Updated News From Kaup

ಕಾಪು : ಕ್ಷೇತ್ರದಲ್ಲಿ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ಬ್ರೇಕ್ ‌; ಗೆಲುವು ಕಂಡ ಬಿಜೆಪಿ ; ಕಾರ್ಯಕರ್ತರಲ್ಲಿ ಸಂಭ್ರಮ

Posted On: 13-05-2023 07:10PM

ಕಾಪು : ಯಾವುದೇ ಶುಭ ಸಮಾರಂಭಗಳಲ್ಲೂ ಚರ್ಚಿತವಾದ ವಿಷಯ ಅವರು ಗೆಲ್ಲುತ್ತಾರೆ ಇವರು ಗೆಲ್ಲುತ್ತಾರೆ ಎಂದು, ಜಾತಿ ಲೆಕ್ಕಾಚಾರ, ಚುನಾವಣಾ ಪೂರ್ವ, ಚುನಾವಣೋತ್ತರ ಸಮೀಕ್ಷೆಗಳು, ಪಕ್ಷಗಳ ಕಾರ್ಯಕರ್ತರು ನಮ್ಮದೇ ಪಕ್ಷದ ಗೆಲುವು ಎಂಬ ಅಭಿಲಾಷೆಯಲ್ಲಿ ಬಿರುಬೇಸಿಗೆಯನ್ನು ಲೆಕ್ಕಿಸದೆ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಬೇಕೆಂಬ ತವಕ, ತುಡಿತದಲ್ಲಿದ್ದರು. ಅಂತೂ ಮೇ 13ರಂದು ಫಲಿತಾಂಶ ಬಂದಿದೆ.

ಉಡುಪಿ ಜಿಲ್ಲೆಯಲ್ಲಿ 5 ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಬಿದ್ದಿವೆ. ಇದರಲ್ಲಿ ಮತ ಎಣಿಕೆಯ ಕೆಲವು ಸುತ್ತುಗಳವರೆಗೆ ಬೈಂದೂರು ಮತ್ತು ಕಾರ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಕೆಲವೇ ಅಂತರದ ಮತಗಳ ಸ್ಪರ್ಧೆಯನ್ನು ಬಿಜೆಪಿಗೆ ನೀಡುತ್ತಾ ಬಂದರೂ ಕೊನೆಯ ಗೆಲುವು ಬಿಜೆಪಿಯದ್ದಾಗಿತ್ತು. ಉಳಿದಂತೆ ಮೊದಲಿಂದ ಕೊನೆಯವರೆಗೂ ಬಹುಮತದ ಅಂತರವನ್ನೇ ಕಾಯ್ದ ಬಿಜೆಪಿ ಅಭ್ಯರ್ಥಿಗಳು ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಭದ್ರಗೊಳಿಸಿದ್ದಾರೆ.

ಕಾಪು ಕ್ಷೇತ್ರದಲ್ಲಿ 5 ಅಭ್ಯರ್ಥಿಗಳು ವಿವಿಧ ಪಕ್ಷದಿಂದ ಕಣದಲ್ಲಿದ್ದರು. ಅವರು ಪಡೆದುಕೊಂಡ ಇವಿಎಮ್ ಮತ್ತು ಪೋಸ್ಟಲ್ ಮತಗಳ ಒಟ್ಟು ಅಂಕಿಅಂಶ ಇಂತಿವೆ : ಗುರ್ಮೆ ಸುರೇಶ್ ಶೆಟ್ಟಿ (ಬಿಜೆಪಿ) 80,559 ವಿನಯ ಕುಮಾರ್ ಸೊರಕೆ (ಕಾಂಗ್ರೆಸ್) 67555 ಸಬಿನಾ ಸಮದ್ ( ಜೆಡಿಎಸ್) 568 ಎಸ್.ಆರ್. ಲೋಬೊ (ಆಪ್) 252 ಮಹಮದ್ ಹನೀಫ್ (ಎಸ್‌ಡಿಪಿಐ) 1616 ನೋಟಾ: 805 ಒಟ್ಟು ಚಲಾವಣೆಯಾದ ಮತ: 1,51,355 ಗೆಲುವಿನ ಅಂತರ : 13,004

ಎಲ್ಲಾ ಲೆಕ್ಕಾಚಾರಗಳನ್ನು ಜನರು ಮಾಡಿದರೂ ಅಂತಿಮವಾಗಿ ಕಾಪು ಕ್ಷೇತ್ರದಲ್ಲಿ ಹಲವಾರು ಸಮಾಜಸೇವೆಯ ಮೂಲಕ ಗುರುತಿಸಿಕೊಂಡಿದ್ದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಗೆಲುವಿನ ನಗೆ ಬೀರಿದ್ದಾರೆ. ರಾಜಕಾರಣದಲ್ಲಿ ಅನುಭವಿಯಾಗಿದ್ದು ಕ್ಷೇತ್ರದ ಜನರೊಂದಿಗೆ ಬೆರೆತಿದ್ದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಸೋಲನ್ನು ಕಂಡಿದ್ದಾರೆ. ಒಟ್ಟಿನಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಕ್ಷೇತ್ರದ ಜನರಿಗೆ ಒಂದಷ್ಟು ಭರವಸೆಯಿದೆ, ಅಭಿವೃದ್ಧಿಯ ಪಥದಲ್ಲಿ ಸಾಗಿ ಸರ್ವಾಂಗೀಣ ಬೆಳವಣಿಗೆಯಾಗಿ ರಾಜ್ಯ, ದೇಶದಲ್ಲೇ ಕಾಪು ಕ್ಷೇತ್ರ ಮಾದರಿಯಾಗಲಿ....

ಕಾಪು : ಗುರ್ಮೆ ಸುರೇಶ್ ಶೆಟ್ಟಿ ಭರ್ಜರಿ ಗೆಲುವು

Posted On: 13-05-2023 01:47PM

ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು

Posted On: 13-05-2023 01:39PM

ಉಡುಪಿ : ಜಿಲ್ಲೆಯ 5 ಕ್ಷೇತ್ರಗಳಾದ ಕುಂದಾಪುರ, ಬೈಂದೂರು, ಕಾರ್ಕಳ, ಕಾಪು, ಉಡುಪಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ.

ಆ ಮೂಲಕ ಪಕ್ಷದ ಗೆಲುವನ್ನು ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಉಡುಪಿ : ಯಶ್ಪಾಲ್ ಸುವರ್ಣಗೆ ಗೆಲುವು

Posted On: 13-05-2023 12:49PM

ಉಡುಪಿ : ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಮುನ್ನಡೆ ಕಾಯ್ದುಕೊಂಡು ಗೆಲುವು ಸಾಧಿಸಿದ್ದಾರೆ.

ಉಡುಪಿ : 5 ವಿಧಾನಸಭಾ ಕ್ಷೇತ್ರದಲ್ಲಿ 4 ರಲ್ಲಿ ಬಿಜೆಪಿ, 1 ರಲ್ಲಿ ಕಾಂಗ್ರೆಸ್ ಮುನ್ನಡೆ

Posted On: 13-05-2023 10:49AM

ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕುಂದಾಪುರ, ಕಾರ್ಕಳ, ಕಾಪು, ಉಡುಪಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.

ಕಾಪು : ಗುರ್ಮೆ ಸುರೇಶ್ ಶೆಟ್ಟಿ ಮುನ್ನಡೆ

Posted On: 13-05-2023 10:39AM

ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮೂರನೆಯ ಸುತ್ತಿನಲ್ಲಿ 18907 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ.

ಇವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ 13512 ಮತಗಳನ್ನು ಪಡೆದು ಹಿನ್ನಡೆಯಲ್ಲಿದ್ದಾರೆ.

CREATIVE PU COLLEGE KARKALA - ADMISSIONS OPEN

Posted On: 13-05-2023 09:11AM

CREATIVE PU COLLEGE KARKALA - ADMISSIONS OPEN

ಮೇ 14 : ಆನೆಗುಂದಿಶ್ರೀಗಳವರ ಪಟ್ಟಾಭಿಷೇಕ ವರ್ಧಂತಿ ; ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ

Posted On: 11-05-2023 06:29PM

ಕಾಪು : ತಾಲೂಕಿನ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಪಟ್ಟಾಭಿಷೇಕ ಮಹೋತ್ಸವದ 13ನೇ ವರ್ಷದ ವರ್ಧಂತ್ಯುತ್ಸವವು ಮೇ 14ರಂದು ಪಡುಕುತ್ಯಾರಿನಲ್ಲಿ ನಡೆಯಲಿದೆ.

ಇದೇ ದಿನ 2021, 2022, 2023 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್. ಎಲ್. ಸಿ, ಪಿ.ಯು.ಸಿ/ಪ್ಲಸ್‌ ಟು ಪರೀಕ್ಷೆಗಳಲ್ಲಿ 95% ಮತ್ತು ಅಧಿಕ ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಪದವಿ, ಸ್ನಾತಕೋತ್ತರ, ವೃತ್ತಿ ಶಿಕ್ಷಣ, ಮೆಡಿಕಲ್‌, ಇಂಜಿನಿಯರಿಂಗ್ ಪರೀಕ್ಷೆಗಳಲ್ಲಿ ರ‌್ಯಾಂಕ್ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಜಗದ್ಗುರುಗಳವರಿಂದ ಅಭಿನಂದನೆ ನಡೆಯಲಿದೆ.

ಅರ್ಹ ವಿಶ್ವಬ್ರಾಹ್ಮಣ ಸಮಾಜ ಬಾಂಧವರ ವಿದ್ಯಾರ್ಥಿಗಳು ಅಂಕಗಳನ್ನು ವಿವರಿಸುವ ಧೃಡೀಕೃತ ಪ್ರಮಾಣ ಪತ್ರದ ಪ್ರತಿಯೊಂದಿಗೆ ಅಂದು ಬೆಳಗ್ಗೆ 10ಗಂಟೆಗೆ ಪಡುಕುತ್ಯಾರು ಮಹಾಸಂಸ್ಥಾನದ ಕಚೇರಿಯಲ್ಲಿ ಹೆಸರು ನೋಂದಾಯಿಸಬೇಕಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಆನೆಗುಂದಿ ಪ್ರತಿಷ್ಠಾನದ ವಿಶ್ವಸ್ಥರೂ, ಈ ವಿಭಾಗ ಮುಖ್ಯಸ್ಥರೂ ಆಗಿರುವ ಶ್ರೀಧರ ಜೆ.ಆಚಾರ್ಯ ಕಟಪಾಡಿ ಮೋ.9483977159 ಅವರನ್ನು ಸಂಪರ್ಕಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಶಿರ್ವ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಮತದಾನ ಕೇಂದ್ರಕ್ಕೆ ಬಂದು ಮತದಾನಗೈದ ಮಹಿಳೆ

Posted On: 10-05-2023 05:10PM

ಶಿರ್ವ : ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿರ್ವ ಗ್ರಾಮದ ವೆರೋನಿಕ ಪಿಂಟೊ (77) ಮತದಾನಕ್ಕಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮತದಾನ ಮಾಡಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರು ಮಗಳಿನೊಂದಿಗೆ ಕಾಪು ಕ್ಷೇತ್ರದ ಶಿರ್ವ ಗ್ರಾಮದ ಪಂಜಿಮಾರು ಕೋಡು ಶಾಲೆಯಲ್ಲಿ ಮತದಾನ ಮಾಡಿ ಎಲ್ಲರಿಗೂ ಸ್ಪೂರ್ತಿಯಾದರು.

ಕಾಪು : ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ಮತದಾನ

Posted On: 10-05-2023 11:08AM

ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಾಪುವಿನ ಕಳತ್ತೂರಿನ ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆ ಬೂತ್ ನಂ. 156 ರಲ್ಲಿ ಮತದಾನ ಮಾಡಿದರು.