Updated News From Kaup
ಕಾಪು :ಕನ್ನಡ ಸಾಹಿತ್ಯ ಪರಿಷತ್ತು - ೧೦೯ನೇ ಸಂಸ್ಥಾಪನಾ ದಿನಾಚರಣೆ, ದತ್ತಿ ಉಪನ್ಯಾಸ ಕಾರ್ಯಕ್ರಮ
Posted On: 06-05-2023 05:53PM
ಕಾಪು : ಹಲವು ವರ್ಷಗಳ ಹಿಂದೆ ಮಾನವನಿಗೆ ಸ್ವಂತವಾದ ಬದುಕಿದೆಯೆಂದು ಯೋಚನೆ ಇರಲಿಲ್ಲ. ಎಲ್ಲವೂ ದೇವರೆಂಬ ಕಲ್ಪನೆಯಲ್ಲಿದ್ದರು. ಭಾರತದಲ್ಲಿ ಬಸವಣ್ಣನಂತಹ ದಾರ್ಶನಿಕರು ದೇವರು ಮತ್ತು ಮನುಷ್ಯನಿಗೆ ನೇರವಾಗಿ ಸಂಬಂಧವಿದೆ ಎಂದು ಮೊದಲ ಬಾರಿಗೆ ತಿಳಿಸಿದರು. ವಚನಕಾರರು ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ವಚನಗಳು ಸಾಹಿತ್ಯದಲ್ಲಿ ಶ್ರೇಷ್ಠವಾಗಿದೆ. ನಮ್ಮ ರಾಜ್ಯದ ಶ್ರೀಮಂತಿಕೆಯನ್ನು, ಪ್ರಕೃತಿಯ ಸೊಬಗನ್ನು ಕೆ.ಎಸ್.ನಿಸಾರ್ ಅಹಮದ್ ರಂತಹ ಕವಿಗಳು ಪದ್ಯದ ಮೂಲಕ ಜಗತ್ತಿಗೆ ಸಾರಿದ್ದಾರೆ ಎಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸ್ಟೀವನ್ ಕ್ವಾಡ್ರಸ್ ಹೇಳಿದರು. ಅವರು ಶುಕ್ರವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ಆಶ್ರಯದಲ್ಲಿ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರಗಿದ ಕನ್ನಡ ಸಾಹಿತ್ಯ ಪರಿಷತ್ತಿನ ೧೦೯ನೇ ಸಂಸ್ಥಾಪನಾ ದಿನಾಚರಣೆ - ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದವರು ಕ್ಷೇತ್ರ ತೊರೆಯಲು ಸೂಚನೆ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 06-05-2023 05:50PM
ಉಡುಪಿ : ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಡವರ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ : ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ
Posted On: 05-05-2023 01:43PM
ಕಟಪಾಡಿ : ಬಡವರ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದೆ. ಬಡವರು ಮತ್ತು ಮಧ್ಯಮ ವರ್ಗ ದವರು ಈ ಚುನಾವಣೆಯಲ್ಲು ಸೋಲಬಾರದು ಅನ್ನೋದು ನನ್ನ ಆಸೆ. ನಿಮ್ಮ ಮತವನ್ನು ಮಾರಿಕೊಳ್ಳಬೇಡಿ ಅಂತಾ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ಕುಮಾರ್ ಸೊರಕೆ ಹೇಳಿದ್ದಾರೆ. ಕಾಪು ಕ್ಷೇತ್ರದ ಕಟಪಾಡಿ ಸರಕಾರಿ ಗುಡ್ಡೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಕಾಂಗ್ರೆಸ್ ಸರ್ಕಾರದ ಬಡವರ ಜನಸಾಮಾನ್ಯರ ಎಲ್ಲಾ ಯೋಜನೆಗಳನ್ನು ಪೂರ್ತಿಯಾಗಿ ಹಿಂತೆಗೆದುಕೊಳ್ಳಲಾಗಿದೆ. ಈ ಮೂಲಕ ಬಡವರು ಜನಸಾಮಾನ್ಯರನ್ನು ಕಷ್ಟಕ್ಕೆ ದೂಡುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿರೋದು ದೊಡ್ಡ ದುರಂತ ಅಂತಾ ಅವರು ವಿಷಾದ ವ್ಯಕ್ತಪಡಿಸಿದರು.
ಕಾಪು ಕ್ಷೇತ್ರದಲ್ಲಿ ಸುಸಜ್ಜಿತ ಗೋ ರುದ್ರಭೂಮಿ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ
Posted On: 05-05-2023 01:32PM
ಕಾಪು: ತಾವು ಚುನಾಯಿತರಾದರೆ ಕಾಪು ಕ್ಷೇತ್ರದಲ್ಲಿ ಸುಸಜ್ಜಿತ ಗೋ ರುದ್ರಭೂಮಿ ಸ್ಥಾಪಿಸುವುದಾಗಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತದಾರರಿಗೆ ಭರವಸೆ ನೀಡಿದ್ದಾರೆ.
ಸಣ್ಣ ಕೈಗಾರಿಕೆಗೆ ಒತ್ತು ಕೊಟ್ಟು ಪ್ರತೀ ಮನೆಗೆ ಒಂದು ಉದ್ಯೋಗ ಕೊಡುವ ಯೋಜನೆ : ವಿನಯ್ ಕುಮಾರ್ ಸೊರಕೆ
Posted On: 05-05-2023 01:22PM
ಉಡುಪಿ: ಸಣ್ಣ ಕೈಗಾರಿಕೆಗೆ ಒತ್ತು ಕೊಟ್ಟು ಮನೆಗೊಬ್ಬರಿಗೆ ಉದ್ಯೋಗ ನೀಡುವ ಯೋಜನೆಯನ್ನು ನೀಡುವ ಮಹದಾಸೆಯನ್ನು ಹೊಂದಿದ್ದೇನೆ ಅಂತಾ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಮಣಿಪಾಲ ಟೆಕ್ನಾಲಜಿ ಸಮೂಹ ಸಂಸ್ಥೆಗೆ ಭೇಟಿ ನೀಡಿ ಮತಯಾಚನೆ ಮಾಡಿ ಮಾತಾಡಿದ ಅವರು ಕಾರ್ಮಿಕರೇ ಈ ದೇಶದ ನಿಜವಾದ ಸಂಪತ್ತು. ಇಡೀ ದೇಶದ ಸೆಕ್ಯೂರಿಟಿ ಕೀಲಿ ಇರೋದೇ ಕಾರ್ಮಿಕರ ಕೈಯಲ್ಲಿ. ಮಣಿಪಾಲದ ಗ್ರೂಪ್ ನ ತಾಂತ್ರಿಕ ಸಂಸ್ಥೆಗಳು ದೇಶದಲ್ಲಿ ಅಲ್ಲದೇ ಪ್ರಪಂಚದಾದ್ಯಂತ ಸುದ್ಧಿಯಲ್ಲಿದೆ. ಬಹಳಷ್ಟು ಮಂದಿಗೆ ಉದ್ಯೋಗ ವನ್ನು ನೀಡುವ ಕಾರ್ಯವನ್ನು ಮಾಡುತ್ತಾ ಬಂದಿದೆ.
ಈ ಚುನಾವಣೆಯು ಧರ್ಮ ಅಧರ್ಮದ ಚುನಾವಣೆ : ಗುರ್ಮೆ ಸುರೇಶ್ ಶೆಟ್ಟಿ
Posted On: 05-05-2023 09:41AM
ಕಾಪು : ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲಾರ್ ಕುಂಜಿ ಗುಡ್ಡೆ ಪ್ರದೇಶದಲ್ಲಿ ಮಾತಯಾಚನೆ ಮಾಡಿದರು.
ಕಾಪು : ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ನಾಝಿಂ ಕಂಚಿನಡ್ಕ ನೇಮಕ
Posted On: 05-05-2023 12:13AM
ಕಾಪು : ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ಶಿಫಾರಸ್ಸಿನ ಮೇರೆಗೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯನ್ನಾಗಿ ನಾಝಿಂ ಕಂಚಿನಡ್ಕ ಇವರನ್ನು ನೇಮಕ ಮಾಡಲಾಗಿದೆ.
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ : ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾದ ಬೆಂಬಲ ನೀಡಿಲ್ಲ
Posted On: 04-05-2023 06:34PM
ಕಾಪು : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಪಡು ಕುತ್ಯಾರು ಮಹಾ ಸಂಸ್ಥಾನಕ್ಕೆ ಅನೇಕ ಮಂದಿ ಅಭ್ಯರ್ಥಿಗಳು ಆಗಮಿಸಿ, ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದ್ದಾರೆ. ಹೆಚ್ಚಿನ ಉಮೇದ್ವಾರರ ಪರಿಚಯ ಇರುವುದರಿಂದ ಎಲ್ಲರೊಡನೆ ಕುಶಲೋಪರಿ, ವಿಚಾರ ವಿನಿಮಯ ನಡೆಸಿ ಶುಭವಾಗಲಿ ಎಂದು ಆಶೀರ್ವದಿಸಿ ಅನುಗ್ರಹ ಮಂತ್ರಾಕ್ಷತೆಯನ್ನು ಜಗದ್ಗುರುಗಳವರು ನೀಡಿರುತ್ತಾರೆ.
ಮೇ 5 : ಕುಂಜೂರು
Posted On: 04-05-2023 06:19PM
ಉಡುಪಿ ಜಿಲ್ಲೆಯ ಐತಿಹಾಸಿಕ ಮಹತ್ವದಿಂದ ಅಪೂರ್ವವೆಂದು ಗುರುತಿಸಲ್ಪಡುವ ಕೆಲವೇ ದುರ್ಗಾ ಪ್ರತಿಮೆಗಳಲ್ಲಿ ಕುಂಜೂರಿನ ದುರ್ಗಾ ದೇವಸ್ಥಾನದ ಮೂಲಸ್ಥಾನ ಶ್ರೀದುರ್ಗಾ ಮೂರ್ತಿಯು ಒಂದು. ಜಗನ್ಮಾತೆಯು ಮಹಿಷನ ವಧಾನಂತರ ಸಾವಕಾಶವಾಗಿ ನಿಂತ ಭಂಗಿಯಲ್ಲಿರುವ ಮೂರ್ತಿಯು ಚತುರ್ಬಾಹುವನ್ನು ಹೊಂದಿದೆ. ಸ್ಕಂದಭಂಗದಲ್ಲಿದೆ. ಮೇಲೆನ ಬಲ ಕೈಯಲ್ಲಿ ಪ್ರಯೋಗ ಚಕ್ರ.ಮೇಲಿನ ಎಡ ಕೈಯಲ್ಲಿ ಶಂಖವನ್ನು ಹಾಗೂ ಕೆಳಗಿನ ಎಡ ಕೈಯಲ್ಲಿ ಯಾವ ಆಯುಧವೂ ಇಲ್ಲ.ಕೆಳಗಿನ ಬಲ ಕೈಯಲ್ಲಿ ತ್ರಿಶೂಲವಿದೆ.ವಿಗ್ರಹವು ಮಹತ್ವವುಳ್ಳ ಶಿಲ್ಪಶೈಲಿಯನ್ನು ಹೊಂದಿದ್ದು ಪ್ರತಿಮಾಲಕ್ಷಣ ಪ್ರಕಾರ ಕ್ರಿ.ಶ.ಒಂಬತ್ತನೇ ಶತಮಾನಕ್ಕೆ ಅನ್ವಯಿಸುತ್ತದೆ. ಈ ಮಹಿಷಮರ್ದಿನಿ ಬಿಂಬವನ್ನು ಕಡು ಕರಿ ಶಿಲೆಯಿಂದ ನಿರ್ಮಿಸಲಾಗಿದೆ.ಮೂರ್ತಿಯ ಮುಖವು ವೃತ್ತಾಕಾರದಲ್ಲಿದ್ದು ,ಶಂಕುವಾಕಾರದ ಕಿರೀಟವನ್ನು ಹೊಂದಿದೆ. ಮಿತಾಲಂಕಾರದಿಂದ ಕೂಡಿದ ದುರ್ಗಾ ಮೂರ್ತಿಯು ಸುಮಾರು ಮೂರುಅಡಿ ಎತ್ತರವಿದೆ ಎಂದು ಖ್ಯಾತ ಇತಿಹಾಸಕಾರ ಡಾ.ಗುರುರಾಜ ಭಟ್ಟ ಅವರು 1969ರ ವೇಳೆ ನಡೆಸಿದ್ದ ಕ್ಷೇತ್ರಕಾರ್ಯದ ಆಧಾರದಲ್ಲಿ ವಿವರ ನೀಡಿದ್ದಾರೆ.
ಮೇ 7 - 14 : ಪಡು ಕುತ್ಯಾರು ಆನೆಗುಂದಿ ಮಹಾ ಸಂಸ್ಧಾನದಲ್ಲಿ ವಸಂತ ವೇದ ಶಿಬಿರ
Posted On: 04-05-2023 03:13PM
ಕಾಪು : ತಾಲೂಕಿನ ಪಡು ಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದಲ್ಲಿ ವರ್ಷಂಪ್ರತಿ ನಡೆಸಲಾಗುವ ವಸಂತ ವೇದ ಶಿಬಿರವು ಮೇ 7ರಿಂದ ಆರಂಭಗೊಳ್ಳಲಿದೆ. ಮೇ 6ರಂದು ಶಿಬಿರ ವಿದ್ಯಾರ್ಥಿಗಳ ನೋಂದಣಿ ಪೂರ್ಣಗೊಳ್ಳಲಿದೆ.
