Updated News From Kaup
ಜುಲೈ 26 (ನಾಳೆ) : ಭಾರೀ ಮಳೆ - ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
Posted On: 25 Jul 2023, 08:20 PM
ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 26 ರಂದು ಬುಧವಾರ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಜುಲೈ 27 : ನೇರ ಸಂದರ್ಶನ
Posted On: 25 Jul 2023, 04:49 PM
ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ನಗರದ ಕೋರ್ಟ್ ರೋಡ್ ಶ್ರೀ ದೇವರಾಜ್ ಟವರ್ಸ್ ಬಳಿಯ ಪೈ ಇಂಟರ್ ನ್ಯಾಷ್ನಲ್ ನಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಕಾಂ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಟಪಾಡಿ : ಧ್ವನಿ ಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ - 12 ನೇ ವಾರ್ಷಿಕ ಮಹಾಸಭೆ ; ಪ್ರತಿಭಾ ಪುರಸ್ಕಾರ
Posted On: 25 Jul 2023, 03:53 PM
ಕಟಪಾಡಿ : ಧ್ವನಿ ಬೆಳಕು ಸಂಯೋಜಕರ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ 12 ನೇ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 25 ರಂದು ಶಂಕರಪುರದ ಜೆ.ಸಿ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಧ್ವನಿ ಬೆಳಕು ಸಂಯೋಜಕರ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ : ಕೊರಗಜ್ಜ ದೈವದ ದೊಂದಿ ಬೆಳಕಿನ ಕೋಲ ಸಂಪನ್ನ
Posted On: 25 Jul 2023, 10:30 AM
ಉಡುಪಿ : ಜಿಲ್ಲೆಯ ಇತಿಹಾಸ ಪ್ರಸಿದ್ಧ ಬೊಬ್ಬರ್ಯ ಕಾಂತೇರಿ ಜುಮಾದಿ ಕಲ್ಕುಡ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ಜುಲೈ 22ರಂದು ಬೊಬ್ಬರ್ಯ ಯುವ ಸೇವಾ ಸಮಿತಿ ಹಾಗೂ ಸುಪ್ರಸಾದ್ ಶೆಟ್ಟಿ ಅಭಿಮಾನಿ ಬಳಗ ಹಾಗೂ ಮಮತಾ ಶೆಟ್ಟಿ ಅಭಿಮಾನಿ ಬಳಗ ಉಡುಪಿ ಇವರ ವತಿಯಿಂದ ಕೊರಗಜ್ಜ ದೈವಕ್ಕೆ ದೊಂದಿ ಬೆಳಕಿನ ಸಿರಿ ಸಿಂಗಾರ ಕೋಲ ಸೇವೆ ಜರಗಿತು. ಈ ಸಂದರ್ಭದಲ್ಲಿ ಬೊಬ್ಬರ್ಯ ಯುವ ಸೇವಾ ಸಮಿತಿ ಗೌರವಾಧ್ಯಕ್ಷರು ಹಾಗೂ ಅಭಿಮಾನಿ ಬಳಗ ಸಂಚಾಲಕರಾದ ವಿನೋದ್ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಮಮತಾ ಶೆಟ್ಟಿ, ಸಚಿಂದ್ರ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಸಮಿತ ಶೆಟ್ಟಿ, ಅಶೋಕ್ ಶೆಟ್ಟಿ, ಸುರೇಶ್ ಶೆಟ್ಟಿ, ಬಾಲಕೃಷ್ಣ ಪೂಜಾರಿ, ಭವಿಷ್, ಪ್ರದೀಪ್ ಶೆಟ್ಟಿ, ಸುಧಾಕರ್ ಶೆಟ್ಟಿ, ಬನ್ನಂಜೆ ಗಣೇಶ್ ದೇವಾಡಿಗ, ಸುಧಾಕರ್ ಮಡಿವಾಳ, ವಿಜಯ ಮಡಿವಾಳ, ಗೌರಿ ಮತ್ತಿತರರು ಉಪಸ್ಥಿತಿಯಿದ್ದರು.
ಬಂಟಕಲ್ಲು : ವಿದ್ಯಾರ್ಥಿಗಳಿಗೆ ಅಭಿನಂದನೆ ; ವನಮಹೋತ್ಸವ ಆಚರಣೆ
Posted On: 25 Jul 2023, 10:21 AM
ಬಂಟಕಲ್ಲು : ಶಾಲಾ ಜೀವನದಲ್ಲಿ ಪಾಠದೊಂದಿಗೆ ನಮ್ಮ ಸಂಸ್ಕೃತಿ ಆಚಾರ ವಿಚಾರವನ್ನು ಸಮಗ್ರವಾಗಿ ಅರಿತು ಮುನ್ನಡೆದರೆ ಓರ್ವ ವಿದ್ಯಾರ್ಥಿ ಉತ್ತಮ ಗುಣಮಟ್ಟದ ಪ್ರಜೆಯಾಗಿ ಬೆಳೆಯಬಲ್ಲ ಎಂದು ಹೇರೂರು ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿಯ ಅಧ್ಯಕ್ಷರಾದ ರಾಘವೇಂದ್ರ ಸ್ವಾಮಿಯವರು ಹೇಳಿದರು. ಅವರು ಬಂಟಕಲ್ಲು ಆಟೋರಿಕ್ಷಾ ಚಾಲಕ ಮತ್ತು ಮಾಲಕರ ಸಂಘ, ವಿಕಾಸ ಸೇವಾ ಸಮಿತಿ ಮತ್ತು ಮಹಿಳಾ ಬಳಗ ಹೇರೂರು ಹಾಗೂ ಹೇರೂರು ಫ್ರೆಂಡ್ಸ್ ಇದರ ವತಿಯಿಂದ ನಡೆದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸುಮಾರು 16 ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು. ಈ ಸಂದರ್ಭ ಹಿರಿಯ ಕೃಷಿ ಕಾರ್ಮಿಕೆ ಲೀಲಾವತಿ ಅಚ್ಚುತ ಆಚಾರ್ಯ ಇವರನ್ನು ಭಜನಾ ಮಂಡಳಿಯ ಮಹಿಳಾ ಬಳಗದ ಅಧ್ಯಕ್ಷೆ ಸುಂದರಿ ರಾವ್ ಸನ್ಮಾನಿಸಿ, ಹಿರಿಯರನ್ನು ಗುರುತಿಸಿ ಗೌರವಿಸುವುದು ಯುವ ಪೀಳಿಗೆಗೆ ಮಾರ್ಗದರ್ಶಿತ್ವದ ಸಂದೇಶ ಕೊಡುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ವನಮಹೋತ್ಸವ ಕಾರ್ಯಕ್ರಮವನ್ನು ಹಿರಿಯ ಉದ್ಯಮಿ ದೇವದಾಸ್ ಜೋಗಿ ಅವರು ಸಸಿ ವಿತರಿಸುವ ಮೂಲಕ ಉದ್ಘಾಟಿಸಿದರು. ಉಮೇಶ್ ಪ್ರಭು ರವರು ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉತ್ತಮವಾಗಿ ಬೆಳೆದು ಮಾತೃಭೂಮಿಗೆ ಉತ್ತಮ ಕೊಡುಗೆ ನೀಡುವಂತಾಗಲಿ ಎಂದು ಶುಭ ಹಾರೈಸಿದರು. ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಹೇರೂರು ಫ್ರೆಂಡ್ಸ್ ಕಾರ್ಯದರ್ಶಿ ಕುಮಾರಿ ದೀಕ್ಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ವರ್ಷಿಣಿ ಪ್ರಾರ್ಥಿಸಿದರು. ಡೇನಿಸ್ ಡಿಸೋಜಾ ಸ್ವಾಗತಿಸಿದರು. ವಿಕಾಸ ಸೇವಾ ಸಮಿತಿ ಅಧ್ಯಕ್ಷ ಮಾಧವ ಆಚಾರ್ಯರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕು. ದಿವ್ಯ ಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು. ಗೌರವಾಧ್ಯಕ್ಷ ಮಾಧವ ಕಾಮತ್, ಹೇರೂರು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಜೋಗಿ ಸಹಕರಿಸಿದ್ದರು.
ಕಾಪು : ಟೀಮ್ ಭಗ್ವ ತಂಡದಿಂದ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ
Posted On: 24 Jul 2023, 06:57 PM
ಕಾಪು : ಇಲ್ಲಿನ ಟೀಮ್ ಭಗ್ವಾ ತಂಡದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ಕಳ ತಾಲೂಕಿನ ಕಲ್ಯಾ ಹಾಳೆಕಟ್ಟೆ ನಿವಾಸಿ ಆನಂದ್ ಶೆಟ್ಟಿಯವರ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ ಮಾಡಲಾಯಿತು. ಈ ಸಂದರ್ಭ ಟೀಮ್ ಭಗ್ವದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಭಾರಿ ಮಳೆ : ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಣೆ
Posted On: 24 Jul 2023, 06:50 PM
ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಕಟಪಾಡಿ : ಮೂಡಬೆಟ್ಟುವಿನಲ್ಲಿ ಭಾರೀ ಮಳೆಗೆ ಮನೆಯ ಗೋಡೆ ಕುಸಿತ
Posted On: 24 Jul 2023, 12:25 PM
ಕಟಪಾಡಿ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡಬೆಟ್ಟು ನಿವಾಸಿ ಗೋಪಾಲ ಪಾಣರ ಅವರ ಮನೆಯ ಗೋಡೆ ಭಾರೀ ಮಳೆಗೆ ಕುಸಿದು ಬಿದ್ದಿದೆ. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರು ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಗರಿಷ್ಠ ಪರಿಹಾರ ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಸವಿತಾ ಎ ಶೆಟ್ಟಿ, ಸುಜಲಾ ಪೂಜಾರಿ, ಕೋಟೆ ಗ್ರಾಮ ಪಂಚಾಯತ್ ಸದಸ್ಯರಾದ ರತ್ನಾಕರ, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿಗಳಾದ ಗುರುಕೃಪಾ ರಾವ್, ಶಕ್ತಿ ಕೇಂದ್ರದ ಸಂಚಾಲಕರಾದ ನಿತಿನ್, ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ರಾಮ ಪಾಣರ, ಪಕ್ಷದ ಪ್ರಮುಖರಾದ ಮುರಳಿಧರ ಪೈ, ಶಾಂತ ಪೂಜಾರಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ನಾಳೆ (ಜುಲೈ 24) : ಭಾರೀ ಮಳೆ - ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
Posted On: 23 Jul 2023, 10:01 PM
ಉಡುಪಿ : ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಸಿ ತರಗತಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.
ಉಡುಪಿ : ಸಾಲುಮರದ ತಿಮ್ಮಕ್ಕನಿಗೆ ಗೌರವಾರ್ಪಣೆ
Posted On: 23 Jul 2023, 04:40 PM
ಉಡುಪಿ : ನಮ್ಮ ಮನೆ ನಮ್ಮ ಮರ ತಂಡದಿಂದ ಉಡುಪಿಯ ಬುಡ್ನಾರಿನ ಛಾಯಾನಟ್ ಮನೆಯಲ್ಲಿ ಪದ್ಮಶ್ರೀ ಪುರಸ್ಕತೆ ನಾಡೋಜ ಸಾಲುಮರದ ತಿಮ್ಮಕ್ಕ ಅವರನ್ನು ಜಯಕರ್ ಶೆಟ್ಟಿ ಇಂದ್ರಾಳಿ ಅವರು ಗೌರವಿಸಿದರು. ಸಾಲುಮರದ ತಿಮ್ಮಕ್ಕ ನೀಡಿದ ಹಣ್ಣಿನ ಗಿಡಗಳನ್ನು ಇದೇ ಪರಿಸರದಲ್ಲಿ ನೆಡಲಾಯಿತು. ಇದೇ ಸಂದರ್ಭದಲ್ಲಿ ಸಾಲು ಮರದ ತಿಮ್ಮಕ್ಕ ಅವರ ಮಗ ಉಮೇಶ್, ವನಸಿರಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಉಪಾಧ್ಯಕ್ಷೆ ಸಂಧ್ಯಾ ಶೆಣೈ, ನಾಗರಾಜ್ ಹೆಬ್ಬಾರ್ ವಿಘ್ನೇಶ್ವರ ಅಡಿಗ, ಮಧುಸೂದನ್ ಹೇರೂರು, ಉಡುಪಿಯ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಹರೀಶ್ಚಂದ್ರ, ಡಾ. ವ್ಯಾಸರಾಯ ತಂತ್ರಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ನಮ್ಮ ಮನೆ ನಮ್ಮ ಮರ ತಂಡದ ಅವಿನಾಶ್ ಕಾಮತ್, ಗುರುರಾಜ್ ಸನಿಲ್, ಸಾಹಿತಿ ಕಾತ್ಯಾಯಿನಿ ಕುಂಜಿಬೆಟ್ಟು , ಪ್ರೊ .ಕೃಷ್ಣಯ್ಯ, ಕಲಾವಿದರಾದ ಪುರುಷೋತ್ತಮ ಅಡ್ವೆ , ಜನಾರ್ದನ ಹಾವಂಜೆ, ಗಿರಿಜಾ ಹೆಲ್ತ್ ಕೇರ್ ಮಾಲಕ ರವೀಂದ್ರ ಕಡೆಕಾರ್ , ರಾಘವೇಂದ್ರ ಪ್ರಭು ಕರ್ವಾಲು, ರಾಘವೇಂದ್ರ ಅಜೆಕಾರು, ರಾಮಾಂಜಿ, ರೋಟರಾಕ್ಟ್ ಕ್ಲಬ್ ಉಡುಪಿ ಇದರ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.
