Updated News From Kaup
ಮೇ 10 : ಕರ್ನಾಟಕ ವಿಧಾನಸಭಾ ಚುನಾವಣೆ, 13ಕ್ಕೆ ಫಲಿತಾಂಶ
Posted On: 29-03-2023 12:49PM
ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯುಕ್ತರಿಂದ ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮೇ 10 ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13 ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.
ಏಪ್ರಿಲ್ 29 ರಂದು ಅದಮಾರು ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾವೇಶ ; ಮಾರ್ಚ್ 30 - ಕಾಲೇಜಿನಲ್ಲಿ ಪೂರ್ವಭಾವಿ ಸಭೆ
Posted On: 28-03-2023 09:32PM
ಕಾಪು : 1950ರಲ್ಲಿ ಅದಮಾರಿನ ಸುತ್ತಲಿನ ಎಲ್ಲಾ ಜನರಿಗೆ ಉನ್ನತ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಸದುದ್ದೇಶದಿಂದ ಅಂದಿನ ಅದಮಾರು ಮಠಾಧೀಶರಾಗಿದ್ದ ಶ್ರೀ ವಿಬುಧೇಶ ತೀರ್ಥ ಶ್ರೀಪಾದರು ಅದಮಾರಿನಲ್ಲಿ ಪೂರ್ಣಪ್ರಜ್ಞ ಕನ್ನಡ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿದರು. ನಂತರ ಈ ಶಾಲೆ 1972 ರಲ್ಲಿ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿಗೆ ಮೇಲ್ದರ್ಜೆ ಗೇರಿತು. ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದ ಈ ಸಂಸ್ಥೆ ದೇಶವಿದೇಶಗಳಲ್ಲಿ ಲಕ್ಷಾಂತರ ಹಳೆ ವಿದ್ಯಾರ್ಥಿಗಳನ್ನು ಹೊಂದಿದೆ. ಶ್ರೀ ವಿಬುಧೇಶ ತೀರ್ಥ ಶ್ರೀಪಾದರು ಕಟ್ಟಿದ ಈ ಸಂಸ್ಥೆಯನ್ನು ಅವರ ಕರಕಮಲ ಸಂಜಾತರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಇಲ್ಲಿ ಬಾಲಕರ ಹಾಗೂ ಬಾಲಕಿಯರ ವಸತಿ ನಿಲಯದೊಂದಿಗೆ ಈ ಸಂಸ್ಥೆಯನ್ನು ಬಹಳಷ್ಟು ಎತ್ತರಕ್ಕೆ ಏರಿಸಿದರು. ಇಂದು 1700ಕ್ಕು ಅಧಿಕ ವಿದ್ಯಾರ್ಥಿಗಳು ಕೆಜಿಯಿಂದ ಪಿಯುಸಿಯ ತನಕ ವಿದ್ಯಾಭ್ಯಾಸವನ್ನು ಈ ಕ್ಯಾಂಪಸ್ ನಲ್ಲಿ ಪಡೆಯುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದ ಬಂದ 220 ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ವಾಸವಾಗಿದ್ದುಕೊಂಡು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಉಡುಪಿ : ಎಸ್.ಎಸ್.ಎಲ್.ಸಿ ಪರೀಕ್ಷೆ - ನಿಷೇಧಾಜ್ಞೆ
Posted On: 28-03-2023 04:17PM
ಉಡುಪಿ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ಜಿಲ್ಲೆಯ ಒಟ್ಟು 55 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಷೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಕಳೆದ ಬಾರಿ ಬಿಜೆಪಿಯ ಪ್ರಚಾರದಿಂದ ಸೋಲು ಈ ಬಾರಿ ಜನರು ಅಪಪ್ರಚಾರ ನಂಬುತ್ತಿಲ್ಲ : ವಿನಯ್ ಕುಮಾರ್ ಸೊರಕೆ
Posted On: 27-03-2023 06:23PM
ಕಾಪು : ಕಾಂಗ್ರೆಸ್ ಪಕ್ಷ ಎಪಿಎಲ್ ಬಿಪಿಎಲ್ ಎನ್ನದೆ ಹೊಸ ಆಶ್ವಾಸನೆ ಎಲ್ಲರಿಗೂ ನೀಡಲು ಸಿದ್ಧವಿದೆ. ವರ್ಷಕ್ಕೆ ರೂ. 48,000 ಪ್ರಯೋಜನ ನೀಡಲಿದ್ದೇವೆ. ಚುನಾವಣೆ ಘೋಷಣೆ ಪ್ರಾರಂಭವಾದ ನಂತರ ಚುನಾವಣಾ ಪ್ರಚಾರ ಮಾಡಲಿದ್ದೇವೆ. ಬೂತ್ ಮಟ್ಟದಲ್ಲಿ ಪ್ರತಿ ಮನೆಯನ್ನು ತಲುಪಲು ನಮ್ಮ ಕಾರ್ಯಕರ್ತರು ತಯಾರಾಗಿದ್ದಾರೆ. ವಿರೋಧ ಪಕ್ಷದ ಅಪಪ್ರಚಾರದಿಂದ ನಮ್ಮ ಪಕ್ಷಕ್ಕೆ ತೊಡಕಾಗಿತ್ತು. ಈ ಸಲ ಯಾವುದೇ ಅಪಚಾರ ಜನ ನಂಬುತ್ತಿಲ್ಲ ಎಂದು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಹೇಳಿದರು.
ಹೆಜಮಾಡಿ : ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 5 ಲಕ್ಷ ರೂಪಾಯಿ ಪೋಲಿಸ್ ವಶಕ್ಕೆ
Posted On: 27-03-2023 06:07PM
ಹೆಜಮಾಡಿ : ಇಲ್ಲಿನ ಚೆಕ್ ಪೋಸ್ಟ್ ಬಳಿ ಪೋಲಿಸ್ ತಪಾಸಣೆ ವೇಳೆ ಯಾವುದೇ ದಾಖಲೆಗಳಿಲ್ಲದ 5 ಲಕ್ಷ ನಗದನ್ನು ಕಾರೊಂದರಿಂದ ವಶಪಡಿಸಲಾಗಿದೆ.
ಕಾಪು : ಕುಂಜೂರಿನಲ್ಲಿ ಸಮವಸ್ತ್ರ ವಿತರಣೆ
Posted On: 26-03-2023 05:58PM
ಕಾಪು : ಎಲ್ಲೂರು ಗ್ರಾಮದ ಕುಂಜೂರು ಶ್ರೀ ದುರ್ಗಾ ಮಿತ್ರ ವೃಂದದ ಅಂಗ ಸಂಸ್ಥೆ ದುರ್ಗಾ ಮಿತ್ರ ವೃಂದದ ಮಹಿಳಾ ಘಟಕದ ಭಜನಾ ತಂಡದ 32 ಮಹಿಳಾ ಸದಸ್ಯರಿಗೆ ಹಾಗೂ 12 ಬಾಲಕ - ಬಾಲಕಿಯರಿಗೆ ಸುಮಾರು ನಲ್ವತ್ತು ಸಾವಿರ ರೂಪಾಯಿ ಮೌಲ್ಯದ ಸಮವಸ್ತ್ರವನ್ನು ವಿತರಿಸಲಾಯಿತು.
ಮಾಚ್೯26 - ಎಪ್ರಿಲ್ 2 : ತೆಂಕ ಎರ್ಮಾಳು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ವಾರ್ಷಿಕ ನೇಮೋತ್ಸವ
Posted On: 26-03-2023 05:51PM
ಎರ್ಮಾಳು : ಸಂದು ದಾಂತಿ ಗರಡಿ ಎಂದೇ ಪ್ರಸಿದ್ಧಿ ಪಡೆದಿರುವ ತೆಂಕ ಎರ್ಮಾಳು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಮಾಚ್೯ 26ರಿಂದ ಎಪ್ರಿಲ್ 2ರ ವರೆಗೆ ನವೀಕೃತ ನಿರ್ಮಾಣಗಳ ಸಮರ್ಪಣೆ, ಪುನರ್ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಶ್ರೀ ಬೈದರ್ಕಳ ದರ್ಶನ, ಮಹಾ ಅನ್ನಸಂತರ್ಪಣೆ ಮತ್ತು ವಾರ್ಷಿಕ ನೇಮೋತ್ಸವಾದಿ ಧಾರ್ಮಿಕ ಕಾರ್ಯಕ್ರಮಗಳು ವೇದ ಮೂರ್ತಿ ಗಣಪತಿ ಭಟ್ ಎರ್ಮಾಳು ಅವರ ನೇತೃತ್ವದಲ್ಲಿ ನಡೆಯಲಿದೆ.
ಶಿರ್ವ : ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಅಪರಿಚಿತ ಯುವಕರು ಪರಾರಿ
Posted On: 26-03-2023 10:32AM
ಶಿರ್ವ : ವಿಳಾಸ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರು ಚರ್ಚಿನಲ್ಲಿ ಪೂಜೆ ಸಲ್ಲಿಸಿ ಮನೆಗೆ ತೆರಳುತ್ತಿರುವ ಮಹಿಳೆಯ ಸರ ಕಸಿದು ಪರಾರಿಯಾದ ಘಟನೆ ತುಂಡುಬಲ್ಲೆ ಲೆತ್ತಿ ಬಾಯಿ ಮನೆ ಬಳಿ ಸಂಭವಿಸಿದೆ.
ಉಡುಪಿ : ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿದ್ದಾರೆ - ಜಿಲ್ಲಾಧಿಕಾರಿ ಕೂರ್ಮರಾವ್ ಎಂ
Posted On: 25-03-2023 07:25PM
ಉಡುಪಿ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 13,753 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 55 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಸೂಚನೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಚ್ಚಿಲ : ಗಾಂಜಾ ಸೇವನೆ - ಪ್ರಕರಣ ದಾಖಲು
Posted On: 25-03-2023 07:13PM
ಉಚ್ಚಿಲ : ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ 2 ಮಂದಿ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
