Updated News From Kaup

ಕಾಪು : ಬಿಜೆಪಿ ಹೈನುಗಾರರಿಗೆ ದ್ರೋಹವೆಸಗುತ್ತಿದೆ ; ಹೈನುಗಾರರ ರಕ್ಷಣೆಗೆ ಕಾಂಗ್ರೆಸ್ ಬದ್ಧ - ದೇವಿಪ್ರಸಾದ್ ಶೆಟ್ಟಿ

Posted On: 30-04-2023 11:51AM

ಕಾಪು : ಕೇಂದ್ರ ಸರಕಾರದಿಂದ ರಾಷ್ಟ್ರೀಕೃತ ಬ್ಯಾಂಕುಗಳ ಸಹಿತ ಎಲ್ಲಾ ಸರಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ಇದೀಗ ಕೆಎಂಎಫ್ ನ್ನು ಖಾಸಗೀಕರಣ ಮಾಡಲು ಯತ್ನಿಸಲಾಗುತ್ತಿದೆ. ಗುಜರಾತ್ ಮೂಲದ ಅಮೂಲ್ ಸಂಸ್ಥೆಯವರಿಗೆ ಕೆಎಂಎಫ್ ನ್ನು ಗುತ್ತಿಗೆ ನೀಡುವ ಮಾತುಕತೆಯಾಗಿದೆ ಇದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಹೇಳಿದರು. ಅವರು ಆದಿತ್ಯವಾರ ಕಾಪುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

ಕಾಪು : ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯಿಂದ ಕಾಪು ಕ್ಷೇತ್ರದ ಅಭಿವೃದ್ಧಿ ಯೋಜನೆಯ ಚುನಾವಣಾ ಪ್ರಣಾಳಿಕೆ ಬಿಡುಗಡೆ

Posted On: 30-04-2023 11:04AM

ಕಾಪು : ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಾಪು ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ನಮ್ಮ ಕನಸಿನ ಕಾಪು ಪ್ರಣಾಳಿಕೆಯ ಮೂಲಕ ಸುಂದರ ಕಾಪು ಸ್ವಚ್ಛ ಕಾಪು ಪರಿಕಲ್ಪನೆಯಲ್ಲಿ ಕಾಪು ಕ್ಷೇತ್ರದ ನಾಗರಿಕರಿಗೆ ಎಲ್ಲಾ ಸೌಲಭ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಇಂದು ಕಾಪು ರಾಜೀವ ಭವನದಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ನನ್ನ ಶಾಸಕತ್ವದ ಅವಧಿಯಲ್ಲಿ ಕಾಪುವಿನಲ್ಲಿ ಅಭಿವೃದ್ಧಿಯ ಮೈಲಿಗಲ್ಲನ್ನೇ ಸ್ಥಾಪಿಸಿದ್ದೇನೆ : ವಿನಯ್ ಕುಮಾರ್ ಸೊರಕೆ

Posted On: 29-04-2023 05:06PM

ಕಾಪು : ನನ್ನ ಶಾಸಕತ್ವದ ಅವಧಿಯಲ್ಲಿ ಕಾಪುವಿನಲ್ಲಿ ಅಭಿವೃದ್ಧಿಯ ಮೈಲಿಗಲ್ಲನ್ನೇ ಸ್ಥಾಪಿಸಿದ್ದೇನೆ. ಆದರೂ ನನ್ನನ್ನು ಕಳೆದ ಬಾರಿ ಸೋಲಿಸಿದ್ದೀರಿ. ಈ ಬಾರಿಯಾದರೂ ಕಾಪು ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮತ್ತು ಅಭಿವೃದ್ಧಿಗೆ ಬೆಲೆ ಇದೆ ಅಂತಾ ಸಾಬೀತು ಮಾಡೋ ಕೆಲಸವನ್ನು ಮತದಾರರು ಮಾಡಲೇಬೇಕಿದೆ ಎಂದು ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದರು. ಅವರು ಉದ್ಯಾವರ ಬಿಲ್ಲವ ಮಹಾಮಂಡಲದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಹಿರಿಯರ ಆಶೀರ್ವಾದ ಪಡೆದು ಮಾತನಾಡಿದರು.

ಕಟಪಾಡಿ : ಬಿಜೆಪಿ ಪಕ್ಷವು ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ - ಕೇಂದ್ರ ಗೃಹ ಮಂತ್ರಿ ಅಮಿತ್ ಶಾ

Posted On: 29-04-2023 04:54PM

ಕಟಪಾಡಿ : ಕಾಂಗ್ರೆಸ್ ಪಕ್ಷವು ದೇಶದ ಸುರಕ್ಷತೆಯನ್ನು ವೋಟ್ ಬ್ಯಾಂಕ್ ರಾಜಕೀಯದ ಮೂಲಕ ಆಟವಾಡಿಸುತ್ತಿದೆ. ಬಿಜೆಪಿ ಪಕ್ಷವು ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ. ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲಾತಿ ಮತ್ತೆ ತರುತ್ತಾರೆ. ಬಿಜೆಪಿ ಯಾವತ್ತೂ ತರುವುದಿಲ್ಲ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಇಂದು ಬಿಜೆಪಿ ಅಭ್ಯರ್ಥಿ ಮತ ಪ್ರಚಾರದ ಅಂಗವಾಗಿ ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನದಲ್ಲಿ ಜರಗಿದ ಬಹಿರಂಗ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಇಂದು ಕಟಪಾಡಿಗೆ ಅಮಿತ್ ಷಾ : ಬಹಿರಂಗ ಸಾರ್ವಜನಿಕ ಸಭೆ

Posted On: 29-04-2023 12:41PM

ಕಟಪಾಡಿ : ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಇಂದು ಬಿಜೆಪಿ ಅಭ್ಯರ್ಥಿ ಮತ ಪ್ರಚಾರದ ಅಂಗವಾಗಿ ಮಧ್ಯಾಹ್ನ 2ಕ್ಕೆ ಉಡುಪಿಯಿಂದ ನೇರವಾಗಿ ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನದಲ್ಲಿ ಜರಗುವ ಬಹಿರಂಗ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೇರಳದ ಬ್ರಾಹ್ಮಣರ ಬೆನ್ನತ್ತಿ ಬಂದು ಇನ್ನಂಜೆ ಗ್ರಾಮದ ಮಂಡೇಡಿಯಲ್ಲಿ ನೆಲೆಯಾದ ಕೊರತಿ ದೈವ

Posted On: 29-04-2023 07:44AM

ಸುಮಾರು ನೂರಾರು ವರುಷಗಳ ಹಿಂದೆ ಕೇರಳದ ಬ್ರಾಹ್ಮಣ ಕುಟುಂಬವೊಂದರ ಭಕ್ತಿಗೆ ಬೆನ್ನತಿ ಬಂದ ಕೊರತಿ ದೈವವು ಮಂಡೇಡಿಯ ಬಾಕ್ಯಾರಿನ ಜಾಗವೊಂದರಲ್ಲಿ ಪರಿವಾರ ದೈವಗಳಾದ ಬೊಬ್ಬರ್ಯ, ಪಂಜುರ್ಲಿ, ನೀಚ ಮತ್ತು ಗುಳಿಗ ದೈವದೊಂದಿಗೆ ನೆಲೆಯಾಗಿ ಮುಂದೆ ಆ ಜಾಗವು ಕೊರತಿ ಬಾಕ್ಯಾರು ಎಂಬ ಹೆಸರಿನಿಂದಲೇ ಪ್ರಸಿದ್ದಿಯಾಗಿ ಪಂಚದೈವಗಳ ಸಾನಿಧ್ಯವೆಂದೇ ಹೆಸರಾಯಿತು. ಕಾಲಕ್ರಮೇಣ 33 ವರ್ಷಗಳ ಹಿಂದೆ ಕೊಂಕಣ ರೈಲ್ವೆಯವರು ಟ್ರ್ಯಾಕ್ ನಿರ್ಮಿಸುವ ಸಂದರ್ಭದಲ್ಲಿ ಗುಡಿಯನ್ನು ಹಿಂದೆ ಇದ್ದ ಜಾಗದಿಂದ ತೆರವುಗೊಳಿಸಬೇಕಾದಾಗ 5,000 ರೂಪಾಯಿಯನ್ನು ನೀಡಿ ಕೈ ತೊಳೆದುಕೊಂಡಿದ್ದರು, ಆಗ ಆ ಕುಟುಂಬ ದೈವವನ್ನು ಬಿಟ್ಟು, ನಾಗನ ಕಲ್ಲನ್ನು ನೀರಿಗೆ ವಿಸರ್ಜಿಸಿ ಅಲ್ಲಿಂದ ಬೇರೆ ಕಡೆಗೆ ತೆರಳಿದ್ದರು.

ಕಾಪು : ಪೇಟೆ ವಾರ್ಡ್ ನಂಬರ್ 135 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರ ಬಿರುಸಿನ ಪ್ರಚಾರ

Posted On: 29-04-2023 07:42AM

ಕಾಪು : ಇಲ್ಲಿನ ಪೇಟೆ ವಾರ್ಡ್ ನಂಬರ್ 135 ರಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರ ಬಿರುಸಿನ ಮತಯಾಚನೆ ಪಕ್ಷದ ಕಾರ್ಯಕರ್ತರಿಂದ ನಡೆಯಿತು.

ಕಟಪಾಡಿ : ಪಿಯುಸಿಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್ ಗಳಿಸಿದ ಅನುಶ್ರೀಯವರನ್ನು ಅಭಿನಂದಿಸಿದ ಗುರ್ಮೆ ಸುರೇಶ್ ಶೆಟ್ಟಿ

Posted On: 28-04-2023 10:01PM

ಕಟಪಾಡಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಉನ್ನತ ಸಾಧನೆಗೈದು, ರಾಜ್ಯಕ್ಕೆ 5 ನೇ ರ‍್ಯಾಂಕ್ ಪಡೆದ ಕಟಪಾಡಿಯ ಅನುಶ್ರೀ ಅವರನ್ನು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಮಾಡಿ, ಗೌರವಿಸಿ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಿದರು.

ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ಮಣಿಪುರ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ

Posted On: 28-04-2023 06:16PM

ಕಾಪು : ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಜೊತೆಯಾಗಿ ಕಾಪು ತಾಲೂಕಿನ ಮಣಿಪುರ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ಕಾಪು : ಕಾಂಗ್ರೆಸ್ ಪ್ರಚಾರ ವಾಹನಕ್ಕೆ ಚಾಲನೆ

Posted On: 28-04-2023 06:05PM

ಕಾಪು : ಕ್ಷೇತ್ರದಲ್ಲಿ ವಿನಯಕುಮಾರ್ ಸೊರಕೆಯವರ ಅಭಿವೃದ್ಧಿ ಕಾರ್ಯಕ್ರಮಗಳ ಬಗೆಗೆ ಪ್ರಚಾರ ನಡೆಸುವ ಕಾಂಗ್ರೆಸ್ ಪ್ರಚಾರ ವಾಹನಕ್ಕೆ ಕಾಪು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ‌ರು ವಿನಯ ಕುಮಾರ್ ಸೊರಕೆ ಉದ್ಯಾವರದಲ್ಲಿ‌ ಚಾಲನೆ‌ ನೀಡಿದರು.