Updated News From Kaup
ಜೂನ್ 30 (ನಾಳೆ) : ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಹಿರಿಯಡಕ ಕಚೇರಿ ಉದ್ಘಾಟನೆ
Posted On: 29 Jun 2023, 07:24 PM
ಕಾಪು : ತಾಲೂಕಿನ ಹಿರಿಯಡಕ ಬೊಮ್ಮರಬೆಟ್ಟು ಗ್ರಾಮಪಂಚಾಯತ್ ಬಳಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ನೂತನ ಶಾಸಕರ ಕಚೇರಿಯ ಉದ್ಘಾಟನಾ ಸಮಾರಂಭ ಬೆಳಿಗ್ಗೆ 10 ಗಂಟೆಗೆ ಜರಗಲಿದೆ. ಇದರ ಜೊತೆಗೆ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಟಪಾಡಿ : ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
Posted On: 29 Jun 2023, 06:57 PM
ಕಟಪಾಡಿ : ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಕೊಡಮಾಡಿದ ಉಚಿತ ಪುಸ್ತಕವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿತರಿಸಿದರು. ಈ ಸಂದರ್ಭ ಶಾಸಕರು ಉಚಿತ ಪುಸ್ತಕ ವಿತರಣೆ ಮಾಡಿದ ಸಮಾನ ಮನಸ್ಕ ತಂಡಕ್ಕೆ ಮತ್ತು ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಶಿಧರ ಪುರೋಹಿತ, ಸದಾಶಿವ ಆಚಾರ್ಯ, ಸಹನಾ ದೇವರಾಜ ಆಚಾರ್ಯ, ಅಚ್ಚುತ ಆಚಾರ್ಯ ಕಾಪು, ನಿವೃತ್ತ ತಹಶೀಲ್ದಾರರಾದ ಕೆ. ಮುರಳಿಧರ ಆಚಾರ್ಯ, ನಿವೃತ್ತ ಯೋಧ ವಾದಿರಾಜ ಆಚಾರ್ಯ, ಕಾಪು ಕಾಳಿಕಾಂಬ ದೇವಸ್ಥಾನ ಮೊಕ್ತೇಸರರಾದ ಶೇಖರ ಆಚಾರ್ಯ, ಗಣೇಶ್ ಆಚಾರ್ಯ ಉಚ್ಚಿಲ, ಭಾಸ್ಕರ ಆಚಾರ್ಯ, ಚಂದ್ರಶೇಖರ ಆಚಾರ್ಯ, ದಿವಾಕರ ಆಚಾರ್ಯ, ಕಾರ್ತಿಕ್ ಆಚಾರ್ಯ, ಬಿ.ಎ ಆಚಾರ್ಯ ಮಣಿಪಾಲ, ರವಿ ಪುರೋಹಿತ ಉಪಸ್ಥಿತರಿದ್ದರು.
ಕಾಪು : ಮಳೆಯಿಂದ ಗೋಶಾಲೆಗೆ ಹಾನಿ, ತಾತ್ಕಾಲಿಕ ಶೆಡ್ ನಿರ್ಮಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು
Posted On: 29 Jun 2023, 04:23 PM
ಕಾಪು : ಇಲ್ಲಿನ ಮಟ್ಟಾರು ಕಡಂಬುನಲ್ಲಿರುವ ಧರ್ಮ ಫೌಂಡೇಶನ್ ಗಿರೀಶ್ ಜಿ. ಏನ್ ರವರ ಗೋಶಾಲೆಯ ಶೆಡ್ ಮಳೆಗೆ ಹಾನಿಯಾಗಿದ್ದು, ಇಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಟ್ಟಾರು ಘಟಕದ ಕಾರ್ಯಕರ್ತರು ತಾತ್ಕಾಲಿಕ ಶೆಡ್ ನಿರ್ಮಿಸಿದರು.
ಉಡುಪಿ : ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ, ಬಿರುಗಾಳಿ ಸಾಧ್ಯತೆ ; ಆರೆಂಜ್ ಅಲರ್ಟ್
Posted On: 29 Jun 2023, 02:50 PM
ಉಡುಪಿ : ಮುಂದಿನ 24 ಗಂಟೆಗಳಲ್ಲಿ ಉಡುಪಿ ,ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಶಿವಮೊಗ್ಗ ಚಿಕ್ಕಮಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸಲಿದ್ದು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಉಡುಪಿ : ಜಿಲ್ಲೆಯಾದ್ಯಂತ ಬಕ್ರೀದ್ ಸಂಭ್ರಮಾಚರಣೆ
Posted On: 29 Jun 2023, 11:20 AM
ಉಡುಪಿ : ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್ ಹಬ್ಬ)ವನ್ನು ಇಂದು ಸಂಭ್ರಮದಿಂದ ಆಚರಿಸಿದರು. ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಮಾಜ್ ಬಳಿಕ ಮುಸ್ಲಿಮ್ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಮಸೀದಿಗಳಲ್ಲಿ ಧರ್ಮಗುರುಗಳು ವಿಶೇಷ ಈದ್ ನಮಾಝ್ ನೆರವೇರಿಸಿ ಈದ್ ಸಂದೇಶ ನೀಡಿದರು.
ಜುಲೈ 1 : ಉಡುಪಿಯಲ್ಲಿ ಪತ್ರಿಕಾ ದಿನಾಚರಣೆ
Posted On: 28 Jun 2023, 10:38 PM
ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಉಡುಪಿ ಐಎಂಎ ಭವನದಲ್ಲಿ ಜುಲೈ 1ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಉದ್ಘಾಟಿಸಲಿರುವರು. ಸುದ್ದಿಯಾನ ಡಿಜಿಟಲ್ ಮೀಡಿಯಾದ ಪ್ರಧಾನ ಸಂಪಾದಕ ಹರಿಪ್ರಸಾದ್ ಎ. ವಿಶೇಷ ಉಪನ್ಯಾಸ ನೀಡಲಿರುವರು. ಅಧ್ಯಕ್ಷತೆ ಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಕಾರ್ಕಳದ ಹಿರಿಯ ಪತ್ರಕರ್ತ ರಾಧಾಕೃಷ್ಣ ತೋಡಿಕಾನ ಅವರಿಗೆ ಪತ್ರಿಕಾ ದಿನಾಚರಣೆಯ ಗೌರವ ನೀಡಲಾಗುವುದು. ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಅರುಣ್ ಕುಮಾರ್ ಶಿರೂರು, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ ಗೌರವ ಉಪಸ್ಥಿತರಿರುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕಾಪು : ತಂತಿಯನ್ನೇ ಶೃಂಗರಿಸಿದ ಬಳ್ಳಿ - ಮೆಸ್ಕಾಂ ಎಲ್ಲಿ ? ಸಾರ್ವಜನಿಕರ ಪ್ರಶ್ನೆ
Posted On: 28 Jun 2023, 10:28 PM
ಕಾಪು : ಇಲ್ಲಿನ ಪುರಸಭಾ ವ್ಯಾಪ್ತಿಯ ಮಲ್ಲಾರು ಗ್ರಾಮದ, ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ರಸ್ತೆ ಬದಿ ಇರುವ ವಿದ್ಯುದೀಪ ಕಂಬದಿಂದ ಮನೆಗೆ ಸಂಪರ್ಕದ ಸರ್ವಿಸ್ ವಯರ್ ನಲ್ಲಿ ಬಳ್ಳಿಗಳು ಪಸರಿಸಿ ಅವಘಡಕ್ಕೆ ಎಡೆ ಮಾಡಿ ಕೊಟ್ಟಂತಿದೆ. ಈ ಬಗ್ಗೆ ಸಂಬಂಧಪಟ್ಟ ಕಾಪು ಮೆಸ್ಕಾಂನವರು ಕೂಡಲೇ ತೆರೆವುಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರೋಟರಿ ಕ್ಲಬ್ ಶಿರ್ವದ ನೂತನ ಅಧ್ಯಕ್ಷರಾಗಿ ಫಾರೂಕ್ ಚಂದ್ರನಗರ ಆಯ್ಕೆ
Posted On: 28 Jun 2023, 12:44 PM
ಶಿರ್ವ : ರೋಟರಿ ಕ್ಲಬ್ ಶಿರ್ವ ಇದರ 2023-2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ. ಫಾರೂಕ್ ಚಂದ್ರನಗರ ಸಮಾಜ ಸೇವೆಯಲ್ಲಿ ಹತ್ತಾರು ಸಾಮಾಜಿಕ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ತನ್ನದೆ ಆದ ಛಾಪು ಮೂಡಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ರಾಜ್ಯ ಮಟ್ಟದ ಹಾಗೂ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ಪಡುಬಿದ್ರಿ : ಸಿ ಎ ಸೊಸೈಟಿ - ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿಯೋಗ ಭೇಟಿ
Posted On: 27 Jun 2023, 07:38 PM
ಪಡುಬಿದ್ರಿ :ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಿಟ್ಟಕೊಪ್ಪಲು ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ನಿಯೋಗ ಇಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಭೇಟಿ ನೀಡಿದರು. ಈ ಸಂದರ್ಭ ಮಾತನಾಡಿದ ಮಳವಳ್ಳಿ ತಾಲೂಕಿನ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಚ್ ಬಿ ಬಸವೇಶ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಕಾರಿ ವ್ಯವಸಾಯಿಕ ಸೊಸೈಟಿಗಳು ಉತ್ತಮ ಠೇವಣಾತಿಯ ಹೆಚ್ಚಳದಿಂದ ಲಾಭಾಂಶದಿಂದ ಕೂಡಿವೆ. ಈಗಾಗಲೇ ಬ್ರಹ್ಮಾವರ ಸೇರಿದಂತೆ ವಿವಿಧ ಸಹಕಾರಿ ವ್ಯವಸಾಯಿಕ ಸೊಸೈಟಿಗಳಿಗೆ ಭೇಟಿ ನೀಡಲಾಗಿದೆ. ನಮ್ಮ ಭಾಗದಲ್ಲಿ ಬೆಳೆ ಸಾಲ ಮಾತ್ರವಿದ್ದು ಠೇವಣಾತಿ ಇದ್ದರೂ ಜನ ಹಣ ಇಡುತ್ತಿಲ್ಲ. ಈ ಬಗ್ಗೆ ನಮ್ಮಲ್ಲಿಯೂ ಕರಾವಳಿಯ ಭಾಗದಂತೆ ಜನರು ಸಹಕಾರಿ ಸೊಸೈಟಿಗಳೆಡೆಗೆ ಆಸಕ್ತಿಯುತರಾಗಿ ಮಾಡುವ ಗುರಿಯಿದೆ. ಈ ನಿಟ್ಟಿನಲ್ಲಿ ಈ ಭಾಗದ ಆಯ್ದ ಸಹಕಾರಿ ಸಂಘಗಳಿಗೆ ಭೇಟಿಯಿತ್ತಿದ್ದೇವೆ ಎಂದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್ ಮಾತನಾಡಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಿಟ್ಟಕೊಪ್ಪಲು ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ತಂಡ ಬಂದಿದ್ದು ಇಲ್ಲಿಯ ಕಾರ್ಯ ವೈಖರಿಯನ್ನು ಪರಿಶೀಲಿಸಿದ್ದಾರೆ. ಮಳವಳ್ಳಿಯಲ್ಲೂ ಇದೇ ರೀತಿ ಸಹಕಾರಿ ಸಂಘವನ್ನು ಸುಧಾರಣೆಗೊಳಿಸುವುದಾಗಿ ಎಂದು ಸಹಕಾರ ಸಂಘದ ಅಧ್ಯಕ್ಷ ಎಚ್ ಬಿ ಬಸವೇಶ್ ಹೇಳಿದ್ದಾರೆ ಎಂದರು. ಈ ಸಂದರ್ಭ ಮಳವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 11ಮಂದಿ ನಿರ್ದೇಶಕರು, ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಘದ ಉಪಾಧ್ಯಕ್ಷ ಗುರುರಾಜ ಪೂಜಾರಿ, ಹಿರಿಯ ನಿರ್ದೇಶಕ ವೈ. ಜಿ. ರಸೂಲ್, ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೀಪಕ್ ಸಾಲ್ಯಾನ್ ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಪಡುಬಿದ್ರಿ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ. ಎಚ್. ಸ್ವಾಗತಿಸಿ, ವಂದಿಸಿದರು.
ಶಿರ್ವ ವಿಷ್ಣು ಕಲಾವೃಂದ ನೂತನ ಅಧ್ಯಕ್ಷರಾಗಿ ವಿಶ್ವಾಸ್ ವೈ ಶೆಟ್ಟಿಗಾರ್ ಆಯ್ಕೆ
Posted On: 27 Jun 2023, 06:15 PM
ಶಿರ್ವ : ವಿಷ್ಣು ಕಲಾ ವೃಂದ,ಶಿರ್ವ ಇದರ ನೂತನ ಅಧ್ಯಕ್ಷರಾಗಿ ವಿಶ್ವಾಸ್ ವೈ ಶೆಟ್ಟಿಗಾರ್ ಆಯ್ಕೆಯಾಗಿರುತ್ತಾರೆ.
