Updated News From Kaup
ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪುನಶ್ಚೇತನ ಕಾರ್ಯಗಾರ
Posted On: 24-05-2025 04:35PM
ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ - ಶಿಕ್ಷಕೇತರ ವೃಂದಕ್ಕೆ ಪುನಶ್ಚೇತನ ಕಾರ್ಯಗಾರವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.
ಕಾಪು : ಅಹಿಂಸಾ ಸಂದೇಶಕ್ಕಾಗಿ ಬೈಕ್ ರ್ಯಾಲಿ
Posted On: 23-05-2025 12:29PM
ಕಾಪು : ಕೌಟುಂಬಿಕ ಹಾಗೂ ಸಾಮಾಜಿಕ ಹಿಂಸೆ ಮತ್ತು ದೌರ್ಜನ್ಯದ ವಿರುದ್ಧ ಜನರನ್ನು ಎಚ್ಚರಿಸುವುದಕ್ಕಾಗಿ, 12 ದಿನಗಳ ಬೈಕ್ ರ್ಯಾಲಿಯನ್ನು ವನಸುಮ ಟ್ರಸ್ಟ್ ಕಟಪಾಡಿ ವತಿಯಿಂದ ಹಮ್ಮಿಕೊಳ್ಳಲಾಗಿದೆ. ದೃಶಾ ಕೊಡಗು ಮತ್ತು ಉಜ್ವಲ್ ಕಾಮತ್ ಮೂರು ರಾಜ್ಯಗಳಲ್ಲಿ ಮೂರು ಸಾವಿರ ಕಿಲೋಮೀಟರ್ ಬೈಕ್ ಮೂಲಕ ಈ ಸಂದೇಶ ಜಾಥಾವನ್ನು ಕೈಗೊಳ್ಳಲಿದ್ದಾರೆ ಎಂದು ವನಸುಮ ಟ್ರಸ್ಟ್ ಅಧ್ಯಕ್ಷರಾದ ಬಾಸುಮ ಕೊಡಗು ಹೇಳಿದರು. ಅವರು ಶುಕ್ರವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾಪು ಶ್ರೀ ಹೊಸ ಮಾರಿಗುಡಿಗೆ ವಿವಿಧ ಕ್ಷೇತ್ರಗಳ ಗಣ್ಯರ ಭೇಟಿ
Posted On: 23-05-2025 07:09AM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪ್ರತಿನಿತ್ಯ ಹಲವಾರು ಅಧಿಕಾರಿ ವರ್ಗದವರು, ನ್ಯಾಯಾದೀಶರು, ವಕೀಲರು, ಪೊಲೀಸ್ ಅಧಿಕಾರಿಗಳು, ಸಿನಿಮಾ ನಟರು, ನಟಿಯರು ಸೇರಿದಂತೆ ರಾಜಕೀಯ ಧುರಿಣರು ಆಗಮಿಸುತ್ತಿದ್ದಾರೆ.
ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ : ಶ್ರೀಷಾ ಜಯ ಪೂಜಾರಿ 607 (ಶೇ. 97.12) ಅಂಕ
Posted On: 23-05-2025 07:00AM
ಪಡುಬಿದ್ರಿ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2024 - 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡುಬಿದ್ರಿ ಲಯನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ ಇದರ ವಿದ್ಯಾರ್ಥಿನಿ, ಶ್ರೀಷಾ ಜಯ ಪೂಜಾರಿ 607 (ಶೇ. 97.12) ಅಂಕ ಗಳಿಸಿದ್ದಾರೆ.
ಕ್ಯಾಂಪಸ್ ಸೆಲೆಕ್ಷನ್ : ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ 75 ವಿದ್ಯಾರ್ಥಿಗಳು ಆಯ್ಕೆ
Posted On: 21-05-2025 04:44PM
ಶಿರ್ವ : ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜು, ಶಿರ್ವ ಇಲ್ಲಿ ಅವಸರ್ ಎಚ್.ಆರ್ ಸರ್ವೀಸಸ್, ಬೆಂಗಳೂರು ಇವರು ನಡೆಸಿದ ಕ್ಯಾಂಪಸ್ ಪ್ಲೇಸ್ಮೆಂಟ್ನ ಸಂದರ್ಶನದಲ್ಲಿ ಬಿ.ಎ, ಬಿ.ಕಾಂ ಹಾಗೂ ಬಿ.ಸಿ.ಎ ವಿಭಾಗದ 75 ವಿದ್ಯಾರ್ಥಿಗಳು ಆಯ್ಕೆಯಾದರು.
ಕಾಪು : ನಗರ, ಗ್ರಾಮಾಂತರ ಯೋಜನಾ ಪ್ರಾಧಿಕಾರದಲ್ಲಿ ಜನಸಾಮಾನ್ಯರಿಗೆ ತ್ವರಿತ ಸೇವೆ ಸಿಗಲಿ : ಉಡುಪಿ ಜಿಲ್ಲಾ ಕೃಷಿಕ ಸಂಘ ಆಗ್ರಹ
Posted On: 21-05-2025 04:36PM
ಕಾಪು : ಪ್ರಸ್ತುತ ಕಾಪುವಿನಲ್ಲಿ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರ ಇದೆ. ಇಲ್ಲಿ ಜನಸಾಮಾನ್ಯರ ಅರ್ಜಿ ವಿಲೇವಾರಿಗೆ ಸರಿಯಾದ ವ್ಯವಸ್ಥೆಯೇ ಇಲ್ಲ. ನೂಕು ನುಗ್ಗಲು ಇದೆ. ಒಮ್ಮೆಗೆ 5 -10 ಅರ್ಜಿಗಳನ್ನು ತರುವ ದಲ್ಲಾಳಿಗಳ ಹಾವಳಿ ಇದೆ. ನೇರವಾಗಿ ಅರ್ಜಿ ಸಲ್ಲಿಸಲು ಹೋದವರನ್ನು ಕೇಳುವವರೇ ಇಲ್ಲ. ಬೆಳಗ್ಗಿನಿಂದ ಸಂಜೆಯವರೆಗೆ ಕಾಯುವ ಪರಿಸ್ಥಿತಿ. ಹಾಗಿದ್ದರೂ ಕೆಲಸವಾಗದೆ ಹಿಂದಿರುಗಿ ಹೋಗಬೇಕು. 10 -12 ಬಾರಿ ಹೋದರೂ ಯೋಜನಾ ಪ್ರಾಧಿಕಾರದ ಅಧಿಕಾರಿಯ ಭೇಟಿ ಅಸಾಧ್ಯ. ಯೋಜನಾ ಪ್ರಾಧಿಕಾರದಲ್ಲಿ ಜನಸಾಮಾನ್ಯರಿಗೆ ತ್ವರಿತವಾದ ಸೇವೆ ಸಿಗುವಂತಾಗಬೇಕು ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ ಆಗ್ರಸಿದ್ದಾರೆ. ಈ ಬಗ್ಗೆ ಸೋಮವಾರ ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ಕಾಪು ತಹಶೀಲ್ದಾರ್ರವರ ಮೂಲಕ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಳೆ ವಿಪತ್ತು ನಿರ್ವಹಣೆ ಕುರಿತು ಕಾಪು ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಸಭೆ
Posted On: 21-05-2025 04:01PM
ಕಾಪು : ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಹಾಗೂ ವಿಪತ್ತು ನಿರ್ವಹಣಾ ವಿಷಯಗಳ ಕುರಿತು ಕಾಪು ತಾಲೂಕು ಮಟ್ಟದ ಸಭೆಯು ಬುಧವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಆಡಳಿತ ಸೌಧದಲ್ಲಿ ಜರಗಿತು.
ಮೇ.24 : ಅಮೋಘ (ರಿ.) ಉಡುಪಿ ವತಿಯಿಂದ ಸಾಮರಸ್ಯ ಪ್ರಶಸ್ತಿ ಪುರಸ್ಕಾರ
Posted On: 21-05-2025 03:41PM
ಉಡುಪಿ : ಸಾಂಸ್ಕೃತಿಕ -ಸಾಮಾಜಿಕ-ಸಾಹಿತ್ಯಿಕ ಸಂಸ್ಥೆಯಾದ ಅಮೋಘ (ರಿ.) ಉಡುಪಿ ವತಿಯಿಂದ "ಸಾಮರಸ್ಯ ಪ್ರಶಸ್ತಿ ಪುರಸ್ಕಾರ" ಕಾರ್ಯಕ್ರಮ ಮೇ.24, ಶನಿವಾರದಂದು ಸಂಜೆ ಗಂಟೆ 4ಕ್ಕೆ ಉಡುಪಿ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜರಗಲಿದೆ.
ಕೆಎಂಎಫ್ ನಿರ್ದೇಶಕರಾಗಿ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಆಯ್ಕೆ
Posted On: 21-05-2025 03:18PM
ಕಾಪು : ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿ. ಬೆಂಗಳೂರು ಇದರ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಐಕಳ ಬಾವ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು ಆಯ್ಕೆಗೊಂಡಿದ್ದಾರೆ.
ಬೆಳಪುವಿನಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆಗೆ ಭೂಮಿ ಪೂಜೆ
Posted On: 21-05-2025 02:57PM
ಉಚ್ಚಿಲ : ಬೆಳಪುವಿನಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆಯ ಮೂಲಕ ಗುಣಾತ್ಮಕ ಶಿಕ್ಷಣ ನೀಡುವ ಕನಸು. 5 ಕೋಟಿ ಅನುದಾನ ಬಿಡುಗಡೆಯಾಗಿದ್ದು, 18 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಬೆಳಪು ಹಾಗೂ ಸುತ್ತಮುತ್ತಲಿನ ಗ್ರಾಮದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ನಡೆಸಲ್ಪಡುವ ಬೆಳಪುವಿನ ಮೌಲಾನಾ ಆಜಾದ್ ಮಾದರಿ ಶಾಲೆಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
