Updated News From Kaup

ಕಾರ್ಕಳ : ಕ್ರಿಯೇಟಿವ್‌ ಕಾಲೇಜು - ಕ್ರಿಯೇಟಿವ್‌ ಸಮಾಗಮ

Posted On: 08-07-2023 04:39PM

ಕಾರ್ಕಳ : ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇದರ ವತಿಯಿಂದ ದಿನಾಂಕ ಜುಲೈ 7ರಂದು 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ʼಕ್ರಿಯೇಟಿವ್‌ ಸಮಾಗಮʼ ಕಾಲೇಜಿನ ನೇಸರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ವಾರ್ಷಿಕ ಸಂಚಿಕೆ “ಸಪ್ತಸ್ವರ”ವನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿಯವರು ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.

ಜುಲೈ 9 (ನಾಳೆ) : ಕಾಪು ಹೊಸಮಾರಿಗುಡಿ ದೇವಸ್ಥಾನ - ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆಗೊಳಿಸುವ ಮಹಾಅಭಿಯಾನಕ್ಕೆ ಚಾಲನೆ

Posted On: 08-07-2023 04:28PM

ಕಾಪು : ಇಲ್ಲಿನ ಹೊಸಮಾರಿಗುಡಿ ದೇವಸ್ಥಾನವು ಸಂಪೂರ್ಣ ಇಳಕಲ್ ಕೆಂಪು ಶಿಲೆಯೊಂದಿಗೆ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಪ್ರಥಮ ಹಂತದ ಕಾಮಗಾರಿಯು ಭರದಿಂದ ಸಾಗುತ್ತಿದ್ದು ಜೀರ್ಣೋದ್ಧಾರದ ಅಂಗವಾಗಿ 9 ಶಿಲಾಸೇವೆ ಸಮರ್ಪಿಸಿ ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸದಸ್ಯರನ್ನು ಸೇರ್ಪಡೆ ಗೊಳಿಸುವ ಮಹಾಅಭಿಯಾನಕ್ಕೆ ಜುಲೈ 9 ರಂದು ಅಮ್ಮನ ಸನ್ನಿಧಿಯಲ್ಲಿ ಚಾಲನೆ ನೀಡಲಾಗುವುದು. ಮಹಾಅಭಿಯಾನದ ಮೂಲಕ 9 ಶಿಲಾ ಸೇವೆ ಸಮರ್ಪಿಸುವ ಕನಿಷ್ಟ ಒಂಭತ್ತು ಸದಸ್ಯರನ್ನು ಕಾಪುವಿನ ಅಮ್ಮನ‌ ಮಕ್ಕಳು ತಂಡಕ್ಕೆ ಸೇರ್ಪಡೆಗೊಳಿಸುವ ಸಮಿತಿ ಸದಸ್ಯರು ದೀಕ್ಷಾ ದೀಪ ಪ್ರಜ್ವಲನೆ ನಡೆಸಿ ಸಂಕಲ್ಪ ಸ್ವೀಕರಿಸಲಿದ್ದಾರೆ.

ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಗೆ ಮಾತೃ ವಿಯೋಗ

Posted On: 08-07-2023 11:26AM

ಕಾಪು : ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆಗಿರುವಂತಹ ವಿನಯ್ ಕುಮಾರ್ ಸೊರಕೆ ರವರ ತಾಯಿ ಶ್ರೀಮತಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ.

ಕಾಪು : ದೇಸಿಕ್ರ್ಯೂ ಸೊಲ್ಯೂಷನ್ಸ್ ಸರ್ವಿಸ್ ಪ್ರೈ.ಲಿಮಿಟೆಡ್ - ವನಮಹೋತ್ಸವ

Posted On: 07-07-2023 07:47PM

ಕಾಪು : ದೇಸಿಕ್ರ್ಯೂ ಸೊಲ್ಯೂಷನ್ಸ್ ಸರ್ವಿಸ್ ಪ್ರೈ.ಲಿಮಿಟೆಡ್ ಇವರ ಆಶ್ರಯದಲ್ಲಿ ‌ಕಾಪುವಿನಲ್ಲಿ‌ ವನಮಹೋತ್ಸವ ಆಚರಿಸಲಾಯಿತು.

ಪಡುಬಿದ್ರಿ : ಕಡಲ್ಕೊರೆತ ; ಕೈರಂಪಣಿ ಗೋದಾಮು ಸಮುದ್ರ ಪಾಲು

Posted On: 07-07-2023 07:31PM

ಪಡುಬಿದ್ರಿ : ಮಳೆ ಅಬ್ಬರ ಕೊಂಚ ಕಡಿಮೆಯಾದರೂ ಕಡಲಾರ್ಭಟ ಇನ್ನೂ ನಿಂತಿಲ್ಲ. ಪಡುಬಿದ್ರಿಯ ಕಾಡಿಪಟ್ಣ ಮುಖ್ಯ ಬೀಚ್ ನಲ್ಲಿರುವ ಇಂಟರ್ಲಾಕ್ ಮತ್ತು ತೆಂಗಿನ ಮರಗಳು ಕಡಲ್ಕೊರೆತದ ಹಾವಳಿಗೆ ಸಿಲುಕಿವೆ.

ಜುಲೈ 7 (ನಾಳೆ) : ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

Posted On: 06-07-2023 08:55PM

ಉಡುಪಿ : ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮುಂಗಾರು ಮಳೆಯ ಆರ್ಭಟ ಬುಧವಾರ ಕೂಡ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ಜುಲೈ 7 (ಶುಕ್ರವಾರ) ರಂದು ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಸುತ್ತೋಲೆ ಪ್ರಕಟಿಸಿದೆ.

ಕಾಪು : ತಾಲೂಕಿನ ಜಲಾವೃತಗೊಂಡ ಸ್ಥಳದಲ್ಲಿದ್ದ ಕುಟುಂಬಗಳ ಸ್ಥಳಾಂತರ

Posted On: 06-07-2023 08:43PM

ಕಾಪು : ತಾಲೂಕಿನಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಕೆಲವೊಂದು ಪ್ರದೇಶಗಳು ಜಲಾವೃತಗೊಂಡಿದ್ದು ಈ ಭಾಗದಲ್ಲಿದ್ದ ಕುಟುಂಬಗಳನ್ನು ತಾಲೂಕು ಆಡಳಿತ, ಗ್ರಾಮ ಪಂಚಾಯತ್ ಗಳ ಮುತುವರ್ಜಿಯಿಂದ ಸ್ಥಳಾಂತರಗೊಳಿಸಲಾಗಿದೆ.

ಕಾಪು : ಜಲಾವೃತವಾದ ಪ್ರದೇಶಗಳಿಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭೇಟಿ

Posted On: 06-07-2023 07:52PM

ಕಾಪು : ಧಾರಾಕಾರ ಮಳೆಯಿಂದ ಕಟಪಾಡಿಯ ಮಟ್ಟು ಅಣೆಕಟ್ಟು ಸಂಪೂರ್ಣವಾಗಿ ತುಂಬಿ ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು ಈ ಪ್ರದೇಶಕ್ಕೆ ಮತ್ತು ತಾಲೂಕಿನ ಮಜೂರು ಬ್ರಹ್ಮ ಬೈದರ್ಕಳ ಗರಡಿ ಇಲ್ಲಿಗೆ ಹೋಗುವ ದಾರಿ ಹಾಗೂ ಗರಡಿಯು ಸಂಪೂರ್ಣ ಜಲಾವೃತಗೊಂಡಿದ್ದು ಅಪಾಯ ಮಟ್ಟದಲ್ಲಿದ್ದು ಇಲ್ಲಿಗೆ ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆರವರು ಇಂದು ಭೇಟಿ ನೀಡಿ ಸುತ್ತಮುತ್ತಲಿನ ಜನರಿಗೆ ಜಾಗೃತರಾಗಿರುವಂತೆ ತಿಳಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದರು.

ಕಾಪು : ಮೂಡುಬೆಳ್ಳೆಯಲ್ಲಿ ಟೀಂ ಭಗ್ವ ಯುವಕರ ತಂಡದ ಉದ್ಘಾಟನೆ

Posted On: 06-07-2023 07:14PM

ಕಾಪು : ಸಮಾಜದಲ್ಲಿರುವ ಅಶಕ್ತ ಕುಟುಂಬಕ್ಕೆ ನೆರವಾಗಲು, ಹಿಂದುತ್ವಕ್ಕೆ ಧಕ್ಕೆಯಾದಲ್ಲಿ ಪ್ರತಿಭಟಿಸಲು, ಸಮಾಜದಹಿತಕ್ಕಾಗಿ ಹಿಂದೂ ಸಮಾಜದ ಪರವಾಗಿ ಟೀಂ ಭಗ್ವ ಎಂಬ ಯುವಕರ ತಂಡವೊಂದು ರಚನೆಗೊಂಡಿದ್ದು ತಂಡದ ಉದ್ಘಾಟನೆಯನ್ನು ಜುಲೈ 5 ರಂದು ಮೂಡುಬೆಳ್ಳೆಯಲ್ಲಿ ಕಾಪು ಉದ್ಯಮಿ ಸುಧೀರ್ ಸೋನು ಹಾಗೂ ಸಂಘಟನೆಯ ಪ್ರಮುಖರಾದ ವಿಖ್ಯಾತ್ ಭಟ್ ನೆರವೇರಿಸಿದರು.

ಕಾಪು : ಅಮ್ಮನ ಆಲಯ ನಿರ್ಮಾಣ - ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಿತಿಯಿಂದ ಬೆಳ್ಳೆ ಗ್ರಾಮದ ಪ್ರಮುಖರ ಭೇಟಿ

Posted On: 05-07-2023 11:12PM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ "ಅಮ್ಮನ ಆಲಯ ನಿರ್ಮಾಣದ" ಬಗ್ಗೆ ದೇವಳದ ಸಮಿತಿಯ ಪ್ರಮುಖರು ಜುಲೈ 5 ರಂದು ಬೆಳ್ಳೆ ಗ್ರಾಮದ ಪ್ರಮುಖರನ್ನು ಭೇಟಿಯಾಗಿ ಬೆಳ್ಳೆ ಗ್ರಾಮದಲ್ಲಿ ಸಭೆಯನ್ನು ಮಾಡಿ ಗ್ರಾಮ ಸಮಿತಿಯನ್ನು ರಚಿಸುವ ಬಗ್ಗೆ ಕಾರ್ಯಪ್ರವೃತರಾಗುವಂತೆ ತಿಳಿಸಿ ಜೀರ್ಣೋದ್ಧಾರದ ಮನವಿಯನ್ನು ನೀಡಲಾಯಿತು.