Updated News From Kaup

ಮೇ 14 : ಆನೆಗುಂದಿಶ್ರೀಗಳವರ ಪಟ್ಟಾಭಿಷೇಕ ವರ್ಧಂತಿ ; ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ

Thumbnail
Posted On: 11 May 2023, 06:29 PM

ಕಾಪು : ತಾಲೂಕಿನ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಪಟ್ಟಾಭಿಷೇಕ ಮಹೋತ್ಸವದ 13ನೇ ವರ್ಷದ ವರ್ಧಂತ್ಯುತ್ಸವವು ಮೇ 14ರಂದು ಪಡುಕುತ್ಯಾರಿನಲ್ಲಿ ನಡೆಯಲಿದೆ. ಇದೇ ದಿನ 2021, 2022, 2023 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್. ಎಲ್. ಸಿ, ಪಿ.ಯು.ಸಿ/ಪ್ಲಸ್‌ ಟು ಪರೀಕ್ಷೆಗಳಲ್ಲಿ 95% ಮತ್ತು ಅಧಿಕ ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಪದವಿ, ಸ್ನಾತಕೋತ್ತರ, ವೃತ್ತಿ ಶಿಕ್ಷಣ, ಮೆಡಿಕಲ್‌, ಇಂಜಿನಿಯರಿಂಗ್ ಪರೀಕ್ಷೆಗಳಲ್ಲಿ ರ‌್ಯಾಂಕ್ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಜಗದ್ಗುರುಗಳವರಿಂದ ಅಭಿನಂದನೆ ನಡೆಯಲಿದೆ. ಅರ್ಹ ವಿಶ್ವಬ್ರಾಹ್ಮಣ ಸಮಾಜ ಬಾಂಧವರ ವಿದ್ಯಾರ್ಥಿಗಳು ಅಂಕಗಳನ್ನು ವಿವರಿಸುವ ಧೃಡೀಕೃತ ಪ್ರಮಾಣ ಪತ್ರದ ಪ್ರತಿಯೊಂದಿಗೆ ಅಂದು ಬೆಳಗ್ಗೆ 10ಗಂಟೆಗೆ ಪಡುಕುತ್ಯಾರು ಮಹಾಸಂಸ್ಥಾನದ ಕಚೇರಿಯಲ್ಲಿ ಹೆಸರು ನೋಂದಾಯಿಸಬೇಕಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಆನೆಗುಂದಿ ಪ್ರತಿಷ್ಠಾನದ ವಿಶ್ವಸ್ಥರೂ, ಈ ವಿಭಾಗ ಮುಖ್ಯಸ್ಥರೂ ಆಗಿರುವ ಶ್ರೀಧರ ಜೆ.ಆಚಾರ್ಯ ಕಟಪಾಡಿ ಮೋ.9483977159 ಅವರನ್ನು ಸಂಪರ್ಕಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಶಿರ್ವ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಮತದಾನ ಕೇಂದ್ರಕ್ಕೆ ಬಂದು ಮತದಾನಗೈದ ಮಹಿಳೆ

Thumbnail
Posted On: 10 May 2023, 05:10 PM

ಶಿರ್ವ : ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿರ್ವ ಗ್ರಾಮದ ವೆರೋನಿಕ ಪಿಂಟೊ (77) ಮತದಾನಕ್ಕಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮತದಾನ ಮಾಡಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಮಗಳಿನೊಂದಿಗೆ ಕಾಪು ಕ್ಷೇತ್ರದ ಶಿರ್ವ ಗ್ರಾಮದ ಪಂಜಿಮಾರು ಕೋಡು ಶಾಲೆಯಲ್ಲಿ ಮತದಾನ ಮಾಡಿ ಎಲ್ಲರಿಗೂ ಸ್ಪೂರ್ತಿಯಾದರು.

ಕಾಪು : ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ಮತದಾನ

Thumbnail
Posted On: 10 May 2023, 11:08 AM

ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಾಪುವಿನ ಕಳತ್ತೂರಿನ ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆ ಬೂತ್ ನಂ. 156 ರಲ್ಲಿ ಮತದಾನ ಮಾಡಿದರು.

ಕುಟುಂಬದೊಂದಿಗೆ ನಡೆದುಕೊಂಡು‌ ಬಂದೇ ಮತದಾನ ಮಾಡಿದ ವಿನಯ್ ಕುಮಾರ್ ಸೊರಕೆ

Thumbnail
Posted On: 10 May 2023, 10:08 AM

ಕಾಪು : ಕ್ಷೇತ್ರದ‌ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಕುಟುಂಬದೊಂದಿಗೆ ಅಜ್ಜರಕಾಡು ಮತಗಟ್ಟೆಗೆ ಬಂದು ಮತದಾನ ಮಾಡಿದರು. ಪತ್ನಿ ದಕ್ಷ ಸೊರಕೆ ಮತ್ತು ಮಗ ದ್ವಿಶನ್ ಸೊರಕೆ ಜೊತೆ ಮನೆಯಿಂದ ಮತಗಟ್ಟೆವರೆಗೆ ನಡೆದುಕೊಂಡು ಬಂದು ಸರತಿ ಸಾಲಿನಲ್ಲಿ‌‌ ನಿಂತು ಮತದಾನ ಮಾಡಿದರು. ಈ ಸಂದರ್ಭ ಮಾತನಾಡಿದ ವಿನಯ್ ಕುಮಾರ್ ಸೊರಕೆ ನಾನು ಕಾಪು ಕ್ಷೇತ್ರಕ್ಕೆ ಮಾಡಿದ ಪ್ರಾಮಾಣಿಕ ಸೇವೆ ಅಭಿವೃದ್ಧಿ ಗಳು ನನ್ನ‌ ಕೈ ಹಿಡಿಯಲಿದೆ.ಕಾಪು ಕ್ಷೇತ್ರದಲ್ಲಿ ಪ್ರಜ್ನಾವಂತ ಮತದಾರರಿದ್ದು ಈ ಬಾರಿ ಜನತೆ ನನ್ನನ್ನು ಆಯ್ಕೆ ಮಾಡಲಿದ್ದಾರೆ ಎಂಬ ನಂಬಿಕೆ ಇದೆ ಅಂತಾ ಹೇಳಿದರು.

ಮೇ 14 : ಪಡುಕುತ್ಯಾರು ಆನೆಗುಂದಿ ಶ್ರೀಗಳ ಪಟ್ಟಾಭಿಷೇಕ ವರ್ಧಂತಿ ; ಸಾಮೂಹಿಕ ಚಂಡಿಕಾಯಾಗ ; ಪ್ರಶಸ್ತಿ ಪ್ರದಾನ-ಗೌರವಾರ್ಪಣೆ- ವಸಂತ ವೇದ ಶಿಬಿರ ಸಮಾರೋಪ

Thumbnail
Posted On: 09 May 2023, 08:18 PM

ಕಾಪು : ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಪಟ್ಟಾಭಿಷೇಕ ಮಹೋತ್ಸವದ 13ನೇ ವರ್ಷದ ವರ್ಧಂತ್ಯುತ್ಸವವು ಮೇ 14ರಂದು ಪಡುಕುತ್ಯಾರಿನಲ್ಲಿ ನಡೆಯಲಿದೆ. ವರ್ಷಂಪ್ರತಿ ನಡೆಯುವ ಸಾಮೂಹಿಕ ಮಹಾ ಚಂಡಿಕಾಯಾಗವು ಅದೇ ದಿನ ನಡೆಯಲಿದೆ. ಅಂದು ಬೆಳಿಗ್ಗೆ ಜಗದ್ಗುರುಗಳಿಂದ ಕಟಪಾಡಿ ಶ್ರೀಮಹಾಸಂಸ್ಥಾನದಲ್ಲಿ ಶ್ರೀಕರಾರ್ಚಿತ ದೇವತಾ ಪೂಜೆ ಬಳಿಕ ಕಟಪಾಡಿಯಲ್ಲಿರುವ ಅನಂತಶ್ರೀ ವಿಭೂಷಿತ ನಾಗಧರ್ಮೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವೃಂದಾವನದಲ್ಲಿ ಜಗದ್ಗುರುಗಳವರಿಂದ ಪೂಜೆ ನಡೆಯಲಿದೆ. ಬಳಿಕ ಪಡುಕುತ್ಯಾರಿನ ಶ್ರೀ ಸರಸ್ವತೀ ಯಾಗ ಶಾಲೆಯಲ್ಲಿ ಶ್ರೀ ವಿಶ್ವಕರ್ಮ ಯಜ್ಞ, ಶ್ರೀ ದಕ್ಷಿಣಾಮೂರ್ತಿ ಯಜ್ಞ, ಶ್ರೀ ರುದ್ರ ಯಜ್ಞ, ಸಾಮೂಹಿಕ ಶ್ರೀ ಚಂಡಿಕಾ ಯಾಗದ ಪೂರ್ಣಾಹುತಿ ನಡೆಯಲಿದೆ. ನಂತರ ಆನೆಗುಂದಿ ಪ್ರತಿಷ್ಠಾನದ ವತಿಯಿಂದ ಜಗದ್ಗುರುಗಳವರ ಪಾದಪೂಜೆಯ ಬಳಿಕ ಪಟ್ಟಾಭಿಷೇಕ ವರ್ಧಂತಿಯ ವಿಧಿ ವಿಧಾನಗಳ ನಡೆಯಲಿವೆ. ಬಳಿಕ ಪಡುಕುತ್ಯಾರು ಮಹಾಸಂಸ್ಥಾನದ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆಯುವ ಧರ್ಮ ಸಭೆಯ ಅಧ್ಯಕ್ಷತೆಯನ್ನು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ವಹಿಸಲಿದ್ದಾರೆ. ಇದೇ ವೇಳೆ ಮಹಾಸಂಸ್ಥಾನದ ವ್ಯಾಪ್ತಿಯಲ್ಲಿರುವ ಶ್ರೀಕಾಳಿಕಾಂಬಾ ದೇವಸ್ಥಾನದ ಧರ್ಮದರ್ಶಿಗಳು, ಸಮಾಜ ಸದಸ್ಯರಿಂದ ಸಂಗ್ರಹಿಸಿದ ಗುರುಕಾಣಿಕೆಯನ್ನು ವಾಡಿಕೆಯಂತೆ ಜಗದ್ಗುರುಗಳಿಗೆ ಫಲತಾಂಬೂಲಗಳೊಂದಿಗೆ ಸಮರ್ಪಿಸಿ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಗಳವರು ಆಶೀರ್ವಚನ ನೀಡಲಿದ್ದಾರೆ. ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಆಸ್ಥಾನ ವಿದ್ವಾಂಸರಾದ ವಿದ್ವಾನ್ ಮಹಾಮಹೋಪಾಧ್ಯಾಯ ಪಂಜ ಭಾಸ್ಕರ ಭಟ್, ಘನಪಾಠಿ ವಿದ್ವಾನ್ ಬಾಲಚಂದ್ರ ಭಟ್ ಚಂದುಕೂಡ್ಲು , ಅಂತರಾಷ್ಟ್ರೀಯ ಜ್ಯೋತಿಷ್ಯ ವಿದ್ವಾನ್ ಉಮೇಶ್ ಆಚಾರ್ಯ ಪಡೀಲು ಗೌರವ ಉಪಸ್ಥಿತಿಯಲ್ಲಿ ನಡೆಯುವ ಧರ್ಮಸಭೆಯಲ್ಲಿ ವಿದ್ವಾನ್ ವೇ.ಬ್ರ. ಶ್ರೀ ಶಂಕರ ಆಚಾರ್ಯ ಕಡ್ಲಾಸ್ಕರ್ (ಪಂಡಿತ್) ಹುಬ್ಬಳ್ಳಿ ಅವರಿಂದ ಗುರುಪೀಠಗಳು ಮತ್ತು ಯುವ ಜನತೆ ಎಂಬ ವಿಷಯದಲ್ಲಿ ಉಪನ್ಯಾಸ ನಡೆಯಲಿದೆ. ಆನೆಗುಂದಿ ಮೂಲ ಮಠ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಂಚಸಿಂಹಾಸನ ವಿಕಾಸ ಸಮಿತಿ ಮತ್ತು ಆನೆಗುಂದಿ ಶಾಖಾ ಮಠ ಸಮಿತಿ ಬೆಂಗಳೂರು ಅಧ್ಯಕ್ಷ ಹರಿಶ್ಚಂದ್ರ ಎನ್. ಆಚಾರ್ಯ ಬೆಂಗಳೂರು, ಕರಾವಳಿ, ಬೆಂಗಳೂರು, ಹುಬ್ಬಳ್ಳಿ, ಮುಂಬೈ ಕಾಳಿಕಾಂಬಾ ದೇವಾಲಯಗಳ ಧರ್ಮದರ್ಶಿಗಳಾದ ಕೆ. ಕೇಶವ ಆಚಾರ್ಯ ಮಂಗಳೂರು, ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ಗಜಾನನ ಎನ್. ಆಚಾರ್ಯ ಭಟ್ಕಳ , ಪುರೋಹಿತ್ ಜಯಕರ ಆಚಾರ್ಯ ಮೂಡಬಿದ್ರೆ, ನವೀನ ಆಚಾರ್ಯ ಕಟಪಾಡಿ, ಮಧುಕರ ಚಂದ್ರಶೇಖರ ಆಚಾರ್ಯ ಗೋಕರ್ಣ,‌ ಶೇಖರ ಆಚಾರ್ಯ ಕಾಪು , ಕೆ. ಸುಧಾಕರ ಆಚಾರ್ಯ ಕೊಲಕಾಡಿ, ಸುಂದರ ಆಚಾರ್ಯ ಕೋಟೆಕಾರು , ಶ್ರೀ ಬಿ.ಎಂ.ಯದುನಂದನ ಆಚಾರ್ಯ ಬಂಗ್ರಮಂಜೇಶ್ವರ, ಜನಾರ್ದನ ಆಚಾರ್ಯ ಆರಿಕ್ಕಾಡಿ, ಕೆ. ಪ್ರಭಾಕರ ಆಚಾರ್ಯ ಮಧೂರು, ಪುರುಷೋತ್ತಮ ಆಚಾರ್ಯ ಕಾಞಂಗಾಡು, ಸಿ.ಎ ಶ್ರೀಧರ ಆಚಾರ್ಯ ಪನ್ವೇಲ್ ಮುಂಬಯಿ, ಚಿಕ್ಕಣ್ಣ ಆಚಾರ್ ನಾಯಂಡರಹಳ್ಳಿ ಬೆಂಗಳೂರು, ಮನೋಹರ ಲಕ್ಕುಂಡಿ ಹುಬ್ಬಳ್ಳಿ, ಬಿ. ಜಗದೀಶ್ ಆಚಾರ್ಯ ಪಡುಪಣಂಬೂರು , ಮಹಾಸಂಸ್ಥಾನದ ವಿವಿಧ ಸಮಿತಿಗಳ ಪ್ರಮುಖರಾದ ಬಿ.ಸೂರ್ಯಕುಮಾರ್ ಆಚಾರ್ಯ ಹಳೆಯಂಗಡಿ, ಮೋಹನ್‌ ಕುಮಾರ್‌ ಬೆಳ್ಳೂರು, ಸುಂದರ ಆಚಾರ್ಯ ಬೆಳುವಾಯಿ, ಗಣೇಶ್ ಆಚಾರ್ಯ ಕೆಮ್ಮಣ್ಣು, ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಪಿ.ವಿ ಗಂಗಾಧರ ಆಚಾರ್ಯ ಉಡುಪಿ, ಪ್ರವೀಣ ಆಚಾರ್ಯ ರಂಗನಕೆರೆ, ವೈ. ಧರ್ಮೇಂದ್ರ ಆಚಾರ್ಯ ನಿವೃತ್ತ ಸುಬೇದಾರ್ ಕಾಸರಗೋಡು, ಕೃಷ್ಣ ವಿ. ಆಚಾರ್ಯ, ಮುಂಬಯಿ, ಜಿ.ಟಿ ಆಚಾರ್ಯ ಮುಂಬಯಿ, ಶುಭಕರ ಎನ್. ಆಚಾರ್ಯ, ಕೊಯಂಬತ್ತೂರು, ಮೋಹನ್ ಕುಮಾರ್ ಬೊಳ್ಳೂರು, ವಿವಿಧ ಪ್ರಮುಖ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಮಧು ಆಚಾರ್ಯ ಮೂಲ್ಕಿ, ಸದಾನಂದ ಎಸ್. ಆಚಾರ್ಯ ಕಲ್ಯಾಣ ಪುರ, ತುಕಾರಾಮ ಆಚಾರ್ಯ ಬೆಂಗಳೂರು, ನಲ್ಕ ತ್ರಿವಿಕ್ರಮ ಆಚಾರ್ಯ ಬೆಂಗಳೂರು, ಯು.ಎಸ್.ಗಿರೀಶ್ ಆಚಾರ್ಯ ಕೊಯಂಬುತ್ತೂರು, ಯೋಗೀಶ್ ಆಚಾರ್ಯ ಕೊಯಂಬತ್ತೂರು ಇವರ ಉಪಸ್ಥಿತಿಯಲ್ಲಿ ಸಮಾರಂಭ ಸಂಪನ್ನಗೊಳ್ಳಲಿದೆ. ಇದೇ ದಿನ ವಸಂತ ವೇದ ಶಿಬಿರದ ಸಮಾರೋಪವೂ ನಡೆಯಲಿದೆ. 2023ನೇ ಸಾಲಿನ ಪ್ರಶಸ್ತಿ ಪ್ರದಾನ : ಈ ಸಮಾರಂಭದಲ್ಲಿ ಮಹಾಸಂಸ್ಥಾನದಿಂದ ವರ್ಷಂಪ್ರತಿ ನೀಡಲಾಗುವ ಪ್ರಶಸ್ತಿಗಳನ್ನು ಜಗದ್ಗುರುಗಳವರು ಪ್ರದಾನ ಮಾಡಲಿದ್ದಾರೆ. ಮಹಾಸಂಸ್ಥಾನದ ಪುನರುತ್ಥಾನಕ್ಕಾಗಿ ಸೇವೆ ಸಲ್ಲಿಸುತ್ತಿರುವರಿಗೆ ಶ್ರೀ ಸರಸ್ವತೀ ಅನುಗ್ರಹ ಪ್ರಶಸ್ತಿ ಹಾಗೂ ವೈದಿಕ, ಕಲೆ ಶಿಲ್ಪ ಉದ್ಯಮ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಿರಿಯ ಮತ್ತು ಕ್ರೀಯಾಶೀಲರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಆನೆಗುಂದಿಶ್ರೀ ಪ್ರಶಸ್ತಿ ಪ್ರದಾನ ನಡೆಯಲಿದೆ. ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು ಇವರಿಗೆ ಶ್ರೀ ಸರಸ್ವತೀ ಅನುಗ್ರಹ ಪ್ರಶಸ್ತಿ, ಬ್ರಹ್ಮಶ್ರೀ ಸೀತಾರಾಮ ಶಾಸ್ತ್ರಿ ಮಂಗಳೂರು (ವೈದಿಕ), ಮಂಟಪ ಕೇಶವ ಆಚಾರ್ಯ ಸಾಲಿಗ್ರಾಮ, ಮಂಜುನಾಥ ಆಚಾರ್ಯ ಚಿತ್ರಪಾಡಿ , ವ್ಯಾಸರಾಯ ಆಚಾರ್ಯ ಪಾದೂರು, ದಿವಾಕರ ಆಚಾರ್ಯ ಕೋಟೆಕಾರು(ಶಿಲ್ಪ), ವಿಘ್ನೇಶ್ವರ ಭಟ್‌ ಪುತ್ತೂರು (ಜ್ಯೋತಿಷ್ಯ), ಡಾ. ಸಿ.ಆರ್. ಚಂದ್ರ ಶೇಖರ್ ಬೆಂಗಳೂರು( ವೈದ್ಯಕೀಯ), ನೇಜಾರು ವಿಶ್ವನಾಥ ರಾವ್‌ ಕತಾರ್‌, ಬಿ. ವಿಶ್ವನಾಥ ರಾವ್‌ ಕೊಯಂಬುತ್ತೂರು( ಮರಣೋತ್ತರ) ( ಉದ್ಯಮ) ಎಂಬಿವರು ಆನೆಗುಂದಿಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಜಯ ಕುಮಾರ್‌ ಕುಂಟಾಡಿ ಕೆ.ಎ.ಎಸ್‌ , ಬ್ರಹ್ಮಾವರ ಡಾ. ಗೋಪಾಲಕೃಷ್ಣ ನವದೆಹಲಿ ಇವರಿಗೆ ವಿಶೇಷ ಗೌರವಾಭಿನಂದನೆ ನಡೆಯಲಿದೆ. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ : 2021, 2022, 2023 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್. ಎಲ್. ಸಿ, ಪಿ.ಯು.ಸಿ/ಪ್ಲಸ್‌ ಟು ಪರೀಕ್ಷೆಗಳಲ್ಲಿ 95% ಮತ್ತು ಅಧಿಕ ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಪದವಿ, ಸ್ನಾತಕೋತ್ತರ,ವೃತ್ತಿ ಶಿಕ್ಷಣ, ಮೆಡಿಕಲ್‌, ಇಂಜಿನಿಯರಿಂಗ್ ಪರೀಕ್ಷೆಗಳಲ್ಲಿ ರೇಂಕ್‌ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಜಗದ್ಗುರುಗಳವರಿಂದ ಅಭಿನಂದನೆ ನಡೆಯಲಿದೆ. ಪಟ್ಟಾಭಿಷೇಕ ಮಹೋತ್ಸವದ ವರ್ಧಂತಿಯ ಪುಣ್ಯ ಸಮಾರಂಭದಲ್ಲಿ ಸಮಸ್ತ ಸಮಾಜ ಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಗದ್ಗುರಗಳವರ ಕೃಪಾ ಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಆನೆಗಂದಿ ಪ್ರತಿಷ್ಠಾನ, ಮಠದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅಯ್ಯಪ್ಪ ಸ್ವಾಮಿ ಭಕ್ತನೊಬ್ಬನ ಶಬರಿಮಲೆಗೆ ವಿಶೇಷ ಪಾದಯಾತ್ರೆಯ ಹರಕೆ

Thumbnail
Posted On: 09 May 2023, 07:45 PM

ಕಾಪು : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಹಾಗೂ ಉಡುಪಿ ಕ್ಷೇತ್ರದಲ್ಲಿ ಯಶ್ಪಾಲ್ ಸುವರ್ಣ ಮತ್ತು ಕಾಪು ಕ್ಷೇತ್ರದಲ್ಲಿ ಸುರೇಶ್ ಶೆಟ್ಟಿ ಗುರ್ಮೆಯವರು ಚುನಾವಣೆಯಲ್ಲಿ ಯಶಸ್ವಿಯಾಗಿ ಬಹುಮತಗಳಿಂದ ಗೆದ್ದು ಶಾಸಕರಾಗಬೇಕೆಂದು ಪಡುಬಿದ್ರಿಯ ವಿಶ್ವಕಲ್ಲಟ್ಟೆ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತಿದ್ದಾರೆ. ಈಚು ಸ್ವಾಮಿ ಎಂದು ಪರಿಚತರಾಗಿರುವ ವಿಶ್ವ ಕಲ್ಲಟ್ಟೆಯವರು ಪಾದಯಾತ್ರೆಯ ಮೂಲಕ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ತುಪ್ಪದ ಅಭಿಷೇಕದ ಹರಕೆ ಹೊತ್ತಿದ್ದಾರೆ. ಇವರು ಸಮಾಜ ಸೇವಾ ಸಂಸ್ಥೆ ಪಡುಬಿದ್ರಿ ಭಗವತಿ ಗ್ರೂಪ್ ಇದರ ಸದಸ್ಯರೂ ಆಗಿದ್ದಾರೆ.

ಕಾಪು ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ಭರ್ಜರಿ ಮತಯಾಚನೆ

Thumbnail
Posted On: 08 May 2023, 04:48 PM

ಕಾಪು : ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಾಪು ಪುರಸಭೆ ವ್ಯಾಪ್ತಿಯ ಕಾಪು ಪೇಟೆಯಲ್ಲಿ ಭರ್ಜರಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಗೀತಾಂಜಲಿ ಸುವರ್ಣ, ಮಂಡಲ ಅಧ್ಯಕ್ಷ ನವೀನ್ ಎಸ್.ಕೆ, ಮಾಜಿ ಪುರಸಭೆ ಸದಸ್ಯ ವಿಜಯ್ ಕರ್ಕೇರ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯರು ರತ್ನಾಕರ ಶೆಟ್ಟಿ, ಹರಿಣಿ ದೇವಾಡಿಗ, ಪ್ರಕೋಷ್ಟ ಸಂಚಾಲಕ ಗೋಪ ಪೂಜಾರಿ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಧರ್ಮನಿಷ್ಠೆಯ ಪಕ್ಷಕ್ಕೆ ಬೆಂಬಲ ನೀಡಿ : ವಜ್ರದೇಹಿ

Thumbnail
Posted On: 08 May 2023, 04:00 PM

ಮಂಗಳೂರು : ಹಿಂದೂಧರ್ಮನಿಷ್ಠೆಯನ್ನು ಬೆಂಬಲಿಸುವ ಪಕ್ಷಕ್ಕೆ ಮತನೀಡುವುದರ ಮೂಲಕ ಕರ್ನಾಟಕ ರಾಜ್ಯವನ್ನು ಸುಭದ್ರಪಡಿಸಬೇಕು. ವ್ಯಕ್ತಿ ಆಧಾರಿತ ಚಿಂತನೆಯಲ್ಲಿ ಮತ ನೀಡಿದರೆ ಅದು ನಮ್ಮ ಅಭಿವೃದ್ಧಿಯನ್ನು ಹಾಳುಮಾಡಬಹುದು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ. ಜಗತ್ತು ಇಂದು ಸಂಕಟಮಯ ಸ್ಥಿತಿಯಲ್ಲಿದೆ. ಆದರೆ ಭವ್ಯಭಾರತವಿಂದು ಸಧೃಡವಾಗಿದೆ. ಹಿಂದೂ ಧರ್ಮಾಧಾರಿತ ಆಲೋಚನೆಗಳು ಇದಕ್ಕೆ ಮುಖ್ಯ ಕಾರಣವಾಗಿದೆ. ರಾಮಮಂದಿರ ಕಾಶ್ಮೀರ 370 ವಿಧಿರದ್ಧತಿ, ಗೋಹತ್ಯಾ ನಿಷೇಧ, ಹಿಂದೂ ಧರ್ಮ ದೃಢವಾದರೆ ಎಲ್ಲಾ ಮತ, ಸಂಪ್ರದಾಯ, ಆಚರಣೆಗಳು ಸುಲಲಿತವಾಗಿ ಸಾಗುತ್ತವೆ. ಸ್ವಾರ್ಥಪರ ಚಿಂತನೆ ದೇಶ ಯಾ ರಾಜ್ಯಕ್ಕೆ ಒಳಿತು ಮಾಡದು. ಹಿಂದೂ ಧರ್ಮಕ್ಕೆ ನಿಷ್ಠವಾದ ಪಕ್ಷದ ಅಭ್ಯರ್ಥಿಗಳನ್ನು ಹಿಂದೂಧರ್ಮದ ಪುನರುತ್ಥಾನಕ್ಕಾಗಿ ಆಯ್ಕೆ ಮಾಡಿ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಮತವೆಂದೂ ಮೋಸ, ವಂಚನೆಗೊಳಗಾಗಬಾರದು. ದೇಶ ಮತ್ತು ರಾಜ್ಯದ ಹಿತದೃಷ್ಟಿಯಿಂದ ನಮ್ಮ ಮತ ಕರ್ನಾಟಕ ರಾಜ್ಯದ ಭದ್ರ ಬುನಾದಿಗೆ ಅಡಿಗಲ್ಲಾಗಬೇಕು. ದೇಶ ವಿಭಜಿಸುವವರು ನಮ್ಮ ಮಧ್ಯೆ ಬೆಳೆದರೆ ಕರ್ನಾಟಕ ರಾಜ್ಯ ಕಡುಬಡತನದ ಕಡೆಗೆ ಸಾಗುವುದಲ್ಲದೆ ಕೆಲವು ದೇಶಗಳು ಅತಂತ್ರಗೊಂಡ ಹಾಗೆ ನಮ್ಮ ಕರ್ನಾಟಕವೂ ನೆಲೆ ಕಳೆದುಕೊಳ್ಳಬಹುದು. ನಮ್ಮ ಸಂಘಟಿತವಾದ ವಿವೇಚನೆಯ ಮೂಲಕ ಕರ್ನಾಟಕ ರಾಜ್ಯದ ಶಾಂತಿ, ಅಭಿವೃದ್ಧಿ ಐಕ್ಯತೆಗೆ ಮತದಾನ ಕಾರಣವಾಗಬೇಕು. ಹಾಗಾಗಿ ವ್ಯಕ್ತಿಕೇಂದ್ರಿತ ಮನಸ್ಥಿತಿಗೆ ಒಗ್ಗದೆ ರಾಷ್ಟ್ರೀಯತೆಯ ಹಿಂದೂಧರ್ಮದ ಸದೃಢವಾದ ನೆಲೆಗೆ ಅಭಿವೃದ್ಧಿಪರ ಚಿಂತನೆಯ ಒಳಿತಿಗೆ ಈ ಸಲ ಮತದಾನ ಮಾಡಿ. ಹಿಂದುತ್ವದ ನೆಲೆಯನ್ನು ಭದ್ರಗೊಳಿಸಿ ದೇಶ ಹಾಗೂ ಕರ್ನಾಟಕವನ್ನು ಸುಭದ್ರಪಡಿಸಲು ಹಿಂದೂಧರ್ಮದ ಬೆಂಬಲಿತ ಪಕ್ಷವನ್ನು ಚುನಾಯಿಸಿ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಸ್ವಾಮೀಜಿ ತಿಳಿಸಿದ್ದಾರೆ.

ಕಾಪು : ಪಡು ಕುತ್ಯಾರು ಆನೆಗುಂದಿ ಮಹಾ ಸಂಸ್ಧಾನದಲ್ಲಿ ವಸಂತ ವೇದ ಶಿಬಿರಕ್ಕೆ ಚಾಲನೆ

Thumbnail
Posted On: 08 May 2023, 02:30 PM

ಕಾಪು‌ : ಸಂಸ್ಕೃತಿ ಸಂಸ್ಕಾರವನ್ನು ಬೋಧಿಸುವ ವಸಂತ ವೇದ ಶಿಬಿರಗಳಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ, ಸಂಧ್ಯಾವಂದನೆ ವಿಧಿ ವಿಧಾನಗಳ ಶಿಬಿರವು ನಮ್ಮ ಸಮಾಜದ ಸಂಸ್ಕೃತಿಯ ಮಕ್ಕಳಿಗೆ ಪ್ರಾಥಮಿಕ ಬೋಧನೆಯನ್ನು ನೀಡುತ್ತದೆ ಎಂದು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ನುಡಿದರು. ಇಲ್ಲಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದಲ್ಲಿ ವರ್ಷಂಪ್ರತಿ ನಡೆಸಲಾಗುವ ವಸಂತ ವೇದ ಶಿಬಿರವನ್ನು ದೀಪ ಪ್ರಜ್ವಲನದೊಂದಿಗೆ ಉದ್ಘಾಟಿಸಿ ಆಶೀರ್ವಚನ ನೀಡಿದರು. ಮಕ್ಕಳು ಸುಸಂಸ್ಕೃತರಾದರೆ ಮುಂದೆ ಅವರು ಸಮಾಜದ ಆಸ್ತಿಯಾಗುತ್ತಾರೆ. ಇದಕ್ಕಾಗಿ ಆ ಸಂಸ್ಥಾನದಿಂದ ಸಂಧ್ಯಾವಂದನೆಗೆ ಒತ್ತು ನೀಡಿ. ಶಿಬಿರವನ್ನು ಆಯೋಜಿಸಲಾಗಿದೆ. ಜೊತೆಗೆ ನಮ್ಮ ಸಮಾಜದ ಸಂಸ್ಕೃತಿ, ಹಬ್ಬಗಳು, ಆಚರಣೆಗಳು, ದೇವರು, ಗುರು ಪರಂಪರೆ, ಮಹಾಪುರುಷರು, ಸೇರಿದ ವಿಚಾರಗಳನ್ನು ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಮಾರ್ಗದರ್ಶನ ನೀಡಲಾಗುವುದು ಎಂದು ಅವರು ನುಡಿದರು. ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ ಶ್ರೀಧರ ಆಚಾರ್ಯ ಒಡೆಯ ಹೋಬಳಿ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಬಿರದಲ್ಲಿ ದೊರೆತ ವಿಚಾರಗಳನ್ನು ಹೆತ್ತವರು ಕಾಳಜಿ ವಹಿಸಿ ಮಕ್ಕಳಿಂದ ಆಚರಣೆಗೆ ತರುವಲ್ಲಿ ಸಹಕರಿಸಬೇಕೆಂದು ವಿನಂತಿಸಿದರು. ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಉಡುಪಿ ಮಂಗಳಾ ಜ್ಯುವೆಲ್ಲರ್ಸ್ ಮಾಲಕರೂ, ಕೊಡಂಕೂರು ವಿಶ್ವಬ್ರಾಹ್ಮಣ ಸಂಸ್ಕೃತ ವಿದ್ಯಾಪೀಠದ ಅಧ್ಯಕ್ಷರಾದ ಶ್ರೀಶ ಆಚಾರ್ಯ ಅಲೆಯೂರು ಮಾತನಾಡಿ ಸಂಸ್ಥಾನದಿಂದ ವರ್ಷಂಪ್ರತಿ ಶಿಬಿರವನ್ನು ನಡೆಸುತ್ತಿರುವುದು ಶ್ಲಾಘನೀಯ, ಪಂಚ ಕುಲಕಸುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು ಸೂಕ್ತ ಎಂದು ಅಭಿಪ್ರಾಯಿಸಿದರು. ಇನ್ನೋರ್ವ ಮುಖ್ಯ ಅತಿಥಿ ಎಸ್ ಕೆ ಜಿ ಐ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಉಪೇಂದ್ರ ಆಚಾರ್ಯ ಪೆರ್ಡೂರು ಮಾತನಾಡಿ ಮಾನವನಾಗಿ ಜನಿಸಿದ ಮೇಲೆ ಸಂಸ್ಕಾರಯುತ ಜೀವನವನ್ನು ದಲ್ಲಿ ಮಾತ್ರ ಜನ್ಮ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ವಸಂತ ವೇದ ಶಿಬಿರವು ಅತ್ಯಂತ ಸಹಕಾರಿಯಾಗಿದೆ ಎಂದರು. ಸಮಾರಂಭದಲ್ಲಿ ಅಸೆಟ್ ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು, ಗೋವು ಪರ್ಯಾವರಣ್ ಟ್ರಸ್ಟ್ ಅಧ್ಯಕ್ಷ ಬಿ ಸುಂದರ ಆಚಾರ್ಯ ಬೆಳುವಾಯಿ, ಆನೆಗುಂದಿ ಗುರು ಸೇವಾ ಪರಿಷತ್ ಕೇಂದ್ರ ಸಮಿತಿ ಉಪ ಅಧ್ಯಕ್ಷ ಗುರುರಾಜ್ ಕೆ.ಜೆ ಆಚಾರ್ಯ, ಶ್ರೀ ಸರಸ್ವತೀ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ ಶುಭಾ ಶಂಸನೆ ನಡೆಸಿದರು. ಶ್ರೀ ನಾಗದರ್ಮೇಂದ್ರ ಸಂಸ್ಕೃತ ವೇದ ಸಂಜೀವಿನೀ ಪಾಠಶಾಲೆ ವಿದ್ಯಾರ್ಥಿಗಳು ವೇದಘೋಷ ನಡೆಸಿದರು. ಶಿಬಿರಾಧಿಕಾರಿ ಐ ಲೋಲಾಕ್ಷ ಆಚಾರ್ಯ ಕಟಪಾಡಿ, ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರು ವಂದಿಸಿದರು. ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನ ಆಯೋಜಿಸಿರುವ ವಸಂತ ವೇದ ಶಿಬಿರವು ಶ್ರೀ ನಾಗಧರ್ಮೇಂದ್ರ ಸರಸ್ವತಿ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆ, ಆನೆಗುಂದಿ ಗುರು ಸೇವಾ ಪರಿಷತ್ತು ಕೇಂದ್ರ ಸಮಿತಿ, ಅಸೆಟ್, ಗೋವು ಮತ್ತು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್, ಶ್ರೀ ಸರಸ್ವತೀ ಮಾತೃ ಮಂಡಳಿ ಇವುಗಳ ಸಹಕಾರದೊಂದಿಗೆ ನಡೆಯುತ್ತಿದ್ದು, 130 ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ವಸಂತ ವೇದ ಶಿಬಿರದ ಸಮಾರೋಪವು ಮೇ 14 ರ ಜಗದ್ಗುರುಗಳವರ ಪಟ್ಟಾಭಿಷೇಕ ವರ್ಧಂತಿಯಂದು ನಡೆಯಲಿದೆ.

ಕಾಪು : ಪುರಸಭಾ ವ್ಯಾಪ್ತಿಯ ಭಾರತ್ ನಗರ ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರಿಂದ ಪ್ರಚಾರ ಸಭೆ

Thumbnail
Posted On: 07 May 2023, 11:38 AM

ಕಾಪು : ಪುರಸಭಾ ವ್ಯಾಪ್ತಿಯ ಭಾರತ್ ನಗರ ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ವಿನಯ್ ಕುಮಾರ್ ಸೊರಕೆಯವರ ಪರವಾಗಿ ಚುನಾವಣಾ ಪ್ರಚಾರ ಸಭೆ ನಡೆಸಲಾಯಿತು. ವಿನಯ್ ಕುಮಾರ್ ಸೊರಕೆಯವರು ಮತದಾರ ಬಾಂಧವರಲ್ಲಿ ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ಮತ ಹಾಕಿ ಗೆಲ್ಲಿಸಬೇಕು ಮತ್ತು ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮತಯಾಚಿಸಿದರು. ಕೆ.ಪಿ.ಸಿ.ಸಿ ಕಾರ್ಯದರ್ಶಿಗಳಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಕೆ.ಪಿ.ಸಿ.ಸಿ ಸಂಯೋಜಕರಾದ ನವೀನ್ ಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಕಾಪು ದಿವಾಕರ್ ಶೆಟ್ಟಿ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಜಿತೇಂದ್ರ ಫುರ್ಟಾಡೋ ರವರು ಸೊರಕೆಯವರ ಸಾಧನೆಗಳ ಬಗ್ಗೆ ವಿವರಿಸಿ, ಮುಂದೆ ಶಾಸಕರಾಗಿ ಚುನಾಯಿತರಾದರೆ ಏನು ಮಾಡುತ್ತಾರೆ ಎನ್ನುವ ದೃಷ್ಟಿಕೋನವನ್ನು ಇಟ್ಟುಕೊಂಡಿದ್ದಾರೆ ಎಂಬುದನ್ನು ತಿಳಿಸಿದರು. ಪಕ್ಷದ ಪ್ರಮುಖರಾದ ಅಮೀರ್ ಮೊಹಮ್ಮದ್, ಹರೀಶ್ ನಾಯಕ್, ಸೌಮ್ಯ ಸಂಜೀವ, ಶೋಭಾ ಪಾಂಗಳ, ಲಕ್ಷ್ಮೀಶ ತಂತ್ರಿ, ಸಂಧ್ಯಾ ಬಾಲಕೃಷ್ಣ, ಹಬೀಬ್ ಖಾನ್, ಕೆ.ಎಂ. ರಝಕ್, ಶಂಶುದ್ದೀನ್, ರಜಾಬ್ ಉಮ್ಮರ್, ಮೋಹನ್ ದಾಸ್ ಶೆಣೈ, ಮೋಹಿನಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.