Updated News From Kaup

ಕಾಪು : ಮೂಳೂರಿನಲ್ಲಿ ಕಡಲ ಕೊರೆತ ತೀವ್ರ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಧಿಕಾರಿಗಳ ಭೇಟಿ

Posted On: 15-06-2023 08:58PM

ಕಾಪು : ತಾಲೂಕಿನ ಮೂಳೂರು ತೊಟ್ಟಂ ಪ್ರದೇಶದಲ್ಲಿ ಕಡಲ ಕೊರೆತ ತೀವ್ರಗೊಂಡಿದ್ದು, ಗುರುವಾರ ಸಂಜೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕಡಲ ಕೊರೆತ ವೀಕ್ಷಿಸಿದರು.

ಉಡುಪಿ : ಸಫಾಯಿ ಕರ್ಮಚಾರಿಗಳಿಗೆ ಸರಕಾರದ ಯೋಜನೆಗಳ ಪ್ರಯೋಜನ ಒದಗಿಸಿ - ಜಿಲ್ಲಾಧಿಕಾರಿ

Posted On: 15-06-2023 11:53AM

ಉಡುಪಿ : ಸಫಾಯಿ ಕರ್ಮಚಾರಿಗಳಿಗೆ ಸರಕಾರದ ವಿವಿದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಫಲಾನುಭವಿಗಳನ್ನಾಗಿಸಿ ಅವರುಗಳು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಕ್ತದಾನಿಗಳ ದಿನಾಚರಣೆಯಿಂದ ಹೊಸ ರಕ್ತದಾನಿಗಳಿಗೆ ಪ್ರೇರಣೆ : ಡಾ. ನಾಗಭೂಷಣ ಉಡುಪ

Posted On: 15-06-2023 11:49AM

ಉಡುಪಿ : ಜಿಲ್ಲೆಯಲ್ಲಿ ರಕ್ತದಾನಿಗಳ ಸಂಖ್ಯೆ ಸಾಕಷ್ಟಿದ್ದು, ತುರ್ತು ಸಂದರ್ಭಗಳಲ್ಲಿ ಇವರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ರಕ್ತದಾನ ಮಾಡುತ್ತಿದ್ದಾರೆ. ರಕ್ತದಾನಿಗಳ ದಿನಾಚರಣೆಯು ಹೊಸ ರಕ್ತದಾನಿಗಳಿಗೆ ಪ್ರೇರಣೆ ನೀಡಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದರು. ಅವರು ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಭಾವಪ್ರಕಾಶ ಆಡಿಟೋರಿಯಂನಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಲಯನ್ಸ್ ಕ್ಲಬ್ ಉಡುಪಿ ಲಕ್ಷö್ಯ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ರೆಡ್ಕ್ರಾಸ್ ಘಟಕ ಮತ್ತು ಎನ್.ಎಸ್.ಎಸ್ ಘಟಕ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಶ್ವ ರಕ್ತದಾನಿಗಳ ದಿನಾಚರಣೆಯ ಧ್ಯೇಯವಾಕ್ಯವಾದ ರಕ್ತ ನೀಡಿ, ಪ್ಲಾಸ್ಮ ನೀಡಿ, ಜೀವನ ಹಂಚಿಕೊಳ್ಳಿ, ಹೆಚ್ಚಾಗಿ ಹಂಚಿಕೊಳ್ಳಿ ಎಂಬ ವಾಕ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡು, ರಕ್ತದಾನ ಮಾಡುವುದರಿಂದ ಈ ಕಾರ್ಯಕ್ರಮವು ಸಾರ್ಥಕತೆ ಪಡೆಯಲಿದೆ ಎಂದರು.

ಕಾಪು : ಬೆಳ್ಳೆ ಗ್ರಾಮದ ದಲಿತರಿಗೆ ಸಂಬಂಧಿಸಿದ ಭೂಮಿಯ ಕಡತ ಸರಕಾರಕ್ಕೆ ಸಲ್ಲಿಕೆಯಾಗದೆ ವಿಳಂಬ

Posted On: 14-06-2023 11:05PM

ಕಾಪು : ತಾಲ್ಲೂಕು ಬೆಳ್ಳೆ ಗ್ರಾಮದ ದಲಿತರಿಗೆ ಸಂಬಂಧಿಸಿದ ಭೂಮಿಯ ಕಡತ ತೀರಾ ಕ್ಷುಲ್ಲಕ ಕಾರಣಕ್ಕೆ ಸರಕಾರಕ್ಕೆ ಸಲ್ಲಿಕೆಯಾಗದೆ 2014 ರಿಂದ ಜಿಲ್ಲೆ- ತಾಲ್ಲೂಕು ಹಂತದಲ್ಲಿ ಅಲೆದಾಡುತ್ತಿದೆ. ಈ ಬಗ್ಗೆ ಆ ದಿನಾಂಕದಿಂದ ಈ ವರೆಗೆ ವಿಳಂಬಕ್ಕೆ ಕಾರಣರಾದ ಅತ್ಯಂತ ಗೌರವಯುತ ಸರಕಾರಿ ಅಧಿಕೃತರನ್ನು ಪ್ರಶ್ನಿಸುವವರು ಯಾರೂ ಇಲ್ಲ ಎಂದು ಸಾಮಾಜಿಕ ‌ಕಾರ್ಯಕರ್ತರಾದ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ಮತ್ತು ಶ್ರೀರಾಮ ದಿವಾಣ ಮೂಡುಬೆಳ್ಳೆ ತಿಳಿಸಿದ್ದಾರೆ.

ಜೂನ್ 15 : ತ್ರಿಶಾ ಕ್ಲಾಸಸ್ - ಸಿ.ಎಸ್.ಇ.ಇ.ಟಿ ವಿದ್ಯಾರ್ಥಿಗಳ ಮಾಹಿತಿ ಕಾರ್ಯಗಾರ

Posted On: 14-06-2023 06:33PM

ಕಟಪಾಡಿ : ಸತತ ಇಪ್ಪತ್ತೈದು ವರ್ಷಗಳಿಂದ ವಾಣಿಜ್ಯ ವಿಭಾಗದ ವೃತ್ತಿಪರ ಕೋರ್ಸ್ ಗಳ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನೂತನ ಸಿ.ಎಸ್.ಇ.ಇ.ಟಿ ಕುರಿತಾದ ಮಾಹಿತಿ ಕಾರ್ಯಗಾರವು ಜೂನ್ 15 ಗುರುವಾರದಂದು ಸಂಜೆ 6 ರಿಂದ 7:30ರ ವರೆಗೆ ಆನ್ಲೈನ್ ಮುಖಾಂತರ ನಡೆಯಲಿದೆ.

ಲಯನ್ಸ್ ಕ್ಲಬ್ ಉದ್ಯಾವರ ಸನ್ ಸೈನ್ : ನೂತನ ಅಧ್ಯಕ್ಷರಾಗಿ ಪ್ರೇಮ್ ಮಿನೇಜಸ್ ಆಯ್ಕೆ

Posted On: 14-06-2023 06:27PM

ಉದ್ಯಾವರ : ಲಯನ್ಸ್ ಜಿಲ್ಲೆ 317C ಗೆ ಒಳಪಟ್ಟ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2023- 24ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದ್ಯಮಿ ಲಯನ್ ಪ್ರೇಮ್ ಮಿನೇಜಸ್ ಆಯ್ಕೆಯಾಗಿದ್ದಾರೆ.

ಕಾರ್ಕಳ :ನೀಟ್‌ ಫಲಿತಾಂಶ ಪ್ರಕಟ, ಕ್ರಿಯೇಟಿವ್‌ನ ಜಾಗೃತಿ ಕೆ ಪಿ ಗೆ ಆಲ್‌ ಇಂಡಿಯಾ 23 ನೇ ರ‍್ಯಾಂಕ್‌

Posted On: 14-06-2023 06:11PM

ಕಾರ್ಕಳ : ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆ ಪ್ರಾರಂಭವಾದ ದ್ವಿತೀಯ ವರ್ಷದಲ್ಲೇ ಅತ್ಯುತ್ತಮ ಫಲಿತಾಂಶ ಗಳಿಸಿದ್ದಾರೆ. ಆಲ್‌ ಇಂಡಿಯಾ ರ‍್ಯಾಂಕಿಂಗ್‌ನಲ್ಲಿ ಕುಮಾರಿ ಜಾಗೃತಿ ಕೆ ಪಿ 661 ಅಂಕಗಳೊಂದಿಗೆ ಕೆಟೆಗರಿಯಲ್ಲಿ 23 ನೇ ರ‍್ಯಾಂಕ್‌, ಉದ್ಭವ್‌ ಎಂ ಆರ್‌ 625 ಅಂಕಗಳೊಂದಿಗೆ ಕೆಟೆಗರಿಯಲ್ಲಿ 72 ನೇ ರ‍್ಯಾಂಕ್‌ ಗಳಿಸಿದ್ದಾರೆ. ಹಾಗೆಯೇ ಸಂಸ್ಥೆಯ ವಿದ್ಯಾರ್ಥಿಗಳಾದ ತನುಶ್ರೀ ಕೆ ಎನ್‌ 625, ಶ್ರೇಯಸ್‌ ಎಸ್‌ ಚಿಕಾಲೇ 612, ಸಾತ್ವಿಕ್‌ ಎಸ್‌ ಶೆಟ್ಟಿ 609, ಚಂದನ ಹೆಚ್‌ ಎಂ 605, ಸಾಕ್ಷಿತ್‌ ಶೆಟ್ಟಿ 604, ಸ್ವೀಕೃತಿ ಶೆಟ್ಟಿ 596, ಗೌರಿ ಸಿ ಸಂಕೊಲ್‌ 595, ಮನೋಜ ಪಾಲನ್ಕರ್‌ 592,ಪ್ರೀತಮ್ ಎಸ್ ಜಿ 584, ಪ್ರಶಿನ್‌ ಶೆಟ್ಟಿ 578,ಚಮನ್ ಜಿ 576, ಜ್ಞಾನದೀಪ್‌ ಕೆ ಆರ್‌ 555, ಸಾನ್ವಿ ಎಂ ಆರ್‌ 548, ಶ್ರೀಗಂಗಾ 547, ಜೀವನ್‌ ಎ 545, ನೇಹಾ ಬಿ ಜಿ 543, ಮಿಂಚು ಪಿ ಆರ್‌ 535, ಅವಿನ್‌ ಫ್ರಾನ್ಸೀಸ್‌ ಡಿಸೋಜಾ 531, ಅಭಯ್‌ ಕೆ ಆರ್‌ 525, ಶ್ರೇಯಸ್‌ ಎಸ್‌ ಶೆಟ್ಟಿ 521, ಆದಿತ್ಯ ಮಹೇಶ್‌ ಶೇಟ್‌ 517, ಭರತ್‌ ವಿ 516, ಪ್ರವೀಣ್‌ ಆರ್ ಎಮ್ಮಿ 515 ಅಂಕಗಳಿಸಿ ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಮೆಡಿಕಲ್‌ ಸೀಟ್‌ ಪಡೆದುಕೊಳ್ಳಲು ಅರ್ಹರಾಗಿದ್ದಾರೆ.

ಜೂನ್ 15 : ಫ್ರೀ ಓನ್ಡ್ ವೈಕಲ್ಸ್ ಡೀಲರ್ಸ್ ಅಸೋಸಿಯೇಷನ್ ಉಡುಪಿ ವತಿಯಿಂದ ಗಿಡ ನೆಡುವ ಮತ್ತು ವಿತರಣಾ ಕಾರ್ಯಕ್ರಮ

Posted On: 14-06-2023 08:53AM

ಉಡುಪಿ : ಇಲ್ಲಿನ ಫ್ರೀ ಓನ್ಡ್ ವೈಕಲ್ಸ್ ಡೀಲರ್ಸ್ ಅಸೋಸಿಯೇಷನ್ ಉಡುಪಿ ಇದರ ವತಿಯಿಂದ ಜೂನ್ 15ರಂದು ಬೆಳಿಗ್ಗೆ 10 ಗಂಟೆಗೆ ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಒಂದು ವಿನೂತನ ಕಾಯ೯ಕ್ರಮದ ಚಾಲನೆ ದೊರಕಲಿದೆ.

ಕಾರ್ಕಳ : ಶ್ರೀಕ್ಷೇತ್ರ ಕೇಮಾರಿನಲ್ಲಿ "ಟೆಲಿಬರವು" ತಂತ್ರಾಂಶ ಲೋಕಾರ್ಪಣೆ

Posted On: 12-06-2023 07:41PM

ಕಾರ್ಕಳ : ತುಳುನಾಡಿನ ಜನರಿಗೆ ಜಾತಿಗಿಂತ ತುಳು ಸಂಸ್ಕೃತಿ ಮುಖ್ಯ, ದೇಶ ವಿದೇಶಕ್ಕೂ ಹೋದರೂ ತುಳು ಸಂಸ್ಕೃತಿಯನ್ನು ಮರೆಯಬಾರದು. ಆದರೆ ತುಳು ಭಾಷೆಯನ್ನು ಎಂಟನೇ ಪರೀಚ್ಛೇಧದಲ್ಲಿ ಸೇರಿಸುವಲ್ಲಿ ಈ ತನಕವೂ ಆಗದೇ ರಾಜಕಾರಣಿಗಳು ಕೇವಲ ಬಂಡಲ್ ಬಿಡುವಲ್ಲೇ ಕಾಲ ಕಳೆದರು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಖೇದ ವ್ಯಕ್ತಪಡಿಸಿದರು. ಜೈ ತುಲುನಾಡ್(ರಿ.) ಇದರ ನೇತೃತ್ವದಲ್ಲಿ ಶ್ರೀಕ್ಷೇತ್ರ ಕೇಮಾರಿನಲ್ಲಿ ಭಾನುವಾರ 'ಟೆಲಿಬರವು' ಎಂಬ ಆಪ್ ಲೋಕಾರ್ಪಣೆಗೊಳಿಸಿ ಅವರು ಆಶೀರ್ವಚನ ನೀಡಿ ಮಾತನಾಡಿದರು.

ಶಿರ್ವ : ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ವಿಷಯದ ಕುರಿತು ಅಭಿಯಾನ

Posted On: 12-06-2023 05:45PM

ಶಿರ್ವ : ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ ಮತ್ತು ಪರಿಸರ ಕ್ಲಬ್ ಜಂಟಿಯಾಗಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಮತ್ತು ವಿಶ್ವಪರಿಸರ ದಿನದ ಅಂಗವಾಗಿ “ಪ್ಲಾಸ್ಟಿಕ್ ವಿರುದ್ಧ ಜಾಗೃತಿ” ಅಭಿಯಾನವನ್ನು ಆಯೋಜಿಸಿತ್ತು. ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.