Updated News From Kaup
ಉಡುಪಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟದ ನೂತನ ಅಧ್ಯಕ್ಷೆಯಾಗಿ ಸರಳಾ ಆರ್ ಕಾಂಚನ್ ಆಯ್ಕೆ
Posted On: 24 Aug 2025, 10:45 AM
ಉಡುಪಿ : ಉಡುಪಿ ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ವಾರ್ಷಿಕ ಮಹಾಸಭೆಯು ಉಡುಪಿ ತಾಲೂಕು ಶಿಶು ಅಭಿವೃದ್ಧಿ ಕೇಂದ್ರದಲ್ಲಿ ನಡೆಯಿತು. ತಾಲೂಕು ಶಿಶು ಅಭಿವೃದ್ಧಿ ವಿಜಯ ನಾರಾಯಣ್ ನೂತನ ಪಧಾಧಿಕಾರಿಗಳ ಆಯ್ಕೆ ಪ್ರಕಿಯೆಯನ್ನು ನಡೆಸಿಕೊಟ್ಟರು. ನೂತನ ಅಧ್ಯಕ್ಷೆಯಾಗಿ ಸರಳಾ ಅರ್. ಕಾಂಚನ್ ಆಯ್ಕೆಗೊಂಡರು. ಉಪಾಧ್ಯಕ್ಷೆಯಾಗಿ ಲಕ್ಷ್ಮಿ ಉಡುಪಿ, ಕಾರ್ಯದರ್ಶಿ ಜಯಂತಿ ಎಸ್ ಪೂಜಾರಿ ಬೆಣ್ಣೆಕುದ್ರು, ಕೋಶಾಧಿಕಾರಿ ವೀಣಾ ನಾಯಕ್ ಹೆರಾಂಜೆ, ಸಮಿತಿ ಸದಸ್ಯರಾಗಿ ಪುಷ್ಪಾ ಕುಂದರ್ ಪಲಿಮಾರ್, ಲತಾ ಎಸ್ ಅಚಾರ್ಯ ಕುತ್ಯಾರ್, ಸುಮಿತ್ರಾ ಬ್ರಹ್ಮಾವರ, ಪ್ರೇಮ ಬ್ರಹ್ಮಾವರ, ಆಶಾ ಶೆಟ್ಟಿ ಉಡುಪಿ, ಅನುಸೂಯೆ ಉಡುಪಿ ಆಯ್ಕೆಗೊಂಡಿರುತ್ತಾರೆ. ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಅದಿಮನೆ, ಹಾಗೂ ಮೇಲ್ವಿಚಾರಕರರು ಉಪಸ್ಥಿತರಿದ್ದರು.
ಕಾಪು ಮಾರಿಯಮ್ಮ ಕ್ಷೇತ್ರ ಭೇಟಿಯಾಗಿ ಘಂಟಾನಾದ ಸೇವೆ ಸಲ್ಲಿಸಿದ ನಟಿ ರಕ್ಷಿತಾ
Posted On: 20 Aug 2025, 07:02 PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟಿ ರಕ್ಷಿತಾ ಪ್ರೇಮ್ ಅವರು ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಅವರು ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ಸಮ್ಮುಖದಲ್ಲಿ ಗೌರವಿಸಿ, ಅನುಗ್ರಹ ಪ್ರಸಾದ ನೀಡಿದರು. ರಕ್ಷಿತಾ ಪ್ರೇಮ್ ಅನ್ನದಾನ ಸೇವೆಯ ಜೊತೆಗೆ ಇಷ್ಟಾರ್ಥ ಸಿದ್ಧಿಗಾಗಿ ಘಂಟಾನಾದ ಸೇವೆಯನ್ನು ಸಲ್ಲಿಸಿದರು. ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ ವಾರವಷ್ಟೇ ನನ್ನ ತಾಯಿ ಇಲ್ಲಿಗೆ ಬಂದು ಹರಕೆ ಹೊತ್ತುಕೊಂಡಿದ್ದರು. ನಾನು ಕೂಡಾ ಬರಬೇಕೆಂದು ಅಂದುಕೊಂಡಿದ್ದೆ. ಆದರೆ ಅಮ್ಮ ನನ್ನನ್ನು ಇಷ್ಟು ಬೇಗ ಕರೆಸಿಕೊಳ್ಳುತ್ತಾಳೆ ಅಂದುಕೊಂಡಿರಲಿಲ್ಲ. ದೇವಸ್ಥಾನ ಬಹಳ ಸುಂದರವಾಗಿ ಮೂಡಿಬಂದಿದೆ ಎಂದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ, ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ರವೀಂದ್ರ ಮಲ್ಲಾರ್, ಚರಿತ ದೇವಾಡಿಗ, ಪ್ರಚಾರ ಸಮಿತಿಯ ಸಂಚಾಲಕ ಜಯರಾಮ್ ಆಚಾರ್ಯ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪಡುಬಿದ್ರಿ ಏಳು ಮಾಗಣೆಯ ಶ್ರೀಕೋಡ್ದಬ್ಬು ದೈವಸ್ಥಾನಗಳಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ ತುಳಸಿ ಕಟ್ಟೆ ಸಮರ್ಪಣೆಗೆ ಸಂಕಲ್ಪ, ಸಮ್ಮತಿ ಪತ್ರ ಹಸ್ತಾಂತರ
Posted On: 19 Aug 2025, 09:55 PM
ಪಡುಬಿದ್ರಿ : ಇತಿಹಾಸ ಪ್ರಸಿದ್ಧ ಪಡುಬಿದ್ರಿ ಮಾಗಣೆಯ ಶ್ರೀ ಮಹಾಲಿಂಗೇಶ್ವರ ಶ್ರೀಮಹಾಗಣಪತಿ ದೇವಸ್ಥಾನವು ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಪರ್ವಕಾಲದಲ್ಲಿ ದೈವರಾಜ ಶ್ರೀ ಕೋಡ್ದಬ್ಬು ದೈವಸ್ಥಾನಗಳು- ಏಳು ಮಾಗಣೆ (ಮುಂಡಾಲ ಸಮುದಾಯ) ಪಡುಬಿದ್ರಿ ವತಿಯಿಂದ ನೂತನ ತುಳಸಿ ಕಟ್ಟೆ(ವೃಂದಾವನ ಕಟ್ಟೆ)ಯ ಸಂಪೂರ್ಣ ವೆಚ್ಚವನ್ನು ನೀಡಲು ಸಂಕಲ್ಪಿಸಲಾಗಿದೆ. ಏಳು ಮಾಗಣೆಯ ಶ್ರೀಕೋಡ್ದಬ್ಬು ದೈವಸ್ಥಾನದ ನಿಯೋಗವು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಶ್ರೀಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯನ್ನು ಭೇಟಿ ಮಾಡಿ, ಸಂಕಲ್ಪಿತ ಧರ್ಮಕಾರ್ಯವನ್ನು ಪ್ರಸ್ತಾಪಿಸಿ ಸಮ್ಮತಿ ಪತ್ರವನ್ನು ನೀಡಿ, ದೇವಸ್ಥಾನದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ದೇವತಾ ಪ್ರಾರ್ಥನಾ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಶ್ರೀನಾಥ್ ಹೆಗ್ಡೆ, ಪ್ರಕಾಶ್ ದೇವಾಡಿಗ, ಅನಿಲ್ ಶೆಟ್ಟಿ, ಏಳು ಮಾಗಣೆಯ ಶ್ರೀಕೋಡ್ದಬ್ಬು ದೈವಸ್ಥಾನದ ಗೌರವಾಧ್ಯಕ್ಷರಾದ ಶೇಖರ್ ಅಂಗಡಿಬೆಟ್ಟು, ಅಧ್ಯಕ್ಷರಾದ ಸದಾನಂದ ಬೊಗ್ಗರಿಲಚ್ಚಿಲ್, ಪ್ರಧಾನ ಕಾರ್ಯದರ್ಶಿ ಸಂತೋಷ್ ನಂಬಿಯಾರ್ ,ಕೋಶಾಧಿಕಾರಿ ರಮೇಶ್, ಪ್ರಮುಖರಾದ ಬಾಬು ಕೋಟ್ಯಾನ್ ಕೊಂಕನಡ್ಪು, ಕಿಟ್ಟು ಕುಮಾರ್, ಸುರೇಶ್ ಪಡುಬಿದ್ರಿ, ಪ್ರಸನ್ನ ಕುಮಾರ್, ಬಾಲಕೃಷ್ಣ ಉಪಸ್ಥಿತರಿದ್ದರು.
ಪಡುಬಿದ್ರಿಯಲ್ಲಿ ಗಾಂಧಿ ಭಾರತ ಬೃಹತ್ ಸಮಾವೇಶ
Posted On: 18 Aug 2025, 10:41 AM
ಪಡುಬಿದ್ರಿ : ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಪಡುಬಿದ್ರಿಯಲ್ಲಿ ಗಾಂಧಿ ಭಾರತ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಯಿತು. ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮ್ಮದ್ ಮಾತನಾಡಿ, ಕಾಂಗ್ರೆಸ್ ಪಕ್ಷದ ತತ್ವ ಮತ್ತು ಮೌಲ್ಯಗಳನ್ನು ಜನರೊಳಗೆ ತಲುಪಿಸುವ ಅಗತ್ಯವಿದೆ. ಬಿಜೆಪಿ ಸರ್ಕಾರ ಜನರ ವಿಶ್ವಾಸಕ್ಕೆ ಧಕ್ಕೆ ತಂದಿದ್ದು, ಕಾಂಗ್ರೆಸ್ ಮಾತ್ರ ಜನಪರ ಆಡಳಿತ ನೀಡಬಲ್ಲ ಪಕ್ಷವಾಗಿದೆ ಎಂದು ಹೇಳಿದರು. ಸುಧೀರ್ ಕುಮಾರ್ ಮೊರೋಳಿ ಮಾತನಾಡಿ, ಬಿಜೆಪಿ ಮತ ಕದಿಯುವ ರಾಜಕಾರಣ ನಡೆಸುತ್ತಿದೆ. ಅವರು ಚುನಾವಣಾ ಆಯೋಗದ ನಿಲುವಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ, ಗಾಂಧಿಯವರ ತತ್ವಗಳ ಆಧಾರದ ಮೇಲೆ ದೇಶವನ್ನು ಬಲಪಡಿಸುವ ಹೊಣೆಗಾರಿಕೆ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದರು. ಕಾರ್ಯಕ್ರಮದಲ್ಲಿ ಅಬ್ದುಲ್ ಮುನೀರ್ ಜನ್ಸಾಲೆ, ನವೀನ್ ಚಂದ್ರ ಸುವರ್ಣ, ಶರ್ಪುದ್ದೀನ್ ಶೇಖ್, ಮಹಮ್ಮದ್ ನಿಯಾಜ್, ದಿವಾಕರ್ ಶೆಟ್ಟಿ, ನವೀನ್ ಚಂದ್ರ ಜೆ. ಶೆಟ್ಟಿ, ಗೀತಾ ವಾಗ್ಲೆ, ಜೀತೇಂದ್ರ ಫುರ್ಟಾಡೋ, ನವೀನ್ ಚಂದ್ರ ಎನ್. ಶೆಟ್ಟಿ, ಕರುಣಾಕರ್ ಪೂಜಾರಿ, ಯಶ್ವಂತ್ ಪಲಿಮಾರು, ಸುಧೀರ್ ಹೆಜಮಾಡಿ, ಕಿಶೋರ್ ಎರ್ಮಾಳು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್ ಸ್ವಾಗತಿಸಿದರು. ರಾಜೇಶ್ ಶೇರಿಗಾರ್ ನಿರೂಪಿಸಿ, ಸಂತೋಷ್ ಕುಮಾರ್ ವಂದಿಸಿದರು.
ಬೋರ್ಡ್ ಆಫ್ ಇಸ್ಲಾಮಿಕ್ ಕರ್ನಾಟಕ ಕಾಪು ಸೆಂಟರ್ - ಅಭಿನಂದನಾ ಸಮಾರಂಭ
Posted On: 18 Aug 2025, 10:27 AM
ಕಾಪು : ಸಂಪತ್ತಿಗಿಂತ ವಿದ್ಯೆ ಮನುಷ್ಯನಿಗೆ ಮುಖ್ಯವಾಗಿದೆ. ವಿದ್ಯೆ ಇಲ್ಲದಿದ್ದರೆ ಆತನ ಬದುಕು ಬರೀ ಶೂನ್ಯ. ಸಂಪತ್ತಿನಿಂದ ಏನೂ ಸಾಧಿಸಲು ಸಾಧ್ಯವಾಗುವುದಿಲ್ಲ. ವಿದ್ಯೆಯಿಂದ ಜ್ಞಾನ ಗಳಿಸಲು ಪ್ರಯತ್ನಿಸಬೇಕು. ಲೌಕಿಕ ಜ್ಞಾನದ ಜೊತೆಗೆ ಧಾರ್ಮಿಕ ಜ್ಞಾನವನ್ನು ಕೂಡ ಮುತುವರ್ಜಿಯಿಂದ ಗಳಿಸಬೇಕು. ದೇವನ ವತಿಯಿಂದ ಬಂದ ಕೊನೆಯ ಗ್ರಂಥ ಕುರಾನ್ ಆಗಿದ್ದು, ಅದರಲ್ಲಿ ಇರುವ ಮೊದಲ ವಾಕ್ಯವೇ ಜ್ಞಾನ ಗಳಿಸುವ ಕುರಿತಾಗಿದೆ ಎಂದು ಆಯಿಷಾ ಮಸ್ಜಿದ್ ನೆಜಾರ್ ನ ಧರ್ಮ ಗುರುಗಳಾದ ಮೌಲಾನ ಆದಿಲ್ ನದ್ವಿ ಯವರು ಹೇಳಿದರು. ಅವರು ಕಾಪು ಕೆ. ಒನ್ ಹೋಟೆಲ್ ನ ಸಭಾಂಗಣ ದಲ್ಲಿ ಬೋರ್ಡ್ ಆಫ್ ಇಸ್ಲಾಮಿಕ್ ಕರ್ನಾಟಕ ಕಾಪು ಸೆಂಟರ್ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು ಜಮಾ ಅತೆ ಇಸ್ಲಾಮಿ ಹಿಂದ್ ನ ಸದಸ್ಯೆ ರೇಷ್ಮಾ ಬೈಲೂರು ರವರು ಮಾತನಾಡಿ, ಮನುಷ್ಯನು ಭೂಮಿಗೆ ಬಂದ ಉದ್ದೇಶವೇನು? ಬಂದ ನಂತರ ಏನು ಮಾಡಬೇಕು? ಮರಣದ ನಂತರದ ಬದುಕಿಗೆ ಇಹಲೋಕದಲ್ಲಿ ಯಾವ ಕೆಲಸ ಮಾಡಬೇಕು ಎಂಬುದರ ಬಗ್ಗೆ ನಾವು ಅಧ್ಯಯನ ಮಾಡಬೇಕು. ಮತ್ತು ಈ ಅಧ್ಯಯನದಿಂದ ಸಿಗುವ ಜ್ಞಾನವನ್ನು ತನ್ನಲ್ಲಿ ಅಳವಡಿಸಿಕೊಂಡು ಅದರ ಪ್ರಯೋಜನ ಸಮಾಜದಲ್ಲಿರುವ ಇತರರಿಗೂ ಸಿಗಬೇಕು. ಆಗ ಮಾತ್ರ ಆತ ಗಳಿಸಿದ ಜ್ಞಾನ ಸಾರ್ಥಕವಾಗುವುದು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಾಕೀರ್ ಹುಸೈನ್, ಆಸೀಫ್ ಜಿ. ಡಿ, ಅಷ್ಫಾಕ್ ಅಹಮದ್ ಮುಜಾವರ್ ರವರು, ಬಿ. ಐ. ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಅಭಿನಂದಿಸುತ್ತಾ, ಪ್ರಶಸ್ತಿ ಮತ್ತು ಸರ್ಟಿಫಿಕೇಟ್ ಮತ್ತು ಎಸ್. ಐ. ಓ ಮತ್ತು ಜಿ. ಐ. ಓ ವರ್ತುಲದಲ್ಲಿ ಭಾಗವಹಿಸಿದ ಎಸ್.ಎಸ್.ಎಲ್.ಸಿಯಲ್ಲಿ ಮತ್ತು ಪಿ.ಯು.ಸಿ ಯಲ್ಲಿ 80% ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು ಹಾಗೂ ಸಿ. ಐ. ಓ ನ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಜಮಾ ಅತೆ ಇಸ್ಲಾಮಿ ಹಿಂದ್ ಕಾಪು ವರ್ತುಲದ ಅಧ್ಯಕ್ಷರಾದ ಅನ್ವರ್ ಅಲಿಯವರು ಮಾತನಾಡಿ, ಜಮಾ ಅತೆ ಇಸ್ಲಾಮಿ ಹಿಂದ್ ಈ ರಾಷ್ಟ್ರದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವ, ಕೆಡುಕನ್ನು ಅಳಿಸಿ ಒಳಿತನ್ನು ಸಂಸ್ಥಾಪಿಸುವ, ಯುವ ಪೀಳಿಗೆಯನ್ನು ನೈತಿಕ ಮೇರೆಯಲ್ಲಿ ಮುನ್ನಡೆಸುವ, ಸಮಾಜದಲ್ಲಿ ಶಾಂತಿ, ಪ್ರೀತಿ ಸೌಹಾರ್ದತೆ ಕಾಪಿಡುವ ಕೆಲಸ ಮಾಡುತ್ತಿದೆ ಇದರೊಂದಿಗೆ ತಮ್ಮನ್ನು ತೊಡಗಿಸಿಕೊಳ್ಳಿ ಎಂದರು. ಫರಾನ ಬೇಗಮ್ ರವರು ಕುರಾನ್ ಪಠಿಸಿದರು. ಮುಹಮ್ಮದ್ ಶರೀಫ್ ಶೇಕ್ ಸ್ವಾಗತಿಸಿದರು. ಬಿ. ಐ. ಇ.ನ ಸಂಚಾಲಕಿ ಶೇಹೇನಾಜ್ ಪ್ರಸ್ತಾವನೆಗೈದರು. ಮೆಹರೂಫರವರು ನಿರೂಪಿಸಿ, ಸಯ್ಯದ್ ಮುಸ್ತಖೀಮ್ ವಂದಿಸಿದರು.
ಶಿರ್ವ ಸಂತ ಮೇರಿ ಪ. ಪೂ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಕೆ ಆರ್ ಪಾಟ್ಕರ್ ಬಂಟಕಲ್ಲು ಆಯ್ಕೆ
Posted On: 18 Aug 2025, 09:55 AM
ಶಿರ್ವ : ಇಲ್ಲಿನ ಸಂತಮೇರಿ ಪ. ಪೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ, ಸಂತ ಮೇರಿ ಅಲುಮ್ನಿ ಎಸೋಸಿಯೇಶನ್ ನ ನೂತನ ಅಧ್ಯಕ್ಷರಾಗಿ ಶಿರ್ವ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಕೆ ಆರ್ ಪಾಟ್ಕರ್ ಬಂಟಕಲ್ಲು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಡಾ. ಗ್ರೇನಲ್ ಡಿ'ಮೆಲ್ಲೊ, ಕಾರ್ಯದರ್ಶಿಯಾಗಿ ಮೋಹನ್ ನೊರೊನ್ನಾ, ಜೊತೆ ಕಾರ್ಯದರ್ಶಿ ಕ್ಲಾರ ಪಿರೇರಾ, ಕೋಶಾಧಿಕಾರಿಯಾಗಿ ಜುಲಿಯಾನ್ ರೊಡ್ರಿಗಸ್ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೊಬಾರ್ಟ್ ಮಚಾದೋ, ಮೆಲ್ವಿನ್ ಅರಾನ್ನಾ, ಫೆಡ್ರಿಕ್ ಪಿಂಟೊ, ಡೆನಿಸ್ ಮಥಾಯಸ್, ಮರ್ವಿನ್ ಮೆನೇಜಸ್, ಅರ್ವಿನ್ ಡಿ' ಸೋಜಾ, ಅನಿತಾ ಮೆಂಡೋನ್ಸಾ, ಮನೋಜ್ ಮೆನೆಜಸ್, ವಸಂತ ಅಂಚನ್, ಮ್ಯಾಕ್ಸಿಮ್ ಡಿ' ಸೋಜಾ ಆಯ್ಕೆಯಾದರು.
ಹೆಜಮಾಡಿ : ಕಾಪು ತಾಲೂಕು ದಸರಾ ಕ್ರೀಡಾಕೂಟಕ್ಕೆ ಚಾಲನೆ
Posted On: 17 Aug 2025, 02:57 PM
ಪಡುಬಿದ್ರಿ : ಕಾಪು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯೋಜನೆಯಲ್ಲಿ ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2025 - 26 ಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೆ ಅವಕಾಶವಿದೆ. ಯುವ ಸಮೂಹ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಕ್ರೀಡೆಯು ದೈಹಿಕ, ಮಾನಸಿಕ ಸಮತೋಲನಕ್ಕೆ ಪೂರಕವಾಗಿದೆ. ಒತ್ತಡಗಳಿಂದ ದೂರವಾಗಲು ಕ್ರೀಡೆ ಅನಿವಾರ್ಯ ಎಂದರು. ಕಾಪು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ ಮಾತನಾಡಿ, ಸಮರ್ಪಕ ಕ್ರೀಡಾಂಗಣವಿಲ್ಲದಿದ್ದರೂ ಕಾಪು ತಾಲೂಕಿನಲ್ಲಿ ಸತತ 3 ವರ್ಷಗಳಿಂದ ದಸರಾ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ ಎಂದರು. ಈ ಸಂದರ್ಭ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ ಮೆಂಡನ್, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ರಾಷ್ಟ್ರೀಯ ಹೈ ಜಂಪ್ ಕ್ರೀಡಾಪಟು ಪ್ರಕಾಶ್ ಶೆಟ್ಟಿ ಹೆಜಮಾಡಿ, ರಾಜ್ಯ ಸರಕಾರಿ ನೌಕರರ ಪರಿಷತ್ತು ನಿರ್ದೇಶಕ ಅಬ್ದುಲ್ ರಜಾಕ್ ಮತ್ತಿತರರು ಉಪಸ್ಥಿತರಿದ್ದರು. ಯೋಗ, ವಾಲಿಬಾಲ್, ತ್ರೋಬಾಲ್, ಕಬಡ್ಡಿ, ಕೊಕ್ಕೊ, ಫುಟ್ಬಾಲ್, ಅಥ್ಲೆಟಿಕ್ಸ್ ಮತ್ತು ವಿವಿಧ ಕ್ರೀಡಗಳು ಜರಗಿದವು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾಪು ತಾಲೂಕು ಅಧಿಕಾರಿ ರಿತೇಶ್ ಕುಮಾರ್ ಸ್ವಾಗತಿಸಿದರು. ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ನಿರೂಪಿಸಿ, ಎಸ್ ವಿ ಎಚ್ ಇನ್ನಂಜೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಶೆಟ್ಟಿ ವಂದಿಸಿದರು.
ಶ್ರೀ ವಿಠೋಬಾ ಭಜನಾ ಮಂಡಳಿ ಗೋಳಿಕಟ್ಟೆ, ಇನ್ನಂಜೆ : 79ನೇ ವಾರ್ಷಿಕ ಸ್ವಾತಂತ್ರ್ಯೋತ್ಸವ ಆಚರಣೆ
Posted On: 15 Aug 2025, 04:35 PM
ಕಾಪು : ಶ್ರೀ ವಿಠೋಬಾ ಭಜನಾ ಮಂಡಳಿ ಗೋಳಿಕಟ್ಟೆ, ಇನ್ನಂಜೆ ಇಲ್ಲಿ 79ನೇ ವಾರ್ಷಿಕ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ - ಸಡಗರದಿಂದ ಆಚರಿಸಲಾಯಿತು. ಇನ್ನಂಜೆ ಶಾಲೆಯಲ್ಲಿ ಶಿಕ್ಷಕಿಯಾಗಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಮತಾ ಎಚ್. ಅಂಚನ್ ಧ್ವಜಾರೋಹಣಗೈದರು. ಬಳಿಕ ಭಜನಾ ಮಂಡಳಿ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಭಜನಾ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪಡುಬಿದ್ರಿ : ಕಾಮತ್ ಸರ್ವಿಸ್ ಸೆಂಟರ್ - 79 ನೇ ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2025, 02:56 PM
ಪಡುಬಿದ್ರಿ : 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಡುಬಿದ್ರಿ ಕಾಮತ್ ಸರ್ವಿಸ್ ಸೆಂಟರ್ ಎಚ್ಪಿ ಪೆಟ್ರೋಲ್ ಪಂಪ್ ಇಲ್ಲಿ ಆಚರಿಸಲಾಯಿತು. ಪಡುಬಿದ್ರಿ ಮೆಸ್ಕಾಂ ಎ.ಇ. ಪ್ರೀತಂ ಮತ್ತು ಕುಟುಂಬ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಪೆಟ್ರೋಲ್ ಪಂಪ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿರ್ವ : ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಂಟಕಲ್ ಬಿ ಸಿ ರೋಡ್ - 79ನೇ ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2025, 02:53 PM
ಶಿರ್ವ : ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಂಟಕಲ್ ಬಿ ಸಿ ರೋಡ್ ಇದರ ಆಶ್ರಯದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣವನ್ನು ಸಂಘದ ಗೌರವಾಧ್ಯಕ್ಷರಾದ ಕೆ.ಆರ್. ಪಾಟ್ಕರ್ ರವರು ನೆರವೇರಿಸಿ, ಸ್ವಾತಂತ್ರ್ಯ ದಿನದ ಸಂದೇಶವನ್ನು ನೀಡಿದರು. ಮುಖ್ಯ ಅತಿಥಿಯಾಗಿ ಡಾ. ಪ್ರಕಾಶ್ ಭಟ್, ವಲೇರಿಯನ್ ಮತಯಸ್, ದೀಪಕ್, ವಾಯ್ಲೆಟ್ ಕ್ಯಾಸ್ಟಲಿನೋ, ಉಮೇಶ್ ಪ್ರಭು ಉಪಸ್ಥಿತರಿದ್ದರು. ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಿ ಸಿ ರೋಡ್ ಇದರ ಅಧ್ಯಕ್ಷರಾದ ಸದಾಶಿವ ಕುಲಾಲ್ ಸ್ವಾಗತಿಸಿದರು. ಶ್ರೀತೇಶ್ ಕುಲಾಲ್ ವಂದಿಸಿದರು. ಡೆನಿಸ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
