Updated News From Kaup

ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥಾರೋಹಣ ಸಂಪನ್ನ

Posted On: 22-03-2023 10:38AM

ಪಡುಬಿದ್ರಿ : ಇತಿಹಾಸ ಪ್ರಸಿದ್ದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವದ ಪ್ರಯುಕ್ತ ಮಾ. 21ರಂದು ಮಧ್ಯಾಹ್ನ ರಥಾರೋಹಣ ಮತ್ತು ರಾತ್ರಿ ಶ್ರೀಮನ್ಮಹಾರಥೋತ್ಸವ ಸಂಪನ್ನಗೊಂಡಿತು.

ವರ್ಷಾವಧಿ ಉತ್ಸವದ ಧಾರ್ಮಿಕ ವಿಧಿವಿಧಾನಗಳು ಶ್ರೀ ಕ್ಷೇತ್ರದ ತಂತ್ರಿಗಳಾದ ವೇದ ಮೂರ್ತಿ ಕಂಬ್ಳಕಟ್ಟ ಶ್ರೀ ಶಿವರಾಜ ರಾಧಾಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಜರಗಿದವು. ನಿತ್ಯಪೂಜೆ, ನಿತ್ಯಬಲಿ, ಪಲ್ಲಪೂಜೆ, ರಥಶುದ್ಧಿಗಳ ಬಳಿಕ ರಥಾರೋಹಣ ನಡೆಯಿತು. ಮಧ್ಯಾಹ್ನ ಸಹಸ್ರಾರು ಮಂದಿ ಅನ್ನಪ್ರಸಾದವನ್ನು ಸ್ವೀಕರಿಸಿದರು. ರಾತ್ರಿ ಶ್ರೀಮನ್ಮಹಾರಥೋತ್ಸವ, ಭೂತಬಲಿ, ಕವಾಟಬಂಧನ ಇತ್ಯಾದಿಗಳು ನೆರವೇರಿದವು.

ಅನುವಂಶಿಕ ಮೊಕ್ತೇಸರರಾದ ಪಡುಬಿದ್ರಿ ಬೀಡು ರತ್ನಾಕರ ರಾಜ ಅರಸು ಕಿನ್ಯಕ್ಕ ಬಲ್ಲಾಳ್ ಮತ್ತು ಪಿ. ಭವಾನಿಶಂಕರ ಹೆಗ್ಡೆ ಹಾಗೂ ದೇವಸ್ಥಾನದ ಅರ್ಚಕರಾದ ಎಚ್‌. ಪದ್ಮನಾಭ ಭಟ್, ವೈ. ಗುರುರಾಜ ಭಟ್, ದೇವಾಲಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಭಕ್ತರು ಉಪಸ್ಥಿತರಿದ್ದರು.

ಇಂದು ಮತ್ತು ನಾಳೆ : ಕಾಪುವಿನ ಮೂರು ಮಾರಿಗುಡಿಗಳಲ್ಲಿ ಮಾರಿಪೂಜೆಯ ಸಂಭ್ರಮ

Posted On: 21-03-2023 03:15PM

ಕಾಪು : ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಮೂರನೇ ಮಾರಿಯಮ್ಮ ದೇವಸ್ಥಾನದಲ್ಲಿ ಜರಗುವ ಕಾಲಾವಧಿ ಸುಗ್ಗಿ ಮಾರಿಪೂಜೆಯು ಈ ಬಾರಿ ಮಾಚ್೯ 21 ಮತ್ತು 22ರಂದು ನಡೆಯಲಿದೆ.

ಈ ನಿಮಿತ್ತ ಮಂಗಳವಾರ ಸಂಜೆ ಪ್ರಾರಂಭಗೊಂಡು ಬುಧವಾರ ಸಂಜೆಯವರೆಗೆ ಎರಡು ದಿನಗಳ ಕಾಲ ಜರಗುವ ಮಾರಿಪೂಜೆಯ ಸಂದರ್ಭದಲ್ಲಿ ವಿವಿಧೆಡೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.

ಕಾಲಾವಧಿ ಸುಗ್ಗಿ ಮಾರಿಪೂಜೆಯ ಪ್ರಯುಕ್ತ ಮಂಗಳವಾರ ರಾತ್ರಿ ಶ್ರೀ ಹಳೇ ಮಾರಿಯಮ್ಮನ ಸನ್ನಿಧಿಗೆ ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಶ್ರೀ ಹೊಸ ಮಾರಿಗುಡಿ ಮತ್ತು ಶ್ರೀ ಮೂರನೇಮಾರಿಗುಡಿಯ ಮಾರಿಯಮ್ಮನ ಸನ್ನಿಧಿಗೆ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ಮಾರಿಯಮ್ಮ ದೇವಿಯ ಸ್ವರ್ಣಾಭರಣಗಳನ್ನು ತಂದು, ಗದ್ದುಗೆಯಲ್ಲಿ ಮಾರಿಯಮ್ಮ ದೇವಿಯ ಬಿಂಬವನ್ನು ಪ್ರತಿಷ್ಠಾಪಿಸಿ ಅಲಂಕರಿಸಿ ಮಾರಿಪೂಜೆ ಜಾತ್ರೆಗೆ ಚಾಲನೆ ನೀಡಲಾಗುತ್ತದೆ. ಅಲಂಕಾರದ ಬಳಿಕ ರಾತ್ರಿ ದರ್ಶನ ಸೇವೆ ನಡೆದು, ಸಂಪ್ರದಾಯದಂತೆ ಭಕ್ತರಿಂದ ವಿವಿಧ ಹರಕೆಗಳು ಸಮರ್ಪಣೆಗೊಳ್ಳುತ್ತದೆ.

ಭಕ್ತರು ದೇವಿಯ ಗಣಗಳಿಗೆ ರಕ್ತಾಹಾರದ ಸೇವೆಯನ್ನು ಸಮರ್ಪಿಸುವ ಮೂಲಕ ತಮ್ಮ ನಂಬಿಕೆಯನ್ನು ಅನಾವರಣಗೊಳಿಸುತ್ತಾರೆ. ಬುಧವಾರ ಸಂಜೆ ಮೂರೂ ಮಾರಿಗುಡಿಗಳಲ್ಲಿಯೂ ಮಾರಿಯಮ್ಮ ದೇವಿಯ ದರ್ಶನ ಸೇವೆ ನಡೆದು ದರ್ಶನಾವೇಶದೊಂದಿಗೆ ಮಾರಿಯಮ್ಮ ದೇವಿಯನ್ನು ಗದ್ದುಗೆಯಿಂದ ಕೆಳಗಿಳಿಸಲಾಗುತ್ತದೆ. ಗದ್ದುಗೆಯಿಂದ ಕೆಳಗಿಳಿಸಿದ ಬಿಂಬವನ್ನು ಮಲ್ಲಾರಿನ ನಿರ್ದಿಷ್ಟ ಪ್ರದೇಶಕ್ಕೆ ಕೊಂಡೊಯ್ದು ವಿಸರ್ಜಿಸುವ ಮೂಲಕ ಮಾರಿಪೂಜಾ ಮಹೋತ್ಸವಕ್ಕೆ ತೆರೆ ಎಳೆಯಲಾಗುತ್ತದೆ.

ಪಡುಬಿದ್ರಿ : ರಥೋತ್ಸವದ ಅಂಗವಾಗಿ ತುಳುನಾಡ ಕಲಾವಿದರು ವತಿಯಿಂದ ಜರಗಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

Posted On: 19-03-2023 09:48PM

ಪಡುಬಿದ್ರಿ : ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿರುವ ಪಡುಬಿದ್ರಿಯ ತುಳುನಾಡ ಕಲಾವಿದರು ಸಂಘಟನೆಯ ಕಾರ್ಯ ಶ್ಲಾಘನೀಯ. ಪಡುಬಿದ್ರಿ ಭಾಗದಲ್ಲಿ ಕಲಾವಿದರಿಗೆ ಕೊರತೆಯಿಲ್ಲ. ಹಲವಾರು ಪ್ರತಿಭೆಗಳಿವೆ. ಇದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿಯ ಅಧ್ಯಕ್ಷರಾದ ವೈ, ಸುಧೀರ್ ಕುಮಾರ್ ಹೇಳಿದರು. ಅವರು ಮಾಚ್೯ 18 ರಂದು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ರಥೋತ್ಸವದ ಅಂಗವಾಗಿ ತುಳುನಾಡ ಕಲಾವಿದರು ಪಡುಬಿದ್ರಿ ವತಿಯಿಂದ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ಮುನ್ನ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವರ್ಷದಿಂದ ವರ್ಷಕ್ಕೆ ಜನರಿಗೆ ಉತ್ತಮವಾದಂತಹ ಮನೋರಂಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹೀಗೆಯೇ ಮುಂದುರಿಯಲಿ ಎಂದರು.

ಕನ್ನಂಗಾರು ಬ್ರಹ್ಮ ಬೈದರ್ಕಳ ಗರಡಿಯ ಅರ್ಚಕರಾದ ಗಿರಿಧರ ಅಂಚನ್, ಬೆಂಗಳೂರಿನ ಯುವ ಉದ್ಯಮಿ ವಿಶ್ವಾಸ್ ವಿ ಅಮೀನ್, ಪಾದೆಬೆಟ್ಟು ಸುಬ್ರಹ್ಮಣ್ಯ ಯುವಕ ಮಂಡಲದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರೋಟರಿ ಕ್ಲಬ್ ಪಡುಬಿದ್ರಿಯ ಪೂರ್ವಾಧ್ಯಕ್ಷರಾದ ಕೃಷ್ಣ ಬಂಗೇರ ಸಂದರ್ಭೋಚಿತವಾಗಿ‌ ಮಾತನಾಡಿದರು.

ಸನ್ಮಾನ : ಸಮಾಜ ಸೇವಕ ಕೃಷ್ಣ ಬಂಗೇರ, ಕಲಾ ಪೋಷಕಿ ಗೀತಾ ಅರುಣ್, ಸಾಂಸ್ಕೃತಿಕ ರಂಗದ ಯುವ ಪ್ರತಿಭೆ ವೈಷ್ಣವಿ ರಾವ್ ನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೈ. ಸುಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ರೋಟರಿ ವಲಯ 5ರ ಪೂರ್ವ ಸಹಾಯಕ ಗವರ್ನರ್ ಗಣೇಶ್ ಆಚಾರ್ಯ ಉಚ್ಚಿಲ, ಪಡುಬಿದ್ರಿಯ ಯುವ ಉದ್ಯಮಿ ಸುನಿಲ್ ಕುಮಾರ್, ಪಡುಬಿದ್ರಿ ರೋಟರಿ ಅಧ್ಯಕ್ಷೆ ಗೀತಾ ಅರುಣ್ ಉಪಸ್ಥಿತರಿದ್ದರು. ತುಳುನಾಡ ಕಲಾವಿದರು ಅಧ್ಯಕ್ಷ ವೈ ಸುಕುಮಾರ್ ಸ್ವಾಗತಿಸಿ, ಪ್ರಸ್ತಾವಿಸಿದರು. ಕಾರ್ಯಕ್ರಮವನ್ನು ಯಶೋದ, ರಾಜೇಶ್ ಶೇರಿಗಾರ್, ಸಂತೋಷ್ ನಿರ್ವಹಿಸಿದರು. ಸ್ಥಾಪಕ ಅಧ್ಯಕ್ಷ ರವೀನ್ ಪಡುಬಿದ್ರಿ ವಂದಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ : ಓಂಕಾರ್ ಕಲಾ ಸಂಗಮ ಇವರಿಂದ ನೃತ್ಯ ವೈಭವ, ತುಳುನಾಡ ಕಲಾವಿದರಿಂದ ಕಿರು ನಾಟಕ ಪರಮ್ ವೀರ್, ವೈಷ್ಣವಿ ಕಲಾವಿದೆರ್ ಕೊಯಿಲ ಮಂಗಳೂರು ವತಿಯಿಂದ ಕುಸೆಲ್ದ ಗೌಜಿ ಹಾಸ್ಯಮಯ ಕಾರ್ಯಕ್ರಮ ಜರಗಿತು.

ಉಡುಪಿ‌ : ಮತದಾನ ಜಾಗೃತಿ - ಕಿರುಚಿತ್ರ ಸ್ಪರ್ಧೆ ವಿಜೇತರು

Posted On: 19-03-2023 05:44PM

ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಅಂಗವಾಗಿ ಸಾರ್ವಜನಿಕರಿಗೆ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಿರುಚಿತ್ರ ನಿರ್ಮಾಣ ಸ್ಪರ್ಧೆಯಲ್ಲಿ ಮೊದಲ ಐದು ಸ್ಥಾನ ಪಡೆದ ಸ್ಪರ್ಧೆಯ ವಿಜೇತರ ವಿವರ ಈ ಕೆಳಗಿನಂತಿದೆ.

ಸಾಧನಾ ಕಟಪಾಡಿ ಅವರ ನನ್ನ ಮತ ನನ್ನ ಹೆಮ್ಮೆ ಕಿರು ಚಿತ್ರವು ಪ್ರಥಮ ಸ್ಥಾನ ಪಡೆದಿದ್ದು, 10,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ, ಆದಿತ್ಯ ಅಂಬಲಪಾಡಿ ಅವರ ಓಟು=02 ಕಿರುಚಿತ್ರಕ್ಕೆ ದ್ವಿತೀಯ ಸ್ಥಾನ ಲಭಿಸಿದ್ದು, 7,500 ರೂ. ನಗದು ಹಾಗೂ ಪ್ರಶಸ್ತಿ ಪತ್ರ, ಕೆ. ಸತ್ಯೇಂದ್ರ ಪೈ ಅವರ ಮತದಾರ ಕಿರುಚಿತ್ರವು ತೃತೀಯ ಸ್ಥಾನ ಪಡೆದಿದ್ದು, 5,000 ರೂ ನಗದು ಹಾಗೂ ಪ್ರಶಸ್ತಿ ಪತ್ರ, ಸುಚಿತ್ರ ಎಸ್ ಅವರ ಮತ ಸಂಭ್ರಮ ಕಿರು ಚಿತ್ರಕ್ಕೆ ನಾಲ್ಕನೇ ಸ್ಥಾನ ಲಭಿಸಿದ್ದು, 2,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ಮತ್ತು ಸತೀಶ್ ಕಲ್ಯಾಣಪುರ ಅವರ ನಮ್ಮ ಓಟು ನಮ್ಮ ಪವರ್ ಕಿರು ಚಿತ್ರವು ಐದನೇ ಸ್ಥಾನ ಪಡೆದಿದ್ದು, 1,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ಪಡೆದಿರುವುದಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಪಡುಬೆಳ್ಳೆ ಘಟಕ - ಗೋಗ್ರಾಸ ಸಮರ್ಪಣೆ

Posted On: 19-03-2023 02:51PM

ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಪಡುಬೆಳ್ಳೆ ಘಟಕದ ನೇತೃತ್ವದಲ್ಲಿ ನೀಲಾವರ ಗೋಶಾಲೆಗಾಗಿ ಗೋಗ್ರಾಸ ಇಂದು ನೀಡಲಾಯಿತು.

ಈ ಪ್ರಯುಕ್ತ ಪಡುಬೆಳ್ಳೆ ದೊಡ್ಡಮನೆಯ ಗದ್ದೆಯಲ್ಲಿ ಬಿತ್ತನೆ ಮಾಡಿದ್ದ ಜೋಳದ ಬೆಳೆಯನ್ನು ಇಂದು ಕಟಾವು ಮಾಡಿ ಗೋಶಾಲೆಗೆ ಸಮರ್ಪಿಸಲಾಯಿತು.

ಕಾಪು : ಬಜರಂಗದಳದ ಸೇವಾ ಸಪ್ತಾಹ ಅಂಗವಾಗಿ ಶಿರ್ವ ಮತ್ತು ಪಾಂಗಾಳ ಘಟಕಗಳಿಂದ ಹಿಂದೂ ರುಧ್ರಭೂಮಿಯ ಸ್ವಚ್ಛತಾ ಕಾರ್ಯ

Posted On: 19-03-2023 02:45PM

ಕಾಪು : ಬಜರಂಗದಳದ ಸೇವಾ ಸಪ್ತಾಹ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಶಿರ್ವ ವಿಷ್ಣುಮೂರ್ತಿ ಘಟಕ ಮತ್ತು ಪಾಂಗಾಳ ಘಟಕ ವತಿಯಿಂದ ಸಾಮಾಜಿಕ ಕಾರ್ಯಗಳು ಇಂದು ಜರಗಿತು.

ಶಿರ್ವ ವಿಷ್ಣುಮೂರ್ತಿ ಘಟಕ ವತಿಯಿಂದ ಶಿರ್ವ ಹಿಂದೂ ರುದ್ರಭೂಮಿ ಮತ್ತು ಪಾಂಗಾಳ ಘಟಕ ವತಿಯಿಂದ ಪಾಂಗಾಳ ಗಾಂಧಿನಗರದ ಹಿಂದೂ ರುಧ್ರಭೂಮಿಯ ಸ್ವಚ್ಛತಾ ಕಾರ್ಯ ನಡೆಯಿತು.

ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು : ಷಷ್ಠಮ ವರ್ಷದ ಸನ್ನಿಧಾನದೆಡೆಗೆ ನಮ್ಮ‌ ನಡಿಗೆ ಪಾದಯಾತ್ರೆ

Posted On: 19-03-2023 02:32PM

ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ಷಷ್ಠಮ ವರ್ಷದ ಸನ್ನಿಧಾನದೆಡೆಗೆ ನಮ್ಮ‌ ನಡಿಗೆ ಪಾದಯಾತ್ರೆ ಮಟ್ಟಾರು ಬಬ್ಬರ್ಯ ಕಟ್ಟೆ ಬಳಿಯಿಂದ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದವರೆಗೆ ಇಂದು ನಡೆಯಿತು.

ಕಾಪು : ಓಂ ಬಬ್ಬು ಸ್ವಾಮಿ ಟ್ರೋಫಿ -2023 ; ಸಿ ಎಫ್ ಸಿ ಚಂದ್ರನಗರ ಪ್ರಥಮ, ಅರಫಾ ಬಾಯ್ಸ್ ಹೆಜಮಾಡಿ ದ್ವಿತೀಯ

Posted On: 19-03-2023 12:52PM

ಕಾಪು : ಓಂ ಶ್ರೀ ಬಬ್ಬು ಸ್ವಾಮಿ ಕ್ರಿಕೆಟರ್ಸ್ ಪಾದೂರು ಇವರ ಆಶ್ರಯದಲ್ಲಿ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಓಂ ಬಬ್ಬು ಸ್ವಾಮಿ ಟ್ರೋಫಿ -2023 ಪಂಜತ್ತೂರು ಮೈದಾನದಲ್ಲಿ ಮಾಚ್೯ 18 ಹಾಗೂ 19ರಂದು ನಡೆಯಿತು.

ಪ್ರಥಮ ಸ್ಥಾನವನ್ನು ಟ್ರೋಫಿ ಸಹಿತ ನಗದು ರೂ. 33,333ನ್ನು ಸಿ ಎಫ್ ಸಿ ಚಂದ್ರನಗರ ತಂಡ, ದ್ವಿತೀಯ ಸ್ಥಾನವನ್ನು ಟ್ರೋಫಿ ಸಹಿತ ನಗದು ರೂ.22,222ನ್ನು ಅರಫಾ ಬಾಯ್ಸ್ ಹೆಜಮಾಡಿ ತಂಡ ಪಡೆದುಕೊಂಡಿದೆ.

ಪಡುಬಿದ್ರಿ ಜಾತ್ರೆ ; ಕಾಪು ಮಾರಿಪೂಜೆಯಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅನುಮತಿ ನೀಡದಂತೆ ಹಿಂದು ಪರ ಸಂಘಟನೆಗಳಿಂದ ಮನವಿ

Posted On: 19-03-2023 09:25AM

ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಮಾಚ್೯ 21 ಮತ್ತು 22 ರಂದು ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅನುಮತಿ ನೀಡದಂತೆ ಪಡುಬಿದ್ರಿ ವಿಶ್ವಹಿಂದು ಪರಿಷತ್ ಬಜರಂಗದಳದ ಕಾರ್ಯಕರ್ತರು ದೇವಳದ ಕಾರ್ಯನಿರ್ವಹಣಾಧಿಕಾರಿ ಮತ್ತು ಅನುವಂಶಿಕ ಮೊಕ್ತೇಸರರಿಗೆ ಮನವಿ ನೀಡಿರುತ್ತಾರೆ.

ಕಾಪುವಿನಲ್ಲಿಯೂ ಮಾಚ್೯ 21 ಮತ್ತು 22 ರಂದು ಜರಗುವ ಮಾರಿಪೂಜೆಯಲ್ಲಿಯೂ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಕಾಪುವಿನ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಹೊಸ ಮಾರಿಗುಡಿಯ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.

ಕಾಪು : ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಘೋಷಣೆ - ಬಿಜೆಪಿ ಹಿಂದುಳಿದ ಮೋರ್ಚಾದ ಕುಲಾಲ ಸಮುದಾಯದ ನಾಯಕರಿಂದ ಕೃತಜ್ಞತೆ

Posted On: 19-03-2023 12:21AM

ಕಾಪು : ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪನೆಯ ಘೋಷಣೆ ಮಾಡಿದ ರಾಜ್ಯ ಸರ್ಕಾರಕ್ಕೆ ಕಾಪು ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಸಂತೋಷ್ ಕುಲಾಲ್ ಪಡುಮನೆ, ಕಾರ್ಯದರ್ಶಿ ಉದಯ ಕುಲಾಲ್ ಕಳತ್ತೂರು, ಕಾರ್ಯಕಾರಿಣಿ ಸದಸ್ಯರು ಗಣೇಶ್ ಕುಲಾಲ್ ವರ್ವಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.