Updated News From Kaup

ಜುಲೈ 14 : ಮಿನಿ ಉದ್ಯೋಗ ಮೇಳ

Posted On: 11-07-2023 09:37PM

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉಡುಪಿ : ಬಡತನ ಮತ್ತು ಅಜ್ಞಾನದಿಂದ ಜನಸಂಖ್ಯೆ ಹೆಚ್ಚಳ - ನ್ಯಾ. ಶರ್ಮಿಳಾ ಎಸ್

Posted On: 11-07-2023 09:17PM

ಉಡುಪಿ : ದೇಶದಲ್ಲಿ ಹೆಚ್ಚಾಗುತ್ತಿರುವ ಜನಸಂಖ್ಯಾ ಸಮಸ್ಯೆಗೆ ಬಡತನ, ಅಜ್ಞಾನ ಮತ್ತು ಮೂಢನಂಬಿಕೆ ಮುಂತಾದವುಗಳು ಕಾರಣವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಇಂದು ನಗರದ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾಪು : ಇನ್ನಂಜೆಯಲ್ಲಿ ಕಂಡೊಡೊಂಜಿ ದಿನ‌ ಸಂಪನ್ನ

Posted On: 09-07-2023 10:38PM

ಕಾಪು : ಜೇಸಿಐ ಶಂಕರಪುರ ಜಾಸ್ಮಿನ್, ಸೀನಿಯರ್ ಛೆಂಬರ್ ಇಂಟರ್‌ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲೀಜನ್, ಯುವಕ ಮಂಡಲ (ರಿ.) ಇನ್ನಂಜೆ, ಯುವತಿ ಮಂಡಲ (ರಿ.) ಇನ್ನಂಜೆ, ರೋಟರಿ ಸಮುದಾಯದಳ ಇನ್ನಂಜೆ, ಬಿಲ್ಲವ ಸಂಘ ಇನ್ನಂಜೆ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ, ಟೆಂಪೋ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ ಸಂಯುಕ್ತ ಆಶ್ರಯದಲ್ಲಿ ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟ ಕಂಡೊಡೊಂಜಿ ದಿನ‌ ಭಾನುವಾರ ತೆಂಡೆಮನೆ ಮಾರ್ಕೆಟ್ ರೋಡ್ ಇನ್ನಂಜೆ ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಸೀನಿಯರ್ ಛೆಂಬ‌ರ್ ಇಂಟರ್ ನ್ಯಾಷನಲ್ ನ ರಾಷ್ಟ್ರೀಯ ಉಪಾಧ್ಯಕ್ಷರಾದ ಎಸ್ಎನ್ಆರ್ ನವೀನ್ ಅಮೀನ್ ಉದ್ಘಾಟಿಸಿದರು.

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಭೇಟಿಯಾದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ

Posted On: 09-07-2023 08:35PM

ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿದ್ದು,  ಈ ಸಲುವಾಗಿ ಭಾನುವಾರ ಸಂಜೆ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಕರಿಸುವಂತೆ ಮನವಿ ಸಲ್ಲಿಸಲಾಯಿತು.

ಕಾಪು : ಹೊಸ ಮಾರಿಗುಡಿ ದೇವಸ್ಥಾನ - ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆ ಅಭಿಯಾನಕ್ಕೆ ಶಾಸಕರಿಂದ ಚಾಲನೆ

Posted On: 09-07-2023 04:08PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ "ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆ ಅಭಿಯಾನ" ಜುಲೈ 9 ರಿಂದ ಅಕ್ಟೋಬರ್ 15 ರ ವರೆಗೆ ನಡೆಯಲಿದ್ದು, ಈ ಸಲುವಾಗಿ ಜುಲೈ 9 ರಂದು ನಡೆದ "ದೀಕ್ಷಾ ದೀಪ ಪ್ರಜ್ವಲನ ಕಾರ್ಯಕ್ರಮಕ್ಕೆ" ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಉಡುಪಿ : 21 ನೇ ವಷ೯ದ ವೈದ್ಯರ ದಿನಾಚರಣೆ ಮತ್ತು ವೈದ್ಯರ ಅಭಿನಂದನಾ ಸಮಾರಂಭ ಸಂಪನ್ನ

Posted On: 09-07-2023 03:59PM

ಉಡುಪಿ : ಕನಾ೯ಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಉಡುಪಿ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಬ್ರಹ್ಮಾವರ ರೋಯಲ್ ಇನ್ ಸಭಾಂಗಣದಲ್ಲಿ ಜುಲೈ 8ರಂದು 21 ನೇ ವಷ೯ದ ವೈದ್ಯರ ದಿನಾಚರಣೆ ಮತ್ತು ವೈದ್ಯರ ಅಭಿನಂದನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿ ಕೆ.ಎಂ.ಸಿ ಮಣಿಪಾಲದ ಡೀನ್ ಯುರಾಲಜಿ ವಿಭಾಗದ ಪ್ರಾಧ್ಯಾಪಕ ಡಾ| ಪದ್ಮರಾಜ್ ಹೆಗ್ಡೆ ಮಾತನಾಡಿ, ವೈದ್ಯರು ತಮ್ಮ ಹೆಚ್ಚಿನ ಸಮಯವನ್ನು ರೋಗಿಗಳ ಸೇವೆಯಲ್ಲಿ ಕಳೆಯುತ್ತಾರೆ. ಆದರೆ ರೋಗಿಗಳಿಗೆ ತೊಂದರೆಯಾದಾಗ ವೈದ್ಯರಿಗೆ ತೊಂದರೆ ಕೊಡುವುದು ಸರಿಯಲ್ಲ, ಇವರ ಸೇವೆಯನ್ನು ಸಮಾಜ ಗುರುತಿಸಿ ಅವರಿಗೆ ಗೌರವ ನೀಡುತ್ತಿರುವುದು ಅಭಿನಂದನೀಯ ಎಂದರು.

ಕಾಪು : ಕೊಂಬಗುಡ್ಡೆ ಮಲ್ಲಾರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ನೂತನ ಪಾಕಶಾಲೆ ಉದ್ಘಾಟನೆ

Posted On: 09-07-2023 02:05PM

ಕಾಪು : ಇಲ್ಲಿನ ಕೊಂಬಗುಡ್ಡೆ ಮಲ್ಲಾರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ನೂತನ ಪಾಕಶಾಲೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ರವಿವಾರ ಉದ್ಘಾಟಿಸಿದರು.

ಪಡುಬಿದ್ರಿ : ಶಿವಾಯ ಫೌಂಡೇಶನ್ ವತಿಯಿಂದ ಮಗುವಿನ ಚಿಕಿತ್ಸೆಗೆ ಸಹಾಯ ಹಸ್ತ

Posted On: 09-07-2023 08:04AM

ಪಡುಬಿದ್ರಿ : ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ 6 ವರ್ಷದ ಪುಟ್ಟ ಮಗು ಸಾನ್ವಿಯ ವೈದ್ಯಕೀಯ ಶುಶ್ರೂಷೆಗಾಗಿ ಶಿವಾಯ ಫೌಂಡೇಶನ್ ವತಿಯಿಂದ ಒಂದು ಲಕ್ಷ ರೂಪಾಯಿ ಮೊತ್ತದ ಚೆಕ್ ನ್ನು ಸಾನ್ವಿಯ ತಂದೆಯವರಿಗೆ ಹಸ್ತಾಂತರಿಸಿ, ಸಾನ್ವಿ ಆದಷ್ಟು ಬೇಗ ಗುಣಮುಖಲಾಗಳೆಂದು ಪಡುಬಿದ್ರಿಯ ಪಾದೆಬೆಟ್ಟು ಸುಬ್ರಹ್ಮಣ್ಯ ದೇವರ ಸನ್ನಿಧಾನದಲ್ಲಿ ಪ್ರಾರ್ಥಿಸಲಾಯಿತು.

ಪಡುಬಿದ್ರಿ : ಕಡಲ್ಕೊರೆತ ಪ್ರದೇಶಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ; ಶಾಶ್ವತ ಪರಿಹಾರದ ಭರವಸೆ

Posted On: 08-07-2023 10:49PM

ಪಡುಬಿದ್ರಿ : ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಅವರು ಇಂದು ಪಡುಬಿದ್ರಿಯ ಕಾಡಿಪಟ್ಣದಲ್ಲಿ ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾತನಾಡಿದರು.

ಕಾಪು : ನೆಲ್ಲಿಕಟ್ಟೆಯಲ್ಲಿ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ

Posted On: 08-07-2023 10:22PM

ಕಾಪು : ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮೂಡುಬೆಳ್ಳೆ ಘಟಕದ ವತಿಯಿಂದ ನೆಲ್ಲಿಕಟ್ಟೆಯಲ್ಲಿ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆಗೊಂಡಿತು.