Updated News From Kaup
ಕಟೀಲಿನಲ್ಲಿ "ನಾಗಾರಾಧನಾ ಸಾಹಿತ್ಯ ಸಂವಾದ" ನಾಗ - ವೃಕ್ಷ ಅವಳಿ ಚೇತನಗಳು : ಕೆ.ಎಲ್.ಕುಂಡಂತಾಯ
Posted On: 03-04-2023 06:44PM
ಕಟೀಲು : ಮಾನವನಿಂದ ಮೊತ್ತಮೊದಲು ದೈವೀಕರಿಸಲ್ಪಟ್ಟ ಪ್ರಾಣಿ ನಾಗ. ಪುರಾತನವಾದರೂ ಬಲಗುಂದದ ಆರಾಧನೆಯಾಗಿ ನಾಗಾರಾಧನೆ ಮಾನವ ವಿಕಾಸದೊಂದಿಗೆ ಸಾಗಿಬಂದಿದೆ.ನಾಗ ತಂಪನ್ನು ಆಶ್ರಯಿಸಿಕೊಂಡು ಬದುಕುವ ಪ್ರಾಣಿ.ಆದುದರಿಂದಲೇ ನಾಗನ ಆರಾಧನೆಯಲ್ಲಿ ತಂಪೆರೆಯುವ ಕ್ರಿಯೆಗೆ ಪ್ರಾಶಸ್ತ್ಯವಿದೆ.ನಾಗ ವಾಸಸ್ಥಾನ ಬನವನ್ನು ಉಳಿಸಿಕೊಂಡು ಪ್ರಕೃತಿಯನ್ನು ರಕ್ಷಿಸಬೇಕಾದುದು ಕಾಲದ ಅನಿವಾರ್ಯತೆ ಏಕೆಂದರೆ ನಾಗ - ವೃಕ್ಷ ಅವಳಿ ಚೇತನಗಳು ಎಂದು ಜಾನಪದ ಸಂಶೋಧಕ ,ಸಾಹಿತಿ ಕೆ.ಎಲ್.ಕುಂಡಂತಾಯ ಅಭಿಪ್ರಾಯಪಟ್ಟರು. ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ 'ಕುದುರಿ'ನಲ್ಲಿ ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಟೀಲು ಪ್ರಥಮದರ್ಜೆ ಕಾಲೇಜಿನ ಎನ್.ಎಸ್ ಎಸ್ .ಘಟಕ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಹಕಾರದಲ್ಲಿ ಜರಗಿದ 'ನಾಗಾರಾಧನೆ ನಾಗಾರಾಧನಾ ಸಾಹಿತ್ಯ ಸಂವಾದ' ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಸ್ಟೇಟಸ್ ಕತೆಗಳ ಮೂಲಕ ಗಮನ ಸೆಳೆಯತ್ತಿರುವ ಉಪನ್ಯಾಸಕ ಧೀರಜ್ ಬೆಳ್ಳಾರೆ
Posted On: 03-04-2023 04:35PM
ಕೊರೋನಾ ಸಮಯ ಒಂದಷ್ಟು ಪ್ರತಿಭೆಗಳು ಬೆಳಕಿಗೆ ಬಂದದ್ದಂತು ನಿಜ. ಎಲ್ಲಾ ಸ್ತಬ್ಧವಾಗಿದ್ದರೂ ಕತೆ, ಕವನ, ನೃತ್ಯ, ಮಾತು ಇತ್ಯಾದಿ ಚಟುವಟಿಕೆಗಳಿಗೆ ಕೊರತೆ ಇರಲಿಲ್ಲ. ಪ್ರತಿನಿತ್ಯದ ಬಿಝಿಗಳ ನಡುವೆ ಮೊಬೈಲ್ ನಲ್ಲಿ ಕಾಲ ಕಳೆಯುವ ಈ ಕಾಲಘಟ್ಟದಲ್ಲಿ ವಾಟ್ಸಾಪ್ ಸ್ಟೇಟಸ್ ಕತೆಗಳ ಮೂಲಕ ಗಮನ ಸೆಳೆದ ವ್ಯಕ್ತಿ ಧೀರಜ್ ಬೆಳ್ಳಾರೆ.
ಕಾಪು : ಶ್ರೀ ವಿಠೋಭ ರುಕುಮಾಯಿ ದೇವರ ರಜತ ಕವಚ, ಪ್ರಭಾವಳಿ, ಗುರುದೇವರ ರಜತ ಪಾದುಕೆ, ಹಸಿರು ಹೊರೆ ಕಾಣಿಕೆ ಮೆರವಣಿಗೆ
Posted On: 31-03-2023 08:10PM
ಕಾಪು : ಇಲ್ಲಿನ ಬಿಲ್ಲವರ ಸಹಾಯಕ ಸಂಘದಲ್ಲಿ ಮಾರ್ಚ್ 31 ರಿಂದ ಎಪ್ರಿಲ್ 2ರವರೆಗೆ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೂತನವಾಗಿ ನಿರ್ಮಿಸಿದ ಶಿಲಾಮಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಮೂರ್ತಿ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶಾಭಿಷೇಕದ ಕಾರ್ಯಕ್ರಮಗಳು ಜರಗಲಿವೆ.
ಕಾಪು : ಕುಂಜೂರಿನಲ್ಲಿ ಭಜನಾ ಮಂಗಲೋತ್ಸವ ಸಂಪನ್ನ
Posted On: 31-03-2023 07:33PM
ಕಾಪು : ತಾಲೂಕಿನ ಕುಂಜೂರಿನ ಶ್ರೀ ದುರ್ಗಾ ಮಿತ್ರ ವೃಂದದ 15 ನೇ ವಾರ್ಷಿಕ ಭಜನಾ ಮಂಗಲೋತ್ಸವವು ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಪುನಃ ಪ್ರತಿಷ್ಠ ವರ್ಧಂತಿಯ ಸಂದರ್ಭದಲ್ಲಿ ನೆರವೇರಿತು.
ಉಚ್ಚಿಲ : ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು
Posted On: 31-03-2023 07:23PM
ಉಚ್ಚಿಲ : ಸ್ಕೂಟರೊಂದು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಡಿಕ್ಕಿ ಹೊಡೆದು ಆ ವ್ಯಕ್ತಿ ಮೃತಪಟ್ಟ ಘಟನೆ ಕಾಪು ತಾಲೂಕು ಬಡಾ ಗ್ರಾಮ ಉಚ್ಚಿಲದ ಮಹಾಲಕ್ಷ್ಮೀ ದೇವಸ್ಥಾನದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರು : ಬೈಕ್ ನಿಲ್ಲಿಸುವ ವಿಚಾರ - ಗಲಾಟೆ ಕೊಲೆಯಲ್ಲಿ ಅಂತ್ಯ ; ಕೊಲೆಯಾದ ವ್ಯಕ್ತಿ ಕಾಪುವಿನ ಕುಂಜೂರು ಮೂಲದವರು
Posted On: 31-03-2023 03:08PM
ಬೆಂಗಳೂರು : ಇಲ್ಲಿನ ಯಲಹಂಕದ ಅಪಾರ್ಟ್ಮೆಂಟ್ ಒಂದರಲ್ಲಿ ಒಂದೇ ರೂಂನಲ್ಲಿ ವಾಸವಿದ್ದ ಮೂವರ ನಡುವೆ ಬೈಕ್ ನಿಲ್ಲಿಸುವ ವಿಚಾರಕ್ಕೆ ಗಲಾಟೆಯಾಗಿ ಓರ್ವನನ್ನು ಕೊಲೆಗೈದ ಘಟನೆ ಮಾಚ್೯ 29ರಂದು ನಡೆದಿದೆ.
ಉಡುಪಿ : ಶಸ್ತ್ರಾಸ್ತ್ರಗಳ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ
Posted On: 30-03-2023 08:12PM
ಉಡುಪಿ : ಕರ್ನಾಟಕ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಶಸ್ತ್ರಾಸ್ತ್ರ ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರ ಹಾಗೂ ಅವುಗಳನ್ನು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಕಾಪು : ಗಾಂಜಾ ಸೇವನೆ ಪ್ರಕರಣ ದಾಖಲು
Posted On: 30-03-2023 11:17AM
ಕಾಪು : ಇಲ್ಲಿನ ಠಾಣಾ ವ್ಯಾಪ್ತಿಯ ಉದ್ಯಾವರ ಗ್ರಾಮದ ಸಂಪಿಗೆನಗರ ಕ್ರಾಸ್ ಬಳಿ ಅನುಮಾನಾಸ್ಪದವಾಗಿ ವ್ಯಕ್ತಿಯೋರ್ವ ಕಂಡು ಬಂದಿದ್ದು, ಆತನನ್ನು ಪೋಲಿಸರು ಪರಿಶೀಲಿಸಿದಾಗ ಮಾದಕ ಸೇವನೆಯ ನಶೆಯಲ್ಲಿರುವ ಬಗ್ಗೆ ಅನುಮಾನಗೊಂಡು ವಶಕ್ಕೆ ಪಡೆದುಕೊಂಡಿದ್ದರು.
ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿಗಳಿಗೆ ಸಂಬಂಧಿಸಿದ ಬ್ಯಾನರ್, ಕಟೌಟ್ಗಳ ಬಳಕೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಸೂಚನೆ
Posted On: 30-03-2023 10:27AM
ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾಚ್೯ 29ರಿಂದ ಅನ್ವಯವಾಗುವಂತೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಮಾಚ್೯ 30 : ಶಂಕರಪುರ ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆ
Posted On: 29-03-2023 05:09PM
ಕಾಪು : ತಾಲೂಕಿನ ಶಂಕರಪುರ ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆಯೊಂದಿಗೆ ವಿಶಿಷ್ಟವಾಗಿ ಶ್ರೀ ರಾಮನವಮಿಯ ಆಚರಣೆಯು ಶ್ರೀ ಸೌಭಾಗ್ಯ ಹೆಣ್ಣುಮಕ್ಕಳ ಭಾಗ್ಯೋದಯದ ಬೆಳಕು ಎಂಬ ಸೇವಾ ಕಾರ್ಯಕ್ರಮದ ಮೂಲಕ ಮಾಚ್೯ 30ರಂದು ಬೆಳಿಗ್ಗೆ 9 ಗಂಟೆಗೆ ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಜರಗಲಿದೆ.
