Updated News From Kaup
ಉಡುಪಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಿದ್ದು ಮರೆಯಲಾಗದ ಅನುಭವ : ಕೂರ್ಮಾರಾವ್ ಎಂ
Posted On: 15-07-2023 02:41PM
ಉಡುಪಿ : ಜಿಲ್ಲೆಯ ಜಿಲ್ಲಾಧಿಕಾರಿಯಾಗಿ 1 ವರ್ಷ 10 ತಿಂಗಳ ಕಾಲ ಕಾರ್ಯನಿರ್ವಹಿಸಿದ್ದು ಅತ್ಯುತ್ತಮ ರೀತಿಯ ಮರೆಯಲಾಗದ ಅನುಭವ ನೀಡಿದೆ, ಜಿಲ್ಲೆಯ ಅಭಿವೃದ್ದಿಗಾಗಿ ಮುಂದಿನ ದಿನದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ತನ್ನಿಂದ ಅಗತ್ಯವಿರುವ ಸಹಕಾರ ನೀಡಲಾಗುವುದು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶುಕ್ರವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ಜುಲೈ 16 : ಕಾನ ಬ್ರಹ್ಮಲಿಂಗೇಶ್ವರ ದೇವಸ್ಥಾನ, ಬೆಳಪು - ವಿದ್ಯಾರ್ಥಿವೇತನ ವಿನಿಯೋಗ ಕಾರ್ಯಕ್ರಮ
Posted On: 15-07-2023 07:20AM
ಕಾಪು : ಶ್ರೀ ಪಂಚಾಕ್ಷರಿ ಯಕ್ಷಗಾನ ಮಂಡಳಿ, ಎಲ್ಲೂರು ಟೆಕ್ ಸೆಲ್ ಅಟೋಮೇಶನ್ ಪ್ರೈ. ಲಿ. ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಜುಲೈ 16, ಆದಿತ್ಯವಾರ ಸಂಜೆ 4 ಗಂಟೆಗೆ ಕಾನ ಬ್ರಹ್ಮಲಿಂಗೇಶ್ವರ ದೇವಸ್ಥಾನ, ಬೆಳಪು ಇಲ್ಲಿ ವಿದ್ಯಾರ್ಥಿವೇತನ ವಿನಿಯೋಗ ಕಾರ್ಯಕ್ರಮ ಜರಗಲಿದೆ.
ಕಾಪು : ನೂತನ ಜಿಲ್ಲಾಧಿಕಾರಿಯನ್ನು ಅಭಿನಂದಿಸಿದ ಕಾಪು ಶ್ರೀ ಹೊಸ ಮಾರಿಗುಡಿ ದೇವಳ ಸಮಿತಿ
Posted On: 15-07-2023 06:46AM
ಕಾಪು : ಈ ಹಿಂದೆ ಉಡುಪಿ ಜಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ, ತುಮಕೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ವಿದ್ಯಾ ಕುಮಾರಿ ಅವರು ಶುಕ್ರವಾರ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.
ಕಾಪು : ಜೈನಮುನಿಗಳ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಬಿಜೆಪಿಯ ನೇತೃತ್ವದಲ್ಲಿ ಪ್ರತಿಭಟನಾ ಸಭೆ
Posted On: 13-07-2023 08:46PM
ಕಾಪು : ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅಮಾನುಷ ಹತ್ಯೆ ಸರಣಿ ಹತ್ಯೆಗಳನ್ನು ಖಂಡಿಸಿ ರಾಜ್ಯ ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ಕಾಪು ಬಿಜೆಪಿ ಕಚೇರಿ ಬಳಿ ನಡೆಯಿತು.
ದ.ಕ, ಉಡುಪಿ ಸಹಿತ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Posted On: 13-07-2023 03:22PM
ಉಡುಪಿ : ಹವಾಮಾನ ಇಲಾಖೆ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದ್ದು, ಆರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ನೇಮಕ
Posted On: 13-07-2023 12:48PM
ಉಡುಪಿ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ.
ಉಡುಪಿ : ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಗೆ ವ್ಯವಸ್ಥಿತ ಸಿದ್ಧತೆ ಕೈಗೊಳ್ಳಿ - ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್
Posted On: 12-07-2023 09:25PM
ಉಡುಪಿ : ಇಲ್ಲಿನ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಯು ಜುಲೈ 17 ರಿಂದ 25 ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಿಳಿಸಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ್ಯಾಲಿ ಕುರಿತು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ : ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
Posted On: 12-07-2023 09:08PM
ಉಡುಪಿ : ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಬ್ರಹ್ಮಾವರ ತಾಲೂಕು ಸಾರ್ವಜನಿಕ ಅಹವಾಲು ಕಾರ್ಯಕ್ರಮವು ಇಂದು ಚಾಂತಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕುಲಾಲ ಚಾವಡಿ ವಾಟ್ಸಪ್ ಬಳಗದಿಂದ ಪುಟ್ಟ ಕಂದ ವರ್ಷಿತ್ ಕುಲಾಲ್ ಗೆ ವೈದಕೀಯ ನೆರವು
Posted On: 12-07-2023 08:56PM
ಕಾಪು : ಹೃದಯ ಭಾರವಾದಂತೆ ತೇವಗೊಂಡ ಆ ಕಣ್ಣಂಚಲಿ ಭರವಸೆಯ ಬೆಳಕೊಂದು ಮಿಂಚಿ ಮರೆಯಾಯಿತು. ಭಾವುಕ ಮನಸ್ಸಿನಲ್ಲಿ ಭಾವೋದ್ವೇಗವು ಕಟ್ಟೆಯೊಡೆದು ಸಂತಸ, ದುಃಖ ಏಕಕಾಲಕ್ಕೆ ಪ್ರಕಟಗೊಂಡು ಗಂಟಲು ಗದ್ಗದಿತವಾಗಿ ಮಾತು ತಡವರಿಸಿತು. ಅರೆಕ್ಷಣದ ಮೌನ ಸಾವಿರ ಸಾವಿರ ಕೃತಜ್ಞತೆ ಸಲ್ಲಿಸುವ ಭಾವಕ್ಕೆ ಸಾಕ್ಷಿಯಾಯಿತು. "ಈ ನೋವಿಗಿಂತ ಮಕ್ಕಳಿಲ್ಲದ ಬದುಕೇ ಲೇಸು" ಎನ್ನುವ ಮಾತೃ ಹೃದಯದ ಅಂತರಾಳದ ನುಡಿ ಆ ಮಗುವಿನ ಆರೋಗ್ಯಕ್ಕಾಗಿ ಪಟ್ಟ ಪಡಿಪಾಟಲಿನ ತೆರೆದ ಪುಸ್ತಕವಾಯಿತು. ಚಾವಡಿ ಬಂಧುಗಳು ಪುಟ್ಟ ಕಂದ ವರ್ಷಿತ್ ನ ಆರೋಗ್ಯಕ್ಕಾಗಿ ನಲ್ಲೂರು ಗ್ರಾಮದ ನೆಲ್ಲಿಕಾರಿನ ಪೇರಳ್ಕೆ ನಿವಾಸಿ ಜಯಶ್ರೀಯವರ ಮನೆಯಂಗಳ ತಲುಪಿದಾಗಿನ ಕ್ಷಣದ ಭಾವನಾತ್ಮಕ ಸನ್ನಿವೇಶದ ತುಣುಕಿದು.
ಉಡುಪಿ : ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಯುವ ಪ್ರತಿಭೆ, ವಿದ್ಯಾರ್ಥಿ ವೇತನ ಪ್ರಶಸ್ತಿಗೆ ನೇಹಾ ಹೊಳ್ಳ ಆಯ್ಕೆ
Posted On: 12-07-2023 08:08PM
ಉಡುಪಿ : ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದ, ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ (ಸಿ ಸಿ ಆರ್ ಟಿ) ನಡೆಸಿದ , 2020-2021 ಭಾರತದ ಯುವ ಪ್ರತಿಭಾ ಶೋಧದಲ್ಲಿ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಯುವ ಪ್ರತಿಭೆ, ವಿದ್ಯಾರ್ಥಿ ವೇತನ ಪ್ರಶಸ್ತಿಗೆ, ಉಡುಪಿ ಜಿಲ್ಲೆಯಿಂದ ಏಕೈಕ ಅಭ್ಯರ್ಥಿಯಾಗಿ ಮಣೂರು ಗ್ರಾಮದ ನೇಹಾ ಹೊಳ್ಳ ಆಯ್ಕೆಯಾಗಿದ್ದಾರೆ.
