ್.ಎಫ್ ಹೊನ್ನಾಳ ಇದರ ಜಂಟಿ ಆಶ್ರಯದಲ್ಲಿ ಜುಲೈ 16ರಂದು ಹಾರಾಡಿ ಜಿ.ಎಂ ವಿದ್ಯಾನಿಕೇತನದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ ನಡೆಯಿತು.
ಜುಲೈ 17 (ನಾಳೆ) : ಪಡುಬಿದ್ರಿಯಲ್ಲಿ ಆಟಿ ಕಷಾಯ ವಿತರಣೆ
Posted On: 16-07-2023 04:18PM
ಪಡುಬಿದ್ರಿ : ಆಟಿ ಅಮಾವಾಸ್ಯೆಯ ಪ್ರಯುಕ್ತ ಜುಲೈ 17, ಸೋಮವಾರದಂದು ಬೆಳಿಗ್ಗೆ 6 ಗಂಟೆಯಿಂದ 7.30 ರ ವರೆಗೆ ವರ್ಷಂ ಪ್ರತಿಯಂತೆ ಶ್ರೀ ಸಾಯಿ ಆರ್ಕೇಡ್ ಪಡುಬಿದ್ರಿಯಲ್ಲಿ ದಿವ್ಯ ಕೇಟರರ಼್ಸ್ ರವರ ಸಹಕಾರದೊಂದಿಗೆ ಆಟಿ ಕಷಾಯ ವಿತರಣೆ ನಡೆಯಲಿದೆ ಎಂದು ಪಡುಬಿದ್ರಿ ಮೂರ್ತೆದಾರರ ಸಂಘದ ಅಧ್ಯಕ್ಷರಾದ ಪಿ. ಕೆ. ಸದಾನಂದರವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಶಿರ್ವ : ಪಡುಕುತ್ಯಾರು ಆನೆಗುಂದಿ ಶ್ರೀ ಜನ್ಮವರ್ಧಂತಿ ಹಾಗೂ ವಿದ್ಯಾರ್ಥಿ ಭವನ ಉದ್ಘಾಟನಾ ಸಮಾರಂಭ
Posted On: 16-07-2023 10:59AM
ಶಿರ್ವ : ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರ ಜನ್ಮವರ್ಧಂತಿ ಹಾಗೂ ವಿದ್ಯಾರ್ಥಿಭವನ ಉದ್ಘಾಟನಾ ಸಮಾರಂಭವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪಡುಕುತ್ಯಾರಿನ ಆನೆಗುಂದಿ ಮಠದಲ್ಲಿ ನಡೆಯಿತು. ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ನಾಗ ಧರ್ಮೇಂದ್ರ ಸರಸ್ವತಿ ವಿದ್ಯಾರ್ಥಿ ಭವನವನ್ನು ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿ ಮಾತನಾಡಿ, ಕುತ್ಯಾರು ಗ್ರಾಮೀಣ ಪ್ರದೇಶದಲ್ಲಿ ವಿಶ್ವಕರ್ಮ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಆನೆಗುಂದಿ ಮಠವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುವ ನಿಟ್ಟಿನಲ್ಲಿ ಸರಕಾರದ ಅನುದಾನ ಒದಗಿಸಲಾಗುವುದು. ಸರ್ವ ಜನಾಂಗಕ್ಕೆ ಒಳಿತು ಬಯಸುವ ಕಾಳಹಸ್ತೇಂದ್ರ ಸ್ವಾಮೀಜಿ ಸರ್ವರಸ್ವಾಮೀಜಿಯಾಗಿ ಮೂಡಿಬಂದಿದ್ದಾರೆ ಎಂದರು.
ಕಾಪು : ಈ ಮೀಡಿಯಾ ಕನ್ನಡ ನ್ಯೂಸ್ ವೆಬ್ ಪೋರ್ಟಲ್ ಲೋಕಾರ್ಪಣೆ
Posted On: 16-07-2023 10:17AM
ಕಾಪು : ಸುದ್ದಿಯ ಧಾವಂತದ ಈ ಕಾಲಘಟ್ಟದಲ್ಲಿ ನಮ್ಮ ಸುತ್ತಮುತ್ತಲಿನ, ದೇಶ, ವಿದೇಶದ ಸುದ್ದಿಗಳು ನಮ್ಮನ್ನು ಕ್ಷಣ ಮಾತ್ರದಲ್ಲಿ ತಲುಪುತ್ತಿವೆ. ಸುದ್ದಿಯು ಸಾಮಾಜಿಕ ಬದಲಾವಣೆಯ ಜೊತೆಗೆ ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮಾಧ್ಯಮವಾದಾಗ ಮಾತ್ರ ಜನರ ಮನಸ್ಸು ಗೆಲ್ಲಲು ಸಾಧ್ಯ. ಮುಂದಿನ ದಿನಗಳಲ್ಲಿ ಈ ಮೀಡಿಯಾ ಕನ್ನಡ ಸಂಸ್ಥೆಯು ಕೂಡ ಜನಮನ ಗೆಲ್ಲಲಿ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶುಭ ಹಾರೈಸಿದರು. ಅವರು ಕಾಪುವಿನಲ್ಲಿ ಜರಗಿದ ಈ ಮೀಡಿಯಾ ಕನ್ನಡ ವೆಬ್ ಪೋರ್ಟಲ್ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ, ಸಂಸ್ಥೆಯ ಲೋಗೋ ಅನಾವರಣಗೊಳಿಸಿ ಮಾತನಾಡಿದರು.
ಕಾಪು : ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಬೇತಿಗೆ ಚಾಲನೆ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
Posted On: 15-07-2023 02:56PM
ಕಾಪು : ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಕಾಪು ವಿಧಾನಸಭಾ ಕ್ಷೇತ್ರದ ಇದರ ವತಿಯಿಂದ ಕಾಪುವಿನ ಉಳಿಯಾರಗೋಳಿಯ ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯ ಫ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿಗೆ ಶನಿವಾರ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಕಾಪು : ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವನಮಹೋತ್ಸವ
Posted On: 15-07-2023 02:47PM
ಕಾಪು : ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಳತ್ತೂರು, ಅರಣ್ಯ ಇಲಾಖೆ, ಕಳತ್ತೂರು ಗ್ರಾಮ ಪಂಚಾಯತ್, ಧರಣಿ ಸಮಾಜ ಸೇವಾ ಸಂಘ, ಕಾಪು ಇವರ ಜಂಟಿ ಸಹಯೋಗದೊಂದಿಗೆ ಶನಿವಾರ ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮ ಜರಗಿತು.
