Updated News From Kaup
ಶಿರ್ವ : ಸಂತ ಮೇರಿ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ
Posted On: 27 Jun 2023, 04:48 PM
ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಅಂತಾರಾಷ್ಟ್ರೀಯ ಮಾದಕ ವ್ಯಸನ- ಅಕ್ರಮ ಸಾಗಾಟ ವಿರೋಧಿ ದಿನಾಚರಣೆಯನ್ನು ಏರ್ಪಡಿಸಲಾಯಿತು ಇಂದಿನ ಜಗತ್ತಿನಲ್ಲಿ ಯುವಕರು ಅಪಾಯಕಾರಿ ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ ಮತ್ತು ಇದು ಜೀವಮಾನದ ಶಿಕ್ಷೆಗೆ ಕಾರಣವಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಪ್ರತಿಜ್ಞಾವಿಧಿ ಬೋಧಿಸಿದ ಅವರು, ಸಮಾಜದಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯುವಕರು ಪಾಲ್ಗೊಳ್ಳುವಂತೆ ಸಲಹೆ ನೀಡಿದರು. ಇಂತಹ ಕಾರ್ಯಕ್ರಮ ಹಮ್ಮಿಕೊಂಡ ಕಾಲೇಜಿನ ಎನ್.ಸಿ.ಸಿ ಘಟಕವನ್ನು ಪ್ರಶಂಸಿದರು ಮತ್ತು ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಪ್ರಕಾಶ್, ಲ್ಲ್ಯಾನ್ಸ್ ಕಾರ್ಪೊರಲ್ ಅನೀಶ್ ಭಟ್, ಶೆಟ್ಟಿಗಾರ್ ಹೇಮಾಶ್ರೀ ಸುದರ್ಶನ್ ಮತ್ತು ಕೆಡೆಟ್ಗಳು ಉಪಸ್ಥಿತರಿದ್ದರು. ಕ್ಯಾಡೆಟ್ಗಳಾದ ಅನುಪ್ ನಾಯಕ ಹಾಗೂ ವಿಶಾಲ್ ಟೆರೆನ್ಸ್ ವಾಜ್ ಸಹಕರಿಸಿದರು. ಕೆಡೆಟ್ ಆದಿತ್ಯ ಶೆಟ್ಟಿಗಾರ್ ಸ್ವಾಗತಿಸಿ , ಕೆಡೆಟ್ ಗೌತಮಿ ಕರ್ಕೇರ ವಂದಿಸಿದರು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾಪು ತಾಲೂಕು ಪ್ರೆಸ್ ಕ್ಲಬ್ : ಪದಾಧಿಕಾರಿಗಳ ಆಯ್ಕೆ
Posted On: 27 Jun 2023, 01:23 PM
ಕಾಪು : ಇಲ್ಲಿನ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ 2023 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹರೀಶ್ ಹೆಜಮಾಡಿ, ಕಾರ್ಯದರ್ಶಿಯಾಗಿ ಸಂತೋಷ್ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಜಯ ಆಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಕರುಣಾಕರ ನಾಯಕ್, ಕೋಶಾಧಿಕಾರಿಯಾಗಿ ಹೇಮನಾಥ ಪಡುಬಿದ್ರಿ, ಕ್ರೀಡಾ ಕಾರ್ಯದರ್ಶಿಯಾಗಿ ರಾಕೇಶ್ ಕುಂಜೂರು ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯನ್ನು ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ,ಕಾರ್ಯದರ್ಶಿ ಪ್ರಮೋದ್ ಸುವರ್ಣ, ಕಾರ್ಯಕಾರಿಣಿ ಸಮಿತಿ ಸದಸ್ಯ ವಿಜಯ ಆಚಾರ್ಯ ನಡೆಸಿದರು.
ಉದ್ಯಾವರ : ಪ್ರತಿಭಾ ಪುರಸ್ಕಾರ ಮತ್ತು ಶ್ರೀಸಾಮಾನ್ಯರ ದಿನಾಚರಣೆ
Posted On: 27 Jun 2023, 11:18 AM
ಉದ್ಯಾವರ : ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ವ್ಯಾಪ್ತಿಗೆ ಒಳಪಟ್ಟ ಕಥೋಲಿಕ್ ಸಭಾ, ಉದ್ಯಾವರೈಟ್ಸ್ ದುಬೈ ಮತ್ತು ಶ್ರೀಸಾಮಾನ್ಯರ ಆಯೋಗದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಶ್ರೀಸಾಮಾನ್ಯರ ದಿನಾಚರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಸ್ಟ್ಯಾನಿ ಬಿ ಲೋಬೊ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿಭಾಗದಲ್ಲಿ ಅತ್ಯಧಿಕ ಅಂಕ ಪಡೆದ ಸಾಧಕರನ್ನು ಗುರುತಿಸಿ, ಗೌರವ ಧನದೊಂದಿಗೆ ಅಭಿನಂದಿಸಲಾಯಿತು. ಉದ್ಯಾವರೈಟ್ಸ್ ದುಬೈ ಕೊಡಮಾಡಿದ ಪ್ರತಿಭಾ ಪುರಸ್ಕಾರವನ್ನು ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ರಿಯಾ ಮೈರಾ, ಹರ್ಷಿತ್ ಫೆರ್ನಾಡೀಸ್, ಸೋನಿ ಪ್ರಕಾಶ್, ಶೋನ್ ಚಾಲ್ಸ್, ಶೋನ್ ರೆಕ್ಸ್, ನಿಷೇಲ್ ಮನಿಷ, ಪಿಯುಸಿ ವಿಭಾಗದಲ್ಲಿ ಶಯಾನ್ ಎಲ್ರಾಯ್, ಜೆಸ್ಸಿಕಾ ಪ್ರಿನ್ಸಿಟಾ, ಜಿಶೆಲ್ ಪ್ರಿನ್ಸಿಯ, ಆರೋನ್ ಪಿರೇರಾ, ಪವಿತ್ರ ಪ್ರೀತಿ ಮತ್ತು ಸoತ ಫ್ರಾನ್ಸಿಸ್ ಝೆವಿಯರ್ ಆಂಗ್ಲ ಮಾಧ್ಯಮ ಶಾಲೆಯ ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಆಶಿಶ್ ಶಣೈ ಮತ್ತು ಕನ್ನಡ ಮಾಧ್ಯಮದಲ್ಲಿ ಪ್ರಥಮ ಸ್ಥಾನಗಳಿಸಿದ ಸೋನಿ ಪ್ರಕಾಶ್ ರವರಿಗೆ ಹಸ್ತಾಂತರಿಸಲಾಯಿತು. ಉಡುಪಿ ಧರ್ಮ ಪ್ರಾಂತ್ಯ ಜೂನ್ 25ರಂದು ಶ್ರೀಸಾಮಾನ್ಯರ ದಿನವನ್ನಾಗಿ ಘೋಷಣೆ ಮಾಡಿದ್ದು, ಉದ್ಯಾವರದಲ್ಲಿಯೂ ಶ್ರೀಸಾಮಾನ್ಯರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸರಕಾರಿ ಹುದ್ದೆಯಲ್ಲಿ ಮತ್ತು ಸಮಾಜದಲ್ಲಿ ವಿವಿಧ ಸೇವೆಯನ್ನು ಸಲ್ಲಿಸುತ್ತಿರುವ ಹಲವು ಗಣ್ಯರನ್ನು ಗುರುತಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಕಥೋಲಿಕ್ ಸಭಾ ಕೇಂದ್ರೀಯ ಮಾಜಿ ಅಧ್ಯಕ್ಷ ವಾಲ್ಟರ್ ಸಿರಿಲ್ ಪಿಂಟೋ, ಉದ್ಯಾವರೈಟ್ಸ್, ದುಬೈ ಇದರ ಸ್ಥಾಪಕ ಅಧ್ಯಕ್ಷ ಜೆರಾಲ್ಡ್ ಪಿರೇರಾ, ಪಾಲನ ಮಂಡಳಿಯ ಉಪಾಧ್ಯಕ್ಷ ಲಾರೆನ್ಸ್ ಡೇಸ, ಕಾರ್ಯದರ್ಶಿ ಜೋನ್ ಎಮ್ ಡಿಸೋಜಾ, ಪ್ರಮುಖರಾದ ಅಲ್ವಿನ್ ಅಂದ್ರಾದೆ, ಮಾರ್ಗರೇಟ್ ಮೆಂಡೊನ್ಸಾ ಮತ್ತು ರೋಬರ್ಟ್ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಥೋಲಿಕ್ ಸಭಾ ಉದ್ಯಾವರ ಘಟಕದ ಅಧ್ಯಕ್ಷೆ ಐರಿನ್ ಪಿರೇರಾ ಸ್ವಾಗತಿಸಿದರೆ, ಕಾರ್ಯದರ್ಶಿ ರಾಬರ್ಟ್ ಡಿಸೋಜ ಧನ್ಯವಾದ ಸಮರ್ಪಿಸಿದರು. ಮಾಜಿ ಅಧ್ಯಕ್ಷ ರೋನಾಲ್ಡ್ ಅಲ್ಮೆಡ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ : ಯಕ್ಷಗಾನ ಗುರು, ಭಾಗವತ ತೋನ್ಸೆ ಜಯಂತ ಕುಮಾರ್ ವಿಧಿವಶ
Posted On: 26 Jun 2023, 12:00 PM
ಉಡುಪಿ : ಯಕ್ಷ ಗುರು, ಸವ್ಯಸಾಚಿ, ಯಕ್ಷ ವಾರಿಧಿ ಬಿರುದಾಂಕಿತ ತೋನ್ಸೆ ಜಯಂತ ಕುಮಾರ್ ಇಂದು ಮುಂಜಾನೆ ವಿಧಿವಶರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. 1946ರಲ್ಲಿ ತೋನ್ಸೆಯವರು ಚೇತನ ಪ್ರೌಢಶಾಲೆ, ಹಂಗಾರಕಟ್ಟೆಯಲ್ಲಿ ಕಛೇರಿ ಅಧೀಕ್ಷಕರಾಗಿ ನಿವೃತ್ತರಾಗಿದ್ದರು. ಆದರೆ ಯಕ್ಷಗಾನದಲ್ಲಿ ಸದಾ ಪ್ರವೃತ್ತರು. ಸಂಚಾರಿ ಯಕ್ಷಗಾನ ಭಂಡಾರವೆಂದೇ ಖ್ಯಾತರಾಗಿದ್ದ ತೋನ್ಸೆ ಕಾಂತಪ್ಪ ಮಾಸ್ತರರ ಸುಪುತ್ರರಾಗಿದ್ದ ಇವರಿಗೆ ತಂದೆಯೇ ಯಕ್ಷಗಾನ ಗುರು, ವೇಷದಾರಿಯಾಗಿ, ಯಕ್ಷಗಾನ ಗುರುಗಳಾಗಿ ಈ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಉಡುಪಿ ಶಾಸಕರ ನೇತೃತ್ವದ ಯಕ್ಷಶಿಕ್ಷಣ ಟಸ್ಟ್ ನಲ್ಲಿ ಆರಂಭದಿಂದಲೂ ಗುರುಗಳಾಗಿ ಅದರ ಯಶಸ್ಸಿಗೆ ಕಾರಣರಾಗಿದ್ದರು. ಅವರು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀರಾಮ ವಿಠಲ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಗೆ ಭಾಜನರಾಗಿದರು. ಶ್ರೀ ಭಗವತಿ ತೀಯಾ ಸಮಾಜ ನೇಜಾರು ಇದರ ಮಾಜಿ ಅಧ್ಯಕ್ಷರಾಗಿದ್ದರು. ಅವರು ಪತ್ನಿ ಮೂವರು ಪುತ್ರರನ್ನು ಅಗಲಿದ್ದಾರೆ.
ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಸಭೆ
Posted On: 25 Jun 2023, 03:43 PM
ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಬಡಾಗ್ರಾಮ ಉಚ್ಚಿಲ ಇದರ ಜೀರ್ಣೋದ್ಧಾರ ಸಮಿತಿ ಸಭೆಯು ಇಂದು ನಡೆಯಿತು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಹಿರಿಯರಾದ ಅಶೋಕ್ ರಾಜ್ ಎರ್ಮಾಳು ಬೀಡು, ವೆಂಕಟೇಶ ನಾವಡ, ಸತೀಶ್ ಶೆಟ್ಟಿ ಅನ್ನಾವರ, ಗಂಗಾಧರ ಸುವರ್ಣ, ಸುಧೀರ್ ಹೆಗ್ಡೆ, ಚಂದ್ರಶೇಖರ, ಪ್ರಧಾನ ಅರ್ಚಕರಾದ ಗೋವಿಂದ ರಾಜ ಭಟ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕಟಪಾಡಿ : ತ್ರಿಶಾ ಕ್ಲಾಸಸ್ - ಸಿ .ಎ. ಫೌಂಡೇಷನ್ ವಿದ್ಯಾರ್ಥಿಗಳ ಮಾಹಿತಿ ಕಾರ್ಯಗಾರ
Posted On: 25 Jun 2023, 02:58 PM
ಕಟಪಾಡಿ : ಸಿ.ಎ ಸಿ.ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ.ಎ. ಫೌಂಡೇಷನ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಇಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ ಎ ಗೋಪಾಲ ಕೃಷ್ಣಭಟ್ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿ. ಎ. ತರಬೇತಿ ಪಡೆಯುವ ವಿದ್ಯಾರ್ಥಿಗಳನ್ನು ಕುರಿತು ಸರಿಯಾದ ಯೋಜನೆ ಹಾಗೂ ಛಲ ಬಿಡದ ಪ್ರಯತ್ನದಿಂದ ಮಾತ್ರ ಸಾಧನೆ ಸಾಧ್ಯ. ಸಫಲತೆಯ ಶಿಖರ ಏರಲು ಕಷ್ಟ ಪಟ್ಟು ಕೆಲಸ ಮಾಡುವುದೊಂದೇ ಹಾದಿ ಎಂದು ಹೇಳಿ, ಸಿ. ಎ. ಕೋರ್ಸಿನ ಬಗ್ಗೆ, ‘ಐ.ಸಿ.ಎ.ಐ’ನ ಹೊಸತಾಗಿ ತಿದ್ದುಪಡಿಯಾದ ನಿಯಮಗಳ ಬಗ್ಗೆ ಮತ್ತು ಪರೀಕ್ಷಾಪೂರ್ವ ತಯಾರಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಿದ್ಧಾಂತ್ ಫೌಂಡೇಶನ್ ನ ಖಜಾಂಚಿಯಾದ ನಮಿತಾ ಜಿ.ಭಟ್, ತ್ರಿಶಾ ವಿದ್ಯಾ ಕಾಲೇಜಿನ ಸಿಬ್ಬಂದಿ ವರ್ಗದವರು, ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗೌರಿ ಕಾಮತ್ ನಿರೂಪಿಸಿ ವಂದಿಸಿದರು.
ಕಾಪು ಕ್ಷೇತ್ರದ ಪ್ರೌಢಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುವ ಬಗ್ಗೆ ಶಾಸಕರಿಂದ ಸಭೆ
Posted On: 24 Jun 2023, 09:59 PM
ಕಾಪು : ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಖಾಸಗಿ ಪ್ರೌಢಶಾಲಾ ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ಕರಾವಳಿಯ ಗಂಡು ಕಲೆ ಎಂದು ಪ್ರಸಿದ್ಧಿ ಪಡೆದ ಯಕ್ಷಗಾನ ಕಲೆಯನ್ನು ಕಲಿಸುವ ನಿಟ್ಟಿನಲ್ಲಿ ಶನಿವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಶಾಸಕರ ಕಚೇರಿಯಲ್ಲಿ ಯಕ್ಷಗಾನ ಕಲಾರಂಗ (ರಿ.) ಇದರ ಪದಾಧಿಕಾರಿಗಳೊಂದಿಗೆ ಮತ್ತು ಶಾಲಾ ಮುಖ್ಯೋಪಾಧ್ಯಾಯರೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭ ಮಾತನಾಡಿದ ಅವರು ಮಕ್ಕಳಿಗೆ ಯಕ್ಷಗಾನ ಕಲಿಸುವುದರಿಂದ ಮಕ್ಕಳ ನೈತಿಕ ಮೌಲ್ಯ ಹಾಗೂ ಜ್ಞಾನ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿದೆ ಎಂದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗ (ರಿ.) ಅಧ್ಯಕ್ಷರಾದ ಎಂ. ಗಂಗಾಧರ್ ರಾವ್, ಉಪಾಧ್ಯಕ್ಷರಾದ ವಿ.ಜಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಜೊತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗ್ಡೆ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಉಪಸ್ಥಿತರಿದ್ದರು.
ಉಡುಪಿ : ಡಾII ದೇವದಾಸ್ ಕಾಮತ್ ಹಿರಿಯಡ್ಕರವರಿಗೆ ಗೌರವಾಪ೯ಣೆ
Posted On: 24 Jun 2023, 09:55 PM
ಉಡುಪಿ : ಭಾರತೀಯ ವೈದ್ಯ ಸಂಘ ಕನಾ೯ಟಕ ಇದರ ವತಿಯಿಂದ ವೈದ್ಯರ ದಿನದ ಪ್ರಶಸ್ತಿಗೆ ಆಯ್ಕೆಯಾಗಿರುವ ಡಾII ದೇವದಾಸ ಕಾಮತ್ ಡಾII ಸುಧಾ ಕಾಮತ್ ದಂಪತಿ ಹಿರಿಯಡ್ಕ ಇವರನ್ನು ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ವತಿಯಿಂದ ಶನಿವಾರ ಕಾಮತ್ ಕ್ಲಿನಿಕ್ ನಲ್ಲಿ ಗೌರವಿಸಲಾಯಿತು. ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ಗೌರವಾದ್ಯಕ್ಷ ವಿಶ್ವನಾಥ್ ಶೆಣೈ ಗೌರವಿಸಿ ಶುಭ ಹಾರೈಸಿದರು. ಈ ಸಂದಭ೯ ಕ .ಸಾ.ಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ರಾಘವೇಂದ್ರ ಪ್ರಭು, ಕವಾ೯ಲು ಮತ್ತು ವೈದ್ಯರ ಕುಟುಂಬಸ್ಥರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಕಳ : ಕ್ರಿಯೇಟಿವ್ ಕಾಲೇಜಿನ ಉಪನ್ಯಾಸಕ ಬಿ ರಾಘವೇಂದ್ರ ರಾವ್ ಅವರ 56ನೇ ಕೃತಿ ಹಾವಿನ ಮನೆ ಬಿಡುಗಡೆ
Posted On: 24 Jun 2023, 07:41 PM
ಕಾರ್ಕಳ : ರಾಘವೇಂದ್ರ ರಾವ್ ಅವರು ಈಗಾಗಲೇ 55 ಕೃತಿಗಳನ್ನು ಪೂರೈಸಿದ್ದು, 56ನೇ ಕೃತಿ “ಹಾವಿನ ಮನೆ” ಪತ್ತೆದಾರಿ ಕಾದಂಬರಿ ಇತ್ತೀಚೆಗೆ ಬೆಂಗಳೂರಿನ ರಮಣಶ್ರೀ ಹೋಟೇಲಿನಲ್ಲಿ ವೀರಲೋಕ ಪ್ರಕಾಶನದ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶಿವಾಜಿ ಸುರತ್ಕಲ್ ಚಲನಚಿತ್ರ ಖ್ಯಾತಿಯ ನಿರ್ದೇಶಕರಾದ ಆಕಾಶ್ ಶ್ರೀವತ್ಸ ಅವರು ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯಕ್ಕೆ ಪತ್ತೆದಾರಿ ಸಾಹಿತ್ಯದ ಅಗತ್ಯವಿದೆ. ಅದಕ್ಕೆ ಬಹುದೊಡ್ಡ ಓದುಗ ವರ್ಗವಿದೆ. ಈ ನಿಟ್ಟಿನಲ್ಲಿ ರಾಘವೇಂದ್ರ ರಾವ್ (ಅನು ಬೆಳ್ಳೆ) ಅವರ ʼಹಾವಿನ ಮನೆʼ ಮಹತ್ವದ ಕೃತಿಯಾಗಬಲ್ಲದು ಎಂದು ಅಭಿಪ್ರಾಯಪಟ್ಟರು. ಆಧುನಿಕ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡು, ಯುವ ಲೇಖಕರಾಗಿ ಪ್ರಸಿದ್ಧಿಗೊಂಡು. ಅನೇಕ ಪತ್ರಿಕೆಗಳಲ್ಲಿ ನಿರಂತರವಾಗಿ ಧಾರಾವಾಹಿಯಾಗಿ ಪ್ರಕಟಗೊಂಡ ಕಥೆಗಳ ಕರ್ತೃವಾಗಿ, ಗುರುತಿಸಿಕೊಂಡು ತಮ್ಮದೇ ಅನುಭವದ ವಿಶೇಷ ಶೈಲಿಯ ಕಥೆಗಳನ್ನು ಪೋಣಿಸಿದ ಲೇಖಕ ರಾಘವೇಂದ್ರ ರಾವ್ ಅವರು. ಅನುಬೆಳ್ಳೆ ಎಂಬ ಕಾವ್ಯನಾಮದಿಂದಲೇ ಹೆಚ್ಚಿನ ಓದುಗರಿಗೆ ಪರಿಚಿತರು. ವೃತ್ತಿಯಲ್ಲಿ ಉಪನ್ಯಾಸಕರು ಪ್ರವೃತ್ತಿಯಲ್ಲಿ ಕಥೆಗಾರರು. ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಓದುಗ ವರ್ಗವನ್ನು ಹೊಂದಿದ್ದಾರೆ. ಕೃತಿಕಾರ ರಾಘವೇಂದ್ರ ರಾವ್ ಅವರು ಪ್ರಸ್ತುತ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಲೇಖಕ ಬಿ ರಾಘವೇಂದ್ರ ರಾವ್ ಅವರನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.
ಶಿರ್ವ : ಸಂತ ಮೇರಿ ಮಹಾ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ
Posted On: 24 Jun 2023, 02:21 PM
ಶಿರ್ವ : ಇಂದಿನ ವಿವಿಧ ಕ್ಷೇತ್ರಗಳಲ್ಲಿ ದತ್ತಾಂಶ ಸಮಸ್ಯೆಗಳನ್ನು, ಪರಿಹರಿಸಲು ಡೇಟಾ ವಿಜ್ಞಾನವನ್ನು ಬಳಸುವ ಮೂಲಕ ದತ್ತಾಂಶ ಗಣಿಗಾರಿಕೆ, ಯಂತ್ರ ಕಲಿಕೆ ಮತ್ತು ಅಂಕಿಅಂಶಗಳ ವಿಶ್ಲೇಷಣೆಯ ಸಂಯೋಜನೆಯಾಗಿದೆ. ಯುವಕರು ಇಂತಹ ಡೇಟಾ ವಿಜ್ಞಾನದ ಕೌಶಲ್ಯಗಳನ್ನು ಕಲಿಯುವ ಮೂಲಕ ವ್ಯಾಪಾರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ವ್ಯವಹಾರಗಳಿಗೆ ಉತ್ತಮ ನಿರ್ಧಾರಗಳನ್ನು ನೀಡುವ ಮೂಲಕ ಉತ್ತಮ ಉಪಾದಿಗಳನ್ನು ಪಡೆಯಬಹುದೆಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಏರ್ಪಡಿಸಿದ ಡಿಜಿಟಲ್ ಟೆಕ್ನಾಲಜಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ,ಡೇಟಾ ಸೈನ್ಸ್ ಮತ್ತು ಉದ್ಯೋಗ ಅವಕಾಶಗಳು ಎಂಬ ವಿಶೇಷ ಉಪನ್ಯಾಸದಲ್ಲಿ ಮಂಗಳೂರಿನ ಕಾಗ್ನೆಟಿವ್ ಸೊಲ್ಯೂಷನ್ಸ್ ನ ಅಸಿಸ್ಟೆಂಟ್ ಹೆಚ್ ಆರ್ ಲೀಡರ್ಟೀಮ್ ಕುಮಾರಿ ಕೃತಿಕಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಯುಗದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ತ್ವರಿತ ಬದಲಾವಣೆಗಳಿಂದಾಗಿ ಕಂಪ್ಯೂಟರ್ ಪದವೀಧರರಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿದೆ. ವಿದ್ಯಾರ್ಥಿಗಳು ತಮ್ಮ ಕಾಲೇಜು ಜೀವನದಲ್ಲೇ ಉದ್ಯಮ ಕೌಶಲ್ಯಗಳನ್ನು ಕಲಿಯುವ ಮೂಲಕ ಉದ್ಯಮದ ಸವಾಲುಗಳನ್ನು ತೆಗೆದುಕೊಳ್ಳಲು ಸಿದ್ದರಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು. ಬದಲಾಗುತ್ತಿರುವ ತಂತ್ರಜ್ಞಾನ ಕ್ಷೇತ್ರವನ್ನು ಕಂಪ್ಯೂಟರ್ ಪದವೀಧರರು ಅರ್ಥ ಮಾಡಿಕೊಂಡು ಸಮಾಜಕ್ಕೆ ಬೇಕಾಗಿರುವ ತಂತ್ರಾಂಶ ಬಳಕೆಯನ್ನು ರೂಪಿಸುವಲ್ಲಿ ತಮ್ಮ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ನಿರ್ದೇಶಕ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅವರು ಕಿವಿಮಾತು ನೀಡಿ, ಪ್ರಸ್ತಾವಿಕವಾಗಿ ಮಾತನಾಡಿದರು. ಫಾಧಿ , ಕಾಗ್ನಿಟಿವ್ ಸೊಲ್ಯೂಷನ್ ಮಂಗಳೂರಿನ ವ್ಯಾಪಾರ ಕಾರ್ಯಾಚರಣೆಯ ತಂಡದ ಮುಖ್ಯಸ್ಥರು ಸಂಪನ್ಮೂಲ ವ್ಯಕ್ತಿಯಾಗಿ ಅಧಿವೇಶನವನ್ನು ನಡೆಸಿದರು ಮತ್ತು ಸೆಮಿನಾರ್ನಲ್ಲಿ ವಿವಿಧ ವ್ಯಾಪಕವಾದ ಜ್ಞಾನವನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಗ್ಲೋ ಟಚ್ ಪ್ಲೇಸ್ಮೆಂಟ್ ಡ್ರೈವಲ್ಲಿ ಆಯ್ಕೆಯಾದ ಶೆಟ್ಟಿ ತರುಣ್ ರಮೇಶ್, ಎಲ್ರುಷಾ ಮಿಲಿನಾ ಡಿ'ಸಾ, ಪ್ರಸಿದ್ಧ್ ಗೋಪಾಲ್ ಅಂಚನ್ ಇವರನ್ನು ಅಭಿನಂದಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಪ್ರಕಾಶ್, ಬಿಸಿಎ ವಿಭಾಗದ ಎಲ್ಲಾ ಅಧ್ಯಾಪಕ-ಅಧ್ಯಾಪಕೇತರ ಬಂಧುಗಳು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಆಲಿಸ್ಟರ್ ಸುಜಾಯ್ ಡಿಸೋಜ, ಅನುಪ್ ನಾಯಕ ಸಹಕರಿಸಿದರು. ದೀಪ್ತಿ ಮತ್ತು ಬಳಗ ಪ್ರಾರ್ಥಿಸಿದರು. ಚಂದನ ಸ್ವಾಗತಿಸಿ, ನಿವೇದಿತಾ ನಿಖಿಲ್ ಪೂಜಾರಿ ವಂದಿಸಿದರು. ಎಲ್ರುಷಾ ಮಿಲಿನಾ ಡಿ'ಸಾ ಕಾರ್ಯಕ್ರಮ ಸಂಯೋಜಿಸಿದರು.
