Updated News From Kaup

ಮತ ಮಾರಿಕೊಳ್ಳಬೇಡಿ : ನ್ಯಾ.ಶಾಂತವೀರ ಶಿವಪ್ಪ

Posted On: 28-04-2023 04:53PM

ಉಡುಪಿ :ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮ ಅಭ್ಯರ್ಥಿಗೆ ಮತಚಲಾಯಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು. ಅವರು ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮದರ್ಜೆಕಾಲೇಜು ಮತ್ತು ಸ್ನಾತಕೋತ್ತರಅಧ್ಯಯನ ಕೇಂದ್ರದಲ್ಲಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ, ಮತದಾನ ಜಾಗೃತಿ ಸಾರುವ ಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಿಸಿಲ ಧಗೆಗೆ ಮುನ್ನೆಚ್ಚರಿಕಾ ಕ್ರಮಗಳು

Posted On: 28-04-2023 04:41PM

ಉಡುಪಿ : ಭಾರತೀಯ ಹವಾಮಾನ ಇಲಾಖೆಯು ಪ್ರಸಕ್ತ ಸಾಲಿನ ಬಿಸಿಗಾಳಿ ಕುರಿತು ಮುನ್ಸೂಚನೆ ನೀಡಿದ್ದು, ಪ್ರಸ್ತುತ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿ ಸೆ. ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು ಬಿಸಿಗಾಳಿಯಿಂದಾಗುವ ಅಪಾಯಗಳನ್ನು ತಡೆಯಲು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯು ಸಲಹೆ - ಸೂಚನೆಗಳನ್ನು ಪಾಲಿಸುವುದು ಅಗತ್ಯವಿದೆ. ಬಿಸಿಗಾಳಿಯಿಂದ ಉಂಟಾಗುವ ಅನಾರೋಗ್ಯವನ್ನುತ ಡೆಗಟ್ಟಲು ಸಾಧ್ಯವಾದಷ್ಟು ಮದ್ಯಾಹ್ನ 12 ರಿಂದ 3 ರ ವರೆಗಿನ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ಕಡಿಮೆ ಮಾಡಬೇಕು.

ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ ಸಿಡಿಲು ಆ್ಯಪ್

Posted On: 28-04-2023 04:15PM

ಉಡುಪಿ : ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ತಿಳಿಸಿದೆ. ಸಿಡಿಲು-ಮೊಬೈಲ್ ಆ್ಯಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಉಡುಪಿ : ಮಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ

Posted On: 28-04-2023 03:04PM

ಉಡುಪಿ : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ ಸ್ವೀಪ್ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಮಾಂಗ್ರೋವ್ ಕಾಡುಗಳ ಮಧ್ಯೆ ಕಯಾಕ್ ಗಳಲ್ಲಿ ವಿನೂತನ ರೀತಿಯಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ.

ಕಾಪುವಿನಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ; ವಿಜಯ ಸಂಕಲ್ಪ ರಥ ಯಾತ್ರೆ ಉದ್ಘಾಟಿಸಿ, ಚಾಲನೆ

Posted On: 28-04-2023 02:52PM

ಕಾಪು : ಇಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಇಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಶಾಸಕರಾದ ಲಾಲಾಜಿ ಮೆಂಡನ್ ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿಗಳಾದ ಹಾಗೂ ದೆಹಲಿ ವಿಧಾನಸಭಾ ಶಾಸಕರಾದ ವಿಜೇಂದ್ರ ಗುಪ್ತ ವಿಜಯ ಸಂಕಲ್ಪ ರಥ ಯಾತ್ರೆಯನ್ನು ಉದ್ಘಾಟಿಸಿ ಚಾಲನೆ ನೀಡಿದರು.

ಕಾಂಗ್ರೆಸ್ ಪಕ್ಷ ಬಡ, ಮಧ್ಯಮ ವರ್ಗದವರಿಗಾಗಿ ಇರುವ ಪಕ್ಷ : ವಿನಯ್ ಕುಮಾರ್ ಸೊರಕೆ

Posted On: 28-04-2023 02:37PM

ಉಡುಪಿ: ಬೆಲೆ ಏರಿಕೆ, ಧರ್ಮ ಧರ್ಮಗಳ ನಡುವೆ ಸಂಘರ್ಷದಿಂದ ಬಡ ಮಧ್ಯಮ ವರ್ಗದ ರಕ್ತವನ್ನು‌ ಹೀರುವ ಕೆಲಸವನ್ನು‌ ಬಿಜೆಪಿ ಮಾಡಿದೆ ಎಂದು ಕಾಪು ತಾಲೂಕಿನ ಮಣಿಪುರ ದೆಂದೂರು ಭಾಗದಲ್ಲಿ ಮತಯಾಚನೆಯ ಸಂದರ್ಭ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದರು. ಕಾಂಗ್ರೆಸ್ ಪಕ್ಷ ಬಡ ಮಧ್ಯಮ ವರ್ಗದ ಪಕ್ಷ. ಬಡ ಮಧ್ಯಮ ವರ್ಗದವರಿಗೆ ಬಹಳಷ್ಟು ಯೋಜನೆಗಳನ್ನು ತಂದಿದ್ದು ಅವೆಲ್ಲಾ ಯೋಜನೆಗಳು ನಿಂತು ಹೋಗಿದೆ. ಬಡವರು ಬಡವರಾಗಿಯೇ ಉಳಿದಿದ್ದಾರೆ. ಶ್ರೀಮಂತರು ಇನ್ನು‌ ಹೆಚ್ಚು ಶ್ರೀಮಂತರಾಗುತ್ತಿದ್ದಾರೆ. ಬಡ ಮಧ್ಯಮ ವರ್ಗಕ್ಕೆ ಆರ್ಥಿಕವಾಗಿ ಸದೃಢರಾಗಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಬೆಂಬಲಿಸಬೇಕು ಎಂದು ಸೊರಕೆ ಹೇಳಿದ್ದಾರೆ.

ಮತದಾರರು ಬೆಂಬಲಿಸಿದರೆ ಮುಂದಿನ 5 ವರ್ಷದ ಅವಧಿ ಜನರ ಕೆಲಸವನ್ನು ನಿಷ್ಠೆಯಿಂದ ಮಾಡುವೆ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ

Posted On: 27-04-2023 07:27PM

ಪಡುಬಿದ್ರಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶವು ಪ್ರಗತಿಯ ಪಥದಲ್ಲಿ ನಡೆಯುತ್ತಿದೆ. ಕೋವಿಡ್ ಕಾಲದಲ್ಲಿ ಲಸಿಕೆಯ ಸಮರ್ಪಕ‌ ವಿತರಣೆ, ಹಸಿವೆ ನಿವಾರಣೆಗೆ ಉಚಿತ ಪಡಿತರದಂತಹ ಕಾರ್ಯಕ್ರಮಗಳಿಂದಾಗಿ ಜನರು ಇಂದು ಭಯಮುಕ್ತವಾಗಿ ಬದುಕುವಂತಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಜ್ಯೋತಿ ಹೇಳಿದರು ಅವರು ಪಡುಬಿದ್ರಿಯಲ್ಲಿ ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪರ ಚುನಾವಣಾ ಪ್ರಚಾರ ಮಾಡಿ ಮತ ಯಾಚಿಸಿದ ಅವರು ಆತ್ಮನಿರ್ಭರ ಭಾರತ ನಿರ್ಮಾಣ ಮಾಡಲು ಬಿಜೆಪಿಯನ್ನು ಗೆಲ್ಲಿಸಬೇಕು ಎಂದರು.

ಉಚ್ಚಿಲ : ರಾಹುಲ್ ಗಾಂಧಿಗೆ ಅಂಜಲ್ ಮೀನು ನೀಡಿದ ಮಹಿಳೆ

Posted On: 27-04-2023 07:05PM

ಉಚ್ಚಿಲ : ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಇಂದು ಉಚ್ಚಿಲ ಮಹಾಲಕ್ಷ್ಮಿ ದೇಗುಲದ ಶಾಲಿನಿ ಡಾ. ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಮೀನುಗಾರರೊಂದಿಗೆ ಸಂವಾದ ನಡೆಸಿದರು.

ಉಚ್ಚಿಲ : ಬಿಜೆಪಿಯ ಭೃಷ್ಟಾಚಾರದ ಜೊತೆ ಬೆಲೆ ಏರಿಕೆಯ ಬಿಸಿಯ ಮಧ್ಯೆ ಬಡವರು ಸಿಕ್ಕಿಕೊಂಡಿದ್ದಾರೆ - ರಾಹುಲ್ ಗಾಂಧಿ

Posted On: 27-04-2023 06:52PM

ಉಚ್ಚಿಲ : ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿ ಶಾಸಕರ ಖರೀದಿ ಬಿಜೆಪಿಯಲ್ಲಿದೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ 2ಸಾವಿರ ಕೋಟಿ ನೀಡಬೇಕಾಗಿದೆ. ಇತ್ತೀಚೆಗೆ ಕಂಟ್ರ್ಯಾಕ್ಟರ್ ಗಳು ಕರ್ನಾಟಕದ ಬಿಜೆಪಿ ಪಕ್ಷದ 40% ಕಮಿಷನ್ ಗೆ ಬೇಸತ್ತು ಪ್ರಧಾನಮಂತ್ರಿ ಗೆ ಪತ್ರ ಬರೆದಿದ್ದಾರೆ. ಧಾರ್ಮಿಕ ಮಠದಲ್ಲಿಯೂ 30% ಕಮೀಷನ್ ಇರುವುದು ದುರಂತ. ಪೋಲಿಸ್ , ಪ್ರಾಧ್ಯಾಪಕ, ಇಂಜಿನಿಯರಿಂಗ್ ನೇಮಕಾತಿ ಯಲ್ಲಿಯೂ 40% ಕಮಿಷನ್ ಇದೆ. ಈ ಹಣ ಎಲ್ಲಿ ಹೋಗುತ್ತದೆ ಅಂತ ನಾವು ಯೋಚಿಸಬೇಕಿದೆ ಎಂದು ಕಾಂಗ್ರೆಸ್ ಯುವ ನಾಯಕ ‌ರಾಹುಲ್ ಗಾಂಧಿ ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಳದ ಶಾಲಿನಿ ಡಾ. ಜಿ. ಶಂಕರ್ ತೆರೆದ ಸಭಾಭವನದಲ್ಲಿ ಮೀನುಗಾರರೊಂದಿಗೆ ನಡೆದ ಸಂವಾದವನ್ನು ಉದ್ದೇಶಿಸಿ ಮಾತನಾಡಿದರು.

ಕಾಪು : ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ರಾಶಿ ಪೂಜಾ ಮಹೋತ್ಸವ ಸಂಪನ್ನ

Posted On: 26-04-2023 10:24PM

ಕಾಪು : ಇಲ್ಲಿನ ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ರಾಶಿ ಪೂಜಾ ಮಹೋತ್ಸವವು ಬ್ರಹ್ಮಶ್ರೀ ವೇ|ಮೂ| ಕಲ್ಯ ಶ್ರೀ ಅನಂತರಾಮ ತಂತ್ರಿಯವರ ಮಾರ್ಗದರ್ಶನದಲ್ಲಿ ಮತ್ತು ಬ್ರಹ್ಮಶ್ರೀ ವೇ|ಮೂ| ಶ್ರೀ ಪಂಜ ಭಾಸ್ಕರ ಭಟ್ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಬ್ರಹ್ಮಶ್ರೀ ವೇ|ಮೂ| ಕೊರಂಗ್ರಪಾಡಿ ಶ್ರೀ ಶ್ರೀನಿವಾಸ ತಂತ್ರಿಗಳ ಸಹಕಾರದೊಂದಿಗೆ ಸಂಪನ್ನಗೊಂಡಿತು.