Updated News From Kaup
ಎಪ್ರಿಲ್ 11 : ಮಿನಿ ಉದ್ಯೋಗ ಮೇಳ
Posted On: 07-04-2023 11:51AM
ಉಡುಪಿ : ಯುಕ್ತ ಕೌಶಲ್ಯ ತರಬೇತಿ ಕೇಂದ್ರ, ಪ್ರಕಾಶ್ ರಿಟೇಲ್, ಎಸ್.ಬಿ.ಐ ಲೈಫ್ ಇನ್ಶೂರೆನ್ಸ್, ಏಂಜೆಲ್ ಬ್ರೋಕಿಂಗ್ ಪ್ರೈ.ಲಿ. ಮತ್ತು ಮೆಡ್ ಪ್ಲಸ್ ಕಂಪನಿಗಳ ವತಿಯಿಂದ ಎಪ್ರಿಲ್ 11 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಉಡುಪಿ : ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ
Posted On: 07-04-2023 11:45AM
ಉಡುಪಿ : ಇಲ್ಲಿನ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಎಪ್ರಿಲ್ 12 ರಂದು ಬೈಂದೂರು ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಸಲಿದ್ದಾರೆ.
ಉಡುಪಿ : ನಿಯಮ ಉಲ್ಲಂಘಿಸುವ ಪ್ರಿಂಟಿಂಗ್ ಪ್ರೆಸ್ ಗಳ ವಿರುದ್ದ ಕಠಿಣ ಕ್ರಮ - ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 06-04-2023 11:42AM
ಉಡುಪಿ : ಪ್ರಸ್ತುತ ವಿಧಾನಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗ ಸೂಚಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿ, ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್ ಗಳನ್ನು ಮುದ್ರಿಸಿದಲ್ಲಿ ಅಂತಹ ಮುದ್ರಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಇಂದು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಜಿಲ್ಲೆಯ ಪ್ರಿಂಟಿಂಗ್ ಪ್ರೆಸ್ ಮಾಲೀಕರು , ಪ್ಲೆಕ್ಸ್ ಮುದ್ರಕರು ಮತ್ತು ಅವರ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ : ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಶಿಸ್ತು ಕ್ರಮ ಜಾರಿ
Posted On: 05-04-2023 07:32PM
ಉಡುಪಿ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಚುನಾವಣೆ ಮತ್ತು ಪ್ರಚಾರ ಕಾರ್ಯಗಳಲ್ಲಿ ರಾಜಕೀಯ ಪಕ್ಷದವರು ಚುನಾವಣೆ ರ್ಯಾಲಿಯಲ್ಲಿ, ಕರಪತ್ರ ಹಂಚುವಿಕೆ ಕೆಲಸದಲ್ಲಿ, ಪ್ರಚಾರ ಕಾರ್ಯಗಳಲ್ಲಿ ಮತ್ತು ಇತರೆ ಕೆಲಸಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.
ಸತ್ಯಜಿತ್ ಸುರತ್ಕಲ್ ಗೆ ಪೊಲೀಸ್ ಭದ್ರತಾ ಸಿಬ್ಬಂದಿ ನಿಯೋಜಿಸಿ : ಉಡುಪಿ ಜಿಲ್ಲಾ ಶ್ರೀ ನಾರಾಯಣ ಗುರು ವಿಚಾರವೇದಿಕೆಯಿಂದ ಜಿಲ್ಲಾಧಿಕಾರಿಗೆ ಮನವಿ
Posted On: 05-04-2023 12:08PM
ಉಡುಪಿ : ಶ್ರೀ ನಾರಾಯಣ ಗುರು ವಿಚಾರವೇದಿಕೆ ಕರ್ನಾಟಕ ಇದರ ರಾಜ್ಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಅವರಿಗೆ ಕಳೆದ 16 ವರ್ಷ ಗಳಿಂದ ನೀಡಲಾಗಿದ್ದ ಪೊಲೀಸ್ ಭದ್ರತಾ ಸಿಬ್ಬಂದಿಯನ್ನು ಹಿಂದಕ್ಕೆ ಪಡೆದಿರುವ ವಿಚಾರವಾಗಿ ಅವರಿಗೆ ಹಿಂಪಡೆದ ಪೊಲೀಸ್ ಭದ್ರತಾ ಸಿಬ್ಬಂದಿಯನ್ನು ಮತ್ತೆ ನಿಯೋಜಿಸಬೇಕಾಗಿ ಶ್ರೀ ನಾರಾಯಣಗುರು ವಿಚಾರ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಮಾನ್ಯ ಜಿಲ್ಲಾಧಿಕಾರಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಕಾಪು : ಕಿರು ಸೇತುವೆಯ ಕೆಳ ದಂಡೆಗೆ ಡಿಕ್ಕಿ ಹೊಡೆದ ಸ್ಕೂಟರ್ ; ಸವಾರ ಆಸ್ಪತ್ರೆಗೆ ದಾಖಲು
Posted On: 05-04-2023 10:33AM
ಕಾಪು : ತಾಲೂಕಿನ ಮಲ್ಲಾರಿನ ಯುವಕನೋರ್ವನ ಅಜಾಗರೂಕತೆಯ ಸ್ಕೂಟರ್ ಚಾಲನೆಯಿಂದ ಹೆಜಮಾಡಿ ಗ್ರಾಮದ ನರ್ಸರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಿರು ಸೇತುವೆಯ ಕೆಳ ದಂಡೆಗೆ ಡಿಕ್ಕಿ ಹೊಡೆದು, ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಪರಿಣಾಮ, ತಲೆ, ಬೆನ್ನಿಗೆ ಗಂಭೀರ ಗಾಯವಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಕಾಪು : ಬ್ರಹ್ಮಶ್ರೀ ನಾರಾಯಣಗುರುಗಳು ಸಾಮಾಜಿಕ ಕ್ರಾಂತಿ ನಡೆಸಿ, ಜನರನ್ನು ಒಗ್ಗೂಡಿಸಿದ ಮಹಾನ್ ದಾರ್ಶನಿಕ - ವಿಖ್ಯಾತಾನಂದ ಸ್ವಾಮೀಜಿ
Posted On: 04-04-2023 08:53PM
ಕಾಪು : ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಸ್ತ ಹಿಂದೂ ಸಮಾಜದ ಏಳಿಗೆಗಾಗಿ ಸಾಮಾಜಿಕ ಕ್ರಾಂತಿಯನ್ನು ನಡೆಸಿ, ಜನರನ್ನು ಒಗ್ಗೂಡಿಸಿದ ಮಹಾನ್ ದಾರ್ಶನಿಕರು. ಅವರ ಹೆಸರಿನಲ್ಲಿ ಮುನ್ನಡೆಯುತ್ತಿರುವ ಸಂಘ ಸಂಸ್ಥೆಗಳು ಮತ್ತು ಗುರು ಮಂದಿರಗಳ ಮೂಲಕವಾಗಿ ಸಮಾಜದ ಯುವಜನರನ್ನು ಶೈಕ್ಷಣಿಕವಾಗಿ ಉನ್ನತ ಮಟ್ಟದವರೆಗೆ ಕೊಂಡೊಯ್ಯುವ ಪ್ರಯತ್ನಗಳು ನಡೆಯಬೇಕಿವೆ ಎಂದು ಕರ್ನಾಟಕ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು. ಅವರು ಎಪ್ರಿಲ್ 2 ರಂದು ಕಾಪು ಬಿಲ್ಲವರ ಸಹಾಯಕ ಸಂಘದ ನವೀಕೃತ ಶಿಲಾಮಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಮೂರ್ತಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಆಶೀವರ್ಚನ ನೀಡಿದರು.
ಪರಿವರ್ತನ್ ಫಿಟ್ನೆಸ್ ಮತ್ತು ವೆಲ್ನೆಸ್ ಸೆಂಟರ್ ಕಾಪು : ಮಕ್ಕಳಿಗಾಗಿ ಕಿಡ್ಸ್ ಸಮ್ಮರ್ ಕ್ಯಾಂಪ್ - 2023
Posted On: 04-04-2023 07:25PM
ಮಕ್ಕಳಿಗಾಗಿ ಬೇಸಿಗೆಯ ರಜೆಯನ್ನು ಮಜವನ್ನಾಗಿಸುವ ನಿಟ್ಟಿನಲ್ಲಿ 4 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ ಮನೋರಂಜನಾತ್ಮಕ ಮತ್ತು ಕ್ರಿಯಾತ್ಮಕತೆ ಜೊತೆಗೆ ಹೊರಾಂಗಣದ ಚಟುವಟಿಕೆಗಳಿಂದ ಕೂಡಿದ ಕಿಡ್ಸ್ ಸಮ್ಮರ್ ಕ್ಯಾಂಪ್ - 2023ನ್ನು ಪರಿವರ್ತನ್ ಫಿಟ್ನೆಸ್ ಮತ್ತು ವೆಲ್ನೆಸ್ ಸೆಂಟರ್ ಕಾಪು ಇವರು ಕಾಪುವಿನ ಜನಾರ್ಧನ್ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಏಪ್ರಿಲ್ ಮತ್ತು ಮೇನಲ್ಲಿ 2 ಬ್ಯಾಚ್ ಗಳ ಮೂಲಕ ಆಯೋಜಿಸಿರುತ್ತಾರೆ.
ಕಾಪು : ಯುವಸೇನೆ ಮಡುಂಬು - 16ನೇ ವರ್ಷದ ವಾರ್ಷಿಕೋತ್ಸವ ಸಂಪನ್ನ
Posted On: 03-04-2023 08:25PM
ಕಾಪು : ಯುವಸೇನೆ ಮಡುಂಬು ಇದರ 16ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಎಪ್ರಿಲ್ 1 ರಂದು ಮಡುಂಬು ಬೆರ್ಮೋಟ್ಟು ದೇವಸ್ಥಾನದ ಬಳಿ ನಡೆದ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮವನ್ನು ವಿದ್ವಾನ್ ಕೆ.ಪಿ.ಶ್ರೀನಿವಾಸ ತಂತ್ರಿ ಉದ್ಘಾಟಿಸಿದರು.
ಉಡುಪಿ : ಅಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್ಗಳ ತೆರವಿಗೆ ಸೂಚನೆ
Posted On: 03-04-2023 07:44PM
ಉಡುಪಿ : ರಾಜ್ಯ ವಿಧಾನಸಭೆ ಚುನಾವಣೆ - 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್ಗಳನ್ನು ತೆರವುಗೊಳಿಸಬೇಕು ಮತ್ತು ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್ಗಳನ್ನು ಅಳವಡಿಸದಂತೆ ಆಟೋರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು.
