Updated News From Kaup
ಕಾಪು ವಿದ್ಯಾನಿಕೇತನ ಸಮೂಹ ಸಂಸ್ಥೆ : ನೂರು ಶೇಕಡಾ ಫಲಿತಾಂಶ - ವಿದ್ಯಾರ್ಥಿಗಳಿಗೆ ಅಭಿನಂದನೆ, ಬೀಳ್ಕೊಡುಗೆ ಸಮಾರಂಭ
Posted On: 19-05-2023 06:51PM
ಕಾಪು : ಆತ್ಮವಿಶ್ವಾಸವೇ ಜೀವನಕ್ಕೆ ಮಾರ್ಗದರ್ಶನ. ಇದೊಂದು ಕೌಶಲ್ಯ. ಆಭರಣದಂತೆ ಆತ್ಮವಿಶ್ವಾಸ ನಮ್ಮನ್ನು ಅಲಂಕರಿಸುವಂತಿರಬೇಕು. ವಿದ್ಯಾರ್ಥಿ ದಿಸೆಯಲ್ಲಿಯೇ ಕಠಿಣ ಪರಿಶ್ರಮದ ಮೂಲಕ ಸಾಧನೆಯ ದಾರಿಯನ್ನು ಕಂಡುಕೊಳ್ಳಬೇಕು ಎಂದು ಜೀವನ ಕೌಶಲ್ಯ ತರಬೇತುದಾರರಾದ ಸುಪರ್ಣ ಶೆಟ್ಟಿ ಹೇಳಿದರು. ಅವರು ಕಾಪು ವಿದ್ಯಾನಿಕೇತನ ಸಮೂಹ ಸಂಸ್ಥೆಯು ಐ ಸಿ ಎಸ್ ಇ ಬೋಡ್೯ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶ ಪಡೆಯಲು ಕಾರಣೀಭೂತರಾದ ವಿದ್ಯಾರ್ಥಿಗಳನ್ನು ಮತ್ತು ಉತ್ತಮ ಅಂಕ ಗಳಿಸಿ ಸಾಧನೆಗೈದ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನೆ ಮತ್ತು ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸೂಕ್ತ ಅವಕಾಶವನ್ನು ಬಳಸಿ ಮುಂದುವರಿಯಬೇಕು. ಹೆತ್ತವರು ಮತ್ತು ಮಕ್ಕಳ ಅನ್ಯೋನ್ಯತೆಯ ಸಂಬಂಧಗಳ ಜೊತೆಗೆ ಪಿತೃ ಋಣ, ಲೋಕ ಋಣದ ಅರಿವಿರಬೇಕು ಎಂದರು.
ಕಾಪು : ಬಿರುವೆರ್ ಕಾಪು ಸೇವಾ ಸಮಿತಿಯ ವತಿಯಿಂದ ಬ್ರಹ್ಮಶ್ರೀ ಮನೆ ಹಸ್ತಾಂತರ
Posted On: 18-05-2023 12:06PM
ಕಾಪು : ಇಲ್ಲಿನ ಬಿರುವೆರ್ ಕಾಪು ಸೇವಾ ಸಮಿತಿಯ ನೇತೃತ್ವದಲ್ಲಿ ಪುನರ್ ನಿರ್ಮಿಸಲಾದ ಮಲ್ಲಾರು ಗರಡಿ ಬಳಿಯ ಕೃಷ್ಣಪ್ಪ ಪೂಜಾರಿ ಮತ್ತು ಇಂದಿರಾ ಪೂಜಾರ್ತಿ ದಂಪತಿಯ ಬ್ರಹ್ಮಶ್ರೀ ಮನೆಯನ್ನು ಬುಧವಾರ ಉದ್ಘಾಟಿಸಿ, ಹಸ್ತಾಂತರಿಸಲಾಯಿತು.
ಉಡುಪಿ : ಮೇ 19ರಂದು ಮಿನಿ ಉದ್ಯೋಗ ಮೇಳ
Posted On: 17-05-2023 10:34AM
ಉಡುಪಿ : ಅದ್ವಿತ್ ಐ ಟೆಕ್ ಪ್ರೈ.ಲಿ, ಆಭರಣ ಮೋಟಾರ್ಸ್, ಸುಷ್ಮಾ ಆಟೋಮೊಬೈಲ್ಸ್, ಕಾಂಚನ್ ಅಥರ್ ಎಲೆಕ್ಟ್ರಿಕಲ್ ಹಾಗೂ ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ ಕಂಪನಿಗಳ ವತಿಯಿಂದ ಮೇ 19 ರಂದು ಬೆಳಗ್ಗೆ 10.30 ಕ್ಕೆ ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ, ಸಂಪರ್ಕ ಜೆರಾಕ್ಸ್ ಹತ್ತಿರ, 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಕಾಪು : ಪಡುಕುತ್ಯಾರು ಆನೆಗುಂದಿಶ್ರೀಗಳ ಪಟ್ಟಾಭಿಷೇಕ ವರ್ಧಂತಿ ಸಂಪನ್ನ ; ಪ್ರಶಸ್ತಿ ಪ್ರಧಾನ ; ಶೈಕ್ಷಣಿಕ ಸಾಧಕರಿಗೆ ಅಭಿನಂದನೆ
Posted On: 16-05-2023 02:17PM
ಕಾಪು : ನವ ಮಾದ್ಯಮ ಕಾಲದಲ್ಲಿ ಸಂಸ್ಕಾರಯುತ ಜೀವನ ನಡೆಸುವುದನ್ನು ಎಳೆಯ ಮಕ್ಕಳಿಗೆ ಕಲಿಸುವ ಪ್ರಯತ್ನ ನಡೆಯಬೇಕು. ಇದಕ್ಕಾಗಿ ಹೆತ್ತವರು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ನುಡಿದರು. ಅವರು ಪಡುಕುತ್ಯಾರು ಮಹಾಸಂಸ್ಥಾನದ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ತಮ್ಮ ಪಟ್ಟಾಭಿಷೇಕ ಮಹೋತ್ಸವದ 13ನೇ ವರ್ಷದ ವರ್ಧಂತ್ಯುತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ವಿವಿಧ ವಿಭಾಗಗಳಲ್ಲಿ ಸಾಧಕರನ್ನು ಮಹಾಸಂಸ್ಥಾನದಿಂದ ಗುರುತಿಸುವ ಪ್ರಯತ್ನ ಮಾಡಲಾಗಿದೆ. ತಮ್ಮ ಕುಲಕಸುಬು ಮಾಡಿಕೊಂಡು ತೆರೆಮರೆಯಲ್ಲಿರುವ ಸಾಧಕರನ್ನೂ ಈ ಬಾರಿ ಗುರುತಿಸಿದ್ದೇವೆ. ಎಂದು ಅವರು ಸೇವಾ ವಲಯದಲ್ಲಿ ಮತ್ತು ಸಮಾಜಕ್ಕೆ ಸಲ್ಲಿಸಿದ ಸೇವೆಯ ಬಗ್ಗೆ ಮಾತನಾಡಿದರು.
ಪಡುಬಿದ್ರಿ : ಚಾಲಕನ ನಿಯಂತ್ರಣ ತಪ್ಪಿದ ಬಸ್ ; ಆಟೋ ರಿಕ್ಷಾ ಜಖಂ
Posted On: 16-05-2023 11:24AM
ಪಡುಬಿದ್ರಿ : ಮಂಗಳೂರಿನಿಂದ ಕಾರ್ಕಳ ಹೋಗುವ ವೇಗದೂತ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾರ್ಕಳ ಜಂಕ್ಷನ್ ನಲ್ಲಿದ್ದ ಪೋಲೀಸ್ ಬೂತ್ ಗೆ ಡಿಕ್ಕಿ ಹೊಡೆದು ಅದನ್ನು ಸುಮಾರು ನೂರು ಅಡಿ ಎಳೆದೊಯ್ದು ರಿಕ್ಷಾ ಸ್ಟ್ಯಾಂಡ್ ಗೆ ನುಗ್ಗಿದ ಬಸ್ಸು ಒಂದು ಆಟೋ ರಿಕ್ಷಾ ವನ್ನು ಸಂಪೂರ್ಣ ಜಖಂ ಗೊಳಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮೇ 16 - 17 : ಮಲ್ಲಾರು ರಾಣೆಕೇರಿಯ ಕೋಟೆ ಶ್ರೀ ಗಡು ಮಾರಿಯಮ್ಮ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕಾಲಾವಧಿ ರಾಶಿ ಮಾರಿಪೂಜೆ
Posted On: 15-05-2023 10:33AM
ಕಾಪು : ಇಲ್ಲಿನ ಮಲ್ಲಾರು ರಾಣೆಕೇರಿಯ ಕೋಟೆ ಶ್ರೀ ಗಡು ಮಾರಿಯಮ್ಮ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕಾಲಾವಧಿ ರಾಶಿ ಮಾರಿಪೂಜೆಯು ಮೇ 16, ಮಂಗಳವಾರ ಹಾಗೂ ಮೇ 17, ಬುಧವಾರದಂದು ಜರಗಲಿದೆ.
ಪಕ್ಷದ ಕಾರ್ಯಕರ್ತರ ಸಂಘಟಿತ ಹೋರಾಟದಿಂದ ಗೆಲುವು : ಗುರ್ಮೆ ಸುರೇಶ್ ಶೆಟ್ಟಿ
Posted On: 14-05-2023 12:29PM
ಕಾಪು : ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಹಿರಿಯರು ಮಾಡಿಕೊಟ್ಟ ಅವಕಾಶ, ಪಕ್ಷದ ಕಾರ್ಯಕರ್ತರ ಸಂಘಟಿತ ಹೋರಾಟ, ನಾಯಕರ ಸಂಕಲ್ಪದಿಂದ ಗೆಲುವಾಗಿದೆ ಎಂದು ನೂತನ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿಯವರು ಕಾಪುವಿನಲ್ಲಿ ಹೇಳಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕಾಪುವಿನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಕಾಪು : ವಿಜಯಿಯಾದ ಗುರ್ಮೆ ಸುರೇಶ್ ಶೆಟ್ಟಿಗೆ ಭವ್ಯ ಸ್ವಾಗತ
Posted On: 13-05-2023 08:50PM
ಕಾಪು : ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯನ್ನು 13,004 ಮತಗಳ ಅಂತರದಲ್ಲಿ ಸೋಲಿಸಿ ವಿಜಯಿಯಾದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಇಂದು ಸಂಜೆ ಕಾಪು ಬಿಜೆಪಿ ಕಚೇರಿಗೆ ಆಗಮಿಸಿದರು.
ಕಾಪು : ಕ್ಷೇತ್ರದಲ್ಲಿ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ಬ್ರೇಕ್ ; ಗೆಲುವು ಕಂಡ ಬಿಜೆಪಿ ; ಕಾರ್ಯಕರ್ತರಲ್ಲಿ ಸಂಭ್ರಮ
Posted On: 13-05-2023 07:10PM
ಕಾಪು : ಯಾವುದೇ ಶುಭ ಸಮಾರಂಭಗಳಲ್ಲೂ ಚರ್ಚಿತವಾದ ವಿಷಯ ಅವರು ಗೆಲ್ಲುತ್ತಾರೆ ಇವರು ಗೆಲ್ಲುತ್ತಾರೆ ಎಂದು, ಜಾತಿ ಲೆಕ್ಕಾಚಾರ, ಚುನಾವಣಾ ಪೂರ್ವ, ಚುನಾವಣೋತ್ತರ ಸಮೀಕ್ಷೆಗಳು, ಪಕ್ಷಗಳ ಕಾರ್ಯಕರ್ತರು ನಮ್ಮದೇ ಪಕ್ಷದ ಗೆಲುವು ಎಂಬ ಅಭಿಲಾಷೆಯಲ್ಲಿ ಬಿರುಬೇಸಿಗೆಯನ್ನು ಲೆಕ್ಕಿಸದೆ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಬೇಕೆಂಬ ತವಕ, ತುಡಿತದಲ್ಲಿದ್ದರು. ಅಂತೂ ಮೇ 13ರಂದು ಫಲಿತಾಂಶ ಬಂದಿದೆ.
ಕಾಪು : ಗುರ್ಮೆ ಸುರೇಶ್ ಶೆಟ್ಟಿ ಭರ್ಜರಿ ಗೆಲುವು
Posted On: 13-05-2023 01:47PM
ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
