Updated News From Kaup

ಉಡುಪಿ : ಜಿಲ್ಲೆಯಿಂದ ಕೆಎಸ್ಆರ್‌ಟಿಸಿ ಬಸ್ಸುಗಳ ಹೆಚ್ಚಿನ ವ್ಯವಸ್ಥೆ ಸರಕಾರ ಮಾಡಬೇಕು : ಯೋಗೀಶ್ ವಿ ಶೆಟ್ಟಿ

Thumbnail
Posted On: 20 Jul 2023, 04:45 PM

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್ಆರ್‌ಟಿಸಿ ಬಸ್ಸುಗಳು ಮಂಗಳೂರು ಮತ್ತು ಪುತ್ತೂರು ವಿಭಾಗಗಳಲ್ಲಿ ಮತ್ತು ಇತರೆಡೆ ಓಡಾಡುತ್ತಿದ್ದು, ಸಾರ್ವಜನಿಕರಿಗೆ ತುಂಬಾ ಉಪಯುಕ್ತವಾಗಿರುತ್ತದೆ. ಆದರೆ ಉಡುಪಿ ಜಿಲ್ಲೆಯಿಂದ ಕೆಲವೇ ಬಸ್ಸುಗಳು ಓಡಾಡುತ್ತಿದ್ದು ಉಡುಪಿ ಜಿಲ್ಲೆಯ ಪ್ರಯಾಣಿಕರು ಅವಕಾಶ ವಂಚಿತರಾಗಿದ್ದು, ಕೆ ಎಸ್ ಆರ್ ಟಿ ಸಿ ಬಸ್ ನಿಯಮಿತವಾಗಿ ಉಡುಪಿ ಮಂಗಳೂರು, ಮಂಗಳೂರು ಉಡುಪಿ ನೇರ ಲಿಮಿಟೆಡ್ ಸ್ಟಾಪುಗಳ ವ್ಯವಸ್ಥೆಯೊಂದಿಗೆ ಪ್ರಾರಂಭಿಸಿದರೆ ಮಹಿಳೆಯರಿಗೆ ಉಚಿತ ಪ್ರಯಾಣ ಹಾಗೂ ಸಾರ್ವಜನಿಕರಿಗೆ ಅತಿಯಾದ ಉಪಯೋಗವಾಗುತ್ತದೆ. ಆದ್ದರಿಂದ ಉಡುಪಿ ಮಂಗಳೂರು, ವ್ಯವಸ್ಥೆಯನ್ನು ಉಡುಪಿ ವಲಯದಿಂದ ಕೆ ಎಸ್ ಆರ್ ಟಿ ಸಿ ನೇರ ಬಸ್ಸುಗಳ ಸಂಚಾರಗಳನ್ನು ಮತ್ತು ಇತರಡೆಗೆ ಸಂಚರಿಸುವ ವ್ಯವಸ್ಥೆ ಮಾಡುವರೆ ಸರಕಾರವನ್ನು ಒತ್ತಾಯಿಸುತ್ತಿದ್ದೇನೆ ಎಂದು ಉಡುಪಿ ಜಿಲ್ಲೆ ಜನತಾದಳ (ಜಾತ್ಯತೀತ) ಅಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

ಉಡುಪಿ : ಟ್ರಿನಿಟಿ ಸೆಂಟ್ರಲ್ ಸ್ಕೂಲ್ - ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ ಶ್ರೀನಿವಾಸ್ ಜಿ ಆಯ್ಕೆ

Thumbnail
Posted On: 20 Jul 2023, 04:41 PM

ಉಡುಪಿ : ಟ್ರಿನಿಟಿ ಸೆಂಟ್ರಲ್ ಸ್ಕೂಲ್ ಇದರ ನೂತನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ ಶ್ರೀನಿವಾಸ್ ಜಿ ಯವರು ಶಾಲೆಯಲ್ಲಿ ನಡೆದ ಮಹಾಸಭೆಯಲ್ಲಿ ನಡೆದ ಚುನಾವಣೆಯಲ್ಲಿ ಬಹುಮತದಿಂದ ಚುನಾಯಿತರಾಗಿದ್ದಾರೆ. ಕಾಯ೯ದಶಿ೯ಯಾಗಿ ಅಶ್ವಿತ ಪುಟಾ೯ಡೊ, ಜೊತೆ ಕಾಯ೯ದಶಿ೯ಯಾಗಿ ದೀಪ್ತಿ ಸುವಣ೯, ಕೋಶಾಧಿಕಾರಿಯಾಗಿ ಸುಧೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಡೊಮಿನಿಕ್ ಸುನಿಲ್ ಲೋಬೋ ನಡೆಸಿಕೊಟ್ಟರು. ಈ ಸಂದಭ೯ ಉಪ ಮುಖ್ಯ ಶಿಕ್ಷಕ ರವಿರಾಜೇಶ್ ಸೆರಾವೋ, ಅಕಾಡೆಮಿಕ್ ಕೋ. ಅಡಿ೯ನೇಟರ್ ಮ್ಯಾಗಿ ಲೂವೀಸ್ ಸಂಘದ ಪೂವಾ೯ಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಕಾರ್ಕಳ : ಕ್ರಿಯೇಟಿವ್‌ ಕಾಲೇಜಿನ ಪ್ರಣವ್‌ ಪಿ ಸಂಜಿ ನಾಟಾ ಪರೀಕ್ಷೆಯಲ್ಲಿ ರಾಜ್ಯಕ್ಕೆ 28 ನೇ ರ‍್ಯಾಂಕ್‌

Thumbnail
Posted On: 19 Jul 2023, 07:51 PM

ಕಾರ್ಕಳ : ದೇಶಾದಾದ್ಯಂತ ಆರ್ಕಿಟೆಕ್ಚರ್ ಕೋರ್ಸ್‌ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸಲಾದ ನಾಟಾ (NATA) ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಯಾದ ಪ್ರಣವ್‌ ಪಿ ಸಂಜಿ ಇವರಿಗೆ ರಾಜ್ಯ ಮಟ್ಟದ 28 ನೇ ರ‍್ಯಾಂಕ್‌, ದೀಕ್ಷಾ ಪಾಂಡು 42 ನೇ ರ‍್ಯಾಂಕ್‌, ವರುಣ್‌ ಜಿ ನಾಯಕ್‌ 67 ನೇ ರ‍್ಯಾಂಕ್‌ ಲಭಿಸಿದೆ. ಉಳಿದಂತೆ ಸಹನಾ ಎನ್‌ ಸಿ 104 ನೇ ರ‍್ಯಾಂಕ್‌, ನಾಗಮನಸ್ವಿನಿ ಕೆ 134 ನೇ ರ‍್ಯಾಂಕ್‌, ಧರಿನಾಥ್‌ ಬಸವರಾಜ್‌ ಕುಂಬಾರ್‌ 138 ನೇ ರ‍್ಯಾಂಕ್‌, ದೀಪಕ್‌ ಕೆ ಎಸ್‌ 171 ನೇ ರ‍್ಯಾಂಕ್‌, ಸಂತೃಪ್ತಿ 209 ನೇ ರ‍್ಯಾಂಕ್‌, ಶ್ರವಣ್‌ ಎಸ್‌ 212 ನೇ ರ‍್ಯಾಂಕ್‌, ಅನ್ವಿತಾ ಕೆ 227 ನೇ ರ‍್ಯಾಂಕ್‌, ಹೇಮಂತ್‌ ಗೌಡ ಎಸ್‌ ಆರ್‌ 229 ನೇ ರ‍್ಯಾಂಕ್‌, ಸ್ಪರ್ಶ ಪಾರ್ಶ್ವನಾಥ್‌ 235 ನೇ ರ‍್ಯಾಂಕ್‌, ಅನುಷಾ ಐನಾಪುರ್‌ 254 ನೇ ರ‍್ಯಾಂಕ್‌, ಕುಶಾಲ್‌ ಸೂರ್ಯ ಹೆಚ್‌ ಎಂ 259 ನೇ ರ‍್ಯಾಂಕ್‌, ಸ್ವಸ್ತಿಕ್‌ ಕೃಷ್ಣಮೂರ್ತಿ ಭಟ್‌ 273 ನೇ ರ‍್ಯಾಂಕ್‌, ಪೂಜಾ ಟಿ ಎಸ್‌ 274 ನೇ ರ‍್ಯಾಂಕ್‌, ಕಶಿಶ್‌ ಎಸ್‌ ಪಿ 292 ನೇ ರ‍್ಯಾಂಕ್‌, ಗುರುಲಿಂಗಯ್ಯ ಸುರೇಶ್‌ ಕಂಬಲಿಮತ್‌ 300 ನೇ ರ‍್ಯಾಂಕ್‌, ಚಿರಾಗ್‌ ವಾಸು ಶೆಟ್ಟಿ 332 ನೇ ರ‍್ಯಾಂಕ್‌, ಸಂಜಯ್‌ ಎಸ್‌ 335 ನೇ ರ‍್ಯಾಂಕ್‌, ಮುಕ್ತಿ ಜಿ 376 ನೇ ರ‍್ಯಾಂಕ್‌, ಬೆನೇಶ್‌ ಗೌಡ ಕೆ ಎ 391 ನೇ ರ‍್ಯಾಂಕ್‌, ತನುಶ್ರೀ ಜೆ ವಿ 434 ನೇ ರ‍್ಯಾಂಕ್‌, ಪಂಕಜ್‌ ಜೈ ಪ್ರಸಾದ್‌ 447 ನೇ ರ‍್ಯಾಂಕ್‌, ರಕ್ಷಿತಾ ಹೆಚ್‌ ಎಸ್‌ 457 ನೇ ರ‍್ಯಾಂಕ್‌, ಹರಿಪ್ರಸಾದ್‌ ಡಿ ಎಂ 470 ನೇ ರ‍್ಯಾಂಕ್‌, ದೀಕ್ಷಾ ಹೆಚ್ ಬಿ 480 ನೇ ರ‍್ಯಾಂಕ್‌, ಪನ್ವಿತ್‌ ಜಿ ಎನ್‌ 549 ನೇ ರ‍್ಯಾಂಕ್‌, ನೇಹಾ ಮಯ್ಯಾ 553 ನೇ ರ‍್ಯಾಂಕ್‌, ಚಿನ್ಮಯ್‌ ಸುರೇಶ್‌ ಶೆಟ್ಟಿ 585 ನೇ ರ‍್ಯಾಂಕ್‌ ಮತ್ತು ಯಶವಂತ್‌ ಆರ್‌ ಗೌಡ 696 ನೇ ರ‍್ಯಾಂಕ್‌ ಗಳಿಸಿರುತ್ತಾರೆ. NATA ಪರೀಕ್ಷೆಗೆ ಹಾಜರಾದ ಎಲ್ಲಾ 31 ವಿದ್ಯಾರ್ಥಿಗಳೂ ತೇರ್ಗಡೆಯಾಗುವುದರ ಜೊತೆಗೆ ರಾಜ್ಯ ಮಟ್ಟದ 700 ರ ಒಳಗಿನ ರ‍್ಯಾಂಕ್‌ ಗಳಿಸಿರುವುದು ವಿಶೇಷ. ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಸಾಧಕ ವಿದ್ಯಾರ್ಥಿಗಳನ್ನು ಕ್ರಿಯೇಟಿವ್‌ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಹಾಗೂ NATA ಸಂಯೋಜಕರಾದ ರಕ್ಷಿತ್‌, ಸುಮಂತ್‌ ದಾಮ್ಲೆ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಜುಲೈ 25 : ಕಾಪುವಿನ ಮೂರು ಮಾರಿಗುಡಿಗಳಲ್ಲಿ ಕಾಲಾವಧಿ ಆಟಿ ಮಾರಿಪೂಜೆ

Thumbnail
Posted On: 19 Jul 2023, 07:40 PM

ಕಾಪು : 2023ರ ಜುಲೈ 25ರ ಮಂಗಳವಾರ ಮತ್ತು ಜುಲೈ 25ರ ಬುಧವಾರ ಕಾಪುವಿನ ಹಳೆ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯಲ್ಲಿ ಕಾಲಾವಧಿ ಆಟಿ ಮಾರಿಪೂಜೆಯು ಯಥಾಪ್ರಕಾರ ನಡೆಯಲಿದೆ ಎಂದು ತಿಳಿಸಿದ್ದಾರೆ.

ಜುಲೈ 28 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ - ತಾಮ್ರದ ಶೀಟ್ ಗಳ ಬಹಿರಂಗ ಏಲಂ

Thumbnail
Posted On: 19 Jul 2023, 07:37 PM

ಕಾಪು : ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಧೀನದ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶ್ರೀ ದೇವಳದ ಹಳೆಯ ಗರ್ಭಗುಡಿಯ ತಾಮ್ರದ ಶೀಟ್ ಗಳನ್ನು ಬಹಿರಂಗ ಏಲಂ ಜುಲೈ 28, ಶುಕ್ರವಾರದಂದು ಬೆಳಿಗ್ಗೆ 11ಗಂಟೆಗೆ ಸರಿಯಾಗಿ ಶ್ರೀ ದೇವಳದಲ್ಲಿ ನಡೆಯಲಿದೆ. ಆಸಕ್ತರು ಈ ಏಲಂನಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ಶ್ರೀ ದೇವಳದ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದರು.

ಎಲ್ಲೂರು : ಮೂವತ್ತೈದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಂದು ಲಕ್ಷದ ಹತ್ತುಸಾವಿರ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

Thumbnail
Posted On: 19 Jul 2023, 07:27 PM

ಎಲ್ಲೂರು : ಅಭಿವೃದ್ಧಿಯ ಸಾಧನೆಯಲ್ಲಿ ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದುದನ್ನು ಆಧಾರವಾಗಿಟ್ಟುಕೊಂಡು ಯಥಾಸಾಧ್ಯ ಪ್ರವೃತ್ತರಾಗಿ ಮಹತ್ತನ್ನು ಸಾಧಿಸಿರಿ ಎಂದು ಬೆಂಗಳೂರಿನ 'ಟೆಕ್ ಸೆಲ್ 'ಅಟೋಮೇಶನ್ ಸಂಸ್ಥೆಯ ವ್ಯವಸ್ಥಾಪಕ‌ ನಿರ್ದೇಶಕ ಆರ್.ಆರ್.ಹರೀಶ ರಾವ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಸ್ಥಳೀಯ ಶ್ರೀ ಪಂಚಾಕ್ಷರಿ ಯಕ್ಷಗಾನ ಮಂಡಳಿಯು ಬೆಂಗಳೂರಿನ "ಟೆಕ್ ಸೆಲ್" ಅಟೋಮೇಶನ್ ಪ್ರೈ.ಲಿ.ಇವರ ಸಹಯೋಗದಲ್ಲಿ ಎಲ್ಲೂರು ಪರಿಸರದ ಹತ್ತು ಕನ್ನಡ ಮಾಧ್ಯಮ ಶಾಲೆಗಳ ಏಳನೇ ತರಗತಿ,ಹತ್ತನೇ ತರಗತಿ ಹಾಗೂ ಪದವಿ ಪೂರ್ವ ತರಗತಿಗಳ ಮೂವತ್ತೈದು ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಒಂದು ಲಕ್ಷದ ಹತ್ತುಸಾವಿರ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಿ ಮಾತನಾಡುತ್ತಿದ್ದರು. ಬೆಳಪು ಕಾನ ಬ್ರಹ್ಮಲಿಂಗೇಶ್ವರ ದೇವಸ್ಥಾನದ‌ಲ್ಲಿ‌, ಅವರ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೂಪಾ ಹರೀಶ ರಾವ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಪಂಚಾಕ್ಷರೀ ಯಕ್ಷಗಾನ ಮಂಡಳಿಯ ಅಧ್ಯಕ್ಷ ಕೆ.ಶ್ರೀನಿವಾಸ ಉಪಾಧ್ಯಾಯ ವಹಿಸಿದ್ದರು.ಕುಂಜೂರು ದುರ್ಗಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಮನೆ ದೇವರಾಜ ರಾವ್,ಕಾನ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಪಟೇಲ್ ಪ್ರಕಾಶ ರಾವ್,ಬೆಳಪು ವಲಯ ಬ್ರಾಹ್ಮಣ ಸಂಘದ ಅಧ್ಯಕ್ಷ ನಡಿಮನೆ ವಾದಿರಾಜ ರಾವ್ ಅವರು ಭಾಗವಹಿಸಿದ್ದರು. ರಾಘವೇಂದ್ರ ರಾವ್ ಎಲ್ಲೂರು ಸ್ವಾಗತಿಸಿದರು. ಕೆ.ಎಲ್.ಕುಂಡಂತಾಯ ಪ್ರಸ್ತಾವಿಸಿದರು. ಎಲ್ಲೂರು ಗಣೇಶ ರಾವ್ ಕಾರ್ಯಕ್ರಮ ನಿರ್ವಹಿಸಿದರು. ಅನಂತ ಪದ್ಮನಾಭ ಜೆನ್ನಿ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲೂರು ಶ್ರೀ ವಿಶ್ವೇಶ್ವರ ದೇವಳದ ಅರ್ಚಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವೇ.ಮೂ .ಗೋಪಾಲ ಭಟ್, ವೇ.ಮೂ.ಶ್ರೀ ಕೃಷ್ಣಮೂರ್ತಿ ಭಟ್, ಹಾಗೂ ವೇ.ಮೂ.ಸುಬ್ರಾಯ ಭಟ್ ಅವರನ್ನು ಹಾಗೂ ಶ್ರೀ ಬಡಿಕೇರಿ ಹರಿದಾಸ ರಾವ್ ಅವರನ್ನು ಅವರವರ ಮನೆಗೆ ಹೋಗಿ ಸಮ್ಮಾನಿಸಲಾಯಿತು.

ಕಾರ್ಕಳ : ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ಆಯ್ಕೆ

Thumbnail
Posted On: 19 Jul 2023, 07:17 PM

ಕಾರ್ಕಳ : ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಬೈಲೂರು ಹರೀಶ್ ಅಚಾರ್ಯ, ಕೋಶಾಧಿಕಾರಿಯಾಗಿ ಕೆ.ಎಂ ಖಲೀಲ್ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ  ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ  ಪದಾಧಿಕಾರಿಗಳ ಪುನರ್ ರಚನೆ ಪ್ರಕ್ರಿಯೆ ತಾಲೂಕು ಪ್ರವಾಸಿ ಕೇಂದ್ರದಲ್ಲಿ ಬುಧವಾರ ಜರುಗಿತು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ  ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ರಜತ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾಧಿಕಾರಿ ಉಮೇಶ್  ಮಾರ್ಪಳ್ಳಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಉಪಾಧ್ಯಕ್ಷರಾಗಿ ಹರೀಶ್ ಸಚ್ಚರಿಪೇಟೆ, ಜತೆ ಕಾರ್ಯದರ್ಶಿಯಾಗಿ ವಾಸುದೇವ ಭಟ್ , ಕ್ರೀಡಾ ಕಾರ್ಯದರ್ಶಿ ರಾಂ ಅಜೆಕಾರು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಹರಿಪ್ರಸಾದ್ ನಂದಳಿಕೆ   ಆಯ್ಕೆಗೊಂಡರು. ಜಿಲ್ಲಾ ಉಪಾಧ್ಯಕ್ಷ  ಆರ್. ಬಿ ಜಗದೀಶ್, ಜಿಲ್ಲಾ ಸಮಿತಿ ಪ್ರತಿನಿಧಿ ಉದಯ್ ಮುಂಡ್ಕೂರ್ ಉಪಸ್ಥಿತರಿದ್ದರು.

ಜುಲೈ 22 : ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ಶ್ರೀ ಪುರುಷೋತ್ತಮ ಯಾಗ

Thumbnail
Posted On: 19 Jul 2023, 06:20 PM

ಕಾಪು : ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಕಟಪಾಡಿ ಪಡುಕುತ್ಯಾರು ಇಲ್ಲಿನ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಶೋಭಕೃತ್ ನಾಮ ಸಂವತ್ಸರದ 19ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ-2023 ಜುಲೈ 3ರಿಂದ ಸೆಪ್ಟಂಬರ್ 29 ತನಕ ಶ್ರೀ ಸರಸ್ವತೀ ಸತ್ಸಂಗ ಮಂದಿರ, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ಇಲ್ಲಿ ಜರಗುತ್ತಿದೆ. ಈ ನಿಮಿತ್ತ ವಿಶ್ವ ಬ್ರಾಹ್ಮಣ ಪ್ರತಿಷ್ಠಾನ ಹುಬ್ಬಳ್ಳಿ ಇವರ ವತಿಯಿಂದ ಆನೆಗುಂದಿ ಮಹಾಸಂಸ್ಥಾನದ ಆಸ್ಥಾನ ವಿದ್ವಾಂಸರಾದ ವೇ.ಬ್ರ. ಶ್ರೀ ಶಂಕರಾಚಾರ್ಯಗುರುನಾಥ ಆಚಾರ್ಯ ಪಂಡಿತ್ ಕಡ್ಲಾಸ್ಕರ್ ಅವರ ನೇತೃತ್ವದೊಂದಿಗೆ, ಪಡುಕುತ್ಯಾರಿನಲ್ಲಿ ಸ್ವಸ್ತಿ ವಿಜಯಾಭ್ಯುದಯ ಶಾಲಿವಾಹನಶಕ 1946, ಜುಲೈ 22, ಶನಿವಾರದಂದು ಪೂರ್ವಾಹ್ನ ಘಂಟೆ 7 ರಿಂದ ಶೊಭಕೃತ್ ಸಂವತ್ಸರದ ಅಧಿಕ ಮಾಸದ ಅಧಿಕ ಶ್ರಾವಣ ಶುಕ್ಲ ಪಕ್ಷ ಚತುರ್ಥಿ, ಶನಿವಾರದಂದು ಶ್ರೀ ಪುರುಷೋತ್ತಮ ಯಾಗವನ್ನು ನಡೆಸಲು ತೀರ್ಮಾನಿಸಲಾಗಿದೆ. ಪುರುಷೋತ್ತಮ ಮಾಸದ ನಿಮಿತ್ತವಾಗಿ ಮಾಡುವ ವ್ರತನಿಯಮ, ಪೂಜಾನುಷ್ಠಾನ,ಯಾಗ ಧರ್ಮಗಳಿಗೆ ಪುರುಷೋತ್ತಮ ಸ್ವರೂಪಿಯಾಗಿರುವ ಯತಿಗಳ ಸಾನಿಧ್ಯದಲ್ಲಿ ಸಂಪನ್ನಗೊಳ್ಳುವ ಸೇವೆಗಳಿಗೆ ವಿಶೇಷ ಮತ್ತು ಅಧಿಕ ಫಲಗಳು ಇವೆ. ಪುರುಷೋತ್ತಮ ಯಾಗವು 108 ದಂಪತಿ ಪೂಜೆ, ವಾಯನ ದಾನ, ಅಪೂಪಾದಿ ದಾನ ಇವುಗಳೊಂದಿಗೆ ಕಾರ್ಯಕ್ರಮಗಳು ಮಹಾ ಸನ್ನಿಧಾನಂಗಳವರ ದಿವ್ಯ ಸನ್ನಿಧಿಯಲ್ಲಿ ಸಂಪನ್ನಗೊಳ್ಳಲಿದೆ. ಗೌರವಾಧ್ಯಕ್ಷರಾದ ಪಿ.ವಿ ಗಂಗಾಧರ ಆಚಾರ್ಯ, ಉಡುಪಿ, ಅಧ್ಯಕ್ಷರಾದ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್, ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ಪದಾಧಿಕಾರಿಗಳು ಹಾಗೂ ಸದಸ್ಯರು ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಹಾಗೂ ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನ(ರಿ) ಕಟಪಾಡಿ ಪಡುಕುತ್ಯಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಮಹತ್ಮಾ ಗಾಂಧಿ ಅಂತರಾಷ್ಟ್ರೀಯ ಪುರಸ್ಕಾರಕ್ಕೆ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆ

Thumbnail
Posted On: 19 Jul 2023, 05:59 PM

ಉಡುಪಿ :- ಡಬ್ಲ್ಯು.ಎ.ಸಿ ಬುಕ್ ಆಫ್ ರೆಕಾಡ್೯ ಸಂಸ್ಥೆಯ ಮೂಲಕ ನೀಡಲಾಗುವ ಮಹತ್ಮಾ ಗಾಂಧಿ ಅಂತರಾಷ್ಟ್ರೀಯ ಪುರಸ್ಕಾರ ಕ್ಕೆ ರಾಘವೇಂದ್ರ ಪ್ರಭು, ಕವಾ೯ಲುರವರು ಆಯ್ಕೆಯಾಗಿದ್ದಾರೆ. ಸಾಮಾಜಿಕ ಕಾಯ೯ ಮತ್ತು ರಕ್ತದಾನ ವಿಭಾಗದಲ್ಲಿ ಈ ಪುರಸ್ಕಾರ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ವಿವಿಧ ರೀತಿಯ ಸಾಮಾಜಿಕ ಚಟುವಟಿಕೆಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದು, ರಕ್ತದಾನ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿದ್ದು, ರೆಡ್ ಕ್ರಾಸ್ ರಾಜ್ಯ ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ.

ಕಾಪು : ಎಲ್ಲೂರಿನ ಶ್ರೀ ಪಾಂಡುರಂಗ ಭಜನಾ ಮಂಡಳಿಯಲ್ಲಿ ವಾರ್ಷಿಕ ಭಜನಾ ಮಂಗಳೋತ್ಸವ

Thumbnail
Posted On: 19 Jul 2023, 05:52 PM

ಕಾಪು : ಎಲ್ಲೂರು ಗ್ರಾಮದ ಶ್ರೀ ಪಾಂಡುರಂಗ ಭಜನಾ ಮಂಡಳಿಯಲ್ಲಿ ವಾರ್ಷಿಕ ಭಜನಾ ಮಂಗಳೋತ್ಸವ ವಿಜೃಂಭಣೆಯಿ‌ಂದ ನೆರವೇರಿತು. ಶನಿವಾರ ಮುಂಜಾನೆ ಸೂರ್ಯೋದಯದ ಕಾಲ 6 ಗಂಟೆಗೆ ದೀಪ ಪ್ರಜ್ವಲನೆಯ ಮೂಲಕ ಆರಂಭಗೊಂಡ ಭಜನೆ ಮರುದಿನ ಭಾನುವಾರ 6:10 ನಿಮಿಷಕ್ಕೆ ಸಂಪನ್ನಗೊಂಡಿತು. ಭಜನಾ ಸೇವೆಯಲ್ಲಿ ಜಿಲ್ಲೆಯ 22 ಭಜನಾ ತಂಡಗಳು ಪಾಲ್ಗೊಂಡಿದ್ದವು. ಜಾನಪದ ವಿದ್ವಾಂಸ ಕೆ ಎಲ್ ಕುಂಡಂತಾಯರು ,ಮಂಡಳಿಯ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಕೆ.ಲಕ್ಷ್ಮೀನಾರಾಯಣ ರಾವ್ ದಂಪತಿಗಳು, ನಿವೃತ್ತ ಪ್ರಾಚಾರ್ಯ ನಾಗರತ್ನ ರಾವ್ ದಂಪತಿಗಳು, ಕಮಲಾವತಿ ಉಡುಪಿ, ಸತೀಶ್ ಕುತ್ಯಾರ್, ಪ್ರೀತಿ ಸಂತೋಷ್ ಭಂಡಾರಿ ಕಟಪಾಡಿ, ಅರುಣ್ ಶೆಟ್ಟಿ ಕುತ್ಯಾರು, ಶ್ರೀನಿವಾಸ್ ಭಾಗವತರು, ಅರ್ಚಕ ಗುರುರಾಜ್ ರಾವ್, ವಿಎ ಸುನೀಲ್ ದೇವಾಡಿಗ ಮತ್ತಿತರ ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಹೋರಾತ್ರಿ ನಡೆದ ಭಜನೆ, ಅನ್ನಸಂತರ್ಪಣೆ, ಮಾತೃ ಮಂಡಳಿಯ ಸುಮಾರು ನೂರಕ್ಕೂ ಹೆಚ್ಚು ಸದಸ್ಯರ ಕುಣಿತ ಭಜನೆಯೊಂದಿಗೆ ಸಮಾಪನೆಗೊಂಡು ತರುವಾಯ ಓಕುಳಿ ಸೇವೆ , ಅವಭೃತ ಸ್ನಾನ ಮಹಾಪೂಜೆಯೊಂದಿಗೆ ಸಂಪನ್ನಗೊಂಡಿತು.