Updated News From Kaup
ಪಡುಬಿದ್ರಿ : ಕಡಲ್ಕೊರೆತದ ಭೀತಿಯಲ್ಲಿ ಎಂಡ್ ಪಾಯಿಂಟ್ ನಲ್ಲಿರುವ ಬ್ಲೂ ಫ್ಲ್ಯಾಗ್ ಬೀಚ್
Posted On: 23 Jul 2023, 04:24 PM
ಪಡುಬಿದ್ರಿ : ಅಂತರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿಯ ಎಂಡ್ ಪಾಯಿಂಟ್ ನಲ್ಲಿರುವ ಬ್ಲೂ ಫ್ಲ್ಯಾಗ್ ಬೀಚ್ ಕಡಲ್ಕೊರೆತದ ಭೀತಿಯಲ್ಲಿದೆ. ಈ ನಿಟ್ಟಿನಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ಪ್ರಬಂಧಕ ವಿಜಯ ಶೆಟ್ಟಿ, ಎರಡು ದಿನಗಳಿಂದ ಕಡಲ್ಕೊರೆತ ಜಾಸ್ತಿ ಇರುವುದರಿಂದ ಪ್ರವಾಸಿಗರಿಗೆ ಸಮುದ್ರ ದಡಕ್ಕೆ ಹೋಗಲು ನಿಬಂ೯ಧ ವಿಧಿಸಿದ್ದೆವು. ಒಳಗಿನ ಗಾರ್ಡನ್ ಏರಿಯಾಕ್ಕೆ ಬರಲು ಅವಕಾಶವಿತ್ತು. ಮುಂಜಾಗ್ರತಾ ಕ್ರಮವಾಗಿ ಭಾನುವಾರ 3 ಗಂಟೆಯಿಂದ ಪ್ರವಾಸಿಗರಿಗೆ ನಿಬಂ೯ಧಿಸಲಾಗಿದೆ. ಜೋರಾದ ಕಡಲ ಅಲೆಗಳಿಗೆ ರಕ್ಷಣೆಗಾಗಿ ಕಟ್ಟಿದ ಕಲ್ಲಿನ ಕಟ್ಟೆ ಕೊಚ್ಚಿಕೊಂಡು ಹೋಗಿದ್ದು, ವಾಚ್ ಟವರ್ ಕುಸಿಯುವ ಭೀತಿಯಲ್ಲಿದೆ. ಇದರಿಂದ ಸ್ವಲ್ಪ ಮಟ್ಟಿನ ನಷ್ಟವಾಗಿದೆ ಎಂದರು. ಅಂತರಾಷ್ಟ್ರೀಯ ಮಾನ್ಯತೆ ಪಡೆದ ದೇಶದ ಹನ್ನೆರಡು ಬೀಚ್ ಗಳಲ್ಲಿ ಇದೂ ಒಂದಾಗಿದ್ದು, ಕಾಮಿನಿ ನದಿ ಮತ್ತು ಸಮುದ್ರದ ನಡುವೆ ಇರುವ ಈ ಪ್ರದೇಶ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ.
ಎರ್ಮಾಳು : ಕೆಸರ್ಡ್ ಗೊಬ್ಬು ಕ್ರೀಡಾಕೂಟ
Posted On: 23 Jul 2023, 01:46 PM
ಎರ್ಮಾಳು : ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್, ಬಂಟರ ಮಹಿಳಾ ವಿಭಾಗ, ಯುವ ಬಂಟರ ವಿಭಾಗ ಹಾಗೂ ಬಂಟರ ಕ್ರೀಡಾ ವಿಭಾಗಧ ಆಶ್ರಯದಲ್ಲಿ ಆದಿತ್ಯವಾರ ಎರ್ಮಾಳು ಬರ್ಪಾಣಿ ಜಗನ್ನಾಥ ಶೆಟ್ಟಿಯವರ ಗದ್ದೆಯಲ್ಲಿ ಕೆಸರ್ಡ್ ಗೊಬ್ಬು ಕ್ರೀಡಾ ಕೂಟ ಜರಗಿತು. ಮಾಜಿ ಕಸ್ಟಂಸ್ ಅಧಿಕಾರಿ, ಜಿಲ್ಲಾ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಕ್ರೀಡೆ ಪ್ರಶಸ್ತಿ ಪಡೆಯುವ ಸಲುವಾಗಿ ಮಾತ್ರವಲ್ಲದೆ, ದೇಹದ ಆರೋಗ್ಯ ಕಾಪಾಡಲು ಬಹು ಮುಖ್ಯ. ಕ್ರೀಡೆಯಲ್ಲಿ ಸಾಧನೆಯ ಮುಖಾಂತರ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲು ಸಾಧ್ಯ ಎಂದರು. ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪಡುಬಿದ್ರಿ ಗ್ರಾಮ ಪಂಚಾಯತ್ ಅದ್ಯಕ್ಷ ರವಿ ಶೆಟ್ಟಿ, ಪುಣೆ ಉದ್ಯಮಿ ಬಾಲಚಂದ್ರ ಎಲ್. ಶೆಟ್ಟಿ ಎರ್ಮಾಳು, ಎಸ್.ಇ.ಝಡ್ ಜನರಲ್ ಮೆನೇಜರ್ ಅಶೋಕ್ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ ಶೆಟ್ಟಿ, ಉದ್ಯಮಿ ಮಿಥುನ್ ಆರ್ ಹೆಗ್ಡೆ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಕಾರ್ಯದರ್ಶಿ, ಪಡುಹಿತ್ಲು ಪ್ರಕಾಶ್ ಶೆಟ್ಟಿ, ಮಹಿಳಾ ಅಧ್ಯಕ್ಷೆ ಜ್ಯೋತಿ ಎಸ್. ಶೆಟ್ಟಿ, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಸಂತೋಷ್ ಶೆಟ್ಟಿ ಬರ್ಪಾಣಿ, ಯುವ ವಿಭಾಗದ ಅಧ್ಯಕ್ಷ ನವೀನ್ ಎನ್.ಶೆಟ್ಟಿ, ಕ್ರೀಡಾ ಸಂಚಾಲಕ ವಿನಯ್ ಶೆಟ್ಟಿ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ನವೀನ್ ಎನ್ ಶೆಟ್ಟಿ ಸ್ವಾಗತಿಸಿದರು. ಪದ್ರ ಜಯ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಜ್ಯೋತಿ ಎಸ್. ಶೆಟ್ಟಿ ವಂದಿಸಿದರು.
ಪಡುಬಿದ್ರಿ : ಅಪಾಯಕ್ಕೆ ಸಿಲುಕಿದ್ದ ಅಪರೂಪದ ಹಾಕ್ಸ್ ಬಿಲ್ ಸೇರಿದಂತೆ ಒಟ್ಟು 6 ಕಡಲಾಮೆಗಳ ರಕ್ಷಣೆ
Posted On: 22 Jul 2023, 06:22 PM
ಪಡುಬಿದ್ರಿ : ಬಲೆಗೆ ಸಿಲುಕಿ ಒದ್ದಾಡುತ್ತಾ ಸಮುದ್ರ ತೀರಕ್ಕೆ ಬಂದಿದ್ದ ಹಾಕ್ಸ್ ಬಿಲ್ ಸೇರಿದಂತೆ ಒಟ್ಟು 6 ಕಡಲಾಮೆಗಳನ್ನು ಪಡುಬಿದ್ರಿ ಬ್ಲೂ ಫ್ಲ್ಯಾಗ್ ಸಿಬ್ಬಂದಿ ರಕ್ಷಿಸಿ ಮರಳಿ ಸಮುದ್ರಕ್ಕೆ ಬಿಟ್ಟಿದ್ದಾರೆ. ಕಡಲಬ್ಬರವಿದ್ದರೂ ಸಮುದ್ರಕ್ಕೆ ಇಳಿದ ಬ್ಲೂಫ್ಲ್ಯಾಗ್ ಬೀಚ್ನ ಮೇಲ್ವಿಚಾರಕ ಕಿರಣ್ರಾಜ್ ಮತ್ತವರ ತಂಡ ಬಲೆಯಲ್ಲಿ ಸಿಲುಕಿದ್ದ ಕಡಲಾಮೆಯನ್ನು ಸಮುದ್ರದ ಮೇಲಕ್ಕೆ ತಂದು ರಕ್ಷಿಸಿದ್ದಾರೆ. ರಕ್ಷಣಾ ತಂಡದಲ್ಲಿ ಸ್ಥಳೀಯರಾದ ದಿನರಾಜ್ ಕುಂದರ್, ಹೇಮರಾಜ್ ಕುಂದರ್, ಕಾರ್ತಿಕ್, ಬೀಚ್ ಸಿಬ್ಬಂದಿ ಸತ್ಯವತಿ, ಸುಮನ್, ಯತೀಶ್ ಮತ್ತಿತರರಿದ್ದರು.
ಎರ್ಮಾಳು ಬರ್ಪಾಣಿ ಮೂಡಬೆಟ್ಟುವಿನಲ್ಲಿ ಪಿಪಿಸಿ ವಿದ್ಯಾರ್ಥಿಗಳಿಗೆ ಕಂಡಡೊಂಜಿ ದಿನ ಕಾರ್ಯಕ್ರಮ
Posted On: 22 Jul 2023, 06:02 PM
ಎರ್ಮಾಳು : ಆದರ್ಶ ಸಂಘಗಳ ಒಕ್ಕೂಟ ಅದಮಾರು, ರಾಷ್ಟ್ರೀಯ ಸೇವಾ ಯೋಜನೆ, ಪೂರ್ಣ ಪ್ರಜ್ಞಾ ಪದವಿಪೂರ್ವ ಕಾಲೇಜು ಅದಮಾರು ಇವರ ಸಂಯುಕ್ತ ಆಶ್ರಯದಲ್ಲಿ ಎರ್ಮಾಳು ಬರ್ಪಾಣಿ ಮೂಡಬೆಟ್ಟುವಿನ ಜಗನ್ನಾಥ ಶೆಟ್ಟಿಯವರ ಗದ್ದೆಯಲ್ಲಿ ಕಂಡಡೊಂಜಿ ದಿನ ಕಾರ್ಯ ಕ್ರಮ ಶನಿವಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾಯೋಜನೆಯ ವಿಭಾಗಾಧಿಕಾರಿ ಸವಿತಾ ಎರ್ಮಾಳು ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಇಂದಿನ ಕಂಡಡೊಂಜಿ ದಿನ ಕಾರ್ಯಕ್ರಮ ಇಂದಿಗೆ ಮಾತ್ರವೇ ಸೀಮಿತ ಆಗದೆ, ಎಂದಿಗೂ ಇದೊಂದು ಪ್ರೇರಣೆಯಾಗಲಿ. ತೆನೆ ಎಷ್ಟು ತುಂಬಿದ್ದರೂ, ಅದು ಬಾಗುತ್ತದೆ. ನಾವು ಕೂಡಾ ಪ್ರಕೃತಿಗೆ, ಭೂಮಿಗೆ ತಲೆ ಬಾಗಲೇಬೇಕೆಂದರು. ಸನ್ಮಾನ : ದೈಹಿಕ ಶಿಕ್ಷಕ ಚಂದ್ರಶೇಖರ ಶೆಟ್ಟಿ, ಪತ್ರಕರ್ತ ಹರೀಶ್ ಹೆಜ್ಮಾಡಿ ಮತ್ತು ಸವಿತಾ ಎರ್ಮಾಳುರವರನ್ನು ಸನ್ಮಾನಿಸಲಾಯಿತು. ಪೂರ್ಣ ಪ್ರಜ್ಞ ಕಾಲೇಜಿನ ಕೋಶಾಧಿಕಾರಿ ಗಣೇಶ್ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಪೂರ್ಣ ಪ್ರಜ್ಞ ಶಿಕ್ಷಣ ಸಂಸ್ಥೆಯ ಸುಮಾರು 500 ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಮುಖ್ಯ ಅತಿಥಿಗಳಾಗಿ ಸವಿತಾ ಎರ್ಮಾಳು, ಉದ್ಯಮಿ ಬಾಲಚಂದ್ರ ಎಲ್.ಶೆಟ್ಟಿ, ಎರ್ಮಾಳು ನಾರಾಯಣ ಶೆಟ್ಟಿ, ಸಂತೋಷ್ ಶೆಟ್ಟಿ ಇನ್ನ, ಸಂತೋಷ್ ಶೆಟ್ಟಿ ಬರ್ಪಾಣಿ, ಡಾ. ಜಯಶಂಕರ್ ಕಂಗಣ್ಣಾರು, ಸಂಜೀವ ನಾ̧ಯ್ಕ್, ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಹೆಜಮಾಡಿ ಮುಂತಾದವರು ಉಪಸ್ಥಿತರಿದ್ದರು. ಪ್ರಾಂಶುಪಾಲ ಸಂಜೀವ ನಾಯ್ಕ್ ಸ್ವಾಗತಿಸಿದರು. ಶಿಕ್ಷಕ ದೇವಿಪ್ರಸಾದ್ ಬೆಳ್ಳಿಬೆಟ್ಟು ನಿರೂಪಿಸಿದರು. ಡಾ. ಜಯಶಂಕರ್ ಕಂಗಣ್ಣಾರು ವಂದಿಸಿದರು.
ಎರ್ಮಾಳು : 1694ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ
Posted On: 21 Jul 2023, 06:46 PM
ಎರ್ಮಾಳು : ಇಲ್ಲಿನ ಜನಾರ್ದನ ಜನ ಕಲ್ಯಾಣ ಸೇವಾ ಸಮಿತಿ ಸಭಾಂಗಣದಲ್ಲಿ ಮುಂದಿನ ಶುಕ್ರವಾರದವರೆಗೆ ನಡೆಯಲಿರುವ 1694ನೇ ಮದ್ಯವರ್ಜನ ಶಿಬಿರವನ್ನು ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ್ ರಾಜ್ ಎರ್ಮಾಳು ಬೀಡು ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರು ಮದ್ಯವರ್ಜನ ಶಿಬಿರ ಆಯೋಜಿಸುವಲ್ಲಿ ಹೆಚ್ಚು ಶ್ರಮ ತೆಗೆದುಕೊಂಡಿದ್ದ ಯೋಜನೆಯಾಗಿದೆ. ಮದ್ಯ ವ್ಯಸನಿಗಳಿಂದ ಕುಟುಂಬವು ವಿನಾಶದಂಚಿಗೆ ವಾಲುತ್ತದೆ. ಮದ್ಯದ ಚಟವನ್ನು ಬಿಡುವ ಉತ್ಕಟ ಇಚ್ಛಾ ಶಕ್ತಿಯನ್ನು ವ್ಯಸನಿಯು ತಳೆದಲ್ಲಿ ತನ್ನ ಹಾಗೂ ಮನೆ ಮಂದಿಯಿಂದ ಪ್ರೀತ್ಯಾದರದ ಜೊತೆಗೆ ಸಮಾಜದಲ್ಲಿ ಗೌರವಯುತ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು. 1694ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಉಚ್ಚಿಲ ಇದರ ಅಧ್ಯಕ್ಷ ಕೇಶವ ಮೊಯ್ಲಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಯೋಜನೆಯ ಬಿ.ಸಿ. ಟ್ರಸ್ಟಿನ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು, ತೆಂಕ ಗ್ರಾ.ಪಂ. ಅದ್ಯಕ್ಷೆ ಕಸ್ತೂರಿ ಪ್ರವೀಣ್, ರಾಜ್ಯ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ನವೀನ್ ಅಮೀನ್, ಕಾಪು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸತ್ಯಾನಂದ ನಾಯಕ್, ಶಂಕರ ಕುಂದರ್ ಸೂಡ ವೇದಿಕೆಯಲ್ಲಿದ್ದರು. ಅಮಣಿ ಪ್ರಾರ್ಥಿಸಿದರು. ಶಿಬಿರದ ವ್ಯವಸ್ಥಾಪನಾ ಸಮಿತಿ ಕೋಶಾಧಿಕಾರಿ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಸ್ವಾಗತಿಸಿದರು. ಯೋಜನೆಯ ಉಚ್ಚಿಲ ವಲಯ ಮೇಲ್ವಿಚಾರಕಿ ವಿಜಯಾ ವಂದಿಸಿದರು. ಕಾಪು ತಾಲೂಕು ಯೋಜನಾಧಿಕಾರಿ ಜಯಂತಿ ನಿರೂಪಿಸಿದರು. 1694ನೇ ಮದ್ಯವರ್ಜನ ಶಿಬಿರದಲ್ಲಿ 60 ಕ್ಕೂ ಅಧಿಕ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ಪುತ್ತಿಗೆ ಮಠಾಧೀಶರನ್ನು ಭೇಟಿಯಾದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ
Posted On: 21 Jul 2023, 04:56 PM
ಕಾಪು : ಪುತ್ತಿಗೆ ಮಠದ ಶ್ರೀಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕೆಂಗೇರಿ ಉಪನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶುಕ್ರವಾರ ಭೇಟಿಯಾಗಿ ಆಶೀರ್ವಾದ ಪಡೆದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.
ಉಡುಪಿ : ಫಲಿಸಿದ ಹೋರಾಟ ; ನಿಖಿತಾ ಕುಟುಂಬಕ್ಕೆ ಸಾಂತ್ವಾನ ಧನ
Posted On: 20 Jul 2023, 07:35 PM
ಉಡುಪಿ : ನಿಖಿತಾ ಪರ ಜರುಗಿದ ನ್ಯಾಯಯುತ ಹೋರಾಟಕ್ಕೆ ಜಯ ಲಭಿಸಿದಂತಾಗಿದೆ. ಜೋರು ಮಳೆಯನ್ನು ಲೆಕ್ಕಿಸಿದೆ ನ್ಯಾಯದ ಕೂಗನ್ನು ಎಬ್ಬಿಸಿದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ಉಡುಪಿ ಜಿಲ್ಲೆಯ ಸರ್ವ ಕುಲಾಲ ಸಮುದಾಯ ಸಂಘಟನೆಗಳು, ಪ್ರಜ್ಞಾವಂತ ಹೋರಾಟದ ಮನಸ್ಸುಗಳ ನಿರಂತರ ಹೋರಾಟದ ಫಲಶ್ರುತಿಯಾಗಿ ಉಡುಪಿಯ ಖಾಸಗಿ ಅಸ್ಪತ್ರೆ ನಿಖಿತಾ ಕುಟುಂಬಕ್ಕೆ ಪರಿಹಾರ ಧನವನ್ನು ನೀಡಿದೆ. ಉಡುಪಿ ಜಿಲ್ಲೆಯ ಸರ್ವ ಕುಲಾಲ ಸಮುದಾಯ ಸಂಘಟನೆಗಳು ಹೋರಾಟದ ಕಾವನ್ನು ಜೀವಂತವಾಗಿ ಇರಿಸಿದವು. ಹಲವು ಮನವಿಗಳು ಜೊತೆಗೆ ಆಸ್ಪತ್ರೆಯ ಆಡಳಿತ ಮಂಡಳಿಯ ಜೊತೆಗೆ ಕುಲಾಲ ಸಮುದಾಯ ಸಂಘಟನೆಯ ನಾಯಕರು/ಸಾಮಾಜಿಕ ಹೋರಾಟಗಾರರು ನಿರಂತರ ಮಾತುಕಥೆಯನ್ನು ನಡೆಸಿದುದರ ಪ್ರಯತ್ನವಾಗಿ ಫಲ ದೊರೆಯಿತು. ವೈದ್ಯೊ ನಾರಾಯಣೀ ಹರಿ: ಸೇವಾ ನ್ಯೂನತೆಗಳಿರದೆ, ಗ ರಿಷ್ಠ ಪ್ರಯತ್ನಗಳ ಹೊರತಾಗಿಯೂ ನಿಖಿತಾಳನ್ನು ಉಳಿಸಿಕೊಳ್ಳಲಾಗಿಲ್ಲ ಎಂಬ ನೋವಿನಲ್ಲಿ ಮಾನವೀಯ ನೆಲೆಯಲ್ಲಿ ಇಪ್ಪತ್ತು ಲಕ್ಷ ಸಾಂತ್ವನ ಧನವನ್ನು ನಿಖಿತಾ ಕುಟುಂಬಕ್ಕೆ ಇಂದು ನೀಡಿದ ಉಡುಪಿ ಖಾಸಗಿ ಆಸ್ಪತ್ರೆಗೆ ಸಂಘಟನೆ ಕೃತಜ್ಞತೆ ಸಲ್ಲಿಸಿದೆ. ಖಂಡಿತಾ ನಿಖಿತಾ ತಂದೆ-ತಾಯಿಗೆ ಈ ಪರಿಹಾರ ಹಣ ಮಗಳ ಸಾವಿಗೆ ಸಮಾಧಾನ ನೀಡದು. ಆದರೆ ಮಗಳಿಗಾಗಿ ಕಟ್ಟಿದ ಹೊಸಮನೆಯ ಸಾಲತೀರಿಸಲು, ಬೇರೆ ಮಕ್ಕಳಿಲ್ಲದ ಅವರ ನಾಳೆಯ ಬದುಕಿಗೆ ಪುಟ್ಟ ಆಸರೆಯಂತೂ ಖಂಡಿತಾ ಆದೀತು. ಒಂದು ನ್ಯಾಯಪರ ಹೋರಾಟ,ಸಮುದಾಯ ಸಂಘಟನೆಗಳ ಮನವಿಗಳಿಗೆ ಸಿಕ್ಕ ಜಯ. ನಿಖಿತಾ ಪರ ದನಿಮೂಡಿಸಿದ ಎಲ್ಲ ಮಾನವೀಯ ಮನಸ್ಸುಗಳಿಗೆ, ಸಂಘಟನೆಗಳಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. "ಕಾಪುವಿನ ನಿಖಿತಾ ಕುಟುಂಬದ ನೋವಿಗೆ ಸಕಾಲದಲ್ಲಿ ಸ್ಪಂದಿಸಿದ ಎಲ್ಲರಿಗೂ ಆಭಾರಿ. ಖಂಡಿತಾ ತೀರಿಹೋದ ಮಗಳನ್ನು ಮತ್ತೆ ನಮಗೆ ಮರಳಿಸಿಕೊಡಲು ಸಾಧ್ಯವಿಲ್ಲ. ಆದರೆ ಕನಿಷ್ಟ ನಿಖಿತಾ ತಂದೆ- ತಾಯಿಯ ಮುಂದಿನ ಜೀವನ ನಿರ್ವಹಣೆಗೆ ಈ ಹಣ ಸದ್ವಿನಿಯೋಗವಾಗಲಿ. ಕೈಜೋಡಿಸಿದ ವಿದ್ಯಾರ್ಥಿ ತಂಡಗಳಿಗೆ, ಜಿಲ್ಲಾ ಕುಲಾಲ ನಾಯಕರಿಗೆ, ಕೊನೆಗಾದರೂ ಸ್ಪಂದಿಸಿದ ಆಸ್ಪತ್ರೆಯವರಿಗೆ ನನ್ನ ಕೃತಜ್ಞತೆಗಳು." ಉದಯ್ ಕುಲಾಲ್ ಕಳತ್ತೂರು ನಿಕಟ ಪೂರ್ವ ಅಧ್ಯಕ್ಷರು ಕಾಪು ಕುಲಾಲ ಯುವ ವೇದಿಕೆ
ಕಾರ್ಕಳ : ಕರಾಟೆಯಲ್ಲಿ ನಿಟ್ಟೆಯ ಅನುಷ್ ಮತ್ತು ಆಯುಷ್ ಸಾಧನೆ
Posted On: 20 Jul 2023, 05:25 PM
ಕಾರ್ಕಳ : ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟದಲ್ಲಿ ನಿಟ್ಟೆಯ ಅನುಷ್ ಅರುಣ್ ಕುಮಾರ್, ಆಯುಷ್ ಅರುಣ್ ಕುಮಾರ್ ಸಾಧನೆಗೈದಿದ್ದಾರೆ. ಅನುಷ್ ಬ್ರೌನ್ ಬೆಲ್ಟ್ ವಿಭಾಗದಲ್ಲಿ ಕುಮಿಟೆಯಲ್ಲಿ ಪ್ರಥಮ ಸ್ಥಾನ ಹಾಗೂ ಕಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಯುಷ್ ಬ್ರೌನ್ ಬೆಲ್ಟ್ ವಿಭಾಗದಲ್ಲಿ ಕುಮಿಟೆಯಲ್ಲಿ ಧ್ವಿತೀಯ ಸ್ಥಾನ ಹಾಗೂ ಕಟದಲ್ಲಿ ತೃತೀಯ ಸ್ಥಾನ ಪಡೆದು ಬೆಳ್ಳಿಯ ಪದಕ ಹಾಗೂ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಂದಿರರ ರಾಜಾಂಗಣದಲ್ಲಿ ಜುಲೈ 15, 16ರಂದು ಎರಡು ದಿನಗಳ ಕಾಲ ನಡೆದ ಮೊದಲ ಆವೃತ್ತಿಯ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ ಚಾಂಪಿಯನ್ ಶಿಪ್ ನಲ್ಲಿ ಅವರು ಈ ಸಾಧನೆಗೈದಿದ್ದಾರೆ.
ಕಾರ್ಕಳ : ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ
Posted On: 20 Jul 2023, 05:11 PM
ಕಾರ್ಕಳ : ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಜುಲೈ 17 ಮತ್ತು 19 ರಂದು ಹಮ್ಮಿಕೊಳ್ಳಲಾಗಿತ್ತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊಫೆಸರ್ ರಾಜ್ ಗಣೇಶ್ ಕಾಮತ್ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್ ನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಸಿ.ಎಸ್.ಇ.ಇ.ಟಿ ಬಗ್ಗೆ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭು ವಿದ್ಯಾರ್ಥಿಗಳಿಗೆ ಕಂಪೆನಿ ಸೆಕ್ರೇಟಿಯ ಕಾರ್ಯವೈಖರಿ ಹಾಗೂ ಅಗತ್ಯತೆಗಳ ಬಗ್ಗೆ ವಿವರಿಸಿದರು. ಸಂಸ್ಥೆಯ ಸಂಸ್ಥಾಪಕರದ ಅಶ್ವತ್ ಎಸ್.ಎಲ್ ಹಾಗೂ ಗಣಪತಿ ಭಟ್ ಕೆ.ಎಸ್ ವಿದ್ಯಾರ್ಥಿಗಳಿಗೆ ಕೋರ್ಸ್ ನ ಮಹತ್ವವನ್ನು ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರಾಘವೇಂದ್ರ ಬಿ.ರಾವ್, ಉಮೇಶ್, ಚಂದ್ರಕಾಂತ್ , ಜ್ಞಾನೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಾನ್ವಿ ಎಸ್.ರಾವ್ ಕಾರ್ಯಕ್ರಮ ನಿರೂಪಿಸಿದರು ಹಾಗೂ ನಮನ್ ವಂದಿಸಿದರು.
ಕಾಪು : ಹಡೀಲು ಭೂಮಿಗೆ ಕೃಷಿಯ ಜೀವಂತಿಕೆ ನೀಡಿದ ದಾರು ಶಿಲ್ಪಿ ವೈ. ಪ್ರಶಾಂತ್ ಆಚಾರ್ಯ
Posted On: 20 Jul 2023, 05:04 PM
ಕಾಪು : ಸ್ವಂತ ಕೃಷಿ ಭೂಮಿಯನ್ನು ಹೊಂದಿಲ್ಲದ ಕಾಪು ತಾಲೂಕಿನ ಎಲ್ಲೂರು ಗ್ರಾಮದ ದಾರು ಶಿಲ್ಪಿ ವೈ. ಪ್ರಶಾಂತ್ ಆಚಾರ್ಯ ಹಡೀಲು ಗದ್ದೆಯನ್ನು ಎರವಲು ಪಡೆದುಕೊಂಡು ಭತ್ತದ ಬೇಸಾಯವನ್ನು ಮಾಡುವ ಮೂಲಕ ಕೃಷಿ ಸಂಪತ್ತಿನ ಒಡೆಯನಾಗಿ ಬೆಳೆಯುತ್ತಿದ್ದಾರೆ. ಯುವಕರು ಕೃಷಿಯಿಂದ ವಿಮುಕ್ತರಾಗುತ್ತಿರುವ ಈ ಕಾಲ ಘಟ್ಟದಲ್ಲಿ ಈ ಯುವಕನ ಕೃಷಿ ಕಾಯಕ ನಿಜಕ್ಕೂ ಮಾದರಿಯಾಗಿದ್ದು, ಈ ಬಾರಿ ಸುಮಾರು 4 ಎಕರೆಗೂ ಮಿಕ್ಕಿದ ಗದ್ದೆಯಲ್ಲಿ ಭತ್ತದ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಎಂಒ4 ಭತ್ತದ ತಳಿ ಬಳಸುತ್ತಿದ್ದು ಸ್ಥಳೀಯ 26 ಮಹಿಳಾ ಕೃಷಿ ಕೂಲಿ ಕಾರ್ಮಿಕರಿಂದ ನಾಟಿ ಕಾರ್ಯ ನಡೆದಿದೆ. ತಾನು ಎರವಲು ಪಡೆದ ಗದ್ದೆಯಲ್ಲಿ ಎಂಒ 4 ಭತ್ತದ ತಳಿಯನ್ನು ಬಿತ್ತನೆ ಮಾಡಿ ಸ್ವತಃ ಭತ್ತದ ಸಸಿಯನ್ನು ಸಿದ್ಧಪಡಿಸಿಕೊಂಡು ಇದೀಗ 22 ದಿನಗಳ ನೇಜಿಯನ್ನು ನಾಟಿ ಮಾಡಲು ತೊಡಗಿಕೊಂಡಿರುವ ಯುವ ಕೃಷಿಕ ಪ್ರಶಾಂತ್ ಅವರು ಪಡುಬಿದ್ರಿಯ ಕಂಚಿನಡ್ಕ, ಎಲ್ಲೂರಿನ ಪೆಜತ್ತಕಟ್ಟೆ, ಬಂಡಸಾಲೆ, ಮುದರಂಗಡಿಯ ವಿದ್ಯಾನಗರ ಪ್ರದೇಶದ ಮಹಿಳೆಯರ ನಾಲ್ಕು ತಂಡಗಳನ್ನು ಬಳಸಿಕೊಂಡು ಒಟ್ಟು 26 ಕೃಷಿ ಕೂಲಿ ಮಹಿಳಾ ಕಾರ್ಮಿಕರು ನೇಜಿ ತೆಗೆದು ನಾಟಿ ಮಾಡುವ ಕೆಲಸ ಕಾರ್ಯದಲ್ಲಿ ಬಳಸಿಕೊಂಡಿರುತ್ತಾರೆ. ದಿನವಹಿ ಊಟ ಚಹಾ ತಿಂಡಿ ವಾಹನದ ಸೌಕರ್ಯದೊಂದಿಗೆ ರೂ. 400 ಕೂಲಿಯನ್ನು ಪ್ರತಿಯೋರ್ವ ಮಹಿಳಾ ಕೃಷಿ ಕಾರ್ಮಿಕರಿಗೆ ನೀಡುವ ಮೂಲಕ ಎರಡು ದಿನಗಳಲ್ಲಿ 4 ಎಕರೆ ಗದ್ದೆಯ ನಾಟಿಯನ್ನು ಪೂರೈಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಕೃಷಿ ಚಟುವಟಿಕೆಗೆ ನೆರೆ ಹೊರೆಯ ಹಿರಿಯ ನುರಿತ ಕೃಷಿಕರಾದ ಹರೀಶ್ ಪೂಜಾರಿ, ಶಂಕರ್ ಮತ್ತಿತರರ ಮಾರ್ಗದರ್ಶನದೊಂದಿಗೆ ಸಹೋದರರು ಸಹಿತ ಮನೆಮಂದಿಯೂ ಕೈ ಜೋಡಿಸುವ ಮೂಲಕ ಯಶಸ್ವಿ ಕೃಷಿಕನಾಗಿ ಬೆಳೆದು ಬಂದಿದ್ದಾರೆ. ಕಳೆದ 7 ವರ್ಷಗಳ ಹಿಂದೆ ಕೃಷಿಯ ಬೆನ್ನತ್ತಿದ್ದ ಈ ದಾರು ಶಿಲ್ಪಿ ಪ್ರಶಾಂತ್ ಆಚಾರ್ಯ ಅವರು ಈ ಬಾರಿ ಟ್ರಾಕ್ಟರ್ ಮೂಲಕ ಉಳುಮೆ ನಡೆಸಿದ್ದು, ಸುಮಾರು ರೂಪಾಯಿ ಐವತ್ತು ಸಾವಿರದಷ್ಟು ಖಚರ್ುವೆಚ್ಚ ಭರಿಸಿದ್ದು, ದುಪ್ಪಟ್ಟು ಲಾಭದ ನಿರೀಕ್ಷೆಯನ್ನು ಹೊಂದಿರುತ್ತಾರೆ. ಮಳೆಯನ್ನೇ ಅವಲಂಭಿಸಿ ಕೃಷಿ ಚಟುವಟಿಕೆ ನಡೆಸಲಾಗುತ್ತಿದ್ದು, ಮಳೆ ನೀರು ಕಡಿಮೆಯಾದಲ್ಲಿ ಸಮೀಪದಲ್ಲಿ ಹರಿಯುವ ನೀರಿನ ತೋಡಿನಿಂದ ನೀರನ್ನು ಬಳಸುವುದಾಗಿ ಮಾಹಿತಿಯನ್ನು ಹೊಸದಿಗಂತಕ್ಕೆ ನೀಡಿದ್ದು, ಕೃಷಿಗೆ ಪ್ರೋತ್ಸಾಹ ನೀಡುತ್ತಿರುವ ಗದ್ದೆಯ ಮಾಲಕರು, ಹಿರಿಯ ಕೃಷಿಕರು, ಮನೆಮಂದಿಯ ಸಹಕಾರವನ್ನು ಸ್ಮರಿಸುತ್ತಿದ್ದು, ಲಭ್ಯ ಅವಕಾಶದಡಿ ಮತ್ತಷ್ಟು ಹಡೀಲು ಭೂಮಿಯನ್ನು ಕೃಷಿಗೆ ಬಳಸಿಕೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
