Updated News From Kaup
ಕಾಪು : ದೇವಾಡಿಗರ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನಕ್ಕಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ

Posted On: 25-02-2023 06:29PM
ಕಾಪು : ಇಲ್ಲಿನ ದೇವಾಡಿಗರ ಸಂಘದ ಸಮುದಾಯ ಭವನ ನಿರ್ಮಾಣಕ್ಕಾಗಿ ಸರಕಾರದಿಂದ ಅನುದಾನ ಪಡೆಯುವ ಬಗ್ಗೆ ಪ್ರಶಾಂತ್ ಕುಮಾರ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಧ್ಯಕ್ಷ ಗೋವರ್ಧನ್ ಸೇರಿಗಾರ್ ಮತ್ತು ದೇವಾಡಿಗ ಸಮಾಜದ ನಾಯಕರು ಸೇರಿ ಹೆಚ್ಚಿನ ಅನುದಾನ ನೀಡುವಂತೆ ಮನವಿ ನೀಡಿದರು.
ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ನಾರಾಯಣ ದೇವಾಡಿಗ, ಭಾಸ್ಕರ್ ದೇವಾಡಿಗ, ಉಪಾಧ್ಯಕ್ಷ ರಂಜಿತ್ ದೇವಾಡಿಗ ಕಲ್ಯಾ, ಚಂದ್ರಶೇಖರ್ ದೇವಾಡಿಗ, ಕಾರ್ಯದರ್ಶಿ ದೀಪಕ್ ದೇವಾಡಿಗ ಮಲ್ಲಾರ್, ಕೋಶಾಧಿಕಾರಿ ಶ್ರೀಧರ್ ದೇವಾಡಿಗ, ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ದೇವಾಡಿಗ, ಸದಸ್ಯರಾದ ರೇಣುಕಾ ಧನಂಜಯ್, ಜಯಂತಿ ದೇವಾಡಿಗ ಕಲ್ಯಾ, ಮಂಜುನಾಥ್ ದೇವಾಡಿಗ, ಯಶ್ವಿನ್ ದೇವಾಡಿಗ, ಪ್ರವೀಣ್ ದೇವಾಡಿಗ, ಪುರಸಭಾ ಸದಸ್ಯರಾದ ಲತಾ ದೇವಾಡಿಗ ಮತ್ತು ಸುರೇಶ್ ದೇವಾಡಿಗ ಉಪಸ್ಥಿತರಿದ್ದರು.
ಇಂದು - ನಾಳೆ : ಕಟಪಾಡಿ ಕಂಬಳ

Posted On: 25-02-2023 06:18PM
ಕಟಪಾಡಿ : ತುಳುನಾಡಿನ ಇತಿಹಾಸದಲ್ಲಿ ಪ್ರಾಮುಖ್ಯತೆ ಗಳಿಸಿರುವ ಕಟಪಾಡಿ ಕಂಬಳಕ್ಕೆ ಇಂದು ಚಾಲನೆ ನೀಡಲಾಯಿತು.
ರಾಜ ಮನೆತನದ ಸಂಪ್ರದಾಯವನ್ನು ಅನುಸರಿಸಿ ಕಂಬಳದ ನಿಯಮಗಳನ್ನು ಪಾಲಿಸಿಕೊಂಡು ಬರಲಾಗುತ್ತಿದೆ.
ಹೊನಲು ಬೆಳಕಿನ ಕಂಬಳವನ್ನೂ ಆಯೋಜಿಸಲಾಗಿದ್ದು ಸಾವಿರಾರು ಮಂದಿ ಕಂಬಳ ಪ್ರೇಮಿಗಳು ವೀಕ್ಷಿಸಲಿದ್ದಾರೆ.
ಫೆಬ್ರವರಿ 25 : ಪಡುಬಿದ್ರಿ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ಢಕ್ಕೆಬಲಿ ಸೇವೆ

Posted On: 24-02-2023 11:30PM
ಪಡುಬಿದ್ರಿ : ಇಲ್ಲಿನ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ಅಂಗಡಿಗುತ್ತು ಸುಜಯ್ ಕುಮಾರ್ ಶೆಟ್ಟಿ , ಅವರಾಲು ಕಂಕಣಗುತ್ತು ಅಮೃತಾ ಎಸ್ ಶೆಟ್ಟಿ ಇವರ ಪರಿವಾರದಿಂದ ಫೆಬ್ರವರಿ 25, ಶನಿವಾರದಂದು ಢಕ್ಕೆಬಲಿ ಸೇವೆಯು ನಡೆಯಲಿದೆ.
ಆ ದಿನ ಮಧ್ಯಾಹ್ನ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಅನ್ನಸಂತರ್ಪಣೆ ಜರುಗಿ, ಸಂಜೆ 4 ಗಂಟೆಯಿಂದ ಫಲ ಪುಷ್ಪ ತಾಂಬೂಲಾ ಪರಿಕರ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.
ಅನ್ನಸಂತರ್ಪಣೆ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿ, ಈ ಪುಣ್ಯ ಸೇವೆಯಲ್ಲಿ ಭಕ್ತ ಮಹಾಶಯರೆಲ್ಲರೂ ಸಕಾಲದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಶ್ರೀ ಖಡ್ಗೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ಸುಜಯ ಕುಮಾರ್ ಶೆಟ್ಟಿ ಹಾಗೂ ಅಮೃತಾ ಎಸ್ ಶೆಟ್ಟಿ, ಸಚಿ ಶೆಟ್ಟಿ, ಸವ್ಯ ಶೆಟ್ಟಿ, ಎಸ್. ಕೆ. ಎಸ್. ಕಾರ್ಕಳ ಇನ್ ಫ್ರಾ. ಪ್ರೈ. ಲಿ. ವತಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಮಾರ್ಚ್ 8 : ಬೆಳಪು ಬಡಿಕೇರಿ ಪದ್ಮಶ್ರೀ ಮನೆಯ ವಠಾರದಲ್ಲಿ ಶ್ರೀ ದೇವಿ ಮಹಾತ್ಮೆ

Posted On: 24-02-2023 07:49PM
ಕಾಪು : ಬೆಳಪು ಗ್ರಾಮದ ಬಡಿಕೇರಿ ಪದ್ಮಶ್ರೀ ಮನೆಯ ವಠಾರದಲ್ಲಿ ಮಾರ್ಚ್ 8, ಬುಧವಾರ ಸಂಜೆ 5.30 ಕ್ಕೆ ಚೌಕಿ ಪೂಜೆ ಆರಂಭಗೊಳ್ಳುವುದರೊಂದಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರ ಶ್ರೀ ದೇವಿ ಮಹಾತ್ಮೆ (ಕಾಲಮಿತಿ ಯಕ್ಷಗಾನ) ಎಂಬ ಪ್ರಸಂಗ ನಡೆಯಲಿದೆ.
ಅಂದು ಸಂಜೆ 7.30 ರಿಂದ 8.30 ರವರೆಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಶ್ರೀಮತಿ ಸುಕನ್ಯಾ ಮತ್ತು ಶ್ರೀ ಹರಿರಾವ್ ಹಾಗೂ ಮಕ್ಕಳು ಬಡಿಕೇರಿ, ಮಲಂಗೋಳಿ ಪಣಿಯೂರು ಇವರು ಪ್ರಕಟಣೆಯಲ್ಲಿ ತಿಳಿಸಿರುವರು.
ಕಾಪು : ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನಕ್ಕೆ ಬಂಜಾರ ಗ್ರೂಪ್ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಭೇಟಿ ; ಸನ್ಮಾನ

Posted On: 22-02-2023 06:09PM
ಕಾಪು : ಫೆಬ್ರವರಿ 22ರಿಂದ 25 ರವರೆಗೆ ಪುನರ್ ಪ್ರತಿಷ್ಟೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ ನಡೆಯಲಿರುವ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನಕ್ಕೆ ಬಂಜಾರ ಗ್ರೂಪ್ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಭೇಟಿ ನೀಡಿದರು.
ಈ ಸಂದರ್ಭ ಜೀರ್ಣೋದ್ಧಾರಕ್ಕೆ ಸಂಪೂರ್ಣ ಸಹಕಾರ ನೀಡಿ, ಸ್ವಾಗತ ಗೋಪುರದ ಪ್ರಾಯೋಜಕತ್ವ ವಹಿಸಿರುವ ಅವರನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಐಕಳಭಾವ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭ ಗುತ್ತಿನಾರ್ ಯೋಗೀಶ್ ಶೆಟ್ಟಿ ಪಣಿಯೂರುಗುತ್ತು, ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು, ಹರೀಶ್ ನಾಯಕ್ ಕಾಪು, ಸುಕುಮಾರ್ ಶೆಟ್ಟಿ ನಡಿಮನೆ, ಉದಯ ಶೆಟ್ಟಿ ಪಡುಮನೆ, ರಾಕೇಶ್ ಕುಂಜೂರು, ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸ್ಥಳವಂದಿಗರು ಉಪಸ್ಥಿತರಿದ್ದರು.
ಮಾಚ್೯ 12 - 14 : ಕಟಪಾಡಿ ಏಣಗುಡ್ಡೆ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ಕಾಲಾವಧಿ ಜಾತ್ರೆ

Posted On: 22-02-2023 03:02PM
ಕಟಪಾಡಿ : ಇಲ್ಲಿನ ಏಣಗುಡ್ಡೆ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ಮಾಚ್೯13, ಸೋಮವಾರ ಜರಗಲಿದೆ.
ಮಾಚ್೯ 12, ಆದಿತ್ಯವಾರ ಬೆಳಿಗ್ಗೆ ಗಂಟೆ 11:45ಕ್ಕೆ ಧ್ವಜಾರೋಹಣ ರಾತ್ರಿ ಗಂಟೆ 7ರಿಂದ ಅನ್ನ ನೈವೇದ್ಯದ ಅಗೆಲುಸೇವೆ, ಮಾಚ್೯ 13, ಸೋಮವಾರ ಸಂಜೆ ಗಂಟೆ 6:30ಕ್ಕೆ ಶ್ರೀ ಬೈದೇರುಗಳ ನೇಮೋತ್ಸವ, ರಾತ್ರಿ ಗಂಟೆ 8ಕ್ಕೆ ಮಹಾ ಅನ್ನಸಂತರ್ಪಣೆ, ಮಾಚ್೯ 14, ಮಂಗಳವಾರ ಸಂಜೆ ಗಂಟೆ 3ಕ್ಕೆ ಮಾಯಂದಾಲ ನೇಮ ರಾತ್ರಿ ಗಂಟೆ 8ಕ್ಕೆ ಪರಿವಾರ ದೈವಗಳ ನೇಮ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಫೆ. 22ರಿಂದ 25 : ಪಣಿಯೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ನೇಮ

Posted On: 21-02-2023 08:36PM
ಕಾಪು : ತಾಲೂಕಿನ ಪಣಿಯೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಫೆಬ್ರವರಿ 22ರಿಂದ 25ರವರೆಗೆ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ನೆರವೇರಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿಯವರು ಮಂಗಳವಾರ ಪಣಿಯೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ವೇ| ಮೂ| ಬೆಟ್ಟಿಗೆ ವೆಂಕಟರಾಜ ತಂತ್ರಿಗಳ ನೇತೃತ್ವದಲ್ಲಿ ಫೆಬ್ರವರಿ 22ರಿಂದ ಮೊದಲ್ಗೊಂಡು ಫೆಬ್ರವರಿ 25ರವರೆಗೆ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ಜರಗಲಿದೆ.
ಪತ್ರಿಕಾಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ, ಸುಕುಮಾರ್ ಶೆಟ್ಟಿ ನಡಿಮನೆ, ಗುತ್ತಿನಾರ್ ಯೋಗೀಶ್ ಶೆಟ್ಟಿ ಮಣಿಯೂರು ಗುತ್ತು, ಕಾರ್ಯದರ್ಶಿ ಗಣೇಶ್ ಶೆಟ್ಟಿ, ಗುರಿಕಾರ ಶಂಕರ ಬಿ. ಪ್ರಚಾರ ಸಮಿತಿಯ ಸತೀಷ್ ಶೆಟ್ಟಿ ಗುಡ್ಡೆಚ್ಚಿ, ರಾಕೇಶ್ ಕುಂಜೂರು ಮತ್ತಿತರರು ಉಪಸ್ಥಿತರಿದ್ದರು.
ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಗಲು ರಥೋತ್ಸವ ರಥಾರೋಹಣ ಸಂಪನ್ನ

Posted On: 21-02-2023 07:28PM
ಉಚ್ಚಿಲ : ಇಲ್ಲಿನ ಪುರಾಣ ಪ್ರಸಿದ್ಧ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇಗುಲದ ವಾರ್ಷಿಕ ಹಗಲು ರಥೋತ್ಸವ ಹಾಗೂ ರಥಾರೋಹಣ ಮಂಗಳವಾರ ಮಧ್ಯಾಹ್ನ ಸಂಪನ್ನಗೊಂಡಿತು.
ದೇವಳದ ತಂತ್ರಿ ವರ್ಯರಾದ ಶ್ರೀ ರಾಧಾಕೃಷ್ಣ ಉಪಾಧ್ಯಾಯ, ಆಡಳಿತಾಧಿಕಾರಿ ಕಾಪು ತಹಶಿಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಸಿಬ್ಬಂದಿ ವರ್ಗ, ಅರ್ಚಕರ ಸಹಿತ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ ಅನ್ನಸಂತರ್ಪಣೆಯೂ ನೆರವೇರಿತು.
ಪಡುಬಿದ್ರಿ : ಢಕ್ಕೆ ಬಲಿ ಸೇವೆ ; ಹೊರೆ ಕಾಣಿಕೆ ಮೆರವಣಿಗೆ

Posted On: 21-02-2023 05:57PM
ಪಡುಬಿದ್ರಿ : ಇಲ್ಲಿನ ಕಲ್ಲಟ್ಟೆ ಜಾರಂದಾಯ ದೈವಸ್ಥಾನದಿಂದ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ನಡೆಯಲಿರುವ ಢಕ್ಕೆ ಬಲಿ ಸೇವೆಯ ಪ್ರಯುಕ್ತ ಫಲಪುಷ್ಪ ತಾಂಬೂಲ ಪರಿಕರ ಹೊರಕಾಣಿಕೆ ಮೆರವಣಿಗೆಯು ಮಂಗಳವಾರ ವಿಜೃಂಭಣೆಯಿಂದ ಜರಗಿತು.

ಮಧ್ಯಾಹ್ನ ಜಾರಂದಾಯ ದೈವಸ್ಥಾನದಲ್ಲಿ ಅನ್ನಸಂತರ್ಪಣೆಯು ಜರಗಿದ್ದು ಸುಮಾರು ಐದು ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದ್ದರು.

ಹೊರೆ ಕಾಣಿಕೆ ಮೆರವಣಿಗೆಯಲ್ಲಿ ಪಡುಬಿದ್ರಿ - ಮುಂಬಯಿ ಕಲ್ಲಟ್ಟೆ ಶ್ರೀ ಜಾರಂದಾಯ ಸೇವಾ ಸಮಿತಿ, ಕಲ್ಲಟ್ಟೆ ಶ್ರೀ ಜಾರಂದಾಯ ಯುವಕ ವೃಂದ, ಕಲ್ಲಟ್ಟೆ ಶ್ರೀ ಜಾರಂದಾಯ ಮಹಿಳಾ ಮಂಡಲ, ಗುರಿಕಾರರು, ಊರ ಹತ್ತು ಸಮಸ್ತರು ಪಾಲ್ಗೊಂಡಿದ್ದರು.
ಕುಂಬಾರರ ಬೇಡಿಕೆಯನ್ನು ಸರಕಾರ ನಿರ್ಲಕ್ಷಿಸಿರುವುದು ಬೇಸರ ತಂದಿದೆ : ಅನಿಲ್ ದಾಸ್

Posted On: 21-02-2023 04:27PM
ಮಂಗಳೂರು : ಕುಂಬಾರರ ಬೇಡಿಕೆಯನ್ನು ಸರಕಾರ ನಿರ್ಲಕ್ಷಿಸಿರುವುದು ತುಂಬಾ ಬೇಸರ ತಂದಿದೆ. ಒಂದು ರಾಜಕೀಯ ಪಕ್ಷವನ್ನು ಗೆಲ್ಲಿಸುವಲ್ಲಿ ಹಾಗೂ ಸೋಲಿಸುವುದರಲ್ಲಿ ಕುಲಾಲ-ಕುಂಬಾರರ ಮತಗಳು ನಿರ್ಣಾಯಕವೆನ್ನುವುದನ್ನು ರಾಜಕೀಯ ನಾಯಕರು ಮನಗಂಡಿಲ್ಲ ಎಂದು ಕರ್ನಾಟಕ ರಾಜ್ಯ ಕುಲಾಲ-ಕುಂಬಾರ ಯುವ ವೇದಿಕೆಯ ಮಂಗಳೂರು ವಿಭಾಗದ ಉಪಾಧ್ಯಕ್ಷ ಅನಿಲ್ದಾಸ್ ಹೇಳಿದ್ದಾರೆ.
ರಾಜ್ಯ ಸರಕಾರ ರಾಜ್ಯದಲ್ಲಿ ಇರುವ ಕುಂಬಾರರ ಶ್ರೇಯೋಭಿವೃದ್ಧಿಗೆ ಕುಂಭ ನಿಗಮವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಹಲವಾರು ವರ್ಷಗಳಿಂದ ಆಶ್ವಾಸನೆಗಳನ್ನು ನೀಡುತ್ತಾ ಬಂದಿರುತ್ತದೆ. ಅನೇಕ ಹೋರಾಟ ಹಕ್ಕೊತ್ತಾಯ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷದ ನಾಯಕರುಗಳು ಭರವಸೆಗಳನ್ನು ನೀಡುತ್ತಾ ಬಂದಿದ್ದು, ಇದು ರಾಜಕೀಯ ನಾಯಕರ ಕಾಲಹರಣ ಎಂಬುದು ಕುಂಬಾರರಿಗೆ ಈಗ ಮನದಟ್ಟಾಗಿದೆ. ಈ ಬಾರಿಯ ಬಜೆಟ್ನಲ್ಲಿಯೂ ಮುಖ್ಯಮಂತ್ರಿಗಳು ಕುಂಬಾರರ ಬೇಡಿಕೆಯನ್ನು ನಿರ್ಲಕ್ಷಿಸಿರುವುದು ತುಂಬಾ ಬೇಸರ ತಂದಿದೆ. ಕುಂಬಾರರ ಯುವಶಕ್ತಿ, ಮಹಿಳಾ ಶಕ್ತಿ ರಾಜ್ಯದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ, ಸಮುದಾಯದ ನಿರ್ಲಕ್ಷ್ಯ ಸಲ್ಲದು ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.