Updated News From Kaup
ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ವಿವಿದೆಡೆ ಮತಯಾಚನೆ
Posted On: 26-04-2023 06:35PM
ಕಾಪು : ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಶಾಸಕ ಲಾಲಾಜಿ ಮೆಂಡನ್ ಜೊತೆಗೂಡಿ ತೆಂಕ ಗ್ರಾಮ ಪಂಚಾಯತ್, ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ಮಾಡಿ ಮತಯಾಚಿಸಿದರು.
ಪಡುಬಿದ್ರಿ : ಬಟ್ಟೆ ಅಂಗಡಿಗೆ ನುಗ್ಗಿದ ಕಳ್ಳರು ; ಬಟ್ಟೆ, ನಗದು ಕಳವು
Posted On: 26-04-2023 06:22PM
ಪಡುಬಿದ್ರಿ : ಇಲ್ಲಿನ ಬಟ್ಟೆ ಅಂಗಡಿಯೊಂದರಲ್ಲಿ ಬಟ್ಟೆ, ನಗದು ಕಳವುಗೈದ ಪ್ರಕರಣ ನಡೆದಿದ್ದು ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು ತಾಲೂಕು ಪರಿವಾರ ನಾಯಕ ಸಂಘದ ನೂತನ ಅಧ್ಯಕ್ಷರಾಗಿ ನೀಲಾನಂದ ನಾಯ್ಕ್ ಆಯ್ಕೆ
Posted On: 26-04-2023 02:25PM
ಕಾಪು : ತಾಲೂಕು ಪರಿವಾರ ನಾಯಕ ಸಂಘದ ನೂತನ ಅಧ್ಯಕ್ಷರಾಗಿ ನೀಲಾನಂದ ನಾಯ್ಕ್ ಆಯ್ಕೆ ಆಗಿದ್ದಾರೆ.
ಮತಯಾಚನೆಯೊಂದಿಗೆ ದೈವ-ದೇವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ
Posted On: 26-04-2023 02:17PM
ಕಾಪು : ಭಾರತೀಯ ಜನತಾ ಪಾರ್ಟಿಯ ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಇಂದು ಎರ್ಮಾಳು ಜನಾರ್ಧನ ದೇವಸ್ಥಾನ, ವೀರಭದ್ರ ದೇವಸ್ಥಾನ ಎರ್ಮಾಳು, ನಡಿಯಾಳು ಧೂಮಾವತಿ ದೇವಸ್ಥಾನ ಹಾಗೂ ವಿವಿದೆಡೆ ತೆರಳಿ ದೈವ -ದೇವರ ಆಶೀರ್ವಾದ ಪಡೆದರು.
ನಾಳೆ : ಉಚ್ಚಿಲದಲ್ಲಿ ಮೀನುಗಾರರ ಜೊತೆ ರಾಹುಲ್ ಗಾಂಧಿ ಸಂವಾದ
Posted On: 26-04-2023 12:52PM
ಕಾಪು : ಕರಾವಳಿ ಕರ್ನಾಟಕದಲ್ಲಿ ಮೀನುಗಾರಿಕೆ ವೃತ್ತಿಯು ಪ್ರಮುಖವಾಗಿದ್ದು ಈ ವೃತ್ತಿಯಲ್ಲಿ ಮೊಗವೀರರು ಸೇರಿದಂತೆ ವಿವಿಧ ಜಾತಿಗಳು, ಧರ್ಮಗಳ ಜನರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ರಾಜ್ಯದ ಮೀನುಗಾರರ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿ ಆ ಮೂಲಕ ಅವರೆಲ್ಲರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿಯವರು ಎಪ್ರಿಲ್ 27 ರಂದು ಉಚ್ಚಿಲ ಮಹಾಲಕ್ಷ್ಮಿ ದೇವಳದ ಸಭಾಂಗಣದಲ್ಲಿ ನಡೆಯಲಿರುವ ಮೀನುಗಾರರ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಪು ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ತಿಳಿಸಿದರು.
ಎಪ್ರಿಲ್ 27 : ರಾಹುಲ್ ಗಾಂಧಿ ಉಚ್ಚಿಲಕ್ಕೆ; ಮೀನುಗಾರರ ಸಮಾವೇಶ ; ಮೀನುಗಾರರೊಂದಿಗೆ ಸಂವಾದ ; ಎಸ್ ಪಿ ಪರಿಶೀಲನೆ
Posted On: 25-04-2023 07:57PM
ಉಚ್ಚಿಲ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲಕ್ಕೆ ಎಪ್ರಿಲ್ 27 ರಂದು ಬರಲಿದ್ದು ಮೀನುಗಾರರ ಸಮಾವೇಶ ಅವರ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಕಾಪು : ಈ ಬಾರಿಯು ಬಿಜೆಪಿ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ - ಕೋಟ ಶ್ರೀನಿವಾಸ ಪೂಜಾರಿ
Posted On: 25-04-2023 07:51PM
ಕಾಪು : ಮಹಾಪ್ರಚಾರ ಅಭಿಯಾನದ ಅಂಗವಾಗಿ ಕಾಪು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗಲಿದೆ. ಶಾಸಕ ಲಾಲಾಜಿ ಆರ್ ಮೆಂಡನ್ ರ ಅಭಿವೃದ್ಧಿ ಕಾರ್ಯ, ನಮ್ಮ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ರವರ ಸಮಾಜಸೇವೆ ನಮ್ಮ ಪಕ್ಷಕ್ಕೆ ಶಕ್ತಿ ನೀಡಿದೆ. ಜಾತಿ ಧರ್ಮ ನೋಡದೆ ಅಭಿವೃದ್ಧಿ ಮಾಡುವ, ಬಡವರ ಪರವಾಗಿ ಕೆಲಸ ಮಾಡುವ ಸುರೇಶ್ ಶೆಟ್ಟಿ ಗುರ್ಮೆಯವರು ಈ ಬಾರಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಹಾಪ್ರಚಾರ ಅಭಿಯಾನದ ಅಂಗವಾಗಿ ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಇನ್ನಂಜೆ : ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ಕುಮಾರಿ ಅನುಶ್ರೀ ಮತ್ತು ಸಾಧಕರಿಗೆ ಸನ್ಮಾನ
Posted On: 25-04-2023 09:27AM
ಇನ್ನಂಜೆ : ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 593 ಅಂಕಗಳನ್ನು ಪಡೆದು, ರಾಜ್ಯದಲ್ಲಿ 5ನೇ ಸ್ಥಾನಗಳಿಸಿದ ಎಸ್.ವಿ.ಎಚ್. ಪದವಿಪೂರ್ವ ಕಾಲೇಜು ಇನ್ನಂಜೆ ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಅನುಶ್ರೀ ಇವರನ್ನು ಸಂಸ್ಥೆಯ ಪೋಷಕರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಸನ್ಮಾನಿಸಿದರು. ಈ ಸಂದರ್ಭ ಮಾತನಾಡಿದ ಅವರು ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ಪಡೆದ ಶಿಕ್ಷಣ ಮತ್ತು ಮೌಲ್ಯಗಳನ್ನು ಜೀವನ ಪರ್ಯಂತ ಅನುಸರಿಸಿ ಶ್ರೇಷ್ಠ ಸಾಧಕಳಾಗಬೇಕು ಎಂದು ಹಾರೈಸಿದರು.
ಪಡುಬಿದ್ರಿ : ಕಂಚಿನಡ್ಕದಲ್ಲಿ ಬಿಜೆಪಿ ಸೇರ್ಪಡೆ, ಕಾರ್ಯಕರ್ತರ ಸಭೆ
Posted On: 24-04-2023 10:55PM
ಪಡುಬಿದ್ರಿ : ಇಲ್ಲಿನ ಗ್ರಾ.ಪಂ ವ್ಯಾಪ್ತಿಯ ಕಂಚಿನಡ್ಕದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ಸೋಮವಾರ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮತ್ತು ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಉಪಸ್ಥಿತಿಯಲ್ಲಿ ನಡೆಯಿತು.
ಕಾಪು : ಇಬ್ಬರು ಪಕ್ಷೇತರರಿಂದ ನಾಮಪತ್ರ ವಾಪಾಸ್ ; 5 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ
Posted On: 24-04-2023 08:47PM
ಕಾಪು : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಇಂದು ಕಾಪು ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಇಬ್ಬರು ಪಕ್ಷೇತರರು ನಾಮಪತ್ರ ವಾಪಾಸ್ ಪಡೆದಿದ್ದಾರೆ.
