Updated News From Kaup

ಭರವಸೆ ನೀಡಿದ‌ 5 ಗ್ಯಾರಂಟಿ ಜಾರಿಗೆ ; ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ - ರಮೀಜ್ ಹುಸೇನ್

Thumbnail
Posted On: 03 Jun 2023, 06:36 PM

ಪಡುಬಿದ್ರಿ : ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯ ಮಾತನ್ನು ಈಡೇರಿಸಿದ ಮುಖ್ಯ ಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯರವರಿಗೆ ಅಭಿನಂದನೆಗಳು ಎಂದು ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ತಿಳಿಸಿದ್ದಾರೆ. ಗ್ಯಾರಂಟಿ ಜಾರಿಗಳನ್ನು ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೇ ಗ್ಯಾರಂಟಿ ಯೋಜನೆ ಜಾರಿ ಗೊಳಿಸಿದ್ದಲ್ಲದೇ ಸಮಾನ್ಯ ಜನರಿಗೆ ಆಸರೆಯನ್ನು ನೀಡಿದೆ. ಜನ ಸಮಾನ್ಯರು ಬೆಲೆ ಏರಿಕೆ ಹಾಗು ಯುವ ಜನತೆ ನಿರುದ್ಯೋಗದ ಸಮಸ್ಯೆಯಿಂದ ತತ್ತರಿಸಿರುವ‌ ಈ ಸಂದರ್ಭದಲ್ಲಿ ಜನರ ಬದುಕಿಗೆ ಅಸರೆ ನೀಡಿದ‌ ಕಾಂಗ್ರೆಸ್ ‌ಸರಕಾರದ ಈ ಸಾಧನೆ ನಿಜವಾಗಿಯು ಶಾಘ್ಲನೀಯ. ಜನರ ಕಷ್ಟಕ್ಕೆ ಸ್ಪಂದಿಸುವ ‌ಸರಕಾರ ಎಂಬುದನ್ನು ಕಾಂಗ್ರೆಸ್ ಪಕ್ಷದ ‌ಸರಕಾರ ಸಾಬೀತು ಪಡಿಸಿದೆ ಎಂದು ರಮೀಜ್ ಹರ್ಷ ವ್ಯಕ್ತಪಡಿಸಿದ್ದಾರೆ.

ಕಟಪಾಡಿ : ತ್ರಿಶಾ ವಿದ್ಯಾ ಕಾಲೇಜು - ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮ, ನಾಯಕತ್ವದ ಗುಣ, ಪ್ರೇರಣೆಯ ಕುರಿತ ಕಾರ್ಯಾಗಾರ

Thumbnail
Posted On: 03 Jun 2023, 06:30 PM

ಕಟಪಾಡಿ : ಮೇಜರ್ ರಾಧಾಕೃಷ್ಣ ಅವರಿಂದ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಶಿಸ್ತು ಸಂಯಮ, ನಾಯಕತ್ವದ ಗುಣ ಮತ್ತು ಪ್ರೇರಣೆಯ ಕುರಿತಾದ ಕಾರ್ಯಾಗಾರವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 120ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ, ಯುವ ಜನಾಂಗದಲ್ಲಿ ಶಿಸ್ತು ಬಹಳ ಮುಖ್ಯ. ಸತತ ಪ್ರಯತ್ನದಿಂದ ಜೀವನದಲ್ಲಿ ಗೆಲುವು ಸಾಧ್ಯ ಎನ್ನುವುದನ್ನ ತಿಳಿದುಕೊಂಡರು. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಇಂದುರೀತಿ, ಉಪನ್ಯಾಸಕ‌ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಉಡುಪಿ : ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

Thumbnail
Posted On: 03 Jun 2023, 05:20 PM

ಉಡುಪಿ : ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶನಿವಾರ ಶಾಸಕರ ಕಚೇರಿ ಉಡುಪಿಯಲ್ಲಿ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮತ್ತು ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ರೋಗಿಗಳಿಗೆ ಸದ್ರಿ ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಸಹಕಾರ ಹಾಗೂ ಸಲಹೆಗಳನ್ನು ವೈದ್ಯಾಧಿಕಾರಿಗಳು ನೀಡಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ವೈದ್ಯಾಧಿಕಾರಿಯವರು ಸ್ಥಳೀಯ ಸಾರ್ವಜನಿಕರ ಹಾಗೂ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಔಷಧೋಪಚಾರವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಸೂಚಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ತಾಲ್ಲೂಕು ವೈದ್ಯಾಧಿಕಾರಿಗಳಾದ ವಾಸುದೇವ್ ಉಡುಪ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸುನಿಲ್ ಕುಮಾರ್ ಹೇಳಿಕೆಯ ಹಿಂದೆ ಖಾಸಗಿ ಬಸ್ಸು ಮಾಫಿಯಾಕ್ಕೆ ಲಾಭ ಮಾಡಿಕೊಡುವ ಹುನ್ನಾರ : ಅನಿತಾ ಡಿಸೋಜ

Thumbnail
Posted On: 03 Jun 2023, 04:59 PM

ಕಾರ್ಕಳ : ಖಾಸಗಿ ಬಸುಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ನೀಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸರಕಾರವನ್ನು ಒತ್ತಾಯಿಸುತ್ತಿದ್ದಂತೆ, ಅವರ ಹೇಳಿಕೆ ಬೆಂಬಲಿಸಿ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮತ್ತು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿಕೆಯು ಖಾಸಗಿ ಬಸ್ಸು ಮಾಫಿಯಕ್ಕೆ ಲಾಭ ಮಾಡಿಕೊಡುವ ಹುನ್ನಾರ ಇದೆ ಎಂದು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ ಆರೋಪಿಸಿದ್ದಾರೆ. ಕರಾವಳಿ ಸೇರಿದಂತೆ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಖಾಸಗಿ ಬಸ್ ಸಂಚಾರ ಇದ್ದು, ಸರಕಾರಿ ಬಸ್ಸುಗಳಿಗೆ ಕೊಡುವ ಅನುಕೂಲ ಖಾಸಗಿ ಬಸ್ಸುಗಳಿಗೂ ಸರಕಾರ ನೀಡಬೇಕು. ಹಣದ ರೂಪದಲ್ಲಾದರೂ ಖಾಸಗಿ ಬಸ್ಸುಗಳಿಗೆ ಅನುಕೂಲ ಮಾಡಿಕೊಟ್ಟರೆ, ಮಹಿಳೆಯರ ಉಚಿತ ಪ್ರಯಾಣಕ್ಕೆ ನಾವು ಸಿದ್ಧ ಎಂದು ಬಸ್ಸು ಮಾಲಕರ ಸಂಘದ ರಾಜ್ಯಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಮಾಜಿ ಮಂತ್ರಿ ಹಾಲಿ ಶಾಸಕ ಸುನಿಲ್ ಕುಮಾರ್ ಹೇಳಿಕೆ ಬೆನ್ನಲ್ಲೇ ಕುಯಿಲಾಡಿ ಸುರೇಶ್ ಕುಮಾರ್ ರವರ ಹೇಳಿಕೆ ಬಸ್ ಮಾಫಿಯಾಗೆ ಸರಕಾರದ ಪೆಟ್ರೋಲ್, ಡೀಸೆಲ್ ಸಬ್ಸಿಡಿ ಅಥವಾ ಉಚಿತ ಟಿಕೆಟ್ ಗಾಗಿ ಇಂತಿಷ್ಟು ಅನುದಾನವನ್ನು ಕೊಡಿಸಿ ಖಾಸಗಿ ಬಸ್ ಮಾಫಿಯಾಕ್ಕೆ ಲಾಭ ಮಾಡಿಕೊಡುವ ಲಾಭ ಮಾಡಿಕೊಡುವ ಹುನ್ನಾರದಿಂದಲೇ ಶಾಸಕ ಸುನಿಲ್ ಕುಮಾರ್ ಈ ಹೇಳಿಕೆ ನೀಡಿದ್ದಾರೆ ಎಂಬ ಸಂಶಯ ಮೂಡುತ್ತಿದೆ. ಶಾಸಕ ಸುನಿಲ್ ಕುಮಾರ್ ರವರಿಗೆ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ತನ್ನ ಜಿಲ್ಲೆಯ ಜನರಿಗೂ ಸಿಗಬೇಕು ಎಂಬ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ, ಕರಾವಳಿಯಲ್ಲಿ ಖಾಸಗಿಯಷ್ಟೇ ಪ್ರಮಾಣದ ಸರಕಾರಿ ಬಸ್ ಗಳು ಓಡಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದ್ದರು. ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರುಗಳು ಖಾಸಗಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅಗ್ರಹಿಸುತ್ತಿರುವುದು ಜನಪರವಾದ ಕಾಳಜಿಯಿಂದ ಅಲ್ಲ. ಬದಲಾಗಿ ಇದರ ಹಿಂದೆ ದೊಡ್ಡ ಹುನ್ನಾರವೇ ಇದೆ ಎಂದು ಜನರು ಅರ್ಥ ಮಾಡಿಕೊಳ್ಳಬೇಕು. ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳು ಈಗಾಗಲೇ ಜಾರಿಯಾಗಿದ್ದು, ಬಿಜೆಪಿ ಜಿಲ್ಲಾಧ್ಯಕ್ಷರು ಕೆಪಿಸಿಸಿ ಕಚೇರಿಯ ಮುಂದೆ ತಲೆ ಬೋಳಿಸಿ ಕುಳಿತುಕೊಳ್ಳಲು ಸಿದ್ದರಾಗಲಿ ಎಂದು ಅನಿತಾ ತಿಳಿಸಿದ್ದಾರೆ.

ಉಡುಪಿ : ಮಹಿಳಾ ಕುಸ್ತಿ ಪಟುಗಳನ್ನು ಬೆಂಬಲಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ವತಿಯಿಂದ ಪ್ರತಿಭಟನೆ

Thumbnail
Posted On: 03 Jun 2023, 04:49 PM

ಕಾಪು : ಮಹಿಳಾ ಕುಸ್ತಿ ಪಟುಗಳಿಗೆ ಕಿರುಕುಳ ನೀಡಿದ ಪೋಸ್ಕೊ ಆರೋಪಿ ಬಿಜೆಪಿ ಸಂಸದರನ್ನು ಬಂಧಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ಇವರು ಪ್ರತಿಭಟನೆ ನಿರತ ಕುಸ್ತಿಪಟುಗಳನ್ನು ಬೆಂಬಲಿಸಿ ಕಾಪು ಪೇಟೆಯಲ್ಲಿ ಶನಿವಾರ ಮುಸ್ಲಿಂ ಮಹಿಳೆಯರು ಬ್ರಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ವಿಮೆನ್ ಇಂಡಿಯಾ ಮೂವ್ ಮೆಂಟ್ ನ ಅಧ್ಯಕ್ಷೆ ನಾಝಿಯ ಮಾತನಾಡಿ ಮಹಿಳೆಯರ ಮೇಲೆ ದೌರ್ಜನ್ಯ ನೋಡಿಯೂ ಕಣ್ಣು ಮುಚ್ಚಿ ಕುಳಿತ ಕೇಂದ್ರ ಸರಕಾರದ ವಿರುದ್ಧ ಕಿಡಿ ಕಾರಿದರು. ನಾವು ಆರಿಸಿ ಕಳುಹಿಸಿದ ಸಂಸದರು ಬರೇ ಸಂಬಳವನ್ನು ತೆಗೆದುಕೊಳ್ಳುವ ಬದಲು ಮಹಿಳೆಯರ ಬಗ್ಗೆ ಸ್ವಲ್ಪ ಕಾಳಜಿಯಿಂದ ವರ್ತಿಸಲಿ. ಬಿಜೆಪಿ ಸರ್ಕಾರ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡುವ ಮೂಲಕವೇ ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸ ಮಾಡುತ್ತದೆ ಎಂದರು. ಪ್ರತಿಭಟನೆಯಲ್ಲಿ ಕಾರ್ಯದರ್ಶಿ ರಹಿಮಾ ಕಾಪು,ಜಿಲ್ಲಾ ಉಪಾಧ್ಯಕ್ಷೆ ನಸೀಮಾ, ಕಾಪು ಅಧ್ಯಕ್ಷೆ ಫರ್ಝಾನಾ,ಕಾರ್ಯದರ್ಶಿ ನೌಶೀನ್ ಮುಂತಾದವರು ಇದ್ದರು.

ಕಾಪು : ಪುರಸಭಾ ವ್ಯಾಪ್ತಿಯ ಕುಂದು ಕೊರತೆ ಬಗ್ಗೆ ಪುರಸಭಾ ಸದಸ್ಯರು, ಇಲಾಖಾಧಿಕಾರಿಗಳೊಂದಿಗೆ ಶಾಸಕರ ಸಭೆ

Thumbnail
Posted On: 02 Jun 2023, 08:53 PM

ಕಾಪು : ಇಲ್ಲಿನ ಪುರಸಭಾ ವ್ಯಾಪ್ತಿಯ ಕುಂದು ಕೊರತೆ ಬಗ್ಗೆ ಇಂದು ಕಾಪು ಪುರಸಭೆಯ ಸಭಾಂಗಣದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪುರಸಭಾ ಸದಸ್ಯರು ಹಾಗೂ ಪುರಸಭೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭ ‌ಮಾತನಾಡಿದ‌ ಶಾಸಕರು ಮುಂಗಾರು ಆರಂಭಗೊಳ್ಳಲಿದ್ದು ಮುಂಜಾಗ್ರತವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚಿಸಿದರು. ಪುರಸಭಾ ಇಲಾಖಾಧಿಕಾರಿಗಳು ಕ್ಲಪ್ತ ಸಮಯದಲ್ಲಿ ಕಚೇರಿಗೆ ಆಗಮಿಸಿ ಶೀಘ್ರವಾಗಿ ಕಡತವಿಲೆವಾರಿಗೆ ಹಾಗೂ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಂತೆ ಸೂಚಿಸಿದರು. ಈ ಸಂದರ್ಭ ಕಾಪು ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿಗಳಾದ ಸಂತೋಷ್, ನಗರ ಯೋಜಕರಾದ ಅಭಿಲಾಶ್ ಹಾಗೂ ಪುರಸಭೆಯ ಸದಸ್ಯರು, ಪುರಸಭೆಯ ಅಭಿಯಂತರರು, ವಿಷಯ ನಿರ್ವಾಹಕರು ಉಪಸ್ಥಿತರಿದ್ದರು.

ಕಾಪು : ವಿಶ್ವಕರ್ಮ ಸಮಾಜ ಸೇವಾ ಸಂಘ ಕಡಂಬು ಮಟ್ಟಾರು - ದಶಮಾನೋತ್ಸವ, ವಿಶ್ವಕರ್ಮ ಪೂಜೆ ಸಂಪನ್ನ

Thumbnail
Posted On: 02 Jun 2023, 08:16 PM

ಕಾಪು : ವಿಶ್ವಕರ್ಮ ಸಮಾಜ ಸೇವಾ ಸಂಘ ಕಡಂಬು ಮಟ್ಟಾರು ಇದರ ದಶಮಾನೋತ್ಸವ ಮತ್ತು ವಿಶ್ವಕರ್ಮ ಪೂಜೆ ಮೇ 28ರಂದು ಕಡಂಬು ಮೈದಾನದಲ್ಲಿ ನಡೆಯಿತು. ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠಾಧೀಶ್ವರ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿ ದೀಪ ಬೆಳಗಿಸುವುದರ ಮೂಲಕ ದಶಮಾನೋತ್ಸವ ಸಂಭ್ರಮಕ್ಕೆ ಚಾಲನೆ ಕೊಟ್ಟರು. ಸುಮಾರು 5 ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ. ಸ್ಥಳೀಯ ಪ್ರತಿಭೆಗಳಿಂದ ಸಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರಸಂಶ ತಂಡ ಕಾಪು ಇವರಿಂದ ಬಲೆ ತೆಲಿಪಲೆ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷರಾದ ಚೇತನ್ ಆಚಾರ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ವಿಶ್ವಹಿಂದೂ ಪರಿಷದ್ ಮತ್ತು ಭಜರಂಗದಳ ಪ್ರಮುಖರಾದ ಜಯಪ್ರಕಾಶ್ ಪ್ರಭು, ಮಾಜಿ ಶಾಸಕರು ಲಾಲಾಜಿ ಮೆಂಡನ್, ಸಂಘದ ಗೌರವ ಅಧ್ಯಕ್ಷರಾದ ಗೋಪಾಲ ಆಚಾರ್ಯ ಮತ್ತು ಕಾಳಿಕಾಂಬಾ ಮಹಿಳಾ ಸಂಘದ ಅಧ್ಯಕ್ಷರಾದ ಚೈತ್ರ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಜುನಾಥ್ ಆಚಾರ್ಯ ಮೂಡು ಮಟ್ಟಾರು ಪ್ರಸ್ತವಿಕ ನುಡಿಗಳನ್ನಿತ್ತು, ಸಂಘದ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ದೀಪಕ್ ಆಚಾರ್ಯ ವಂದಿಸಿದರು. ದಾಮೋದರ್ ಶರ್ಮ ಕಾರ್ಯಕ್ರಮನ್ನು ನೀರೂಪಿದರು.

ಕಾಪು : ಬಿಜೆಪಿ ಪ್ರಣಾಳಿಕೆಯಲ್ಲಿ ಸಂಕಲ್ಪಿತ ಗೋ ರುದ್ರಭೂಮಿ ನಿರ್ಮಾಣ - ಅದಮಾರು ಸ್ವಾಮೀಜಿಯೊಂದಿಗೆ ಶಾಸಕರಿಂದ ಚಾಲನೆ

Thumbnail
Posted On: 02 Jun 2023, 08:10 PM

ಕಾಪು : ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನನ್ನು ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣದ ಉದ್ದೇಶಕ್ಕೆ ಕಾಯ್ದಿರಿಸಲಾಗಿದ್ದು ಜೂನ್ 2ರಂದು ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ಶ್ರೀಪಾದರೊಂದಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗೋ ಪೂಜೆ ನೆರವೇರಿಸುವ ಮೂಲಕ ಗೋ ರುದ್ರಭೂಮಿಗೆ ಚಾಲನೆ ನೀಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ ಯೋಜನೆ ಇದಾಗಿದೆ. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಎಲ್ಲರೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಜಯಂತ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೇಶವ ಮೋಯ್ಲಿ, ಕಾಪು ತಹಶೀಲ್ದಾರರಾದ ಶ್ರೀನಿವಾಸ ಕುಲಕರ್ಣಿ, ಕಂದಾಯ ನಿರೀಕ್ಷಕರಾದ ಸುಧೀರ್ ಶೆಟ್ಟಿ, ಕಾಪು ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ. ಅರುಣ್ ಹೆಗ್ಡೆ, ಪಶು ವೈದ್ಯಾಧಿಕಾರಿಗಳಾದ ಡಾ. ವಿಜಯ ಕುಮಾರ್, ಕಾಪು ತಾಲ್ಲೂಕು ಪಂಚಾಯತ್ ಸಹಾಯಕ ಅಭಿಯಂತರರಾದ ಚಂದ್ರಕಲಾ, ಎಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರದೀಪ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮದ ನಿರೂಪಿಸಿದರು.

ಉಚಿತ ಆರೋಗ್ಯ ತಪಾಸಣಾ ಶಿಬಿರ || ದಿ. ಡಾ ಶ್ರೀಧರ ಹೊಳ್ಳ ಜನ್ಮದಿನದ ಸ್ಮರಣಾರ್ಥ

Thumbnail
Posted On: 31 May 2023, 09:20 PM

ಉಡುಪಿ: ಮಿತ್ರ ಆಸ್ಪತ್ರೆ ಉಡುಪಿ ದಿ| ಡಾ. ಶ್ರೀಧರ ಹೊಳ್ಳ ಇವರ ಜನ್ಮದಿನದ ಸ್ಮರಣಾರ್ಥ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ. ಸಾಮಾನ್ಯ ರೋಗ ಸ್ತ್ರೀ ರೋಗ ದಂತ ಚರ್ಮ ರೋಗ ಮಕ್ಕಳ ಚಿಕಿತ್ಸೆ ಮಧುಮೇಹ

ಕಾಪು : ಸರಕಾರಿ ಸಂಯುಕ್ತ ಪ್ರೌಢಶಾಲೆ ಬೆಳಪು - ಶಾಲಾ ಪ್ರಾರಂಭೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಚಾಲನೆ

Thumbnail
Posted On: 31 May 2023, 05:56 PM

ಕಾಪು : ಸರಕಾರಿ ಸಂಯುಕ್ತ ಪ್ರೌಢಶಾಲೆ ಬೆಳಪು ಇಲ್ಲಿನ ಶಾಲಾ ಪ್ರಾರಂಭೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ಬಳಿಕ ಬೆಳಪು ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್, ಕೈಗಾರಿಕಾ ಪಾರ್ಕ್, ಹಾಗೂ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬೆಳಪು ಗ್ರಾಮದ ಅಭಿವೃದ್ಧಿಯ ರೂವಾರಿ ಡಾ. ದೇವಿಪ್ರಸಾದ್ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.