Updated News From Kaup
ಶ್ರೀ ಕ್ಷೇತ್ರ ಶಂಕರಪುರ : ಮಾ. 31 ರಿಂದ ಎ. 2 ರವರೆಗೆ ಶ್ರೀ ಮುಖ್ಯಪ್ರಾಣನ ಮೂರ್ತಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ
Posted On: 12 Mar 2026, 05:44 PM
ಕಾಪು : ಹಿಂದೂ ಬಾಂಧವರ ಒಗ್ಗಟ್ಟು ಮತ್ತು ಏಳಿಗೆಯ ಮಹಾ ಸಂಕಲ್ಪದಲ್ಲಿ 19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ. 31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದೆ ಎಂದು ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಯಿ ಮಠದ ಪೀಠಾಧಿಪತಿ ಶ್ರೀ ಸಾಯಿ ಈಶ್ವರ್ ಗುರೂಜಿ ಹೇಳಿದರು.
ಅವರು ಕಾಪು ಪತ್ರಿಕಾ ಭವನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸುಮಾರು 11 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರದಲ್ಲಿ ಮಾಡಿಕೊಂಡು ಬರಲಾಗುತ್ತಿದೆ. ಶ್ರೀ ಕ್ಷೇತ್ರ ಆವರಣದಲ್ಲಿ ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ 19 ಅಡಿ ಎತ್ತರದ ಏಕ ಶಿಲಾ ಶ್ರೀ ಮುಖ್ಯಪ್ರಾಣನ ಮೂರ್ತಿ ಸ್ಥಾಪನೆಯನ್ನು 2026 ಎಪ್ರಿಲ್ 02 ರಂದು ಮಾಡಲಾಗುವುದು.
ಶ್ರೀ ಮುಖ್ಯಪ್ರಾಣನ ಮೂರ್ತಿಯನ್ನು ಮಾರ್ಚ್ 14 ರಂದು ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ತರಲಾಗುವುದು.
ಮಾರ್ಚ್ 26 ರಂದು ಹನುಮ ಜನ್ಮ ಭೂಮಿಯಿಂದ ರಾಮನವಮಿಯಂದು ಹನುಮ ಜ್ಯೋತಿ ಮತ್ತು ಹನುಮ ಧ್ವಜವು ಹೊರಟು ಮಾರ್ಚ್ 29ಕ್ಕೆ ಉಡುಪಿ ತಲುಪಲಿದೆ. ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಿಂದ ಹನುಮ ಜ್ಯೋತಿ, ಹನುಮಧ್ವಜ ಹಾಗೂ ಅವಧೂತ ಭಗವಾನ್ ನಿತ್ಯಾನಂದ ಸ್ವಾಮಿಯ 200 ಕೆಜಿ ತೂಕದ ಪಂಚಲೋಹ ಮೂರ್ತಿಯು ಶ್ರೀ ಕ್ಷೇತ್ರಕ್ಕೆ ತರಲಾಗುವುದು.
ಮಾರ್ಚ್ 31 ರಿಂದ ಎಪ್ರಿಲ್ 2ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೂರ್ತಿ ಸ್ಥಾಪನೆ ಹಾಗೂ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗೀತಾಂಜಲಿ ಎಂ. ಸುವರ್ಣ, ಅಭಿರಾಜ್ ಎಂ. ಸುವರ್ಣ, ಸುನಿಲ್ ಕೆ.ಆರ್., ವಿಜಯ ಕೊಡವೂರು, ವೀಣಾ ಎಸ್. ಶೆಟ್ಟಿ, ಸತೀಶ್ ದೇವಾಡಿಗ, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.
ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ
Posted On: 10 Mar 2026, 07:51 PM
ಪಡುಬಿದ್ರಿ : ಮಹಿಳೆಯರು ಸಮಾಜಕ್ಕೆ ಭೂಷಣಪ್ರಾಯಳಾಗಿ ಸಮಾಜದ ಸ್ವಾಸ್ಥ್ಯಕ್ಕೆ ಮೆಟ್ಟಿಲಾಗಬೇಕು. ಭಾರತೀಯ ಮಹಿಳೆಯರಿಗೆ ಪ್ರಾಪಂಚಿಕವಾಗಿ ವಿಶೇಷವಾದ ಗೌರವ, ಸ್ಥಾನಮಾನ ಇದೆ ಎಂದು ಉಡುಪಿ ಜಿ.ಪಂ. ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿಎರ್ಮಾಳು ಹೇಳಿದರು.
ಅವರು ಮಂಗಳವಾರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿ (ರಿ.) ಆಯೋಜಿಸಿದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಡಾ. ಚೈತ್ರ ಗುರುಪ್ರಸಾದ್ ಶೆಟ್ಟಿ ಪಡುಬಿದ್ರಿ ಮಾತನಾಡಿ, ಶರೀರ-ಭಾವನೆ-ಮನಸ್ಸು ಇದ್ದಲ್ಲಿ ಮಾತ್ರ ಅದು ನಿಜವಾದ ಆರೋಗ್ಯವಾಗಿದೆ. ಸಾಧನೆಯ ಹಾದಿಯಲ್ಲಿರುವ ಹೆಣ್ಣು ಮಕ್ಕಳು ನೈಜ ನೆಮ್ಮದಿಯ ಜೊತೆಗೆ ಆರೋಗ್ಯದಾಯಕರಾಗಿದ್ದು, ಸಮಾಜದ ಆಗು ಹೋಗುಗಳ ಜೊತೆ ಉತ್ತಮ ಬಾಂಧವ್ಯವನ್ನು ವೃದ್ಧಿಸಿಕೊಳ್ಳುವಂತೆ ಕರೆ ನೀಡಿದರು. ಬಂಜೆತನ, ಥೈರಾಯ್ಡ್, ಹಾರ್ಮೋನ್ಸ್ ಸಹಿತ ಮಹಿಳೆಯರ ಆರೋಗ್ಯದ ವಿಚಾರದಲ್ಲಿ ಮಾಹಿತಿಯನ್ನು ನೀಡಿ ಸಮಾಲೋಚನೆ ನಡೆಸಿದರು.
ಸಮಾರಂಭದಲ್ಲಿ ಮಹಿಳಾ ರಿಕ್ಷಾ ಚಾಲಕಿ ಶಶಿಕಲಾ ನಂಬಿಯಾರ್ ಪಡುಬಿದ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸದಸ್ಯೆಯರಿಗೆ ಏರ್ಪಡಿಸಲಾದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯ ಅಧ್ಯಕ್ಷೆ ರೇಖಾ ಶೆಟ್ಟಿ ಸ್ವಾಗತಿಸಿದರು.
ವೇದಿಕೆಯಲ್ಲಿ ಕೋಶಾಧಿಕಾರಿ ವಿಮಲ ಕೆ. ಸಾಲ್ಯಾನ್ ಉಪಸ್ಥಿತರಿದ್ದರು.
ರಶ್ಮಿತಾ ಪ್ರಾರ್ಥಿಸಿದರು. ಉಪಾಧ್ಯಕ್ಷೆ ವಾಣಿಶ್ರೀ ಗಣೇಶ್ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ಅಮಣಿ ಕುಂದರ್ ವಂದಿಸಿದರು. ಮಾಜಿ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟ
Posted On: 10 Mar 2026, 12:00 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟವು ರಿವರ್ ಶೈನ್ ಕಯಾಕಿಂಗ್ ಮತ್ತು ಅಡ್ವೆಂಚರ್, ಚೆನ್ನಯ ಕುದುರು ಮುಲ್ಕಿ ಇಲ್ಲಿ ಜರಗಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ಭಾಗವಹಿಸಿ ಮಾತನಾಡಿ, ಯುವವಾಹಿನಿ ಸಂಸ್ಥೆಯು ಸಂಘಟನಾತ್ಮಕವಾಗಿ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ. ವಿದ್ಯೆ ಉದ್ಯೋಗ ಸಂಪರ್ಕದ ಧ್ಯೇಯದ ಮೂಲಕ ಕಾರ್ಯನಿರ್ವಹಿಸುತ್ತಿದೆ ಎಂದರು.
ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷೆ, ನಿವೃತ್ತ ಮುಖ್ಯ ಶಿಕ್ಷಕಿ ಚಿತ್ರಾಕ್ಷಿ ಕೆ ಕೋಟ್ಯಾನ್ ಅವರು ಮಹಿಳಾ ದಿನಾಚರಣೆಯ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ವಹಿಸಿದ್ದರು.
ಕೇಂದ್ರ ಸಮಿತಿಯ ಸಂಘಟನಾ ನಿರ್ದೇಶಕರಾದ ಮಮತಾ ಅಂಚನ್, ಪಡುಬಿದ್ರಿ ಘಟಕದ ಕಾರ್ಯದರ್ಶಿ ಭಾಸ್ಕರ್ ಎನ್ ಅಂಚನ್, ಕೋಶಾಧಿಕಾರಿ ತುಳಸಿ ಕರುಣಾಕರ್, ಮಹಿಳಾ ನಿರ್ದೇಶಕರಾದ ಲತಾ ವಸಂತ್, ಬ್ರಹ್ಮಶ್ರೀ ನಾರಾಯಣಗುರು ಮಹಿಳಾ ಮಂಡಳಿ ಪಡುಬಿದ್ರಿ ಇದರ ಅಧ್ಯಕ್ಷರಾದ ಸುಜಾತಾ ಹರೀಶ್ ಉಪಸ್ಥಿತರಿದ್ದರು.
ಹರೀಶ್ ಕೋಟ್ಯಾನ್ ಉಳ್ಳೂರು ಮತ್ತು ರವಿರಾಜ್ ಎನ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
ಬೆಳಿಗ್ಗೆಯಿಂದ ಸಂಜೆಯವರೆಗೆ ಘಟಕದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.
ಕಾಪು : ಸಾರ್ವಜನಿಕ ಶ್ರೀ ಪಂಚದೈವಿಕ ನಾಗಬ್ರಹ್ಮಸ್ಥಾನ ಕಲ್ಲುಗುಡ್ಡೆ - ಮಹಿಳೆಯರಿಗೆ ಸೀರೆ ವಿತರಣೆ
Posted On: 10 Mar 2026, 11:37 AM
ಕಾಪು : ಸಾರ್ವಜನಿಕ ಶ್ರೀ ಪಂಚದೈವಿಕ ನಾಗಬ್ರಹ್ಮಸ್ಥಾನ ಕಲ್ಲುಗುಡ್ಡೆ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ 108 ಮಹಿಳೆಯರಿಗೆ ಸಮವಸ್ತ್ರದ ಸೀರೆ ವಿತರಿಸಲಾಯಿತು.
ಕ್ಷೇತ್ರದಲ್ಲಿ ವಾರದ ಭಜನೆಯ ಮಹಾಪೂಜೆ ಯ ಬಳಿಕ ಮಹಿಳೆಯರಿಗೆ ವಿತರಿಸಲಾಯಿತು.
ಈ ಸಂದರ್ಭ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು, ಪಂಚಮಿ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಪ್ರಮೋದ್ ಸುವರ್ಣ ಕಟಪಾಡಿ ಆಯ್ಕೆ
Posted On: 10 Mar 2026, 11:30 AM
ಕಾಪು : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ನಮ್ಮ ಕುಡ್ಲ ವಾಹಿನಿಯ ಉಡುಪಿ ಜಿಲ್ಲಾ ವರದಿಗಾರರಾದ ಪ್ರಮೋದ್ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘಕ್ಕೆ 2ನೇ ಬಾರಿ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.
ಕಳೆದ 4 ವರ್ಷದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಜೊತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ
ಪ್ರಮೋದ್ ಸುವರ್ಣ ಕಟಪಾಡಿ
2025 ರಿಂದ 2028ರ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ
ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷರಾಗಿ,
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಮಾಜಿ ಜೊತೆ ಕಾರ್ಯದರ್ಶಿಯಾಗಿ
ಮತ್ತೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಉಡುಪಿಯಲ್ಲಿ ನಡೆದ ನೂತನ ಪದಾಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆ ಸರ್ಟಿಫಿಕೇಟ್ ನೀಡಿ ಗೌರವಿಸಿದರು.
ಈ ಸಂದರ್ಭ ರಾಜ್ಯ ಮತ್ತು ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಪ್ರಮುಖರು ಉಪಸ್ಥಿತರಿದ್ದರು.
ಮಾ.14 : ಯುವಸೇನೆ ಮಡುಂಬು ವೈ.ಎಸ್.ಎಮ್.ಫ್ರೆಂಡ್ಸ್ ಮಡುಂಬು : 19ನೇ ವಾರ್ಷಿಕೋತ್ಸವ
Posted On: 10 Mar 2026, 11:25 AM
ಕಾಪು : ಯುವಸೇನೆ ಮಡುಂಬು ವೈ.ಎಸ್.ಎಮ್.ಫ್ರೆಂಡ್ಸ್ ಮಡುಂಬು ಇದರ
19ನೇ ವಾರ್ಷಿಕೋತ್ಸವ ಮಾ.14, ಶನಿವಾರ
ರಾತ್ರಿ 7 ಗಂಟೆಯಿಂದ ಮಡುಂಬು ಬೆರ್ಮೋಟ್ಟು ದೇವಸ್ಥಾನದ ಬಳಿ ಜರಗಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸಭಾಪತಿ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಸಂಸದರಾದ ಕ್ಯಾ. ಬ್ರಿಜೆಶ್ ಚೌಟ, ಮಡುಂಬುವಿನ ಜ್ಯೋತಿಷಿ, ಪುರೋಹಿತರಾದ ಕೆ.ಪಿ ಶ್ರೀನಿವಾಸ ತಂತ್ರಿ, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ, ಮುನಿಯಾಲು, ಶಾಂತ ಎಲೆಕ್ಟಿಕಲ್ಸ್ & ಇಂಜಿನಿಯರಿಂಗ್ ಪ್ರೈ.ಲಿ. ಉಡುಪಿ ಇದರ ಆಡಳಿತ ನಿರ್ದೇಶಕ ಶ್ರೀಪತಿ ಭಟ್ ಉಚ್ಚಿಲ,
ಫ್ರೆಂಡ್ಸ್ ಕೆಟರರ್ಸ್ ಶಂಕರಪುರ ಮಾಲಕರಾದ
ನವೀನ್ ಅಮೀನ್, ಪತ್ರಕರ್ತ ರಾಕೇಶ್ ಕುಂಜೂರು, ಇನ್ನಂಜೆಯ ಉದ್ಯಮಿ ದಿನೇಶ್ ಶೆಟ್ಟಿ ಕಲ್ಯಾಲು, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಉಪಸ್ಥಿತರಿರಲಿದ್ದಾರೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಸೇನೆ ಮಡುಂಬು ಇದರ ಅಧ್ಯಕ್ಷರಾದ
ದೀಪಕ್ ಶೆಟ್ಟಿ ವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ,
ಶಾರದಾ ಆರ್ಟ್ಸ್ ಕಲಾವಿದರು (ರಿ.) ಮಂಜೇಶ್ವರ ಅಭಿನಯದ ಒಂತೆ ಲೇಟಾಂಡ್ ಆಂಡಲಾ ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಯುವಸೇನೆ ಮಡುಂಬು ವೈ.ಎಸ್.ಎಮ್.ಫ್ರೆಂಡ್ಸ್ ಮಡುಂಬು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಮುದ್ರದ ಅಲೆಗಳನ್ನು ಗೆದ್ದ ಮುಂಬೈ ಹುಡುಗಿ : 5 ಕಿ.ಮೀ ಈಜಿ ದಾಖಲೆ ಬರೆದ ದಿಶಿತಾ ಚಂದ್ರಶೇಖರ್ ಪೂಜಾರಿ
Posted On: 03 Mar 2026, 04:10 PM
ಕಾಪು : ಮುಂಬೈನ ಗೋರೆಗಾಂವ್ ಪಶ್ಚಿಮದ ಓಜೋನ್ ಈಜುಕೊಳದಲ್ಲಿ ತನ್ನ ಎಂಟನೇ ವಯಸ್ಸಿನಿಂದಲೇ ಈಜು ತರಬೇತಿಯನ್ನು ಆರಂಭಿಸಿದ ಬಾಲಕಿ ದಿಶಿತಾ ಚಂದ್ರಶೇಖರ್ ಪೂಜಾರಿ ಈಗ ಸಮುದ್ರದ ಅಲೆಗಳನ್ನು ಮೆಟ್ಟಿ ನಿಂತು ಹೊಸ ಇತಿಹಾಸ ಬರೆದಿದ್ದಾಳೆ.
2023 ಮತ್ತು 2024ರಲ್ಲಿ ಸಿಂಧುದುರ್ಗ ಜಿಲ್ಲೆಯ ಮಾಲ್ವಣ್ನ ಚಿವ್ಲಾ ಬೀಚ್ನಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಸಮುದ್ರ ಈಜು ಸ್ಪರ್ಧೆಯಲ್ಲಿ ಸತತ ಎರಡು ಬಾರಿ 2 ಕಿಲೋಮೀಟರ್ ದೂರವನ್ನು ಯಶಸ್ವಿಯಾಗಿ ಈಜುವ ಮೂಲಕ ಫಿನಿಶರ್ ಮೆಡಲ್ ಪಡೆದಿದ್ದ ಈಕೆ, 2025ರಲ್ಲಿ ಮುಂಬೈನ ಸನ್ ಕ್ರೋಕ್ನಿಂದ ಗೇಟ್ವೇ ಆಫ್ ಇಂಡಿಯಾವರೆಗಿನ 2 ಕಿಲೋಮೀಟರ್ ದೂರವನ್ನು ಕ್ರಮಿಸಿ ಎಲ್ಲರ ಗಮನ ಸೆಳೆದಿದ್ದಳು. ಇದೀಗ ತನ್ನ ಸಾಧನೆಯ ಹಾದಿಯನ್ನು ಮತ್ತಷ್ಟು ವಿಸ್ತರಿಸಿರುವ ದಿಶಿತಾ, ಫೆಬ್ರವರಿ 22, 2026ರಂದು ನಡೆದ ಸನ್ ಕ್ರೋಕ್ನಿಂದ ಗೇಟ್ವೇ ಆಫ್ ಇಂಡಿಯಾವರೆಗಿನ ಕಠಿಣವಾದ 5 ಕಿಲೋಮೀಟರ್ ಸಮುದ್ರ ಈಜು ಸ್ಪರ್ಧೆಯನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿ ಪದಕ ಮುಡಿಗೇರಿಸಿಕೊಂಡಿದ್ದಾಳೆ.
ಈಕೆ ಗೋರೆಗಾಂವ್ ಪಶ್ಚಿಮ ಕಾಮರಾಜ್ ನಗರ ಶ್ರೀ ರಾಮ ಸಮರ್ಥ್ ಸೊಸೈಟಿ ನಿವಾಸಿ ಚಂದ್ರಶೇಖರ್ ಪೂಜಾರಿ ಮತ್ತು ಸವಿತಾ ಪೂಜಾರಿ ದಂಪತಿಯ ಸುಪುತ್ರಿ ಮತ್ತು ಇನ್ನಂಜೆ ಗ್ರಾಮದ ಮಡುಂಬು ಸಂಜೀವ ಪೂಜಾರಿ ಮತ್ತು ಶಾಂತ ಪೂಜಾರ್ತಿಯವರ ಮೊಮ್ಮಗಳಾಗಿದ್ದು, ಸೈಂಟ್ ಥೋಮಸ್ ಅಕಾಡೆಮಿಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ದಿಶಿತಾಳ ಈ ಅಪ್ರತಿಮ ಸಾಹಸಕ್ಕೆ ಕ್ರೀಡಾ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಮುಂಬೈನ ಕಡಲತೀರದಲ್ಲಿ ಅವಳ ಸಾಧನೆಯ ಹಾದಿ ಇತರ ಯುವ ಈಜುಗಾರರಿಗೆ ಸ್ಫೂರ್ತಿಯಾಗಿದೆ.
ಕಾಪು ಶ್ರೀ ಹೊಸಮಾರಿಗುಡಿ : ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ
Posted On: 03 Mar 2026, 11:38 AM
ಕಾಪು : ಇಲ್ಲಿನ ಶ್ರೀ ಹೊಸಮಾರಿಗುಡಿ ದೇವಳದಲ್ಲಿ ಉಚ್ಚಂಗಿ ಸಹಿತ ಶ್ರೀಮಾರಿಯಮ್ಮ ದೇವಿಯ ಪುನ:ಪ್ರತಿಷ್ಠೆಯ ಪ್ರಥಮ ವರ್ಧಂತ್ಯೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಅನುಷ್ಠಾನಗಳು, ಕ್ಷೇತ್ರದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ.ಕುಮಾರಗುರು ತಂತ್ರಿಗಳ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಇವರ ಸಹಭಾಗಿತ್ವದಲ್ಲಿ ಗದ್ದಿಗೆಯ ಶ್ರೀಚಕ್ರಯಂತ್ರ ಪೂಜಾ, ದಿವ್ಯ ಶ್ರೀಚಕ್ರಯಂತ್ರ ದರ್ಶನ, ಖಡ್ಗಮಾಲಾಮಂತ್ರ ಹೋಮ, ಶ್ರೀಯಂತ್ರ ಪ್ರಸನ್ನಪೂಜಾ ಕಾರ್ಯಗಳು ಜರಗಿದವು.
ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆಯೂ ನಡೆಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ವಿವಿಧ ಸಮಿತಿಗಳ ಮುಖ್ಯಸ್ಥರು, ಶ್ರೀಕ್ಷೇತ್ರದ ಭಗವದ್ಭಕ್ತರು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸಮಾರಿಗುಡಿ : ಪ್ರತಿಷ್ಠಾ ವರ್ಧಂತಿ - ಮಾತೃ ವೈಭವ
Posted On: 01 Mar 2026, 05:20 PM
ಕಾಪು : ಶ್ರೀ ಹೊಸ ಮಾರಿಗುಡಿಯಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪುನ: ಪ್ರತಿಷ್ಠೆಯ ಪ್ರಥಮ ವರ್ಧಂತಿ ಮಹೋತ್ಸವ ಅಂಗವಾಗಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ “ಮಾತೃ ವೈಭವ”ಭಕ್ತಿ ಭಾವಗಳ ಕಲರವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ ಕೆ. ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಅವರ ಸಹಭಾಗಿತ್ವದಲ್ಲಿ ಅಭಿವೃದ್ಧಿ ಸಮಿತಿ ಮತ್ತು ಮಾತೃ ವೈಭವ ಸೇವಾ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಅವರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮ ಪ್ರಾರಂಭಗೊಂಡಿತು.
ಉಡುಪಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಮಂಜುಳಾ ಟಿ. ಎನ್., ಶ್ರುತಿ ಹರಿರಾಮ್ ಶಂಕರ್, ಬೀನಾ ವಾಸುದೇವ ಶೆಟ್ಟಿ, ರಂಜನಿ ಸುಧಾಕರ ಹೆಗ್ಡೆ ತುಂಗಾ, ಅನುರಾಧ ಮನೋಹರ್ ಶೆಟ್ಟಿ, ಮಮತಾ ಯೋಗೀಶ್ ಶೆಟ್ಟಿ, ವಿದ್ಯಾ ರವಿಕಿರಣ್, ಲಕ್ಷ್ಮೀ ಶ್ರೀನಿವಾಸ ತಂತ್ರಿ, ಸುಗುಣಾ ರತ್ನಾಕರ್ ಶೆಟ್ಟಿ ನಡಿಕೆರೆ ಸೇರಿದಂತೆ 81 ಮಂದಿ ಮಹಿಳೆಯರು ಮಾತೃ ವೈಭವ ದೀಪ ಪ್ರಜ್ವಲನೆಗೈದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಶಾಸಕ ಸುರೇಶ್ ಬಾಬು ಚಿಕ್ಕನಾಯಕಹಳ್ಳಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಶ್ರೀ ಹೊಸ ಮಾರಿಗುಡಿಯ ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್, ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ ಎಸ್. ಶೆಟ್ಟಿ, ಗಂಗಾಧರ ಸುವರ್ಣ, ರಮೇಶ್ ಹೆಗ್ಡೆ ಕಲ್ಯ, ಉದಯ ಸುಂದರ್ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಭಗವಾನ್ ದಾಸ್ ಶೆಟ್ಟಿಗಾರ್, ಪ್ರಭಾಕರ ಎಸ್. ಪೂಜಾರಿ, ಹರಿಯಪ್ಪ ಕೋಟ್ಯಾನ್, ಲಕ್ಷ್ಮೀಶ ತಂತ್ರಿ ಮೊದಲಾದವರು ಉಪಸ್ಥಿತರಿದ್ದರು.
ಮಾರ್ಚ್ 1 : ಕಾಂತನಾಧಿಕಾರಿ ಜುಮಾದಿ ದೇವಸ್ಥಾನ ಪಯ್ಯಾರು, ಕಳತ್ತೂರು - ವರ್ಧಂತ್ಯುತ್ಸವ ಹಾಗೂ ಕಾಲಾವಧಿ ನೇಮ
Posted On: 28 Feb 2026, 02:15 PM
ಕಾಪು : ಇತಿಹಾಸ ಪ್ರಸಿದ್ಧ ಕಳತ್ತೂರು ಪಯ್ಯಾರು ಶ್ರೀ ಕಾಂತನಾಧಿಕಾರಿ ಜುಮಾದಿ ದೈವಸ್ಥಾನ ಇಲ್ಲಿ ಜುಮಾದಿ ಮತ್ತು ಜುಮಾದಿ ಬಂಟ ದೈವಗಳ ನೇಮ ಹಾಗೂ ನಾಗದೇವರ ವರ್ಧಂತ್ಯುತ್ಸವದ ಅಂಗವಾಗಿ ನವಕ ಕಲಾತತ್ವ ಹೋಮ, ನವಕ ಕಲಶಾಭಿಷೇಕ, ಚಂಡಿಕಾಹೋಮ ಆಗಮ ಮತ್ತು ಜ್ಯೋತಿಷ್ಯ ವಿದ್ವಾನ್ ನೀಲಾವರ ಶ್ರೀ ರಘುರಾಮ ಮದ್ಯಸ್ತರ ನೇತೃತ್ವದಲ್ಲಿ ಮಾರ್ಚ್ 1ರ ಭಾನುವಾರ ಶ್ರೀ ಕ್ಷೇತ್ರದಲ್ಲಿ ನಡೆಯಲಿರುವುದು.
ಬೆಳಿಗ್ಗೆ ಗಂಟೆ 9 ರಿಂದ ಗುರು ಗಣಪತಿ ಪ್ರಾರ್ಥನೆ, ಪುಣ್ಯಹವಾಚನ, ನವಕಪ್ರಧಾನ, ಕಲಶ ಸ್ಥಾಪನೆ, ಕಲಾತತ್ವ ಹೋಮ, ಪೂರ್ಣಹುತಿ, ನವಕ ಕಲಶಾಭಿಷೇಕ, ಚಂಡಿಕಾ ಹೋಮ, ಪೂರ್ಣಾಹುತಿ ಮಹಾಪೂಜೆ, ನಾಗದೇವರಿಗೆ ನವಕಪ್ರಧಾನ ಕಲಶ ತತ್ವ ಹೋಮ, ಕಲಶಾಭಿಷೇಕ, ತನು ತಂಬಿಲ, ಮಹಾಪೂಜೆ, ಮಲೆ ಜುಮಾದಿ ಸನ್ನಿಧಾನಕ್ಕೆ ಮೆರವಣಿಗೆ ಮತ್ತು ಪ್ರಸನ್ನ ಪೂಜೆ, ನೇಮದ ಚಪ್ಪರ ಆರೋಹಣ, ಮದ್ಯಾಹ್ನ ಗಂಟೆ 1ರಿಂದ ಅನ್ನ ಸಂತರ್ಪಣೆ, ಸಂಜೆ 6 ಗಂಟೆಗೆ ಭoಡಾರ ಇಳಿಯುವುದು.
ಭಕ್ತಿ ಸುಧೆ ಕಾರ್ಯಕ್ರಮ. ರಾತ್ರಿ ಗಂಟೆ 8 ರಿಂದ ಅನ್ನ ಸಂತರ್ಪಣೆ. ರಾತ್ರಿ ಘಂಟೆ 9:30 ಕ್ಕೆ ಜುಮಾದಿ ಮತ್ತು ಬಂಟ ಹಾಗೂ ಪರಿವಾರ ದೈವಗಳ ನೇಮ ನಡೆಯಲಿದೆ ಎಂದು ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಚಂದ್ರ ಗುರ್ಮೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
