Updated News From Kaup

ಭಕ್ತಿ ಮತ್ತು ಶೃದ್ಧೆಯಿಂದ ಮಾಡುವ ಕಾರ್ಯಕ್ಕೆ ದೇವರ ಅನುಗ್ರಹ ಪ್ರಾಪ್ತಿ : ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ

Posted On: 04-03-2025 08:04PM

ಕಾಪು : ದುಷ್ಟ ಶಕ್ತಿಗಳನ್ನು ನಾಶ ಮಾಡಿ ಶಿಷ್ಟರನ್ನು ಸದಾ ರಕ್ಷಿಸುವ ತಾಯಿ ಮಾರಿಯಮ್ಮ. ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಅದ್ಭುತವಾದ ಸೇವೆ ನಡೆಯುತ್ತಿದೆ. ದೇವಸ್ಥಾನದ ಮರದ ಕೆಲಸ, ಶಿಲಾ ಕೆಲಸಗಳು ಅದ್ಭುತವಾಗಿವೆ. ಇದು ಶ್ರದ್ಧೆಯಿಂದ ಮಾಡಿದ ಕೆಲಸ ಆಗಿದೆ. ಭಕ್ತಿ ಮತ್ತು ಶೃದ್ಧೆಯಿಂದ ಮಾಡುವ ಕಾರ್ಯಕ್ಕೆ ದೇವರ ಅನುಗ್ರಹವೂ ಪ್ರಾಪ್ತಿಯಾಗುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ನುಡಿದರು. ಅವರು ಮಂಗಳವಾರ ಕಾಪು ಶ್ರೀಹೊಸ ಮಾರಿಗುಡಿ ನೂತನ ದೇವಸ್ಥಾನದಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪುನ:ಪ್ರತಿಷ್ಠಾಪನಾಪೂರ್ವಕ ಸಹಸ್ರ ಕುಂಭಾಭಿಷೇಕ ಪ್ರಯುಕ್ತ ಜರುಗುತ್ತಿರುವ 8ನೇ ದಿನದ ಧಾರ್ಮಿಕ ಅನುಷ್ಠಾನಗಳ ಶುಭಾವಸರದಲ್ಲಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ನಂತರ ಜರುಗಿದ ಧಾರ್ಮಿಕ ಸಭಾಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ ಉಡುಪಿ ಜಿಲ್ಲೆ, ಕಾಪು ವಲಯ ಹಾಗೂ ಒಕ್ಕೂಟದ ವತಿಯಿಂದ ಪದಾಧಿಕಾರಿಗಳು ಗೌರವಿಸಿದರು.

ದೇವಸ್ಥಾನ ಅಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಉಪಾಧ್ಯಕ್ಷ ಮಾಧವ ಪಾಲನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಹರಿಯಪ್ಪ ಕೊಟ್ಯಾನ್, ಕಾಪು ದಿವಾಕರ ಶೆಟ್ಟಿ, ಮಹೇಶ್ ಕೊಟ್ಯಾನ್, ಶಶಿಧರ ಶೆಟ್ಟಿ ಮಲ್ಲಾರು, ಯೋಗೀಶ್ ವಿ.ಶೆಟ್ಟಿ ಬಾಲಾಜಿ ಉಪಸ್ಥಿತರಿದ್ದರು. ದಾಮೋದರ ಶರ್ಮಾ ಬಾರ್ಕೂರು ಮತ್ತು ಅಶೋಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿದ ನವಕುಂಭಗಳಲ್ಲಿ ಪೂಜೆಗೊಂಡ ಗಂಗಾಜಲ

Posted On: 03-03-2025 07:28PM

ಕಾಪು : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವರ ಸನ್ನಿಧಾನದಲ್ಲಿ ನವಕುಂಭಗಳಲ್ಲಿ ಪೂಜೆಗೊಂಡ ಗಂಗಾಜಲವನ್ನು ಪೂರ್ಣಕುಂಭದ ಮೆರವಣಿಗೆಯೊಂದಿಗೆ ಸೋಮವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ತರಲಾಯಿತು.

ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಹರಿದ್ವಾರದಲ್ಲಿ ಫೆಬ್ರವರಿ 12ರ ಕುಂಭ ಸಂಕ್ರಮಣದ ಹುಣ್ಣಿಮೆಯ ಪರ್ವಕಾಲದಲ್ಲಿ ನವಕುಂಭಗಳಲ್ಲಿ ಗಂಗಾಜಲವನ್ನು ತುಂಬಿಸಿ, ಫೆ. 14ರ ಶುಕ್ರವಾರದಂದು ಬೆಳಿಗ್ಗಿನ ಜಾವ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಿಂದ ಶೋಭಾಯಾತ್ರೆಯ ಮೂಲಕ ಕಾಪು ಸಾವಿರ ಸೀಮೆಯ ಒಡೆಯ ಶ್ರೀ ಲಕ್ಷ್ಮಿ ಜನಾರ್ಧನ ದೇವರ ಸನ್ನಿಧಾನಕ್ಕೆ ಗಂಗಾಜಲ ತರಲಾಗಿತ್ತು. ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿಯವರ ಮೂಲಕ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಲಾಗಿತ್ತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ದಂಪತಿಗಳು, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ದಂಪತಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಉದಯ ಸುಂದರ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಒಂಬತ್ತು ಮಂದಿ ಜೊತೆಗೆ ಗಂಗಾಜಲ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಬ್ರಹ್ಮಕಲಶೋತ್ಸವ - ಧಾರ್ಮಿಕ ಸಮಿತಿ ಕಾರ್ಯಾದ್ಯಕ್ಷ ಭಗವಾನ್ ದಾಸ್ ಶೆಟ್ಟಿಗಾರ್, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯ ಮಾಧವ ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್,  ರಮೇಶ್‌ ಹೆಗಡೆ ಕಲ್ಯ, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ, ಹರೀಶ್ ನಾಯಕ್ ಕಾಪು, ರವಿ ಸುಂದರ ಶೆಟ್ಟಿ, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಉದಯ ಸುಂದರ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಸುಗ್ಗಿ ಸುಧಾಕರ ಶೆಟ್ಟಿ, ರೋಷನ್‌ ಕುಮಾರ್ ಶೆಟ್ಟಿ, ಸಂದೀಪ್ ಶೆಟ್ಟಿ ಮುಂಬಯಿ, ಗೀತಾಂಜಲಿ ಸುವರ್ಣ, ಶಾಂತಲತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮೆರವಣಿಗೆಯಲ್ಲಿ ಭಜನಾತಂಡಗಳು, ಚೆಂಡೆ ಬಳಗ, ಮಹಿಳೆಯರು, ಪುರುಷರ ಸರತಿ ಸಾಲು ಮೆರವಣಿಗೆಗೆ ಮೆರುಗು ತಂದಿತು.

ಭಾರತದ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾ‌ರ್ ಯಾದವ್ ದಂಪತಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ

Posted On: 02-03-2025 04:26PM

ಕಾಪು : ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾ‌ರ್ ಯಾದವ್ ಮತ್ತು ಅವರ ಪತ್ನಿ ಕಾಪು ಮೂಲದ ದೇವಿಷಾ ಶೆಟ್ಟಿ ಅವರು ರವಿವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು.

ಈ ಸಂದರ್ಭ ಮಾತನಾಡಿದ ಸೂರ್ಯಕುಮಾರ್ ಯಾದವ್, ಕಳೆದ ಬಾರಿ ಜುಲೈನಲ್ಲಿ ದೇವಳಕ್ಕೆ ಬಂದಾಗ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿತ್ತು. ಅಂದು ದೇವಳದ ಅರ್ಚಕರು ಟಿ20 ಕ್ಯಾಪ್ಟನ್ ಆಗಬೇಕು ಎಂದು ಪ್ರಸಾದ ನೀಡಿ ಆಶೀರ್ವದಿಸಿದ್ದರು. ಈಗ ತಂಡದ ನಾಯಕನಾಗಿದ್ದೇನೆ. ದೇವಸ್ಥಾನ ಭೇಟಿ ಖುಷಿ ನೀಡಿದೆ. ಇವತ್ತು ಅಮ್ಮನ ಬಳಿ ಏನೂ ಕೇಳಲಿಲ್ಲ. ಧನ್ಯವಾದ ಹೇಳಲು ಬಂದಿದ್ದೇನೆ ಎಂದರು.

ಈ ಸಂದರ್ಭ ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಪ್ರಮುಖರು ಉಪಸ್ಥಿತರಿದ್ದರು.

ಅಲ್ಪಸಂಖ್ಯಾತ ಕಾರ್ಯಕರ್ತರಿಗೆ ಸರ್ಕಾರ, ಪಕ್ಷದಲ್ಲಿ ಸೂಕ್ತ ಸ್ಥಾನ ಮಾನಕ್ಕಾಗಿ ಉಪಮುಖ್ಯಮಂತ್ರಿಗೆ ಮನವಿ

Posted On: 02-03-2025 04:06PM

ಕಾಪು : ಕೆಪಿಸಿಸಿ ರಾಜ್ಯಾದ್ಯಕ್ಷರು,ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ರವರು ಉಡುಪಿ ಜಿಲ್ಲೆಗೆ ಆಗಮಿಸಿದ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿದಾಗ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ರವರ ನೇತೃತ್ವದಲ್ಲಿ ಜಿಲ್ಲೆಯ ಪಕ್ಷದ ಅಲ್ಪಸಂಖ್ಯಾತ ಕಾರ್ಯಕರ್ತರಿಗೆ ಸರ್ಕಾರದಲ್ಲಿ ಹಾಗೂ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡಬೇಕೆಂದು ಮನವಿ ನೀಡಲಾಯಿತು.

ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಂಜುನಾಥ್ ಭಂಡಾರಿ, ಜಯಪ್ರಕಾಶ್ ಹೆಗ್ಡೆ, ಅಶೋಕ್ ಕುಮಾರ್ ಕೊಡವೂರು, ಎಂ ಎ ಗಫೂರ್, ಅಲ್ಪಸಂಖ್ಯಾತರ ಘಟಕದ ನಾಯಕರಾದ ಇಸ್ಮಾಯಿಲ್ ಆತ್ರಾಡಿ, ವಹೀದ್ ಶೇಖ್, ಯು ಎಂ ಫಾರೂಕ್ ಚಂದ್ರನಗರ, ಹಬೀಬ್ ಆಲಿ, ಪ್ರಶಾಂತ್ ಜತ್ತನ್ನ, ವಿಲ್ಸನ್, ನಿಯಾಜ್, ರಿಯಾಜ್, ಫೈಝಲ್ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಧರ್ಮದಿಂದಲೇ ವಿಶ್ವಕ್ಕೆ ಶಾಂತಿ - ಡಿ.ಕೆ.ಶಿವಕುಮಾರ್

Posted On: 02-03-2025 03:40PM

ಕಾಪು : ಕಾಪು ಮಾರಿಯಮ್ಮ ದೇವರ ಗದ್ದುಗೆ ಪ್ರತಿಷ್ಠಾನೆಯ ಮೊದಲ ಪ್ರಸಾದ ಸಿಕ್ಕಿದ್ದು ನನ್ನ ಭಾಗ್ಯ. ಸರಕಾರದ ಹಣವಿಲ್ಲದೆ ಭಕ್ತರು ಸ್ವ ಇಚ್ಛೆಯಿಂದ ನೀಡಿದ ಹಣದಲ್ಲಿ ಇಷ್ಟು ದೊಡ್ಡ ದೇವಳ ಕಟ್ಟಿದ್ದು ಅದ್ಭುತ. ಕಷ್ಟ ದೂರ ಮಾಡಿ, ರಕ್ಷಿಸುವ ಸನ್ನಿಧಾನ ಕಾಪು. ಇಲ್ಲಿ ಜಾತಿ ಇಲ್ಲ. ಎಲ್ಲರೂ ಮಾನವ ಜಾತಿ. ಧರ್ಮ ಎದ್ದು ಕಾಣುತ್ತಿದೆ. ಧರ್ಮದಿಂದಲೇ ವಿಶ್ವಕ್ಕೆ ಶಾಂತಿ. ಎಲ್ಲರಿಗೂ ಒಳಿತಾಗಲಿ ಎಂದು ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಆದಿತ್ಯವಾರ ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಶ್ರೀ ಮಾರಿಯಮ್ಮ ದೇವರ ಮಹಾಸ್ವರ್ಣಪೀಠದೊಂದಿಗೆ (ಗದ್ದಿಗೆ) ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಮಾರಿಯಮ್ಮನ ಪ್ರತಿಷ್ಠೆ, ಶ್ರೀ ಉಚ್ಚಂಗಿದೇವಿಯ ಸ್ವರ್ಣ ಪೀಠದೊಂದಿಗೆ ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಉಚ್ಚಂಗಿದೇವಿಯ ಪ್ರತಿಷ್ಠೆಯಲ್ಲಿ ಪಾಲ್ಗೊಂಡ ಬಳಿಕ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಂದರ್ಭ ದೇವಳದ ವತಿಯಿಂದ ಡಿ.ಕೆ.ಶಿವಕುಮಾರ್ ರವರಿಗೆ ದೇವಳದ ತಂತ್ರಿವರ್ಯರು, ಪ್ರಧಾನ ಅರ್ಚಕರು ಅನುಗ್ರಹ ಪ್ರಸಾದ ನೀಡಿ, ಗೌರವಿಸಿದರು. ಡಿ.ಕೆ.ಶಿವಕುಮಾರ್ ರೂ.9,99,999ರೂ. ಮೌಲ್ಯದ ಸ್ವರ್ಣ ಲೇಪಿತ ರಜತ ಬ್ರಹ್ಮಕಲಶ ಸಮರ್ಪಿಸಿದರು.

ಈ ಸಂದರ್ಭ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾಪು ಹೊಸಮಾರಿಗುಡಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಜಯಪ್ರಕಾಶ್ ಹೆಗ್ಡೆ, ಮಾಧವ ಪಾಲನ್, ಡಾ. ಸುನೀತಾ ಶೆಟ್ಟಿ, ಮಿಥುನ್ ರೈ,ಮುನಿಯಾಲು ಉದಯ ಕುಮಾರ್ ಶೆಟ್ಟಿ, ಬೆಳಪು ದೇವಿಪ್ರಸಾದ್ ಶೆಟ್ಟಿ, ಯೋಗೀಶ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತಿಕ್ ಬಾಯಲ್, ಕಾಪು ತಹಶಿಲ್ದಾರ್ ಡಾ.ಪ್ರತಿಭ ಆರ್.,ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಮತ್ತಿತರರು ಉಪಸ್ಥಿತರಿದ್ದರು.

ಕೊರಂಗ್ರಪಾಡಿ ವೇದಮೂರ್ತಿ ಕೆ ಜಿ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೆಪಿ. ಕುಮಾರ ಗುರು ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಸಹಕಾರದಲ್ಲಿ ರವಿವಾರದ ಧಾರ್ಮಿಕ ವಿಧಿಗಳು ನಡೆದವು. ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

ನಾಗಸ್ವರ ವಾದಕ ಸುನಿಲ್ ಸೇರಿಗಾರ ಸೂಡ, ಬಹುಮುಖ ಪ್ರತಿಭೆ ಕು. ಶ್ರೀನಿಧಿ ಪಾನಾರ ಇವರಿಗೆ ಸನ್ಮಾನ

Posted On: 28-02-2025 01:30PM

ಕಾಪು : ಶಿರ್ವ ಸಮೀಪದ ಪಳ್ಳಿ ಶ್ರೀಕ್ಷೇತ್ರ ಅಡಪಾಡಿ ಉಮಾಮಹೇಶ್ವರ, ಶ್ರೀದುರ್ಗಾಪರಮೇಶ್ವರೀ ದೇವೀ ಸನ್ನಿಧಿಯಲ್ಲಿ ಜರುಗುತ್ತಿರುವ ಮಹಾಶಿವರಾತ್ರಿ, ಮತ್ತು ರಥೋತ್ಸವ ಸಂದರ್ಭದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ವಿಜೇತ ಖ್ಯಾತ ಸ್ಯಾಕ್ಸೋಫೋನ್ ಹಾಗೂ ನಾಗಸ್ವರ ವಾದಕ ಸುನಿಲ್ ಸೇರಿಗಾರ ಸೂಡ ಮತ್ತು ಕ್ಷೇತ್ರದ ದೈವ ನರ್ತಕ ರವಿ ಪಾನಾರ ಪಡ್ಡಂ ಇವರ ಪುತ್ರಿ ಬಹುಮುಖ ಪ್ರತಿಭಾ ಸಂಪನ್ನೆ ಯಕ್ಷಗಾನ, ಭರತನಾಟ್ಯ, ಕರಾಟೆಪಟು ಕು. ಶ್ರೀನಿಧಿ ಪಾನಾರ ಇವರನ್ನು ಕ್ಷೇತ್ರದ ವತಿಯಿಂದ ಧರ್ಮದರ್ಶಿಗಳಾದ ಪುಂಡಲೀಕ ನಾಯಕ್ ಇವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕಾರ್ಕಳ ಕ್ಷೇತ್ರದ ಶಾಸಕರು, ಮಾಜಿ ಸಚಿವ ವಿ.ಸುನಿಲ್ ಕುಮಾರ್, ಆರ್‌ಎಸ್‌ಬಿ ಸಂಘ ಮಣಿಪಾಲ ಇದರ ಅಧ್ಯಕ್ಷರು ಹಾಗೂ ಉದ್ಯಮಿ ಶ್ರೀಶ ನಾಯಕ್ ಪೆರ್ನಂಕಿಲ, ಉದ್ಯಮಿ ರಾಜಶೇಖರ ಚೌಟ ದುಬೈ, ಮಂಜುನಾಥ ಶೆಟ್ಟಿ ಉದ್ಯಮಿ ಮುಂಬಯಿ, ಬಾಲಕೃಷ್ಣ ಪ್ರಭು ಮಣಿಪಾಲ, ನೀರೆ ವ್ಯ,ಸೇ.ಸ.ಸಂಘದ ಅಧ್ಯಕ್ಷ ನೀರೆ ರವೀಂದ್ರ ನಾಯಕ್ ವೇದಿಕೆಯಲ್ಲಿದ್ದರು.

ಸಮಾಜ ಸೇವಾ ವೇದಿಕೆ ಕಾಪು ಅಧ್ಯಕ್ಷ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರಿಗೆ ಸನ್ಮಾನ

Posted On: 27-02-2025 11:02AM

ಕಾಪು : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಸಮಾಜ ಸೇವಾ ವೇದಿಕೆ ಕಾಪು ಅಧ್ಯಕ್ಷರಾದ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ಸಾಮಾಜಿಕ ಹೋರಾಟಗಾರರಾದ ಫಾದರ್ ವಿಲಿಯಮ್ ಮಾರ್ಟೀಸ್, ಕಿಶನ್ ಹೆಗ್ಡೆ ಕೊಲ್ಕೆಬೈಲ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷರಾದ ಮೊಹಮ್ಮದ್ ಮೌಲ, ಸಾಪಳ್ಯ ಟ್ರಸ್ಟ್ ನ ನಿರೂಪಮ ಪ್ರಸಾದ್ ಶೆಟ್ಟಿ, ಸಾಮಾಜಿಕ ಹೋರಾಟಗಾರ್ತಿ ಮಮತಾ ಗಟ್ಟಿ, ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವ್ಯವಸ್ಥಾಪಕರಾದ ಹಫೀಜ್ ರೆಹಮಾನ್, ರಾಘವೇಂದ್ರ ನಾಯಕ್, ತಂಜಿಮ್ ಶಿರ್ವ ಮತ್ತಿತರರು ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿ ಪ್ರತಿಷ್ಠಾ ಬ್ರಹ್ಮಲಕಶೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

Posted On: 25-02-2025 10:27PM

ಕಾಪು : ಭಾರತದಲ್ಲಿ ಸಮುದಾಯಕ್ಕಿಂತ ಮೀರಿದ್ದು ಧರ್ಮ. ಹಿಂದು ಧರ್ಮ ದೇಶಕ್ಕೆ ಅವಶ್ಯಕ. ತಾಯಿ ಸ್ವರೂಪಿಯಾದ ಮಾರಿಯಮ್ಮ ದೊಡ್ಡ ಶಕ್ತಿ. ತಾಯಿಯನ್ನು ನೋಡಲು ಗರ್ಭ ಗುಡಿಗೆ ಪ್ರವೇಶ ಮಾಡಿ ಸಮೀಪದಿಂದ ನೋಡುವ ಭಾಗ್ಯ ಸಮಾನತೆಯ ಪ್ರತೀಕವಾಗಿದೆ ಎಂದು ಬೆಳಗಾವಿಯ ಹಿರೇಮಠ ಹುಕ್ಕೇರಿ ಶ್ರೀ ಗುರು ಶಾಂತೇಶ್ವರ ಸಂಸ್ಥಾನದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದಶ್ರೀರು. ಅವರು ಮಂಗಳವಾರ ಸಂಜೆ ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಪ್ರತಿಷ್ಠಾ ಬ್ರಹ್ಮಲಕಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವದಿಸಿದರು.

ವೇದಿಕೆಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಉದ್ಯಮಿ ಉದಯ ಸುಂದರ ಶೆಟ್ಟಿ, ಉದ್ಯಮಿ ನಾರಾಯಣ ಶೆಟ್ಟಿ ಮುಂಬೈ, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾದ ಅಧ್ಯಕ್ಷ ರವಿ ಶೆಟ್ಟಿಗಾರ್, ದೇವಳದ ಅಭಿವೃದ್ಧಿ ಸಮಿತಿ ಮಾಧವ ಆರ್ ಪಾಲನ್ ಉಪಸ್ಥಿತರಿದ್ದರು.

ಯೋಗೀಶ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಅಶೋಕ್ ಪಕ್ಕಳ ಮುಂಬೈ, ದಾಮೋದರ ಶರ್ಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಟೇಶ ನೃತ್ಯನಿಕೇತನ ಉಚ್ಚಿಲ-ವಿದುಷಿ ಮಂಗಳಾ ಕಿಶೋರ್ ದೇವಾಡಿಗ ಮತ್ತು ಬಳಗದವರಿಂದ ನೃತ್ಯ ವೈಭವ, ತೋನ್ಸೆ ಪುಷ್ಕಳ ಕುಮಾರ್ ಮತ್ತು ಬಳಗದವರಿಂದ ಭಕ್ತಿ ನಾಮಾಮೃತಂ, ಜಗದೀಶ್ ಪುತ್ತೂರು ಬಳಗದವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರಗಿತು.

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಲಕಶೋತ್ಸವಕ್ಕೆ ಚಾಲನೆ

Posted On: 25-02-2025 04:38PM

ಕಾಪು : ಸಂಪೂರ್ಣ ಶಿಲಾಮಯದೊಂದಿಗೆ ನಿರ್ಮಾಣಗೊಂಡ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತಿಷ್ಠಾ ಬ್ರಹ್ಮಲಕಶೋತ್ಸವಕ್ಕೆ ಚಾಲನೆ ನೀಡಲಾಯಿತು.

ಕೊರಂಗ್ರಪಾಡಿ ವೇದಮೂರ್ತಿ ಕೆ ಜಿ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೆಪಿ. ಕುಮಾರ ಗುರು ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಸಹಕಾರದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಚಾಲನೆ ನೀಡಲಾಯಿತು.

ಋತ್ವಿಜರ ಸ್ವಾಗತ, ಋತ್ವಿಗೊರಣ, ವಿಶ್ವಕರ್ಮ ಪೂಜೆ, ಗರ್ಭಗೃಹ ಪರಿಗ್ರಹ, ಸಾಮೂಹಿಕ ಫಲನ್ಯಾಸ, ಪ್ರಾರ್ಥನೆ ಆದ್ಯಶುದ್ಧಿ, ಪುಣ್ಯಾಹ ನಾಂದಿ, ಉಗ್ರಾಣ ಮಹೂರ್ತ, ಪಾಕಶಾಲಾ ಮುಹೂರ್ತ, ನೂತನ ಮಂದಿರ ಪ್ರವೇಶ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.

ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಕೆ‌. ಪ್ರಕಾಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ,  ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯ ಮಾಧವ ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್,  ರಮೇಶ್‌ ಹೆಗಡೆ ಕಲ್ಯ, ಹೊರೆಕಾಣಿಕೆ ಸಮರ್ಪಣಾ ಸಮಿತಿಯ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್‌ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ, ಹರೀಶ್ ನಾಯಕ್ ಕಾಪು, ರವಿ ಸುಂದರ ಶೆಟ್ಟಿ, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಉದಯ ಸುಂದರ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಸುಗ್ಗಿ ಸುಧಾಕರ ಶೆಟ್ಟಿ, ರೋಷನ್‌ ಕುಮಾರ್ ಶೆಟ್ಟಿ, ಭಗವಾನ್ ದಾಸ್ ಶೆಟ್ಟಿಗಾರ್,  ಸಂದೀಪ್ ಶೆಟ್ಟಿ ಮುಂಬಯಿ, ಮಾಧವ ಆರ್. ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಡಾ. ಸುನೀತಾ ಶೆಟ್ಟಿ, ಶಾಂತಲತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ದೈವರಾಜ ಕೋರ್ದ್ದಬ್ಬು ದೈವಸ್ಥಾನ ಮೂಡುಕರೆ ಹೆಜಮಾಡಿ : ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ

Posted On: 24-02-2025 10:44PM

ಹೆಜಮಾಡಿ : ಶ್ರೀ ದೈವರಾಜ ಕೋರ್ದ್ದಬ್ಬು ದೈವಸ್ಥಾನ ಮೂಡುಕರೆ ಹೆಜಮಾಡಿ ಇದರ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಸುಧೀಶ್ ಜೆ ಶೆಟ್ಟಿ ಮಟ್ಟಿಮನೆ ಹೆಜಮಾಡಿ ಆಯ್ಕೆಯಾಗಿದ್ದಾರೆ.

ದೈವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಗರಡಿಮನೆ, ಪ್ರ.ಕಾರ್ಯದರ್ಶಿಯಾಗಿ ರಘುನಾಥ್ ಎಚ್, ಕೋಶಾಧಿಕಾರಿಯಾಗಿ ಶ್ರೀನಿವಾಸ ಪೂಜಾರಿ ಹೆಜಮಾಡಿ, ಉಪಾಧ್ಯಕ್ಷರಾಗಿ ಪ್ರೇಮನಾಥ್ ಶೆಟ್ಟಿ, ಶಿವಾನಂದ ಹೆಜಮಾಡಿ, ಚಂದ್ರ ಪೂಜಾರಿ, ಮೋಹನ್ ಆಳ್ವ, ಲಕ್ಷ್ಮಣ್ ಶೆಟ್ಟಿ, ದೊಂಬ ಕೆ ಪೂಜಾರಿ, ವಾಮನ್ ಕೋಟ್ಯಾನ್ ನಡಿಕುದ್ರು, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ದೇವಾಡಿಗ ಹೆಜಮಾಡಿ, ರಾಧಾಕೃಷ್ಣ ಮಲ್ಯ, ಜೊತೆ ಕೋಶಾಧಿಕಾರಿಯಾಗಿ ಮಹೇಶ್ ಶೆಟ್ಟಿ ಗರಡಿ ಮನೆ ಹೆಜಮಾಡಿ, ಸುಧಾಕರ್ ಕೆ, ನವೀನ್ ಕುಮಾರ್, ವಿಶಾಲ್, ವಿತೇಶ್, ಗುಣಪಾಲ್, ಸುಂದರ, ಅರುಣ್ ಕುಮಾರ್, ಮಹೇಶ್, ಉಮೇಶ್, ಶರತ್, ಸುಂದರ, ರಮೇಶ್, ಗಿರೀಶ್ ಹಾಗೂ ಸುಮ ಕೆ, ಸುಂದರಿ ಆಯ್ಕೆಗೊಂಡಿದ್ದಾರೆ.