Updated News From Kaup

ಭಾರಿ ಮಳೆ : ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಣೆ

Thumbnail
Posted On: 24 Jul 2023, 06:50 PM

ಉಡುಪಿ:  ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಕಟಪಾಡಿ : ಮೂಡಬೆಟ್ಟುವಿನಲ್ಲಿ ಭಾರೀ ಮಳೆಗೆ ಮನೆಯ ಗೋಡೆ ಕುಸಿತ

Thumbnail
Posted On: 24 Jul 2023, 12:25 PM

ಕಟಪಾಡಿ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡಬೆಟ್ಟು ನಿವಾಸಿ ಗೋಪಾಲ ಪಾಣರ ಅವರ ಮನೆಯ ಗೋಡೆ ಭಾರೀ ಮಳೆಗೆ ಕುಸಿದು ಬಿದ್ದಿದೆ. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರು ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಗರಿಷ್ಠ ಪರಿಹಾರ ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಸವಿತಾ ಎ ಶೆಟ್ಟಿ, ಸುಜಲಾ ಪೂಜಾರಿ, ಕೋಟೆ ಗ್ರಾಮ ಪಂಚಾಯತ್ ಸದಸ್ಯರಾದ ರತ್ನಾಕರ, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿಗಳಾದ ಗುರುಕೃಪಾ ರಾವ್, ಶಕ್ತಿ ಕೇಂದ್ರದ ಸಂಚಾಲಕರಾದ ನಿತಿನ್, ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ರಾಮ ಪಾಣರ, ಪಕ್ಷದ ಪ್ರಮುಖರಾದ ಮುರಳಿಧರ ಪೈ, ಶಾಂತ ಪೂಜಾರಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ನಾಳೆ (ಜುಲೈ 24) : ಭಾರೀ ಮಳೆ - ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Thumbnail
Posted On: 23 Jul 2023, 10:01 PM

ಉಡುಪಿ : ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಸಿ ತರಗತಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

ಉಡುಪಿ : ಸಾಲುಮರದ ತಿಮ್ಮಕ್ಕನಿಗೆ ಗೌರವಾರ್ಪಣೆ

Thumbnail
Posted On: 23 Jul 2023, 04:40 PM

ಉಡುಪಿ : ನಮ್ಮ ಮನೆ ನಮ್ಮ ಮರ ತಂಡದಿಂದ ಉಡುಪಿಯ ಬುಡ್ನಾರಿನ ಛಾಯಾನಟ್ ಮನೆಯಲ್ಲಿ ಪದ್ಮಶ್ರೀ ಪುರಸ್ಕತೆ ನಾಡೋಜ ಸಾಲುಮರದ ತಿಮ್ಮಕ್ಕ ಅವರನ್ನು ಜಯಕರ್ ಶೆಟ್ಟಿ ಇಂದ್ರಾಳಿ ಅವರು ಗೌರವಿಸಿದರು. ಸಾಲುಮರದ ತಿಮ್ಮಕ್ಕ ನೀಡಿದ ಹಣ್ಣಿನ ಗಿಡಗಳನ್ನು ಇದೇ ಪರಿಸರದಲ್ಲಿ ನೆಡಲಾಯಿತು. ಇದೇ ಸಂದರ್ಭದಲ್ಲಿ ಸಾಲು ಮರದ ತಿಮ್ಮಕ್ಕ ಅವರ ಮಗ ಉಮೇಶ್, ವನಸಿರಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಉಪಾಧ್ಯಕ್ಷೆ ಸಂಧ್ಯಾ ಶೆಣೈ, ನಾಗರಾಜ್ ಹೆಬ್ಬಾರ್ ವಿಘ್ನೇಶ್ವರ ಅಡಿಗ, ಮಧುಸೂದನ್ ಹೇರೂರು, ಉಡುಪಿಯ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಹರೀಶ್ಚಂದ್ರ, ಡಾ. ವ್ಯಾಸರಾಯ ತಂತ್ರಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ನಮ್ಮ ಮನೆ ನಮ್ಮ ಮರ ತಂಡದ ಅವಿನಾಶ್ ಕಾಮತ್, ಗುರುರಾಜ್ ಸನಿಲ್, ಸಾಹಿತಿ ಕಾತ್ಯಾಯಿನಿ ಕುಂಜಿಬೆಟ್ಟು , ಪ್ರೊ .ಕೃಷ್ಣಯ್ಯ, ಕಲಾವಿದರಾದ ಪುರುಷೋತ್ತಮ ಅಡ್ವೆ , ಜನಾರ್ದನ ಹಾವಂಜೆ, ಗಿರಿಜಾ ಹೆಲ್ತ್ ಕೇರ್ ಮಾಲಕ ರವೀಂದ್ರ ಕಡೆಕಾರ್ , ರಾಘವೇಂದ್ರ ಪ್ರಭು ಕರ್ವಾಲು, ರಾಘವೇಂದ್ರ ಅಜೆಕಾರು, ರಾಮಾಂಜಿ, ರೋಟರಾಕ್ಟ್ ಕ್ಲಬ್ ಉಡುಪಿ ಇದರ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.

ಪಡುಬಿದ್ರಿ : ಕಡಲ್ಕೊರೆತದ ಭೀತಿಯಲ್ಲಿ ಎಂಡ್ ಪಾಯಿಂಟ್ ನಲ್ಲಿರುವ ಬ್ಲೂ ಫ್ಲ್ಯಾಗ್ ಬೀಚ್

Thumbnail
Posted On: 23 Jul 2023, 04:24 PM

ಪಡುಬಿದ್ರಿ : ಅಂತರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿಯ ಎಂಡ್ ಪಾಯಿಂಟ್ ನಲ್ಲಿರುವ ಬ್ಲೂ ಫ್ಲ್ಯಾಗ್ ಬೀಚ್ ಕಡಲ್ಕೊರೆತದ ಭೀತಿಯಲ್ಲಿದೆ. ಈ ನಿಟ್ಟಿನಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ಪ್ರಬಂಧಕ ವಿಜಯ ಶೆಟ್ಟಿ, ಎರಡು ದಿನಗಳಿಂದ ಕಡಲ್ಕೊರೆತ ಜಾಸ್ತಿ ಇರುವುದರಿಂದ ಪ್ರವಾಸಿಗರಿಗೆ ಸಮುದ್ರ ದಡಕ್ಕೆ ಹೋಗಲು ನಿಬಂ೯ಧ ವಿಧಿಸಿದ್ದೆವು. ಒಳಗಿನ ಗಾರ್ಡನ್ ಏರಿಯಾಕ್ಕೆ ಬರಲು ಅವಕಾಶವಿತ್ತು. ಮುಂಜಾಗ್ರತಾ ಕ್ರಮವಾಗಿ ಭಾನುವಾರ 3 ಗಂಟೆಯಿಂದ ಪ್ರವಾಸಿಗರಿಗೆ ನಿಬಂ೯ಧಿಸಲಾಗಿದೆ. ಜೋರಾದ ಕಡಲ ಅಲೆಗಳಿಗೆ ರಕ್ಷಣೆಗಾಗಿ ಕಟ್ಟಿದ ಕಲ್ಲಿನ ಕಟ್ಟೆ ಕೊಚ್ಚಿಕೊಂಡು ಹೋಗಿದ್ದು, ವಾಚ್ ಟವರ್ ಕುಸಿಯುವ ಭೀತಿಯಲ್ಲಿದೆ. ಇದರಿಂದ ಸ್ವಲ್ಪ ಮಟ್ಟಿನ ನಷ್ಟವಾಗಿದೆ ಎಂದರು. ಅಂತರಾಷ್ಟ್ರೀಯ ಮಾನ್ಯತೆ ಪಡೆದ ದೇಶದ ಹನ್ನೆರಡು ಬೀಚ್ ಗಳಲ್ಲಿ ಇದೂ ಒಂದಾಗಿದ್ದು, ಕಾಮಿನಿ ನದಿ ಮತ್ತು ಸಮುದ್ರದ ನಡುವೆ ಇರುವ ಈ ಪ್ರದೇಶ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ.

ಎರ್ಮಾಳು : ಕೆಸರ್ಡ್ ಗೊಬ್ಬು ಕ್ರೀಡಾಕೂಟ

Thumbnail
Posted On: 23 Jul 2023, 01:46 PM

ಎರ್ಮಾಳು : ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್, ಬಂಟರ ಮಹಿಳಾ ವಿಭಾಗ, ಯುವ ಬಂಟರ ವಿಭಾಗ ಹಾಗೂ ಬಂಟರ ಕ್ರೀಡಾ ವಿಭಾಗಧ ಆಶ್ರಯದಲ್ಲಿ ಆದಿತ್ಯವಾರ ಎರ್ಮಾಳು ಬರ್ಪಾಣಿ ಜಗನ್ನಾಥ ಶೆಟ್ಟಿಯವರ ಗದ್ದೆಯಲ್ಲಿ ಕೆಸರ್ಡ್ ಗೊಬ್ಬು ಕ್ರೀಡಾ ಕೂಟ ಜರಗಿತು. ಮಾಜಿ ಕಸ್ಟಂಸ್‌ ಅಧಿಕಾರಿ, ಜಿಲ್ಲಾ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಕ್ರೀಡೆ ಪ್ರಶಸ್ತಿ ಪಡೆಯುವ ಸಲುವಾಗಿ ಮಾತ್ರವಲ್ಲದೆ, ದೇಹದ ಆರೋಗ್ಯ ಕಾಪಾಡಲು ಬಹು ಮುಖ್ಯ. ಕ್ರೀಡೆಯಲ್ಲಿ ಸಾಧನೆಯ ಮುಖಾಂತರ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲು ಸಾಧ್ಯ ಎಂದರು. ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪಡುಬಿದ್ರಿ ಗ್ರಾಮ ಪಂಚಾಯತ್ ಅದ್ಯಕ್ಷ ರವಿ ಶೆಟ್ಟಿ, ಪುಣೆ ಉದ್ಯಮಿ ಬಾಲಚಂದ್ರ ಎಲ್.‌ ಶೆಟ್ಟಿ ಎರ್ಮಾಳು, ಎಸ್.ಇ.ಝಡ್ ಜನರಲ್‌ ಮೆನೇಜರ್ ಅಶೋಕ್ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ ಶೆಟ್ಟಿ, ಉದ್ಯಮಿ ಮಿಥುನ್‌ ಆರ್‌ ಹೆಗ್ಡೆ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಕಾರ್ಯದರ್ಶಿ, ಪಡುಹಿತ್ಲು ಪ್ರಕಾಶ್ ಶೆಟ್ಟಿ, ಮಹಿಳಾ ಅಧ್ಯಕ್ಷೆ ಜ್ಯೋತಿ ಎಸ್.‌ ಶೆಟ್ಟಿ, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಸಂತೋಷ್ ಶೆಟ್ಟಿ ಬರ್ಪಾಣಿ, ಯುವ ವಿಭಾಗದ ಅಧ್ಯಕ್ಷ ನವೀನ್ ಎನ್.ಶೆಟ್ಟಿ, ಕ್ರೀಡಾ ಸಂಚಾಲಕ ವಿನಯ್ ಶೆಟ್ಟಿ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ನವೀನ್‌ ಎನ್‌ ಶೆಟ್ಟಿ ಸ್ವಾಗತಿಸಿದರು. ಪದ್ರ ಜಯ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಜ್ಯೋತಿ ಎಸ್.‌ ಶೆಟ್ಟಿ ವಂದಿಸಿದರು.

ಪಡುಬಿದ್ರಿ : ಅಪಾಯಕ್ಕೆ ಸಿಲುಕಿದ್ದ ಅಪರೂಪದ ಹಾಕ್ಸ್ ಬಿಲ್ ಸೇರಿದಂತೆ ಒಟ್ಟು 6 ಕಡಲಾಮೆಗಳ ರಕ್ಷಣೆ

Thumbnail
Posted On: 22 Jul 2023, 06:22 PM

ಪಡುಬಿದ್ರಿ : ಬಲೆಗೆ ಸಿಲುಕಿ ಒದ್ದಾಡುತ್ತಾ ಸಮುದ್ರ ತೀರಕ್ಕೆ ಬಂದಿದ್ದ ಹಾಕ್ಸ್ ಬಿಲ್ ಸೇರಿದಂತೆ ಒಟ್ಟು 6 ಕಡಲಾಮೆಗಳನ್ನು ಪಡುಬಿದ್ರಿ ಬ್ಲೂ ಫ್ಲ್ಯಾಗ್ ಸಿಬ್ಬಂದಿ ರಕ್ಷಿಸಿ ಮರಳಿ ಸಮುದ್ರಕ್ಕೆ ಬಿಟ್ಟಿದ್ದಾರೆ. ಕಡಲಬ್ಬರವಿದ್ದರೂ ಸಮುದ್ರಕ್ಕೆ ಇಳಿದ ಬ್ಲೂಫ್ಲ್ಯಾಗ್ ಬೀಚ್‌ನ ಮೇಲ್ವಿಚಾರಕ ಕಿರಣ್‌ರಾಜ್ ಮತ್ತವರ ತಂಡ ಬಲೆಯಲ್ಲಿ ಸಿಲುಕಿದ್ದ ಕಡಲಾಮೆಯನ್ನು ಸಮುದ್ರದ ಮೇಲಕ್ಕೆ ತಂದು ರಕ್ಷಿಸಿದ್ದಾರೆ. ರಕ್ಷಣಾ ತಂಡದಲ್ಲಿ ಸ್ಥಳೀಯರಾದ ದಿನರಾಜ್ ಕುಂದರ್, ಹೇಮರಾಜ್ ಕುಂದರ್, ಕಾರ್ತಿಕ್, ಬೀಚ್ ಸಿಬ್ಬಂದಿ ಸತ್ಯವತಿ, ಸುಮನ್, ಯತೀಶ್ ಮತ್ತಿತರರಿದ್ದರು.

ಎರ್ಮಾಳು ಬರ್ಪಾಣಿ ಮೂಡಬೆಟ್ಟುವಿನಲ್ಲಿ ಪಿಪಿಸಿ ವಿದ್ಯಾರ್ಥಿಗಳಿಗೆ ಕಂಡಡೊಂಜಿ ದಿನ ಕಾರ್ಯಕ್ರಮ

Thumbnail
Posted On: 22 Jul 2023, 06:02 PM

ಎರ್ಮಾಳು : ಆದರ್ಶ ಸಂಘಗಳ ಒಕ್ಕೂಟ ಅದಮಾರು, ರಾಷ್ಟ್ರೀಯ ಸೇವಾ ಯೋಜನೆ, ಪೂರ್ಣ ಪ್ರಜ್ಞಾ ಪದವಿಪೂರ್ವ ಕಾಲೇಜು ಅದಮಾರು ಇವರ ಸಂಯುಕ್ತ ಆಶ್ರಯದಲ್ಲಿ ಎರ್ಮಾಳು ಬರ್ಪಾಣಿ ಮೂಡಬೆಟ್ಟುವಿನ ಜಗನ್ನಾಥ ಶೆಟ್ಟಿಯವರ ಗದ್ದೆಯಲ್ಲಿ ಕಂಡಡೊಂಜಿ ದಿನ ಕಾರ್ಯ ಕ್ರಮ ಶನಿವಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾಯೋಜನೆಯ ವಿಭಾಗಾಧಿಕಾರಿ ಸವಿತಾ ಎರ್ಮಾಳು ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಇಂದಿನ ಕಂಡಡೊಂಜಿ ದಿನ ಕಾರ್ಯಕ್ರಮ ಇಂದಿಗೆ ಮಾತ್ರವೇ ಸೀಮಿತ ಆಗದೆ, ಎಂದಿಗೂ ಇದೊಂದು ಪ್ರೇರಣೆಯಾಗಲಿ. ತೆನೆ ಎಷ್ಟು ತುಂಬಿದ್ದರೂ, ಅದು ಬಾಗುತ್ತದೆ. ನಾವು ಕೂಡಾ ಪ್ರಕೃತಿಗೆ, ಭೂಮಿಗೆ ತಲೆ ಬಾಗಲೇಬೇಕೆಂದರು. ಸನ್ಮಾನ : ದೈಹಿಕ ಶಿಕ್ಷಕ ಚಂದ್ರಶೇಖರ ಶೆಟ್ಟಿ, ಪತ್ರಕರ್ತ ಹರೀಶ್‌ ಹೆಜ್ಮಾಡಿ ಮತ್ತು ಸವಿತಾ ಎರ್ಮಾಳುರವರನ್ನು ಸನ್ಮಾನಿಸಲಾಯಿತು. ಪೂರ್ಣ ಪ್ರಜ್ಞ ಕಾಲೇಜಿನ ಕೋಶಾಧಿಕಾರಿ ಗಣೇಶ್ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಪೂರ್ಣ ಪ್ರಜ್ಞ ಶಿಕ್ಷಣ ಸಂಸ್ಥೆಯ ಸುಮಾರು 500 ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಮುಖ್ಯ ಅತಿಥಿಗಳಾಗಿ ಸವಿತಾ ಎರ್ಮಾಳು, ಉದ್ಯಮಿ ಬಾಲಚಂದ್ರ ಎಲ್.ಶೆಟ್ಟಿ, ಎರ್ಮಾಳು ನಾರಾಯಣ ಶೆಟ್ಟಿ, ಸಂತೋಷ್ ಶೆಟ್ಟಿ ಇನ್ನ, ಸಂತೋಷ್ ಶೆಟ್ಟಿ ಬರ್ಪಾಣಿ, ಡಾ. ಜಯಶಂಕರ್ ಕಂಗಣ್ಣಾರು, ಸಂಜೀವ ನಾ̧ಯ್ಕ್, ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಹೆಜಮಾಡಿ ಮುಂತಾದವರು ಉಪಸ್ಥಿತರಿದ್ದರು. ಪ್ರಾಂಶುಪಾಲ ಸಂಜೀವ ನಾಯ್ಕ್‌ ಸ್ವಾಗತಿಸಿದರು. ಶಿಕ್ಷಕ ದೇವಿಪ್ರಸಾದ್‌ ಬೆಳ್ಳಿಬೆಟ್ಟು ನಿರೂಪಿಸಿದರು. ಡಾ. ಜಯಶಂಕರ್ ಕಂಗಣ್ಣಾರು ವಂದಿಸಿದರು.

ಎರ್ಮಾಳು : 1694ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ

Thumbnail
Posted On: 21 Jul 2023, 06:46 PM

ಎರ್ಮಾಳು : ಇಲ್ಲಿನ ಜನಾರ್ದನ ಜನ ಕಲ್ಯಾಣ ಸೇವಾ ಸಮಿತಿ ಸಭಾಂಗಣದಲ್ಲಿ ಮುಂದಿನ ಶುಕ್ರವಾರದವರೆಗೆ ನಡೆಯಲಿರುವ 1694ನೇ ಮದ್ಯವರ್ಜನ ಶಿಬಿರವನ್ನು ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ್ ರಾಜ್ ಎರ್ಮಾಳು ಬೀಡು ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರು ಮದ್ಯವರ್ಜನ ಶಿಬಿರ ಆಯೋಜಿಸುವಲ್ಲಿ ಹೆಚ್ಚು ಶ್ರಮ ತೆಗೆದುಕೊಂಡಿದ್ದ ಯೋಜನೆಯಾಗಿದೆ. ಮದ್ಯ ವ್ಯಸನಿಗಳಿಂದ ಕುಟುಂಬವು ವಿನಾಶದಂಚಿಗೆ ವಾಲುತ್ತದೆ. ಮದ್ಯದ ಚಟವನ್ನು ಬಿಡುವ ಉತ್ಕಟ ಇಚ್ಛಾ ಶಕ್ತಿಯನ್ನು ವ್ಯಸನಿಯು ತಳೆದಲ್ಲಿ ತನ್ನ ಹಾಗೂ ಮನೆ ಮಂದಿಯಿಂದ ಪ್ರೀತ್ಯಾದರದ ಜೊತೆಗೆ ಸಮಾಜದಲ್ಲಿ ಗೌರವಯುತ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು. 1694ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಉಚ್ಚಿಲ ಇದರ ಅಧ್ಯಕ್ಷ ಕೇಶವ ಮೊಯ್ಲಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಯೋಜನೆಯ ಬಿ.ಸಿ. ಟ್ರಸ್ಟಿನ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು, ತೆಂಕ ಗ್ರಾ.ಪಂ. ಅದ್ಯಕ್ಷೆ ಕಸ್ತೂರಿ ಪ್ರವೀಣ್, ರಾಜ್ಯ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ನವೀನ್ ಅಮೀನ್, ಕಾಪು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸತ್ಯಾನಂದ ನಾಯಕ್, ಶಂಕರ ಕುಂದರ್ ಸೂಡ ವೇದಿಕೆಯಲ್ಲಿದ್ದರು. ಅಮಣಿ ಪ್ರಾರ್ಥಿಸಿದರು. ಶಿಬಿರದ ವ್ಯವಸ್ಥಾಪನಾ ಸಮಿತಿ ಕೋಶಾಧಿಕಾರಿ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಸ್ವಾಗತಿಸಿದರು. ಯೋಜನೆಯ ಉಚ್ಚಿಲ ವಲಯ ಮೇಲ್ವಿಚಾರಕಿ ವಿಜಯಾ ವಂದಿಸಿದರು. ಕಾಪು ತಾಲೂಕು ಯೋಜನಾಧಿಕಾರಿ ಜಯಂತಿ ನಿರೂಪಿಸಿದರು. 1694ನೇ ಮದ್ಯವರ್ಜನ ಶಿಬಿರದಲ್ಲಿ 60 ಕ್ಕೂ ಅಧಿಕ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

ಪುತ್ತಿಗೆ ಮಠಾಧೀಶರನ್ನು ಭೇಟಿಯಾದ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ

Thumbnail
Posted On: 21 Jul 2023, 04:56 PM

ಕಾಪು : ಪುತ್ತಿಗೆ ಮಠದ ಶ್ರೀಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕೆಂಗೇರಿ ಉಪನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶುಕ್ರವಾರ ಭೇಟಿಯಾಗಿ ಆಶೀರ್ವಾದ ಪಡೆದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.