Updated News From Kaup
ಕಾಪು : ನಾಗೇಶ್ ಸುವರ್ಣ ನಿಧನ
Posted On: 12-04-2023 09:46AM
ಕಾಪು : ಇಲ್ಲಿನ ಪುರಸಭೆಯ ಮಾಜಿ ಸದಸ್ಯ ನಾಗೇಶ್ ಸುವರ್ಣ (54) ಅವರು ಮಂಗಳವಾರ ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ನಿಧನರಾದರು.
ಪಡುಬಿದ್ರಿ : ಚುನಾವಣೆಯ ಪ್ರಯುಕ್ತ ಪೋಲಿಸ್ ಪಥಸಂಚಲನ
Posted On: 11-04-2023 11:00PM
ಪಡುಬಿದ್ರಿ : ವಿಧಾನಸಭಾ ಚುನಾವಣೆಯ ಪ್ರಯುಕ್ತ ಪಡುಬಿದ್ರಿಯಲ್ಲಿ ಶಿರ್ವ, ಕಾಪು, ಪಡುಬಿದ್ರಿ ಪೋಲಿಸರು ಹಾಗೂ ಸಿ ಆರ್ ಪಿ ತಂಡದಿಂದ ಇಂದು ಸಂಜೆ ಪಥಸಂಚಲನ ನಡೆಯಿತು.
ಉಡುಪಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಯಶ್ಪಾಲ್ ಎ. ಸುವರ್ಣ ಆಯ್ಕೆ
Posted On: 11-04-2023 10:31PM
ಉಡುಪಿ : ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಯಶ್ಪಾಲ್ ಎ. ಸುವರ್ಣರನ್ನು ಬಿಜೆಪಿ ಪಕ್ಷ ಆಯ್ಕೆ ಮಾಡಿದೆ.
ಕಾಪು : ಬಿಜೆಪಿಯಿಂದ ಗುರ್ಮೆ ಸುರೇಶ್ ಶೆಟ್ಟಿ ಅಭ್ಯರ್ಥಿಯಾಗಿ ಆಯ್ಕೆ
Posted On: 11-04-2023 09:48PM
ಕಾಪು : ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಮಾಜ ಸೇವಕ, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಏಪ್ರಿಲ್ 23, 24 : ಬೊಲ್ಲೆಟ್ಟು ಆಲಡೆಯಲ್ಲಿ ಆಯನೋತ್ಸವ - ಸಿರಿಗಳ ಜಾತ್ರೆ, ಮಹಾ ಅನ್ನ ಸಂತರ್ಪಣೆ
Posted On: 11-04-2023 06:05PM
ಕಾಪು : ಇತಿಹಾಸ ಪ್ರಸಿದ್ಧ ಎಲ್ಲೂರು ಸೀಮೆಯ ಶ್ರೀ ಬ್ರಹ್ಮಲಿಂಗೇಶ್ವರ ಆಲಡೆಯಲ್ಲಿ ನಡೆಯುವ ಧ್ವಜಾರೋಹಣ ಪೂರ್ವಕ ವರ್ಷಾವಧಿ ಆಯನೋತ್ಸವ - ಸಿರಿಗಳ ಜಾತ್ರೆ ಹಾಗೂ ಮಹಾ ಅನ್ನಸಂತರ್ಪಣೆ ಏಪ್ರಿಲ್ 23, 24 ರಂದು ಜರಗಲಿದೆ.
ಬಂಟಕಲ್ಲು : ಪ್ರಾಧ್ಯಾಪಕಿ ರೆನಿಟಾ ಶರೋನ್ ಮೋನಿಸ್ ಅವರಿಗೆ ಪಿಎಚ್ಡಿ ಪದವಿ
Posted On: 09-04-2023 11:48AM
ಬಂಟಕಲ್ಲು : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿಯಾದ ರೆನಿಟಾ ಶರೋನ್ ಮೋನಿಸ್ ಇವರು ಎಮ್.ಐ.ಟಿ.ಇ ತಾಂತ್ರಿಕ ಮಹಾವಿದ್ಯಾಲಯ, ಮೂಡುಬಿದ್ರಿ, ಮಂಗಳೂರು ಇಲ್ಲಿಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿಯಾದ ಡಾ. ಆಶಾ ಕ್ರಾಸ್ಟಾ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ಎಸ್ಟಿಮೇಟ್ ಆಫ್ ಅನ್ಸ್ಟಡಿ ಸ್ಟೆಬಿಲಿಟಿ ಡಿರೈವೆಟೀಸ್ ಫಾರ್ ಡೆಲ್ಟಾ ವಿಂಗ್ಸ್ ಇನ್ ಹೈ ಸ್ಪೀಡ್ ಫ್ಲೋ ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಪ್ರಾಧ್ಯಾಪಕಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಎಂ.ಎಸ್.ಆರ್.ಎಸ್ ಕಾಲೇಜ್ ಶಿರ್ವ ಹಳೆ ವಿದ್ಯಾರ್ಥಿ ಸಂಘ ಮುಂಬೈ - ವಾರ್ಷಿಕೋತ್ಸವ
Posted On: 09-04-2023 11:18AM
ಶಿರ್ವ : ಬ್ಯಾಂಕಿಂಗ್ ಕ್ಷೇತ್ರದ ಧುರೀಣ ಕೀರ್ತಿಶೇಷ ಮೂಲ್ಕಿ ಸುಂದರ್ ರಾಮ್ ಶೆಟ್ಟಿಯವರು ವಿಜಯ ಬ್ಯಾಂಕಿನ ಆಡಳಿತ ನಿರ್ದೇಶಕರಾಗಿದ್ದ ಕಾಲಘಟ್ಟದಲ್ಲಿ ತುಳುನಾಡಿನ ವಿದ್ಯಾವಂತರನ್ನು ಕರೆ ಕರೆದು ಮನೆಗೊಬ್ಬರಂತೆ ಕೆಲಸ ನೀಡಿದವರು ಎಂದು ತುಂಗಾ ಸಮೂಹ ಹೋಟೆಲುಗಳ ಆಡಳಿತ ನಿರ್ದೇಶಕ ಶ ಸುಧಾಕರ್ ಹೆಗ್ಡೆಯವರು ನುಡಿದರು. ಅವರು ಎಪ್ರಿಲ್ 2ರಂದು ಮಲಾಡ್ ಪಶ್ಚಿಮದ ಹೋಟೆಲ್ ಸಾಯಿ ಪ್ಯಾಲೇಸ್ ಗ್ರ್ಯಾಂಡ್ ಇಲ್ಲಿ ನಡೆದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜ್ ಶಿರ್ವ ಹಳೆ ವಿದ್ಯಾರ್ಥಿ ಸಂಘ ಮುಂಬೈ ಘಟಕದ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮುಂದುವರಿದು ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ವ್ಯಾಸಂಗಮಾಡಿದವರು ಇಂದು ದೇಶ ವಿದೇಶಗಳಲ್ಲಿ ದೊಡ್ಡ ದೊಡ್ಡ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಹೆತ್ತು ಹೊತ್ತು ಸಾಕಿದ ತಂದೆ ತಾಯಿಗಳನ್ನು ಹಾಗೂ ನಮಗೆ ವಿದ್ಯೆ ನೀಡಿದ ಸಂಸ್ಥೆಗಳನ್ನು ಎಂದಿಗೂ ನಾವು ಮರೆಯಬಾರದು. ಉದಯ್ ಸುಂದರ್ ಶೆಟ್ಟಿಯವರ ದಕ್ಷ ಅಧ್ಯಕ್ಷತೆಯಲ್ಲಿ ಈ ಹಿರಿಯ ವಿದ್ಯಾರ್ಥಿಗಳ ಸಂಘವು ಬೆಳೆದು ಬಂದ ರೀತಿ ಮತ್ತು ತಾವು ಕಲಿತ ಕಾಲೇಜಿನ ಬಲವರ್ಧನೆಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.
ಕಾಪು : ಶಂಕರಪುರದಲ್ಲಿ ವಿಶ್ವ ಆರೋಗ್ಯ ದಿನಾಚರಣೆ
Posted On: 07-04-2023 03:53PM
ಕಾಪು : ರೋಟರಿ ಕ್ಲಬ್ ಶಂಕರಪುರ ಮತ್ತು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿ ಜಂಟಿಯಾಗಿ ವಿಶ್ವ ಆರೋಗ್ಯ ದಿನಾಚರಣೆಯನ್ನು ರೋಟರಿ ಭವನ ಶಂಕರಪುರದಲ್ಲಿ ಆಚರಿಸಲಾಯಿತು.
ಸಸಿಹಿತ್ಲು ಭಗವತಿ ಯಕ್ಷಗಾನ ಮೇಳದ ಕಲಾವಿದ ನಲ್ಕ ಜಗದೀಶ ನಿಧನ
Posted On: 07-04-2023 03:36PM
ಮುಲ್ಕಿ : ಸಸಿಹಿತ್ಲು ಭಗವತಿ ಯಕ್ಷಗಾನ ಮೇಳದ ಹಿರಿಯ ಕಲಾವಿದ ನಲ್ಕ ಜಗದೀಶ ( 56 ) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಎಪ್ರಿಲ್ 11 ರಂದು ವಿದ್ಯುತ್ ವ್ಯತ್ಯಯ
Posted On: 07-04-2023 12:05PM
ಉಡುಪಿ : ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಎಪ್ರಿಲ್ 11 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
