Updated News From Kaup
ಕುತ್ಯಾರು : ಸೂರ್ಯ ಚೈತನ್ಯ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾಗಿ ದಿವಾಕರ ಆಚಾರ್ಯ ಗೇರುಕಟ್ಟೆ ನೇಮಕ
Posted On: 30 Aug 2023, 04:25 PM
ಕುತ್ಯಾರು : ಶ್ರೀ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಪಡುಕುತ್ಯಾರು ಉಡುಪಿ ಇವರ ಮಾರ್ಗದರ್ಶನದಲ್ಲಿ ಎಸೆಟ್ ಆಧೀನದಲ್ಲಿರುವ ಕಾಪು ತಾಲೂಕಿನ ಕುತ್ಯಾರು ಶ್ರೀ ಸೂರ್ಯ ಚೈತನ್ಯ ಆಂಗ್ಲ ಮಾಧ್ಯಮ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ದಿವಾಕರ ಆಚಾರ್ಯ ಗೇರುಕಟ್ಟೆ ಇವರನ್ನು ನೇಮಿಸಲಾಗಿದೆ. ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸುಮಾರು 40 ವರ್ಷಗಳ ಶೈಕ್ಷಣಿಕ ಸೇವಾ ಅನುಭವವನ್ನು ಹೊಂದಿರುತ್ತಾರೆ. ಪ್ರಸ್ತುತ ಈ ಸಂಸ್ಥೆಯಲ್ಲಿ ಯಲ್. ಕೆ .ಜಿ ಯಿಂದ 10ನೇ ತರಗತಿವರೆಗೆ ವಿವಿಧ ಜಿಲ್ಲೆಯ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಸಂಸ್ಕೃತ ,ಯೋಗ, ಕರಾಟೆ, ಯಕ್ಷಗಾನ ,ಭಜನೆ ಕುಣಿತ ಮೊದಲಾದ ವಿಷಯಗಳಲ್ಲಿ ತರಬೇತಿಯನ್ನು ಸಂಸ್ಥೆಯಲ್ಲಿ ನೀಡಲಾಗುತ್ತಿದ್ದು ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯಲ್ಲಿ ಐದನೇ ಸ್ಥಾನವನ್ನು ಪಡೆದಿರುತ್ತದೆ.
ಕಾರ್ಕಳ : ಕುಲಾಲ ಸಂಘ ಇರ್ವತ್ತೂರು ವತಿಯಿಂದ ಗ್ರಾಮ ಪಂಚಾಯತ್ ಗೆ ಪೋಡಿಯಂ ಹಸ್ತಾಂತರ
Posted On: 30 Aug 2023, 12:33 PM
ಕಾರ್ಕಳ : ಇಲ್ಲಿನ ಇರ್ವತ್ತೂರು ಕುಲಾಲ ಸಂಘ (ರಿ.) ವತಿಯಿಂದ ಇರ್ವತ್ತೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನಕ್ಕೆ ಪೋಡಿಯಂನ್ನು ಸಂಘದ ಅಧ್ಯಕ್ಷರಾದ ಸುರೇಶ್ ಬಂಗೇರ ಪಾಲಾಜೆ ಮುಂದಾಳತ್ವದಲ್ಲಿ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಇರ್ವತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭರತ್ ಕುಮಾರ್ ಜೈನ್,ಉಪಾಧ್ಯಕ್ಷೆ ದೀಪಾ ಶ್ರೀನಾಥ್, ಪಂಚಾಯತ್ ಪಿ.ಡಿ.ಓ ಆನಂದ ವಾರ್ತಿ, ಪಂಚಾಯತ್ ಸದಸ್ಯೆ ಅನಿತಾ ನಾಗೇಶ್ ಕುಲಾಲ್, ನಿಕಟಪೂರ್ವ ತಾಲೂಕು ಪಂಚಾಯತ್ ಸದಸ್ಯೆ ಪ್ರಮೀಳಾ ಕುಲಾಲ್ ಉಪಸ್ಥಿತರಿದ್ದರು.
ಪಡುಬಿದ್ರಿ : ಕಂಚಿನಡ್ಕ ಶ್ರೀ ಗುರು ರಾಘವೇಂದ್ರ ಮಂದಿರದಲ್ಲಿ ಶ್ರೀ ರಾಯರ ಆರಾಧನಾ ಮಹೋತ್ಸವ ಮತ್ತು ಅಖಂಡ ಭಜನಾ ಸಂಕೀರ್ತನೆ
Posted On: 29 Aug 2023, 08:30 AM
ಪಡುಬಿದ್ರಿ : ಇಲ್ಲಿನ ನಡ್ಸಾಲು ಗ್ರಾಮದ ಕಂಚಿನಡ್ಕ ಶ್ರೀ ಗುರು ರಾಘವೇಂದ್ರ ಮಂದಿರದಲ್ಲಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 2 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ. ಆಗಸ್ಟ್ 31, ಗುರುವಾರ ಪೂರ್ವಾರಾಧನೆ, ಸೆಪ್ಟೆಂಬರ್ 01, ಶುಕ್ರವಾರ ಮಧ್ಯಾರಾಧನೆ, ಸೆಪ್ಟೆಂಬರ್ 02, ಶನಿವಾರ ಉತ್ತರಾಧನೆ (ಬೆಳಿಗ್ಗೆ ಗಂಟೆ 6ರಿಂದ ಸಂಜೆ 7ರ ತನಕ) ಶ್ರೀ ಗುರುರಾಘವೇಂದ್ರ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡ ಶ್ರೀ ರಾಯರ ಆರಾಧನಾ ಮಹೋತ್ಸವ ಮತ್ತು ಅಖಂಡ ಭಜನಾ ಸಂಕೀರ್ತನೆ - ಮಹಾ ಪ್ರಸಾದ ಅದೇ ದಿನ ಮಧ್ಯಾಹ್ನ ಗಂಟೆ 1 ರಿಂದ ಅನ್ನಸಂತರ್ಪಣೆ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾಪು : ಇನ್ನಂಜೆ ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿ - ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ
Posted On: 28 Aug 2023, 10:56 PM
ಕಾಪು : ತಾಲೂಕಿನ ಇನ್ನಂಜೆ ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯಲ್ಲಿ ಪಾಂಗಾಳ ಮುರಳಿ ಭಟ್ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜೆಯು ನಡೆಯಿತು. ಈ ಸಂದರ್ಭ ಗ್ರಾಮದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಮಂಡೇಡಿ ದೇರೆಕ್ಯಾರ್ ಮನೆ ದಿವಂಗತ ವಿಠಲ ಶೆಟ್ಟಿ ಸ್ಮರಣಾರ್ಥ ಅವರ ಮಗ ದಯಾನಂದ ವಿ ಶೆಟ್ಟಿ ಪ್ರೋತ್ಸಾಹ ಧನ ಹಾಗೂ ಶಶಿಧರ ಕೆ ಶೆಟ್ಟಿ ಕುಂಜಿರಬೆಟ್ಟು ನೀಡಲ್ಪಟ್ಟ ಶಾಲು ಮತ್ತು ಸ್ಮರಣಿಕೆಯನ್ನು ಮುಂಬೈ ಉದ್ಯಮಿ ರತ್ನಾಕರ ಶೆಟ್ಟಿ ಮಂಡೇಡಿ ಸಾದುಮನೆ ಮಕ್ಕಳಿಗೆ ನೀಡಿ ಗೌರವಿಸಿದರು. ಈ ಸಂದರ್ಭ ರತ್ನಾಕರ ಶೆಟ್ಟಿ ಹಾವಂಜೆ, ಬಾಲಕೃಷ್ಣ ಶೆಟ್ಟಿ ಪೊಲ್ಯ, ಮುಕ್ಕಾಲಿ ರಮಾನಂದ ಶೆಟ್ಟಿ, ಮಂಡಳಿಯ ಅಧ್ಯಕ್ಷ ಲಕ್ಷ್ಮಣ ಕೆ ಶೆಟ್ಟಿ, ಕಾರ್ಯದರ್ಶಿ ಕೃಷ್ಣ ವಿ ಶೆಟ್ಟಿ, ಕೋಶಾಧಿಕಾರಿ ಸಂತೋಷ್ ಎಸ್ ಶೆಟ್ಟಿ, ಮಂಡಳಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಹೆಜಮಾಡಿ : ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ - ಸರಕಾರದ ಉಚಿತ ಕೊಡುಗೆ ವಿತರಣೆ
Posted On: 28 Aug 2023, 10:31 PM
ಹೆಜಮಾಡಿ : ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಇಂದು ಸರಕಾರದ ಉಚಿತ ಕೊಡುಗೆಯಲ್ಲಿ ಒಂದಾದ ಶೂ / ಸಾಕ್ಸ್ ವಿತರಣಾ ಕಾರ್ಯಕ್ರಮ ನಡೆಯಿತು. ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಸತೀಶ್ ನಾಯಕ್ ಹಾಗೂ ಸದಸ್ಯರುಗಳು, ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಪಾಂಡುರಂಗ ಕರ್ಕೇರ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ದಾನಿಗಳಾದ ಮುಂಬೈ ಹಳೆ ವಿದ್ಯಾರ್ಥಿ ಟ್ರಸ್ಟ್ ನ ಸದಸ್ಯರಾದ ಶೇಷಗಿರಿರಾವ್, ಅನಿಲ್ ಕುಂದರ್, ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಳತ್ತೂರು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ - ಹಲವು ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ಕುತ್ಯಾರು ಆನೆಗುಂದಿ ಸೂರ್ಯಚೈತನ್ಯ ಶಾಲೆ
Posted On: 28 Aug 2023, 10:20 PM
ಕಳತ್ತೂರು : 2023-24 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಪಿ.ಕೆ.ಎಸ್ ಪ್ರೌಢಶಾಲೆ ಕಳತ್ತೂರು ಇಲ್ಲಿ ನಡೆಯಿತು. ಆನೆಗುಂದಿ ಸೂರ್ಯಚೈತನ್ಯ ಶಾಲೆ ಕುತ್ಯಾರು ಶಾಲೆಯ ವಿದ್ಯಾರ್ಥಿಗಳು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಬಹುಮಾನ, ದ್ವಿತೀಯ, ತೃತೀಯ ಬಹುಮಾನ ಪಡೆದರು. ಆಶುಭಾಷಣ ಸ್ಪರ್ಧೆ ರಜತ್ (ಪ್ರಥಮ), ಸಂಸ್ಕೃತ ಭಾಷಣ ಮೌನೇಶ್ (ಪ್ರಥಮ), ರಂಗೋಲಿ ವಂಶಿಕ (ಪ್ರಥಮ), ಧಾರ್ಮಿಕ ಪಠಣ ಬೋಧಯನ(ಪ್ರಥಮ), ಇಂಗ್ಲೀಷ್ ಕಂಠಪಾಠ ಪ್ರಾಪ್ತಿ (ಪ್ರಥಮ), ಕತೆ ಹೇಳುವುದು ಧನ್ವಿ (ಪ್ರಥಮ), ಚಿತ್ರಕಲೆ ಅದಿತಿ ಆಚಾರ್ಯ (ಪ್ರಥಮ), ಸಂಸ್ಕೃತ ಭಾಷಣ ಸೋಹನ್ (ಪ್ರಥಮ) ಬಹುಮಾನ ಪಡೆದಿರುತ್ತಾರೆ. ದ್ವಿತೀಯ ಬಹುಮಾನ 11 ವಿದ್ಯಾರ್ಥಿಗಳು ಪಡೆದಿರುತ್ತಾರೆ. ತೃತೀಯ ಬಹುಮಾನ 8 ವಿದ್ಯಾರ್ಥಿಗಳು ಪಡೆದಿರುತ್ತಾರೆ.
ಶಿರ್ವ : ವಿಶ್ವಕರ್ಮ ಧ್ವಜವು ಸರ್ವರ ಒಮ್ಮತ ಅಭಿಪ್ರಾಯ ಪ್ರಕಾರ ಮೂಡಿಬರಲಿದೆ - ಆನೆಗುಂದಿಶ್ರೀ
Posted On: 28 Aug 2023, 09:29 PM
ಶಿರ್ವ : ವಿಶ್ವ ಬ್ರಾಹ್ಮಣ ಸಮಾಜದ ಐಕ್ಯತೆಯ ದ್ಯೋತಕವಾಗಿ ಸರ್ವರ ಒಮ್ಮತ ಅಭಿಪ್ರಾಯದ ಪ್ರಕಾರ ವಿಶ್ವಕರ್ಮ ಧ್ವಜವು ಮೂಡಿಬರಲಿದೆ. ಇದೀಗ ಆರಂಭಿಕ ಹಂತದ ಚಿಂತನಾ ಸಭೆಗಳನ್ನು ಮಹಾಸಂಸ್ಥಾನದಲ್ಲಿ ಆಯೋಜಿಸಲಾಗಿದೆ ಎಂದು ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ನುಡಿದರು. ಅವರು ಪಡುಕುತ್ಯಾರಿನ ಮಹಾ ಸಂಸ್ಥಾನದಲ್ಲಿ ಜರುಗಿದ ವಿಶ್ವಕರ್ಮ ಧ್ವಜದ ಎರಡನೇ ಚಿಂತನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಧ್ವಜದ ವಿಷಯದಲ್ಲಿ ಬಣ್ಣ, ಪ್ರಮಾಣ, ಆಕಾರ, ಲಾಂಛನ, ವಿನ್ಯಾಸದ ಬಗ್ಗೆ ಸಮಾಜದ ಎಲ್ಲಾ ಸಂಘಟನೆಗಳ ಅಭಿಪ್ರಾಯ ಪಡೆಯಲಾಗುವುದು. ಇದಕ್ಕಾಗಿ ಸಮಾಜದ ದೇವಸ್ಥಾನಗಳಲ್ಲಿ, ಆನೆಗುಂದಿ ಗುರು ಸೇವಾ ಪರಿಷತ್ ನ ವಿಧಾನ ಸಭಾ ಕೇಂದ್ರಗಳಲ್ಲಿ ಸೇರಿದಂತೆ ಸಮಾಜದ ಸಂಘ ಸಂಸ್ಥೆಗಳಿರುವ ಪ್ರದೇಶಗಳಲ್ಲಿ ವಿವಿಧ ಹಂತಗಳಲ್ಲಿ ಚಿಂತನಾ ಸಭೆಗಳನ್ನು ನಡೆಸಲಾಗುವುದು. ಎರಡನೇ ಚಿಂತನಾ ಸಭೆಯಲ್ಲಿ ಬೆಂಗಳೂರಿನ ವೇದ ಆಗಮ ಸಂಸ್ಕೃತ ಮಹಾಪಾಠ ಶಾಲೆಯ ಸಂಸ್ಕೃತ ಶಿಕ್ಷಕರಾದ ಕೆ ರಾಘವೇಂದ್ರ ಸ್ತಪತಿ ಬೆಂಗಳೂರು ಇವರು ವಿಶ್ವಕರ್ಮ ಧ್ವಜದ ಬಗ್ಗೆ ಪುರಾಣ ಹಿನ್ನೆಲೆ ಮತ್ತು ವಿವಿಧ ಮಾದರಿಯ ಧ್ವಜಗಳೊಂದಿಗೆ ತಮ್ಮ ಅಭಿಪ್ರಾಯ ಮಂಡಿಸಿದರು. ಕರ್ನಾಟಕ ಸರ್ಕಾರದ ಕಾನೂನು ಮತ್ತು ಸಂಸದೀಯ ಇಲಾಖೆಯ ವಿಶ್ರಾಂತ ಹೆಚ್ಚುವರಿ ಕಾರ್ಯದರ್ಶಿ ಬಿ. ಬಿ ಪತ್ತಾರ ಬೆಂಗಳೂರು, ಆನೆಗುಂದಿ ಮಠದ ಅಧ್ಯಕ್ಷ ಹರಿಶ್ಚಂದ್ರ ಎನ್ ಆಚಾರ್ಯ ಬೆಂಗಳೂರು, ದಕ್ಷಿಣ ಕನ್ನಡ ವಿಶ್ವ ಬ್ರಾಹ್ಮಣ ಸಂಘ ಬೆಂಗಳೂರು ಅಧ್ಯಕ್ಷ ತುಕಾರಾಮ್ ಆಚಾರ್ಯ ಬೆಂಗಳೂರು, ಗುರು ಸೇವಾ ಪರಿಷತ್ ಬೆಂಗಳೂರು ಸಮಿತಿ ಅಧ್ಯಕ್ಷ ಎಂ.ಜಿ ನಾಗೇಶ್ ಆಚಾರ್ಯ ಬೆಂಗಳೂರು, ಕನಕಪುರ ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ಶಿವರಾಮ ಆಚಾರ್ಯ ಕನಕಪುರ. ರವಿ ಆಚಾರ್ಯ ಬೆಂಗಳೂರು, ಪಾಂಗಾಳ ಜನಾರ್ಧನ ಆಚಾರ್ಯ ಬೆಂಗಳೂರು, ಅರುಣೋದಯ ಆಚಾರ್ಯ ಬೆಂಗಳೂರು, ಮಹಾಬಲೇಶ್ವರ ಆಚಾರ್ಯ ಬೆಂಗಳೂರು, ಗಿರೀಶ ಆಚಾರ್ಯ ಏಳಂದೂರು, ಪ್ರತಾಪ್ ಆಚಾರ್ಯ ಬೆಂಗಳೂರು, ಮಂಜುನಾಥ ಆಚಾರ್ಯ ರಾಮನಗರ ಬೆಂಗಳೂರು, ಸೋಹನ್ ಆದಿತ್ಯ ಆಚಾರ್ಯ ಬೆಂಗಳೂರು, ಮನೋಹರ ಕೆ ಗುಡೂರು, ಆರಿಕ್ಕಾಡಿ ಕಾರ್ಲೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷ ಜನಾರ್ದನ ಆಚಾರ್ಯ ಆರಿಕ್ಕಾಡಿ, ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು, ಪುರುಷೋತ್ತಮ ಆಚಾರ್ಯ ಪುತ್ತೂರು,ಕೋಟ ಗಣೇಶ ಆಚಾರ್ಯ, ರೂಪೇಶ್ ಆಚಾರ್ಯ ಶಿರ್ವ, ಪೆರ್ಣೆ ಮಧುಸೂದನ ಆಚಾರ್ಯ ಕಾಸರಗೋಡು, ಗಣೇಶ್ ಆಚಾರ್ಯ ಕೆಮ್ಮಣ್ಣು, ವಿಘ್ನೇಶ್ ಕುಮಾರ್ ಕಾಸರಗೋಡು ಅಭಿಪ್ರಾಯ ಮಂಡಿಸಿದರು. ಧ್ವಜ ಸಮಿತಿಯ ಸಂಚಾಲಕರಾದ ಯೋಗಾಚಾರ್ಯ ಪುಂಡರಿಕಾಕ್ಷ ಬೆಳ್ಳೂರು ಪ್ರಾಸ್ತಾವಿಕ ಮಾತುಗಳಾಡಿದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರು ಕಾರ್ಯಕ್ರಮ ನಿರೂಪಿಸಿದರು
ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ರಾವ್ ಹಾಗೂ ಪಂಚಾಯತ್ ಸದಸ್ಯರಾದ ಈಶ್ವರ್ ಕಟಪಾಡಿ ಬಿಜೆಪಿ ಸೇರ್ಪಡೆ
Posted On: 28 Aug 2023, 09:21 PM
ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಕಟಪಾಡಿ ಸಿಎ ಬ್ಯಾಂಕ್ ನಿರ್ದೇಶಕ, ಕಟಪಾಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಇದರ ಅಧ್ಯಕ್ಷ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯರೂ ಆದ ಅಶೋಕ್ ರಾವ್ ಹಾಗೂ ಕಟಪಾಡಿ ಗ್ರಾಮಪಂಚಾಯತ್ ಸದಸ್ಯರಾದ ಈಶ್ವರ ಕಟಪಾಡಿ ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶಾಲು ಹೊದಿಸಿ ಪಕ್ಷದ ಧ್ವಜ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡು ಶುಭ ಹಾರೈಸಿದರು. ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅಶೋಕ್ ರಾವ್ ಕಟಪಾಡಿಯಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿಗೆ ಶಕ್ತಿತುಂಬುವ ಕೆಲಸ ಮಾಡಿ ಪಕ್ಷದ ಗೌರವ ಹೆಚ್ಚಿಸುವ ಕೆಲಸ ಮಾಡುವೆ ಎಂದರು. ಈ ಸಂದರ್ಭ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶಕ್ತಿ ಕೇಂದ್ರ ಪ್ರಮುಖ್ ನಿತಿನ್ ಸೇರಿಗಾರ, ಕಟಪಾಡಿಯ ಪ್ರಮುಖರಾದ ಗಂಗಾಧರ್ ಸುವರ್ಣ, ಮುರಳೀಧರ ಪೈ, ಶಿಲ್ಪಾ ಜಿ ಸುವರ್ಣ, ಸುಭಾಸ್ ಬಲ್ಲಾಳ್, ಗುರುಕ್ರಪಾ ರಾವ್, ಕವಿತಾ ಸುವರ್ಣ, ಶ್ರೀನಿವಾಸ ಕಿಣಿ, ಪವಿತ್ರ ಶೆಟ್ಟಿ, ರಘುಪತಿ ಆಚಾರ್ಯ, ಬೂತ್ ಅಧ್ಯಕ್ಷ ಕರುಣಾಕರ ಪೂಜಾರಿ, ನಿತೇಶ್ ದೇವಾಡಿಗ, ಕಟಪಾಡಿ ಪಂಚಾಯತ್ ಸದಸ್ಯರುಗಳು, ಅರುಣ್ ಶೆಟ್ಟಿ ಪಾದೂರು, ಅನಿಲ್ ಕುಮಾರ್, ನವೀನ್ ಎಸ್ ಕೆ, ರತ್ನಾಕರ ಶೆಟ್ಟಿ, ಶೈಲೇಶ್ ಅಮೀನ್, ಸಂದೀಪ್ ಶೆಟ್ಟಿ, ಸಂದೀಪ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ವಿದ್ಯಾರ್ಥಿವೇತನ ಮತ್ತು ಗುರಿಕಾರರಿಗೆ ಗೌರವಧನ ವಿತರಣೆ
Posted On: 27 Aug 2023, 08:12 PM
ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘ ಮತ್ತು ಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಉಪ್ಪಳದಿಂದ ಶೀರೂರುವರೆಗಿನ ಮೊಗವೀರ ಗುರಿಕಾರರಿಗೆ ಗೌರವಧನ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಭಾನುವಾರ ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಜಿ. ಶಂಕರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮೊಗವೀರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಸರಕಾರವನ್ನು ಒತ್ತಾಯಿಸುವ ಪ್ರಥಮ ಹಂತದ ಹೋರಾಟ ನಡೆಯುತ್ತಿದೆ. ನಮ್ಮ ಹೋರಾಟಕ್ಕೆ ಮತ್ತಷ್ಟು ಶಕ್ತಿ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ರಾಜಕೀಯ ಪಕ್ಷಗಳ ಬೆಂಬಲ ಕೋರಿ ಲೋಕಸಭಾ ಚುನಾವಣೆಗೆ ಮೊದಲು ಬೃಹತ್ ಮಟ್ಟದ ಹೋರಾಟ ನಡೆಸಲಾಗುವುದು ಎಂದರು. ರಾಜ್ಯದಲ್ಲಿರುವ ಫಿಶರೀಸ್ ಕಾಲೇಜಿನಲ್ಲಿ ಮೊಗವೀರ ಸಮಾಜದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಿಗುತ್ತಿಲ್ಲದ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತುಕತೆ ನಡೆಸಲಾಗಿದೆ ಎಂದರು. 2022-23 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 524 ವಿದ್ಯಾರ್ಥಿಗಳಿಗೆ 18.90 ಲಕ್ಷ ರೂಪಾಯಿ ವಿದ್ಯಾರ್ಥಿವೇತನ ಮತ್ತು ಬಗ್ವಾಡಿ, ಬಾರ್ಕೂರು, ಉಚ್ಚಿಲ ಮತ್ತು ಮಂಗಳೂರು ಹೋಬಳಿ ವ್ಯಾಪ್ತಿಯ 342 ಮಂದಿ ಗುರಿಕಾರರಿಗೆ 17.10 ಲಕ್ಷ ರೂ. ಗೌರವಧನ ವಿತರಿಸಲಾಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು, ಕ್ಷೇತ್ರದಲ್ಲಿ ನಡೆಯುತ್ತಿರುವ ನಿತ್ಯ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಸಹಕರಿಸುತ್ತಿರುವ ಮೋಹನ್ ಬಂಗೇರ ಕಾಪು ಮತ್ತು ಬಡಾ ಗ್ರಾ.ಪಂ. ಅಧ್ಯಕ್ಷ ಶಿವಕುಮಾರ್ ಮೆಂಡನ್ ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು. ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ. ಅಮೀನ್, ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್, ಪ್ರಧಾನ ಕಾರ್ಯದರ್ಶಿ ಸುಧಾಕರ್ ಕುಂದರ್, ಕೋಶಾಧಿಕಾರಿ ಭರತ್ ಕುಮಾರ್ ಎರ್ಮಾಳ್, ಮೊಗವೀರ ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾ ರಾಣಿ, ಬಗ್ವಾಡಿ ಹೋಬಳಿ ಶಾಖೆ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಬಾರ್ಕೂರು ಹೋಬಳಿ ಶಾಖೆ ಅಧ್ಯಕ್ಷ ಸತೀಶ್ ಅಮೀನ್, ಮೊಗವೀರ ಯುವ ಸಂಘಟನೆ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಸ್ವಾಗತಿಸಿ, ಪ್ರಸ್ತಾವನೆಗೈದರು. ದೇಗುಲದ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕೆರೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್ ವಂದಿಸಿದರು.
ಶಿರ್ವ : ಬಂಟಕಲ್ಲು ಶ್ರೀದುರ್ಗಾ ಮಹಿಳಾ ಚಂಡೆ ಬಳಗ - ಶ್ರಾವಣ ಸಂಭ್ರಮ ಸಂಪನ್ನ
Posted On: 27 Aug 2023, 07:42 PM
ಶಿರ್ವ : ಶ್ರೀದುರ್ಗಾ ಮಹಿಳಾ ಚಂಡೆ ಬಳಗ ಬಂಟಕಲ್ಲು ಇದರ ವತಿಯಿಂದ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದ ಸಭಾಂಗಣದಲ್ಲಿ ರವಿವಾರ ಜರುಗಿದ "ಶ್ರಾವಣ ಸಂಭ್ರಮ" ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕಿ ಬೇಬಿ ಪ್ರಭು ಬೆಳಂಜಾಲೆ ಇವರು ಜ್ಯೋತಿ ಪ್ರಜ್ವಲನದ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ನಮ್ಮ ಹಿರಿಯರು ಆಚರಣೆ ಮಾಡಿಕೊಂಡು ಬರುತ್ತಿದ್ದ ಸತ್ಸಂಪ್ರದಾಯಗಳನ್ನು ಉಳಿಸಿ ನವಪೀಳಿಗೆಗೆ ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ಮಹಿಳಾ ಚಂಡೆ ಬಳಗದವರು ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಅಭಿನಂದನೀಯ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಡುಪಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಅಭಿವೃದ್ಧಿ ನಿಗಮದ ಅಧೀಕ್ಷಕರಾದ ಸಂಗೀತಾ ದಯಾನಂದ ನಾಯಕ್ ಮಾತನಾಡಿ ಬಾಲ್ಯದಿಂದಲೇ ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲಿಯೇ ವಿವಿಧ ಕಲಾಪ್ರಕಾರಗಳಾದ ಭಜನೆ, ಸಂಗೀತ, ನಾಟ್ಯ, ಉಪಕರಣಗಳ ನುಡಿಸುವಿಕೆ, ಕಲಿಸುವುದರಿಂದ ಉತ್ತಮ ಸಂಸ್ಕಾರ ಬೆಳೆಯುತ್ತದೆ. ಈ ಬಗ್ಗೆ ತಾಯಂದಿರು ಗಮನ ಹರಿಸುವಂತೆ ಕರೆ ನೀಡಿ, ತಮ್ಮ ಇಲಾಖೆಯಿಂದ ಮಹಿಳೆಯರಿಗೆ ಸಿಗುವ ಸೌಲಭ್ಯಗಳಾದ ಉದ್ಯೋಗಿನಿ, ಧನಶ್ರೀ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಈ ವಿಷಯವನ್ನು ಪ್ರಚಾರ ಮಾಡಿ ಸಮಾಜದ ಅರ್ಹ ಮಹಿಳೆಯರಿಗೂ ಸಿಗುವಂತೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ರಘುರಾಮ ನಾಯಕ್ ಸಡಂಬೈಲು ತೊಟ್ಟಿಲುಮನೆ, ಯುನಿವರ್ಸಿಟಿ ಚಿನ್ನದ ಪದಕ ವಿಜೇತ ಪುನೀತ್ ತೆಂಡುಲ್ಕರ್, ಯಕ್ಷಗಾನ ಯುವ ಪ್ರತಿಭೆ ಸಂಧ್ಯಾ ನಾಯಕ್ ಇವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ಬಡವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ, ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀಕ್ಷೇತ್ರ ಬಂಟಕಲ್ಲು ದೇವಳದ ಆಡಳಿತ ಮೊಕ್ತೇಸರರಾದ ಶಶಿಧರ ವಾಗ್ಲೆ, ಆರ್ಎಸ್ಬಿ ಯುವವೃಂದದ ಗೌರವ ಅಧ್ಯಕ್ಷ ಕೆ.ಆರ್.ಪಾಟ್ಕರ್ ಮಹಿಳಾ ಚಂಡೆ ಬಳಗದ ನೇತೃತ್ವದಲ್ಲಿ ನಿರಂತರವಾಗಿ ನಡೆಯುತ್ತಿರುವ ಧಾರ್ಮಿಕ, ಸಾಸ್ಕೃತಿಕ, ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ಲಾಘಿಸಿ ಅಭಿನಂದಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಚಂಡೆಬಳಗದ ಅಧ್ಯಕ್ಷೆ ಗೀತಾ ವಾಗ್ಲೆ ವಹಿಸಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಭವಾನಿ ನಾಯಕ್ ವರದಿ ಓದಿದರು. ಶೈಲಜಾ ಪಾಟ್ಕರ್, ಸಂಗೀತಾ ಪಾಟ್ಕರ್, ನಾಗವೇಣಿ ಪ್ರಭು, ಆಶಾ ನಾಯಕ್, ವಿದ್ಯಾ ಪರಿಚಯಿಸಿದರು. ಕುಸುಮಾ ಕಾಮತ್ ಕರ್ವಾಲು ಧನ್ಯವಾದವಿತ್ತರು. ಭವಾನಿ ನಾಯಕ್ ನಿರೂಪಿಸಿದರು. ಖ್ಯಾತ ಗಾಯಕರಾದ ರವೀಂದ್ರ ಪ್ರಭು ಮುಲ್ಕಿ ಇವರಿಂದ "ಭಕ್ತಿ ಸಿಂಚನ" ಕಾರ್ಯಕ್ರಮ ಜರುಗಿತು.
