Updated News From Kaup

ಕಾಪು : ಸೋಲಿನ ಪರಾಮರ್ಶೆ ನಡೆಸಿ, ಪಕ್ಷ ಬಲವರ್ಧನೆಗೆ ಪಣ ತೊಡೋಣ - ವಿನಯ್ ಕುಮಾರ್ ಸೊರಕೆ

Posted On: 27-05-2023 06:05PM

ಕಾಪು : ಸೋಲು- ಗೆಲುವು ಎಲ್ಲಾ ರಂಗಗಳಲ್ಲಿಯೂ ಸಹಜ, ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮೂಲಕ, ಸೋಲಿನ ಪರಾಮರ್ಶೆ ನಡೆಸಿ ಎಲ್ಲಿ ಎಡವಿದ್ದೇವೆಯೋ ಅಲ್ಲಿ ಎಚ್ಚೆತ್ತು ಕ್ರೀಡಾಸ್ಫೂರ್ತಿಯೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಸಂಘಟನಾತ್ಮಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷ ಬಲವರ್ಧನೆಗೆ ಪಣ ತೊಡೋಣ ಎಂದು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಶನಿವಾರ ಕಾಪು ಬ್ಲಾಕ್ ಕಾಂಗ್ರೆಸ್ ಕಛೇರಿ ರಾಜೀವ್ ಭವನದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣಾ ಕಾರ್ಯದಲ್ಲಿ ಅವಿರತ ಶ್ರಮಿಸಿದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೃತಜ್ಞತಾರ್ಪಣಾ ಸಭೆಯಲ್ಲಿ ಮಾತಾಡಿದರು.

ಕಟಪಾಡಿ : ಕನ್ನಡ ಚಲನಚಿತ್ರ - ಸ್ಕೂಲ್ ಲೀಡರ್ ಚಿತ್ರದ ಮುಹೂರ್ತ

Posted On: 27-05-2023 05:47PM

ಕಟಪಾಡಿ : ಸನ್ ಮ್ಯಾಟ್ರಿಕ್ಸ್ ಅರ್ಪಿಸುವ ಫಿಲಂ ವ್ಹೀಲ್ ಸ್ಟುಡಿಯೋಸ್ ಸಹಯೋಗದೊಂದಿಗೆ ಕನ್ನಡ ಚಲನಚಿತ್ರ ಸ್ಕೂಲ್ ಲೀಡರ್ ಚಿತ್ರದ ಮುಹೂರ್ತ ಶುಕ್ರವಾರ ಕಟಪಾಡಿ ಶ್ರೀ ವೆಂಕಟರಮಣ ದೇವಳದಲ್ಲಿ ಜರಗಿತು.

ಮೇ 29 : ಮಿನಿ ಉದ್ಯೋಗ ಮೇಳ

Posted On: 27-05-2023 07:30AM

ಉಡುಪಿ : ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಕಾರ್ಕಳ : ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್ ನಲ್ಲಿ ಕ್ರಿಯೇಟಿವ್‌ ಕಾಲೇಜಿಗೆ 2 ರ‍್ಯಾಂಕ್‌

Posted On: 27-05-2023 07:16AM

ಕಾರ್ಕಳ : ಮೇ 2023 ರಲ್ಲಿ ನಡೆದ ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ವರುಣ್‌ ಜಿ ನಾಯಕ್‌ ಆಲ್‌ ಇಂಡಿಯಾ ರ‍್ಯಾಂಕಿಂಗ್ ನಲ್ಲಿ 656 ನೇ ಸ್ಥಾನ ಗಳಿಸಿದ್ದಾರೆ ಹಾಗೂ ಸುಮುಖ್‌ ಶೆಟ್ಟಿ ಜೆ.ಎಸ್‌ ಬಿ.ಆರ್ಕ್‌ ನಲ್ಲಿ 609 ನೇ ರ‍್ಯಾಂಕ್‌ ಗಳಿಸಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ : ನೋಂದಣಿಗೆ ಸೂಚನೆ

Posted On: 25-05-2023 07:07AM

ಉಡುಪಿ : ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುವುದು.

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Posted On: 25-05-2023 07:04AM

ಉಡುಪಿ : ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.

ಕಾಪು : ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿದ ಯುವಕರು - ದೂರು ದಾಖಲು

Posted On: 24-05-2023 11:54AM

ಕಾಪು : ಇಲ್ಲಿನ ಠಾಣಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ವರು ಯುವಕರು ಮೋಜಿಗಾಗಿ ತಮ್ಮ ಕಾರುಗಳನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಾ ಸಾಗುತ್ತಿದ್ದುದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು. ಈ ಬಗ್ಗೆ ಪೋಲಿಸರು ಯುವಕರ ವಿರುದ್ಧ ದೂರು ದಾಖಲಿಸಿ ಮತ್ತು ಕಾರನ್ನು ವಶಕ್ಕೆ ಪಡೆದ ಘಟನೆ ಕಾಪುವಿನಲ್ಲಿ ನಡೆದಿದೆ.

ಉಡುಪಿ : ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆ ಸಹಾಯಕ ಆಯುಕ್ತರಾಗಿ ಪ್ರಶಾಂತ್ ಕುಮಾರ್ ಶೆಟ್ಟಿ ನೇಮಕ

Posted On: 23-05-2023 05:14PM

ಉಡುಪಿ : ಜಿಲ್ಲೆಯ ವಿವಿಧ ದೇವಳಗಳಲ್ಲಿ ಆಡಳಿತ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಕುಮಾರ್ ಶೆಟ್ಟಿ ಪ್ರಸ್ತುತ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ಉಡುಪಿ ಜಿಲ್ಲಾ ಸಹಾಯಕ ಆಯುಕ್ತರಾಗಿ ಮುಂಭಡ್ತಿ ಪಡೆದಿದ್ದಾರೆ.

ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ : ಯುಎಸ್‌ಎ ಘಟಕ ಉದ್ಘಾಟನೆ

Posted On: 22-05-2023 11:05AM

ಕಾಪು : ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಅಂತಾರಾಷ್ಟ್ರೀಯ ಘಟಕವನ್ನು ಯುಎಸ್‌ಎ ಸಮಿತಿಯ ಅಧ್ಯಕ್ಷ ಅಖಿಲ ಅಮೇರಿಕಾ ತುಳು ಅಸೋಸಿಯೇಶನ್‌ನ ಸಂಸ್ಥಾಪಕ ಭಾಸ್ಕರ ಶೇರಿಗಾರ್ ಬೋಸ್ಟನ್, ಶೈಲಶ್ರೀ ಶೇರಿಗಾರ್, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರು ಅಮೆರಿಕದ ಬೋಸ್ಟನ್‌ನಲ್ಲಿ ಮೇ 14 ರಂದು ಉದ್ಘಾಟಿಸಿದರು.

ಕಟಪಾಡಿಯ ಮಹಿಳೆಗೆ ಮುತ್ತೂಟ್ ಫ಼ೈನಾನ್ಸ್ ಸಂಸ್ಥೆಯ ಎಮ್‌ ಜಾರ್ಜ್ ಫೌಂಡೆಶನ್ ವತಿಯಿಂದ ವೈದ್ಯಕೀಯ ನೆರವು

Posted On: 21-05-2023 10:55AM

ಉಡುಪಿ : ನಗರದ ಮೈತ್ರಿ ಕಾಂಪ್ಲೆಕ್ಸ್ ‌ನಲ್ಲಿರುವ ಚಿನ್ನದ ಸಾಲದ ಕಂಪನಿಯಾದ ಮುತ್ತೂಟ್ ಫ಼ೈನಾನ್ಸ್ ಸಂಸ್ಥೆಯ ಎಮ್‌ ಜಾರ್ಜ್ ಫೌಂಡೆಶನ್ ವತಿಯಿಂದ ಮಂಜೂರಾದ ಮೆಡಿಕಲ್‌‌ ಚಾರಿಟಿಯ ಚೆಕ್ ನ್ನು ಸಕ್ಕರೆ ಖಾಯಿಲೆಯಿಂದ ಬಳಲುತ್ತಿರುವ ಕಟಪಾಡಿಯ ಲಕ್ಷ್ಮಿಬಾಯಿ ಚಂದ್ರಪ್ಪರವರಿಗೆ ಕಟಪಾಡಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರ ಆಚಾರ್ಯರವರು ಹಸ್ತಾರಿಸಿದರು.