Updated News From Kaup
ಪಡುಬಿದ್ರಿ : ಆಟಿ ಅಮಾವಾಸ್ಯೆಯ ಕಷಾಯ ವಿತರಣೆ
Posted On: 17 Jul 2023, 05:44 PM
ಪಡುಬಿದ್ರಿ : ಇಲ್ಲಿನ ಸಾಯಿ ಆರ್ಕೇಡ್ ನಲ್ಲಿ ಸಾರ್ವಜನಿಕರಿಗೆ ಆಟಿ ಅಮಾವಾಸ್ಯೆಯ ಕಷಾಯ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಹಿರಿಯ ತುಳು ಜಾನಪದ ವಿದ್ವಾಂಸರಾದ ಸದಾನಂದ ಪಿ.ಕೆ, ಆಷಾಢ ಮಾಸದ (ಆಟಿ ಅಮಾವಾಸ್ಯೆ) ಹಾಲೆ ಮರದ ಕೆತ್ತೆಯನ್ನು ನಡುರಾತ್ರಿ ವಿವಸ್ತ್ರವಾಗಿ ಹೋಗಿ ಕಲ್ಲಿನಿಂದ ಕೆತ್ತಿ ತಂದು ಮೇಲಿನ ತೊಗಟೆಯನ್ನು ತೆಗದು , ಗುದ್ದಿ ರಸ ತೆಗದು ಆ ಮೇಲೆ ಬೆಳ್ಳುಳ್ಳಿ , ಕರಿ ಮೆಣಸು ಮತ್ತು ಓಮವನ್ನು ಸೇರಿಸಿ ಅದನ್ನು ಸರಿಯಾದ ರೀತಿಯಲ್ಲಿ ಹುರಿದು, ಕಷಾಯ ದಲ್ಲಿರುವ ಶೀತದ ಅಂಶವನ್ನು ತೆಗೆಯುವ ಉದ್ದೇಶ ದಿಂದ ಕಾಯಿಸಿದ ಬಿಳಿ ಬೋರ್ಗಲ್ಲನ್ನು ಕಷಾಯಕ್ಕೆ ಹಾಕಿ ನಂತರ ತೆಗೆದು ತಯಾರಿಸುವ ಕಷಾಯವೇ ಆಟಿ ಅಮಾವಾಸ್ಯೆ ಕಷಾಯ ಆಗಿದೆ ಎಂದರು. ಈ ಸಂದರ್ಭದಲ್ಲಿ ಗಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಸದಸ್ಯೆ ವಿದ್ಯಾಶ್ರೀ , ಹೆಜಮಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಪ್ರಾಣೇಶ್ ಹೆಜಮಾಡಿ, ಪಡುಬಿದ್ರಿ ರೋಟರಿ ನಿಯೋಜಿತ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಹಿತೇಶ್ ಪಡುಬಿದ್ರಿ, ಶೀಲಾ ಪಡುಬಿದ್ರಿ ಉಪಸ್ಥಿತರಿದ್ದರು.
ಪಲಿಮಾರು : ಹೊೖಗೆ ಫ್ರೆಂಡ್ಸ್ ವತಿಯಿಂದ ನಾಲ್ಕನೇ ವರುಷದ ಆಟಿ ಅಮಾವಾಸ್ಯೆಯ ಔಷಧೀಯ ಕಷಾಯ ವಿತರಣೆ
Posted On: 17 Jul 2023, 05:30 PM
ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಸಂಸ್ಥೆಯ ವತಿಯಿಂದ ಸತತ ನಾಲ್ಕನೇ ವರುಷದ ಆಟಿ ಅಮಾವಾಸ್ಯೆಯ ಔಷಧೀಯ ಕಷಾಯ ವಿತರಿಸಲಾಯಿತು. ಪಲಿಮಾರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಡುಪ, ಶರತ್ ಉಡುಪ, ಹೊಯಿಗೆ ಫ್ರೆಂಡ್ಸ್ ಸಂಸ್ಥೆಯ ಅಧ್ಯಕ್ಷರಾದ ರಿತೇಶ್ ದೇವಾಡಿಗ, ಉಪಾಧ್ಯಕ್ಷ ಸಂತೋಷ್ ದೇವಾಡಿಗ, ಕಾರ್ಯದರ್ಶಿ ಸತೀಶ ಕುಮಾರ್, ರಾಘವೇಂದ್ರ ಸುವರ್ಣ, ಲಕ್ಷ್ಮಣ್ ಕೋಟ್ಯಾನ್, ಅರುಣ್ ಪೂಜಾರಿ, ರೋಷನ್, ಶ್ರೀನಿತ್, ಶ್ರೀಜಿತ್, ಅಂಕಿತ್ ಉಪಸ್ಥಿತರಿದ್ದರು.
ಮೂಳೂರು : ಸತತ 8ನೇ ವರ್ಷದ ಆಟಿ ಕಷಾಯ ವಿತರಣೆ
Posted On: 17 Jul 2023, 05:24 PM
ಮೂಳೂರು : ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮೂಳೂರು, ಟ್ರಸ್ಟ್ ಸದಸ್ಯರು ಹಾಗೂ ಸಂಜೀವ ಪೂಜಾರಿ ಸಹಕಾರದೊಂದಿಗೆ ಆಟಿ ಅಮಾವಾಸ್ಯೆಯ ಪ್ರಯುಕ್ತ ಸತತ 8ನೇ ವರ್ಷ ಹಾಳೆ ಮರದ ತೊಗಟೆಯಿಂದ ಮಾಡಿದ ಕಷಾಯವನ್ನು ಸರಕಾರಿ ಸಂಯುಕ್ತ ಶಾಲೆ ಮೂಳೂರಿನಲ್ಲಿ ಉಚಿತವಾಗಿ ವಿತರಿಸುವ ಮೂಲಕ ಈ ಪುರಾತನ ಸಂಪ್ರದಾಯದ ಪ್ರಯೋಜನವನ್ನು ಸುಮಾರು ೧೨೦೦ ಜನರು ಪಡೆದರು. ಗೌರವ ಸಲಹೆಗಾರರಾದ ಅಶೋಕ್ ಪುತ್ರನ್, ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ ಪಿ, ಟ್ರಸ್ಟೀ ನಾಗೇಶ್ ಅಮೀನ್, ಸದಸ್ಯರಾದ ದಿನೇಶ್ ಪಾಣರ, ಸುನೀಲ್ ಕರ್ಕೇರ, ಸುಖೇಶ್ ಡಿ ಮೂಳೂರು, ಅಶೋಕ್ ಕರ್ಕೇರ, ಸುಜಯ್ ಕುಕ್ಯನ್, ಅರುಣ್ ಕುಲಾಲ್, ಹವ್ಯಾಸ್ ಪೂಜಾರಿ, ಗಗನ್ ಮೆಂಡನ್, ಪ್ರಜೇಶ್, ಗುರುರಾಜ್ ಪೂಜಾರಿ, ಮನ್ವಿತ್ ಕರ್ಕೇರ, ಜಯೇಶ್ ಸಾಲ್ಯಾನ್ ಉಪಸ್ಥಿತರಿದ್ದರು.
ಶಕ್ತಿ ಯೋಜನೆಯ ಮೂಲಕ ಉಡುಪಿ ಜಿಲ್ಲೆಯಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರ ಪ್ರಯಾಣ
Posted On: 17 Jul 2023, 04:55 PM
ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಉಡುಪಿ ಜಿಲ್ಲೆಯ ಸರಕಾರಿ ಬಸ್ ಗಳಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಸಾರಿಗೆ ಸಂಸ್ಥೆಗೆ ಜುಲೈ 14 ರ ವರೆಗೆ ಇದುವರೆಗೆ 3.62 ಕೋಟಿ ರೂ ಆದಾಯ ಬಂದಿದೆ. ಉಡುಪಿ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಮತ್ತು ಕುಂದಾಪುರ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ನಗರ ಸಾರಿಗೆ, ವೇಗದೂತ ಮತ್ತು ಸಾಮಾನ್ಯ ಸಾರಿಗೆ ಈ ಎಲ್ಲಾ ವರ್ಗದಲ್ಲಿಯೂ ಮಹಿಳಾ ಪ್ರಯಾಣಿಕರ ಸಂಚಾರದಲ್ಲಿ ಗಣನೀಯ ಏರಿಕೆಯಾಗಿದ್ದು, ಶಕ್ತಿ ಯೋಜನೆ ಜಾರಿಯಾದ ಬಳಿಕ ಸುಮಾರು 25 ರಿಂದ 30 % ರಷ್ಟು ಪ್ರಯಾಣಿಕರ ಸಂಖ್ಯೆ ಅಧಿಕಗೊಂಡಿದೆ. ಜೂನ್ 11 ರಂದು ಶಕ್ತಿ ಯೋಜನೆ ಜಾರಿಯಾಗಿದ್ದು, ಅಂದಿನಿಂದ ಜೂನ್30 ರ ವರೆಗೆ ಉಡುಪಿ ಘಟಕದಲ್ಲಿ , ನಗರ ಸಾರಿಗೆ ಬಸ್ ಗಳಲ್ಲಿ 100838 ಮಹಿಳಾ ಪ್ರಯಾಣಿಕರು ಸಂಚರಿಸಿ 1470793 ರೂ, ವೇಗದೂತ ಬಸ್ ಗಳಲ್ಲಿ 94998 ಮಹಿಳಾ ಪ್ರಯಾಣಿಕರು ಸಂಚರಿಸಿ 7409003 ರೂ, ಸಾಮಾನ್ಯ ಬಸ್ ಗಳಲ್ಲಿ 40232 ಮಹಿಳಾ ಪ್ರಯಾಣಿಕರು ಸಂಚರಿಸಿ 794933 ರೂ, ಆದಾಯ ಬಂದಿದ್ದರೆ, ಕುಂದಾಪುರ ಘಟಕದಲ್ಲಿ ವೇಗದೂತ ಬಸ್ ಗಳಲ್ಲಿ 71410 ಮಹಿಳಾ ಪ್ರಯಾಣಿಕರು ಸಂಚರಿಸಿ 6325419 ರೂ, ಸಾಮಾನ್ಯ ಬಸ್ ಗಳಲ್ಲಿ 241497 ಮಹಿಳಾ ಪ್ರಯಾಣಿಕರು ಸಂಚರಿಸಿ 4352614 ರೂ, ಆದಾಯ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 5,48,975 ಮಹಿಳಾ ಪ್ರಯಾಣಿಕರು ಸಂಚರಿಸಿ 2,03,52,762 ರೂ ಆದಾಯ ಸಾರಿಗೆ ನಿಗಮಕ್ಕೆ ಬಂದಿದೆ. ಜುಲೈ 14 ರ ವರೆಗೆ ಉಡುಪಿ ಘಟಕದಲ್ಲಿ ಒಟ್ಟು 1,92,641 ಮಹಿಳೆಯರು ಸಂಚರಿಸಿದ್ದು, 78,40,072 ರೂ ಆದಾಯ, ಕುಂದಾಪುರ ಘಟಕದಲ್ಲಿ 2,29,557 ಮಹಿಳೆಯರು ಸಂಚರಿಸಿದ್ದು, 80,88,362 ರೂ ಆದಾಯ ಗಳಿಕೆಯಾಗುವ ಮೂಲಕ ಯೋಜನೆ ಜಾರಿಗೆಯಾದಾಗಿನಿಂದ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 9.71 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಸಾರಿಗೆ ಸಂಸ್ಥೆಗೆ 3.62 ಕೋಟಿ ರೂ ಆದಾಯ ಬಂದಿದೆ. ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಾಬಲ್ಯವಿದ್ದರೂ ಸಹ ಶಕ್ತಿ ಯೋಜನೆಯ ನಂತರ ಮಹಿಳಾ ಪ್ರಯಾಣಿಕರು ಸರಕಾರಿ ಬಸ್ ಗಳಲ್ಲಿ ಸಂಚರಿಸಲು ಉತ್ಸಾಹ ತೋರುತ್ತಿದ್ದು, ಸರಕಾರದ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆಯುತ್ತಿದ್ದಾರೆ. ಉಡುಪಿಯ ಘಟಕದಲ್ಲಿ 65 ಬಸ್ ಮತ್ತು ಕುಂದಾಪುರ ಘಟಕದ ಬಸ್ ಗಳು 68 ಬಸ್ ಗಳು ಶಕ್ತಿ ಯೋಜನೆಯಡಿ ಪ್ರತಿದಿನ ಸೇವೆ ನೀಡುತ್ತಿದ್ದು, ಪ್ರತಿದಿನ ಜಿಲ್ಲೆಯ ವಿವಿಧ ಕಡೆಗಳಿಲ್ಲಿ ಮತ್ತು ಜಿಲ್ಲೆಯ ಹೊರಗೆ ಹಲವಾರು ಟ್ರಿಪ್ ಸಂಚರಿಸುತ್ತಿವೆ. ವಾರಾಂತ್ಯದಲ್ಲಿ ಉಡುಪಿಯ ಶ್ರೀ ಕೃಷ್ಠ ಮಠ, ಮಲ್ಪೆ ಬೀಚ್ ಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳು ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಹೊರ ಜಿಲ್ಲೆಯಿಂದ ಹೆಚ್ಚಿನ ಮಹಿಳಾ ಪ್ರಯಾಣಿಕರು ಆಗಮಿಸುತ್ತಿದ್ದು, ಈ ಮೂಲಕ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಸಹ ಆದಾಯ ಬರುತ್ತಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಈ ಶಕ್ತಿ ಯೋಜನೆಯು ಮಹಿಳೆಯರು ಸ್ವಾಭಿಮಾನ ಮತ್ತು ಸ್ವಾವಲಂಬಿಯಾಗಿ ಬದುಕಲು ನೆರವಾಗುವುದರ ಜೊತೆಗೆ ಪ್ರವಾಸೋದ್ಯಮದ ಬೆಳವಣಿಗೆ ಹಾಗೂ ಆರ್ಥಿಕ ಬೆಳವಣಿಗೆಗೂ ಸಹ ನೆರವು ನೀಡುತ್ತಿದ್ದು, ಸರ್ಕಾರಿ ಬಸ್ ಗಳಲ್ಲಿ ಪ್ರಯಾಣಿಸುವ ಇತರ ಪ್ರಯಾಣಿಕರ ಸಂಖ್ಯೆಯೂ ಸಹ ಅಧಿಕಗೊಂಡಿದ್ದು, ನಷ್ಟದಲ್ಲಿದ್ದ ರಾಜ್ಯದ ಎಲ್ಲಾ ಸರ್ಕಾರಿ ಸಾರಿಗೆ ನಿಗಮಗಳು ಸಹ ಲಾಭದಾಯಕವಾಗಿ, ಶೀಘ್ರದಲ್ಲಿಯೇ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಲಿವೆ.
ಬಂಟಕಲ್ಲು : ಆಟಿಡೊಂಜಿದಿನ ಸಂಭ್ರಮ
Posted On: 16 Jul 2023, 10:45 PM
ಬಂಟಕಲ್ಲು : ಶ್ರೀ ವಿಶ್ವಕರ್ಮ ಸಂಘ ಬಂಟಕಲ್ಲು ಇದರ ಗಾಯತ್ರಿ ಮಹಿಳಾ ಬಳಗದ ವತಿಯಿಂದ ಅಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಂಜರಪಲ್ಕೆ ಗಾಯತ್ರಿ ಮಹಿಳಾ ಮಂಡಳಿಯ ಅಧ್ಯಕ್ಷೆ ಗಾಯತ್ರಿ ಅಶೋಕ ಆಚಾರ್ಯ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಮುಂದಿನ ಜನಾಂಗದ ಏಳಿಗೆಗಾಗಿ ನಮ್ಮ ಬದುಕಿನ ಚಿತ್ರಣ, ಕಷ್ಟದ ಜೀವನದ ಬದುಕು ತಿಳಿಯಬೇಕಿದ್ದರೆ ನಮ್ಮ ಆಚರಣೆಗಳು ತಿಳಿಸುವುದು ಅತ್ಯವಶ್ಯಕ ಅಂತ ಕಾರ್ಯಕ್ರಮ ರೂಪಿಸುವ ಸಂಸ್ಥೆಗೆ ನಾವು ತಲೆಬಾಗಲೇಬೇಕು ಶಾಲೆಗೆ ಕಳಿಸುವುದು ಪಾಠವಲ್ಲ ಅದನ್ನು ನಮ್ಮ ಜೀವನದ ಬದುಕು ಮಕ್ಕಳಿಗೆ ತಿಳಿಸುವುದು ಮತ್ತು ಅದನ್ನು ಅಳವಡಿಸಿಕೊಳ್ಳುವಲ್ಲಿ ಮಹಿಳೆಯರು ಜವಾಬ್ದಾರಿಯುತರಾಗಿರಬೇಕು ಎಂದರು. ಸಂಸ್ಥೆಯ ಗೌರವಾಧ್ಯಕ್ಷ ಗಣಪತಿ ಆಚಾರ್ಯರು ಹಿಂದಿನ ಕಷ್ಟ ಕಾಲದ ಬದುಕು ಇಂದಿಲ್ಲ. ಮುಂದಿನ ಜನಾಂಗಕ್ಕೆ ಜೀವನ ಚಿತ್ರಣ ನೀಡುವ ಉತ್ತಮ ಕಾರ್ಯಕ್ರಮ ಎಂದು ಅನಿಸಿಕೆ ವ್ಯಕ್ತಪಡಿಸಿದರು. ಸಂಸ್ಥೆಯ ಅಧ್ಯಕ್ಷ ಮುರಳೀಧರ ಆಚಾರ್ಯ, ಯುವಕ ಸೇವಾದಳದ ಅಧ್ಯಕ್ಷ ರಾಜೇಶ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸುಮಾರು 12 ವರ್ಷ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸೇವೆ ಸಲ್ಲಿಸಿದ ವಸಂತಿ ಅಶೋಕ್ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು. ಶಾಲಿನಿ ದಾಮೋದರಾಚಾರ್ಯ ಆಚಾರ್ಯ ಪ್ರಾರ್ಥಿಸಿದರು. ಮಹಿಳಾ ಬಳಗದ ಅಧ್ಯಕ್ಷೆ ಮಾಲತಿ ರವೀಂದ್ರ ಆಚಾರ್ಯ ಸ್ವಾಗತಿಸಿದರು. ಶ್ರೀಮತಿ ವಿನುತಾ ರಾಮಚಂದ್ರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಆಶಾ ಆನಂದ ಆಚಾರ್ಯ ವಂದಿಸಿದರು. ಸುಮಾರು 35 ಬಗೆಯ ತಿನಿಸುಗಳನ್ನು ಉಣಬಡಿಸಲಾಯಿತು
ಉಚ್ಚಿಲ : ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಆಚರಣೆ
Posted On: 16 Jul 2023, 07:56 PM
ಉಚ್ಚಿಲ : ನಮ್ಮೊಳಗಿನ ನಮ್ಮನ್ನು ಅರಿತುಕೊಳ್ಳಲು, ಲೌಕಿಕ ಸಮಸ್ಯೆಗಳನ್ನು ನಿವಾರಿಸಲು ಆಧ್ಯಾತ್ಮವು ಸಕಾರಾತ್ಮಕ ದಾರಿಯಾಗಿದ್ದು, ನಾವೆಲ್ಲರೂ ಆಧ್ಯಾತ್ಮದ ಕಡೆಗೆ ಮನಸ್ಸನ್ನು ಕೇಂದ್ರೀಕರಿಸಬೇಕು ಎಂದು ಮಂಗಳೂರಿನ ಮಾತಾ ಅಮೃತಾನಂದಮಯಿ ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಹೇಳಿದರು. ದ.ಕ, ಉಡುಪಿ ಮತ್ತು ಉ.ಕ ವ್ಯಾಪ್ತಿಯ ಮಾತಾ ಅಮೃತಾನಂದಮಯಿ ಸೇವಾ ಸಮಿತಿ ವತಿಯಿಂದ ಉಚ್ಚಿಲ ಮಹಾಲಕ್ಷ್ಮೀ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗುರು ಪೂರ್ಣಿಮಾ ಆಚರಣೆಯ ನೇತೃತ್ವ ವಹಿಸಿ ಅವರು ಆಶೀರ್ವಚನ ನೀಡಿದರು. ಗ್ರಹಚಾರಾಧಿ ಸಂಕಷ್ಟ ನಿವಾರಣೆ, ಸಾಮಾಜಿಕ ಒಳಿತು ಹಾಗೂ ಆಧ್ಯಾತ್ಮಿಕ ಜಾಗೃತಿಗಾಗಿ ಮಹಾ ಮೃತ್ಯುಂಜಯ ಹೋಮ, ಸರ್ವೈಷ್ವರ್ಯ ಸೌಭಾಗ್ಯ ಪೂಜೆ, ಗುರು ಪೂಜೆ, ಸರ್ವ ಮಂಗಳ ಪೂಜೆ ಏಕ ಕಾಲದಲ್ಲಿ ನೆರವೇರಿದ್ದು ಸಾವಿರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿದರು. ಇದೇ ಸಂದರ್ಭ ಪರಿಸರ ಜಾಗೃತಿ ಮತ್ತು ಸಹಭಾಗಿತ್ವದ ನೆಲೆಯಲ್ಲಿ ಸುಮಾರು 2 ಸಾವಿರ ಸಸಿಗಳನ್ನು ವಿತರಿಸಲಾಯಿತು. ಮಂಗಳೂರಿನ ಅಮೃತಾ ವಿದ್ಯಾಲಯಂ ನ ವಿದ್ಯಾರ್ಥಿಗಳು ಸಾಮೂಹಿಕ ಮಂತ್ರ ಪಠಣೆ ಮಾಡಿದರು. 25 ವರುಷಗಳ ಕಾಲ ಆಧ್ಯಾತ್ಮಿಕವಾಗಿ ನಿಸ್ವಾರ್ಥ ಸೇವೆ ಮಾಡಿದ 35 ಹಿರಿಯ ಭಕ್ತರಿಗೆ ಮಠದ ವತಿಯಿಂದ ಗೌರವಿಸಿ ಪ್ರಸಾದ ನೀಡಲಾಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಕೋಟ್ಯಾನ್, ಆನಂದ್ ಸಿ. ಕುಂದರ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮದ್ವರಾಜ್, ಪ್ರಸಾದ್ ರಾಜ್ ಕಾಂಚನ್, ಭರತ್ ಏರ್ಮಾಳ್, ಮಂಗಳೂರು ಅಧ್ಯಕ್ಷ ಡಾ ವಸಂತ್ ಕುಮಾರ್ ಪೆರ್ಲ, ಸುರೇಶ್ ಅಮೀನ್, ಕುಂದಾಪುರ ಅಧ್ಯಕ್ಷ, ಸುರೇಶ್ ಬೆತ್ತಿನ್, ಉಡುಪಿ ಅಧ್ಯಕ್ಷ ಯೋಗೀಶ್ ಬೈಂದೂರು, ಸುಬ್ರಹ್ಮಣ್ಯ ಅಧ್ಯಕ್ಷ ಚಂದ್ರಶೇಖರ್ ನಾಯರ್, ಮೂಲ್ಕಿ ಅಧ್ಯಕ್ಷ ವೈ.ಎನ್ ಸಾಲ್ಯಾನ್, ಕಾರವಾರ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು. ಡಾ. ಅಶೋಕ್ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.
ಬ್ರಹ್ಮಾವರ : ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ
Posted On: 16 Jul 2023, 05:46 PM
ಬ್ರಹ್ಮಾವರ : ವಿದ್ಯಾಮಂದಿರ ಶಾಲಾ ಹಳೆ ವಿದ್ಯಾಥಿ೯ ಸಂಘ, ಸಾವ೯ಜನಿಕ ಗಣೇಶೋತ್ಸವ ಸಮಿತಿ ಹಾರಾಡಿ- ಸಾಲಿಕೇರಿ, ಕಾಮಧೇನು ಕಲ್ಪತರು ಸೇವಾ ಸಮಿತಿ ಹಾರಾಡಿ, ಜಿ.ಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ಶ್ರೀ.ಕ್ಷೇ.ಧ.ಗ್ರಾ ಯೋಜನೆ ಬಿ.ಸಿ ಟ್ರಸ್ಟ್, ರೋಟರಿ ರೋಯಲ್ ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ವೈದ್ಯಕೀಯ ಪ್ರತಿನಿಧಿಗಳ ಸಂಘ, ಕುಂದಾಪುರ ರೂರಲ್ ಆಯುವೇ೯ದ ಮೆಡಿಕಲ್ ಕಾಲೇಜು, ರಕ್ತನಿಧಿ ಕೇಂದ್ರ, ಮಿಷನ್ ಆಸ್ಪತ್ರೆ, ಎಸ್.ಎಸ್.ಎಫ್ ಹೊನ್ನಾಳ ಇದರ ಜಂಟಿ ಆಶ್ರಯದಲ್ಲಿ ಜುಲೈ 16ರಂದು ಹಾರಾಡಿ ಜಿ.ಎಂ ವಿದ್ಯಾನಿಕೇತನದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ ನಡೆಯಿತು. ಕಾಯ೯ಕ್ರಮವನ್ನು ಜಿ.ಎಂ ವಿದ್ಯಾನಿಕೇತನ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಚಂದ್ರ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಜ್ಞಾನ ವಸಂತ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ವಿವಿಧ ಸಂಸ್ಥೆಗಳ ಪದಾಧಿಕಾರಿಗಳಾದ ರಾಘವ ಶೆಟ್ಟಿ, ಅಭಿರಾಮ ನಾಯಕ್,ವಿವೇಕಾನಂದ ಕಾಮತ್, ಮಧುಸೂಧನ್ ಹೇರೂರು, ಸುಂದರ ಪೂಜಾರಿ ಮೂಡುಕುಕ್ಕುಡೆ, ಪ್ರಸನ್ನ ಕಾರಂತ್, ಡಾ. ಪ್ರಸನ್ನ ಐತಾಳ, ಡಾ. ವಿನಾಯಕ್ ಅಂಚನ್, ಡಾ. ಗಣೇಶ್ ಕಾಮತ್, ಆಯುವೇ೯ದ ಕಾಲೇಜಿನ ವೈದ್ಯರು ಉಪಸ್ಥಿತರಿದ್ದರು.ಸುಮಾರು 200ಕ್ಕೂ ಅಧಿಕ ಜನರು ಶಿಬಿರದ ಪ್ರಯೋಜನ ಪಡೆದರು.
ಜುಲೈ 17 (ನಾಳೆ) : ಪಡುಬಿದ್ರಿಯಲ್ಲಿ ಆಟಿ ಕಷಾಯ ವಿತರಣೆ
Posted On: 16 Jul 2023, 04:18 PM
ಪಡುಬಿದ್ರಿ : ಆಟಿ ಅಮಾವಾಸ್ಯೆಯ ಪ್ರಯುಕ್ತ ಜುಲೈ 17, ಸೋಮವಾರದಂದು ಬೆಳಿಗ್ಗೆ 6 ಗಂಟೆಯಿಂದ 7.30 ರ ವರೆಗೆ ವರ್ಷಂ ಪ್ರತಿಯಂತೆ ಶ್ರೀ ಸಾಯಿ ಆರ್ಕೇಡ್ ಪಡುಬಿದ್ರಿಯಲ್ಲಿ ದಿವ್ಯ ಕೇಟರರ಼್ಸ್ ರವರ ಸಹಕಾರದೊಂದಿಗೆ ಆಟಿ ಕಷಾಯ ವಿತರಣೆ ನಡೆಯಲಿದೆ ಎಂದು ಪಡುಬಿದ್ರಿ ಮೂರ್ತೆದಾರರ ಸಂಘದ ಅಧ್ಯಕ್ಷರಾದ ಪಿ. ಕೆ. ಸದಾನಂದರವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಶಿರ್ವ : ಪಡುಕುತ್ಯಾರು ಆನೆಗುಂದಿ ಶ್ರೀ ಜನ್ಮವರ್ಧಂತಿ ಹಾಗೂ ವಿದ್ಯಾರ್ಥಿ ಭವನ ಉದ್ಘಾಟನಾ ಸಮಾರಂಭ
Posted On: 16 Jul 2023, 10:59 AM
ಶಿರ್ವ : ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರ ಜನ್ಮವರ್ಧಂತಿ ಹಾಗೂ ವಿದ್ಯಾರ್ಥಿಭವನ ಉದ್ಘಾಟನಾ ಸಮಾರಂಭವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪಡುಕುತ್ಯಾರಿನ ಆನೆಗುಂದಿ ಮಠದಲ್ಲಿ ನಡೆಯಿತು. ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ನಾಗ ಧರ್ಮೇಂದ್ರ ಸರಸ್ವತಿ ವಿದ್ಯಾರ್ಥಿ ಭವನವನ್ನು ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿ ಮಾತನಾಡಿ, ಕುತ್ಯಾರು ಗ್ರಾಮೀಣ ಪ್ರದೇಶದಲ್ಲಿ ವಿಶ್ವಕರ್ಮ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಆನೆಗುಂದಿ ಮಠವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುವ ನಿಟ್ಟಿನಲ್ಲಿ ಸರಕಾರದ ಅನುದಾನ ಒದಗಿಸಲಾಗುವುದು. ಸರ್ವ ಜನಾಂಗಕ್ಕೆ ಒಳಿತು ಬಯಸುವ ಕಾಳಹಸ್ತೇಂದ್ರ ಸ್ವಾಮೀಜಿ ಸರ್ವರಸ್ವಾಮೀಜಿಯಾಗಿ ಮೂಡಿಬಂದಿದ್ದಾರೆ ಎಂದರು. ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ದೀಪ ಪ್ರಜ್ವಲನಗೊಳಿಸಿದರು. ಆನೆಗುಂದಿ ಪ್ರತಿಷ್ಠಾನದ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ. ಶ್ರೀಧರ ಅಚಾರ್ಯ ವಡೇರಹೋಬಳಿ ಅಧ್ಯಕ್ಷತೆ, ವಹಿಸಿದ್ದರು. ಸಮಾರಂಭದಲ್ಲಿ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನ ಧರ್ಮದರ್ಶಿ ವಡೇರ ಆನಂದ, ಸಮಾಜ ಸೇವಕರಾದ ಮಿಥುನ್ ಎಂ ರೈ, ಕ್ಯಾ| ಬ್ರಿಜೇಶ್ ಚೌಟ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಆಸ್ಥಾನ ವಿದ್ವಾನ್ ಪದವಿ ಪ್ರದಾನ : ಆನೆಗುಂದಿ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಜನ್ಮವರ್ಧಂತಿ ಉತ್ಸವದ ಧರ್ಮ ಪ್ರಯುಕ್ತ ಸಂಸತ್ತಿನಲ್ಲಿ ಮಹಾಸಂಸ್ಥಾನದ ವಿದ್ವಾನ್ ಮಂಡಳಿಗೆ ವೈದಿಕ, ಗುರು ಪರಂಪರೆಗೆ ಅನುಪಮ ಸೇವೆ ಸಲ್ಲಿಸುತ್ತಿರುವ ಶಂಕರಾಚಾರ್ಯ ಕಡ್ಡಾಸ್ಕರ್ ಪಂಡಿತ್ ಹುಬ್ಬಳ್ಳಿ ಅವರಿಗೆ ಆಸ್ಥಾನ ವಿದ್ವಾನ್ ಪದವಿ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿ ಪ್ರಧಾನ ಮಾಡಿದರು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ಹೋಬಳಿ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಸೂರ್ಯ ಆಚಾರ್ಯ ಹಳೆಯಂಗಡಿ, ಅನೆಗುಂದಿ ಸರಸ್ವತಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು, ಸರಸ್ವತಿ ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಸುಂದರ ಅಚಾರ್ಯ ಬೆಳುವಾಯಿ, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು ಸರಸ್ವತಿ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಅಚಾರ್ಯ ಉಡುಪಿ, ಕುತ್ಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಎಸ್ ಕುತ್ಯಾರು, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ.ವಿ.ಗಂಗಾಧರ ಆಚಾರ್ಯ ಉಡುಪಿ, ನಾಗ ಧರ್ಮೇಂದ್ರ ಸರಸ್ವತಿ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆಯ ಆಸ್ಥಾನ ವಿದ್ವಾಂಸರುಗಳಾದ ಪಂಜ ಭಾಸ್ಕರ್ ಭಟ್, ಬಾಲಚಂದ್ರ ಭಟ್, ಚಂದು ಕೂಡ್ಲು, ಜ್ಯೋತಿಷ್ಯ ವಿದ್ವಾನ್ ಉಮೇಶ್ ಆಚಾರ್ಯ ಪಡೀಲು, ಹರಿಶ್ಚಂದ್ರ ಎನ್. ಆಚಾರ್ಯ, ಕಾಳಿಕಾಂಬಾ ವಿಶ್ವಕರ್ಮ ದೇವಾಲಯಗಳ ಪ್ರಧಾನ ಧರ್ಮದರ್ಶಿಗಳು ಉಪಸ್ಥಿತರಿದ್ದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರ್ ಸ್ವಾಗತಿಸಿದರು. ಗೀತಾ ಚಂದ್ರ ಕಾರ್ಕಳ, ಗಂಗಾಧರ ಕೊಂಡೆವೂರು, ಸುರೇಶ್ ಆಚಾರ್ಯ ನಿರೂಪಿಸಿದರು. ಅರವಿಂದ ವೈ ಆಚಾರ್ಯ ವಂದಿಸಿದರು.
ಕಾಪು : ಈ ಮೀಡಿಯಾ ಕನ್ನಡ ನ್ಯೂಸ್ ವೆಬ್ ಪೋರ್ಟಲ್ ಲೋಕಾರ್ಪಣೆ
Posted On: 16 Jul 2023, 10:17 AM
ಕಾಪು : ಸುದ್ದಿಯ ಧಾವಂತದ ಈ ಕಾಲಘಟ್ಟದಲ್ಲಿ ನಮ್ಮ ಸುತ್ತಮುತ್ತಲಿನ, ದೇಶ, ವಿದೇಶದ ಸುದ್ದಿಗಳು ನಮ್ಮನ್ನು ಕ್ಷಣ ಮಾತ್ರದಲ್ಲಿ ತಲುಪುತ್ತಿವೆ. ಸುದ್ದಿಯು ಸಾಮಾಜಿಕ ಬದಲಾವಣೆಯ ಜೊತೆಗೆ ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮಾಧ್ಯಮವಾದಾಗ ಮಾತ್ರ ಜನರ ಮನಸ್ಸು ಗೆಲ್ಲಲು ಸಾಧ್ಯ. ಮುಂದಿನ ದಿನಗಳಲ್ಲಿ ಈ ಮೀಡಿಯಾ ಕನ್ನಡ ಸಂಸ್ಥೆಯು ಕೂಡ ಜನಮನ ಗೆಲ್ಲಲಿ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶುಭ ಹಾರೈಸಿದರು. ಅವರು ಕಾಪುವಿನಲ್ಲಿ ಜರಗಿದ ಈ ಮೀಡಿಯಾ ಕನ್ನಡ ವೆಬ್ ಪೋರ್ಟಲ್ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ, ಸಂಸ್ಥೆಯ ಲೋಗೋ ಅನಾವರಣಗೊಳಿಸಿ ಮಾತನಾಡಿದರು. ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿ ಊರಿನ ಸುದ್ದಿ ಮಾಧ್ಯಮಗಳ ಜೊತೆಗೆ ಮುಂಬಯಿಯಲ್ಲಿ ಪ್ರಸಾರಿತ ಪತ್ರಿಕೆಯಲ್ಲಿ ದುಡಿಯುತ್ತಿರುವ ಅನುಭವಿ ಹಿರಿಯ ಪತ್ರಕರ್ತ ಬಾಲಕೃಷ್ಣ ಪೂಜಾರಿಯವರು ಅಂತರ್ಜಾಲದಲ್ಲಿಯೂ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಈ ಮೀಡಿಯಾ ಕನ್ನಡ ಸಂಸ್ಥೆಗೆ ಶುಭಹಾರೈಸಿದರು. ಈ ಸಂದರ್ಭ ಉಡುಪಿ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕೋಶಾಧಿಕಾರಿ ಷರೀಫ್, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯದ ಅಧ್ಯಕ್ಷರಾದ ವಿನೋದ್ ಕಾಂಚನ್, ಗೀತಾ ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಈ ಮೀಡಿಯಾ ಕನ್ನಡ ವೆಬ್ ಪೋರ್ಟಲ್ ಆಡಳಿತ ನಿರ್ದೇಶಕರಾದ ಬಾಲಕೃಷ್ಣ ಪೂಜಾರಿ ಉಚ್ಚಿಲ ವಹಿಸಿದ್ದರು. ಬಾಲಕೃಷ್ಣ ಪೂಜಾರಿ ಉಚ್ಚಿಲ ಸ್ವಾಗತಿಸಿದರು. ವಿಜಯ ಆಚಾರ್ಯ ಉಚ್ಚಿಲ ನಿರೂಪಿಸಿ, ಶ್ರೀನಿವಾಸ್ ಐತಾಳ್ ವಂದಿಸಿದರು.
