Updated News From Kaup
ಕಾಪು : ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ - ಕಾರ್ಯಕರ್ತರ ಭೇಟಿ ; ಸಮಾಲೋಚನೆ
Posted On: 15-04-2023 08:14PM
ಕಾಪು : ಇಲ್ಲಿನ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಇಂದು ಕುರ್ಕಾಲು, ಇನ್ನಂಜೆ ಮಲ್ಲಾರು, ಕಟಪಾಡಿ, ಮಜೂರು, ಎಲ್ಲೂರು, ಕೋಟೆ ಗ್ರಾಮೀಣ ಕಾಂಗ್ರೆಸ್ ಸಮಿತಿಗಳಿಗೆ ಭೇಟಿ ನೀಡಿ, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಮೋದಿಯವರ ಯೋಜನೆ, ಯೋಚನೆ ಮತ್ತು ಶಾಸಕ ಲಾಲಾಜಿ ಮೆಂಡನ್ ರ ಅಭಿವೃದ್ಧಿ ಕೆಲಸಗಳೇ ಗೆಲುವಿಗೆ ಶ್ರೀರಕ್ಷೆ : ಸುರೇಶ್ ಶೆಟ್ಟಿ ಗುರ್ಮೆ
Posted On: 15-04-2023 07:47PM
ಕಾಪು : ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿದೆ. ಎಪ್ರಿಲ್ 17, ಸೋಮವಾರ ಬೆಳಗ್ಗೆ 10 ಗಂಟೆಗೆ ಕಾಪು ಜನಾರ್ಧನ ದೇವಸ್ಥಾನದಿಂದ ಸುಮಾರು 25,000 ಜನರ ಸೇರುವಿಕೆಯೊಂದಿಗೆ ಪಾದಯಾತ್ರೆ ಮೂಲಕ ಕಾಪು ತಾಲೂಕು ಕಛೇರಿಗೆ ಸಾಗಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಹೇಳಿದರು. ಅವರು ಕಾಪುವಿನಲ್ಲಿ ಜರಗಿದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಬೆಳಪು : ಕಾಂಗ್ರೆಸ್ ಚುನಾವಣಾ ಕಛೇರಿ ಉದ್ಘಾಟನೆ
Posted On: 14-04-2023 07:25PM
ಬೆಳಪು : ಇಲ್ಲಿ ಕಾಂಗ್ರೆಸ್ ಸ್ಥಾನೀಯ ಸಮಿತಿಯ ಚುನಾವಣಾ ಕಛೇರಿಯನ್ನು ಇಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು.
ಪಲಿಮಾರು : ಆಕಸ್ಮಿಕವಾಗಿ ಕೈಜಾರಿ ಆಯತಪ್ಪಿ ಬಾವಿಗೆ ಬಿದ್ದ ವ್ಯಕ್ತಿ ಮೃತ್ಯು
Posted On: 14-04-2023 07:21PM
ಪಲಿಮಾರು : ಗ್ರಾಮದ ಮಠದ ಬಳಿಯ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕೈಜಾರಿ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಪಡುಬಿದ್ರಿ : ಬಿಲ್ಲವ ಸಮಾಜ ಸೇವಾ ಸಂಘ - 23ನೇ ವರ್ಷದ ಬ್ರಹ್ಮಶ್ರೀ ನಾರಾಯಣ ಗುರುಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ
Posted On: 14-04-2023 12:28PM
ಪಡುಬಿದ್ರಿ : ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಏಪ್ರಿಲ್ 16, ಆದಿತ್ಯವಾರ 23ನೇ ವರ್ಷದ ಬ್ರಹ್ಮಶ್ರೀ ನಾರಾಯಣ ಗುರುಮೂರ್ತಿ ಪ್ರತಿಷ್ಠಾಪನಾ ಮಹೋತ್ಸವವು ಜರಗಲಿದೆ.
ಕಾಪು : ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ
Posted On: 14-04-2023 12:20PM
ಕಾಪು : ಭಾರತೀಯ ಜನತಾ ಪಾರ್ಟಿಯ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ಇಂದು ಉದ್ಘಾಟಿಸಲಾಯಿತು.
ಕೃಷಿಗೆ ತೊಡಗುವ ಸಂದೇಶವಿರುವ ಯುಗಾದಿ
Posted On: 14-04-2023 10:12AM
ಕೋಲ, ಬಲಿ, ಅಂಕ, ಆಯನಗಳ ಉತ್ಸಾಹ, ನಾಗ - ಬಹ್ಮಲೋಕ, ದೈವಗಳ ಸಾಮ್ರಾಜ್ಯ ಸೃಷ್ಟಿಯಾಗುತ್ತಾ ಪ್ರತಿ ರಾತ್ರಿಯೂ ದಿವ್ಯವಾಗುವ ಶ್ರಾಯ. ಇದಕ್ಕೆ ಪೂರಕವಾಗಿ ಒದಗಿ ಬಂದಿರುತ್ತದೆ ವಸಂತ ಋತುವಿನ ಬಿನ್ನಾಣ. ಈ ನಡುವೆ ಕಾಲ ನಿಯಾಮಕ ಸೂರ್ಯ ಮೇಷ ರಾಶಿ ಪ್ರವೇಶಿಸಿ ಹೊಸ ಕ್ರಮಣ ಆರಂಭಿಸುವ ಪರ್ವ ಕಾಲ ‘ಸೌರಯುಗಾದಿ’ ಸಮನಿಸುತ್ತದೆ. ಗೌಜಿ - ಗದ್ದಲಗಳಿಲ್ಲದ, ಸಂಭ್ರಮದ ವಿಧಿಯಾಚರಣೆಗಳಿಲ್ಲದ ‘ಇಗಾದಿ’ ಸೌರ ಮಾನಿಗಳಿಗೆ ‘ವರ್ಷಾರಂಭ’ ಎಂಬ ಶ್ರದ್ಧೆಯೊಂದಿಗೆ ಆಚರಿಸಲ್ಪಡುತ್ತದೆ. ಆದರೆ ಕೃಷಿಯನ್ನು ಆಧರಿಸಿ ಜೀವನ ರೂಪಿಸಿಕೊಂಡ ಮಣ್ಣಿನ ಮಕ್ಕಳಿಗೆ ಕೃಷಿ ಕಾರ್ಯವನ್ನು ಆರಂಭಿಸುವ ದಿನ ಸೌರ ಯುಗಾದಿ. ಸೌರಪದ್ಧತಿಯಂತೆ ತುಳುವರ ಮೊದಲ ತಿಂಗಳು ‘ಪಗ್ಗು’. ಪಗ್ಗು ತಿಂಗಳ ಹದಿನೆಂಟು ಅಥವಾ ಮುಂದಿನ ದಿನಗಳಲ್ಲಿ ಕೃಷಿಯಲ್ಲಿ ಸಂಪೂರ್ಣ ತೊಡಗಿಕೊಳ್ಳುವ ಕೃಷಿಕನಿಗೆ ಸೌರ ಯುಗಾದಿಯಂದು ಸಾಂಕೇತಿಕವಾಗಿ ತನ್ನ ಚಟುವಟಿಕೆಗಳನ್ನು ಆರಂಭಿಸುವ ನಿಯಮ ರೂಢಗೊಂಡಿತ್ತು.
ಪಡುಬಿದ್ರಿ : ಗಾಂಜಾ ಸೇವನೆ - ಓರ್ವ ಪೋಲಿಸ್ ವಶಕ್ಕೆ
Posted On: 14-04-2023 10:03AM
ಪಡುಬಿದ್ರಿ: ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ನಂದಿಕೂರು : ಆಚಾರ್ಯಪುರುಷ , ಯಕ್ಷಕಲಾ ಕುಸುಮ - ಗೌರವಾರ್ಪಣೆ, ಸಮ್ಮಾನ
Posted On: 13-04-2023 03:32PM
ನಂದಿಕೂರು : ಇಲ್ಲಿಯ ಭಾಗವತ ಪ್ರತಿಷ್ಠಾನದ ಇಪ್ಪತ್ತಮೂರನೇ ವರ್ಷದ ಸಮ್ಮಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮವೂ 'ಮೋಹನ ರಾವ್ - ಜಯಲಕ್ಷ್ಮೀ ರಾವ್' ಸಂಸ್ಮರಣೆಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಭಾರತೀಯ ಋಷಿ ಪರಂಪರೆಯ ಸಾಂಸ್ಕೃತಿಕ ಆವರಣವನ್ನು ಮತ್ತೆ ಸ್ಥಾಪಿಸಿದ ನಾಲ್ಕು ವೇದ,ವೇದಾಂತ, ತರ್ಕ,ವ್ಯಾಕರಣ,ಪೌರೋಹಿತ್ಯ ,ಧರ್ಮಶಾಸ್ತ್ತಗಳಲ್ಲಿ ಉತ್ತೀರ್ಣರಾಗಿ ಭಾಗವತ,ಮಹಾಭಾರತ ಗ್ರಂಥಗಳನ್ನು ಅಧ್ಯಯನ ಮಾಡಿರುವ , ಶ್ರೀ ವಿದ್ಯಾಮಾನ್ಯರ್ತಿರ್ಥರು, ಶ್ರೀ ವಿದ್ಯಾಧೀಶ ತೀರ್ಥರು, ಶ್ರೀ ವಿಶ್ವಪ್ರಸನ್ನ ತೀರ್ಥರು ಹಾಗೂ ಜಿಲ್ಲೆಯ ಪ್ರಸಿದ್ಧ ವೈದಿಕ ವಿದ್ವಾಂಸರಿಂದ ಪಾಠಕೇಳಿದ, ಗುರುಮನೆ ಸ್ಥಾಪಿಸಿ ನಿಜ ಅರ್ಥದ ಗುರುವಾದ ವೇ.ಮೂ. ಪ.ಸು.ಲಕ್ಷ್ಮೀಶ ಆಚಾರ್ಯ ಅವರನ್ನು "ಆಚಾರ್ಯಪುರುಷ" ಎಂಬ ಉಪಾದಿಯೊಂದಿಗೆ ಗೌರವಿಸಲಾಯಿತು.
ರಾಜ್ಯ ವಿಧಾನಸಭೆ ಚುನಾವಣೆ : ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ
Posted On: 13-04-2023 03:24PM
ಕಾಪು : ರಾಜ್ಯ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಮೇ 10 ರಂದು ಮತದಾನ, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.
