Updated News From Kaup

ಮೇ 10 ಮತ ಒತ್ತು : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Posted On: 01-05-2023 05:46PM

ಉಡುಪಿ : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ನಡೆಯುವ ಮತದಾನ ದಿನದಂದು ಜಿಲ್ಲೆಯ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವಂತೆ ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಮತದಾನ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಲು ಸಹಕಾರಿಯಾಗುವಂತೆ, ಮೇ 10 ಮತ ಒತ್ತು ಎಂಬ ಪ್ರಾಸ ವಾಕ್ಯವನ್ನು ಸುಲಭವಾಗಿ ನೆನಪಿನಲ್ಲಿಡುವಂತೆ ತಿಳಿಸಿದರು. ಅವರು ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರಿಗೆ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸಲು ನಡೆದ, ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದ ಅಂಗವಾಗಿ, ಉಡುಪಿಯ ಅಜ್ಜರಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರಜಾಪ್ರಭುತ್ವದ ಹಬ್ಬ – ಮೇ 10 ಮತದಾನ ಧ್ಯೇಯ ವಾಕ್ಯದ ಧ್ವಜರೋಹಣ ನೆರವೇರಿಸಿ ಮಾತನಾಡಿದರು.

ಬೇಸಿಗೆ ಶಿಬಿರಗಳು ಮಕ್ಕಳ ಮನೋ ವಿಕಸನಕ್ಕೆ ಸಹಕಾರಿ : ನ್ಯಾ.ಶರ್ಮಿಳಾ

Posted On: 01-05-2023 05:42PM

ಉಡುಪಿ : ಮಕ್ಕಳು ರಜೆ ಸಮಯದಲ್ಲಿ ಮನೆಯಲ್ಲಿಯೇ ಮೊಬೈಲ್ ಗೀಳಿಗೆ ಬಲಿಯಾಗುತ್ತಿದ್ದು, ಅವರನ್ನು ಬೇಸಿಗೆ ಶಿಬಿರಗಳಿಗೆ ಕಳುಹಿಸುವುದರಿಂದ, ಅವರು ಇತರೇ ಮಕ್ಕಳೊಂದಿಗೆ ಬೆರೆಯುವ ಮೂಲಕ ಅವರ ವ್ಯಕ್ತಿತ್ವ ವಿಕಸನಕ್ಕೆ ಸಹಕರಿಯಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು. ಅವರು ಉಡುಪಿಯ ಬಾಲ ಭವನದಲ್ಲಿ, ರಾಜ್ಯ ಬಾಲಭವನ ಸೊಸೈಟಿ (ರಿ) ಬೆಂಗಳೂರು, ಜಿಲ್ಲಾ ಪಂಚಾಯತ್ ಉಡುಪಿ, ಕಾನೂನು ಸೇವಾ ಪ್ರಾಧಿಕಾರ ಉಡುಪಿ, ಜಿಲ್ಲಾ ಬಾಲ ಭವನ ಸಮಿತಿ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ, 2023-24 ನೇ ಸಾಲಿನ ಬೇಸಿಗೆ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮತನಾಡಿದರು.

ಕಾಪು : ಪಂಚಾಯತ್ ಸದಸ್ಯ ರೋಶನ್ ನೇತೃತ್ವದಲ್ಲಿ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Posted On: 01-05-2023 05:22PM

ಕಾಪು : ಯುವ ನಾಯಕ, ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತೃತ್ವದಲ್ಲಿ ನೂರಾರು ಯುವಕರು ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಕಾಪು : ಪುರಸಭೆ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ಮತಯಾಚನೆ

Posted On: 01-05-2023 05:09PM

ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಇಂದು ಕಾಪು ಪುರಸಭೆ ವ್ಯಾಪ್ತಿಯಲ್ಲಿ ಮತ ಯಾಚಿಸಿದರು.

ವಿದ್ಯಾರ್ಥಿ ಜೀವನದಲ್ಲಿ ಜನರಿಗೆ ಭೂಮಿಯ ಹಕ್ಕನ್ನು ಕೊಟ್ಟವರು ವಿನಯ್ ಕುಮಾರ್ ಸೊರಕೆ: ಐವನ್ ಡಿಸೋಜ

Posted On: 01-05-2023 12:43PM

ಉಡುಪಿ: ವಿದ್ಯಾರ್ಥಿ ಜೀವನದಲ್ಲೇ ಭೂ ನ್ಯಾಯ ಮಂಡಳಿ ಸದಸ್ಯರಾಗಿ ಜನರಿಗೆ ಭೂಮಿಯ ಹಕ್ಕನ್ನು ಕೊಟ್ಟ ಏಕೈಕ ರಾಜಕಾರಣಿ ಇದ್ರೆ ಅದು ವಿನಯ ಕುಮಾರ್ ಸೊರಕೆ ಅಂತಾ ವಿಧಾನ‌ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. ಪಡುಬಿದ್ರಿಯ ಕಂಚಿನಡ್ಕದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಸಮಾಜ ಸೇವಕರಂದರೆ ಸಮಾಜದ ಜೊತೆ ಇರಬೇಕು. ತನ್ನ ಸಮಾಜ ಸೇವೆಯ ಕಾರ್ಯದಲ್ಲಿ ವಿನಯತೆಯಿಂದ ವಿನಯವಂತರಾಗಿ ಕಳೆದ ಚುನಾವಣೆಯಲ್ಲಿ 5 ವರ್ಷಗಳ ಕಾಲ ಸೋಲಿಸಿ ರಜೆ ಕೊಟ್ಟರೂ ನಿಮ್ಮ ಜೊತೆ ಇದ್ದು ನಿಮ್ಮ ಸಮಸ್ಯೆ ಗೆ ಹೋರಾಟಕ್ಕೆ ಧ್ವನಿಯಾದವರು ವಿನಯ ಕುಮಾರ್ ಸೊರಕೆಯವರು ಮಾತ್ರ. ಮತದಾನ ಮಾಡುವ ಸಂದರ್ಭ ಮತದಾರರಿಗೆ ಅಂಜಿಕೆ, ಅಳುಕು ಇರಬಾರದು. ಈ ಬಾರಿ ವಿನಯ ಕುಮಾರ್ ಸೊರಕೆಯವರಿಗೆ ಮತ ನೀಡಿ 25 ಸಾವಿರ ಮತಗಳ‌ ಅಂತರದಲ್ಲಿ ಗೆಲ್ಲಿಸಬೇಕು. ಅಂತಾ ಐವನ್ ಡಿಸೋಜ ಹೇಳಿದ್ದಾರೆ.

ಉಡುಪಿ : ಮಕ್ಕಳ ಚಲನಚಿತ್ರ ಸ್ಕೂಲ್ ಲೀಡರ್ - ಬಾಲ ಕಲಾವಿದರ ಆಯ್ಕೆ ಪ್ರಕ್ರಿಯೆಗೆ ಚಾಲನೆ

Posted On: 01-05-2023 12:34PM

ಉಡುಪಿ : ಮಕ್ಕಳು ಪ್ರತಿಭಾವಂತರು. ಪಾಠ ಪ್ರವಚನದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಮಕ್ಕಳು ತೊಡಗಬೇಕಾಗಿದೆ. ಹಣ ಸಂಪಾದನೆಗಾಗಿ ಚಲನಚಿತ್ರವಾಗಬಾರದು ಸಮಾಜಕ್ಕೆ ಸಂದೇಶ ಕೊಡುವ ಹಿನ್ನೆಲೆಯ ಸದಭಿರುಚಿಯ ಚಿತ್ರವನ್ನು ಮಾಡಬೇಕಾಗಿದೆ. ಆಯ್ಕೆ ಇಂದು ಆಗದಿದ್ದರೂ ನಾಳೆ ಆಗುತ್ತದೆ ಎಂಬ ಭರವಸೆ ನಮ್ಮಲ್ಲಿರಬೇಕು. ಎಂದು ಬಡಗುಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಕ ಬಿ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಶ್ರೀ ದೇವಿ ಭಜನಾ ಮಂಡಳಿ ಮಂಡೇಡಿ ಇನ್ನಂಜೆ : 45ನೇ ವಾರ್ಷಿಕ ಭಜನಾ ಮಂಗಳೋತ್ಸವ ಸಂಪನ್ನ

Posted On: 30-04-2023 06:04PM

ಕಾಪು : ಶ್ರೀ ದೇವಿ ಭಜನಾ ಮಂಡಳಿ (ರಿ.) ಮಂಡೇಡಿ ಇನ್ನಂಜೆ ಇದರ 45ನೇ ವಾರ್ಷಿಕ ಭಜನಾ ಮಂಗಳೋತ್ಸವವು ಎಪ್ರಿಲ್ 28 ರಂದು ನಡೆಯಿತು. ಬೆಳಿಗ್ಗೆಯಿಂದ ಸಂಜೆಯವರೆಗೆ ಸುಮಾರು 10 ಭಜನಾ ತಂಡಗಳಿಂದ ನಿರಂತರ ಭಜನಾ ಸೇವೆ ನಡೆಯಿತು.

ಜಾತಿ ಧರ್ಮ‌ ಇಂದಿನ ಅಗತ್ಯತೆ ಅಲ್ಲ ; ಉದ್ಯೋಗವಿಲ್ಲದೆ ಯುವ ಜನತೆ ಲಂಚದ ಪರಮಾವಧಿಯಿಂದ ಬೇಸತ್ತಿದ್ದಾರೆ : ವಿನಯ್ ಕುಮಾರ್ ಸೊರಕೆ

Posted On: 30-04-2023 05:57PM

ಕಾಪು : ಇಲ್ಲಿನ ಇಂದಿನ‌ ಅಗತ್ಯತೆ ಜಾತಿ ಧರ್ಮ‌ ಅಲ್ಲ. ಅತಿಯಾದ ಬೆಲೆ ಏರಿಕೆಯಿಂದ ಜನತೆ ರೋಸಿ ಹೋಗಿದ್ದಾರೆ. ಉದ್ಯೋಗವಿಲ್ಲದೆ ಯುವ ಜನತೆ ಲಂಚದ ಪರಮಾವಧಿಯಿಂದ ಬೇಸತ್ತು ಹೋಗಿದ್ದಾರೆ ಅಂತಾ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಕಾಪು ಕ್ಷೇತ್ರದ ಹಿರೇಬೆಟ್ಟು ಪಂಚಾಯತ್ ವ್ಯಾಪ್ತಿಯಲ್ಲಿ ಮನೆಮನೆ ಮತಯಾಚನೆ ಸಂದರ್ಭ ಮಾತನಾಡಿದರು.

ಕಾಪು : ಪಕ್ಷದ ಕಾರ್ಯಕರ್ತರೊಂದಿಗೆ ಮನ್ ಕಿ ಬಾತ್ ವೀಕ್ಷಿಸಿದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ

Posted On: 30-04-2023 05:49PM

ಕಾಪು : ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಕಾಪು ವಿಧಾನಸಭಾ ಕ್ಷೇತ್ರ 80 ಬಡಗಬೆಟ್ಟು ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 36ರ ಬೂತ್ ಅಧ್ಯಕ್ಷರಾದ ಸಂದೀಪ್ ಮರಾಠೆ ಅವರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕರ್ತರೊಂದಿಗೆ ವೀಕ್ಷಿಸಿದರು.

ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಉಪಕಾರ ಮಾತ್ರ ಆಗುವುದು, ಅಪಕಾರವಾಗದು - ಪ್ರಮೋದ್ ಮಧ್ವರಾಜ್

Posted On: 30-04-2023 05:31PM

ಕಾಪು : ಬಿಜೆಪಿಯಲ್ಲಿ ಸಂಸ್ಕಾರ ಗುಣವಿದೆ. ಹಾಗಾಗಿ ಬಂಡಾಯವೆನ್ನುವುದು ಕಡಿಮೆ. ಶಾಸಕ ಲಾಲಾಜಿಯವರ ಸಾಧುತನ ಗುಣವೇ ಅವರಿಗೆ ಭೂಷಣ. ಅವರ ಅವಧಿಯ ಕೆಲಸ ಕಾರ್ಯಗಳು ಶ್ಲಾಘನೀಯ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಉಪಕಾರ ಮಾತ್ರ ಆಗುವುದು. ಅಪಕಾರವಾಗದು. ಎಲ್ಲರನ್ನು ಸಮಾನವಾಗಿ ನೋಡುವ ವ್ಯಕ್ತಿ ಎಂದು ಬಿಜೆಪಿ ಪಕ್ಷದ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಭಾನುವಾರ ಕಾಪುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮೀನುಗಾರರ ಹಿತ ಕಾಪಾಡುವ ಪಕ್ಷ ಬಿಜೆಪಿಯಾಗಿದೆ ಎಂದರು. ಬಿಜೆಪಿ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.