Updated News From Kaup
ಜುಲೈ 5 (ನಾಳೆ) : ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Posted On: 04-07-2023 09:58PM
ಉಡುಪಿ : ಜಿಲ್ಲೆಯಲ್ಲಿ ಮಳೆಯ ಅಬ್ಬರವಿರುವ ಹಿನ್ನೆಲೆಯಲ್ಲಿ ಜುಲೈ 5 ರಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಇಲಾಖಾ ದರದಲ್ಲಿ ತೋಟಗಾರಿಕೆ ಸಸಿಗಳು ಲಭ್ಯ
Posted On: 04-07-2023 11:26AM
ಉಡುಪಿ : ತೋಟಗಾರಿಕೆ ಇಲಾಖೆಯ ವತಿಯಿಂದ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಕಸಿ/ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ - ಚಾತುರ್ಮಾಸ್ಯ ವ್ರತಾಚರಣೆ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
Posted On: 03-07-2023 10:44PM
ಕಾಪು : ಸನ್ಯಾಸಿಗಳು ನಡೆಸುವ ಚಾತುರ್ಮಾಸ್ಯಕ್ಕೆ ವಿಶೇಷ ಮಹತ್ವವಿದೆ. ಈ ಅವಧಿಯಲ್ಲಿ ಆತ್ಮೋನ್ನತಿಗೆ ಬೇಕಾದ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವುದರೊಂದಿಗೆ ಸಮಾಜದ ಜನರಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಪ್ರಜ್ಞೆಯನ್ನು ಮೂಡಿಸುವುದಕ್ಕಾಗಿ ಕಠಿಣ ಪ್ರಯತ್ನಗಳು ನಡೆಯಲಿವೆ ಎಂದು ಕಟಪಾಡಿ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು. ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದಲ್ಲಿ ಸೋಮವಾರ ಆರಂಭವಾದ ಚಾತುರ್ಮಾಸ್ಯ ವ್ರತಾಚರಣೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಪ್ರತೀಯೊಬ್ಬ ವ್ಯಕ್ತಿಗೂ ಗುರು ಪರಂಪರೆ ಮತ್ತು ಚಾತುರ್ಮಾಸ್ಯದ ಕುರಿತಾಗಿ ಅರಿವು, ಜ್ಞಾನ ಹೆಚ್ಚಿಸುವುದಕ್ಕಾಗಿ ನಮ್ಮ ಪ್ರಯತ್ನ ಜಾರಿಯಲ್ಲಿರುತ್ತದೆ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡಿ ಈ ಬಾರಿಯ ಚಾತುರ್ಮಾಸ್ಯವನ್ನು ನಡೆಸಲಾಗುವುದು. ಪಾಶ್ಚಾತ್ಯ ಸಂಸ್ಕೃತಿಯ ಮೇಲಿನ ವ್ಯಾಮೋಹದಿಂದಾಗಿ ಜನರು ಭಾರತೀಯ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಭಾರತೀಯ ಸಂಸ್ಕೃತಿಯನ್ನು ಅನುಸರಿಸಿ, ಸಂಸ್ಕಾರವನ್ನು ಬೆಳೆಸಿಕೊಳ್ಳುವುದು ಇಂದಿನ ಅನಿವಾರ್ಯತೆಯಾಗಿದೆ. ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರದ ಅನುಸರಣೆಯೇ ನಮಗೆ ಸಮಾಜದಲ್ಲಿ ಸುಸಂಸ್ಕೃತರಾಗಿ ಬಾಳಿ ಬದುಕಲು ದಾರಿದೀಪವಾಗಿದೆ ಎಂದರು.
ಉಡುಪಿ : ನಿಖಿತಾ ಕುಲಾಲ್ ಸಾವಿನ ಪ್ರಕರಣ - ಪರಿಹಾರಕ್ಕಾಗಿ ಮನವಿ
Posted On: 03-07-2023 09:24PM
ಉಡುಪಿ : ಕಾಪು ತಾಲೂಕಿನ ಎಲ್ಲೂರು ಬಂಡಸಾಲೆ ಪ್ರತಿಭಾನ್ವಿತ ವಿದ್ಯಾರ್ಥಿನಿ ನಿಖಿತಾ ಕುಲಾಲ್ ಉಡುಪಿಯ ಸಿಟಿ ಆಸ್ಪತ್ರೆಯಲ್ಲಿ ಅಸಹಜ ಸಾವನಪ್ಪಿದ್ದು ನಿಖಿತಾ ಮನೆಯವರಿಗೆ ಸೂಕ್ತ ನ್ಯಾಯ ಒದಗಿಸಿ, ಸೂಕ್ತ ಪರಿಹಾರ ನೀಡಬೇಕೆಂದು ಆಸ್ಪತ್ರೆಯ ಮುಖ್ಯ ವೈದ್ಯರಿಗೆ ಹಾಗೂ ಆಡಳಿತ ಮಂಡಳಿಗೆ ಜಿಲ್ಲಾ ಕುಲಾಲ ಸಂಘಟನೆಯ ಪ್ರಮುಖರು ಸೇರಿ ಮನವಿ ನೀಡಿದರು.
ಉಡುಪಿ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು - ಕ್ರಿಯೇಟಿವ್ ಸಮಾಗಮ
Posted On: 03-07-2023 07:29PM
ಉಡುಪಿ : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇವರ ಸಹಭಾಗಿತ್ವದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯಲ್ಲಿ ಜೂನ್ 30 ರಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ ,ಕ್ರೀಡಾ ಸಂಘಟನೆಗಳ ಉದ್ಘಾಟನೆ ನಿಮಿತ್ತ "ಕ್ರಿಯೇಟಿವ್ ಸಮಾಗಮ" ಕಾರ್ಯಕ್ರಮ ನೆರವೇರಿತು.
ಬಂಟಕಲ್ಲು : ಆಟೋರಿಕ್ಷಾ ಚಾಲಕ ಮತ್ತು ಮಾಲಕರ ಸಂಘದಿಂದ ವೈದ್ಯರಿಗೆ ಅಭಿನಂದನೆ
Posted On: 02-07-2023 10:38PM
ಬಂಟಕಲ್ಲು : ಆಟೋರಿಕ್ಷಾ ಚಾಲಕ ಮತ್ತು ಮಾಲಕರ ಸಂಘ (ರಿ.) ಬಂಟಕಲ್ಲು ಇದರ ವತಿಯಿಂದ ವೈದ್ಯರ ದಿನಾಚರಣೆಯ ಪ್ರಯುಕ್ತ ಬಂಟಕಲ್ಲು ಆಸುಪಾಸಿನಲ್ಲಿ ಉತ್ತಮ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ಪ್ರಕಾಶ್ ಭಟ್, ಡಾ. ಸಂದೀಪ್, ಡಾ. ಚಿತ್ರಲೇಖ ಇವರನ್ನು ಅಭಿನಂದಿಸಲಾಯಿತು.
ಕಾಪು : ಮಟ್ಟಾರುವಿನಲ್ಲಿ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ
Posted On: 02-07-2023 09:10PM
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ಘಟಕದ ವತಿಯಿಂದ ಮಟ್ಟಾರಿನಲ್ಲಿ ಬಾಲ ಸಂಸ್ಕಾರ ಕೇಂದ್ರವನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಟ್ಟಾರು ಇದರ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಬ್ರಹ್ಮಾವರ : ವನಮಹೋತ್ಸವ ಕಾರ್ಯಕ್ರಮ
Posted On: 02-07-2023 07:08PM
ಬ್ರಹ್ಮಾವರ : ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ, ಸುವಣ೯ ಎಂಟರ್ಪ್ರೈಸಸ್ ಇವರ ವತಿಯಿಂದ ಬ್ರಹ್ಮಾವರ ಆಡಳಿತ ಸೌಧ ಆವರಣದಲ್ಲಿ ವನಮಹೋತ್ಸವ ಕಾಯ೯ಕ್ರಮ ಜುಲೈ 1 ರಂದು ನಡೆಯಿತು.
ಜುಲೈ 8 : ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಅವರಿಗೆ ಅಭಿನಂದನೆ
Posted On: 02-07-2023 10:16AM
ಮಂಗಳೂರು : ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 194 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಲಿದೆ ಎಂದು ಪ.ರಾಮಕೃಷ್ಣ ಶಾಸ್ತ್ರಿ ಅಭಿನಂದ ಸಮಿತಿ ಸಂಚಾಲಕ ಸಂಪತ್ ಬಿ. ಸುವರ್ಣ ತಿಳಿಸಿದ್ದಾರೆ. ಅವರು ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿ, 1953 ರಲ್ಲಿ ಪುತ್ತೂರಿನ ಪೋಳ್ಯದಲ್ಲಿ ಜನಿಸಿದ ರಾಮಕೃಷ್ಣ ಶಾಸ್ತ್ರಿಅವರು ಎಳವೆಯಲ್ಲಿಯೇ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ನೆಲೆಸಿದ್ದು ತನ್ನ 11 ನೆಯ ವಯಸ್ಸಿನಲ್ಲಿ ಬರವಣಿಗೆ ಆರಂಭಿಸಿದ್ದರು. 7 ನೆಯ ತರಗತಿವರೆಗೆ ಮಾತ್ರ ಶಾಲಾ ವಿದ್ಯಾಭ್ಯಾಸ ಮಾಡಿದ್ದರೂ ಶಾಲೆ, ಪದವಿ ತರಗತಿಗೆ ಪಠ್ಯವಾಗುವಷ್ಟು ಸಮಗ್ರ ಬರವಣಿಗೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಆ ದಿನ ಅಪರಾಹ್ನ 2 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದ್ದು ಕಾರ್ಯಕ್ರಮಕ್ಕೆ ಚಾಲನೆಯನ್ನು ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ಪ್ರಾಚಾರ್ಯ ಡಾ| ಎನ್. ಎಂ. ಜೋಸೆಫ್ ನೀಡಲಿದ್ದಾರೆ. ಯಕ್ಷಗಾನಾಮೃತದಲ್ಲಿ ಭಾಗವತರಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ, ಗಿರೀಶ್ ರೈ ಕಕ್ಯಪದವು, ಹಿಮ್ಮೇಳದಲ್ಲಿ ಕೃಷ್ಣಪ್ರಕಾಶ ಉಳಿತ್ತಾಯ, ಶಿತಿಕಂಠ ಭಟ್ ಉಜಿರೆ, ನಿರೂಪಣೆಯಲ್ಲಿ ಬಿ. ಎನ್. ಗಿರೀಶ್ ಹೆಗ್ಡೆ ಧರ್ಮಸ್ಥಳ ಭಾಗವಹಿಸುತ್ತಾರೆ.
ದೇಶವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸುವಲ್ಲಿ ಚಾರ್ಟರ್ಡ್ ಅಕೌಟೆಂಟ್ ಗಳ ಕೊಡುಗೆ ಅಪಾರ : ಸಿ.ಎ ಗೋಪಾಲಕೃಷ್ಣ ಭಟ್
Posted On: 02-07-2023 07:35AM
ಕಟಪಾಡಿ : "ಲೆಕ್ಕ ಪರಿಶೋಧಕರಿಗೆ (ಸಿ.ಎ) ಸಮಾಜದಲ್ಲಿ ಒಂದು ವಿಶೇಷವಾದ ಉನ್ನತ ಸ್ಥಾನಮಾನವಿದೆ. ದೇಶವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸುವಲ್ಲಿ ಚಾರ್ಟರ್ಡ್ ಅಕೌಟೆಂಟ್ ಗಳ ಕೊಡುಗೆ ಅಪಾರವಾದದ್ದು, ದೇಶದ ಏಳಿಗೆಗೆ ನಾವು ದುಡಿಯಬೇಕು" ಎಂದು ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್ ರವರು, ಜುಲೈ 1 ರಂದು ತ್ರಿಶಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ಆಚರಿಸಲಾದ 'ಚಾರ್ಟರ್ಡ್ ಅಕೌಂಟೆಂಟ್ಸ್ ಡೇ'ಯಲ್ಲಿ ಹೇಳಿದರು.
