Updated News From Kaup

ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಸಭೆ

Posted On: 25-06-2023 03:43PM

ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಬಡಾಗ್ರಾಮ ಉಚ್ಚಿಲ ಇದರ ಜೀರ್ಣೋದ್ಧಾರ ಸಮಿತಿ ಸಭೆಯು ಇಂದು ನಡೆಯಿತು.

ಕಟಪಾಡಿ : ತ್ರಿಶಾ ಕ್ಲಾಸಸ್ - ಸಿ .ಎ. ಫೌಂಡೇಷನ್ ವಿದ್ಯಾರ್ಥಿಗಳ ಮಾಹಿತಿ ಕಾರ್ಯಗಾರ

Posted On: 25-06-2023 02:58PM

ಕಟಪಾಡಿ : ಸಿ.ಎ ಸಿ.ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ.ಎ. ಫೌಂಡೇಷನ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಇಂದು ನಡೆಯಿತು.

ಕಾಪು ಕ್ಷೇತ್ರದ ಪ್ರೌಢಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುವ ಬಗ್ಗೆ ಶಾಸಕರಿಂದ ಸಭೆ

Posted On: 24-06-2023 09:59PM

ಕಾಪು : ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಖಾಸಗಿ ಪ್ರೌಢಶಾಲಾ ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ಕರಾವಳಿಯ ಗಂಡು ಕಲೆ ಎಂದು ಪ್ರಸಿದ್ಧಿ ಪಡೆದ ಯಕ್ಷಗಾನ ಕಲೆಯನ್ನು ಕಲಿಸುವ ನಿಟ್ಟಿನಲ್ಲಿ ಶನಿವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಶಾಸಕರ ಕಚೇರಿಯಲ್ಲಿ ಯಕ್ಷಗಾನ ಕಲಾರಂಗ (ರಿ.) ಇದರ ಪದಾಧಿಕಾರಿಗಳೊಂದಿಗೆ ಮತ್ತು ಶಾಲಾ ಮುಖ್ಯೋಪಾಧ್ಯಾಯರೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಉಡುಪಿ : ಡಾII ದೇವದಾಸ್ ಕಾಮತ್ ಹಿರಿಯಡ್ಕರವರಿಗೆ ಗೌರವಾಪ೯ಣೆ

Posted On: 24-06-2023 09:55PM

ಉಡುಪಿ : ಭಾರತೀಯ ವೈದ್ಯ ಸಂಘ ಕನಾ೯ಟಕ ಇದರ ವತಿಯಿಂದ ವೈದ್ಯರ ದಿನದ ಪ್ರಶಸ್ತಿಗೆ ಆಯ್ಕೆಯಾಗಿರುವ ಡಾII ದೇವದಾಸ ಕಾಮತ್ ಡಾII ಸುಧಾ ಕಾಮತ್ ದಂಪತಿ ಹಿರಿಯಡ್ಕ ಇವರನ್ನು ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ವತಿಯಿಂದ ಶನಿವಾರ ಕಾಮತ್ ಕ್ಲಿನಿಕ್‌ ನಲ್ಲಿ ಗೌರವಿಸಲಾಯಿತು.

ಕಾರ್ಕಳ : ಕ್ರಿಯೇಟಿವ್‌ ಕಾಲೇಜಿನ ಉಪನ್ಯಾಸಕ ಬಿ ರಾಘವೇಂದ್ರ ರಾವ್‌ ಅವರ 56ನೇ ಕೃತಿ ಹಾವಿನ ಮನೆ ಬಿಡುಗಡೆ

Posted On: 24-06-2023 07:41PM

ಕಾರ್ಕಳ : ರಾಘವೇಂದ್ರ ರಾವ್ ಅವರು ಈಗಾಗಲೇ 55 ಕೃತಿಗಳನ್ನು ಪೂರೈಸಿದ್ದು, 56ನೇ ಕೃತಿ “ಹಾವಿನ ಮನೆ” ಪತ್ತೆದಾರಿ ಕಾದಂಬರಿ ಇತ್ತೀಚೆಗೆ ಬೆಂಗಳೂರಿನ ರಮಣಶ್ರೀ ಹೋಟೇಲಿನಲ್ಲಿ ವೀರಲೋಕ ಪ್ರಕಾಶನದ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಲೋಕಾರ್ಪಣೆಗೊಂಡಿತು.

ಶಿರ್ವ : ಸಂತ ಮೇರಿ ಮಹಾ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ

Posted On: 24-06-2023 02:21PM

ಶಿರ್ವ : ಇಂದಿನ ವಿವಿಧ ಕ್ಷೇತ್ರಗಳಲ್ಲಿ ದತ್ತಾಂಶ ಸಮಸ್ಯೆಗಳನ್ನು, ಪರಿಹರಿಸಲು ಡೇಟಾ ವಿಜ್ಞಾನವನ್ನು ಬಳಸುವ ಮೂಲಕ ದತ್ತಾಂಶ ಗಣಿಗಾರಿಕೆ, ಯಂತ್ರ ಕಲಿಕೆ ಮತ್ತು ಅಂಕಿಅಂಶಗಳ ವಿಶ್ಲೇಷಣೆಯ ಸಂಯೋಜನೆಯಾಗಿದೆ. ಯುವಕರು ಇಂತಹ ಡೇಟಾ ವಿಜ್ಞಾನದ ಕೌಶಲ್ಯಗಳನ್ನು ಕಲಿಯುವ ಮೂಲಕ ವ್ಯಾಪಾರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ವ್ಯವಹಾರಗಳಿಗೆ ಉತ್ತಮ ನಿರ್ಧಾರಗಳನ್ನು ನೀಡುವ ಮೂಲಕ ಉತ್ತಮ ಉಪಾದಿಗಳನ್ನು ಪಡೆಯಬಹುದೆಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಏರ್ಪಡಿಸಿದ ಡಿಜಿಟಲ್ ಟೆಕ್ನಾಲಜಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ,ಡೇಟಾ ಸೈನ್ಸ್ ಮತ್ತು ಉದ್ಯೋಗ ಅವಕಾಶಗಳು ಎಂಬ ವಿಶೇಷ ಉಪನ್ಯಾಸದಲ್ಲಿ ಮಂಗಳೂರಿನ ಕಾಗ್ನೆಟಿವ್ ಸೊಲ್ಯೂಷನ್ಸ್ ನ ಅಸಿಸ್ಟೆಂಟ್ ಹೆಚ್ ಆರ್ ಲೀಡರ್ಟೀಮ್ ಕುಮಾರಿ ಕೃತಿಕಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕಟಪಾಡಿ : ತ್ರಿಶಾ ವಿದ್ಯಾ ಕಾಲೇಜು - ಫೋಕಸ್ 360 ಬ್ಯಾಚ್ ವಿದ್ಯಾಥಿಗಳ ಶಿಕ್ಷಕ-ರಕ್ಷಕ ಭೇಟಿ

Posted On: 24-06-2023 11:14AM

ಕಟಪಾಡಿ : ಪದವಿ ಶಿಕ್ಷಣ ಎನ್ನುವುದು ಕೇವಲ ಪುಸ್ತಕದ ಜ್ಞಾನವನ್ನು ಹೊಂದುವುದಲ್ಲ. ವ್ಯವಹಾರ ಕ್ಷೇತ್ರಕ್ಕೆ ಬೇಕಾದ ಕೌಶಲ್ಯಗಳು ಹಾಗೂ ಜ್ಞಾನವನ್ನು ಹೊಂದುವುದೂ ಮುಖ್ಯವಾಗುತ್ತದೆ. ಇಲ್ಲವಾದರೆ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮೂಲೆ ಗುಂಪಾಗಿ ಬಿಡುತ್ತೇವೆ. ಅದಲ್ಲದೆ ವಿದ್ಯಾರ್ಥಿಯನ್ನು ಸತ್ಪ್ರಜೆಯನ್ನಾಗಿ ಮಾಡೋದು ವಿದ್ಯಾ ಸಂಸ್ಥೆಯ ಜೊತೆಗೆ ಹೆತ್ತವರ ಜವಾಬ್ದಾರಿಯೂ ಆಗಿದೆ ಎಂದು ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್ ಅವರು ತ್ರಿಶಾ ಸಂಸ್ಥೆಯ 'ಬಿ.ಕಾಂ ಫೋಕಸ್ 360' ಮಕ್ಕಳ ಶಿಕ್ಷಕ-ರಕ್ಷಕ ಭೇಟಿಯಲ್ಲಿ ಹೇಳಿದರು.

ಕಾರ್ಕಳ : ಪರಶುರಾಮ ಥೀಂ ಪಾರ್ಕ್ ಭೇಟಿ - ತಾತ್ಕಾಲಿಕ ನಿಷೇಧ

Posted On: 24-06-2023 09:06AM

ಕಾರ್ಕಳ : ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್ನಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಜೂನ್ 26 ರಿಂದ ಸೆಪ್ಟಂಬರ್ ಅಂತ್ಯದವರೆಗೆ ಪರಶುರಾಮ ರ್ಥೀಂ ಪಾರ್ಕ್ಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಜಮಾಡಿ : ಶಾಸಕರಿಂದ ಬಂದರು ಕಾಮಗಾರಿ ಪರಿಶೀಲನೆ

Posted On: 24-06-2023 07:02AM

ಹೆಜಮಾಡಿ : ಇಲ್ಲಿ 188 ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಶೇಕಡಾ 60 ರಷ್ಟು ಪೂರ್ಣಗೊಂಡಿರುವ ಬಂದರಿನ ಕಾಮಗಾರಿಯ ಪ್ರಗತಿ ಪರಿಶೀಲನೆಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿದರು.

ಉಡುಪಿ : ಮಿತ್ರ ಆಸ್ಪತ್ರೆಯಲ್ಲಿ ಡಿಜಿಟಲ್ ಎಕ್ಸ್ ರೆ ವಿಭಾಗ ಉದ್ಘಾಟನೆ

Posted On: 24-06-2023 06:59AM

ಉಡುಪಿ : ಇಲ್ಲಿನ ಮಿತ್ರ ಆಸ್ಪತ್ರೆಯಲ್ಲಿ ಡಿಜಿಟಲ್ ಎಕ್ಸ್ ರೆ ವಿಭಾಗವನ್ನು ಡಾ. ಬಿ.ಜಿ. ಆಚಾರ್ಯ ಮತ್ತು ಡಾ. ಶ್ರೀಪತಿ ಎಂ ಭಟ್ ಶುಕ್ರವಾರ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.