Updated News From Kaup

ಕೊರಂಗ್ರಪಾಡಿ ವಸತಿ ನಿವೇಶನದಲ್ಲಿ ವನಮಹೋತ್ಸವ ಕಾರ್ಯಕ್ರಮ

Thumbnail
Posted On: 30 Jun 2023, 01:01 PM

ಉಡುಪಿ : ಕರ್ನಾಟಕ ಅರಣ್ಯ ಇಲಾಖೆ ಉಡುಪಿ ವಲಯ ಕುಂದಾಪುರ ವಿಭಾಗ, ಕರ್ನಾಟಕ ಗೃಹ ಮಂಡಳಿ, ಉಡುಪಿ, ತ್ರಿಷಾ ಕಾಲೇಜು, ಕಟಪಾಡಿ ಇವರ ಸಹಯೋಗದೊಂದಿಗೆ ಶುಕ್ರವಾರ ಕರ್ನಾಟಕ ಗೃಹ ಮಂಡಳಿ ವಸತಿ ನಿವೇಶನ ಕೊರಂಗ್ರಪಾಡಿಯಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಷ್ಪಾ, ಸದಸ್ಯರಾದ ಲಿವಿತಾ ದೇಸಿ, ಅಮೃತಾ ಪೂಜಾರಿ, ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಹನಾ, ಸಹಾಯಕ ಅಭಿಯಂತರರಾದ ಹರೀಶ್, ಉಡುಪಿ ವಲಯ ಅರಣ್ಯಾಧಿಕಾರಿಗಳಾದ ಸುಬ್ರಮಣ್ಯ ಆಚಾರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಜೀವನ್ ದಾಸ್ ಶೆಟ್ಟಿ, ಗುರುರಾಜ್ ಕೆ, ತ್ರಿಶಾ ಕಾಲೇಜಿನ ಉಪನ್ಯಾಸಕರಾದ ಚೇತನಾ ಸುನಿಲ್, ಧೀರಜ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜುಲೈ 3 - ಸೆಪ್ಟೆಂಬರ್ 29 : ಪಡುಕುತ್ಯಾರುವಿನಲ್ಲಿ ಆನೆಗುಂದಿಶ್ರೀಗಳ ಚಾತುರ್ಮಾಸ್ಯ ; ಸಿದ್ಧತೆಗಳು ಪೂರ್ಣ

Thumbnail
Posted On: 29 Jun 2023, 07:57 PM

ಕಾಪು : ಪಡುಕುತ್ಯಾರು ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ ಜುಲೈ 3ರಿಂದ ಸೆಪ್ಟೆಂಬರ್ 29ರ ವರೆಗೆ ಪಡುಕುತ್ಯಾರಿನಲ್ಲಿ ನಡೆಯಲಿದೆ. ಆನೆಗುಂದಿ ಶ್ರೀಗಳವರ ಶೋಭಕೃತ್‌ ಸಂವತ್ಸರದ 19ನೇ ವರ್ಷದ ಚಾತುರ್ಮಾಸ್ಯವಾಗಿದ್ದು ಪಡುಕುತ್ಯಾರಿನ ಆನೆಗುಂದಿ ಮಠದಲ್ಲಿ 8ನೇ ಬಾರಿಗೆ ಸಂಪನ್ನಗೊಳ್ಳಲಿದೆ. ಜುಲೈ 3ರಂದು ವಿಶ್ವಕರ್ಮ ಯಜ್ಞ, ವ್ಯಾಸ ಪೂಜೆ ಯೊಂದಿಗೆ ವ್ರತ ಸಂಕಲ್ಪ ನಡೆಯಲಿದ್ದು ಗುರುಪಾದ ಪೂಜೆಯ ಬಳಿಕ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯು ನಡೆಯಲಿದೆ. ಅಪರಾಹ್ನ ಸಾಂಸ್ಕೃತಿಕ ಕಾರ್ಯಕ್ರಮದ ನಡೆಯಲಿದೆ. ಪ್ರತಿದಿನ ಬೆಳಗ್ಗೆ ಭಜನಾ ಸಂಕೀರ್ತಾನಾ ಸೇವೆ, ಗುರುಪಾದಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ದುರ್ಗಾ ನಮಸ್ಕಾರ ಪೂಜೆ, ಪಾರಾಯಣ, ಭಾನುವಾರಗಳಂದು ವಿಶೇಷ ಉಪನ್ಯಾಸ, ವಿಚಾರಗೋಷ್ಠಿಗಳು ನಡೆಯಲಿವೆ. ಜುಲೈ 15ರಂದು ಆನೆಗುಂದಿಶ್ರೀಗಳವರ ಜನ್ಮವರ್ಧಂತಿಯು ನಡೆಯಲಿದ್ದು ವಿಶೇಷ ಹೋಮ ಹವನ ವೈದಿಕ ಕಾರ್ಯಕ್ರಮಗಳು, ಜಗದ್ಗುರುಗಳವರ ತುಲಾಭಾರ ಸೇವೆ ನಡೆಯಲಿದೆ. ಬಳಿಕ ನಡೆಯುವ ಧರ್ಮ ಸಂಸತ್ತಿನಲ್ಲಿ ವೇ. ಬ್ರ ಶಂಕರ ಆಚಾರ್ಯ ಕಡ್ಲಾಸ್ಕರ್‌ ಪಂಡಿತ್‌ ಅವರಿಗೆ ವೈದಿಕ ವಿಭಾಗದಲ್ಲಿ ಮಹಾಸಂಸ್ಥಾನದ ಆಸ್ಥಾನ ವಿದ್ವಾನ್‌ ಪದವಿಯನ್ನು ಪ್ರದಾನ ಮಾಡಲಾಗುವುದು. ಇದೇ ದಿನ ಶ್ರೀ ನಾಗಧರ್ಮೇಂದ್ರ ಸರಸ್ವತೀ ವಿದ್ಯಾರ್ಥಿ ಭವನದ ಉದ್ಘಾಟನೆ ನಡೆಯಲಿದ್ದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಭಾಗವಹಿಸಲಿದ್ದಾರೆ. ಮಾಜಿ ಸಚಿವರಾದ ವಿನಯ್‌ ಕುಮಾರ್‌ ಸೊರಕೆ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್‌ ಕುಮಾರ್‌ ಕಾರ್ಕಳ, ಸ್ಥಳೀಯ ಶಾಸಕ ಸುರೇಶ್‌ ಶೆಟ್ಟಿ, ಸಮಾಜ ಸೇವಕ ಮಿಥುನ್‌ ಕುಮಾರ್‌ ರೈ ಮುಂತಾದವರು ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 29ರಂದು ಚಾತುರ್ಮಾಸ್ಯದ ಸಮಾರೋಪವು ನಡೆಯಲಿದ್ದು ಸೀಮೋಲ್ಲಂಘನ ಧಾರ್ಮಿಕ ಸಭೆಯು ನಡೆಯಲಿದ್ದು ವಿವಿಧ ಸಚಿವರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಎಂ ಬಿ. ಆಚಾರ್‌ ಕಂಬಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪಡುಬಿದ್ರಿ : ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ವ್ಯೆದ್ಯಕೀಯ ತಪಾಸಣಾ ‌ಶಿಬಿರ

Thumbnail
Posted On: 29 Jun 2023, 07:47 PM

ಪಡುಬಿದ್ರಿ : ಇಲ್ಲಿನ ಆತ್ಮ ಶಕ್ತಿ ವಿವಿದ್ದೋದೇಶ ಸಹಕಾರಿ ಸಂಘದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಪಡುಬಿದ್ರಿ ರೋಟರಿ ಕ್ಲಬ್ ಸಹಯೋಗದೊಂದಿಗೆ ಪಡುಬಿದ್ರಿ ಬೋರ್ಡ್ ಶಾಲೆಯಲ್ಲಿ  ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ ಮತ್ತು ಸಾಮಾನ್ಯ ವ್ಯೆದ್ಯಕೀಯ ತಪಾಸಣಾ ಶಿಬಿರ ಗುರುವಾರ ಜರಗಿತು. ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಹಕಾರಿ ಸಂಸ್ಥೆಗಳು ಕೇವಲ  ಲಾಭದ ದೃಷ್ಟಿಯನ್ನುಹೊಂದದೆ ಜೊತೆಗೆ  ಜನರ ಆರೋಗ್ಯ ದೃಷ್ಟಿಯಿಂದ  ಉಚಿತವಾಗಿ ಸಾರ್ವಜನಿಕರಿಗೆ ವ್ಯೆದಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಉತ್ತಮ ಗುಣಮಟ್ಟದಲ್ಲಿ ನೀಡುತ್ತಿರುವುದು  ಶ್ಲಾಘನೀಯ. ಸಾಮಾಜಿಕ ಕಳಕಳಿಯನ್ನು ಹೊಂದಿರುವ ಅತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ಆತ್ಮ ಶಕ್ತಿ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಮಾಜಿ ತಾ.ಪಂ. ಸದಸ್ಯ ನವೀನಚಂದ್ರ ಜೆ. ಶೆಟ್ಟಿ, ಪಡುಬಿದ್ರಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ವೈ. ಸುಕುಮಾರ್, ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಖ್ಯೋಪಾಧ್ಯಾಯ ಕೃಷ್ಣಯ್ಯ , ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ. ಕೃಷ್ಣ ಬಂಗೇರ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪದ್ಮಿನಿ ತಂತ್ರಿ, ಅಮೃತಾನಂದಮಯಿ ಮಠ ಬೋಳೂರು ಇಲ್ಲಿನ ವೆೃದ್ಯಾಧಿಕಾರಿಗಳಾದ ಡಾ. ಸುಚಿತ್ರಾ ಸೊರಕೆ , ಡಾ. ದೇವದಾಸ್, ಉಡುಪಿ ಪ್ರಸಾದ್  ನೇತ್ರಾಲಯದ ವ್ಯೆದ್ಯಾಧಿಕಾರಿ ಡಾ. ಅಕ್ಷತಾ, ಮುಕ್ಕ  ಶ್ರೀನಿವಾಸ್  ಆಸ್ಪತ್ರೆಯ ವ್ಯೆದ್ಯಾಧಿಕಾರಿ ಡಾ. ಅಧ್ರಾ ಮಂಗಳೂರು ವೆನ್ ಲಾಕ್ ಆಸ್ಪತ್ರೆ ಯ ಬ್ಲಡ್ ಬ್ಯಾಂಕ್, ಲ್ಯಾಬ್ ಟೆಕ್ನಿಷನ್ ಜೋಯಾಸನ್ ಉಪಸ್ಥಿತರಿದ್ದರು. ಸುಮಾರು 350 ಮಂದಿ ಶಿಬಿರದ ಪ್ರಯೋಜನ ಪಡೆದರು. ಪಡುಬಿದ್ರಿ ‌ಶಾಖಾ ಪ್ರಬಂಧಕರಾದ ಸ್ವಾತಿ ಸ್ವಾಗತಿಸಿದರು. ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿ ದೀಪಿಕಾ ಸನಿಲ್ ಕಾರ್ಯಕ್ರಮ ನಿರೂಪಿಸಿದರು. ಸಂತೋಷ್ ಪಡುಬಿದ್ರಿ ವಂದಿಸಿದರು.

ಜೂನ್ 30 (ನಾಳೆ) : ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಹಿರಿಯಡಕ ಕಚೇರಿ ಉದ್ಘಾಟನೆ

Thumbnail
Posted On: 29 Jun 2023, 07:24 PM

ಕಾಪು : ತಾಲೂಕಿನ ಹಿರಿಯಡಕ ಬೊಮ್ಮರಬೆಟ್ಟು ಗ್ರಾಮಪಂಚಾಯತ್ ಬಳಿ‌ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ನೂತನ ಶಾಸಕರ ಕಚೇರಿಯ ಉದ್ಘಾಟನಾ ಸಮಾರಂಭ ಬೆಳಿಗ್ಗೆ 10 ಗಂಟೆಗೆ ಜರಗಲಿದೆ. ಇದರ ಜೊತೆಗೆ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಟಪಾಡಿ : ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Thumbnail
Posted On: 29 Jun 2023, 06:57 PM

ಕಟಪಾಡಿ : ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಕೊಡಮಾಡಿದ ಉಚಿತ ಪುಸ್ತಕವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿತರಿಸಿದರು. ಈ ಸಂದರ್ಭ ಶಾಸಕರು ಉಚಿತ ಪುಸ್ತಕ ವಿತರಣೆ ಮಾಡಿದ ಸಮಾನ ಮನಸ್ಕ ತಂಡಕ್ಕೆ ಮತ್ತು ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಶಿಧರ ಪುರೋಹಿತ, ಸದಾಶಿವ ಆಚಾರ್ಯ, ಸಹನಾ ದೇವರಾಜ ಆಚಾರ್ಯ, ಅಚ್ಚುತ ಆಚಾರ್ಯ ಕಾಪು, ನಿವೃತ್ತ ತಹಶೀಲ್ದಾರರಾದ ಕೆ. ಮುರಳಿಧರ ಆಚಾರ್ಯ, ನಿವೃತ್ತ ಯೋಧ ವಾದಿರಾಜ ಆಚಾರ್ಯ, ಕಾಪು ಕಾಳಿಕಾಂಬ ದೇವಸ್ಥಾನ ಮೊಕ್ತೇಸರರಾದ ಶೇಖರ ಆಚಾರ್ಯ, ಗಣೇಶ್ ಆಚಾರ್ಯ ಉಚ್ಚಿಲ, ಭಾಸ್ಕರ ಆಚಾರ್ಯ, ಚಂದ್ರಶೇಖರ ಆಚಾರ್ಯ, ದಿವಾಕರ ಆಚಾರ್ಯ, ಕಾರ್ತಿಕ್ ಆಚಾರ್ಯ, ಬಿ.ಎ ಆಚಾರ್ಯ ಮಣಿಪಾಲ, ರವಿ ಪುರೋಹಿತ ಉಪಸ್ಥಿತರಿದ್ದರು.

ಕಾಪು : ಮಳೆಯಿಂದ ಗೋಶಾಲೆಗೆ ಹಾನಿ, ತಾತ್ಕಾಲಿಕ ಶೆಡ್ ನಿರ್ಮಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Thumbnail
Posted On: 29 Jun 2023, 04:23 PM

ಕಾಪು : ಇಲ್ಲಿನ ಮಟ್ಟಾರು ಕಡಂಬುನಲ್ಲಿರುವ ಧರ್ಮ ಫೌಂಡೇಶನ್ ಗಿರೀಶ್ ಜಿ. ಏನ್ ರವರ ಗೋಶಾಲೆಯ ಶೆಡ್ ಮಳೆಗೆ ಹಾನಿಯಾಗಿದ್ದು, ಇಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಟ್ಟಾರು ಘಟಕದ ಕಾರ್ಯಕರ್ತರು ತಾತ್ಕಾಲಿಕ ಶೆಡ್ ನಿರ್ಮಿಸಿದರು.

ಉಡುಪಿ : ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ, ಬಿರುಗಾಳಿ ಸಾಧ್ಯತೆ ; ಆರೆಂಜ್ ಅಲರ್ಟ್

Thumbnail
Posted On: 29 Jun 2023, 02:50 PM

ಉಡುಪಿ : ಮುಂದಿನ 24 ಗಂಟೆಗಳಲ್ಲಿ ಉಡುಪಿ ,ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಶಿವಮೊಗ್ಗ ಚಿಕ್ಕಮಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸಲಿದ್ದು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಉಡುಪಿ : ಜಿಲ್ಲೆಯಾದ್ಯಂತ ಬಕ್ರೀದ್ ಸಂಭ್ರಮಾಚರಣೆ

Thumbnail
Posted On: 29 Jun 2023, 11:20 AM

ಉಡುಪಿ : ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್ ಹಬ್ಬ)ವನ್ನು ಇಂದು ಸಂಭ್ರಮದಿಂದ ಆಚರಿಸಿದರು. ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಮಾಜ್ ಬಳಿಕ ಮುಸ್ಲಿಮ್ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಮಸೀದಿಗಳಲ್ಲಿ ಧರ್ಮಗುರುಗಳು ವಿಶೇಷ ಈದ್ ನಮಾಝ್ ನೆರವೇರಿಸಿ ಈದ್ ಸಂದೇಶ ನೀಡಿದರು.

ಜುಲೈ 1 : ಉಡುಪಿಯಲ್ಲಿ ಪತ್ರಿಕಾ ದಿನಾಚರಣೆ

Thumbnail
Posted On: 28 Jun 2023, 10:38 PM

ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಉಡುಪಿ ಐಎಂಎ ಭವನದಲ್ಲಿ ಜುಲೈ 1ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಉದ್ಘಾಟಿಸಲಿರುವರು. ಸುದ್ದಿಯಾನ ಡಿಜಿಟಲ್ ಮೀಡಿಯಾದ ಪ್ರಧಾನ ಸಂಪಾದಕ ಹರಿಪ್ರಸಾದ್ ಎ. ವಿಶೇಷ ಉಪನ್ಯಾಸ ನೀಡಲಿರುವರು. ಅಧ್ಯಕ್ಷತೆ ಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಕಾರ್ಕಳದ ಹಿರಿಯ ಪತ್ರಕರ್ತ ರಾಧಾಕೃಷ್ಣ ತೋಡಿಕಾನ ಅವರಿಗೆ ಪತ್ರಿಕಾ ದಿನಾಚರಣೆಯ ಗೌರವ ನೀಡಲಾಗುವುದು. ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಅರುಣ್ ಕುಮಾರ್ ಶಿರೂರು, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ ಗೌರವ ಉಪಸ್ಥಿತರಿರುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕಾಪು : ತಂತಿಯನ್ನೇ ಶೃಂಗರಿಸಿದ ಬಳ್ಳಿ - ಮೆಸ್ಕಾಂ ಎಲ್ಲಿ ? ಸಾರ್ವಜನಿಕರ ಪ್ರಶ್ನೆ

Thumbnail
Posted On: 28 Jun 2023, 10:28 PM

ಕಾಪು : ಇಲ್ಲಿನ ಪುರಸಭಾ ವ್ಯಾಪ್ತಿಯ ಮಲ್ಲಾರು ಗ್ರಾಮದ, ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ರಸ್ತೆ ಬದಿ ಇರುವ ವಿದ್ಯುದೀಪ ಕಂಬದಿಂದ ಮನೆಗೆ ಸಂಪರ್ಕದ ಸರ್ವಿಸ್ ವಯರ್ ನಲ್ಲಿ ಬಳ್ಳಿಗಳು ಪಸರಿಸಿ ಅವಘಡಕ್ಕೆ ಎಡೆ ಮಾಡಿ ಕೊಟ್ಟಂತಿದೆ. ಈ ಬಗ್ಗೆ ಸಂಬಂಧಪಟ್ಟ ಕಾಪು ಮೆಸ್ಕಾಂನವರು ಕೂಡಲೇ ತೆರೆವುಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.