Updated News From Kaup

ಕುಂದಾಪುರ : ವಿದ್ಯಾಪೋಷಕ್ 76ನೇ ಮನೆ ಹಸ್ತಾಂತರ

Posted On: 16-06-2025 11:07AM

ಉಡುಪಿ : ಇಂಡಿ ವಿಲೇಜ್ ನ ಸಂಸ್ಥಾಪಕರಾದ ಶ್ರೀಕಾಂತ್ ಕೆ. ಅರಿಮಣಿತ್ತಾಯ ಮತ್ತು ಭಾರತಿ ಶ್ರಿಕಾಂತ್ ದಂಪತಿಗಳು ತಮ್ಮ ಮೂವತ್ತನೇ ವರ್ಷದ ವಿವಾಹ ಮಹೋತ್ಸವದ ಸವಿನೆನಪಿಗಾಗಿ 6.50 ಲಕ್ಷ ರೂಪಾಯಿ ವೆಚ್ಚದಲ್ಲಿ ಕುಂದಾಪುರ ತಾಲೂಕಿನ ಮೂಡುಮುಂದದ ಮೋರ್ಟುವಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಪೋಷಕ್ ವಿದ್ಯಾರ್ಥಿನಿ ಸುಶ್ಮಿತಾ ಇವಳಿಗೆ ನೂತನವಾಗಿ ನಿರ್ಮಿಸಿಕೊಟ್ಟ ‘ವಜ್ರಮ್’ ಮನೆಯನ್ನು ಹಸ್ತಾಂತರಿಸಿದರು.

ಶ್ರೀದೇವಿ ಫ್ರೆಂಡ್ಸ್ ಮಲ್ಲಾರು ರಾಣ್ಯಕೇರಿ ಕಾಪು : ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ

Posted On: 12-06-2025 04:16PM

ಕಾಪು : ಶ್ರೀದೇವಿ ಫ್ರೆಂಡ್ಸ್ ಮಲ್ಲಾರು ರಾಣ್ಯಕೇರಿ ಕಾಪು ಇವರ ನೇತೃತ್ವದಲ್ಲಿ ದಿ.ಕಾಪು ಲೀಲಾಧರ ಶೆಟ್ಟಿ ಇವರ ಸ್ಮರಣಾರ್ಥ ‌ರಾಣೆಯಾರ್ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು‌ ಕೋಟೆ ಶ್ರೀ ಹಳೇ ಮಾರಿಯಮ್ಮ ಸಭಾಂಗಣದಲ್ಲಿ ಜರಗಿತು.

ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಆಯ್ಕೆ

Posted On: 12-06-2025 04:01PM

ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ : 2025 -26 ನೇ ಸಾಲಿನ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ಸಭೆ

Posted On: 12-06-2025 03:55PM

ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪುವಿನಲ್ಲಿ 2025 -26 ನೇ ಸಾಲಿನ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ಸಭೆಯು ಜರಗಿತು. ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ ಇವರು ಅಧ್ಯಕ್ಷತೆ ವಹಿಸಿದ್ದರು.

ಶಿರ್ವ : ಪೋಲಿಸ್ ಜನಸಂಪರ್ಕ ಸಭೆ ಮತ್ತು ಪೋಲಿಸ್ ಇಲಾಖಾ ಮಾಹಿತಿ ಕಾರ್ಯಕ್ರಮ

Posted On: 12-06-2025 02:37PM

ಶಿರ್ವ : ಅಪ್ರಾಪ್ತ ವಯಸ್ಸಿನ ಮಕ್ಕಳು ಹೆಚ್ಚಾಗಿ ಮಾದಕ ದ್ರವ್ಯ ಸೇವನೆ ಸಹಿತ ವಿವಿಧ ಅಪರಾಧ ಕೃತ್ಯಗಳಿಗೆ ಬಲಿಯಾಗುತ್ತಿದ್ದಾರೆ. ಮಕ್ಕಳಿಗೆ ನೈತಿಕ ಶಿಕ್ಷಣದ ಅಗತ್ಯ ಇದೆ. ತನಗೂ ಇನ್ನೊಬ್ಬರಿಗೂ ಅನುಕೂಲವಾಗುವಂತಹ ಶಿಕ್ಷಣ ಮನೆಯಿಂದಲೇ ಆಗಬೇಕು. ಸೈಬರ್ ಕ್ರೈಮ್, ಮೊಬೈಲ್ ಮೂಲಕ ಆಮಿಷಕ್ಕೆ ಒಳಗಾಗುವ ವಂಚನಾ ಜಾಲದ ಬಗ್ಗೆ ಎಚ್ಚರ ವಹಿಸಬೇಕಾಗಿದೆ. ಕ್ರೈಮ್ ಸಹಿತ ಅಪರಾಧಗಳ ನಿಯಂತ್ರಣಕ್ಕೆ ಪೋಲಿಸರೊಂದಿಗೆ ಸಾರ್ವಜನಿಕರ ಸಕಾಲಿಕ ಸ್ಪಂದನ ಅಗತ್ಯ ಎಂದು ಶಿರ್ವ ಪೋಲಿಸ್ ಠಾಣಾಧಿಕಾರಿ ಮಂಜುನಾಥ್ ಮರಬದ ಹೇಳಿದರು. ಅವರು ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದ ವಠಾರದಲ್ಲಿ ನಾಗರಿಕ ಸೇವಾ ಸಮಿತಿ ಬಂಟಕಲ್ಲು ಇದರ ಆಶ್ರಯದಲ್ಲಿ ಆರಕ್ಷಕ ಠಾಣೆ ಶಿರ್ವ ಇವರ ಸಹಯೋಗದೊಂದಿಗೆ ರಾಜಾಪುರ ಸಾರಸ್ವತ ಸೇವಾ ವೃಂದ ಬಂಟಕಲ್ಲು, ಅಟೋರಿಕ್ಷಾ ಚಾಲಕರ ಮಾಲಕರ ಸಂಘ ಬಂಟಕಲ್ಲು, ಕಾರು ಚಾಲಕರ ಮತ್ತು ಮಾಲಕರ ಸಂಘ ಬಂಟಕಲ್ಲು ಇದರ ಸಹಕಾರದಲ್ಲಿ ಏರ್ಪಡಿಸಿದ "ಪೋಲಿಸ್ ಜನಸಂಪರ್ಕ ಸಭೆ ಮತ್ತು ಪೋಲಿಸ್ ಇಲಾಖಾ ಮಾಹಿತಿ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್‌ಗಳ ಬಗ್ಗೆ ಎಚ್ಚರ ವಹಿಸುವುದು, ಪ್ರಚೋದನಕಾರಿ ಮೆಸೆಜ್‌ಗಳನ್ನು ಲೈಕ್, ಫಾರ್‌ವರ್ಡ್ ಮಾಡುವುದೂ ಅಪರಾಧವಾಗಿದೆ ಎಂದರು.

ಜೂ.13 -14 : ಮಥುರಾದಲ್ಲಿ ನಡೆಯಲಿರುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ

Posted On: 11-06-2025 11:07AM

ಕಾಪು : ಉತ್ತರ ಪ್ರದೇಶ ಮಥುರಾದ ಶ್ರೀಧಾಮ ವೃಂದಾವನದಲ್ಲಿ ಜೂನ್ 13 ಮತ್ತು 14 ರಂದು ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಟಪಾಡಿಯ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗವಹಿಸಲಿದ್ದಾರೆ.

ಶಿರ್ವ ರೋಟರಿ : ಕೃತಜ್ಞತಾ ಸಮರ್ಪಣೆ, ಅಭಿನಂದನೆ, ಕುಟುಂಬ ಸಮ್ಮಿಲನ ಕಾರ್ಯಕ್ರಮ

Posted On: 08-06-2025 04:05PM

ಶಿರ್ವ : 55 ವರ್ಷಗಳ ಸೇವಾ ಇತಿಹಾಸ ಹೊಂದಿರುವ ಶಿರ್ವ ರೋಟರಿಯ 2024 -25ನೇ ಸೇವಾ ವರ್ಷದ ಕೃತಜ್ಞತಾ ಸಮರ್ಪಣೆ, ಅಭಿನಂದನೆ ಹಾಗೂ ಕುಟುಂಬ ಸಮ್ಮಿಲನದ ಕಾರ್ಯಕ್ರಮ ಶಿರ್ವ ರೋಟರಿ ಸಭಾ ಭವನ ಬಂಟಕಲ್ಲು ಇಲ್ಲಿ ಜರಗಿತು.

ಯುವ ವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು : ರಜತ ಸಂಭ್ರಮ ; ಮಳೆ ನೀರು ಕೊಯ್ಲು ಉದ್ಘಾಟನೆ

Posted On: 08-06-2025 03:45PM

ಉಡುಪಿ : ಯುವ ವಿಚಾರ ವೇದಿಕೆಯ ರಜತ ಸಂಭ್ರಮದ ಅಂಗವಾಗಿ ಭೂಮಿಯ ಅಂತರ್ಜಲ ಮರುಪೂರಣ, ಪರಿಸರ ಸ್ನೇಹಿ ಸರಳ ತಂತ್ರಜ್ಞಾನದ ವಿಶಿಷ್ಟ ಯೋಜನೆಯಾದ ಮಳೆ ನೀರು ಕೊಯ್ಲು ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಭಾನುವಾರ ವೇದಿಕೆಯ ವಠಾರದಲ್ಲಿ ಜರುಗಿತು.

ಸಂದೀಪ್ ಕುಮಾರ್ ಮಂಜ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ

Posted On: 08-06-2025 03:21PM

ಕಾಪು : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಸಂದೀಪ್ ಕುಮಾರ್ ಮಂಜ ಆಯ್ಕೆಯಾಗಿದ್ದಾರೆ.

ಮಲ್ಲಾರು-ಮಜೂರು : ನಿವೃತ್ತ ತಹಸೀಲ್ದಾರ್ ಪಿ ಬಾಬು ರವರಿಗೆ ಬಿ.ಜೆ.ಎಂ ಮಸ್ಜಿದ್ ಕಮಿಟಿಯಿಂದ ಸನ್ಮಾನ

Posted On: 08-06-2025 03:18PM

ಕಾಪು : ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಮಸ್ಜಿದ್ ಆಡಳಿತ ಕಚೇರಿಗೆ ನಿವೃತ್ತ ತಹಶೀಲ್ದಾರ್ ಪಿ ಬಾಬು ಭೇಟಿ ನೀಡಿದರು.