Updated News From Kaup

ಎಸ್ಕೆಪಿಎ ಕಾಪು ವಲಯದ 2025- 27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Thumbnail
Posted On: 27 Dec 2025, 05:36 PM

ಕಾಪು : ಛಾಯಾಗ್ರಾಹಕರು ತಮ್ಮ ದುಖ:   ದುಮ್ಮಾನಗಳನ್ನು ಮರೆತು ಗಾಹಕರಲ್ಲಿ ನಗು ತರಿಸಿ, ಉತ್ತಮ ಛಾಯಾಚಿತ್ರ ಮೂಡುವಂತೆ ಪ್ರಯತ್ನಿಸುವ ಶ್ರಮ ಜೀವಿಗಳು ಎಂದು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಹೇಳಿದ್ದಾರೆ.
   ಕಾಪು ಕೆ-ವನ್ ಹೋಟೆಲ್ ಸಭಾಂಗಣದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೆಶನ್ ನ ಕಾಪು ವಲಯದ 2025- 27ನೇ ಸಾಲಿನ ನೂತನ ಅಧ್ಯಕ್ಷ ಸಂತೋಷ್‌ ನಾಯ್ಕ್‌ ಕಾಪು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಾಪು ವಲಯದ ಎಲ್ಲಾ ಸಂಘದ ಸದಸ್ಯ ಛಾಯಾಗ್ರಾಹಕರಿಗೆ  ತನ್ನ ವತಿಯಿಂದ  ಜೀವವಿಮೆ ಯೋಜನೆಗೆ ಮುನ್ನಡಿ ಇಡುತ್ತೇನೆ  ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಶ್ವಾಸನೆ ನೀಡಿದರು. 

   ಕಾಪು ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಮಾತನಾಡಿ, ಛಾಯಾಗ್ರಾಹರಿಗೆ ಜೀವವಿಮೆಯ ಅಗತ್ಯದಷ್ಟೇ ಸಂಘಟನೆಗೆ ಸ್ವಂತ ಕಟ್ಟಡವೂ ಬೇಕು. ಅದಕ್ಕೆ ಬೇಕಾದ ಜಾಗವನ್ನು ಹೊಂದಿಸಿಕೊಂಡು ಕಟ್ಟಡ ನಿರ್ಮಾಣ ಮಾಡುವುದಾದರೆ, ಪ್ರಥಮ ದೇಣಿಗೆಯಾಗಿ ನಾನು 1 ಲಕ್ಷ ರೂ. ನೀಡುತ್ತೇನೆ ಎಂದರು.

    ಎಸ್‌ಕೆಪಿಎ ಕೇಂದ್ರ ಸಮಿತಿಯ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ ಅಧ್ಯಕ್ಷತೆ ವಹಿಸಿದ್ದರು.
ಅವರು, ನೂತನ ಅಧ್ಯಕ್ಷ ಸಂತೋಷ್‌ ನಾಯ್ಕ್‌ ಕಾಪು ಮತ್ತು ಪದಾಧಿಕಾರಿಗಳಿಗೆ ಶುಭ ಕೋರಿ, ಮುಂದಿನ ಎರಡು ವರ್ಷಗಳಲ್ಲಿ ಕಾಪು ವಲಯ ಉತ್ತಮ ಸಮಾಜ ಮುಖಿ ಕೆಲಸನ್ನು ಮಾಡುವಂತಾಗಲಿ ಎಂದರು.

   ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೆಶನ್  ಕಾಪು ವಲಯದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸನ್ಮಾನ ಮತ್ತು ಸಹಾಯ ಧನ ನೀಡಲಾಯಿತು.  

    ವೇದಿಕೆಯಲ್ಲಿ ಹೋಟೆಲ್ ಉದ್ಯಮಿ ಪ್ರಭಾಕರ ಪೂಜಾರಿ ಕಾಪು, ಫೊಟೋ ಪ್ಯಾಲೆಸ್ ನ ರವಿರಾಜ್ ಕಿದಿಯೂರು, ಎಸ್ ಕೆಪಿಎ ಸಂಚಾಲಕ ಗೋಪಾಲ್ ಸುಳ್ಯ, ಎಸ್‌ಕೆಪಿಎ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಾಸುದೇವ ರಾವ್, ಎಸ್‌ಕೆಪಿಎ ಕಟ್ಟಡ ಸಮಿತಿ ಅಧ್ಯಕ್ಷ ಆನಂದ್ ಎನ್. ಬಂಟ್ವಾಳ, ಎಸ್‌ಕೆಪಿಎ ಪ್ರಧಾನ ಕಾರ್ಯದರ್ಶಿ ಅಜಯ್ ಮಂಗಳೂರು, ಉಪಾಧ್ಯಕ್ಷ ದತ್ತಾತ್ರೇಯ ಕಾರ್ಕಳ, ಕಾಪು ವಲಯದ ಗೌರವಾಧ್ಯಕ್ಷ ಬಾಲಕೃಷ್ಣ ಪೂಜಾರಿ ಉಚ್ಚಿಲ, ಜಿಲ್ಲಾ ಛಾಯಾ ಕಾರ್ಯದರ್ಶಿ ರಾಜೇಶ್ ಶಂಕರಪುರ, ನಿರ್ಗಮನ ಅಧ್ಯಕ್ಷ ಸಚಿನ್ ಉಚ್ಚಿಲ, ಕೋಶಾಧಿಕಾರಿ ಕಿರಣ್ ಕಾಪು ಉಪಸ್ಥಿತರಿದ್ದರು.

   ನಿರ್ಗಮನ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ವಂದಿಸಿದರು. ಪತ್ರಕರ್ತ ರಾಕೇಶ್ ಕುಂಜೂರು ಕಾರ್ಯಕ್ರಮ ನಿರೂಪಿಸಿದರು.

    ಸದಸ್ಯರ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ಸದಸ್ಯರಿಂದ ಸಂಗೀತ ಕಾರ್ಯಕ್ರಮ ನೆರವೇರಿತು.

ಕಾಪುವಿನಲ್ಲಿ ಅಟಲ್ ಜನ್ಮಶತಾಬ್ದಿ ಪ್ರಯುಕ್ತ ”ಕಾಪು ಕಡಲ ಪರ್ಬ” ಉದ್ಘಾಟನೆ

Thumbnail
Posted On: 27 Dec 2025, 05:30 PM

ಕಾಪು : ಕಾಪು ಪಡು ಕಡಲ ಕಿನಾರೆಯಲ್ಲಿ ಶುಕ್ರವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ದಿ ಪ್ರಯುಕ್ತ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಡಿ. 26, 27, 28 ರಂದು ಮೂರು ದಿನಗಳ ಕಾಲ ನಡೆಯುತ್ತಿರುವ ಕಾಪು ಕಡಲ ಪರ್ಬವನ್ನು ಶುಕ್ರವಾರ ಸಂಜೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿಯವರು ಕೀರ್ತಿಶೇಷ ಡಾ. ವಿ. ಎಸ್. ಆಚಾರ್ಯ ಸ್ಮರಣೆಯ ದಿ. ಲೀಲಾಧರ ಶೆಟ್ಟಿ ವೇದಿಕೆಯಲ್ಲಿ ತೆಂಗಿನ ಸಿರಿಯನ್ನು ಅರಳಿಸುವ ಮೂಲಕ ಉದ್ಘಾಟಿಸಿದರು.

   ಬಳಿಕ ಮಾತನಾಡಿದ ಅವರು ಅಟಲ್ ಬಿಹಾರಿ ವಾಜಪೇಯಿ ಅವರು ನಮ್ಮ ನಡುವೆ ಸೂರ್ಯನಂತಿದ್ದು, ನಿಷ್ಕಳಂಕ ರಾಜಕಾರಣಿಯಾಗಿ ನಮಗೆಲ್ಲರಿಗೂ ಪ್ರೇರಣೆಯಾಗಿದ್ದಾರೆ. ಸಂಪೂರ್ಣ ಭ್ರಷ್ಟಾಚಾರ ತುಂಬಿದ್ದ ಕಾಂಗ್ರೆಸ್ ಆಳ್ವಿಕೆಯ ಕಾಲದಲ್ಲಿಯೂ ನಿಷ್ಕಳಂಕ ರಾಜಕಾರಣಿಯಾಗಿ ಬೆಳೆದು ನಿಂತಿರುವ ಅಟಲ್ ಜೀ ಅವರು ದೇಶ ಕಂಡ ಅಪ್ರತಿಮ ರಾಜಕಾರಣಿ. ಅಳಿಯಲಾರದ ರಾಜಕೀಯ ಶಕ್ತಿಯಾಗಿದ್ದಾರೆ ಎಂದರು.

  ಅಟಲ್ ಜೀ-ಅಡ್ವಾನಿಯವರಂತೆ  ಬಿಜೆಪಿಯಲ್ಲಿ ಲಾಲಾಜಿ ಮೆಂಡನ್- ಗುರ್ಮೆ ಸುರೇಶ್ ಶೆಟ್ಟಿ  ಅವರುಗಳು ಬಿಜೆಪಿ ರಾಜಕಾರಣದಲ್ಲಿ ಆದರ್ಶ ಮತ್ತು ಪ್ರೇರಣಾದಾಯಕ ವ್ಯಕ್ತಿಗಳಾಗಿದ್ದಾರೆ. ಕಾಪುವಿನ ಕಡಲ ಕಿನಾರೆಯಲ್ಲಿ ಅದ್ದೂರಿಯಾಗಿ ಅಟಲ್ ಬಿಹಾರಿ ವಾಜಪೇಯಿ ಆವರ ಜನ್ಮಶತಾಬ್ದಿ ಪ್ರಯುಕ್ತ ಆಯೋಜಿಸಿದ ಕಡಲ ಪರ್ಬ ವಿಶೇಷತೆಯಿಂದಾಗಿ ರಾಜ್ಯಕ್ಕೆ ಮಾದರಿಯಾಗಿದೆ. ಇದು ರಾಷ್ಟ್ರ ಮಟ್ಟದಲ್ಲಿಯೂ ಗುರುತಿಸುವಂತೆ ಆಗಿದೆ ಎಂದೂ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.  

    ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಪ್ರಾಸಾವಿಕವಾಗಿ ಮಾತನಾಡಿದರು.

   ಕಾಪು ಕಡಲ ಪರ್ಬದ ಗೌರಾವಾಧ್ಯಕ್ಷ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು.

  ವೇದಿಕೆಯಲ್ಲಿ ಹಿರಿಯ ಬಿಜೆಪಿಗರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
  ವೇದಿಕೆಯಲ್ಲಿಆಟಲ್ ಜೀ ಶತಮಾನೋತ್ಸವ ಸಮಿತಿಯ ರಾಜ್ಯ ಸಂಚಾಲಕ ಜಗದೀಶ್ ಹಿರೇಮನಿ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಕಾರ್ಕಳ  ಶಾಸಕ ಸುನಿಲ್ ವಿ. ಕುಮಾರ್, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಧನಂಜಯ ಸರ್ಜಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮುಲ್ಕಿ-ಮೂಡಬಿದ್ರಿ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಬಿಜೆಪಿ  ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ,  ಮಾಜಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ ವೇದಿಕೆಯಲ್ಲಿದ್ದರು.

  ಕಾಪು ಬಿಜೆಪಿ ಅಧ್ಯಕ್ಷ  ಜಿತೇಂದ್ರ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ವಂದಿಸಿದರು. 
  ಕಾಪು ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಆಳ್ವ, ಸತೀಶ್ ಶೆಟ್ಟಿ ಗುಡ್ಡೆಚ್ಚಿ, ನಿತೇಶ್ ಎಕ್ಕಾರು ನಿರೂಪಿಸಿದರು. 

  ಜಗದೀಶ್ ಆಚಾರ್ಯ ಪುತ್ತೂರು, ಇವರಿಂದ ಸಂಗೀತ ರಸಮಂಜರಿ, ಕಾಪು ರಂಗತರಂಗ ತಂಡದಿಂದ ತುಳು ಸಾಮಾಜಿಕ, ಹಾಸ್ಯಮಯ ನಾಟಕ “ಶೋಬಾಜಿ” ಪ್ರದರ್ಶನಗೊಂಡಿತು.

ವಿದ್ಯಾ ಲತಾ ಶೆಟ್ಟಿ ಅಭಿಮಾನಿ ಬಳಗ ಉದ್ಘಾಟನೆ

Thumbnail
Posted On: 27 Dec 2025, 04:36 PM

ಉಡುಪಿ : ವಿದ್ಯಾ ಲತಾ ಶೆಟ್ಟಿ ಅಭಿಮಾನಿ ಬಳಗ ಉದ್ಘಾಟನೆ ಪ್ರಯುಕ್ತ ಡಿ.25ರಂದು  ಮಹಿಳೆಯರಿಗಾಗಿ ಮಹೆಂದಿ ಸ್ಪರ್ಧೆ, ವಿವಿಧ ಸ್ಪರ್ಧೆಗಳು  ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ಉಡುಪಿಯ ಬ್ರಹ್ಮಗಿರಿಯಲ್ಲಿರುವ ನಮಿತಾ ನಿವಾಸ್ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ನಲ್ಲಿರುವ ಸಭಾಭವನದಲ್ಲಿ  ಜರುಗಿತು. 

ಈ ಭವ್ಯ ಸಭಾ ಕಾರ್ಯಕ್ರಮದಲ್ಲಿ ದೊಡ್ಡನ ಗುಡ್ಡೆಯ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿಗಳಾದ  ರಮಾನಂದ ಗುರೂಜಿ  ದೀಪ ಬೆಳಗಿಸುವುದರ  ಮೂಲಕ ಉದ್ಘಾಟನೆಯನ್ನು  ನೆರವೇರಿಸಿದರು.

ಈ  ಸಂದರ್ಭದಲ್ಲಿ ರಾಜಕೀಯ ಮುಖಂಡ, ಉದ್ಯಮಿಗಳಾದ ಪ್ರಸಾದ್ ರಾಜ್ ಕಾಂಚನ್ ಹೊಲಿಗೆ ಯಂತ್ರದ ಫಲಾನುಭವಿಯಾದ ಸುಜಾತರವರಿಗೆ  ಹಸ್ತಾಂತರ ಮಾಡಿ, ಪ್ರತಿಯೊಬ್ಬ ಮಹಿಳೆಯರು ಪ್ರಮುಖ ವಾಹಿನಿಯಲ್ಲಿ ತನ್ನ ಪ್ರತಿಭೆಯ ಛಾಪನ್ನು ಮೂಡಿಸಿಕೊಳ್ಳುವ ಬಗ್ಗೆ ತಿಳಿಸಿದರು.

ದೊಡ್ಡನ ಗುಡ್ಡೆಯ ಎ ವಿ ಬಾಳಿಗ ಆಸ್ಪತ್ರೆಯ ಆಡಳಿತ ನಿರ್ದೇಶಕರಾಗಿರುವ  ಸೌಜನ್ಯ ಶೆಟ್ಟಿ  ಅವರು ಮಾತನಾಡಿ, ಮಹಿಳೆಯರಿಗೆ ಬೇಕಾಗುವ ಆರೋಗ್ಯ ಮಾಹಿತಿಗಳನ್ನು  ನೀಡಿ ಶುಭ ಹಾರೈಸಿದರು.

ಮಹಿಳಾ  ಉದ್ಯಮಿ ರಾಜಕೀಯ ಮುಖಂಡರಾದ  ಮಮತಾ ಶೆಟ್ಟಿ, ಬಿಜೆಪಿ ಮಹಿಳಾ ಮುಖಂಡರು, ಸಮಾಜ ಸೇವಕರಾದ ವೀಣಾ ಶೆಟ್ಟಿ,  ಮಾಜಿ ನಗರಸಭಾ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್,  ವಿದ್ಯಾ ಲತಾ ಶೆಟ್ಟಿ ಅಭಿಮಾನಿ ಬಳಗದ ಸ್ಥಾಪಕರಾದ ವಿನೋದ್ ಶೆಟ್ಟಿ, ಅಧ್ಯಕ್ಷರಾದ ದಿನೇಶ್ ಪೂಜಾರಿ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ  ರಾಜಕೀಯ ಮುಖಂಡ, ಉದ್ಯಮಿಗಳಾದ ಹರಿ ಪ್ರಸಾದ್  ರೈ  ಹಾಗೂ ಪ್ರಮುಖ ಅತಿಥಿಗಳು ಉಪಸ್ಥಿತಿಯಿದ್ದರು. 

ಉಡುಪಿಯ 5 ಮಹಿಳಾ ಚಂಡೆ ಬಳಗದ ಎಲ್ಲಾ ಸದಸ್ಯರಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು.
 
ವಿದ್ಯಾ ಲತಾ ಶೆಟ್ಟಿ ಅಭಿಮಾನಿ ಬಳಗದ ಸ್ಥಾಪಕರಾದ ವಿನೋದ್ ಶೆಟ್ಟಿ ಸ್ವಾಗತಿಸಿದರು. 
ದಯಾನಂದ್ ರವರು ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಪ್ರೀತಿ ಕಲ್ಯಾಣಪುರ  ವಂದಿಸಿದರು.

ಡಿ. 28:ಪಾದೂರು ಕಳತ್ತೂರು ಶ್ರೀ ಬ್ರಹ್ಮಬೈದೆರುಗಳ ಗರಡಿಯಲ್ಲಿ ಸಮಾಲೋಚನ ಸಭೆ

Thumbnail
Posted On: 26 Dec 2025, 08:14 PM

ಕಾಪು : ತಾಲೂಕಿನ ಎಲ್ಲೂರು ಸೀಮೆಯ ಕಳತ್ತೂರು ನಡೀಬೈಲ್ ಉರಿ ಉಂಡಾಲ ಪಾದೆಯಲ್ಲಿ ನೆಲೆ ನಿಂತಿರುವ ಬ್ರಹ್ಮ ಬೈದೆರುಗಳ ಗರಡಿ ಸಮಗ್ರ ಜೀರ್ಣೋದ್ದಾರ ಕೆಲಸ ನಡೆಯುತ್ತಿದ್ದು, ಅ ಪ್ರಯುಕ್ತ ದಿನಾಂಕ: 28/12/2025 ಆದಿತ್ಯವಾರ ಸಂಜೆ 4 ಗಂಟೆಗೆ ಸರಿಯಾಗಿ, ಶ್ರೀ ಬ್ರಹ್ಮ ಬೈದೆರುಗಳ ಗರಡಿ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಳಶಾಭಿಷೇಕ ನಡೆಸುವ ಬಗ್ಗೆ ಸಮಾಲೋಚನಾ ಸಭೆ ನಡೆಯಲಿದೆ.

ಎಲ್ಲಾ ಗುತ್ತು ಬರ್ಕೆ ನಟ್ಟಿಲ್ ಮನೆಯವರು ಮತ್ತು ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ವಿನಂತಿ.

ಅಧ್ಯಕ್ಷರು ಹಾಗೂ ಸರ್ವ ಸದಸ್ಯರು 

ಪಾದೂರು ಕಳತ್ತೂರು ಶ್ರೀ ಬ್ರಹ್ಮ ಬೈದೆರುಗಳ ಜೀರ್ಣೋದ್ದಾರ ಸಮಿತಿ 

ಕಳತ್ತೂರು ಗ್ರಾಮ

ಜನವರಿ 25 ರಂದು ಕುಲಾಲ ಸಂಘ (ರಿ.) ಕಾಪು ವಲಯ ಅಶ್ರಯದಲ್ಲಿ ಜಿಲ್ಲಾ ಮಟ್ಟದ ಕುಲಾಲ ಕ್ರೀಡೋತ್ಸವ 2026

Thumbnail
Posted On: 26 Dec 2025, 07:35 PM

ಕಾಪು : ಸ್ನೇಹಕ್ಕಾಗಿ ಕ್ರೀಡೆ, ಏಳಿಗೆಗಾಗಿ ಕ್ರೀಡೆ, ಒಗ್ಗಟ್ಟಿಗಾಗಿ ಕ್ರೀಡೆ ಎಂಬ ನಿಟ್ಟಿನಲ್ಲಿ ತಾಲೂಕಿನ ಕುಲಾಲ ಸಂಘ(ರಿ)ಕಾಪು ವಲಯ ಹಾಗೂ ಮಹಿಳಾ ಘಟಕ, ಕಾಪು ಕುಲಾಲ ಯುವ ವೇದಿಕೆ ನೇತೃತ್ವದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಕುಲಾಲ ಸಮಾಜ ಬಾಂಧವರಿಗೆ ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಟ, ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ 100 ಮೀ ಓಟ,ಗುಂಡು ಎಸೆತ,ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮ ಜನವರಿ 25 ರಂದು ಉಚ್ಚಿಲ ಸರಸ್ವತಿ ಮಂದಿರ ಶಾಲಾ ಮೈದಾನದಲ್ಲಿ ನಡೆಯಲಿದೆ.

ಆಯಾಯ ಸ್ಪರ್ಧೆಗೆ ನಗದು ಜೊತೆಗೆ ಕುಲಾಲ ಶಾಶ್ವತ ಫಲಕ ನೀಡಲಾಗುವುದು ಎಂದು ಕಾಪು ಕುಲಾಲ ಸಂಘದ ಅಧ್ಯಕ್ಷರು,,ಪ್ರಸ್ತುತ ಎಲ್ಲೂರು ಗ್ರಾಮ ಪಂಚಾಯತ್ ಸದಸ್ಯರು ಶ್ರೀ ಹರೀಶ್ ಮೂಲ್ಯ ಬೆಳ್ಳಿಬೆಟ್ಟು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ಗೆ ಸಂಪರ್ಕಿಸಬಹುದು... 9686122892, 9964194509, 9686945501

ಪಾದಚಾರಿಗೆ ಹಿಂದಿನಿಂದ ಬಂದು ಬೈಕ್ ಅಪಘಾತ. ಪೆರ್ಡೂರು ಕುಕ್ಕೆಹಳ್ಳಿನಿವಾಸಿ ದಿನೇಶ್ ಕುಲಾಲ್ ತೀವ್ರ ಅಶ್ವಸ್ತ

Thumbnail
Posted On: 26 Dec 2025, 07:02 PM

ಪೆರ್ಡೂರು : ಪೆರ್ಡೂರು ಭಾಗದ ಕುಕ್ಕೆಹಳ್ಳಿ ಬಡಪಾಲು ನರಸಿಂಹ ಕುಲಾಲ್ ಮಗ ದಿನೇಶ್ ಕುಲಾಲ್ ವೃತ್ತಿಯಲ್ಲಿ ಉಡುಪಿಯಲ್ಲೊಂದು ಕ್ಯಾಂಟಿನ್ ನಲ್ಲಿ ದಿನಕೂಲಿ ದುಡಿಯುವವರು.

ತನ್ನ ಕುಟುಂಬ ಪಾಲನೆಯ ಜೊತೆಯಲ್ಲಿ ದಿನ ಸಾಗಿಸುತ್ತಿದ್ದ ದಿನೇಶ್ ಕೆಲಸ ಮುಗಿಸಿಕೊಂಡು ಹೋಗುವ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಬೈಕ್ ಸವಾರ ಹಿಂಬದಿಯಿಂದ ಡಿಕ್ಕಿ ಹೊಡೆದು ದಿನೇಶ್ ತಲೆಗೆ ಪೆಟ್ಟಾಗಿದ್ದು ಪರಿಣಾಮ ಕಳೆದ ಮೂರು ದಿನದಿಂದ ಮಣಿಪಾಲ ಹಾಸ್ಪಿಟಲ್ನಲ್ಲಿ ತುರ್ತು ಚಿಕಿತ್ಸೆ ನಿಗಮದಲ್ಲಿರುವರು..ಮುಗ್ದದ ಮನೋಭಾವನೆಯ ಇವರ ಕುಟುಂಬಕ್ಕೆ ಆದಷ್ಟು ಸಹಾಯ ಆಗೋಣ..

Contact : 9844 344157

ದಿನೇಶ್ ಅವರ ಪತ್ನಿ ಸವಿತರವರ ಬ್ಯಾಂಕ್ ಡೀಟೇಲ್ಸ್..

Name : savitha..

Bank Name : Union Bank Perdoor Branch.

A/C NO : 170522010001052

IFSC CODE : UBIN0917052

ಉಡುಪಿ : ವಿದ್ಯಾಲತಾ ಶೆಟ್ಟಿ ಅಭಿಮಾನಿ ಬಳಗ ಆಶ್ರಯದಲ್ಲಿ ಉದ್ಘಾಟನೆಯ ಪ್ರಯುಕ್ತ ಮೆಹೆಂದಿ ಸ್ಪರ್ಧೆ

Thumbnail
Posted On: 24 Dec 2025, 10:09 PM

ಉಡುಪಿ : ವಿದ್ಯಾಲತಾ ಶೆಟ್ಟಿ ಅಭಿಮಾನಿ ಬಳಗ, ಉಡುಪಿ ಇವರ ಆಶ್ರಯದಲ್ಲಿ  ಉದ್ಘಾಟನೆಯ ಪ್ರಯುಕ್ತ ಮೆಹೆಂದಿ ಸ್ಪರ್ಧೆ
ಡಿಸೆಂಬರ್ 25 ರಂದು ಮಧ್ಯಾಹ್ನ 2 ಗಂಟೆಗೆ ನಮಿತಾ ನಿವಾಸ, ಅಬಕಾರಿ ಭವನ ಎದುರು, ನಾಯರ್ ಕೆರೆ ರೋಡ್, ಉಡುಪಿ ಇಲ್ಲಿ ಜರಗಲಿದೆ.

ಪ್ರಥಮ ಬಹುಮಾನವಾಗಿ ಶಾಶ್ವತ ಫಲಕ, ಪ್ರಶಸ್ತಿ ಪತ್ರ ಹಾಗೂ ನಗದು, ದ್ವಿತೀಯ ಬಹುಮಾನ ಶಾಶ್ವತ ಫಲಕ, ಪ್ರಶಸ್ತಿ ಪತ್ರ ಹಾಗೂ ನಗದು, ತೃತೀಯ ಬಹುಮಾನ ಶಾಶ್ವತ ಫಲಕ, ಪ್ರಶಸ್ತಿ ಪತ್ರ ಹಾಗೂ ನಗದು ಇರಲಿದೆ. ಜೊತೆಗೆ ಆಕರ್ಷಕ ಬಹುಮಾನಗಳು ಹಾಗೂ
ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಲಾಗುವುದು.

ಈ ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರುವ ಮಹಿಳೆಯರಿಗೆ ಸೀರೆಯ ನಿಖರ ಬೆಲೆ ಹೇಳುವ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳು ನಡೆಯಲಿವೆ.

ಸಮರೋಪ ಸಮಾರಂಭದಲ್ಲಿ ಉಡುಪಿಯ 5 ಮಹಿಳಾ ಚಂಡೆ ತಂಡಗಳನ್ನು ಗೌರವಿಸಲಾಗುವುದು. ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೋತ್ಸಾಹಿಸಬೇಕೆಂದು ಸಂಚಾಲಕರು ಹಾಗೂ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ವಿದ್ಯಾಲತಾ ಶೆಟ್ಟಿ ಬನ್ನಂಜೆ ಅಭಿಮಾನಿ ಬಳಗ, ಉಡುಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ:
8105501903, 9148533269, 
8050695853, 9591272479

ಡಿ.25 (ನಾಳೆ) : ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ಜ್ಞಾನ ದೀವಿಗೆ - 2025

Thumbnail
Posted On: 24 Dec 2025, 09:56 PM

ಕಾಪು : ಬಿರುವೆರ್ ಕಾಪು ಸೇವಾ ಸಮಿತಿ (ರಿ.)ವತಿಯಿಂದ 5ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಸಮಾರಂಭ
"ಜ್ಞಾನ ದೀವಿಗೆ - 2025" ಡಿ.25, ಗುರುವಾರ ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಕಾಪು ಇಲ್ಲಿ ಮಧ್ಯಾಹ್ನ 2.30 ರಿಂದ ಜರಗಲಿದೆ.
ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮೂಲ್ಕಿ ಇದರ ಅಧ್ಯಕ್ಷರಾದ ಸೂರ್ಯಕಾಂತ್ ಜೆ.ಸುವರ್ಣ ವಿದ್ಯಾರ್ಥಿವೇತನ ವಿತರಿಸಲಿದ್ದಾರೆ. 
ಜೇಸಿಐ ಭಾರತ ರಾಷ್ಟ್ರೀಯ ತರಬೇತಿದಾರ ದೀಪಕ್ ರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಕಪ್ಪ ಅಮಿನ್ ವಕೀಲರು, ಕಾನೂನು ಸಲಹೆಗಾರರು ಮತ್ತು ಬಿರುವೆರ್ ಕಾಪು ಸೇವಾ ಸಮಿತಿ (ರಿ),  ವಿಕ್ರಂ ಕಾಪು ಅಧ್ಯಕ್ಷರು, ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಕಾಪು ಮತ್ತು ಅಧ್ಯಕ್ಷರು ಕಾಪು ನಗರ ಯೋಜನಾ ಪ್ರಾಧಿಕಾರ, ಗೀತಾಂಜಲಿ ಸುವರ್ಣ ಕಟಪಾಡಿ ಮಾಜಿ ಸದಸ್ಯರು ಜಿಲ್ಲಾ ಪಂಚಾಯತ್,  ಪ್ರಭಾಕರ ಎಸ್.ಪೂಜಾರಿ ಕಾಪು ಗೌರವಾಧ್ಯಕ್ಷರು, ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಕಾಪು, ಸಂಜೀವ ಪೂಜಾರಿ ಮೂಳೂರು, ಪ್ರಭಾಕರ ಪೂಜಾರಿ ಉದ್ಯಮಿ, ಬಿಂದಾಸ್ ಕಾಪು, ಕೈಪುಂಜಾಲ್ ಭಾಗವಹಿಸಲಿದ್ದಾರೆ.

ವಿವಿಧ ಕ್ಷೇತ್ರಗಳ ಸಾಧಕರಾದ ಪ್ರಭಾಕರ ಎಸ್.ಪೂಜಾರಿ,  ವಿಕ್ರಂ ಕಾಪು, ಸೂರ್ಯಕಾಂತ್ ಜೆ. ಸುವರ್ಣ, ಶಿವಾನಂದ ಕೋಟ್ಯಾನ್ ಕಟಪಾಡಿ, ನವೀನ್ ಅಮಿನ್ ಕಂಕರಪುರ, ಸಂಜೀವ ಪೂಜಾರಿ ಮೂಳೂರು,  ಸುಧಾಕರ ಸಾಲ್ಯಾನ್, ವಿಕ್ಕಿ ಮಡುಂಬು,  ರಾಘು ಸಿ.ಪೂಜಾರಿ ಮರ್ನಾಡ್ ಸನ್ಮಾನಿಸಲ್ಪಡಲಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು ಬಿರುವೆರ್ ಕಾಪು ಸೇವಾ ಸಮಿತಿ (ರಿ.) ಉಪಾಧ್ಯಕ್ಷರಾದ  ಮನೋಜ್ ಎಸ್. ಅಂಚನ್ ಕಾಪು ವಹಿಸಲಿದ್ದಾರೆ ಎಂದು ಬಿರುವೆರ್ ಕಾಪು ಸೇವಾ ಸಮಿತಿ ಪ್ರಕಟಣೆ ತಿಳಿಸಿದೆ.

ಸಮಾಜಮುಖಿ ವ್ಯಕ್ತಿತ್ವ ಸ್ಫೂರ್ತಿದಾಯಕ: ಉಷಾ ಎಸ್.

Thumbnail
Posted On: 22 Dec 2025, 10:03 AM

​​​​​ಶಿರ್ವ : ಆರ್.ಎಸ್. ಬೆಳ್ಳೆಯವರು ತಮ್ಮ ಇಡೀ ಜೀವನವನ್ನು ಶಿಕ್ಷಣ ಮತ್ತು ಸಮಾಜಕ್ಕಾಗಿ ಮೀಸಲಿರಿಸಿದ್ದರು. ನಿಸ್ವಾರ್ಥ, ದ್ವೇಷ ರಹಿತ ಹಾಗೂ ಸೌಹಾರ್ದದ ಮನೋಭಾವದ ಮೂಲಕ ಪ್ರತಿಯೊಬ್ಬರಲ್ಲೂ ಆತ್ಮೀಯರೆನಿಸಿಕೊಂಡಿದ್ದರು. ಗ್ರಾಮೀಣಾಭಿವೃದ್ಧಿಯ ಕನಸು ಕಂಡು ಅದನ್ನು ಸಾಕಾರಗೊಳಿಸಲು ಅವಿರತ ಶ್ರಮಿಸಿದ ಅವರ ಸಮಾಜಮುಖಿ ವ್ಯಕ್ತಿತ್ವ ಸ್ಫೂರ್ತಿದಾಯಕವಾಗಿದೆ ಎಂದು ಪಡುಬೆಳ್ಳೆ ಶ್ರೀ ನಾರಾಯಣಗುರು ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಉಷಾ ಎಸ್. ಅವರು ಹೇಳಿದರು. 
ಅವರು ರವಿವಾರ ಪಾಂಬೂರು ವಿದ್ಯಾಜ್ಯೋತಿಯಲ್ಲಿ ಜರಗಿದ ಸಮಾಜಸೇವಕ, ನಿವೃತ್ತ ಮುಖ್ಯ ಶಿಕ್ಷಕ ಆರ್.ಎಸ್. ಬೆಳ್ಳೆ ಸಂಸ್ಮರಣಾ ವಾರ್ಷಿಕ ಉಪನ್ಯಾಸ ಹಾಗೂ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಪಾಂಬೂರು ಹೋಲಿಕ್ರಾಸ್ ಚರ್ಚಿನ ಪ್ರಧಾನ ಧರ್ಮಗುರು ರೆ|ಡಾ| ರೋಶನ್ ಡಿಸೋಜಾ ಅವರು ರಿಚಾರ್ಡ್ ದಾಂತಿ ಪಾಂಬೂರು ಅವರು ಬರೆದ 'ಧೀಶಕ್ತಿ: ಶಿಕ್ಷಣ, ಸಾಮಾಜಿಕ ಕ್ಷೇತ್ರದ ಮೇರುವ್ಯಕ್ತಿ ಆರ್.ಎಸ್. ಬೆಳ್ಳೆ' ಕೃತಿಯನ್ನು ಬಿಡುಗಡೆಗೊಳಿಸಿದರು.
ನಿವೃತ್ತ ಮುಖ್ಯಶಿಕ್ಷಕ ರವೀಂದ್ರ ಪಡುಬೆಳ್ಳೆ, ನಿವೃತ್ತ ಶಿಕ್ಷಕ ರಿಚಾರ್ಡ್ ಸಲ್ಡಾನ್ಹಾ ಅವರಿಗೆ ಆರ್.ಎಸ್. ಬೆಳ್ಳೆ ಸ್ಮಾರಕ ಪುರಸ್ಕಾರವನ್ನು ಮೂಡುಬೆಳ್ಳೆ ಸೈಂಟ್ ಲಾರೆನ್ಸ್ ಚರ್ಚ್‌ನ ಮಾಜಿ ಉಪಾಧ್ಯಕ್ಷ, ಬೆಳ್ಳೆ ಸೊಸೈಟಿ ನಿರ್ದೇಶಕರಾದ ವಿನ್ಸೆಂಟ್ ಫೆರ್ನಾಂಡಿಸ್ ಅವರು ಪ್ರದಾನ ಮಾಡಿದರು. 

ಬೆಳ್ಳೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಧಾಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳೆ ಸೊಸೈಟಿ ನಿರ್ದೇಶಕ ಬೆಳ್ಳೆ ಪಠೇಲ್‌ಮನೆ ದಯಾನಂದ ಶೆಟ್ಟಿ, ದ.ಸಂ.ಸ. ಅಂಬೇಡ್ಕರ್ ವಾದ ಕಾಪು ತಾಲೂಕು ಶಾಖೆಯ ಸಂಘಟನಾ ಸಂಚಾಲಕ ಕೃಷ್ಣ ಮೂಡುಬೆಳ್ಳೆ, ಸಿ.ಎ. ಸ್ಟೀವನ್ ಮೆಂಡೋನ್ಸಾ, ಗಣೇಶ್ ತಂತ್ರಿ, ಆಲ್ಫೋನ್ಸ್ ಕೆ. ಆಳ್ವಾ, ಸ್ಯಾಮ್ಸನ್ ನೊರೋನ್ಹಾ, ಮುರಳೀಧರ ಸಾಮಗ ಉಪಸ್ಥಿತರಿದ್ದರು.

ಸಾಮಾಜಿಕ ಕಾರ್ಯಕರ್ತ ಶ್ರೀರಾಮ ದಿವಾಣ ಕೃತಿ ಪರಿಚಯ ಮಾಡಿದರು. ಸಂಘಟಕ ರಿಚಾರ್ಡ್ ದಾಂತಿ ಸ್ವಾಗತಿಸಿದರು. ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ನಿರೂಪಿಸಿ ವಂದಿಸಿದರು.

ಕಾಪು ವಿದ್ಯಾನಿಕೇತನ್ ಪಬ್ಲಿಕ್ ಶಾಲೆ : 33ನೇ ಶಾಲಾ ವಾರ್ಷಿಕೋತ್ಸವ ವಿದ್ಯೋತ್ಸವ ಸಂಪನ್ನ

Thumbnail
Posted On: 22 Dec 2025, 09:56 AM

ಕಲಿಕೆಯಲ್ಲಿ ಜಾತಿ ಮುಖ್ಯವಲ್ಲ. ಗುರುಗಳು ಮುಖ್ಯ : ಚಲನಚಿತ್ರ ನಟ ಅರವಿಂದ ಬೋಳಾರ್ 

ಕಾಪು : ಕಲಿಕೆಯಲ್ಲಿ ಜಾತಿ ಮುಖ್ಯವಲ್ಲ. ಗುರುಗಳು ಮುಖ್ಯ. ಸಣ್ಣವರಿರುವಾಗಲೇ ಪ್ರತಿಭೆಯನ್ನು ಗುರುತಿಸಿ ಪೋಷಿಸಿದ್ದಲ್ಲಿ ದೊಡ್ಡವರಾದಾಗ ಸಾಧಕರಾಗಲು ಸಾಧ್ಯ ಎಂದು ಚಲನಚಿತ್ರ ನಟ ಅರವಿಂದ ಬೋಳಾರ್ ಹೇಳಿದರು‌.
ಅವರು ವಿದ್ಯಾನಿಕೇತನ್ ಪಬ್ಲಿಕ್ ಶಾಲೆ ಕಾಪು  ಇದರ 33ನೇ ಶಾಲಾ ವಾರ್ಷಿಕೋತ್ಸವ  ವಿದ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಶಾಲೆಯ ಶಿಕ್ಷಕರ ಬೈಗುಳವು ಮುಂದೆ ಪ್ರತಿಭಾ ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಪಡೆದುಕೊಳ್ಳಲು ಪ್ರೇರೆಪಿಸಿದ ಕ್ಷಣವನ್ನು ನೆನಪಿಸಿಕೊಂಡರು. 

ಶ್ರೀ ಭಗವತಿ ಕ್ಷೇತ್ರ ಸಸಿಹಿತ್ಲು ಇಲ್ಲಿನ ಅನುವಂಶಿಕ ಆಡಳಿತ ಮೊಕ್ತೇಸರರಾದ
ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.

ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸಂತಸದೊಂದಿಗೆ ಕಲಿಕೆ ಸಾಗಬೇಕು. ಮಕ್ಕಳನ್ನು ಅವಮಾನ ಮಾಡದೆ, ಅವರ ಕಲಿಕೆಗೆ ಪ್ರೋತ್ಸಾಹದಾತರಾಗಬೇಕು.
ಕೆ.ಪಿ ಆಚಾರ್ಯರ ದಿಟ್ಟತನದಿಂದ ಮೂಡಿದ ಸಂಸ್ಥೆ ವಿದ್ಯಾನಿಕೇತನವಾಗಿದೆ.

ವಿದ್ಯಾರತ್ನ ಪ್ರಶಸ್ತಿ/ ಬಹುಮಾನ ವಿತರಣೆ : ಕಾಪುವಿನ ಚಿತ್ರಕಲಾ ಪ್ರತಿಭೆ ಕುಮಾರಿ ರಕ್ಷಾ ಆರ್ ಪೂಜಾರಿಯವರಿಗೆ ವಿದ್ಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಲಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮಣಿಪಾಲ ಜ್ಞಾನಸುಧ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಶ್ರೀ ಗುರು ತಿಲಕನಾಥ ಸ್ವಾಮಿ ಕ್ಷೇತ್ರ ಮುಳಿಹಿತ್ಲು ಇದರ ಆಡಳಿತ ಮೊಕ್ತೇಸರ ಉಮಾನಾಥ ಕಾಪು, ಪತ್ರಕರ್ತರಾದ ರಾಕೇಶ್ ಕುಂಜೂರು, ಹಳೆ ವಿದ್ಯಾರ್ಥಿ ಸಕ್ಷತ್ ಶೆಟ್ಟಿ, ಚಿತ್ರಕಲಾವಿದೆ 
ರಕ್ಷಾ ಆರ್ ಪೂಜಾರಿ, ಸಂಚಾಲಕರಾದ ಕೆ.ಪಿ.ಆಚಾರ್ಯ, ಸಹ ಮ್ಯಾನೇಜಿಂಗ್ ಟ್ರಸ್ಟಿ ಶ್ವೇತಾ ಆಚಾರ್ಯ, ಪ್ರಾಂಶುಪಾಲರಾದ ಸಾಕ್ಷತ್ ಯುಕೆ, ಉಪ ಪ್ರಾಂಶುಪಾಲೆ ನಿಶ್ಮಿತ ಸನಿಲ್, ಕ್ಯಾಂಪಸ್ ಮ್ಯಾನೇಜರ್ ರಾಜೇಶ್ ವೈ, ಕಾರ್ಯಕ್ರಮ ಸಂಚಾಲಕರಾದ ಶೋಭಾ, ಆಶಿತಾ ಉಪಸ್ಥಿತರಿದ್ದರು.

ಆಶಿತಾ ಸ್ವಾಗತಿಸಿದರು. ಪ್ರಾಂಶುಪಾಲರಾದ ಸಾಕ್ಷತ್ ಯುಕೆ ವರದಿ ವಾಚಿಸಿದರು. ಶಿಕ್ಷಕಿಯರಾದ ಶೋಭಾ, ಆಶಿತಾ ಬಹುಮಾನಿತರ ಪಟ್ಟಿ ವಾಚಿಸಿದರು.
ವಿದ್ಯಾರ್ಥಿಗಳಾದ ಸಾತ್ವಿಕಾ ಮತ್ತು ರಾನಿಯಾ ಕಾರ್ಯಕ್ರಮ ನಿರೂಪಿಸಿದರು.