Updated News From Kaup

ಉಡುಪಿ : ಫಲಿಸಿದ ಹೋರಾಟ ; ನಿಖಿತಾ ಕುಟುಂಬಕ್ಕೆ ಸಾಂತ್ವಾನ ಧನ‌‌

Thumbnail
Posted On: 20 Jul 2023, 07:35 PM

ಉಡುಪಿ : ನಿಖಿತಾ ಪರ ಜರುಗಿದ ನ್ಯಾಯಯುತ ಹೋರಾಟಕ್ಕೆ ಜಯ ಲಭಿಸಿದಂತಾಗಿದೆ. ಜೋರು‌ ಮಳೆಯನ್ನು‌ ಲೆಕ್ಕಿಸಿದೆ ನ್ಯಾಯದ ಕೂಗನ್ನು ಎಬ್ಬಿಸಿದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ಉಡುಪಿ ಜಿಲ್ಲೆಯ ಸರ್ವ ಕುಲಾಲ ಸಮುದಾಯ ಸಂಘಟನೆಗಳು, ಪ್ರಜ್ಞಾವಂತ ಹೋರಾಟದ ಮನಸ್ಸುಗಳ ನಿರಂತರ ಹೋರಾಟದ ಫಲಶ್ರುತಿಯಾಗಿ ಉಡುಪಿಯ ಖಾಸಗಿ ಅಸ್ಪತ್ರೆ ನಿಖಿತಾ ಕುಟುಂಬಕ್ಕೆ ಪರಿಹಾರ ಧನವನ್ನು‌ ನೀಡಿದೆ. ಉಡುಪಿ ಜಿಲ್ಲೆಯ ಸರ್ವ ಕುಲಾಲ ಸಮುದಾಯ ಸಂಘಟನೆಗಳು ಹೋರಾಟದ ಕಾವನ್ನು ಜೀವಂತವಾಗಿ ಇರಿಸಿದವು. ಹಲವು ಮನವಿಗಳು ಜೊತೆಗೆ ಆಸ್ಪತ್ರೆಯ ಆಡಳಿತ ಮಂಡಳಿಯ ಜೊತೆಗೆ ಕುಲಾಲ ಸಮುದಾಯ ಸಂಘಟನೆಯ ನಾಯಕರು/ಸಾಮಾಜಿಕ ಹೋರಾಟಗಾರರು ನಿರಂತರ ಮಾತುಕಥೆಯನ್ನು‌‌ ನಡೆಸಿದುದರ ಪ್ರಯತ್ನವಾಗಿ ಫಲ‌ ದೊರೆಯಿತು. ವೈದ್ಯೊ ನಾರಾಯಣೀ ಹರಿ: ಸೇವಾ ನ್ಯೂನತೆಗಳಿರದೆ, ಗ ರಿಷ್ಠ ಪ್ರಯತ್ನಗಳ ಹೊರತಾಗಿಯೂ ನಿಖಿತಾಳನ್ನು ಉಳಿಸಿಕೊಳ್ಳಲಾಗಿಲ್ಲ ಎಂಬ ನೋವಿನಲ್ಲಿ ಮಾನವೀಯ ನೆಲೆಯಲ್ಲಿ ಇಪ್ಪತ್ತು ಲಕ್ಷ ಸಾಂತ್ವನ ಧನವನ್ನು ನಿಖಿತಾ ಕುಟುಂಬಕ್ಕೆ ಇಂದು ನೀಡಿದ ಉಡುಪಿ ಖಾಸಗಿ ಆಸ್ಪತ್ರೆಗೆ ಸಂಘಟನೆ ಕೃತಜ್ಞತೆ ಸಲ್ಲಿಸಿದೆ. ಖಂಡಿತಾ ‌ನಿಖಿತಾ ತಂದೆ-ತಾಯಿಗೆ ಈ ಪರಿಹಾರ ಹಣ ಮಗಳ ಸಾವಿಗೆ ಸಮಾಧಾನ ನೀಡದು. ಆದರೆ ಮಗಳಿಗಾಗಿ ಕಟ್ಟಿದ ಹೊಸಮನೆಯ ಸಾಲತೀರಿಸಲು, ಬೇರೆ ಮಕ್ಕಳಿಲ್ಲದ ಅವರ ನಾಳೆಯ ಬದುಕಿಗೆ ಪುಟ್ಟ ಆಸರೆಯಂತೂ ಖಂಡಿತಾ ಆದೀತು. ಒಂದು ನ್ಯಾಯಪರ ಹೋರಾಟ,ಸಮುದಾಯ ಸಂಘಟನೆಗಳ ಮನವಿಗಳಿಗೆ ಸಿಕ್ಕ ಜಯ. ನಿಖಿತಾ ಪರ ದನಿಮೂಡಿಸಿದ ಎಲ್ಲ ಮಾನವೀಯ ಮನಸ್ಸುಗಳಿಗೆ, ಸಂಘಟನೆಗಳಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. "ಕಾಪುವಿನ ನಿಖಿತಾ ಕುಟುಂಬದ ನೋವಿಗೆ ಸಕಾಲದಲ್ಲಿ ಸ್ಪಂದಿಸಿದ ಎಲ್ಲರಿಗೂ ಆಭಾರಿ. ಖಂಡಿತಾ ತೀರಿಹೋದ ಮಗಳನ್ನು ಮತ್ತೆ ನಮಗೆ ಮರಳಿಸಿಕೊಡಲು ಸಾಧ್ಯವಿಲ್ಲ. ಆದರೆ ಕನಿಷ್ಟ ನಿಖಿತಾ ತಂದೆ- ತಾಯಿಯ‌ ಮುಂದಿನ‌ ಜೀವನ ನಿರ್ವಹಣೆಗೆ ಈ ಹಣ ಸದ್ವಿನಿಯೋಗವಾಗಲಿ. ಕೈಜೋಡಿಸಿದ ವಿದ್ಯಾರ್ಥಿ ತಂಡಗಳಿಗೆ, ಜಿಲ್ಲಾ ಕುಲಾಲ ನಾಯಕರಿಗೆ, ಕೊನೆಗಾದರೂ ಸ್ಪಂದಿಸಿದ ಆಸ್ಪತ್ರೆಯವರಿಗೆ ನನ್ನ ಕೃತಜ್ಞತೆಗಳು." ಉದಯ್ ಕುಲಾಲ್ ಕಳತ್ತೂರು ನಿಕಟ ಪೂರ್ವ ಅಧ್ಯಕ್ಷರು ಕಾಪು ಕುಲಾಲ ಯುವ ವೇದಿಕೆ

ಕಾರ್ಕಳ : ಕರಾಟೆಯಲ್ಲಿ ನಿಟ್ಟೆಯ ಅನುಷ್ ಮತ್ತು ಆಯುಷ್ ಸಾಧನೆ

Thumbnail
Posted On: 20 Jul 2023, 05:25 PM

ಕಾರ್ಕಳ : ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟದಲ್ಲಿ ನಿಟ್ಟೆಯ ಅನುಷ್ ಅರುಣ್ ಕುಮಾರ್, ಆಯುಷ್ ಅರುಣ್ ಕುಮಾರ್ ಸಾಧನೆಗೈದಿದ್ದಾರೆ. ಅನುಷ್ ಬ್ರೌನ್ ಬೆಲ್ಟ್ ವಿಭಾಗದಲ್ಲಿ ಕುಮಿಟೆಯಲ್ಲಿ ಪ್ರಥಮ ಸ್ಥಾನ ಹಾಗೂ ಕಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಯುಷ್ ಬ್ರೌನ್ ಬೆಲ್ಟ್ ವಿಭಾಗದಲ್ಲಿ ಕುಮಿಟೆಯಲ್ಲಿ ಧ್ವಿತೀಯ ಸ್ಥಾನ ಹಾಗೂ ಕಟದಲ್ಲಿ ತೃತೀಯ ಸ್ಥಾನ ಪಡೆದು ಬೆಳ್ಳಿಯ ಪದಕ ಹಾಗೂ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಂದಿರರ ರಾಜಾಂಗಣದಲ್ಲಿ ಜುಲೈ 15, 16ರಂದು ಎರಡು ದಿನಗಳ ಕಾಲ ನಡೆದ ಮೊದಲ ಆವೃತ್ತಿಯ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ ಚಾಂಪಿಯನ್ ಶಿಪ್ ನಲ್ಲಿ ಅವರು ಈ ಸಾಧನೆಗೈದಿದ್ದಾರೆ.

ಕಾರ್ಕಳ : ಕ್ರಿಯೇಟಿವ್‌ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್‌.ಇ.ಇ.ಟಿ ಮಾಹಿತಿ ಕಾರ್ಯಗಾರ

Thumbnail
Posted On: 20 Jul 2023, 05:11 PM

ಕಾರ್ಕಳ : ಕ್ರಿಯೇಟಿವ್‌ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್‌.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಜುಲೈ 17 ಮತ್ತು 19 ರಂದು ಹಮ್ಮಿಕೊಳ್ಳಲಾಗಿತ್ತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊಫೆಸರ್‌ ರಾಜ್‌ ಗಣೇಶ್‌ ಕಾಮತ್‌ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್‌ ಅಕೌಂಟ್‌ ಕೋರ್ಸ್‌ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್‌ ನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಸಿ.ಎಸ್.ಇ.ಇ.ಟಿ ಬಗ್ಗೆ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭು ವಿದ್ಯಾರ್ಥಿಗಳಿಗೆ ಕಂಪೆನಿ ಸೆಕ್ರೇಟಿಯ ಕಾರ್ಯವೈಖರಿ ಹಾಗೂ ಅಗತ್ಯತೆಗಳ ಬಗ್ಗೆ ವಿವರಿಸಿದರು. ಸಂಸ್ಥೆಯ ಸಂಸ್ಥಾಪಕರದ ಅಶ್ವತ್ ಎಸ್.ಎಲ್‌ ಹಾಗೂ ಗಣಪತಿ ಭಟ್‌ ಕೆ.ಎಸ್‌ ವಿದ್ಯಾರ್ಥಿಗಳಿಗೆ ಕೋರ್ಸ್‌ ನ ಮಹತ್ವವನ್ನು ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರಾಘವೇಂದ್ರ ಬಿ.ರಾವ್‌, ಉಮೇಶ್‌, ಚಂದ್ರಕಾಂತ್‌ , ಜ್ಞಾನೇಶ್‌ ಕೋಟ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಾನ್ವಿ ಎಸ್‌.ರಾವ್‌ ಕಾರ್ಯಕ್ರಮ ನಿರೂಪಿಸಿದರು ಹಾಗೂ ನಮನ್‌ ವಂದಿಸಿದರು.

ಕಾಪು : ಹಡೀಲು ಭೂಮಿಗೆ ಕೃಷಿಯ ಜೀವಂತಿಕೆ ನೀಡಿದ ದಾರು ಶಿಲ್ಪಿ ವೈ. ಪ್ರಶಾಂತ್ ಆಚಾರ್ಯ

Thumbnail
Posted On: 20 Jul 2023, 05:04 PM

ಕಾಪು : ಸ್ವಂತ ಕೃಷಿ ಭೂಮಿಯನ್ನು ಹೊಂದಿಲ್ಲದ ಕಾಪು ತಾಲೂಕಿನ ಎಲ್ಲೂರು ಗ್ರಾಮದ ದಾರು ಶಿಲ್ಪಿ ವೈ. ಪ್ರಶಾಂತ್ ಆಚಾರ್ಯ ಹಡೀಲು ಗದ್ದೆಯನ್ನು ಎರವಲು ಪಡೆದುಕೊಂಡು ಭತ್ತದ ಬೇಸಾಯವನ್ನು ಮಾಡುವ ಮೂಲಕ ಕೃಷಿ ಸಂಪತ್ತಿನ ಒಡೆಯನಾಗಿ ಬೆಳೆಯುತ್ತಿದ್ದಾರೆ. ಯುವಕರು ಕೃಷಿಯಿಂದ ವಿಮುಕ್ತರಾಗುತ್ತಿರುವ ಈ ಕಾಲ ಘಟ್ಟದಲ್ಲಿ ಈ ಯುವಕನ ಕೃಷಿ ಕಾಯಕ ನಿಜಕ್ಕೂ ಮಾದರಿಯಾಗಿದ್ದು, ಈ ಬಾರಿ ಸುಮಾರು 4 ಎಕರೆಗೂ ಮಿಕ್ಕಿದ ಗದ್ದೆಯಲ್ಲಿ ಭತ್ತದ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಎಂಒ4 ಭತ್ತದ ತಳಿ ಬಳಸುತ್ತಿದ್ದು ಸ್ಥಳೀಯ 26 ಮಹಿಳಾ ಕೃಷಿ ಕೂಲಿ ಕಾರ್ಮಿಕರಿಂದ ನಾಟಿ ಕಾರ್ಯ ನಡೆದಿದೆ. ತಾನು ಎರವಲು ಪಡೆದ ಗದ್ದೆಯಲ್ಲಿ ಎಂಒ 4 ಭತ್ತದ ತಳಿಯನ್ನು ಬಿತ್ತನೆ ಮಾಡಿ ಸ್ವತಃ ಭತ್ತದ ಸಸಿಯನ್ನು ಸಿದ್ಧಪಡಿಸಿಕೊಂಡು ಇದೀಗ 22 ದಿನಗಳ ನೇಜಿಯನ್ನು ನಾಟಿ ಮಾಡಲು ತೊಡಗಿಕೊಂಡಿರುವ ಯುವ ಕೃಷಿಕ ಪ್ರಶಾಂತ್ ಅವರು ಪಡುಬಿದ್ರಿಯ ಕಂಚಿನಡ್ಕ, ಎಲ್ಲೂರಿನ ಪೆಜತ್ತಕಟ್ಟೆ, ಬಂಡಸಾಲೆ, ಮುದರಂಗಡಿಯ ವಿದ್ಯಾನಗರ ಪ್ರದೇಶದ ಮಹಿಳೆಯರ ನಾಲ್ಕು ತಂಡಗಳನ್ನು ಬಳಸಿಕೊಂಡು ಒಟ್ಟು 26 ಕೃಷಿ ಕೂಲಿ ಮಹಿಳಾ ಕಾರ್ಮಿಕರು ನೇಜಿ ತೆಗೆದು ನಾಟಿ ಮಾಡುವ ಕೆಲಸ ಕಾರ್ಯದಲ್ಲಿ ಬಳಸಿಕೊಂಡಿರುತ್ತಾರೆ. ದಿನವಹಿ ಊಟ ಚಹಾ ತಿಂಡಿ ವಾಹನದ ಸೌಕರ್ಯದೊಂದಿಗೆ ರೂ. 400 ಕೂಲಿಯನ್ನು ಪ್ರತಿಯೋರ್ವ ಮಹಿಳಾ ಕೃಷಿ ಕಾರ್ಮಿಕರಿಗೆ ನೀಡುವ ಮೂಲಕ ಎರಡು ದಿನಗಳಲ್ಲಿ 4 ಎಕರೆ ಗದ್ದೆಯ ನಾಟಿಯನ್ನು ಪೂರೈಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಕೃಷಿ ಚಟುವಟಿಕೆಗೆ ನೆರೆ ಹೊರೆಯ ಹಿರಿಯ ನುರಿತ ಕೃಷಿಕರಾದ ಹರೀಶ್ ಪೂಜಾರಿ, ಶಂಕರ್ ಮತ್ತಿತರರ ಮಾರ್ಗದರ್ಶನದೊಂದಿಗೆ ಸಹೋದರರು ಸಹಿತ ಮನೆಮಂದಿಯೂ ಕೈ ಜೋಡಿಸುವ ಮೂಲಕ ಯಶಸ್ವಿ ಕೃಷಿಕನಾಗಿ ಬೆಳೆದು ಬಂದಿದ್ದಾರೆ. ಕಳೆದ 7 ವರ್ಷಗಳ ಹಿಂದೆ ಕೃಷಿಯ ಬೆನ್ನತ್ತಿದ್ದ ಈ ದಾರು ಶಿಲ್ಪಿ ಪ್ರಶಾಂತ್ ಆಚಾರ್ಯ ಅವರು ಈ ಬಾರಿ ಟ್ರಾಕ್ಟರ್ ಮೂಲಕ ಉಳುಮೆ ನಡೆಸಿದ್ದು, ಸುಮಾರು ರೂಪಾಯಿ ಐವತ್ತು ಸಾವಿರದಷ್ಟು ಖಚರ್ುವೆಚ್ಚ ಭರಿಸಿದ್ದು, ದುಪ್ಪಟ್ಟು ಲಾಭದ ನಿರೀಕ್ಷೆಯನ್ನು ಹೊಂದಿರುತ್ತಾರೆ. ಮಳೆಯನ್ನೇ ಅವಲಂಭಿಸಿ ಕೃಷಿ ಚಟುವಟಿಕೆ ನಡೆಸಲಾಗುತ್ತಿದ್ದು, ಮಳೆ ನೀರು ಕಡಿಮೆಯಾದಲ್ಲಿ ಸಮೀಪದಲ್ಲಿ ಹರಿಯುವ ನೀರಿನ ತೋಡಿನಿಂದ ನೀರನ್ನು ಬಳಸುವುದಾಗಿ ಮಾಹಿತಿಯನ್ನು ಹೊಸದಿಗಂತಕ್ಕೆ ನೀಡಿದ್ದು, ಕೃಷಿಗೆ ಪ್ರೋತ್ಸಾಹ ನೀಡುತ್ತಿರುವ ಗದ್ದೆಯ ಮಾಲಕರು, ಹಿರಿಯ ಕೃಷಿಕರು, ಮನೆಮಂದಿಯ ಸಹಕಾರವನ್ನು ಸ್ಮರಿಸುತ್ತಿದ್ದು, ಲಭ್ಯ ಅವಕಾಶದಡಿ ಮತ್ತಷ್ಟು ಹಡೀಲು ಭೂಮಿಯನ್ನು ಕೃಷಿಗೆ ಬಳಸಿಕೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಉಡುಪಿ : ಜಿಲ್ಲೆಯಿಂದ ಕೆಎಸ್ಆರ್‌ಟಿಸಿ ಬಸ್ಸುಗಳ ಹೆಚ್ಚಿನ ವ್ಯವಸ್ಥೆ ಸರಕಾರ ಮಾಡಬೇಕು : ಯೋಗೀಶ್ ವಿ ಶೆಟ್ಟಿ

Thumbnail
Posted On: 20 Jul 2023, 04:45 PM

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್ಆರ್‌ಟಿಸಿ ಬಸ್ಸುಗಳು ಮಂಗಳೂರು ಮತ್ತು ಪುತ್ತೂರು ವಿಭಾಗಗಳಲ್ಲಿ ಮತ್ತು ಇತರೆಡೆ ಓಡಾಡುತ್ತಿದ್ದು, ಸಾರ್ವಜನಿಕರಿಗೆ ತುಂಬಾ ಉಪಯುಕ್ತವಾಗಿರುತ್ತದೆ. ಆದರೆ ಉಡುಪಿ ಜಿಲ್ಲೆಯಿಂದ ಕೆಲವೇ ಬಸ್ಸುಗಳು ಓಡಾಡುತ್ತಿದ್ದು ಉಡುಪಿ ಜಿಲ್ಲೆಯ ಪ್ರಯಾಣಿಕರು ಅವಕಾಶ ವಂಚಿತರಾಗಿದ್ದು, ಕೆ ಎಸ್ ಆರ್ ಟಿ ಸಿ ಬಸ್ ನಿಯಮಿತವಾಗಿ ಉಡುಪಿ ಮಂಗಳೂರು, ಮಂಗಳೂರು ಉಡುಪಿ ನೇರ ಲಿಮಿಟೆಡ್ ಸ್ಟಾಪುಗಳ ವ್ಯವಸ್ಥೆಯೊಂದಿಗೆ ಪ್ರಾರಂಭಿಸಿದರೆ ಮಹಿಳೆಯರಿಗೆ ಉಚಿತ ಪ್ರಯಾಣ ಹಾಗೂ ಸಾರ್ವಜನಿಕರಿಗೆ ಅತಿಯಾದ ಉಪಯೋಗವಾಗುತ್ತದೆ. ಆದ್ದರಿಂದ ಉಡುಪಿ ಮಂಗಳೂರು, ವ್ಯವಸ್ಥೆಯನ್ನು ಉಡುಪಿ ವಲಯದಿಂದ ಕೆ ಎಸ್ ಆರ್ ಟಿ ಸಿ ನೇರ ಬಸ್ಸುಗಳ ಸಂಚಾರಗಳನ್ನು ಮತ್ತು ಇತರಡೆಗೆ ಸಂಚರಿಸುವ ವ್ಯವಸ್ಥೆ ಮಾಡುವರೆ ಸರಕಾರವನ್ನು ಒತ್ತಾಯಿಸುತ್ತಿದ್ದೇನೆ ಎಂದು ಉಡುಪಿ ಜಿಲ್ಲೆ ಜನತಾದಳ (ಜಾತ್ಯತೀತ) ಅಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

ಉಡುಪಿ : ಟ್ರಿನಿಟಿ ಸೆಂಟ್ರಲ್ ಸ್ಕೂಲ್ - ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ ಶ್ರೀನಿವಾಸ್ ಜಿ ಆಯ್ಕೆ

Thumbnail
Posted On: 20 Jul 2023, 04:41 PM

ಉಡುಪಿ : ಟ್ರಿನಿಟಿ ಸೆಂಟ್ರಲ್ ಸ್ಕೂಲ್ ಇದರ ನೂತನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ ಶ್ರೀನಿವಾಸ್ ಜಿ ಯವರು ಶಾಲೆಯಲ್ಲಿ ನಡೆದ ಮಹಾಸಭೆಯಲ್ಲಿ ನಡೆದ ಚುನಾವಣೆಯಲ್ಲಿ ಬಹುಮತದಿಂದ ಚುನಾಯಿತರಾಗಿದ್ದಾರೆ. ಕಾಯ೯ದಶಿ೯ಯಾಗಿ ಅಶ್ವಿತ ಪುಟಾ೯ಡೊ, ಜೊತೆ ಕಾಯ೯ದಶಿ೯ಯಾಗಿ ದೀಪ್ತಿ ಸುವಣ೯, ಕೋಶಾಧಿಕಾರಿಯಾಗಿ ಸುಧೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಡೊಮಿನಿಕ್ ಸುನಿಲ್ ಲೋಬೋ ನಡೆಸಿಕೊಟ್ಟರು. ಈ ಸಂದಭ೯ ಉಪ ಮುಖ್ಯ ಶಿಕ್ಷಕ ರವಿರಾಜೇಶ್ ಸೆರಾವೋ, ಅಕಾಡೆಮಿಕ್ ಕೋ. ಅಡಿ೯ನೇಟರ್ ಮ್ಯಾಗಿ ಲೂವೀಸ್ ಸಂಘದ ಪೂವಾ೯ಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಕಾರ್ಕಳ : ಕ್ರಿಯೇಟಿವ್‌ ಕಾಲೇಜಿನ ಪ್ರಣವ್‌ ಪಿ ಸಂಜಿ ನಾಟಾ ಪರೀಕ್ಷೆಯಲ್ಲಿ ರಾಜ್ಯಕ್ಕೆ 28 ನೇ ರ‍್ಯಾಂಕ್‌

Thumbnail
Posted On: 19 Jul 2023, 07:51 PM

ಕಾರ್ಕಳ : ದೇಶಾದಾದ್ಯಂತ ಆರ್ಕಿಟೆಕ್ಚರ್ ಕೋರ್ಸ್‌ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸಲಾದ ನಾಟಾ (NATA) ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಯಾದ ಪ್ರಣವ್‌ ಪಿ ಸಂಜಿ ಇವರಿಗೆ ರಾಜ್ಯ ಮಟ್ಟದ 28 ನೇ ರ‍್ಯಾಂಕ್‌, ದೀಕ್ಷಾ ಪಾಂಡು 42 ನೇ ರ‍್ಯಾಂಕ್‌, ವರುಣ್‌ ಜಿ ನಾಯಕ್‌ 67 ನೇ ರ‍್ಯಾಂಕ್‌ ಲಭಿಸಿದೆ. ಉಳಿದಂತೆ ಸಹನಾ ಎನ್‌ ಸಿ 104 ನೇ ರ‍್ಯಾಂಕ್‌, ನಾಗಮನಸ್ವಿನಿ ಕೆ 134 ನೇ ರ‍್ಯಾಂಕ್‌, ಧರಿನಾಥ್‌ ಬಸವರಾಜ್‌ ಕುಂಬಾರ್‌ 138 ನೇ ರ‍್ಯಾಂಕ್‌, ದೀಪಕ್‌ ಕೆ ಎಸ್‌ 171 ನೇ ರ‍್ಯಾಂಕ್‌, ಸಂತೃಪ್ತಿ 209 ನೇ ರ‍್ಯಾಂಕ್‌, ಶ್ರವಣ್‌ ಎಸ್‌ 212 ನೇ ರ‍್ಯಾಂಕ್‌, ಅನ್ವಿತಾ ಕೆ 227 ನೇ ರ‍್ಯಾಂಕ್‌, ಹೇಮಂತ್‌ ಗೌಡ ಎಸ್‌ ಆರ್‌ 229 ನೇ ರ‍್ಯಾಂಕ್‌, ಸ್ಪರ್ಶ ಪಾರ್ಶ್ವನಾಥ್‌ 235 ನೇ ರ‍್ಯಾಂಕ್‌, ಅನುಷಾ ಐನಾಪುರ್‌ 254 ನೇ ರ‍್ಯಾಂಕ್‌, ಕುಶಾಲ್‌ ಸೂರ್ಯ ಹೆಚ್‌ ಎಂ 259 ನೇ ರ‍್ಯಾಂಕ್‌, ಸ್ವಸ್ತಿಕ್‌ ಕೃಷ್ಣಮೂರ್ತಿ ಭಟ್‌ 273 ನೇ ರ‍್ಯಾಂಕ್‌, ಪೂಜಾ ಟಿ ಎಸ್‌ 274 ನೇ ರ‍್ಯಾಂಕ್‌, ಕಶಿಶ್‌ ಎಸ್‌ ಪಿ 292 ನೇ ರ‍್ಯಾಂಕ್‌, ಗುರುಲಿಂಗಯ್ಯ ಸುರೇಶ್‌ ಕಂಬಲಿಮತ್‌ 300 ನೇ ರ‍್ಯಾಂಕ್‌, ಚಿರಾಗ್‌ ವಾಸು ಶೆಟ್ಟಿ 332 ನೇ ರ‍್ಯಾಂಕ್‌, ಸಂಜಯ್‌ ಎಸ್‌ 335 ನೇ ರ‍್ಯಾಂಕ್‌, ಮುಕ್ತಿ ಜಿ 376 ನೇ ರ‍್ಯಾಂಕ್‌, ಬೆನೇಶ್‌ ಗೌಡ ಕೆ ಎ 391 ನೇ ರ‍್ಯಾಂಕ್‌, ತನುಶ್ರೀ ಜೆ ವಿ 434 ನೇ ರ‍್ಯಾಂಕ್‌, ಪಂಕಜ್‌ ಜೈ ಪ್ರಸಾದ್‌ 447 ನೇ ರ‍್ಯಾಂಕ್‌, ರಕ್ಷಿತಾ ಹೆಚ್‌ ಎಸ್‌ 457 ನೇ ರ‍್ಯಾಂಕ್‌, ಹರಿಪ್ರಸಾದ್‌ ಡಿ ಎಂ 470 ನೇ ರ‍್ಯಾಂಕ್‌, ದೀಕ್ಷಾ ಹೆಚ್ ಬಿ 480 ನೇ ರ‍್ಯಾಂಕ್‌, ಪನ್ವಿತ್‌ ಜಿ ಎನ್‌ 549 ನೇ ರ‍್ಯಾಂಕ್‌, ನೇಹಾ ಮಯ್ಯಾ 553 ನೇ ರ‍್ಯಾಂಕ್‌, ಚಿನ್ಮಯ್‌ ಸುರೇಶ್‌ ಶೆಟ್ಟಿ 585 ನೇ ರ‍್ಯಾಂಕ್‌ ಮತ್ತು ಯಶವಂತ್‌ ಆರ್‌ ಗೌಡ 696 ನೇ ರ‍್ಯಾಂಕ್‌ ಗಳಿಸಿರುತ್ತಾರೆ. NATA ಪರೀಕ್ಷೆಗೆ ಹಾಜರಾದ ಎಲ್ಲಾ 31 ವಿದ್ಯಾರ್ಥಿಗಳೂ ತೇರ್ಗಡೆಯಾಗುವುದರ ಜೊತೆಗೆ ರಾಜ್ಯ ಮಟ್ಟದ 700 ರ ಒಳಗಿನ ರ‍್ಯಾಂಕ್‌ ಗಳಿಸಿರುವುದು ವಿಶೇಷ. ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಸಾಧಕ ವಿದ್ಯಾರ್ಥಿಗಳನ್ನು ಕ್ರಿಯೇಟಿವ್‌ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಹಾಗೂ NATA ಸಂಯೋಜಕರಾದ ರಕ್ಷಿತ್‌, ಸುಮಂತ್‌ ದಾಮ್ಲೆ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಜುಲೈ 25 : ಕಾಪುವಿನ ಮೂರು ಮಾರಿಗುಡಿಗಳಲ್ಲಿ ಕಾಲಾವಧಿ ಆಟಿ ಮಾರಿಪೂಜೆ

Thumbnail
Posted On: 19 Jul 2023, 07:40 PM

ಕಾಪು : 2023ರ ಜುಲೈ 25ರ ಮಂಗಳವಾರ ಮತ್ತು ಜುಲೈ 25ರ ಬುಧವಾರ ಕಾಪುವಿನ ಹಳೆ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯಲ್ಲಿ ಕಾಲಾವಧಿ ಆಟಿ ಮಾರಿಪೂಜೆಯು ಯಥಾಪ್ರಕಾರ ನಡೆಯಲಿದೆ ಎಂದು ತಿಳಿಸಿದ್ದಾರೆ.

ಜುಲೈ 28 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ - ತಾಮ್ರದ ಶೀಟ್ ಗಳ ಬಹಿರಂಗ ಏಲಂ

Thumbnail
Posted On: 19 Jul 2023, 07:37 PM

ಕಾಪು : ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಧೀನದ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶ್ರೀ ದೇವಳದ ಹಳೆಯ ಗರ್ಭಗುಡಿಯ ತಾಮ್ರದ ಶೀಟ್ ಗಳನ್ನು ಬಹಿರಂಗ ಏಲಂ ಜುಲೈ 28, ಶುಕ್ರವಾರದಂದು ಬೆಳಿಗ್ಗೆ 11ಗಂಟೆಗೆ ಸರಿಯಾಗಿ ಶ್ರೀ ದೇವಳದಲ್ಲಿ ನಡೆಯಲಿದೆ. ಆಸಕ್ತರು ಈ ಏಲಂನಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ಶ್ರೀ ದೇವಳದ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದರು.

ಎಲ್ಲೂರು : ಮೂವತ್ತೈದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಂದು ಲಕ್ಷದ ಹತ್ತುಸಾವಿರ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

Thumbnail
Posted On: 19 Jul 2023, 07:27 PM

ಎಲ್ಲೂರು : ಅಭಿವೃದ್ಧಿಯ ಸಾಧನೆಯಲ್ಲಿ ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದುದನ್ನು ಆಧಾರವಾಗಿಟ್ಟುಕೊಂಡು ಯಥಾಸಾಧ್ಯ ಪ್ರವೃತ್ತರಾಗಿ ಮಹತ್ತನ್ನು ಸಾಧಿಸಿರಿ ಎಂದು ಬೆಂಗಳೂರಿನ 'ಟೆಕ್ ಸೆಲ್ 'ಅಟೋಮೇಶನ್ ಸಂಸ್ಥೆಯ ವ್ಯವಸ್ಥಾಪಕ‌ ನಿರ್ದೇಶಕ ಆರ್.ಆರ್.ಹರೀಶ ರಾವ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಸ್ಥಳೀಯ ಶ್ರೀ ಪಂಚಾಕ್ಷರಿ ಯಕ್ಷಗಾನ ಮಂಡಳಿಯು ಬೆಂಗಳೂರಿನ "ಟೆಕ್ ಸೆಲ್" ಅಟೋಮೇಶನ್ ಪ್ರೈ.ಲಿ.ಇವರ ಸಹಯೋಗದಲ್ಲಿ ಎಲ್ಲೂರು ಪರಿಸರದ ಹತ್ತು ಕನ್ನಡ ಮಾಧ್ಯಮ ಶಾಲೆಗಳ ಏಳನೇ ತರಗತಿ,ಹತ್ತನೇ ತರಗತಿ ಹಾಗೂ ಪದವಿ ಪೂರ್ವ ತರಗತಿಗಳ ಮೂವತ್ತೈದು ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಒಂದು ಲಕ್ಷದ ಹತ್ತುಸಾವಿರ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಿ ಮಾತನಾಡುತ್ತಿದ್ದರು. ಬೆಳಪು ಕಾನ ಬ್ರಹ್ಮಲಿಂಗೇಶ್ವರ ದೇವಸ್ಥಾನದ‌ಲ್ಲಿ‌, ಅವರ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೂಪಾ ಹರೀಶ ರಾವ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಪಂಚಾಕ್ಷರೀ ಯಕ್ಷಗಾನ ಮಂಡಳಿಯ ಅಧ್ಯಕ್ಷ ಕೆ.ಶ್ರೀನಿವಾಸ ಉಪಾಧ್ಯಾಯ ವಹಿಸಿದ್ದರು.ಕುಂಜೂರು ದುರ್ಗಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಮನೆ ದೇವರಾಜ ರಾವ್,ಕಾನ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಪಟೇಲ್ ಪ್ರಕಾಶ ರಾವ್,ಬೆಳಪು ವಲಯ ಬ್ರಾಹ್ಮಣ ಸಂಘದ ಅಧ್ಯಕ್ಷ ನಡಿಮನೆ ವಾದಿರಾಜ ರಾವ್ ಅವರು ಭಾಗವಹಿಸಿದ್ದರು. ರಾಘವೇಂದ್ರ ರಾವ್ ಎಲ್ಲೂರು ಸ್ವಾಗತಿಸಿದರು. ಕೆ.ಎಲ್.ಕುಂಡಂತಾಯ ಪ್ರಸ್ತಾವಿಸಿದರು. ಎಲ್ಲೂರು ಗಣೇಶ ರಾವ್ ಕಾರ್ಯಕ್ರಮ ನಿರ್ವಹಿಸಿದರು. ಅನಂತ ಪದ್ಮನಾಭ ಜೆನ್ನಿ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲೂರು ಶ್ರೀ ವಿಶ್ವೇಶ್ವರ ದೇವಳದ ಅರ್ಚಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವೇ.ಮೂ .ಗೋಪಾಲ ಭಟ್, ವೇ.ಮೂ.ಶ್ರೀ ಕೃಷ್ಣಮೂರ್ತಿ ಭಟ್, ಹಾಗೂ ವೇ.ಮೂ.ಸುಬ್ರಾಯ ಭಟ್ ಅವರನ್ನು ಹಾಗೂ ಶ್ರೀ ಬಡಿಕೇರಿ ಹರಿದಾಸ ರಾವ್ ಅವರನ್ನು ಅವರವರ ಮನೆಗೆ ಹೋಗಿ ಸಮ್ಮಾನಿಸಲಾಯಿತು.