Updated News From Kaup

ಜೂನ್ 11 - 12 : ಕಾಪು ಹೊಸ ಮಾರಿಗುಡಿ - ಸಾನಿಧ್ಯ ಚಲನಾ ಸಮಾರಂಭ

Posted On: 10-06-2023 05:36PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಚಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ ಧಾರ್ಮಿಕ ಕಾರ್ಯಕ್ರಮವು ಜೂ. 11 ಮತ್ತು 12 ರಂದು ನಡೆಯಲಿದೆ ಎಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶುಕ್ರವಾರ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತದ ಕಾಮಗಾರಿಗೆ ಅನುಗುಣವಾಗಿ ಅಗ್ರಸಭೆ, ಮುಖ ಮಂಟಪ ನಿರ್ಮಾಣವಾಗಬೇಕಿದ್ದು, ಅದಕ್ಕೆ ಪೂರ್ವಭಾವಿಯಾಗಿ ಪ್ರಸ್ತುತ ಇರುವ ಮಾರಿಯಮ್ಮ ಗುಡಿ ಮತ್ತು ಉಚ್ಚಂಗಿ ಗುಡಿಗಳನ್ನು ವಿಸರ್ಜಿಸಬೇಕಾಗಿದೆ. ಈ ಉದ್ದೇಶದಿಂದ ಅಮ್ಮನ ಅಭಯ ನುಡಿ ಮತ್ತು ಪ್ರಾಜ್ಞರ ಪ್ರಶ್ನಾ ಚಿಂತನೆಯಂತೆ ತಾತ್ಕಾಲಿಕ ಗುಡಿಗಳನ್ನು ನಿರ್ಮಿಸಲಾಗಿದ್ದು ಜೂ.11ರಂದು ಬೆಳಿಗ್ಗೆ ಗಂಟೆ 8 ರಿಂದ ಚಂಡಿಕಾಯಾಗ ಪ್ರಾರಂಭಗೊಂಡು, 11 ಕ್ಕೆ ಪೂರ್ಣಾಹುತಿ, ಪ್ರಸಾದ ವಿತರಣೆ ನಡೆಯಲಿದೆ.

ಶಿರ್ವ : ಬಂಟಕಲ್ಲು ಆಟೋ ರಿಕ್ಷಾ ಚಾಲಕ ಮತ್ತು ಮಾಲಕ ಸಂಘದ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಆಯ್ಕೆ

Posted On: 10-06-2023 07:06AM

ಶಿರ್ವ : ಬಂಟಕಲ್ಲು ಆಟೋ ರಿಕ್ಷಾ ಚಾಲಕ ಮತ್ತು ಮಾಲಕ ಸಂಘದ ಅಧ್ಯಕ್ಷರಾಗಿ ಬಂಟಕಲ್ಲು ಶ್ರೀ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರು, ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಬಂಟಕಲ್ಲು ಇದರ ಗುರುಸ್ವಾಮಿ ಆಗಿರುವ ಮಂಜುನಾಥ ಪೂಜಾರಿ ಇವರು ತೃತೀಯ ಬಾರಿಗೆ ಆಯ್ಕೆಯಾಗಿದ್ದಾರೆ.

ಪಡುಬಿದ್ರಿ : ನಿವೃತ್ತ ಬಿಎಸ್‌ಎಫ್ ಕಮಾಂಡೆಂಟ್ ಪಿ.ಎ. ಮೊಹಿದ್ದೀನ್ ಸನ್ಮಾನ

Posted On: 10-06-2023 07:02AM

ಪಡುಬಿದ್ರಿ: ಗಡಿ ಭದ್ರತಾ ಪಡೆಯಲ್ಲಿ ಸುಮಾರು ೩೫ ವರ್ಷಗಳ ಕಾಲ ಸೇವೆ ಸಲ್ಲಿಸಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ನಿವೃತ್ತ ಹೊಂದಿದ ಪಡುಬಿದ್ರಿ ಜಮಾಅತ್ ಸದಸ್ಯರಾದ ಪಿ.ಎ. ಮೊಹಿದ್ದೀನ್ ಅವರನ್ನು ಪಡುಬಿದ್ರಿ ಜಮಾಅತ್ ಸಮಿತಿಯ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ : ದ.ಕ ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲೆಗೆ ಲಕ್ಷ್ಮೀ ಹೆಬ್ಬಾಳ್ಕರ್

Posted On: 09-06-2023 06:53PM

ಉಡುಪಿ : ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ತಾಲೂಕು ಪಂಚಾಯತ್ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ

Posted On: 09-06-2023 06:39PM

ಕಾಪು : ಹಿರಿಯ ಕಾಂಗ್ರೆಸಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಭಾಸ್ಕರ್ ಕೋಟ್ಯಾನ್ (67) ಹೃದಯಾಘಾತದಿಂದ ನಿಧನ ಹೊಂದಿದರು.

ಕಾಪು : ಮುದರಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಗೆ ಅಭಿನಂದನೆ

Posted On: 08-06-2023 11:06AM

ಕಾಪು : ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಜೂನ್ 7ರಂದು ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಕಾಪು : ಭಾರತೀಯ ಜನತಾ ಪಾರ್ಟಿ ವತಿಯಿಂದ ರಾಜ್ಯ ಸರಕಾರದ ವಚನಭೃಷ್ಟತೆ ನೀತಿ ಖಂಡಿಸಿ ಪ್ರತಿಭಟನೆ

Posted On: 05-06-2023 07:02PM

ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾ ಸಭೆ ಸೋಮವಾರ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಸರಕಾರ 200 ಯುನಿಟ್ ವಿದ್ಯುತ್ ಎಲ್ಲರಿಗೂ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಹೆಚ್ಚು ಮಾತ್ರ ಉಚಿತ ಎಂದು ಹೇಳಿ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟ ರಾಗಿದ್ದಾರೆ. ಅಲ್ಲದೆ ಪ್ರತಿ ಯುನಿಟ್ ವಿದ್ಯುತ್ ಗೆ ಸುಮಾರು 70 ಪೈಸೆ ಯಷ್ಟು ವಿದ್ಯುತ್ ದರ ಏರಿಸಿ ಜನವಿರೋಧಿ ನೀತಿ ತೋರಿಸಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿಯನ್ನು ಭೇಟಿಯಾದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Posted On: 05-06-2023 06:53PM

ಕಾಪು : ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಜೂನ್ 5ರಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು.

ಕಾರ್ಕಳ : ಕುಲಾಲ ಸಂಘ ಬೋಳ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ - ವಾರ್ಷಿಕ ಮಹಾಸಭೆ

Posted On: 05-06-2023 06:19PM

ಕಾರ್ಕಳ : ನೂರಾರು ಕುಟುಂಬಗಳ ಸದಸ್ಯರು ಒಂದೆಡೆ ಸೇರಿ ವಿಚಾರ ವಿನಿಮಯ ಮಾಡುವಾಗ ಒಮ್ಮತವೇರ್ಪಡದಿರುವುದು ಸಹಜ. ಆದರೆ ಉತ್ತಮ ಕಾರ್ಯ ಸಿದ್ಧಿಯಾಗಬೇಕಾದರೆ, ಇಂತಹ ಭಿನ್ನಾಭಿಪ್ರಾಯಗಳನ್ನು ಮೂಲದಲ್ಲಿಯೇ ಸರಿಪಡಿಸಿಕೊಂಡು ಏಕತೆಯಿಂದಿದ್ದಲ್ಲಿ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೊಸ್ಮಾರು ಕುಲಾಲ ಸಮಾಜ ಕಲ್ಯಾಣ ಸಂಘದ ಅಧ್ಯಕ್ಷ ಪ್ರಮೋದ್ ಕುಲಾಲ್ ಅಭಿಪ್ರಾಯಪಟ್ಟರು‌. ಅವರು ಕುಲಾಲ ಸಂಘ ಬೋಳದ ವತಿಯಿಂದ ಜೂ.4ರಂದು ನಡೆದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಂಭತ್ತನೇ ವರ್ಷದ ವಾರ್ಷಿಕ ಮಹಾಸಭೆಯ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಕಳ : ಇನ್ನಾ ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನಾಚರಣೆ

Posted On: 05-06-2023 06:04PM

ಕಾರ್ಕಳ : ಇನ್ನಾ ಗ್ರಾಮ ಪಂಚಾಯತ್ ಮತ್ತು ಕಾರ್ಕಳ, ಮೂಡುಬಿದ್ರೆ ತಾಲೂಕು ಅರಣ್ಯ ಇಲಾಖೆಗಳ ವತಿಯಿಂದ ವಿಶ್ವ ಪರಿಸರ ದಿನಾಚರಣೆಯು ಪಂಚಾಯತನ ಗೋಪಾಲ್ ಭಂಡಾರಿ ಸಭಾಂಗಣದಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷ ಕುಶ ಆರ್ ಮೂಲ್ಯ ಅವರು ಅಧ್ಯಕ್ಷತೆ ವಹಿಸಿದ್ದರು.