Updated News From Kaup
ಕಾಪು : ಬಡವರ ಹಿತದೃಷ್ಟಿಯ ಕಾನೂನು ನಾವು ಆರಿಸಿ ಕಳಿಸಿದ ಪ್ರಜಾ ಪ್ರತಿನಿಧಿಗಳ ಪ್ರಯತ್ನದಿಂದ ಆಗಬೇಕಿದೆ - ಕೆ. ಮಹಾಂತೇಶ
Posted On: 06 Aug 2023, 03:01 PM
ಕಾಪು : ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದಿಂದ 19ನೇ ವಾರ್ಷಿಕ ಮಹಾಸಭೆ ಕಾಪುವಿನ K1 ಹೋಟೆಲ್ ಸಭಾಂಗಣದಲ್ಲಿ ಭಾನುವಾರ ಜರಗಿತು. ಕಾರ್ಯಕ್ರಮನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಮೂಲಕ 45 ಲಕ್ಷ ಮಂದಿ ನೋಂದಾಯಿತರಾಗಿದ್ದಾರೆ. ಆದರೆ ನಿಜವಾದ ನಿರ್ಮಾಣ ವಲಯದ ಕಾರ್ಮಿಕರ ನೋಂದಾಯಿತವಾಗಿಲ್ಲ. ಸ್ವಾತಂತ್ರ್ಯಬಂದ ಮೇಲೆ ಅಂದರೆ 1996 ರಲ್ಲಿ ಕಾರ್ಮಿಕರಿಗಾಗಿ ಕಾನೂನು ಬಂತು. 2007 ಕರ್ನಾಟಕದಲ್ಲಿ ಜಾರಿಯಾಯಿತು. ಬಡವರ ಹಿತದೃಷ್ಟಿಯ ಕಾನೂನು ಜಾರಿಯಾಗುವುದು ಬೀದಿಯಲ್ಲಿ ಮಾತನಾಡಿ ಅಲ್ಲ ನಾವು ಆರಿಸಿ ಕಳಿಸಿದ ಪ್ರಜಾ ಪ್ರತಿನಿಧಿಗಳ ಪ್ರಯತ್ನದಿಂದಾಗಬೇಕಾಗಿದೆ. ಅವರು ಕಾರ್ಮಿಕರ ಪರ ಮಾತನಾಡಬೇಕಾಗಿದೆ. ಕೇಂದ್ರ ಸರಕಾರ ಕಾರ್ಮಿಕರ ಬಗೆಗಿನ ಕೆಲವು ಯೋಜನೆಗಳನ್ನು ರದ್ದು ಮಾಡಲೆತ್ನಿಸಿದೆ. ಸರಕಾರಗಳು ಶ್ರೀಮಂತರ ಪರವಾಗಿದೆ. ಬಡವರಿಗೆ ತೊಂದರೆಯಾಗಿದೆ. ಎಲ್ಲಾ ಕಾರ್ಮಿಕರ ಸಂಘಗಳ ಸಂಘಟಿತ ಪ್ರಯತ್ನದಿಂದ ಕಾನೂನನ್ನು ರದ್ದು ಮಾಡಲು ಬಿಡಲಿಲ್ಲ. ಕಟ್ಟಡ ಕಾರ್ಮಿಕರ ಬಗೆಗೆ ಚರ್ಚೆ ಉಡುಪಿ ದಕ್ಷಿಣಕನ್ನಡದಲ್ಲಿ ಆಗುತ್ತಿಲ್ಲ. ಬದಲಾಗಿಲ್ಲ ವಿಡಿಯೋ, ಹಿಜಾಬ್ ಇತ್ಯಾದಿಗಳ ಬಗ್ಗೆ ಆಗುತ್ತಿದೆ. ದುಡಿಯೋ ಜನರು ಜಾತಿ ಧರ್ಮದ ಹೆಸರಿನಲ್ಲಿ ಇರಬಾರದು. ಇಲ್ಲಿ ಎಲ್ಲರೂ ಒಂದೇ. ಕಟ್ಟಡ ಕಾರ್ಮಿಕರ ಮಕ್ಕಳು ಉನ್ನತ ಹುದ್ದೆ ಅಲಂಕರಿಸಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ಶೇಖರ ಬಂಗೇರ ವಹಿಸಿದ್ದರು. ಈ ಸಂದರ್ಭ ಸಿ.ಐ.ಟಿ.ಯು. ಉಡುಪಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಕಾ| ಸುರೇಶ ಕಲ್ಲಾಗರ, ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಖಜಾಂಜಿ ಕಾ| ರೊನಾಲ್ಡ್ ರಾಜೇಶ್, ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಗೌರವಾಧ್ಯಕ್ಷರಾದ ದಯಾನಂದ ಕೋಟ್ಯಾನ್, ಉಪಾಧ್ಯಕ್ಷರಾದ ಉದಯ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಖಜಾಂಚಿ ಗಣೇಶ ನಾಯಕ್, ಕಾಪು ಘಟಕದ ಅಧ್ಯಕ್ಷ ರಾಮ ಸಾಲ್ಯಾನ್, ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್, ಸಾಲಿಗ್ರಾಮ ಶಶಿಕಲ, ಶಶಿಧರ್, ಮತ್ತಿತರರು ಉಪಸ್ಥಿತರಿದ್ದರು. ಸಭೆಗೂ ಮುನ್ನ ಜನತೆಯ ಸೌಹಾರ್ದತೆ - ಕಟ್ಟಡ ಕಾರ್ಮಿಕರ ಒಗ್ಗಟ್ಟಿಗಾಗಿ, ಕಲ್ಯಾಣ ಮಂಡಳಿ ಬಲ ಪಡಿಸಲು ಒತ್ತಾಯಿಸಿ ಸಿ ಐ ಟಿ ಯು ಬೆಂಬಲದೊಂದಿಗೆ ಕಾಪು ಸರಕಾರಿ ಆಸ್ಪತ್ರೆಯ ಬಳಿಯಿಂದ K1 ಹೋಟೆಲ್ ವರೆಗೆ ಮೆರವಣಿಗೆ ನಡೆಯಿತು.
ಪಡುಬಿದ್ರಿ : ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸಂಪನ್ನ
Posted On: 06 Aug 2023, 02:42 PM
ಪಡುಬಿದ್ರಿ : ಜೆಸಿಐ ಪಡುಬಿದ್ರಿ, ಹಠಯೋಗ ಶಿಕ್ಷಣ ಸಮಿತಿ ಪಡುಬಿದ್ರಿ, ಶ್ರೀ ಸುಬ್ರಹ್ಮಣ್ಯ ಯುವಕ ಯುವತಿ ವೃಂದ, ಪಾದೆಬೆಟ್ಟು, ರೋಟರಿ ಕ್ಲಬ್ ಪಡುಬಿದ್ರಿ, ಪಡುಬಿದ್ರಿ ವಲಯದ ಎಲ್ಲಾ ಕ್ರಿಕೆಟ್ ತಂಡಗಳು, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ, ಪಡುಬಿದ್ರಿ ಘಟಸಮಿತಿ, ಉಡುಪಿ ಬೆಳ್ಮಣ್ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ಇವರ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ರವಿವಾರ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಪಡುಬಿದ್ರಿ ದುರ್ಗಾ ಕ್ಲಿನಿಕ್ ವೈದ್ಯೆ ಡಾ| ಪಯಸ್ವಿನಿ ಶೆಟ್ಟಿಗಾರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಜೆಸಿಐ ಅಧ್ಯಕ್ಷರಾದ ಯಶೋದ ವಹಿಸಿದ್ದರು. ಕಾರ್ಯಕ್ರಮಲ್ಲಿ ವಿಶ್ವಹಿಂದು ಪರಿಷತ್ ಜಿಲ್ಲಾಧ್ಯಕ್ಷರಾದ ವಿಷ್ಣುಮೂರ್ತಿ ಆಚಾರ್ಯ, ಪಾದಬೆಟ್ಟು, ಕೆ.ಪಿ.ಎಸ್ ಪಡುಬಿದ್ರಿ ಮುಖ್ಯ ಶಿಕ್ಷಕ ಕೃಷ್ಣಯ್ಯ, ಶ್ರೀ ಸುಬ್ರಹ್ಮಣ್ಯ ಯುವಕ ಯುವತಿ ವೃಂದ ಪಾದೆಬೆಟ್ಟು ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀ ಸುಬ್ರಹ್ಮಣ್ಯ ಯುವತಿ ವೃಂದ ಪಾದೆಬೆಟ್ಟು ಅಧ್ಯಕ್ಷೆ ಗೀತಾ ಪ್ರಭಾಕರ್, ಹಠಯೋಗ ಶಿಕ್ಷಣ ಸಮಿತಿ ಪಡುಬಿದ್ರಿ ಅಧ್ಯಕ್ಷ ಡಾ| ಮನೋಜ್ ಶೆಟ್ಟಿ, ರೋಟರಿ ಕ್ಲಬ್, ಪಡುಬಿದ್ರಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಗೌರವಾಧ್ಯಕ್ಷ ಶರತ್ ಶೆಟ್ಟಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಪಡುಬಿದ್ರಿ ಅಧ್ಯಕ್ಷೆ ಪುಷ್ಪಲತಾ ಗಂಗಾಧರ್, ಜೆಸಿಐ ರಾಷ್ಟ್ರೀಯ ಆಡಳಿತ ಸದಸ್ಯ ವೈ ಸುಕುಮಾರ್, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಮತ್ತಿತರರು ಉಪಸ್ಥಿತರಿದ್ದರು. ಪಡುಬಿದ್ರಿ ಜೆಸಿಐ ಅಧ್ಯಕ್ಷರಾದ ಯಶೋದ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ದೇವಿಪ್ರಸಾದ್ ಬೆಳ್ಳಿಬೆಟ್ಟು ವಂದಿಸಿದರು. ರಕ್ತದಾನ ಶಿಬಿರದಲ್ಲಿ 56 ಮಂದಿ ರಕ್ತದಾನ ಮಾಡಿದರು.
ಶಿರ್ವ : ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ
Posted On: 06 Aug 2023, 09:17 AM
ಶಿರ್ವ : ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘ .ನಿ, ಶಿರ್ವ ಹಾಗೂ ಸಹಕಾರ ಭಾರತಿ ಕಾಪು ತಾಲೂಕು ಸಹಯೋಗದಲ್ಲಿ ಕುತ್ಯಾರು ವಿದ್ಯಾದಾಯಿನಿ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಜರಗಿತು. ಕಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಕೇ೦ಜ ಶ್ರೀಧರ ತಂತ್ರಿ ಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಸಹಕಾರ ಭಾರತಿ ಕಾಪು ತಾಲೂಕು ಪ್ರಮುಖರಾದ ಶಶಿಧರ ವಾಗ್ಲೆ ಬೆಳ್ಳೆಯವರು ಸಸಿ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಸಹಕಾರಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ವಾರಿಜಾ ಆರ್.ಕಲ್ಮಾಡಿ ಹಾಗೂ ಮುಖ್ಯ ಶಿಕ್ಷಕಿ ಶರ್ಮಿಳಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಅವರು ನಿರ್ವಹಿಸಿದ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಅಶೋಕ್ ರಾವ್, ನಾರಾಯಣ ನಾಯಕ್, ವಿಲಿಯಂ ಬ್ಯಾಪ್ಟಿಸ್ಟ್ ಮಚಾದೋ, ವಿಜಯ ಪೂಜಾರಿ ಮತ್ತು ಹರಿಣಾಕ್ಷ ಶೆಟ್ಟಿ ಹಾಗೂ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕಿಯರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಮಾವಿನ ಸಸಿಗಳನ್ನು ವಿತರಿಸಲಾಯಿತು.
ಮಟ್ಟಾರು : ಸಾಮೂಹಿಕ ಶ್ರೀರಾಮ ತಾರಕ ಮಂತ್ರ ಪಠಣ ಮತ್ತು ಎಳ್ಳುಗಂಟು ದೀಪ ಪ್ರಜ್ವಲನಾ ಕಾರ್ಯಕ್ರಮ
Posted On: 05 Aug 2023, 10:15 PM
ಮಟ್ಟಾರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ಭೂಮಿ ಪೂಜನಾ ದಿವಸದ ಪ್ರಯುಕ್ತ ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಶ್ರೀರಾಮ ತಾರಕ ಮಂತ್ರ ಪಠಣ ಮತ್ತು ಎಳ್ಳುಗಂಟು ದೀಪ ಪ್ರಜ್ವಲನೆ ಕಾರ್ಯಕ್ರಮ ನಡೆಯಿತು. ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಮಧ್ವರಾಜ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉಧ್ಘಾಟಿಸಿದರು. ವಿಶ್ವ ಹಿಂದೂ ಪರಿಷದ್ ಮಟ್ಟಾರು ಅಧ್ಯಕ್ಷ ಜಗದೀಶ ಆಚಾರ್ಯ, ಬಜರಂಗದಳ ಸಂಚಾಲಕ ಸುರೇಶ ಆಚಾರ್ಯ, ಮಾತೃಶಕ್ತಿ ಪ್ರಮುಖ್ ಸುಮತಿ ಸಾಲ್ಯಾನ್, ದುರ್ಗಾವಾಹಿನಿ ಸಂಚಾಲಕಿ ಶ್ವೇತಾ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಅಧ್ಯಕ್ಷ ಜಯಪ್ರಕಾಶ್ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಸಾಮೂಹಿಕ ದೀಪ ಪ್ರಜ್ವಲನೆ ಮತ್ತು ಶ್ರೀರಾಮ ತಾರಕ ಮಂತ್ರ ಪಠಣ ನಡೆಯಿತು.
ಕಟಪಾಡಿ : ಎಸ್.ವಿ.ಎಸ್ ಹೈಸ್ಕೂಲ್ ಹಳೆವಿದ್ಯಾರ್ಥಿ ಸಂಘದಿಂದ 70,000 ರೂ. ಮೌಲ್ಯದ ಸಮವಸ್ತ್ರ, ಶಾಲಾ ಶುಲ್ಕ ಕೊಡುಗೆ
Posted On: 05 Aug 2023, 04:55 PM
ಕಟಪಾಡಿ : ಎಸ್.ವಿ.ಎಸ್ ಹೈಸ್ಕೂಲ್ ಕಟಪಾಡಿಯ ಹಳೆವಿದ್ಯಾರ್ಥಿ ಸಂಘದ ಅಮೃತ ಮಹೋತ್ಸವದ ಪ್ರಯುಕ್ತ ಎಸ್.ವಿ.ಎಸ್ ಹೈಸ್ಕೂಲ್ ನ ವಿದ್ಯಾರ್ಥಿಗಳಿಗೆ ಸುಮಾರು 70000 ರೂ. ಮೌಲ್ಯದ ಸಮವಸ್ತ್ರ ಹಾಗೂ ಶಾಲಾ ಶುಲ್ಕವನ್ನು ಸಂಘದ ಅಧ್ಯಕ್ಷರಾದ ಪ್ರೇಮ್ ಕುಮಾರ್ ಮುಂದಾಳುತ್ವದಲ್ಲಿ ಎಸ್.ವಿ.ಎಸ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೀಡಲಾಯಿತು. ಎಸ್.ವಿ.ಎಸ್ ವಿದ್ಯಾವರ್ಧಕ ಸಂಘದ ಆಡಳಿತಮಂಡಳಿಯ ಸತ್ಯೇಂದ್ರ ಪೈ, ನಿತ್ಯಾನಂದ ಶೆಣೈ, ವೆಂಕಟರಮಣ ಭಟ್,ಗಣೇಶ್ ಕಿಣಿ, ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ತಂತ್ರಿ ಹಾಗೂ ಉಪಾಧ್ಯಾಯರು, ಹಳೆ ವಿದ್ಯಾರ್ಥಿಗಳಾದ ಪಂಚಾಯತ್ ಉಪಾಧ್ಯಕ್ಷರಾದ ಪ್ರಭಾ ಶೆಟ್ಟಿ, ಕಾರ್ಯದರ್ಶಿ ರಾಘವೇಂದ್ರ ರಾವ್, ಖಜಾಂಚಿ ಮಹೇಶ್ ಅಂಚನ್, ಜಯಶ್ರೀ, ಶಶಿಕಲಾ, ಪ್ರದೀಪ್, ಸತೀಶ್ ಕುಮಾರ್ ಕೇದಾರ್ ಸುಕುಮಾರ್, ಸಂತೋಷ್.ಎನ್.ಎಸ್ ಕಟಪಾಡಿ, ಬಿ. ಬಿ. ಸಾಫುರಾ ಉದ್ಯಾವರ ಉಪಸ್ಥಿತರಿದ್ದರು.
ಪಡುಬಿದ್ರಿ : ಶಾಲಾ ವಿವಿಧ ಸಂಘಗಳು ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳ ವಿಕಸನಕ್ಕೆ ಉತ್ತಮ ವೇದಿಕೆ - ಬಿ.ಪುಂಡಲೀಕ ಮರಾಠೆ
Posted On: 04 Aug 2023, 07:47 PM
ಪಡುಬಿದ್ರಿ : ವಿದ್ಯಾರ್ಥಿಗಳಲ್ಲಿ ಅಡಗಿರುವ ವಿಶಿಷ್ಟ ಶಕ್ತಿಯನ್ನು ಲೋಕಮುಖಕ್ಕೆ ತೋರಿಸಲು ಅವರಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸಬೇಕಾದದ್ದು ಶಿಕ್ಷಣ ಸಂಸ್ಥೆಗಳ ಕರ್ತವ್ಯವೇ ಆಗಿದೆ. ಆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಮಗ್ರ ವಿಕಾಸದ ಆಶಯದೊಂದಿಗೆ ಪಡುಬಿದ್ರಿ ಗಣಪತಿ ಪ್ರೌಢ ಶಾಲೆ ಉತ್ತಮ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ವಿದ್ಯಾರ್ಥಿಗಳು ಸಾಹಿತ್ಯ, ಸಂಗೀತ, ಕ್ರೀಡೆ, ಚಿತ್ರಕಲೆ ಹೀಗೆ ವಿವಿಧ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರತಿಭಾ ಸಂಪನ್ನರಾಗಿ ಜೀವನವನ್ನು ಸಾರ್ಥಕಗೊಳಿಸಿ ಯಶಸ್ಸಿನ ಪಥದಲ್ಲಿ ಸಾಗಬೇಕು. ಶಾಲಾ ವಿವಿಧ ಸಂಘಗಳು ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳ ವಿಕಸನಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಹೇಳಿದರು. ಅವರು ಶುಕ್ರವಾರ ಪಡುಬಿದ್ರಿ ಗಣಪತಿ ಪ್ರೌಢಶಾಲೆ ಪಡುಬಿದ್ರಿ ಮತ್ತು ಶ್ರೀಬ್ರಹ್ಮ ವಿದ್ಯಾಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆ ಪಡುಬಿದ್ರಿ ಇದರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಶಾಲಾ ಪಠ್ಯಪೂರಕ ಚಟುವಟಿಕೆಗಳ ವಿವಿಧ ಸಂಘಟನೆಗಳನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರುಗಳಾದ ಶ್ರೀಶ ಬಾಯರಿ, ಚಂದ್ರಕಾಂತ್, ವಸಂತಿ, ನಮಿತಾ, ಭಾರತಿ, ಸಂಗೀತಾ, ಸ್ವಾತಿ, ದೀಪಕ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಅನುರಾಧಾ ಪಿ.ಎಸ್.ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕರಾದ ಡಾ.ರಾಘವೇಂದ್ರ ರಾವ್ ಆಶಯನುಡಿಯಲ್ಲಿ ಶಾಲೆಯಲ್ಲಿ ಪ್ರಾರಂಭಿಸಲಾಗುತ್ತಿರುವ ವಿವಿಧ ಸಂಘಗಳು ಮತ್ತು ಹಿನ್ನೆಲೆಯನ್ನು ವಿವರಿಸಿದರು. "ನನ್ನ ಶಾಲೆಯ ಸ್ವಚ್ಛತೆ ನನ್ನ ಕರ್ತವ್ಯ" ಹಿನ್ನೆಲೆಯಲ್ಲಿ ಏರ್ಪಡಿಸಿದ ಚಟುವಟಿಕಾ ಸ್ಫರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಚಿತ್ರಕಲಾ ಶಿಕ್ಷಕ ನರೇಂದ್ರ ಎಚ್.ಎನ್ ಗೌರವಾರ್ಪಣೆ ಮಾಡಿದರು. ವಿಜ್ಞಾನ ಶಿಕ್ಷಕಿ ಅಕ್ಷತಾ ಎಸ್.ನಿರೂಪಿಸಿದರು. ಅನ್ವಿತಾ, ಭೂಮಿಕಾ ಪ್ರಾರ್ಥಿಸಿದರು. ಶಿಕ್ಷಕಿ ಅನಿತಾ ಆಚಾರ್ಯ ವಂದಿಸಿದರು.
ಆಗಸ್ಟ್ 6: ಕುಲಾಲ ಸಂಘ ನಾನಿಲ್ತಾರು, ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Posted On: 04 Aug 2023, 05:01 PM
ಕಾರ್ಕಳ : ಇಲ್ಲಿಯ ನಾನಿಲ್ತಾರು ಕುಲಾಲ ಸಂಘದಲ್ಲಿ ಆಗಸ್ಟ್ 6 ರ ಭಾನುವಾರ ಬೆಳ್ಳಿಗ್ಗೆ 11 ಗಂಟೆಯಿಂದ ಕುಲಾಲ ಸಭಾಭವನದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ ಪ್ರತಿ ವರ್ಷದಂತೆ ನಡೆಯಲಿದ್ದು, ಸನ್ಮಾನ ಜೊತೆಗೆ, ಸಮುದಾಯದ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರಯು ಸಮುದಾಯದ ಗಣ್ಯರ ಜೊತೆಗೆ ನಡೆಯಲ್ಲಿದೆ ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿರುವರು.
ಉಡುಪಿ ವಿಡಿಯೋ ಪ್ರಕರಣ : ಎಸ್ ಐ ಟಿ ತನಿಖೆಗೆ ಆಗ್ರಹಿಸಿ ಶಾಸಕರಿಂದ ರಾಜ್ಯಪಾಲರಿಗೆ ಮನವಿ
Posted On: 04 Aug 2023, 04:50 PM
ಉಡುಪಿ : ಇಲ್ಲಿನ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಮೊಬೈಲ್ ಫೋನ್ ಮೂಲಕ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ ಪ್ರಕರಣವನ್ನು ಎಸ್.ಐ.ಟಿ ತನಿಖೆ ನಡೆಸಲು ರಾಜ್ಯ ಸರಕಾರಕ್ಕೆ ಆದೇಶ ನೀಡುವಂತೆ ರಾಜ್ಯಪಾಲರಿಗೆ ಇಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಸಕರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ಶಾಸಕ ಭರತ್ ಶಟ್ಟಿ, ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳೆಪಾಡಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮುಂತಾದವರು ಉಪಸ್ಥಿತರಿದ್ದರು.
ಪಡುಬಿದ್ರಿ ಬ್ರಹ್ಮಸ್ಥಾನ: ಅಜಕಾಯಿ ಸೇವೆ ಸಂಪನ್ನ
Posted On: 03 Aug 2023, 12:08 PM
ಪಡುಬಿದ್ರಿ: ಬೇಂಗ್ರೆ ಶಿವಳ್ಳಿ ಬ್ರಾಹ್ಮಣ ಹತ್ತು ಸಮಸ್ತರ ಆಡಳಿತ ಸಂಸ್ಥೆ ವನ ದುರ್ಗಾ ಟ್ರಸ್ಟ್ನ ಆಡಳಿತಕ್ಕೊಳಪಟ್ಟಿರುವ ಬಯಲು ಆಲಯವೆಂದೇ ಜಗತ್ಪ್ರಸಿದ್ದಿ ಪಡೆದ ಪಡುಬಿದ್ರಿಯ ಶ್ರೀ ಖಡೇಶ್ವರಿ ಬ್ರಹ್ಮಸ್ಥಾನದಲ್ಲಿ ಬುಧವಾರ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯೊಂದಿಗೆ ಶ್ರದ್ಧಾ ಭಕ್ತಿಯ ಅಜಕಾಯಿ ಸೇವೆಯು ಸಂಪನ್ನಗೊಂಡಿತು. ಸುಮಾರು 15000 ಕ್ಕೂ ಮಿಕ್ಕಿ ತೆಂಗಿನಕಾಯಿಗಳು ಶ್ರೀ ಸನ್ನಿಧಾನಕ್ಕೆ ಸಮರ್ಪಿತವಾಯಿತು. ಅಜಕಾಯಿ ಸೇವೆಯ ಬಳಿಕ ಭಕ್ತರಿಗೆ ಅರ್ಪಿತ ತೆಂಗಿನ ಕಾಯಿಗಳನ್ನು ಪ್ರಸಾದದ ರೂಪದಲ್ಲಿ ವಿತರಿಸಲಾಯಿತು. ಪಾತ್ರಿ ಸುರೇಶ್ ರಾವ್, ಅರ್ಚಕ ವರ್ಗ, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
ಮಂಗಳೂರು : ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವಿಶ್ವವಿದ್ಯಾಲಯಕ್ಕೆ 7 ನೇ ರ್ಯಾಂಕ್ - ಶ್ರೀಪ್ರಿಯ
Posted On: 03 Aug 2023, 07:51 AM
ಮಂಗಳೂರು : ಮೂಡುಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ(ಮೈಟ್) ವಿದ್ಯಾರ್ಥಿನಿ ಶ್ರೀಪ್ರಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಈ ಬಾರಿ ವಿಶ್ವವಿದ್ಯಾಲಯಕ್ಕೆ 7 ನೇ ರ್ಯಾಂಕ್ ಬರುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತಿಯಲ್ಲಿ ನಡೆದ 23ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶ್ರೀಪ್ರಿಯ ಅವರು ಗಣ್ಯರಿಂದ ಪುರಸ್ಕಾರ ಪಡೆದರು. ಸಾಧನೆಯ ಹಿಂದಿನ ಶ್ರಮ : ತಮ್ಮ ಸಾಧನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ, ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಸುಬ್ರಹ್ಮಣ್ಯ ಭಟ್ ಅವರ ಪುತ್ರಿ, ಅಳದಂಗಡಿ ಎಂಬ ಗ್ರಾಮಾಂತರ ಪ್ರದೇಶದಿಂದ ನಿತ್ಯ ಕಾಲೇಜಿಗೆ ಓಡಾಟ ಮಾಡುತ್ತಿದ್ದ ಶ್ರೀಪ್ರಿಯ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರತಿವರ್ಷ ನಡೆಸುವ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೆ. ಅತ್ಯಂತ ಹೆಚ್ಚು ಪುನರಾವರ್ತನೆ ಆಗುತ್ತಿದ್ದ ಪ್ರಶ್ನೆಗಳ ಬಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಗಮನಹರಿಸುತ್ತಿದ್ದೆ. ಮಹತ್ವದ ವಿಷಯಗಳ ಬಗ್ಗೆ ಪ್ರಾಧ್ಯಾಪಕರ ಬಳಿ ಚರ್ಚಿಸಿ ಬಗೆಹರಿಸಿಕೊಳ್ಳುತ್ತಿದ್ದೆ. ಬರೆದು ಕಲಿಯುವ ಅಭ್ಯಾಸ ರೂಢಿಸಿಕೊಂಡಿದ್ದರಿಂದ ಅದು ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತಿತ್ತು. ಅಳದಂಗಡಿಯಿಂದ ಮೂಡುಬಿದಿರೆ ಕಾಲೇಜಿಗೆ ಬೆಳಗ್ಗೆ ಬೇಗ ತೆರಳಬೇಕಾದ್ದರಿಂದ ಆ ಸಮಯದಲ್ಲಿ ಓದಲು ಸಮಯ ಸಿಗುತ್ತಿರಲಿಲ್ಲ. ಕಾಲೇಜಿನಿಂದ ವಾಪಸ್ ಬಂದ ನಂತರ ಪ್ರತಿದಿನ ರಾತ್ರಿ 9 ರಿಂದ 11 ಗಂಟೆವರೆಗೆ ಹಾಗೂ ಪರೀಕ್ಷೆ ಸಂದರ್ಭದಲ್ಲಿ ಅಧಿಕ ಸಮಯ ಓದುತ್ತಿದ್ದೆ. ನನ್ನ ಸಾಧನೆಗೆ ಪೋಷಕರು ಮತ್ತು ಕಾಲೇಜಿನ ಬೋಧಕ ವರ್ಗ ಕಾರಣ ಎಂದು ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
