Updated News From Kaup
ಬಂಟಕಲ್ಲು : ಇಂಜಿನಿಯರಿಂಗ್ ಕಾಲೇಜಿನಲ್ಲಿ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
Posted On: 25-03-2023 06:36PM
ಬಂಟಕಲ್ಲು : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಮಾರ್ಚ್ 24ರಂದು ಸಂಸ್ಥೆಯ ಆವರಣದಲ್ಲಿ ವಿಜೃಂಭಣೆಯಿಂದ ಜರಗಿತು.
ಮೂಳೂರು : ಬೈಕ್ - ಟ್ಯಾಂಕರ್ ಅಪಘಾತ ; ಓರ್ವ ಸಾವು, ಮತ್ತೋರ್ವ ಗಂಭೀರ
Posted On: 25-03-2023 06:19PM
ಮೂಳೂರು : ಕಾಪು ತಾಲೂಕಿನ ಮೂಳೂರಿನ ವೆಸ್ಟ್ ಕೋಸ್ಟ್ ನರ್ಸರಿ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಎರ್ಮಾಳು : ನಗ - ನಗದು ಕಳ್ಳತನ
Posted On: 25-03-2023 02:43PM
ಎರ್ಮಾಳು : ಕಾಪು ತಾಲೂಕಿನ ತೆಂಕ ಎರ್ಮಾಳು ಗ್ರಾಮದ ಬೀಚ್ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದಕ್ಕೆ ಕಳ್ಳರು ನುಗ್ಗಿ 1.40 ಮೌಲ್ಯದ ನಗ-ನಗದು ಕಳ್ಳತನಗೈದ ಘಟನೆ ನಡೆದಿದೆ. ಬಾಡಿಗೆ ಮನೆಯಲ್ಲಿದ್ದು ಕೂಲಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟೆ ಮೂಲದ ದಂಪತಿಗಳಾದ ನಿಂಗವ್ವ ಮತ್ತು ಆಕೆಯ ಪತಿ ನಿನ್ನೆ ಬೆಳಿಗ್ಗೆ ಎಂದಿನಂತೆ ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನದ ವೇಳೆ ನಿಂಗವ್ವ ಅವರ ಗಂಡ ವಾಪಾಸ್ಸು ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಕಳ್ಳರು ಕಪಾಟಿನಲ್ಲಿದ್ದ 1,10,000 ರೂ. ನಗದು ಹಾಗೂ 30,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿಯ ಪೂಜಾ ಸಾಮಾಗ್ರಿಯನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.
ಮಾರ್ಚ್ 26 : ಉದ್ಯಾವರದಲ್ಲಿ ಕೊಂಕಣಿ ಕವಿಗೋಷ್ಠಿ
Posted On: 25-03-2023 02:25PM
ಉದ್ಯಾವರ : ನಿರಂತರ್ ಉದ್ಯಾವರ ಮತ್ತು ಪೊಯೆಟಿಕಾ ಮಂಗಳೂರು ಇವರ ನೇತೃತ್ವದಲ್ಲಿ ಪೊಯೆಟಿಕಾ ಕವಿಗೋಷ್ಠಿ 16 ಮಾರ್ಚ್ 26, ಆದಿತ್ಯವಾರ ಸಂಜೆ 4 ಗಂಟೆಗೆ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ಬಳಿ ಇರುವ ಡಿವೈನ್ ಗ್ಲೋರಿ ರೋಷನ್ ಕ್ರಾಸ್ಟೋ ಅವರ ನಿವಾಸದಲ್ಲಿ ಜರುಗಲಿದೆ.
ಮಾಚ್೯ 28 : ಉಡುಪಿಯಲ್ಲಿ ನೇರ ಸಂದರ್ಶನ
Posted On: 24-03-2023 11:16PM
ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಮಾರ್ಚ್ 28 ರಂದು ಬೆಳಗ್ಗೆ 10.30 ಕ್ಕೆ ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ.ಲಿ., ಆಭರಣ ಜುವೆರ್ಸ್ ಹತ್ತಿರ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುಗ್ರಹ ಕಾಂಪ್ಲೆಕ್ಸ್ ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಬೆಳಪು : ಪಡುಬಿದ್ರಿ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವಂತೆ ಹೋರಾಟ ಸಮಿತಿಯಿಂದ ಆಗ್ರಹ ; ಮನವಿ ಸಲ್ಲಿಕೆ
Posted On: 24-03-2023 07:08PM
ಬೆಳಪು : ಪಡುಬಿದ್ರಿ ರೈಲು ನಿಲ್ದಾಣದಲ್ಲಿ ಮುಂಬೈ ಮತ್ತು ಬೆಂಗಳೂರು ರೈಲು ನಿಲುಗಡೆಗೊಳಿಸುವಂತೆ ಆಗ್ರಹಿಸಿ ಮತ್ತು ರೈಲ್ವೆ ನಿಲ್ದಾಣದ ರಸ್ತೆಯನ್ನು ಬೆಳಪು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸುವ ಕುರಿತಂತೆ ಮಾಚ್೯ 24ರಂದು ಹೋರಾಟ ಸಮಿತಿ ಸೇರಿದಂತೆ ಎಂಟು ಗ್ರಾಮಗಳ ಜನರು ಪ್ರತಿಭಟನಾ ಸಭೆ ನಡೆಸಿ ರೈಲ್ವೆ ಅಧಿಕಾರಿ ಗಣಪತಿ ನಾಯಕ್ ರಿಗೆ ಮನವಿ ಸಲ್ಲಿಸಿದರು.
ಮಾಚ್೯ 27ರಿಂದ 29 : ಕೋಟೆ ಶ್ರೀ ಹಳೆ ಮಾರಿಯಮ್ಮ ದೇವಸ್ಥಾನ ಮಲ್ಲಾರು ರಾಣ್ಯಕೇರಿ, ಕಾಪು - ಪುನರ್ ಪ್ರತಿಷ್ಠೆ, ಕಾಲಾವಧಿ ರಾಶಿ ಮಾರಿ ಪೂಜೆ
Posted On: 23-03-2023 08:34PM
ಕಾಪು : ಇಲ್ಲಿನ ಮಲ್ಲಾರು ರಾಣ್ಯಕೇರಿ ಕೋಟೆ ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ಮಾಚ್೯ 27, ಸೋಮವಾರ ಬೆಳಿಗ್ಗೆ ಪುನರ್ ಪ್ರತಿಷ್ಠೆ ಹಾಗೂ 28,ಮಂಗಳವಾರ ಹಾಗೂ 29, ಬುಧವಾರದಂದು ಕಾಲಾವಧಿ ರಾಶಿ ಮಾರಿಪೂಜೆಯು ಜರಗಲಿದೆ.
ಆಡಳಿತ ವ್ಯವಸ್ಥೆಯು ಸಮಸ್ಯೆಗೆ ಪರಿಹಾರವಾಗಬೇಕು : ಸಚಿವ ಕೋಟ ಶ್ರೀನಿವಾಸ ಪೂಜಾರಿ
Posted On: 23-03-2023 07:38PM
ಉಡುಪಿ : ಆಡಳಿತ ವ್ಯವಸ್ಥೆಯು ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಅತ್ಯಂತ ಪ್ರಮುಖ ಭಾಗವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿಯಾಗಿರಬೇಕು ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು, ಬ್ರಹ್ಮಾವರದಲ್ಲಿ, ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ, 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಾರ್ವಜನಿಕರ ಬಹುತೇಕ ಸಮಸ್ಯೆಗಳು ಕಂದಾಯ ಇಲಾಖೆಗೆ ಸಂಬಂಧಪಟ್ಟಿದ್ದು. ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯಿಂದ ಕಾರ್ಯ ನಿರ್ವಹಿಸಿ, ಸಮಸ್ಯೆಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವ ಮೂಲಕ ಜನಪರ ಕೆಲಸಗಳನ್ನು ಮಾಡುವ ಮನೋಭಾವವನ್ನು ಸಿಬ್ಬಂದಿಗಳು ಬೆಳೆಸಿಕೊಳ್ಳುವಂತೆ ತಿಳಿಸಿದರು.
ಉಡುಪಿ : ಮಾಚ್೯ 24 - ಬ್ಯಾನರ್, ಕಟೌಟ್ಗಳ ತೆರವಿಗೆ ಕೊನೆ ದಿನ
Posted On: 23-03-2023 07:32PM
ಉಡುಪಿ : ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ -2023 ರ ಪ್ರಯುಕ್ತ ಉಡುಪಿ ನಗರಸಭೆಯಿಂದ ಅನುಮತಿ ನೀಡಿ ಅವಧಿ ಮುಗಿದಿರುವ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿಂಗ್ಸ್ ಹಾಗೂ ಕಟೌಟ್ಗಳನ್ನು ಮಾರ್ಚ್ 24 ರ ಒಳಗೆ ತೆರವುಗೊಳಿಸಬೇಕು. ಕಾರ್ಯಕ್ರಮ ನಡೆಸಲು ಹಾಗೂ ಬ್ಯಾನರ್ ಮತ್ತು ಕಟೌಟ್ಗಳನ್ನು ಅಳವಡಿಸಲು ನಗರಸಭೆಯಿಂದ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ಸದರಿ ಬ್ಯಾನರ್, ಬಂಟಿಂಗ್ಸ್ ಹಾಗೂ ಹೋರ್ಡಿಂಗ್ಸ್ಗಳನ್ನು ಅನಧಿಕೃತವೆಂದು ಪರಿಗಣಿಸಿ, ನಗರಸಭೆಯಿಂದ ತೆರವುಗೊಳಿಸಲಾಗುವುದು ಎಂದು ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ : ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಳ ಜೀರ್ಣೋದ್ಧಾರ - ಶಂಕುಸ್ಥಾಪನೆ
Posted On: 23-03-2023 06:50PM
ಉಡುಪಿ : ಪೇಜಾವರ ಮಠದ ಆಡಳಿತಕ್ಕೊಳಪಟ್ಟಿರುವ, ಸುಮಾರು 10ನೇ ಶತಮಾನದಲ್ಲಿ ಆಳುಪ ವಂಶದ ರಾಣಿ ಬಲ್ಲಾ ಮಹಾದೇವಿ ನಿರ್ಮಿಸಿದ ಇಲ್ಲಿನ ಪೆರ್ಣಂಕಿಲ ಗ್ರಾಮದ ಮಹಾಲಿಂಗೇಶ್ವರ - ಮಹಾಗಣಪತಿ ದೇವಳದ ಸಮಗ್ರ ಜೀರ್ಣೋದ್ಧಾರ ಕಾರ್ಯಕ್ಕೆ ಗುರುವಾರ ಶಂಕುಸ್ಥಾಪನೆ ನಡೆಯಿತು. ಊರಿನ ಭಕ್ತಾಭಿಮಾನಿಗಳ ಉಪಸ್ಥಿತಿಯಲ್ಲಿ ಸಾಮೂಹಿಕ ಪ್ರಾರ್ಥನೆಯ ನಂತರ, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಜೀರ್ಣೋದ್ಧಾರ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿದರು.
